Author: News Desk Benkiyabale

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೧೫ರ ಶನಿವಾರ ಬೆಳಗ್ಗೆ ೯ ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಸ್ವಾತಂತ್ರö್ಯ ದಿನಾಚರಣೆ-೨೦೨೬’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಚಿವರಾದ ಡಾ: ಜಿ. ಪರಮೇಶ್ವರ ಅವರು ಅಂದು ಬೆಳಗ್ಗೆ ೯ ಗಂಟೆಗೆ ರಾಷ್ಟç ಧ್ವಜಾರೋಹಣ ಮಾಡಿ, ಗೌರವರಕ್ಷೆ ಸ್ವೀಕರಿಸುವರು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರು ಘನ ಉಪಸ್ಥಿತರಿರುವರು. ತುಮಕೂರು ನಗರ ವಿಧಾನಸಭಾ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ನಂತರ ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಸೇರಿದಂತೆ ಗಣ್ಯರು, ಸರ್ಕಾರಿ ಅಧಿಕಾರಿ/ನೌಕರರು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ್ವಾತಂತ್ರೋತ್ಸವದ ಆಂಗವಾಗಿ ಅಂದು ಸಂಜೆ ೪.೩೦ ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

Read More

ತುಮಕೂರು: ಸರ್ಕಾರದ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯುವ ಮಿಷನ್ ಯೋಜನೆಯು ಯುವಜನರಲ್ಲಿ ಶಿಸ್ತು, ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶ ಹೊಂದಿದ್ದು, ಈ ಯೋಜನೆಯಡಿ ನೋಂದಾಯಿಸಿಕೊAಡಿರುವ ಶಿರಾ ತಾಲೂಕು ಬೇವಿನಹಳ್ಳಿ ಗ್ರಾಮದ ಚಿದಾನಂದ ಹಾಗೂ ಗುಬ್ಬಿ ತಾಲೂಕು ಇರಕಸಂದ್ರ ಗ್ರಾಮದ ಸಂತೋಷ್ ಅವರಿಗೆ ನೋಂದಣಿ ದೃಢೀಕರಣ ಪತ್ರವನ್ನು ಉಪ ಮುಖ್ಯಮಂತ್ರಿ ಹಾಗೂ ಕಂದಾಯ, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಸಚಿವ ಡಾ: ಜಿ. ಪರಮೇಶ್ವರ ಅವರು ಬುಧವಾರ ಸಾಂಕೇತಿಕವಾಗಿ ವಿತರಿಸಿದರು. ಃಎಙSನಲ್ಲಿ ನೋಂದಾಯಿಸಿಕೊAಡಿರುವ ಯುವಕರನ್ನು ಅಭಿನಂದಿಸಿ ಮಾತನಾಡಿದ ಅವರು, ಯುವಕರಲ್ಲಿ ನಾಯಕತ್ವ ಗುಣ, ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಕಳಕಳಿಯನ್ನು ಬೆಳೆಸುವ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಮಿಷನ್‌ನ ಪ್ರಮುಖ ಉದ್ದೇಶವಾಗಿದ್ದು. ಈ ಹಿನ್ನೆಲೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊAಡು ಯೋಜನೆಯ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…

Read More

ಹುಳಿಯಾರು: ಅಧಿಕ ಇಳುವರಿ ನೀಡುವ ‘ಐಸಿಎಚ್-೫’ ತಳಿಯ ಹರಳು ಬೆಳೆಯುವುದರಿಂದ ಈ ಬರಗಾಲದಲ್ಲೂ ಕೈ ತುಂಬ ದುಡ್ಡು ನೋಡಬಹುದು ಎಂದು ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತç ತಜ್ಞರಾದ ಡಾ.ತಸ್ಮಿಯಾ ಕೌಸಿರ್ ರೈತರಿಗೆ ಸಲಹೆ ನೀಡಿದರು. ಹುಳಿಯಾರಿನ ಎಪಿಎಂಸಿ ಆವರಣದಲ್ಲಿರುವ ಕಲ್ಪಮಿತ್ರ ರೈತ ಉತ್ಪಾದಕ ಕಂಪನಿಯ ಕಛೇರಿಯಲ್ಲಿ ಗುರುವಾರ ಕೊನೆಹಳ್ಳಿ ವಿಜ್ಞಾನ ಕೇಂದ್ರದಿAದ ಆಯೋಜಿಸಲಾಗಿದ್ದ ಉಚಿತ ಹರಳು ಬೀಜ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಐಸಿಎಚ್ ೫ ಹರಳು ಒಣ ಬೇಸಾಯಕ್ಕೆ ಸೂಕ್ತವಾದ ತಳಿಯಾಗಿದ್ದು ಕಡಿಮೆ ಮಳೆ ಮತ್ತು ಕಡಿಮೆ ಖರ್ಚಿನಲ್ಲಿ ಬೆಳೆಯಬಹುದಾದ ಬೆಳೆಯಾಗಿದ್ದು ಒಂದು ಎಕರೆ ಬಿತ್ತನೆಗೆ ೨ ಕೆಜಿ ಬೀಜ ಬೇಕಿದ್ದು ಎಕರೆಗೆ ೫ ರಿಂದ ೬ ಕ್ವಿಂಟಲ್ ಇಳುವರಿ ಪಡೆಯಬಹುದು ಎಂದು ತಿಳಿಸಿದರಲ್ಲದೆ ಈ ತಳಿ ಯಾವುದೇ ಪ್ರಾಣಿ ಪಕ್ಷಿಗಳ ಕಾಟವಿಲ್ಲದೆ ಬೆಳೆಯಬಹುದಾಗಿದೆ ಎಂದು ಮಾಹಿತಿ ನೀಡಿದರು. ಬಿತ್ತನೆಗೂ ಮುನ್ನ ಹರಳು ಬೀಜಗಳನ್ನು ರಾತ್ರಿ ೫ ರಿಂದ ೬ ಗಂಟೆಗಳ ಕಾಲ…

Read More

ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಸಮಾಜಕಲ್ಯಾಣ ಇಲಾಖೆ, ತುಮಕೂರು ಹಾಗೂ ಮೊರಾರ್ಜಿ ದೇಸಾಯಿ ವಸತಿಶಾಲೆ, ಚಿಕ್ಕನಹಳ್ಳಿ, ಶಿರಾ ತಾಲ್ಲೂಕು ವತಿಯಿಂದ ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮವನ್ನು ಚಿಕ್ಕನಹಳ್ಳಿ, ಶಿರಾ ತಾಲ್ಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿತ್ತು. ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ಸೋನಿಯಾ ವರ್ಣೇಕರ.ಯು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ, ಮಕ್ಕಳು ಇಂದಿನ ಆಧುನಿಕ ಜಗತ್ತಿನಲ್ಲಿನ ಸ್ಪರ್ಧೆಗಳನ್ನು ಎದುರಿಸಲು ಕಲೆಯ ಬಗ್ಗೆ ಹೆಚ್ಚಿನ ಆಸಕ್ತಿ ಬೆಳಿಸಿಕೊಂಡಲ್ಲಿ ಹೆಚ್ಚಿನ ಆತ್ಮವಿಶ್ವಾಸವನ್ನು ಪಡೆಯಬಹುದು. ಇದರಿಂದಾಗಿ ಸಮಾಜವನ್ನು ಪರಿಣಾಮಾತ್ಮಕವಾಗಿ ಎದುರಿಸಿ ಸಮಾಜಮುಖಿಗಳಾಗಿ ಬೆಳೆಯಬಹುದು ಎಂದು ತಿಳಿಸಿದರು. ತುಮಕೂರು ಜಿಲ್ಲಾ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ.ಕೆ.ಮಿರ್ಜಿ ಅವರು ಮಾತನಾಡುತ್ತಾ, ಇಲಾಖೆ ೮ ರಿಂದ ೧೪ ವರ್ಷ ವಯಸ್ಸಿನ ಮಕ್ಕಳಲ್ಲಿನ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ವೇದಿಕೆ ಒದಗಿಸಲು ಅವಕಾಶ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಈ ವೇದಿಕೆಯ ಲಾಭವನ್ನು ಪಡೆಯುವಂತಾಗಲಿ ಅಲ್ಲದೇ, ಇಂತಹುಗಳು…

Read More

ತುಮಕೂರು: ಮೇಕೆದಾಟು ಯೋಜನೆ ಅನುಷ್ಠಾನವಾಗಬೇಕು, ಕನ್ನಡ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಉದ್ದಿಮೆ, ರಾಷ್ಟಿçÃಕೃತ ಬ್ಯಾಂಕ್‌ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಬೇಕು ಮೊದಲಾದ ಒತ್ತಾಯಗಳೊಂದಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಿ, ಕನ್ನಡ ನಾಡು, ನುಡಿ, ಗಡಿ ನೀರಾವರಿ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಕನ್ನಡ ಸೇನೆ ಜಿಲ್ಲಾಧ್ಯಕ್ಷ ಡಾ.ಧನಿಯಾ ಕುಮಾರ್ ಮಾತನಾಡಿ, ವಸಂತನರಸಾಪುರ, ಹೆಚ್‌ಎಎಲ್‌ಗೆ ಕನ್ನಡಿಗ ರೈತರು ಜಮೀನು ಕೊಟ್ಟಿದ್ದಾರೆ. ಆದರೆ ಇಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಟ್ಟಿಲ್ಲ, ಪರಭಾಷಿಗರೇ ತುಂಬಿಕೊAಡಿದ್ದಾರೆ. ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ಸರ್ಕಾರದ ಆದೇಶವಿದ್ದರೂ ಅದರ ಪಾಲನೆ ಆಗುತ್ತಿಲ್ಲ. ರಾಷ್ಟಿçÃಕೃತ ಬ್ಯಾಂಕುಗಳಲ್ಲೂ ಕನ್ನಡಿಗರ ಕೊರತೆ ಇದೆ ಎಂದರು. ನಾಮಫಲಕಗಳಲ್ಲಿ ಶೇಕಡ ೬೦ರಷ್ಟು ಕನ್ನಡ ಪದಗಳಿರಬೇಕು ಎಂದು ಸರ್ಕಾರವೇ ಆದೇಶ ಮಾಡಿದೆ. ಆದರೆ ಸರ್ಕಾರದ ಆದೇಶವನ್ನು ಸರ್ಕಾರಿ ಅಧಿಕಾರಿಗಳೇ ಉಲ್ಲಂಘನೆ ಮಾಡುತ್ತಿದ್ದಾರೆ.…

Read More

ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ನಾಯಕರು ನಡೆಸಿರುವ ತಂತ್ರಗಳಿಗೆ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಮಣಿಯಬಾರದು, ಬಿ.ನಾಗೇಂದ್ರ ಅವರನ್ನು ಮಂತ್ರಿಯಾಗಿ ಮುಂದುವರೆಸಬೇಕು ಎಂದು ರಾಷ್ಟಿçÃಯ ಬುಡಕಟ್ಟು ಬೇಡರ ಪಡೆಯ ಅಧ್ಯಕ್ಷ ಮಾರಣ್ಣ ಪಾಳೇಗಾರ್ ಒತ್ತಾಯಿಸಿದರು. ಬುಧವಾರ ನಗರದಲ್ಲಿ ಪತ್ರಿಕಾ ಗೋಷ್ಠೀಯಲ್ಲಿ ಮಾತನಾಡಿದ ಅವರು, ಬಿ. ನಾಗೇಂದ್ರ ಅವರೊಂದಿಗೆ ವಾಲ್ಮೀಕಿ ಸಮಾಜ ಸದಾ ಬೆಂಬಲವಾಗಿ ನಿಲ್ಲಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬAಧಿಸಿದ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಬಿ.ನಾಗೇಂದ್ರ ಅವರಿಗೆ ಪ್ರಕರಣದಲ್ಲಿ ಯಾವುದೇ ಸಂಬAಧವಿಲ್ಲ ಎಂಬ ಅಂಶ ತನಿಖಾ ಪ್ರಕ್ರಿಯೆಯಲ್ಲಿ ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ, ಯಾವುದೇ ಅಂತಿಮ ಅಧಿಕೃತ ನಿರ್ಣಯ ಅಥವಾ ನ್ಯಾಯಾಂಗ ತೀರ್ಪು ಹೊರಬರುವ ಮುನ್ನ ವ್ಯಕ್ತಿಯ ಘನತೆ ಹಾಗೂ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಆರೋಪಗಳು ಅಥವಾ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ಹೇಳಿದರು. ಈ ಬೆಳವಣಿಗೆಯ ನಡುವೆ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಬಿಜೆಪಿ…

Read More

ತುಮಕೂರು: ಕೃತಕ ಬುದ್ಧಿಮತ್ತೆ ರೋಬೋಟಿಕ್ಸ್, ಆಟೋಮೇಷನ್, ಐಒಟಿ ಹಾಗೂ ಆಧುನಿಕ ಕೈಗಾರಿಕಾ ಕ್ಷೇತ್ರಗಳಲ್ಲಿ ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟಕ್ಕೆ ಸಮರ್ಥ ವೃತ್ತಿಪರರನ್ನಾಗಿ ರೂಪಿಸುಸ ಸಂಬAಧ ಬೆಂಗಳೂರಿನ ‘ಅಡ್ವಾನ್ಸ್ಡ್ ಮೆಕ್ಯಾನಿಕಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆ ಜೊತೆ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ. ನಗರ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶೈಕ್ಷಣಿಕ ಮತ್ತು ಉದ್ಯಮ ಕ್ಷೇತ್ರದ ಸಹಭಾಗಿತ್ವದಡಿಯಲ್ಲಿ ಮಂಗಳವಾರದAದು ನಡೆದ ಜಂಟಿ ಒಡಂಬಡಿಕೆ ಸಭೆ ನಂತರ ‘ಅಡ್ವಾನ್ಸ್ಡ್ ಮೆಕ್ಯಾನಿಕಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯೊAದಿಗೆ ಪ್ರಮುಖ ಶೈಕ್ಷಣಿಕ ಮತ್ತು ಕೈಗಾರಿಕಾ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ. ನಡಕಟ್ಟಿ ಅವರು ಮಾತನಾಡಿ “ರೋಬೋಟಿಕ್ಸ್ ಹಾಗೂ ಎಐ ಕ್ಷೇತ್ರದಲ್ಲಿ ಉದ್ಯಮದೊಂದಿಗೆ ಮಾಡಿಕೊಂಡಿರುವ ಒಪ್ಪಂದವು ಕಾಲೇಜಿನ ಶೈಕ್ಷಣಿಕ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲಾಗಿದೆ. ಚೀನಾ, ಸ್ವೀಡನ್ ಮುಂತಾದ ವಿದೇಶಗಳಲ್ಲಿ ವೈದ್ಯಕೀಯ, ಹೋಟೆಲ್ ಹಾಗೂ ಸಾರಿಗೆ ಕ್ಷೇತ್ರಗಳಲ್ಲಿ ರೋಬೋಟ್‌ಗಳ ಬಳಕೆ ವ್ಯಾಪಕವಾಗಿದೆ. ಭಾರತದಲ್ಲೂ ದಿನನಿತ್ಯದ…

Read More

ತುಮಕೂರು: ಜಿಲ್ಲೆಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡಿ, ವಲಸೆ ಹೋಗುವುದನ್ನು ತಪ್ಪಿಸಬೇಕು. ಕೂಲಿ ಮಾಡಿದವರಿಗೆ ತ್ವರಿತಗತಿಯಲ್ಲಿ ಏಳು ದಿನದ ಒಳಗಾಗಿ ಹಣ ಪಾವತಿಸಬೇಕು. ಕೂಲಿ ಹಣ ಪಾವತಿಸಲು ವಿಳಂಬವಾದರೆ ಉದ್ಯೋಗ ನೀಡಿಯೂ ಉಪಯೋಗವಿಲ್ಲದಂತಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ: ಜಿ.ಪರಮೇಶ್ವರ ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಕುಣಿಗಲ್ ತಹಶೀಲ್ದಾರ್ ಅವರ ಕಚೇರಿಯಿಂದ ಭಾಗವಹಿಸಿ ಮಾತನಾಡಿದ ಅವರು ಬಡವರು ಉದ್ಯೋಗಕ್ಕಾಗಿ ಎಲ್ಲಿಗೆ ಹೋಗುತ್ತಾರೆ? ಉತ್ತರ ಕರ್ನಾಟಕ ಭಾಗದಲ್ಲಿ ಜನ ಗುಳೆ ಹೋಗುತ್ತಿದ್ದಾರೆ. ಕೇಂದ್ರದಿAದ ‘ವಿಬಿ ಜಿ ರಾಮ್ ಜಿ’ ಯೋಜನೆಯ ಹಣ ಬರುತ್ತಿಲ್ಲ. ಸದ್ಯದ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಹಣ ಭರಿಸುತ್ತಿದೆ. ಉದ್ಯೋಗ ನೀಡಿದರೆ ಜನರು ಊರು ಬಿಡುವುದನ್ನು ತಪ್ಪಿಸಬಹುದು. ಜನರಿಗೆ ನಾವೇ ಕೆಲಸ ಕೊಟ್ಟು ಊರಿನಲ್ಲಿ ಉಳಿಸಿಕೊಳ್ಳಬೇಕು ಎಂದು ಹೇಳಿದರು. ಬರದಿಂದ ಹಾನಿಗೊಳಗಾದ ಬೆಳೆ, ಕುಡಿಯುವ ನೀರಿನ…

Read More

ಹುಳಿಯಾರು: ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ಭೀಕರ ರೂಪ ತಾಳುತ್ತಿದ್ದು, ಹುಳಿಯಾರು ಹೋಬಳಿಯ ಹೊಯ್ಸಲಕಟ್ಟೆ ಪಂಚಾಯತಿ ವ್ಯಾಪ್ತಿಗೆ ಒಳಪಡುವ ತಿಮ್ಮಪ್ಪನಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಅನುಭವಿಸುತ್ತಿರುವ ಯಾತನೆ ಬಣ್ಣಿಸಲಸಾಧ್ಯವಾಗಿದೆ. ಸುಮಾರು ೧೦೦ ಮನೆಗಳಿರುವ ಈ ಸಣ್ಣ ಹಳ್ಳಿಯಲ್ಲಿ ಈಗ ನೀರಿನ ಅಭಾವ ತಾಂಡವವಾಡುತ್ತಿದ್ದು, ಜನ ಸಾಮಾನ್ಯರು ಹಾಗೂ ವಿಶೇಷವಾಗಿ ಮಹಿಳೆಯರು ದಿನಪೂರ್ತಿ ಕೆಲಸ-ಕಾರ್ಯಗಳನ್ನು ಬದಿಗೊತ್ತಿ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲಾ ಆವರಣವೇ `ನೀರಿನ ಕದನ ರಂಗ’!: ಗ್ರಾಮದಲ್ಲಿ ಮನೆ ಮನೆಗೆ ನಲ್ಲಿ ಸಂಪರ್ಕಗಳಿದ್ದರೂ ನಲ್ಲಿಗಳಲ್ಲಿ ನೀರು ಬರುತ್ತಿಲ್ಲ. ಈ ಹಿಂದೆ ಗ್ರಾಮದಲ್ಲಿದ್ದ ಎರಡು ಕೊಳವೆಬಾವಿಗಳಲ್ಲಿ (ಬೋರ್‌ವೆಲ್) ಒಂದು ಪೂರ್ತಿಯಾಗಿ ಕೆಟ್ಟು ಹೋಗಿದೆ. ಉಳಿದ ಮತ್ತೊಂದು ಕೊಳವೆಬಾವಿಯಲ್ಲಿ ಅತ್ಯಂತ ಸಣ್ಣ ಪ್ರಮಾಣದಲ್ಲಿ ನೀರು ಬರುತ್ತಿದೆ. ಹಾಗಾಗಿ ಶಾಲಾ ಆವರಣದಲ್ಲಿ ಒಂದೇ ನಲ್ಲಿಯಲ್ಲಿ ಇಡೀ ಊರಿಗೆ ನೀರು ಹಿಡಿದುಕೊಳ್ಳವ ವ್ಯವಸ್ಥೆ ಮಾಡಿ ಪಂಚಾಯ್ತಿ ಕೈ ತೊಳೆದುಕೊಂಡಿದೆ. ಶಾಲೆ ಆವರಣದಲ್ಲಿರುವ ಈ ನಲ್ಲಿಗೆ ಇಡೀ ಗ್ರಾಮದ ೧೦೦ ಮನೆಗಳ…

Read More

ತುಮಕೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬAಧಿಸಿದAತೆ ಕೇಂದ್ರೀಯ ತನಿಖಾ ದಳ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಗಂಭೀರ ಆರೋಪಗಳು ದಾಖಲಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಈ ಕೂಡಲೇ ಸಚಿವ ಸಂಪುಟದಿAದ ವಜಾಗೊಳಿಸಬೇಕು ಎಂದು ಜಿಲ್ಲಾ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದೆ. ಬಿಜೆಪಿ ನಾಯಕ, ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್‌ಗೌಡರು ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಿ ೩೦ ಮಂದಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದು, ನಾಗೇಂದ್ರ ಅವರಿಗೆ ಸಂಬAಧಿಸಿದAತೆ ಸುಮಾರು ೧.೨೦ ಕೋಟಿ ರೂ. ಅಕ್ರಮ ಹಣದ ಲಾಭ ತಲುಪಿರುವ ಆರೋಪವನ್ನು ತನಿಖಾ ಸಂಸ್ಥೆ ದಾಖಲಿಸಿದೆ.ಜೊತೆಗೆ ನಿಗಮದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಹಂತ ಹಂತವಾಗಿ ವರ್ಗಾಯಿಸಿರುವ ಅಂಶಗಳೂ ತನಿಖೆಯಲ್ಲಿ ಬಹಿರಂಗವಾಗಿವೆ. ಇಂತಹ ಗಂಭೀರ ಆರೋಪಗಳು ಮತ್ತು ಸಿಬಿಐ ಆರೋಪ ಪಟ್ಟಿ ನ್ಯಾಯಾಲಯದ ಮುಂದೆ ಇರುವ ಸಂದರ್ಭದಲ್ಲಿ…

Read More