Author: News Desk Benkiyabale

ಕೊರಟಗೆರೆ: ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿ ಎಂಬ ಸದಾಶಯದೊಂದಿಗೆ, ಸರ್ವಧರ್ಮ ಗುರುಗಳ ನೇತೃತ್ವದಲ್ಲಿ ಭಾನುವಾರ ಪಟ್ಟಣದ ಗಿರಿನಗರದಲ್ಲಿರುವ ಸ್ಲಂ ಬೋರ್ಡ್ ಸಮುದಾಯ ಭವನದಲ್ಲಿ ಸಾಮೂಹಿಕ ಪ್ರಾರ್ಥನಾ ಸಭೆಯನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಯಿತು. ಪ.ಪಂ ಮಾಜಿ ಉಪಾಧ್ಯಕ್ಷ ನಯಾಜ್ ಅಹಮದ್, ಮಾಜಿ ಸದಸ್ಯೆ ನೂರ್ ಜಾನ್ ಸೈಯದ್ ದಾವುದ್ ಹಾಗೂ ಸಮಾಜ ಸೇವಕ ಸದಾನಂದ ಎಸ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಧರ್ಮಾತೀತತೆ, ಸೌಹಾರ್ದತೆ ಮತ್ತು ಶಾಂತಿಯ ಸಂದೇಶವನ್ನು ಸಾರಲಾಯಿತು. ಕಾರ್ಯಕ್ರಮದಲ್ಲಿ ಕ್ರೈಸ್ತ ಧರ್ಮ ಗುರುಗಳಾದ ಸುರೇಶ್ ಪಾದ್ರಿ, ಜಾಮಿಯಾ ಮಸೀದಿಯ ಮುತ್ತುವಲ್ಲಿ ಇದಾಯಿತ್ ಉಲ್ಲಾ ಶರೀಫ್, ಫಯಾಜ್ ಅಹಮದ್ ಸೇರಿದಂತೆ ವಿವಿಧ ಧರ್ಮಗಳ ಗುರುಗಳು ಭಾಗವಹಿಸಿ, ಡಾ. ಜಿ. ಪರಮೇಶ್ವರವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ರಾಜ್ಯಕ್ಕೆ ಸಮರ್ಪಿತ ಸೇವೆ ಮಾಡುವ ಶಕ್ತಿ ದೊರೆಯಲೆಂದು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ.ಪಂ ಮಾಜಿ ಉಪಾಧ್ಯಕ್ಷ ನಯಾಜ್ ಅಹಮದ್,ಡಾ. ಜಿ. ಪರಮೇಶ್ವರವರು ಸಾಮಾಜಿಕ ನ್ಯಾಯ,…

Read More

ಶಿರಾ: ಯಂತ್ರಗಳಿ0ದ ಅನ್ನ ಸೃಷ್ಟಿಸಲು ಸಾಧ್ಯವಿಲ್ಲ ಭೂಮಿ ಉತ್ತಿ ರೈತರು ಬೆಳೆದರೆ ಮಾತ್ರ ಜಗತ್ತು ಹಸಿವನ್ನು ನೀಗಿಸಿಕೊಳ್ಳಲು ಸಾಧ್ಯ ಅದರೂ ಅಳುವ ಸರ್ಕಾರಗಳು ರೈತರಿಗೆ ಕನ್ನಡಿಗಂಟು ತೋರಿಸಿ ಉದ್ಯಮಿಗಳಿಗೆ ರತ್ನಗಂಬಳಿ ಸ್ವಾಗತ ಬಿಡಬೇಕಿದೆ ಎಂದು ಸ್ಫಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಂಜಾವಧೂತ ಸ್ವಾಮೀಜಿ ಹೇಳಿದರು. ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ೨೩ ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಸಾನಿಧ್ಯ ವಹಿಸಿ ಮಾತನಾಡಿದರು. ಕೃಷಿ ಯನ್ನು ಒಂದು ಉದ್ಯಮವನ್ನಾಗಿ ಪರಿಗಣಿಸಿದರೆ ಯುವಜನರು ಕೂಡ ಅಸಕ್ತರಾಗಿ ಬದುಕು ಕಟ್ಟಿಕೊಳ್ಳುತ್ತಾರೆ ,ಶಿರಾ ತಾಲ್ಲೂಕಿನ ಜನರು ಗುಳೆ ಹೊರಡುವ ಪರಿಸ್ಥಿತಿಯಲ್ಲಿ ಶಾಸಕ ಜಯಚಂದ್ರ ಅವರು ಕಾನೂನಿನ ಸವಾಲುಗಳನ್ನು ಎದುರಿಸಿ ಹೇಮಾವತಿ ಹರಿಸಿದ ಫಲವನ್ನು ಇಂದು ಕಾಣಬಹುದಾಗಿದೆ. ನೀರಾವರಿ ವಿಚಾರದಲ್ಲಿ ಅಪಾರ ಅನುಭವ ಇರುವ, ೫೦ ವರ್ಷಗಳ ಸುದೀರ್ಘ ರಾಜಕೀಯದ ಹಿರಿತನ ಜೊತೆಗೆ ಸರ್ಕಾರ ಮುನ್ನಡೆಸಿ ಯಶಸ್ವಿ ಯೋಜನೆಗಳಿಗೆ ಕಾರಣರಾಗುವಂತಹ ಎಲ್ಲಾ…

Read More

ತುಮಕೂರು: ಗ್ರಾಮಾಂತರ ಕ್ಷೇತ್ರದ ಸ್ವಾಂದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಾಪುರದಲ್ಲಿ ಭಾನು ವಾರ ಶಾಸಕ ಬಿ.ಸುರೇಶ್‌ಗೌಡರು ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಶಾಲೆಗಾಗಿ ಟೂಡಾದಿಂದ ಮಂಜೂರಾಗಿರುವ ಅರ್ಧ ಎಕರೆ ಜಾಗದಲ್ಲಿ ಕಟ್ಟಡ ಕಟ್ಟಲು ಇನ್‌ಕ್ಯಾಪ್ ಕಂಪನಿಯವರು ಒಂದು ಕೋಟಿ ರೂ. ಸಿಎಸ್‌ಆರ್ ಅನುದಾನ ನೀಡಿದ್ದಾರೆ, ಜೊತೆಗೆ ತಮ್ಮ ಶಾಸಕರ ಅನುದಾನದ ೫೦ ಲಕ್ಷ ಸೇರಿಸಿ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು. ಈ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಪರಿವರ್ತಿಸಲು ಹಾಗೂ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸರ್ಕಾರಕ್ಕೆ ಮನವಿ ಮಾಡುವುದಾಗಿ ಹೇಳಿದ ಅವರು, ಮೇ ತಿಂಗಳಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದರು. ಈ ವೇಳೆ ಗ್ರಂಥಾಲಯ ಉದ್ಧಾಟನೆ ಮಾಡಿದ ಶಾಸಕರು, ಉತ್ತಮವಾದ ಗ್ರಂಥಾಲಯವಿದೆ, ಗ್ರಂಥಾಲಯಕ್ಕೆ ತಾವು ಶಾಸಕರ ಅನುದಾನದಲ್ಲಿ ೩ ಲಕ್ಷ ರೂ. ಗಳ ಪುಸ್ತಕ ಕೊಡಿ ಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಶಾಸಕರು…

Read More

ತುಮಕೂರು: ರಾಜ್ಯ ರ‍್ಕಾರದ ಸೂಚನೆಯಂತೆ ನಗರದ ಎಲ್ಲಾ ವಾಣಿಜ್ಯ ಮಳಿಗೆಗಳು, ಕರ‍್ಖಾನೆಗಳ ನಾಮಫಲಕಗಳಲ್ಲಿ ಶೇಕಡ ೬೦ರಷ್ಟು ಕನ್ನಡ ಅಕ್ಷರ ಕಡ್ಡಾಯವಾಗಿ ಬಳಸುವ ನಿಯಮವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿಬೇಕು, ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಕನ್ನಡ ರಕ್ಷಣೆ ಮಾಡಬೇಕು ಎಂದು ಜಿಲ್ಲಾ ಕನ್ನಡ ಸೇನೆ ಮುಖಂಡರು ಸೋಮವಾರ ನಗರಪಾಲಿಕೆ ಆಯುಕ್ತೆ ಶುಭಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮಾಜಿ ಸಚಿವ ಸೊಗಡು ಶಿವಣ್ಣ ಅವರೊಂದಿಗೆ ಕನ್ನಡಸೇನೆ ಜಿಲ್ಲಾಧ್ಯಕ್ಷ ಡಾ.ಧನಿಯಾಕುಮಾರ್ ಹಾಗೂ ಮುಖಂಡರು ಈ ಸಂಬಂಧ ಪಾಲಿಕೆ ಆಯುಕ್ತರಿಗೆ ಮನವಿಪತ್ರ ಸಲ್ಲಿಸಿ, ಇನ್ನು ೧೫ ದಿನಗಳೊಳಗೆ ನಾಮಫಲಕಗಳಲ್ಲಿ ಶೇಕಡ ೬೦ರಷ್ಟು ಕನ್ನಡ ಪದಗಳ ಬಳಕೆ ಮಾಡಲು ಕ್ರಮ ತೆಗೆದುಕೊಳ್ಳದಿದ್ದರೆ ವಿವಿಧ ಸಂಘಟನೆಗಳೊಂದಿಗೆ ಪಾಲಿಕೆ ಎದುರು ತಮಟೆ ಚಳವಳಿ ನಡೆಸಿ ಹೋರಾಟ ಮಾಡುವುದಾಗಿ ಹೇಳಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮನೆ ಅವರು ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಸಂರ‍್ಭದಲ್ಲಿ ಕನ್ನಡ ಕರ‍್ಯಕ್ರಮಗಳನ್ನು ಕಡ್ಡಾಯವಾಗಿ ಜಾರಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ…

Read More

ತುಮಕೂರು: ತುಮಕೂರು ನಗರ, ದಿಬ್ಬೂರು ಜನತಾ ಕಾಲೋನಿ, ಭೀಮಸಂದ್ರ ಬಡಾವಣೆ, ಸೇರಿದಂತೆ ೬ನೇ ವಾರ್ಡಿನಲ್ಲಿ ಕಳೆದ ೫೦-೬೦ ವರ್ಷಗಳಿಂದ ಹಲವಾರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕುಟುಂಬಗಳು ವಾಸ ಮಾಡುತ್ತಿದ್ದು, ಬಹುತೇಕರಿಗೆ ಇಂದಿಗೂ ಸಹ ಸರಿಯಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಇಂದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ವತಿಯಿಂದ ಮನವಿಯನ್ನು ಸಲ್ಲಿಸಿದರು. ಮನವಿ ಪತ್ರ ಸಲ್ಲಿಸಿದ ಬಳಿಕ ಸುದ್ಧಿಗಾ ರರೊಂದಿಗೆ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಇಂದ್ರಕುಮಾರ್ ಡಿ.ಕೆ. ಮಾತನಾಡುತ್ತಾ ಕಳೆದ ೫೦-೬೦ ವರ್ಷಗಳಿಂದ ಹಲವಾರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕುಟುಂಬಗಳು ವಾಸ ಮಾಡುತ್ತಿದ್ದು, ಬಹುತೇಕರಿಗೆ ಇಂದಿಗೂ ಸಹ ಸರಿಯಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಅಧಿಕಾರಿ ವರ್ಗವು ವಿಫಲವಾಗಿದ್ದಾರೆ, ಇಲ್ಲಿನ ನಿವಾಸಿಗಳ ಪರಿಸ್ಥಿತಿ ಅತಂತ್ರದಲ್ಲಿದೆ ಈ ಭಾಗದಲ್ಲಿ ವಾಸ ಮಾಡುತ್ತಿರುವವರು ಪರಿಶಿಷ್ಟ ಜಾತಿ ಅದರಲ್ಲಿಯೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು ಹಲವಾರು ಜನರು ದಿನಗೂಲಿ ನೌಕರರು, ಪೌರಕಾರ್ಮಿಕರು, ಸೇರಿದಂತೆ ಅತ್ಯಂತ ಕಡು…

Read More

ತುಮಕೂರು: ನಗರದಲ್ಲಿ ಈಗಾಗಲೇ ೩೦ ಘೋಷಿತ ಕೊಳಚೆ ಪ್ರದೇಶಗಳಿದ್ದು, ಇಂತಹ ಗುಣಲಕ್ಷಣಗಳು ಇರುವ ಮತ್ತಷ್ಟು ಪ್ರದೇಶಗಳಿದ್ದು, ಇಂತಹ ಪ್ರದೇಶಗಳನ್ನು ಸರ್ವೆ ಮೂಲಕ ಗುರುತಿಸಿ, ಘೋಷಿತ ಕೊಳಚೆ ಪ್ರದೇಶಗಳೆಂದು ಘೋಷಣೆ ಮಾಡಲು ಪಾಲಿಕೆ ಅಧಿಕಾರಿಗಳು ಹಾಗೂ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಕ್ರಮ ವಹಿಸಬೇಕೆಂದು ತುಮಕೂರು ನಗರ ಶಾಸಕ ರಾದ ಜಿ.ಬಿ.ಜ್ಯೋತಿಗಣೇಶ್ ರವರು ಸೂಚನೆ ನೀಡಿದರು. ಅವರು ತುಮಕೂರು ಮಹಾನಗರ ಪಾಲಿಕೆ ಯಲ್ಲಿ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆರೆಯಂಗಳದಲ್ಲಿರುವ ನಿರಾಶ್ರಿತರಿಗೆ ಬೇರೆಡೆಗೆ ವಸತಿ ಸೌಲಭ್ಯ ಕಲ್ಪಿಸಿದ ನಂತರವೇ ಸ್ವತ್ತನ್ನು ಸರ್ಕಾರದನ್ವಯ ಸ್ವಾಧೀನಪಡಿಸುವ ಪ್ರಕ್ರಿಯೆ ಮಾಡಬೇಕೆಂದರು. ಅವರು ತುಮಕೂರು ನಗರವು ಜಿಲ್ಲಾ ಕೇಂದ್ರವಾಗಿರುವುದರಿ0ದ ವಸತಿ ವಂಚಿತರ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಭೂಮಿಗಳನ್ನು ಗುರುತಿಸಿ ವಸತಿ ಯೋಜನೆಗೆ ಭೂಮಿಯನ್ನು ಮೀಸಲು ಇಡಲು ಅಧಿಕಾರಿಗಳಿಗೆ ಸೂಚಿಸ ಲಾಗಿದೆ ಎಂದು ತಿಳಿಸಿದರು. ವಸತಿ ವಂಚಿತ ಅರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸವನ್ನು ಅಧಿಕಾರಿಗಳು ಮಾಡ ಬೇಕಾಗಿದೆ. ವಿವಿಧ ಯೋಜನೆಯಡಿ ಆಶ್ರಯ ಮನೆಗಳನ್ನು ನಿರ್ಮಿಸಲು ಕೆಲವು ಸ್ವತ್ತುಗಳನ್ನು…

Read More

ಹುಳಿಯಾರು: “ಮಾನವೀಯತೆ ಎಲ್ಲಕ್ಕಿಂತ ದೊಡ್ಡದು” ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊ0ದು ನಿಜ ಮಾಡಿ ತೋರಿಸಿದೆ. ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಮುಸ್ಲಿಂ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ: ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ: ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು.…

Read More

ತುಮಕೂರು: ರಾಜ್ಯದಾದ್ಯಂತ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ನೀಡುತ್ತಿರುವ ವೇತನ ಸಾಕಾಗುತ್ತಿಲ್ಲ. ಹಾಗಾಗಿ ಅಂಬೇಡ್ಕರ್ ಅಭಿವೃದ್ದಿ ನಿಗಮದಲ್ಲಿ ಹೆಚ್ಚಳ ಮಾಡಿರುವಂತೆ ಎಲ್ಲಾ ಇಲಾಖೆಗಳಲ್ಲೂ ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ್ ಒತ್ತಾಯಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಸಂಘದ ತುಮಕೂರು ಜಿಲ್ಲಾ ಘಟಕ ಉದ್ಘಾಟನೆ ಸಂಬ0ಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಇಲಾಖೆಗಳಲ್ಲಿ ಹೊರ ಗುತ್ತಿಗೆ ನೌಕರರ ನೀಡುತ್ತಿರುವ ವೇತನ ಸಾಕಾಗುತ್ತಿಲ್ಲ. ಇದನ್ನು ಮನಗಂಡು ಈಗಾಗಲೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಹೊರ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಮಾಡಿಸಲಾಗಿದೆ. ಇನ್ನೆರಡು ದಿನದಲ್ಲಿ ಈ ಆದೇಶ ಹೊರ ಬೀಳಲಿದ್ದು, ಎಲ್ಲಾ ಸರ್ಕಾರಿ ಇಲಾಖೆಗಳಿಗೂ ಈ ಆದೇಶ ಪತ್ರ ನೀಡಿ ಹೊರ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಮನವಿ ಮಾಡಲಾಗುವುದು ಎಂದರು. ಸರ್ಕಾರ ಸುಮಾರು ಇಲಾಖೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿ ರುವ ಹೊರ ಗುತ್ತಿಗೆ…

Read More

ಮಧುಗಿರಿ: ಸಂಘ ಸಂಸ್ಥೆಗಳನ್ನು ಕೇವಲ ವಿಜಿಟಿಂಗ್ ಕಾರ್ಡ್ಗಳ ಬಳಕೆಗೆ ಮಾತ್ರ ಸೀಮಿತವಾಗಿರಿಸದೆ ಸಮಾಜದ ಏಳಿಗೆ ಬದ್ಧ ವಾಗಿ ಕಾರ್ಯ ನಿರ್ವಹಿಸುವಂತಾಗ ಬೇಕು ಎಂದು ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀಶ್ರೀ ಡಾ.ಹನುಮಂತನಾಥಸ್ವಾಮಿಜೀ ಕರೆ ನೀಡಿದರು. ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಲಕ್ಷ್ಮೀದೇ ವಿಪುರ ಗ್ರಾಮದ ದೇವಸ್ಥಾನದ ಸನ್ನಿದಿಯಲ್ಲಿ ಕುಂಚಶ್ರೀ ಗಿರಿ ಬಳಗದ ವತಿ ಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಹಾಗೂ ಸದಸ್ಯತ್ವ ನೊಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಶ ಸೇವೆ ದೇಶ ಸೇವೆ,ಜನ ಸೇವೆಯೇ ಜನಾರ್ದನ ಸೇವೆಯಾಗಿದ್ದು ಸೇವೆಯನ್ನು ಪೂಜಿಸುವಂತಾಗಬೇಕು, ಟ್ರಸ್ಟ್ ನ ಪದಾಧಿಕಾರಿಗಳು ಸಮಾಜದ ಅಭಿವೃದ್ಧಿ ಜತೆಗೆ ಶಿಕ್ಷಣ,ದೇವಾಲಯ,ಧರ್ಮ, ಸಮುದಾಯದ ಕಡೆಗೆ ಗಮನ ಹರಿಸಬೇಕು, ವಧುವರರ ಅನ್ವೇಷಣಾ ಕೇಂದ್ರ,ಉದ್ಯೋಗ ಮೇಳಗಳ ಆಯೋಜನೆ ದೇವಾಲಯಗಳ ಸ್ವಚ್ಚತೆಯಂತೆ ಸಮಾಜದ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳಬೇಕು. ಕುಂಚಿಟಗ ಸಮುದಾಯ ಎಲ್ಲಾ ಸಮುದಾಯಗಳನ್ನು ಗೌರವಿಸುತ್ತದೆ.ಮುಂದಿ ನ ದಿನಗಳಲ್ಲಿ ಯುವ ಪೀಳಿಗೆಗೆ ಹೆಚ್ಚಿನ ಆ ದ್ಯತೆ ನೀಡಬೇಕು.ಮಠದ ವತಿಯಿಂದ ಬಡ ಹಾಗೂ ಅನಾಥ…

Read More

ತುಮಕೂರು ನಗರ: ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ನಿವೇಶನ ಹಂಚಿಕೆ ಸಂಬ0ಧ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹ ತ್ವದ ಚರ್ಚೆ ನಡೆಸಲಾಯಿತು. ಈಗಾಗಲೇ ಗುರು ತಿಸಲಾದ ನಿವೇಶನಗಳನ್ನು ವಿಳಂಬವಿಲ್ಲದೆ, ನಿಯ ಮಾನುಸಾರವಾಗಿ ಅರ್ಹ ಫಲಾನುಭವಿಗಳಿಗೆ ವಿತರಿಸುವಂತೆ ಸಂಬ0ಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಯಿತು. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಅರ್ಹರಿಗೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಯಾವುದೇ ಅಡೆತಡೆಗಳು ಉಂಟಾಗದ0ತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಈ ಸಭೆಯಲ್ಲಿ ಉಪ ಕಾರ್ಯದರ್ಶಿ (ಅಭಿವೃದ್ಧಿ), ಉಪ ಕಾರ್ಯದರ್ಶಿ (ಆಡಳಿತ), ಮುಖ್ಯ ಯೋಜನಾಧಿಕಾರಿಗಳು, ವಿವಿಧ ಯೋಜನಾ ನಿರ್ದೇಶಕರು ಸೇರಿದಂತೆ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊ0ಡರು. ಜಿಲ್ಲೆಯ ಅಭಿವೃದ್ಧಿ ಹಾಗೂ ಜನಹಿತದ ಕಾರ್ಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಯುಕ್ತವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಒತ್ತಿ ಹೇಳಲಾಯಿತು.

Read More