ಕೊರಟಗೆರೆ: ತಂದೆ-ತಾಯಿಗಳ ಆಸ್ತಿಗೆ ಮಾತ್ರ ವಾರಸುದಾರರಾಗು ವುದು ಸಾಕಾಗುವುದಿಲ್ಲ, ಅವರು ಬದುಕಿನಲ್ಲಿ ಅನುಸರಿಸಿದ ಆ ದರ್ಶಗಳು, ಮೌಲ್ಯಗಳು ಹಾಗೂ ಸಮಾಜಮುಖಿ ಚಿಂತನೆಗಳನ್ನು ಮುಂದುವರೆಸಿಕೊ0ಡು ಹೋಗುವುದು ಮಕ್ಕಳ ಪ್ರಮುಖ ಕರ್ತವ್ಯ ಎಂದು ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾಮಠದ ಪೀಠಾ ಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಕಾಮಧೇನು ಕನ್ವೆನ್ಷನ್ ಹಾಲ್ ನಲ್ಲಿ ಜಗ್ಗೇಶ್ ಅಭಿಮಾ ನಿಗಳ ಬಳಗ ಮತ್ತು ಫ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ಸಾಧಕರಿಗೆ ಅಭಿನಂದನಾ ಸಮಾರಂಭ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಪೋಷಕರು ನಡೆಸಿದ ಆದರ್ಶ ಜೀವನವನ್ನು ಮಕ್ಕಳು ತಮ್ಮ ಜೀವನ ದಲ್ಲಿ ಅಳವಡಿಸಿಕೊಂಡು,ಸಮಾಜಮುಖಿ ಯಾಗಿ ಬದುಕು ನಡೆಸಿದಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ಸ್ವಾಮೀಜಿ ಹೇಳಿದರು. ಸಾಧನೆ ಎಂಬುದು ಒಬ್ಬ ವ್ಯಕ್ತಿಯ ಪ್ರಯತ್ನ ಮಾತ್ರವಲ್ಲ, ಅನೇಕ ಮಂದಿಯ ಸಹಕಾರದ ಫಲ,‘ನಾನೊಬ್ಬನೇ ಸಾಧಿಸಿದ್ದೇನೆ’ ಎನ್ನುವು ದಕ್ಕಿಂತ, ‘ಎಲ್ಲರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು ಎನ್ನುವ ಮನೋಭಾವವೇ ನಿಜವಾದ…
Author: News Desk Benkiyabale
ತುಮಕೂರು: ಅಸಂಘಟಿತ ಕಾರ್ಮಿರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರವಹಿಸುವ ಶ್ರಮಜೀವಿಗಳಾದ ಎಪಿಎಂಸಿ, ಮಿಲ್-ಗೋಡೌನ್-ವೇರಹೌಸ್, ನಗರ ಗ್ರಾಮೀಣ ಬಜಾರ, ರೈಲ್ವೆ ಸ್ಟೇಷನ್, ಬಂದರುಗಳಲ್ಲಿ ಲೋಡಿಂಗ್ ಅನ್ಲೋಡಿಂಗ ಕೆಲಸ ನಿರ್ವಹಿಸುವ ಹಮಾಲಿ ಕಾರ್ಮಿಕರ ಬದುಕಿನ ಪ್ರಮುಖ ಪ್ರಶ್ನೆಗಳಿಗಾಗಿ, ಪ್ರಮುಖ ಬೇಡಿಕೆಗಳಿಗಾಗಿ ಒತ್ತಾಯಿಸಿ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದರು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್(ಸಿ.ಐ.ಟಿ.ಯು) ಪ್ರತಿಭಟನೆ ನಡೆಸಿ ಮನವಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ನಿಡಲಾಯಿತು. ಕರ್ನಾಟಕ ರಾಜ್ಯ ಸರಕಾರ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿ0ದ ಅಂಬೇಡ್ಕರ ಸಹಾಯ ಹಸ್ತ ಸ್ಮಾರ್ಟ ಪಡೆದ ಹಮಾಲಿ ಕಾರ್ಮಿಕರು ಸೇರಿದಂತೆ ೮೫ಕ್ಕೂ ಹೆಚ್ಚು ವಲಯದ ಅಸಂಘಟಿತ ಕಾರ್ಮಿಕರಿಗೆ ಕೇವಲ ಅಪಘಾತ ಸಂಬ0ಧಿಸಿದ ಕೆಲ ಪರಿಹಾರ ನೀಡುವ ಯೋಜನೆಗಳನ್ನು ಜಾರಿಮಾಡಲಾಗುತ್ತಿದೆ ಆ ದರೇ ಸರಕಾರ ನಿರ್ಧಿಷ್ಟವಾಗಿ ಯಾವುದೇ ಹಣಕಾಸಿನ ನೇರವು ನೀಡಿಲ್ಲ. ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬ0ಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕ್ಷೇಮಾಭಿವೃದ್ಧಿ…
ತುಮಕೂರು: ಸಮಾಜದಲ್ಲಿ ಕ್ರೌರ್ಯ, ಅಹಿಂಸೆಯ ವಾತಾ ವರಣ ಹೆಚ್ಚುತ್ತಿದ್ದು, ಹಲವರು ಅಸುರಕ್ಷಿತ ವಾತಾವರಣದಲ್ಲಿ ಬದುಕು ತ್ತಿದ್ದಾರೆ. ಅಭದ್ರತೆಯಲ್ಲಿರುವ ಎಲ್ಲರಿಗೆ ಸುರಕ್ಷಿತ ವಾತಾವರಣ ಮೂಡಿಸಬೇಕಾಗಿದೆ ಎಂದು ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಎಂ.ಸಿ.ಲಲಿತ ಪ್ರತಿಪಾದಿಸಿದರು. ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರ, ಜನಶಿಕ್ಷಣ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಅಂಗವಾಗಿ ಸರಸ್ವತಿಪುರಂನ ಜೋಹ ಮಹಿಳಾ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಿತ್ಯವೂ ಒಂದಲ್ಲಾ ಒಂದು ಕಡೆ ಅತ್ಯಾಚಾರ ಪ್ರಕರಣ, ಹೆಣ್ಣು ಮಕ್ಕಳ ಕೊಲೆ, ದೌರ್ಜನ್ಯ, ಶೋಷಣೆ ವರದಿಯಾಗುತ್ತಲೇ ಇವೆ. ಇವುಗಳಿಗೆ ಕಡಿವಾಣ ಹಾಕಬೇಕಾದರೆ ಸಾಮಾಜಿಕವಾಗಿ ಚರ್ಚೆ ಮತ್ತು ಅರಿವಿನ ಕಾರ್ಯಕ್ರಮಗಳು ಹೆಚ್ಚಬೇಕಾಗಿದೆ ಎಂದರು. ಭ್ರೂಣಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ನಿರಂತರವಾಗಿ ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಮನೋಭಾವ ಹೊಂದಿದ ಪರಿಣಾಮ ಸಮಾಜದಲ್ಲಿ ಇಂದು ಲಿಂಗ ಅಸಮಾನತೆ ಮುಂದುವರಿದೇ ಇದೆ. ಕೆಲವು ವಾತಾವರಣದಲ್ಲಿ, ವರ್ಗಗಳಲ್ಲಿ ಹೆಣ್ಣು ಮಕ್ಕಳು…
ಕೊರಟಗೆರೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಸಾವಿರಾರು ಸಂಖ್ಯೆ ಡಾ.ಜಿ.ಪರಮೇಶ್ವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯ ಕರ್ತರು, ಮಠಾಧೀಶರುಗಳು, ಸಾರ್ವಜನಿಕರು ಬೃಹತ್ ಪ್ರತಿಭಟನಾ ರ್ಯಾಲಿ ಪಟ್ಟಣದಲ್ಲಿ ನಡೆಸಿದರು. ಕರ್ನಾಟಕ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗು ತ್ತಿದ್ದಂತೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಸಾವಿರಾರು ಡಾ.ಜಿ. ಪರಮೇಶ್ವರ ಅಭಿಮಾನಿಗಳು ಬೃಹತ್ ಮೆರವಣಿಗೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊ0ದಿಗೆ ಕೊರಟಗೆರೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರಧಾನ ರಸ್ತೆ ಮೂಲಕ ಮುಖ್ಯ ಬಸ್ಸ್ಟಾöಂಡ್ ವೃತ್ತದವರೆಗೆ ಘೊಷನೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು, ಯುವಕರು ಬೈಕ್ ರ್ಯಾಲಿಯೊಂದಿಗೆ ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ರವರೆ ಅಗಬೇಕು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೆ ಮೊದಲ ಆಧ್ಯತೆ ಡಾ.ಜಿ.ಪರಮೇಶ್ವರ್ ರವರಿಗೆ ನೀಡಬೇಕೆಂದು ಘೋಷಣೆ ಕೊಗಿದರು, ಮೆರವಣಿಗೆಯಲ್ಲಿ ಮಹಿಳೆಯರು ಬಹುದೊಡ್ಡ ಸಂಖ್ಯೆಯಲ್ಲಿ ಭಾಗ ವಹಿಸಿ ಡಾ.ಜಿ.ಪರಮೇಶ್ವರರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇ ಬೇಕು, ಕಾಂಗ್ರೆಸ್ ಪಕ್ಷಕ್ಕಾಗಿ ಅವರು ಸಾಕಷ್ಟು ದುಡಿದಿದ್ದಾರೆ, ತ್ಯಾಗ ಮಾಡಿದ್ದಾರೆ, ಸಜ್ಜನ ರಾಜಕಾರಣಿಯಾದ ಅವರನ್ನು ದಲಿತ…
ತಿಪಟೂರು: ಡಿ.೧೩ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ತುಮಕೂರಿನ ಸರಸ್ವತಿ ಪುರಂನಲ್ಲಿ,ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ತುಮಕೂರು ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘ ಸಂಘದ ಸಂಯುಕ್ತಾಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘದ ಜಿಲ್ಲಾಧ್ಯಕ್ಷ ಡಿ. ನಾರಾಯಣ್ ನಾಯಕ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಯಲ್ಲಿ,ಉದ್ಘಾಟನಾ ಕಾರ್ಯಕ್ರಮದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಶ್ರೀ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಭವನದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ನೆರವೇರಿಸಲಿದ್ದು, ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ತಾಂಡಾಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯಕ್ ಸಮಾರಂಭವನ್ನು ಉದ್ಘಾಟಿಸಲಿದ್ದು,ಉಪ ಸಭಾಪತಿ ರುದ್ರಪ್ಪ ಲಮಾಣಿ,…
ತಿಪಟೂರು: ಪತ್ರಿಕಾ ವೃತ್ತಿಯಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಮಾತ್ರ ಸಮಾಜ ಗೌರವ ನೀಡುತ್ತದೆ. ವೃತ್ತಿ ಬದ್ದತೆಯೊಂದಿಗೆ ಕೆಲಮಾಡಿ ಆಡಳಿತದಲ್ಲಿ ತಪ್ಪುಗಳಾದಾಗ ಸರಿದಾರಿಗೆ ತರುವ ಕೆಲಸ ಮಾಡಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ ಕಲ್ಪತರು ಕ್ರಾಂತಿ ಕನ್ನಡ ವಾರಪತ್ರಿಕೆ ೧೩ನೇ ವಾರ್ಷಿಕೋತ್ಸವ, ವಿಶೇಷ ಸಂಚಿಕೆ ಬಿಡುಗಡೆ, ಸಾಧಕರಿಗೆ ಸನ್ಮಾನ, ಭಾವಗೀತೆ ಗಾಯನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಂವಿಧಾನದಲ್ಲಿ ಶಾಸಕಾಂಗ ಕಾರ್ಯಾಂಗ ನ್ಯಾಯಾಂಗಗಳ ಜೊತೆ ಪತ್ರಿಕಾರಂಗವನ್ನು ನಾಲ್ಕು ಅಂಗವಾಗಿ ಭಾವಿಸಿದ್ದೇನೆ. ಸಮಾಜದಲ್ಲಿ ನೈಜ ನೈತಿಕ ಹೊಣೆ ಹೊತ್ತ ಪತ್ರಿಕಾ ಅಂಗ ಪಾರದರ್ಶಕವಾಗಿ ಸತ್ಯದ ಹಾದಿಯಲ್ಲಿ ಸಾಗಬೇಕು ಅಲ್ಲದೆ ಪತ್ರಕರ್ತರು ಯಾವುದೇ ಸುದ್ದಿಯನ್ನು ನಿಖರವಾಗಿ ಮಾಡಿಬೇಕು. ಸಕಾರತ್ಮಕ ವಿಚಾರಗಳಿರಲಿ, ನಕಾರಾತ್ಮಕ ವಿಚಾರಗಳಿರಲಿ ವಸ್ತು ನಿಷ್ಠವಾಗಿ ವರದಿಮಾಡಿ, ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾಗ ಪ್ರೋತ್ಸಹಿಸಿ ಬೆನ್ನು ತಟ್ಟುವ ಕೆಲಸ ಮಾಡಿ, ಯಾವುದೇ ಕಾರಣಕ್ಕೂ ತಾರತಮ್ಯ ಮಾಡ ಮಾಡಬಾರದು. ನಡೆಯುವ ಮನುಷ್ಯ ಎಡವುದು ಸಹಜ, ಹಾಗೆ ಆಡಳಿತ ಮಾಡುವವರು ತಪ್ಪುಗಳನ್ನು…
ತುಮಕೂರು: ಜಿಲ್ಲೆಯಲ್ಲಿ ಒಟ್ಟು ೩೨೫ ಬಾಲ ಗರ್ಭಿಣಿ ಪ್ರಕರಣಗಳು ನ್ಯಾಯಾಲಯ ಹಂತದಲ್ಲಿ ದಾಖಲಾಗಿದ್ದು, ಜಿಲ್ಲಾಸ್ಪತ್ರೆ ಮಟ್ಟದಲ್ಲಿ ೨೩೦ ಪ್ರಕರಣಗಳು ಅವಧಿ ಖಾತರಿ ಹಂತದಲ್ಲಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅವರು ಹೇಳಿದರು. ನಗರದ ವಿದ್ಯೋದಯ ಕಾನೂನು ಕಾಲೇಜು ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ, ಹಾಗೂ ವಿದ್ಯೋದಯ ಕಾನೂನು ಕಾಲೇಜು, ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ದಿನದಿನ ಕಾಯ್ದೆಗಳು ಬಾಲ ಗರ್ಭಿಣಿ ಪ್ರಕರಣಗಳು ಸೇರಿದಂತೆ ಬಾಲ ಮಕ್ಕಳ ಕಾಣೆ ಪ್ರಕರಣಗಳು ಗಡಿ ಭಾಗಗಳಲ್ಲಿ ಹೆಚ್ಚುತ್ತಿವೆ ಇದರಿಂದಾಗಿ ಕಾನೂನು ವಿದ್ಯಾರ್ಥಿಗಳು ಕಾಲೇಜು ಬಿಡುವಿನ ಸಮ ಯದಲ್ಲಿ ಶಾಲಾ ಕಾಲೇಜು ಹಾಗು ವಿವಿಧ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ನಾಗರಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು. ಪ್ರತಿಯೊಬ್ಬ ಪ್ರಜೆಯು ಮಾನವ ಹಕ್ಕುಗಳನ್ನು ರಕ್ಷಿಸುವುದು ರಾಜ್ಯ…
ತುಮಕೂರು: ಜನ ಐದು ವರ್ಷಕ್ಕೊಮ್ಮೆ ನಮ್ಮನ್ನು ಆರಿಸಿ ಕಳಿಸುತ್ತಾರೆ ನಾವು ಮಾಡಿದ ಕೆಲಸ ಅವರಿಗೆ ಇಷ್ಟವಾದರೆ ಮತ್ತೊಮ್ಮೆ ನಮ್ಮನ್ನು ರಿನಿವಲ್ ಮಾಡಿಕೊಳ್ಳುತ್ತಾರೆ ಇಲ್ಲದಿದ್ದರೆ ತಿರಸ್ಕರಿಸುತ್ತಾರೆ ಎಂದು ಶಾಸಕ ಸಿ ಬಿ ಸುರೇಶ್ ಬಾಬು ರವರು ಅಭಿಪ್ರಾಯಪಟ್ಟರು ಶಿರಾ ತಾಲೂಕು, ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬನ್ನಿ ನಗರದ ಬಳಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು ಜನ ಕೊಟ್ಟ ಅಧಿಕಾರ ಶಾಶ್ವತವಲ್ಲ ಅಧಿಕಾರವಧಿಯಲ್ಲಿ ನಾವು ಮಾಡಿದ ಕೆಲಸಗಳೇ ಶಾಶ್ವತವಾಗಿ ನಮ್ಮ ಹೆಸರನ್ನು ಉಳಿಸುತ್ತವೆ. ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರು ಅಂತಹ ಒಂದು ಉತ್ತಮ ಕಾರ್ಯಕ್ಕೆ ಮುಂದಾಗಿದ್ದಾರೆ ತಮ್ಮ ಅನುದಾನದ ಅಡಿಯಲ್ಲಿ ನರೇಗಾ ಕಾಮಗಾರಿ ಅಡಿಯಲ್ಲಿ ಹಾಗೂ ೧೫ನೇ ಹಣಕಾಸು ಯೋಜನೆ ಅಡಿಯಲ್ಲಿ ಸಂಪನ್ಮೂಲಗಳನ್ನು ಬಳಸಿಕೊಂಡು ವಾಣಿಜ್ಯ ಮಳಿಗೆಗಳನ್ನು ನೂತನವಾಗಿ ನಿರ್ಮಿಸಿ ಪಂಚಾಯಿತಿಗೆ ಶಾಶ್ವತವಾಗಿ ಆದಾಯ ಬರುವಂತೆ ಮಾಡುವ ಉತ್ತಮ ಕಾರ್ಯ ಮಾಡಿದ್ದಾರೆ ಕಟ್ಟಡದ ಮೇಲ್ಭಾಗದಲ್ಲಿ ಮತ್ತಷ್ಟು ಮಳಿಗೆಗಳನ್ನು ನಿರ್ಮಿಸಲು…
ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪ ಮೈದಾಳ ರಸ್ತೆಯಲ್ಲಿ ಪರಿಶಿಷ್ಟ ಪಂಗಡಗಳ ಹಾಗೂ ಇತರೆ ಸಮುದಾಯಗಳ ವಿದ್ಯಾರ್ಥಿನಿಲಯಗಳಲ್ಲಿ ಸುಮಾರು ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರು ನಿತ್ಯ ತುಮಕೂರಿಗೆ ಕಾಲೇಜಿಗೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿ ಸುತ್ತಿದ್ದಾರೆ. ಸಾರಿಗೆ ಸಂಸ್ಥೆ ಹಾಗೂ ಜಿಲ್ಲಾಡಳಿತ ತಕ್ಷಣ ಕ್ರಮ ತೆಗೆದುಕೊಂಡು ಈ ಮಾರ್ಗದಲ್ಲಿ ಬಸ್ ಸೇವೆ ಒದಗಿಸಬೇಕು ಎಂದು ಕ್ಯಾತ್ಸಂದ್ರದ ಡಾ. ಪುನಿತ್ ರಾಜ್ಕುಮಾರ್ ಬಡಾ ವಣೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪ್ರತಾಪ್ ಮದಕರಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಸಾರಿಗೆ ಸಂಸ್ಥೆಗೆ ಮನವಿ ಮಾಡಿದರೂ ಸ್ಪಂದಿಸಿ ಬಸ್ ವ್ಯವಸ್ಥೆ ಮಾಡಿಲ್ಲ. ನಿತ್ಯ ೩೦೦ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಿಬರಲು ದೂರದ ಕ್ಯಾತ್ಸಂದ್ರ ನಿಲ್ದಾಣಕ್ಕೆ ಬರುವಂತಾಗಿದೆ. ಕ್ಯಾತ್ಸಂದ್ರವರೆಗಿನ ನಗರ ಸಾರಿಗೆ ಬಸ್ ಸೇವೆಯನ್ನು ಡಾ.ಪುನಿತ್ ರಾಜ್ಕುಮಾರ್ ಬಡಾವಣೆವರೆಗೂ ವಿಸ್ತರಿಸಿದರೆ ಹಾಸ್ಟೆಲ್ ವಿದ್ಯಾ ರ್ಥಿಗಳಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳದಿದ್ದರೆ ವಿದ್ಯಾರ್ಥಿಗಳೊಂದಿಗೆ, ನಾಗರೀಕರು, ಕನ್ನಡಪರ ಸಂಘಟನೆಗಳು, ದಲಿ ತಪರ ಸಂಘಟನೆಗಳೊ0ದಿಗೆ ಉಗ್ರ ಹೋರಾಟ…
ತುಮಕೂರು: ಭವಿಷ್ಯದಲ್ಲಿ ನೀವು ಏನಾಗಬೇಕು ಎಂಬು ದನ್ನು ಎಸ್ಎಸ್ಎಲ್ಸಿ ಪರೀಕ್ಷೆಗೆ ಮೊದಲೇ ನಿರ್ಧಾರ ಮಾಡಬೇಕು. ಶ್ರದ್ಧೆಯಿಂದ ಓದಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಬೇಕು. ಸಂಸ್ಕಾರ ರೂಢಿಸಿಕೊಂಡು ಶಿಸ್ತು, ಶ್ರದ್ಧೆ, ಆತ್ಮ ವಿಶ್ವಾಸ ಅಳವಡಿಸಿಕೊಂಡರೆ ಗುರಿ ಸಾಧನೆ ಮಾಡುವಲ್ಲಿ ಯಶಸ್ವಿಯಾಗಬಹುದು ಎಂದು ಶಾಸಕ ಬಿ.ಸುರೇಶ್ಗೌಡರು ವಿದ್ಯಾರ್ಥಿಗಳಿಗೆ ತಿಳಿಸಿದರು. ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ ಕೆಪಿಎಸ್ ಶಾಲೆಯಲ್ಲಿ ವಿದ್ಯಾ ರ್ಥಿಗಳಿಗೆ ಶೂ ಹಾಗೂ ಸಾಕ್ಸ್ ವಿತರಣೆ ಮಾಡಿ ಮಾತನಾಡಿದ ಶಾಸಕರು, ಸರ್ಕಾರ ಸಮವಸ್ತç, ಬಿಸಿಯೂಟ, ಪಠ್ಯಪುಸ್ತಕ, ಉತ್ತ ಮವಾದ ಶಾಲಾ ಕ್ಯಾಂಪಸ್, ಉತ್ತಮ ಶಿಕ್ಷಕರು ಎಲ್ಲವನ್ನೂ ಕೊಟ್ಟಿದೆ. ಈಗಿನ ಶಿಕ್ಷಣ ಪದ್ದತಿಯೂ ಉತ್ತಮವಾಗಿದೆ. ಎಲ್ಲವ ನ್ನೂ ಬಳಸಿಕೊಂಡು ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉನ್ನತ ಸ್ಥಾನಕ್ಕೆ ಹೋಗಬೇಕು ಎಂದರು. ವಿದ್ಯಾರ್ಥಿಗಳ ಪಾಲಿಗೆ ಎಸ್ಎಸ್ಎಸ್ಸಿ ಪರೀಕ್ಷೆ ಪ್ರಮುಖ ಘಟ್ಟ. ಈ ಹಂತದಲ್ಲಿ ಒಳ್ಳೆಯ ಅಂಕ ಪಡೆಯಬೇಕು. ಶಿಕ್ಷಕರ ಮಾರ್ಗದರ್ಶನ ಪಡೆದು ಒಳ್ಳೆಯ ಸಾಧನೆ ಮಾಡಿ ಶಾಲೆಗೆ, ಪೋಷಕರಿಗೆ ಕೀರ್ತಿ ತರಬೇಕು. ಮಕ್ಕಳಲ್ಲಿ ಜ್ಞಾನವಿದೆ. ಅವರಿಗೆ ಮಾರ್ಗದರ್ಶನ ನೀಡಿ ಆತ್ಮವಿಶ್ವಾಸ…











