ತುಮಕೂರು: ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಜಾತ (೪೮) ಅವರ ಕುಟುಂಬಕ್ಕೆ ಸೋಮ ವಾರ ೫ ಲಕ್ಷ ರೂ.ಗಳ ತಾತ್ಕಾಲಿಕ ಪರಿಹಾರ ಚೆಕ್ಕನ್ನು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ವಿತರಿಸಿದರು. ಮೃತರಿಗೆ ಒಬ್ಬ ಮಗ ಹಾಗೂ ಮಗಳಿದ್ದು, ಸೋಮವಾರ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳು ಉಳಿದ ೧೫ ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಮುಂದಿನ ಎರಡು ವಾರಗಳಲ್ಲಿ ಪಾವತಿಸಲಾಗುವುದು ಎಂದು ಭರವಸೆ ನೀಡಿದರು. ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುರುವೇಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಉಪವಿಭಾಗ ಮಟ್ಟದಲ್ಲಿ ಚಿರತೆ ಹಾಗೂ ಇತರೆ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟಲು ವಿಶೇಷ ‘ಟಾಸ್ಕ್ ಫೋರ್ಸ್’ ಸಮಿತಿ ರಚಿಸಿ, ದಾಳಿ ನಡೆದ ಸ್ಥಳದಲ್ಲಿ ಅರಣ್ಯ ಅಧಿಕಾರಿಗಳು ಬೀಡು ಬಿಟ್ಟು, ಕೂಡಲೇ ಚಿರತೆಯನ್ನು ಸೆರೆ ಹಿಡಿಯಲು ವ್ಯಾಪಕ ಕೋಂಬಿ0ಗ್ ನಡೆಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು. ಗ್ರಾಮ ಪಂಚಾಯಿತಿ ಕಸ ವಿಲೇವಾರಿ ವಾಹನಗಳ ಮೂಲಕ…
Author: News Desk Benkiyabale
ತುಮಕೂರು: ಪಠ್ಯೇತರ ಚಟುವಟಿಕೆಗಳೂ ಕೂಡ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ ಎಂದು ತುಮಕೂರು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಎಂ. ಅಭಿಪ್ರಾಯಪಟ್ಟರು. ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಜಿಲ್ಲಾ ಬಾಲಭವನ ಸಮಿತಿ ಹಾಗೂ ತಾಲ್ಲೂಕು ಬಾಲಭವನ ಸಮಿತಿ ವತಿಯಿಂದ ಕ್ಯಾತ್ಸಂದ್ರ ನಗರದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಾಶಾಲೆಯಲ್ಲಿ ೫-೧೬ ವಯೋಮಾನದ ಮಕ್ಕಳಿಗಾಗಿ ಶನಿವಾರ ಏರ್ಪಡಿಸಲಾಗಿದ್ದ ಓಟದ ಸ್ಪರ್ಧೆ ಮತ್ತು ಆಶುಭಾಷಣ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಅವರು ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಸಹಾಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ತುಮಕೂರು ನಗರ ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಹಾಗೂ ತಾಲ್ಲೂಕು ಬಾಲಭವನ ಸಮಿತಿ ಕಾರ್ಯದರ್ಶಿ ನಾಗರಾಜ್ ಕೆ. ಅವರು ಮಕ್ಕಳು ಪ್ರತಿ ಸ್ಪರ್ಧೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯ. ಸ್ಫರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳು ಸೋತರೂ ಕೂಡಾ ಮುಂದಿನ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಲು ದಾರಿಯಾಗುತ್ತದೆ ಎಂದು ತಿಳಿಸಿ ಸ್ಫರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ…
ತುಮಕೂರು: ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭವನದಲ್ಲಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇವರ ವತಿಯಿಂದ ಗಾಜಿನ ಮನೆ, ತುಮಕೂರಿನಲ್ಲಿ ಡಿಸೆಂಬರ್ ೨೯ ಮತ್ತು ೩೦, ೨೦೨೫ ರಂದು ನಡೆಯಲಿರುವ, ತುಮಕೂರು ಜಿಲ್ಲಾ ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಪರ ಸಂಘಟನೆಗಳಿ0ದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಕೆ ಎಸ್ ಸಿದ್ದಲಿಂಗಪ್ಪ ನವರು ಮಾತನಾಡಿ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ೨೦೨೫ರ ಡಿಸೆಂಬರ್ ೨೯ ಮತ್ತು ೩೦ರಂದು ೧೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ತುಮಕೂರು ನಗರದ ಗಾಜಿನ ಮನೆಯಲ್ಲಿ ಏರ್ಪಡಿಸಲಾಗಿದೆ, ಕಾರ್ಯಕ್ರಮವು ಜಿಲ್ಲೆಯ ನಾಗರಿಕರು ಮತ್ತು ಪರಿಷತ್ತಿನ ಅಜೀವ ಸದಸ್ಯರು ಹಾಗೂ ಕನ್ನಡಪರ ಸಂಘಟನೆಗಳ ಸಹಕಾರದಿಂದ ಏರ್ಪಡಿಸಲಾಗಿದೆ, ಈ ಸಮ್ಮೇಳನಕ್ಕೆ ಖ್ಯಾತ ಸಾಹಿತಿಗಳು ಸಂಶೋಧಕರು ವಿಮರ್ಶಕರು ಹಾಗೂ ಹಂಪಿ ವಿಶ್ವವಿ ದ್ಯಾನಿಲಯದ ನಿವೃತ್ತ ಕುಲ ಸಚಿವರು ಪ್ರಸ್ತುತ ಕರ್ನಾಟಕ ಸರ್ಕಾರದ ಗ್ರಂಥಾಲಯ ಇಲಾಖೆಯ ಅಧ್ಯಕ್ಷರು ಆಗಿರುವ…
ತುಮಕೂರು: ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಅದರೊಂದಿಗೆ ಶಿವಜ್ಞಾನದ ಅರಿವು ಮತ್ತು ಆಚರಣೆ ಮುಖ್ಯ. ಚಿಂತೆ ಚಿಂತನಗೊ0ಡಾಗ ಬಾಳು ವಿಕಾಸಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಸೋಮವಾರ ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್(ರಿ) ಆಶ್ರಯದಲ್ಲಿ ಜರುಗಿದ ಧನುರ್ಮಾಸದ ಇಷ್ಟಲಿಂಗ ಮಹಾಪೂಜಾ-ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಈಶ ನಿರ್ಮಿತವಾದ ಈ ಪ್ರಪಂಚದಲ್ಲಿ ಇರುವುದೆಲ್ಲವೂ ಅಮೂ ಲ್ಯ ಸಂಪತ್ತು. ಚಿನ್ನವಿಲ್ಲದೇ ಬದುಕಬಹುದು. ಆದರೆ ಅನ್ನವಿಲ್ಲದೇ ಬದುಕಲಾಗದು. ಶ್ರದ್ಧಾವಂತರಾದ ಭಾರತೀಯರು ಮಣ್ಣು, ನೀರು, ಗಾಳಿ, ಬೆಂಕಿ, ಕಲ್ಲುಗಳಲ್ಲಿ ದೇವರನ್ನು ಕಂಡು ಪೂಜಿಸಿದವರು. ದೇವರ ಮೇಲಿನ ನಂಬಿಕೆ ಶಾಶ್ವತ ನಂದಾದೀಪ. ನಂಬಿಗೆ ವಿಶ್ವಾಸಗಳನ್ನು ಎಂದಿಗೂ ಕಳೆದುಕೊಳ್ಳಬಾರದು. ಮನಸ್ಸೆಂಬ ಚಂಚಲ ಅಲೆಗಳ ಹೊಯ್ದಾಟವನ್ನು ಶಾಂತ ಪ್ರಶಾಂತಗೊಳಿಸುವ ಮಾರ್ಗವೇ ಆಧ್ಯಾತ್ಮವಾಗಿದೆ ಎಂದು ಶ್ರೀ ಜಗದ್ಗುರು ರೇಣುಕಾ ಚಾರ್ಯರು ಸಿದ್ಧಾಂತ ಶಿಖಾಮಣಿ ಧರ್ಮ ಗ್ರಂಥದಲ್ಲಿ ನಿರೂ ಪಿಸಿದ್ದಾರೆ. ಮನುಷ್ಯನಿಗೆ ಏನೆಲ್ಲ ಸಂಪತ್ತು ಸಂಪನ್ಮೂಲ…
ತುಮಕೂರು: ನ್ಯಾಯಾಲಯಕ್ಕೆ ನೀಡಿದ ಮೌಖಿಕಭರವಸೆ ಹುಸಿಗೊಳಿಸಿ, ೬೦೦೦ಕ್ಕು ಹೆಚ್ಚು ಅತಿಥಿ ಉಪನ್ಯಾಸಕರನ್ನು, ಅವರ ೨೦ ವರ್ಷಗಳ ಸೇವೆಯನ್ನು ಪರಿಗಣಿಸಿದೆ, ಆರ್ನಹ ಎಂಬ ಹಣೆಪಟ್ಟಿ ಕಟ್ಟಿ, ಸೇವೆಯಿಂದ ತೆಗೆದು ಹಾಕಿರುವ ಉನ್ನತ ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿ,೨೦೨೬ರ ಜನವರಿ ೦೫ ರಂದು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಮುಖ್ಯಮಂತ್ರಿಗಳ ಮನೆಯ ಮುಂದೆ ಹೋರಾಟ ನಡೆಸುವುದಾಗಿ ಸಂಘದ ಅಧ್ಯಕ್ಷರಾದ ಲೋಕೇಶ್.ಪಿ.ಸಿ.ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೨೦ಕ್ಕೂ ಹೆಚ್ಚು ವರ್ಷಗಳ ಕಾಲ ನಮ್ಮಿಂದ ಸೇವೆ ಪಡೆದು, ಈಗ ಅನರ್ಹಎಂದು ಹೇಳಿ ಕೆಲಸದಿಂದ ತೆಗೆಯುವ ಮೂಲಕ ಹೈಕೋರ್ಟ ಆದೇಶ ಉಲ್ಲಂಘನೆಯ ಜೊತೆಗೆ, ಯುಜಿಸಿ ನಿಯಮವನ್ನು ರಾಜ್ಯ ಸರಕಾರ ಗಾಳಿಗೆ ತೂರಿದೆ. ಸರಕಾರದ ಈ ಜನವಿರೋಧಿ ನಡೆಯ ವಿರುದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಜೊತೆಗೆ, ಪ್ರಾಥಮಿಕ ಶಾಲೆಗಳಲ್ಲಿ ಕೆಪಿಎಸ್ ಮ್ಯಾಗ್ನಟ್ ಶಾಲೆಯ ಹೆಸರಿನಲ್ಲಿ ಅತಂತ್ರರಾಗಿರುವ ೭೦ ಸಾವಿರ ಅತಿಥಿ ಉಪನ್ಯಾಸಕರು ಒಗ್ಗೂಡಿ ಹೋರಾಟದಲ್ಲಿ ಪಾಲ್ಗೊಳ್ಳ ಲಾಗುವುದು ಎಂದರು. ನಾವು ಸರಕಾರಿ ಪ್ರಥಮದರ್ಜೆ ಕಾಲೇಜಿಗೆ…
ತುಮಕೂರು: ತುಮಕೂರು ತಾಲ್ಲೂಕು ಹೆಬ್ಬೂರಿನ ದಿ.ಕೆ.ಎಸ.ಪುಟ್ಟಣ್ಣಯ್ಯ ರೈತ ಭವನದಲ್ಲಿ ರೈತ ದಿನಾಚರಣೆ, ಕೆ.ಎಸ್. ಪುಣ್ಣಯ್ಯ ಜಯಂತಿ, ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್ ದಿನಾಚರಣೆ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎನ್.ಗೋವಿಂದರಾಜು ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎನ್.ಗೋವಿಂದರಾಜು ಮಾತನಾಡಿ, ಇಂದು ರೈತ ದಿನಾಚರಣೆ. ಸರಕಾರ ಇಂದು ರೈತ ದಿನಾಚರಣೆಯನ್ನು ಆಚರಿಸುವ ಮೂಲಕ ಮಾಜಿ ಪ್ರಧಾನಿ ಚೌದರಿ ಚರಣ್ಸಿಂಗ್ ಅವರ ಸ್ಮರಿಸುವ ಕೆಲಸವನ್ನು ಮಾಡುತ್ತಿದೆ.ಇದಕ್ಕಾಗಿ ಸರಕಾರಕ್ಕೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಸರಕಾರ ಕೇವಲ ಕೃಷಿ, ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಲ್ಲಿ ದಾಖಲೆಗಾಗಿ ಒಂದಿಷ್ಟು ರೈತರನ್ನು ಸೇರಿಸಿ, ಭಾಷಣ ಮಾಡಿ ಹೊಗುವುದರಿಂದ ರೈತರ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ. ಕೃಷಿಕರು ಇಂದು ಬಹಳ ಕಷ್ಟದಲ್ಲಿದ್ದಾರೆ.ಕೃಷಿಗೆ ಹಾಕಿದ ಬಂಡವಾಳ ವಾಪಸ್ಸ ಬಾರದೆ, ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸರಕಾರದ ಅಂಕಿ ಅಂಶಗಳ…
ಹುಳಿಯಾರು: ಹುಳಿಯಾರು ಕಸ ವಿಲೇವಾರಿ ಘಟಕವನ್ನು ಎಚ್.ಮೇಲನಹಳ್ಳಿ ಬಳಿ ನಿರ್ಮಾಣ ಮಾಡಲು ನಾವು ಬಿಡುವುದಿಲ್ಲ. ಹುಳಿಯಾರು ಸಮೀಪದಲ್ಲೇ ಸಾಕಷ್ಟು ಸರ್ಕಾರಿ ಭೂಮಿ ಇರುವಾಗ ೨೦ ಕಿ.ಮೀ. ದೂರದ ಎಚ್.ಮೇಲನಹಳ್ಳಿಯ ಭೂಮಿಯ ಮೇಲೆ ಕಣ್ಣೇಕೆ? ಎಂದು ಸ್ಥಳೀಯರು ತಹಸೀಲ್ದಾರ್ ಅವರನ್ನು ಪ್ರಶ್ನಿಸಿದ ಘಟನೆ ಶನಿವಾರ ನಡೆದಿದೆ. ಹುಳಿಯಾರಿನ ಕಸ ವಿಲೇವಾರಿ ಘಟಕ ನಿರ್ಮಿಸಲು ಎಚ್.ಮೇಲ ನಹಳ್ಳಿ ಸರ್ವೆ ನಂಬರ್ ೬೯ ಹಾಗೂ ೬೯/೩ ರಲ್ಲಿ ಈ ಹಿಂದಿನ ತಹಸೀಲ್ದಾರ್ ಕೆ.ಪುರಂದರ ಅವರು ಸ್ಥಳ ಗುರುತಿಸಿದ್ದು ನೂತನÀ ತಹಸೀಲ್ದಾರ್ ಎಂ.ಮಮತ ಅವರು ಶನಿವಾರ ಸ್ಥಳ ವೀಕ್ಷಣೆಗೆ ಆಗಮಿ ಸಿದ್ದರು. ಈ ಸಂದರ್ಭದಲ್ಲಿ ಘಟಕ ನಿರ್ಮಾಣ ಸ್ಥಳಕ್ಕೆ ಹೋ ಗದೆ ಗ್ರಾಮದಲ್ಲೇ ಸ್ಥಳೀಯರು ಕಾರಿಗೆ ಮುತ್ತಿಗೆ ಹಾಕಿ ವ್ಯಾಪಕ ವಿರೋಧ ವ್ಯಕ್ತಪಡಿಸಿದರು. ಹಿಂದಿನ ತಹಸೀಲ್ದಾರ್ ಅವರ ನಡೆಯನ್ನು ತೀರ್ವವಾಗಿ ಖಂಡಿಸಿದರು. ಎಚ್.ಮೇಲನಹಳ್ಳಿ ಗ್ರಾಮದಲ್ಲೇ ೧೮೦೦ ರಿಂದ ೨೦೦೦ ಸಾವಿರ ಜನಸಂಖ್ಯೆ ಇದೆ. ಅಲ್ಲದೆ ಊರಿಗೆ ಹೊಂದಿಕೊAಡAತೆ ಹನುಮ ದಾಸಯ್ಯನಪಾಳ್ಯ, ಜಯಸುವರ್ಣಪುರ, ಲಂಬಾಣಿತಾAಡ್ಯ ಹಾಗೂ ತೋಟದ…
ತುಮಕೂರು: ಜಿಲ್ಲೆಯ ನಿರಾಶ್ರಿತರು, ಬಡವರು ನಿರ್ಗತಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಸತಿ ನಿವೇಶನದ ಜಾಗಗಳನ್ನು ಗುರುತಿಸಿದ್ದು ಅಲೆಮಾರಿ, ಅರೆ ಅಲೆಮಾರಿ ಅಕ್ಕಿ ಪಿಕ್ಕಿ ಹಂದಿ ಜೋಗಿ ಸಮುದಾಯಗಳಿಗೆ ನಿವೇಶನ ಕಲ್ಪಿಸಲು ತುಮಕೂರು ಹೊರವ ಲಯದ ಕೇಂದ್ರೀಯ ವಿದ್ಯಾಲಯದ ಬಳಿ ಅಮಲಾಪುರದ ಸರ್ವೆ ನಂ. ೩೧ ರಲ್ಲಿ ಈಗಾಗಲೇ ಒಂದು ಎಕ್ಕರೆ ಜಮೀನು ನೀಡಿದ್ದು ಆದರೆ ಇಲ್ಲಿಗೆ ಮೂಲ ಭೂತ ಸೌಕರ್ಯ ಕಲ್ಪಿಸುವಲ್ಲಿ ಜಿಲ್ಲಾ ಆಡಳಿತದ ಅಧಿಕಾರಿಗಳು ವಿಫಲವಾಗಿದ್ದು ಕೂಡಲೇ ಮೂಲಭೂತ ಸೌಕರ್ಯ ಕಲ್ಪಿಸಿ ಹಕ್ಕುಪತ್ರ ನೀಡದೆ ಹೋದರೆ ಜನವರಿ ೧೦ ರಿಂದ ಇಲ್ಲಿ ಅನಿರ್ದಿಷ್ಟ ಅವಧಿ ಹೋರಾಟ ನಡೆಸಲಾಗುವುದು ಎಂದು ಅಂಬೇಡ್ಕರ್ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಕೆ.ಎಮ್.ಸಂದೇಶ್ ಅವರು ತಿಳಿಸಿದರು. ತುಮಕೂರು ನಗರ ಹೊರವಲಯದ ಅಮಲಾಪುರ ಕೇಂದ್ರೀಯ ವಿದ್ಯಾಲಯದ ಬಳಿ ಇರುವ ಹಂದಿ ಜ್ಯೋಗಿಗಳ ವಾಸಸ್ಥಾನಕ್ಕೆ ಭೇಟಿ ಸುದ್ದಿಗಾರರ ಬಳಿ ಮಾತನಾಡಿದರು ತುಮಕೂರು ಜಿಲ್ಲೆಯ ಸುಮಾರು ೫೦ಕ್ಕೂ ಹೆಚ್ಚು ನಿರ್ಗತಿಕರು ಅಲೆಮಾರಿಗಳಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಒಂದು…
ತುಮಕೂರು: ತುರುವೇಕೆರೆ ತಾಲೂಕಿನಲ್ಲಿ ಹೊಸ ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅರ್ಹ ಫಲಾನುಭವಿಗಳಿಗೆ ಮುಂದಿನ ಒಂದು ತಿಂಗಳೊಳಗೆ ಪಡಿತರ ಚೀಟಿ ವಿತರಿಸಲಾಗುವುದು ಎಂದು ಶಾಸಕ ಎಂ.ಟಿ. ಕೃಷ್ಣಪ್ಪ ತಿಳಿಸಿದರು. ಸೋಮವಾರ ಪಟ್ಟಣದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಆಹಾರ ಅದಾಲತ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲೂಕಿನಲ್ಲಿ ಹೊಸ ಪಡಿತರ ಚೀಟಿಗಾಗಿ ಒಟ್ಟು ೨,೦೯೪ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ೧೬೫೪ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿಯಿರುವ ೪೪೨ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಅನ್ನ ಸುವಿಧ ಯೋಜನೆ ಯಡಿ ೭೫ ವರ್ಷ ಮೇಲ್ಪಟ್ಟ ಏಕ ಸದಸ್ಯರಾಗಿರುವ ವಯೋವೃದ್ಧರ ಮನೆ ಬಾಗಿಲಿಗೆ ಪಡಿತರ ತಲುಪಿಸುವ ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಇದರಿಂದ ವಯೋವೃದ್ಧರು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಕಾಯುವ…
ತುಮಕೂರು: ಸಾಮಾಜಿಕ ಕಳಕಳಿ ಹೊಂದಿರುದ ದಿನಪತ್ರಿಕೆಗಳನ್ನು ರೂಪಿಸುವ ಹೊಣೆ ಹೊತ್ತಿರುವ ಸಂಪಾದಕರು ದಿನನಿತ್ಯ ಬಿಡುವಿಲ್ಲದೆ ಕೆಲಸ ಮಾಡಬೇಕಾಗುತ್ತದೆ. ಈ ಕಾರ್ಯಭಾರದಲ್ಲಿ ಅವರು ತಮ್ಮ ಖಾಸಗಿ ಬದುಕನ್ನೂ ಕಳೆದುಕೊಳ್ಳುವಷ್ಟು ಒತ್ತಡ ಬರಬಹುದು. ಎಷ್ಟೇ ಕಾರ್ಯ ಒತ್ತಡದ ನಡುವೆಯೂ ತಮ್ಮ ಕುಟುಂಬಕ್ಕಾಗಿ ಸಮಯ ಮೀಸಲಿಟ್ಟು ಅವರೊಂದಿಗೆ ಬೆರೆತು ಕುಟುಂಬದ ಕಲ್ಯಾಣಕ್ಕೆ ಪ್ರಯತ್ನಿಸಬೇಕು ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದಿ0ದ ಹಮ್ಮಿಕೊಂಡಿದ್ದ ರಾಷ್ಟಿçಯ ಪತ್ರಿಕಾ ದಿನಾಚರಣೆ, ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಸಮಿತಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ವಿಶ್ವವಿದ್ಯಾಲಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಮ್ಮ ಹಾಲಪ್ಪ ಪ್ರತಿಷ್ಠಾನದಡಿ ಚಿನ್ನದ ಪದಕ ನೀಡಲಾಗುತ್ತಿದೆ. ಇದೇ ರೀತಿ ಪತ್ರಕರ್ತರ ಕಲ್ಯಾಣ ಹಾಗೂ ಪ್ರೋತ್ಸಾಹಕ್ಕಾಗಿ ಸಾಧ್ಯವಾದಷ್ಟು ದತ್ತಿ ಹಣ ಮೀಸಲಿಡುವ ಮೂಲಕ ಅವರ ವೃತ್ತಿ ಬದುಕಿಗೆ ಶಕ್ತಿ ತುಂಬುವ ಪ್ರಯತ್ನ ಮಾಡುವುದಾಗಿ ಹೇಳಿದರು.…











