ತುಮಕೂರು: ರಾಜಕಾರಣದಷ್ಟೇ ಇಂದು ದೇಶದ ಶಿಕ್ಷಣ ವ್ಯವಸ್ಥೆಯೂ ಕಲುಷಿತಗೊಳ್ಳುತ್ತಿದ್ದು, ಗುಣಾತ್ಮಕ ಶಿಕ್ಷಣ ನೀಡುವುದು ಪ್ರಸ್ತುತ ದಿನಗಳಲ್ಲಿ ದೊಡ್ಡ ಸವಾಲಾಗಿದೆ ಎಂದು ಮಾಜಿ ವಿಧಾನ ಪರಿಷತ್ತು ಸದಸ್ಯ ಡಾ. ವೈ. ಎ. ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದರು. ನಗರದ ಸೆಂಟ್ರಲ್ ಲೈಬ್ರರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಗೆಳೆಯರ ಗೆಳೆಯ ಕೆಸಿಬಿ’ ಕೃತಿ ಲೋಕಾರ್ಪಣೆ ಹಾಗೂ ಡಾ. ಕೆ.ಸಿ. ಬಸವರಾಜ್ ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೆಸಿಬಿ ಅಪರೂಪದ ವ್ಯಕ್ತಿತ್ವ: ಡಾ. ಕೆ.ಸಿ. ಬಸವರಾಜ್ (ಕೆಸಿಬಿ) ಅವರ ಸಾಧನೆಯನ್ನು ಸ್ಮರಿಸಿದ ನಾರಾಯಣಸ್ವಾಮಿ, “ಶೋಷಿತ ಹಾಗೂ ದಮನಿತ ಸಮುದಾಯದಿಂದ ಬಂದು, ಎಲ್ಲಾ ಸವಾಲುಗಳನ್ನು ಎದುರಿಸಿ ಉನ್ನತ ಹುದ್ದೆಗೆ ಏರಿದ ಕೆಸಿಬಿ ಅವರ ಸಾಧನೆ ಸಾಮಾನ್ಯವಾದದ್ದಲ್ಲ. ಡಿವಿಜಿ ಅವರ ‘ಮಂಕುತಿಮ್ಮನ ಕಗ್ಗ’ದಂತೆ ದೀನದುರ್ಬಲರ ಪಾಲಿಗೆ ಬೆಲ್ಲ-ಸಕ್ಕರೆಯಾಗಿ, ಸಮಾಜಕ್ಕೆ ಬೆಳಕಾಗಿದ್ದಾರೆ. ಎಂದು ಬಣ್ಣಿಸಿದರು. ಸರ್ಕಾರಿ ಸೇವೆಯಿಂದ ನಿವೃತ್ತರಾದ ಮಾತ್ರಕ್ಕೆ ಮನೆಯಲ್ಲಿ ಕೂರದೆ, ಕೆಸಿಬಿ ಅವರು ತಮ್ಮಲ್ಲರುವ ಜ್ಞಾನ, ವಿದ್ವತ್ತು ಹಾಗೂ ಅನುಭವವನ್ನು ಸಮಾಜದ ಏಳಿಗೆಗಾಗಿ ಹಾಗೂ ಯುವಜನರ ಹಿತಕ್ಕಾಗಿ…
Author: News Desk Benkiyabale
ತುಮಕೂರು: ನಗರದ ಹನುಮಂತಪುರದಲ್ಲಿ ಪೇಟೆ ಮಾತೆ ಕೊಲ್ಲಾಪುರದಮ್ಮ ಹಾಗೂ ಕರುಗಲ್ಲಮ್ಮ ದೇವರ ಐದು ದಿನಗಳ ಜಾತ್ರಾ ಮಹೋತ್ಸವ ಏರ್ಪಾಟಾಗಿದೆ. ಆಗಸ್ಟ್ ೩ರಂದು ಬೆಳಿಗ್ಗೆ ೧೦.೩೦ಕ್ಕೆ ಶ್ರೀರಾಮ ನಗರದ ಆದಿಸ್ಥಾನ ಮುದ್ರೆ ಗೋಣಿ ಮರದ ಪೂಜೆ, ಮಧ್ಯಾಹ್ನ ೩ ಗಂಟೆಗೆ ಕೋಟೆ ಕೊಲ್ಲಾಪುರದಮ್ಮ ಹಾಗೂ ಕರುಗಲ್ಲಮ್ಮ ದೇವಸ್ಥಾನದಿಂದ ದೇವರುಗಳನ್ನು ಮಂಗಳವಾದ್ಯ, ಜಾನಪದ ಕಲಾ ತಂಡಗಳ ಪ್ರದರ್ಶನದೊಂದಿಗೆ ಹನುಮಂತಪುರ ದೇವಸ್ಥಾನಕ್ಕೆ ಕರೆತರಲಾಗುವುದು. ನಂತರ ನಡೆಯುವ ಸಮಾರಂಭದಲ್ಲಿ ತಿಪಟೂರು ತಾಲ್ಲೂಕು ಆಲುಬೂರು ಕ್ಷೇತ್ರದ ಸೋಮಶೇಖರ ಸ್ವಾಮೀಜಿ ಸಾನಿಧ್ಯ ವಹಿಸುವರು. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿದರೆ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಎಸ್.ಆರ್.ಶ್ರೀನಿವಾಸ್, ಪ್ರಜಾಪ್ರಗತಿ ಸಂಪಾದಕ ಡಾ.ಎಸ್. ನಾಗಣ್ಣ ಅತಿಥಿಗಳಾಗಿ ಭಾಗವಹಿಸುವರು. ಆಗಸ್ಟ್ ೪ರಂದು ಸಂಜೆ ೫ ಗಂಟೆಗೆ ಆರತಿ ಅಗ್ನಿಕೊಂಡವನ್ನು ಕೇಂದ್ರ ಸಚಿವ ವಿ.ಸೋಮಣ್ಣ ಉದ್ಘಾಟಿಸುವರು. ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಸುರೇಶ್ ಗೌಡ, ಮಾಜಿ ಶಾಸಕ ಹೆಚ್.ನಿಂಗಪ್ಪ ಭಾಗವಹಿಸುವರು. ಇದೇ ದಿನ ಸಂಜೆ ೬ ಗಂಟೆಗೆ ಕಂಬದ ರಂಗಯ್ಯ ಮತ್ತು ತಂಡದವರಿAದ ಸಂಗೀತ…
ತುಮಕೂರು: ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಒಪ್ಪಿದವರನ್ನು ಜಿಲ್ಲಾಧ್ಯಕ್ಷರಾಗಿ ನೇಮಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ಕಳೆದ ಏಳು ದಿನಗಳಿಂದ ತುಮಕೂರು ಜಿಲ್ಲಾಧ್ಯಕ್ಷರ ನೇಮಕಕ್ಕೆ ಸಂಬAಧಿಸಿದAತೆ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಎಐಸಿಸಿ ವೀಕ್ಷಕಿ ಸಂಗೀತ ಬೇನಿವಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಉಪಾಧ್ಯಕ್ಷರಾದ ರಾಹುಲ್ಗಾಂಧಿ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ನಿರ್ದೇಶನದಂತೆ ತುಮಕೂರು ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮಾಹಿತಿ ಸಂಗ್ರಹಿಸುವ ಕೆಲಸ ಮಾಡಲಾಗಿದೆ.ಆಗಸ್ಟ್ ೧೪ ರವರೆಗೆ ಕಾರ್ಯಕರ್ತರು ಮುಕ್ತವಾಗಿ ಭೇಟಿಯಾಗಿ, ಇಲ್ಲವೇ ಪಕ್ಷ ತಂದಿರುವ ಅರ್ಜಿಗಳ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದಾಗಿದೆ ಎಂದರು. ಸAಘಟನ್ ಅಭಿಯಾನದ ಪ್ರಮುಖ ಉದ್ದೇಶ, ಇದುವರೆಗೂ ಜಿಲ್ಲಾಧ್ಯಕ್ಷರ ನೇಮಕಕ್ಕೆ ಇದ್ದ ಶಾಸಕರು, ಮಂತ್ರಿಗಳ ಶಿಫಾರಸ್ಸು ಹೊರತು ಪಡಿಸಿ,ಎಲ್ಲ ಕಾರ್ಯಕರ್ತರು, ಮುಖಂಡರುಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ, ಎಲ್ಲರಿಗೂ ಒಪ್ಪಿಗೆಯಾಗುವ ನಾಯಕನನ್ನು ಆಯ್ಕೆ ಮಾಡಬೇಕೆಂಬುದಾಗಿದೆ.ಹಾಗಾಗಿ ತಳಮಟ್ಟದಲ್ಲಿ…
ತುಮಕೂರು: ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉನಿರ್ದೇಶಕರು ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಡಾ: ಎಸ್. ಸಿದ್ದರಾಮಣ್ಣ ತಿಳಿಸಿದರು. ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಸಹಭಾಗಿತ್ವದಲ್ಲಿ ನಗರದ ಬಾಲಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳ ಜ್ಞಾಪಕ ಶಕ್ತಿ ಚುರುಕಾಗುವುದರೊಂದಿಗೆ ಆತ್ಮ ವಿಶ್ವಾಸ ವೃದ್ಧಿಯಾಗುತ್ತದೆ. ಅಲ್ಲದೆ ವಿದ್ಯಾರ್ಥಿಗಳಲ್ಲಿ ಕಲಿಕಾ ಶಕ್ತಿಯನ್ನು ಮೂಡಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ತಾಲ್ಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಿರಿಯ/ಹಿರಿಯ ಪ್ರಾಥಮಿಕ ಪಾಠಶಾಲೆ ಮತ್ತು ಪ್ರೌಢಶಾಲೆ ವಿಭಾಗದಿಂದ ಭಾಗವಹಿಸಿ ಪ್ರಥಮ ಬಹುಮಾನ ಗಳಿಸಿದ ತಂಡದ ಮಕ್ಕಳಿಗಾಗಿ ಈ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ರಸಪ್ರಶ್ನೆ ಸ್ಪರ್ಧೆಯಲ್ಲಿ ತಕ್ಷಣ ಉತ್ತರಿಸುವ ಮೂಲಕ ಮೆದುಳಿನ ಸಾಮರ್ಥ್ಯ ಮತ್ತು ಗ್ರಹಿಕೆ ಹೆಚ್ಚಾಗುತ್ತದೆ. ಮಕ್ಕಳಲ್ಲಿ…
ತುರುವೇಕೆರೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘ ಹಸಿರು ಸೇನೆ, ಕನ್ನಡಪರ ಸಂಘಟನೆ ಸೇರಿದಂತೆ ವಿವಿದ ಸಂಘ ಸಂಸ್ಥೆಗಳ ಪಧಾದಿಕಾರಿಗಳು ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ರೈತ ಸಂಘದ ತಾಲೂಕು ಅದ್ಯಕ್ಷ ಶ್ರೀನಿವಾಸ್ ಗೌಡ ಮಾತನಾಡಿ ರಾಜ್ಯ ಮುಖ್ಯಮಂತ್ರಿಗಳು ರಾಜ್ಯದ ರೈತರ ಹಿತ ಕಾಯುವಲ್ಲಿ ವಿಪಲರಾಗಿದ್ದಾರೆ.ರಾಜ್ಯದಲ್ಲಿ ಮಳೆ ಇಲ್ಲದೆ ಡ್ಯಾಮ್ ಗಳು ತುಂಬಿಲ್ಲ ಬರಗಾಲ ತಾಂಡವವಾಡುತ್ತಿದೆ. ರಾಜ್ಯದ ರೈತರ ಪರವಾಗಿ ತೀರ್ಮಾನ ತೆಗೆದುಕೊಳ್ಳದೆ ತೆಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಾರೆ. ಇದನ್ನು ರಾಜ್ಯ ರೈತ ಸಂಘ ಖಂಡಿಸುತ್ತಿದೆ. ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದ್ದು ಮುಖ್ಯಮಂತ್ರಿ ಗಳು ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು ಬೆಳೆ ಪರಿಹಾರವಾಗಿ ರೈತರಿಗೆ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿ ಕಾವೇರಿ ನೀರನ್ನು ತೆಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಿ ಹೇಮಾವತಿ ನೀರನ್ನು ತಾಲೂಕಿಗೆ ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸಿದರು. ಸಿಐಟಿಯು ಸಂಚಾಲಕ ಸತೀಶ್ ಮಾತನಾಡಿ ಬಿಜೆಪಿ ಸರ್ಕಾರ ವಿರುದ್ಧ…
ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿಬಿ ಜಿ ರಾಮ್ ಜಿ ಯೋಜನೆಯು ಬೇಡಿಕೆ ಆಧಾರಿತ ಕಾರ್ಯಕ್ರಮವಾಗಿದ್ದು, ಗುರಿ ಆಧಾರಿತ ಕಾರ್ಯಕ್ರಮವಲ್ಲ. ಹಾಗಾಗಿ ಸಮಗ್ರ ಕಾರ್ಯವಿಧಾನ ಸಂಹಿತೆ, ತಾಂತ್ರಿಕ ಮತ್ತು ಆಡಳಿತಾತ್ಮಕ ಮಾರ್ಗಸೂಚಿಗಳು, ಮಾದರಿ ಅಂದಾಜುಗಳು ಮತ್ತು ಜವಾಬ್ದಾರಿ ನಕ್ಷೆಯನ್ನು ಪ್ರಕಟಿಸುವವರೆಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಮಾನವ ದಿನಗಳ ಗುರಿ ನಿಗದಿ ಹಾಗೂ ಅನಗತ್ಯ ಒತ್ತಡ ವಿಧಿಸಬಾರದು ಎಂದು ಆಗ್ರಹಿಸಿ ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಸುಬ್ಬರಾಜ ಅರಸ್ ವಿ.ಆರ್. ನೇತೃತ್ವದಲ್ಲಿ ಸಂಘದ ಜಿಲ್ಲೆಯ ೧೦ ತಾಲ್ಲೂಕುಗಳ ಪದಾಧಿಕಾರಿಗಳು ಜಿ.ಪಂ. ಉಪಕಾರ್ಯದರ್ಶಿ (ಅಭಿವೃದ್ಧಿ) ಸಂಜೀವಪ್ಪರವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಯ ಮನವಿಯನ್ನು ಸಲ್ಲಿಸಿದರು. ಜು. ೧ ರಿಂದ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯು ಜಾರಿಗೆ ಬಂದಿದ್ದು, ಇದು…
ಹುಳಿಯಾರು: ಹೇಮಾವತಿ ನೀರಿಗಾಗಿ ತಾಲೂಕಿನ ರೈತರು, ಸಮಾಜ ಸೇವಕರು, ಹೋರಾಟಗಾರರು ಸೇರಿದಂತೆ ಯಾರೊಬ್ಬರು ಕೂಡ ಆತಂಕ ಪಡುವ ಅಗತ್ಯವಿಲ್ಲ. ನವಿಲೆ ಕೆರೆಗೆ ನೀರು ಹರಿಸುವ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ನೀರು ಪೂರೈಸಲು ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಶಾಸಕ ಸಿ.ವಿ. ಸುರೇಶ್ ಬಾಬು ಭರವಸೆ ನೀಡಿದ್ದಾರೆ. ಹುಳಿಯಾರಿನ ಜಿ.ಎಂ.ಆರ್. ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ೨೦೧೩ ರಿಂದಲೇ ಹೇಮಾವತಿ ನಾಲೆಯ ಮೂಲಕ ತಾಲೂಕಿನ ಹಲವಾರು ಕೆರೆಗಳಿಗೆ ನೀರು ಹರಿಸುವ ಯೋಜನೆಗಳು ಜಾರಿಯಲ್ಲಿದ್ದು, ಹುಳಿಯಾರು ಭಾಗದ ಕೆರೆಗಳಿಗೆ ಈಗಾಗಲೇ ನೀರು ತಲುಪಿಸುವ ಕೆಲಸ ನಡೆಯುತ್ತಿದೆ. ದಬ್ಬೇಘಟ್ಟದ ಮೂಲಕ ನವಿಲೆ ಕೆರೆಗೆ ನೀರು ತರುವ ಯೋಜನೆಯು ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಶೇಕಡಾ ೯೯ ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಹಿAದೆ ಕೆರೆಯ ಒಂದು ಭಾಗದಲ್ಲಿ ಮಣ್ಣು ಕುಸಿದಿದ್ದರಿಂದ ಕೆಲಸದಲ್ಲಿ ಸ್ವಲ್ಪ ವಿಳಂಬವಾಗಿತ್ತು. ಪ್ರಸ್ತುತ ಕೇವಲ ೧೦೦ ಮೀಟರ್ ಕೆಲಸ ಮಾತ್ರ ಬಾಕಿ ಇದ್ದು, ಅದನ್ನು ಮುಂದಿನ ಒಂದು ವಾರದೊಳಗೆ ಪೂರ್ಣಗೊಳಿಸಲಾಗುವುದು…
ತುಮಕೂರು: ದಿನಾಂಕ ೨೬.೦೭.೨೦೨೬ ರಂದು ರಾತ್ರಿ ೭-೨೦ ಗಂಟೆಯಿ0ದ ರಾತ್ರಿ ೮-೫೦ ಗಂಟೆಯ ಮದ್ಯದಲ್ಲಿ ತುಮಕೂರು ತಾಲ್ಲೂಕು, ಕಸಬಾ ಹೋಬಳಿ, ಬೆಳಗುಂಬ, ಗರುಡ ಕೆಫೆ ಹತ್ತಿರ ರಾಜಣ್ಣ, ಪುಟ್ಟತಾಯಮ್ಮರವರ ಅಡಿಕೆ ತೋಟದ ಬಳಿ ದೇವರಾಯನದುರ್ಗ-ತುಮಕೂರು ಟಾರ್ ರಸ್ತೆಯಲ್ಲಿ ವೀರಣ್ಣ @ ಮಲ್ಲನನ್ನು ಯಾರೋ ದುಷ್ಕರ್ಮಿಗಳು, ಯಾವುದೋ ಉದ್ದೇಶದಿಂದ, ಯಾವುದೋ ಆಯುಧದಿಂದ ಮುಖಕ್ಕೆ ಮತ್ತು ತಲೆಗೆ ಹೊಡೆದು ಕೊಲೆ ಮಾಡಿದ್ದ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಮೊ.ನಂ. ೧೯೭/೨೦೨೬ ಕಲಂ ೧೦೩(೧) ಃಓS ರೀತ್ಯ ಪ್ರಕರಣ ದಾಖಲಾಗಿರುತ್ತದೆ. ಮಾನ್ಯ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್.ಕೆ.ವಿ. ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಕೆ.ಎಸ್.ಪಿ.ಎಸ್ ಮತ್ತು ಪುರುಷೋತ್ತಮ.ಎಂ.ಎಲ್ ಕೆ.ಎಸ್.ಪಿ.ಎಸ್ ರವರ ನೇತೃತ್ವದಲ್ಲಿ, ತುಮಕೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಕೆ.ಆರ್.ಚಂದ್ರಶೇಖರ್ ರವರ ಮುಂದಾಳತ್ವದಲ್ಲ್ಲಿ ಕ್ಯಾತ್ಸಂದ್ರ ಪೊಲೀಸ್ ವೃತ್ತ ನಿರೀಕ್ಷಕರಾದ ರಾಘವೇಂದ್ರ ಕೆ.ಆರ್, ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಪಿ.ಎಸ್.ಐ-೦೧ ಪ್ರಸನ್ನಕುಮಾರ್ ಕೆ. ಹಾಗೂ ಸಿಬ್ಬಂದಿಗಳಾದ ಮೋಹನ್ ಕುಮಾರ್, ಎ.ಎಸ್.ಐ. ಹನುಮರಂಗಯ್ಯ, ನಿಜಾಮುದ್ದಿನ್,…
ತುಮಕೂರು: ಕುಣಿಗಲ್ ರಸ್ತೆಯ ರಾಮಕೃಷ್ಣ ನಗರದ ಶ್ರೀ ಶಿರಡಿಸಾಯಿನಾಥ ದೇಗುಲ ಸೇರಿದಂತೆ ನಗರದ ವಿವಿಧಡೆ ಇರುವ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ರಾಮಕೃಷ್ಣ ನಗರದ ಸಾಯಿನಾಥ ಮಂದಿರದಲ್ಲಿ ಬೆಳಿಗ್ಗೆ ೬ ಗಂಟೆಗೆ ಕಾಕಡ ಆರತಿ, ೭ ಗಂಟೆಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಅಲಂಕಾರ, ೮ ಗಂಟೆಗೆ ರುದ್ರಾಭಿಷೇಕ, ೧೦ ಗಂಟೆಗೆ ೧೦೮ ಗುರುಗಳ ಅವಾಹನೆ ಪೂಜಾ, ಮಧ್ಯಾಹ್ನ ೧೨ಕ್ಕೆ ಮಹಾಮಂಗಳಾರತಿ ನೆರವೇರಿತು. ಭಕ್ತಾದಿಗಳಿಗಾಗಿ ಬೆಳಿಗ್ಗೆಯಿಂದ ರಾತ್ರಿವರೆಗೂ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ರಾಮಕೃಷ್ಣನಗರದ ಸಾಯಿನಾಥ ಮಂದಿರದಲ್ಲಿ ೧೦೮ ಗುರುಗಳ ಅವಾಹನೆ ಪೂಜೆ ನೆರವೇರಿಸಿದ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ವೇದಗಳನ್ನು ವಿಭಜನೆ ಮಾಡಿ ೪ ವೇದ ಮತ್ತು ೧೮ ಪುರಾಣಗಳನ್ನು ಜನರಿಗೆ ಪರಿಚಯಿಸಿದ ಕೀರ್ತಿ ವೇದ ವ್ಯಾಸರಾಜರಿಗೆ ಸಲ್ಲುತ್ತದೆ. ಶಂಕರಾಚಾರ್ಯ, ಸ್ವಾಮಿ ವಿವೇಕಾನಂದರು, ಶಿರಡಿ ಬಾಬಾರವರು ಮಹಾನ್ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದವರು ಎಂದರು. ಗುರುತ್ವಾಕರ್ಷಣೆಯನ್ನು ಕಂಡು ಹಿಡಿದ ನ್ಯೂಟನ್ನಗೆ ಭೂಮಿ ತಾಯಿಯೇ ಗುರುವಾಗಿ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಕಸಾಪ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಮುಖಂಡರಾದ ಸ್ವದೇಶಿ ವಿಶ್ವನಾಥ್, ಜಿಲ್ಲಾ ಸಮಿತಾ ಸಮಾಜದ ಅಧ್ಯಕ್ಷ ಮಂಜೇಶ್, ತಾಲ್ಲೂಕು ಅಧ್ಯಕ್ಷ ಕಟ್ವೆಲ್ ರಂಗನಾಥ್, ಜಿಲ್ಲಾ ವಾದ್ಯಗಾರರ ಸಂಘದ ಅಧ್ಯಕ್ಷ ಗಂಗಾಧರ್, ಸತ್ಯನಾರಾಯಣ್, ಬೆಸ್ಟೆಕ್ಸ್ ರಾಮರಾಜು, ಸೀತಾರಾಮಯ್ಯ ಸೇರಿದಂತೆ ಸಮುದಾಯದ ಮುಖಂಡರುಗಳ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ೧೨ನೇ ಶತಮಾನದ ವಚನ ಚಳವಳಿಯ ನೇತೃತ್ವ ವಹಿಸಿದ್ದ ಹಲವು ಮಹನೀಯರು ಜಯಂತಿಗಳನ್ನು ಸರಕಾರ ಆಚರಿಸುತಿದ್ದು,ಅವರಲ್ಲಿ ಬಸವಣ್ಣ ನವರ ಬಲಗೈ ಬಂಟನAತಿದ್ದ ಶಿವಶರಣ ಹಡಪದ ಅಪ್ಪಣ್ಣ ನವರು ಒಬ್ಬರು.ಯಾರನ್ನು ಬೆಳಗ್ಗೆ…











