Author: News Desk Benkiyabale

ತುಮಕೂರು: ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ವಿಶ್ವ ಹಿಂದೂ ಪರಿಷದ್, ಬಜರಂಗದಳದ ೮ನೇ ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ ಶುಕ್ರವಾರ ವೈಭವದಿಂದ ನೆರವೇರಿತು. ಅಲಂಕೃತ ಹೂವಿನ ಪಲ್ಲಕ್ಕಿಯಲ್ಲಿ ಬೃಹತ್ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮಂಗಳವಾದ್ಯ, ಕಲಾ ಮೇಳಗಳೊಂದಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ವಿಸರ್ಜನೆ ಮಾಡುವ ಕೆಎನ್‌ಎಸ್ ಕಲ್ಯಾಣಿವರೆಗೆ ಅದ್ದೂರಿ ಮೆರವಣಿಗೆ ಮಾಡಲಾಯಿತು. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ, ಹೆಬ್ಬೂರು ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ, ಅಟಿವಿ ಸುಕ್ಷೇತ್ರದ ಅಟವಿ ಮಲ್ಲಿಕಾರ್ಜುನ ಸ್ವಾಮೀಜಿ, ರೇವಣ್ಣಸಿದ್ಧೇಶ್ವರ ಮಠದ ಬಿಂದುಶೇಖರ ಒಡೆಯರ್ ಸ್ವಾಮೀಜಿ ಮತ್ತಿತರ ಗಣ್ಯರು ಗಣಪತಿಗೆ ಪೂಜೆ ಸಲ್ಲಿಸಿ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಹಿಂದೂ ಮಹಾಗಣಪತಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಅಧ್ಯಕ್ಷ ಬಿ.ಎಸ್.ಮಂಜುನಾಥ್, ಉಪಾಧ್ಯಕ್ಷರಾದ ಮಹೇಂದ್ರ…

Read More

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಹಾಗಲವಾಡಿ ಗ್ರಾಮದ ಶ್ರೀ ಕರಿಯಮ್ಮ ದೇವರ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ೩ ವರ್ಷ(೨೦೨೫-೨೦೨೮)ಗಳ ಅವಧಿಗಾಗಿ ಚುನಾವಣೆ ನಡೆಸಲು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಗುಬ್ಬಿ ತಹಶೀಲ್ದಾರ್ ಬಿ.ಆರತಿ ತಿಳಿಸಿದ್ದಾರೆ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ದೇವಾಲಯದ ಸಮಿತಿ ಚುನಾವಣೆ ನಡೆಸಲು ಆ ದೇಶಿಸಿರುವ ಹಿನ್ನೆಲೆಯಲ್ಲಿ ಈ ಚುನಾವಣೆಯನ್ನು ನಡೆಸಲಾಗುತ್ತಿದೆ. ಚುನಾವಣೆ ಸಂಬ0ಧ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಪ್ರಕಟಿಸಲಾಗಿರುವ ವೇಳಾಪಟ್ಟಿಯನ್ವಯ ಸೆಪ್ಟೆಂಬರ್ ೧೫ರಂದು ೨೦೧೭ರಲ್ಲಿ ನಡೆದ ಚುನಾವಣೆ ಸಂದರ್ಭದಲ್ಲಿ ತಯಾರಿಸಲಾಗಿದ್ದ ಮೂಲ ಮತದಾರರ ಪಟ್ಟಿಯನ್ನು ಗುಬ್ಬಿ ತಾಲ್ಲೂಕು ಕಚೇರಿ, ಹಾಗಲವಾಡಿ ನಾಡಕಚೇರಿ ಹಾಗೂ ಶ್ರೀ ಕರಿಯಮ್ಮ ದೇವರ ದೇವಾಲಯದಲ್ಲಿ ಪ್ರಕಟಿಸಲಾಗುವುದು. ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಹಾಗೂ ಮರಣ/ಮತ್ತಿತರ ಕಾರಣಗಳಿಂದ ಹೆಸರನ್ನು ಕೈಬಿಡುವ ಸಂಬ0ಧ ಸೆಪ್ಟೆಂಬರ್ ೧೫ ರಿಂದ ೨೦ರವರೆಗೆ ಬೆಳಿಗ್ಗೆ ೧೧ ರಿಂದ ೪ ಗಂಟೆಯೊಳಗಾಗಿ ಖುದ್ದು ಹಾಜರಾಗಿ ನಾಡಕಚೇರಿಯಲ್ಲಿರುವ ಚುನಾವಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬಹುದಾಗಿದೆ. ಕರಡು ಮತದಾರರ ಪಟ್ಟಿಯನ್ನು…

Read More

ತುಮಕೂರು: ಅಂಗವಿಕಲತೆ ಶಾಪವೂ ಅಲ್ಲ. ವರವೂ ಅಲ್ಲ. ವಾಸ್ತವವೆಂಬುದನ್ನು ಅಂಗವೈಕಲ್ಯಕ್ಕೊಳಗಾದ ಮಕ್ಕಳು ಮತ್ತು ಅವರ ಪೋಷಕರು ಅರ್ಥ ಮಾಡಿಕೊಂಡು ಸರಕಾರ, ಸರಕಾರೇತರ ಸಂಸ್ಥೆಗಳು ನೀಡುವ ಸಹಕಾರ ಪಡೆದು, ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ: ಸಿದ್ದರಾಮಣ್ಣ ತಿಳಿಸಿದ್ದಾರೆ. ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ‘ಮೊಬಲಿಟಿ ಇಂಡಿಯಾ ತುಮಕೂರು’ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಆರೈಕೆದಾರರಿಗೆ ಪುನಶ್ಚೇತನ ಸೇವೆಯಲ್ಲಿ ಆರಂಭಿಕ ಮದ್ಯಸ್ಥಿಕೆ, ನಿರಾಮಯ ಆರೋಗ್ಯ ಕಾರ್ಡು ವಿತರಣೆ ಹಾಗು ಅರಿವಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಕಲಚೇತನ ಮಕ್ಕಳ ಆರೈಕೆಗೆ ತಾಳ್ಮೆ ಅತಿ ಮುಖ್ಯ ಎಂದರು. ಮೊಬಿಲಿಟಿ ಇಂಡಿಯಾ ಕಳೆದ ಹತ್ತಾರು ವರ್ಷಗಳಿಂದ ಇಡೀ ಭಾರತದಾದ್ಯಂತ ವಿಕಲಚೇತನರ ಪುನಶ್ಚೇತನಕ್ಕೆ ದುಡಿಯುತ್ತಿರುವ ಸಂಸ್ಥೆಯಾಗಿದೆ. ರಾಜ್ಯದಲ್ಲಿ ಸುಮಾರು ೧೧,೪೫,೨೬೫ ಅಂಗವಿಕಲರಿದ್ದು, ಜಿಲ್ಲೆಯಲ್ಲಿ ಸುಮಾರು…

Read More

ತುಮಕೂರು: ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಡಾ. ವಿ. ಸುದೇಶ್ ಹೇಳಿದರು. ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ನ್ಯಾಯದ ಪರಿಕಲ್ಪನೆ ರಕ್ಷಣೆಯಲ್ಲಿ ಸರ್ವೋಚ್ಚ ನ್ಯಾಯಾಲಯದ ಪಾತ್ರವೇ ಅಂತಿಮ ಎಂಬ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾನೂನು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿ ಅವರು ಮಾತನಾಡಿದರು. ಸಂವಿಧಾನದ ಅನುಚ್ಚೇಧ ೩೨ ಮತ್ತು ೧೩೬ರ ಅಡಿಯಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಮತ್ತು ವಿಶೇಷ ಮೇಲ್ಮನವಿಗಳನ್ನು ತೆಗೆದುಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸುವ ಅಧಿಕಾರವಿದ್ದರೂ ಸಹ ಅನುಚ್ಛೇಧ ೧೪೨ ರಡಿ ನ್ಯಾಯದ ಪರಿಕಲ್ಪನೆಯ ರಕ್ಷಣೆಯಲ್ಲಿ ಸರ್ವೋಚ್ಛ ನ್ಯಾಯಾಲಯ ಪಾತ್ರವೇ ಅಂತಿಮವೆ0ದು ಇದರಡಿ ರಾಮಜನ್ಮಭೂಮಿ ಪ್ರಕರಣ ಇತ್ಯರ್ಥವಾಗಿದೆ. ಅದೇ ರೀತಿ ಇದೀಗ ರಾಷ್ಟçಪತಿ ಮತ್ತು ರಾಜ್ಯಪಾಲರ ಅಧಿಕಾರದಲ್ಲಿ ಶಾಸಕಾಂಗ ಕಾರ್ಯಾಂಗಗಳ ನಡುವೆ ಸಂಘರ್ಷಣೆ ತಲೆದೋರಿದೆ. ಇದಕ್ಕೆ ಸರ್ವೋಚ್ಛ ನ್ಯಾಯಲಯದಿಂದ ಬರುವ ತೀರ್ಪು ಅಂತಿಮವಾಗುತ್ತದೆ ಎಂದು ತಿಳಿಸಿದರು. ಕಾನೂನು ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ನ್ಯಾಯ ರಕ್ಷಣೆ…

Read More

ಗುಬ್ಬಿ: ತಾಲ್ಲೂಕಿನ ಕುಗ್ರಾಮದ ತಳಸಮುದಾಯದ ಕುಟುಂಬವೊ0ದರಲ್ಲಿ ಜನಿಸಿ ಸ್ವ-ಪ್ರತಿಭೆಯಿಂದ ಕನ್ನಡದಲ್ಲಿ ಮಾಸ್ರ‍್ಸ್ ಪದವಿಯನ್ನು ಪಡೆದು ಕನ್ನಡ ಸಾಹಿತ್ಯ ವಲಯದಲ್ಲಿ ಕವಿಯಾಗಿ ಬೆಳೆದ ನಾಗಪ್ಪ ಎನ್. ಅವರು ಗ್ರಾಮೀಣ ಪರಿಸರದಲ್ಲಿ ಬೆಳೆದು ಬೆಳಗಿದ ಅಪ್ಪಟ ಕನ್ನಡ ಪ್ರತಿಭೆ ಎಂದು ಸಂಸ್ಕೃತಿ ಚಿಂತಕರು, ಹೋರಾಟಗಾರರೂ ಆದ ದೊರೈರಾಜ್ ಬಣ್ಣಿಸಿದರು. ಅವರು ಜಿಲ್ಲಾ ಕಸಾಪ ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಎನ್.ನಾಗಪ್ಪ ನುಡಿನಮನ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಪಂಚಾಯತ್ ಸದಸ್ಯರ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಮಾತನಾಡಿ ಕವಿ ನಾಗಪ್ಪನವರು ಮೌಢ್ಯದ ವಿರುದ್ಧ ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಅಲ್ಲದೆ ಬಂಡಾಯ ಸಾಹಿತ್ಯ ಚಳುವಳಿಯಲ್ಲಿ ತಮ್ಮನ್ನು ಗುರುತಿಸಿಕೊಂಡು ಸಾರ್ವಜನಿಕವಾಗಿ ಹೋರಾಟ ಮಾಡಿದ್ದರೂ ಅಂತಿಮವಾಗಿ ಅವರು ಕೌಟುಂಬಿಕ ಸಮಸ್ಯೆಗಳಿಗೆ ಸಿಲುಕಿ ಅವುಗಳನ್ನು ಎದುರಿಸಲಾಗದೆ ತಮ್ಮ ಜೀವನವನ್ನು ಅಂತ್ಯಗೊಳಿಸಿಕೊ0ಡಿದ್ದು ದುರಾದೃಷ್ಟಕರ ಸಂಗತಿ. ಅವರ ನಿಧನ ಕನ್ನಡ ಕಾವ್ಯಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ ಎಂದರು. ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಬಾ.ಹ.ರಮ0ಕುಮಾರಿ…

Read More

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಸರ್ವ ಸದಸ್ಯರ ಒಮ್ಮತದ ನಿರ್ಧಾರದಿಂದ ಗಂಗರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಅಧಿಕೃತ ಘೋಷಣೆ ಮಾಡಿದರು. ಗ್ರಾ.ಪಂ ನೂತನ ಅಧ್ಯಕ್ಷೆ ಗಂಗರತ್ನಮ್ಮ ಮಾತನಾಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರ್ಶಿವಾದ ಹಾಗೂ ಗ್ರಾ.ಪಂ ಎರಡನೇ ಅವಧಿಯ ಅಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಸರ್ವ ಸದಸ್ಯರು ಭರವಸೆಯಿಟ್ಟು ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ್ದು, ಸದಸ್ಯರ ಮತ್ತು ಅಧಿಕಾರಿಗಳ ವಿಶ್ವಾಸದೊಂದಿಗೆ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃಧ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿ ಅವಿರೋಧ ಆಯ್ಕೆ ಮಾಡಿದ ಸದಸ್ಯರಿಗೆ ಧನ್ಯವಾದ ತಿಳಿಸಿದರು. ಗ್ರಾ.ಪಂ ಪಿಡಿಓ ಪೃಥ್ವಿಭಾ ಮಾತನಾಡಿ, ಚುನಾವಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಎರಡನೇ ಅವಧಿಯ ಗ್ರಾ.ಪಂ ಅಧ್ಯಕ್ಷ ಆಯ್ಕೆ ಚುನಾವಣೆ ಯಶಸ್ವಿಕಂಡಿದೆ. ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಗಂಗರತ್ನಮ್ಮರವರನ್ನು ಆಯ್ಕೆ ಮಾಡಿದ್ದಾರೆ. ನೂತನ ಅಧ್ಯಕ್ಷರು ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿ ಶುಭಕೋರಿದರು.…

Read More

ತುಮಕೂರು: ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಗುರಿ ಹೊಂದಿ ಕಠಿಣ ಪರಿಶ್ರಮದಿಂದ ಓದಿದರೆ ಖಂಡಿತವಾಗಿಯೂ ಉತ್ತಮ ಫಲಿತಾಂಶವನ್ನು ಕಾಣಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು.ಜಿ ಅವರು ಅಭಿಪ್ರಾಯಪಟ್ಟರು. ಶ್ರೀದೇವಿ ಫಾರ್ಮಸಿ ಕಾಲೇಜು ಶ್ರೀ ರಮಣ ಮಹರ್ಷಿ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಗುರುವಾರ ಕೇಂದ್ರದ ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದ ಮೇರಾ ಯುವ ಭಾರತ್ ಮೈ ಭಾರತ್ ತುಮಕೂರು, ಡಾ: ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಇನ್ಹರ್ ವೀಲ್ ಕ್ಲಬ್ ಆಫ್ ತುಮಕೂರು ಸೆಂಟ್ರಲ್ ಹಾಗೂ ಶ್ರೀ ರಮಣ ಮಹರ್ಷಿ ನರ್ಸಿಂಗ್ ಕಾಲೇಜು ಶ್ರೀದೇವಿ ಔಷಧ ಮಹಾವಿದ್ಯಾಲಯದ ಸಹಯೋಗದಲ್ಲಿ ಸರ್ಕಾರದ ಪ್ರಮುಖ ಯೋಜನೆಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಗೆ ಹೆಚ್ಚು ಸಮಯ ವ್ಯಯಿಸದೆ ತಮ್ಮ ಜೀವನದ ಗುರಿ, ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ಹೆಚ್ಚು ಆಸಕ್ತಿ ತೋರಬೇಕು. ಅತಿಯಾದ ಮೊಬೈಲ್ ಬಳಕೆ ಮತ್ತು ಆನ್‌ಲೈನ್ ವ್ಯಸನವು ವಿದ್ಯಾರ್ಥಿಗಳ…

Read More

ಶಿರಾ : ಸದೃಢ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿಬಿ ಜಯಜಂದ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರದ0ದು ಶಿರಾ ನಗರದ ವಿವೇಕಾ ನಂದ ಕ್ರೀಡಾಂಗಣದಲ್ಲಿರುವ ಗುರುಭವನದ ನಿವೇಶನದಲ್ಲಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ೧೩೮ ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು. ಈಗಾಗಲೇ ಬಿಸಿಲಿನ ತಾಪಕ್ಕೆ ರಾಗಿ ಹಾಗೂ ಕಡಲೆ ಬೀಜದ ಗಿಡಗಳು ಒಣಗುತ್ತಿವೆ. ಭೀಕರ ಬರಗಾಲ ಬರಬಹುದೆಂಬ ಭಯ ನನಗಿದೆ, ಶಿರಾ ತಾಲೂಕಿನಲ್ಲಿ ನೀರಿನ ಸಂರಕ್ಷಣೆಗಾಗಿ ೪೩ ಬ್ಯಾರೇಜ್ ಗಳನ್ನು ಸುಮಾರು ೫೩ ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದೇನೆ. ಅಂತರ್ಜಲ ವೃದ್ಧಿ ಮಾಡುವುದು ನನ್ನ ಗುರಿಯಾಗಿದೆ, ಆ ಕಾರಣದಿಂದ ಶಿಕ್ಷಕರ ಭವನಕ್ಕೆ ಹೆಚ್ಚಿಗೆ ಹಣ ನೀಡಲಾಗುವುದಿಲ್ಲ, ನನ್ನ ಶಾಸಕರದ ಅನುದಾನದಲ್ಲಿ ೨೫ ಲಕ್ಷ ನೀಡುತ್ತೇನೆಂದು ಭರವಸೆ ನೀಡಿದರು. ತಂತ್ರಜ್ಞಾನ ಅಭಿವೃದ್ಧಿ ಹೊಂದಿದ0ತೆ, ಅದರಿಂದ ಆಗುವ ಪ್ರಯೋಜನಗಳು ಒಂದು ಕಡೆಯಾದರೆ, ಹಾನಿಯೂ ಉಂಟಾಗುತ್ತದೆ. ಈ ತಂತ್ರಜ್ಞಾನದ…

Read More

ಹುಳಿಯಾರು: ಪ್ರತಿ ಗುರುವಾರ ವಾರದ ಸಂತೆ ಸುಂಕವಾಗಿ ಲಕ್ಷಾಂತರ ರೂ. ಸಂಗ್ರಹಿಸುತ್ತೀರಿ. ಆದರೆ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ಹಾಗೂ ನೆರಳಿನ ವ್ಯವಸ್ಥೆ ಮಾಡದೆ . ಮುಂದಿನ ಸಂತೆಯಲ್ಲಿ ಕುಡಿಯುವ ನೀರು ಹಾಗೂ ೩ ತಿಂಗಳೊಳಗೆ ಶೌಚಾಲಯ, ನೆರಳಿನ ವ್ಯವಸ್ಥೆ ಮಾಡದಿದ್ದರೆ ಪಂಚಾಯ್ತಿ ಮುಂದೆ ಅಹೋರಾತ್ರಿ ಧರಣಿ ಹಮ್ಮಿ ಕೊಳ್ಳಬೇಕಾಗುತ್ತದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಹುಳಿಯಾರು ಪಟ್ಟಣ ಪಂಚಾಯ್ತಿಗೆ ಎಚ್ಚರಿಕೆ ನೀಡಿದೆ. ಹುಳಿಯಾರು ಪಟ್ಟಣ ಪಂಚಾಯ್ತಿಗೆ ಹೊಸಹಳ್ಳಿ ಚಂದ್ರಣ್ಣ ಬಣದ ರಾಜ್ಯ ರೈತ ಸಂಘದ ಪದಾಧಿಕಾರಿಗಳೊಂದಿಗೆ ತೆರಳಿದ ಅವರು ಕಳೆದ ಐದಾರು ದಶಕಗಳಿಂದ ವಾರದ ಸಂತೆ ಮೈದಾನಕ್ಕೆ ಮೂಲಸೌಲಭ್ಯ ಕಲ್ಪಿಸುವಂತೆ ಕೇಳುತ್ತಿದ್ದರೂ . ಕನಿಷ್ಟ ಕುಡಿಯುವ ನೀರನ್ನೂ ಸಹ ಕೊಡದೆ ರೈತರನ್ನು ಕಡೆ ಗಣಿಸಿದ್ದೀರಿ. ನಿಮ್ಮ ಈ ರೈತ ವಿರೋಧಿ ಧೋರಣೆ ಮುಂದುವರಿದರೆ ಕರ ನಿರಾಕರಣೆ ಚಳುವಳಿಗೆ ಕರೆ ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಪ್ರತಿ ನಿತ್ಯ ಹೋಬಳಿಯ ವಿವಿಧ ಹಳ್ಳಿಗಳಿಂದ ಹುಳಿಯಾರು ಬಸ್ ನಿಲ್ದಾಣಕ್ಕೆ ಸಾವಿರಾರು…

Read More

ತುಮಕೂರು: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಮಂಜೂರಾದ ಅನುದಾನಕ್ಕೆ ತಕ್ಕಂತೆ ಭೌತಿಕ ಪ್ರಗತಿ ಸಾಧಿಸುವತ್ತ ವಿಶೇಷ ಗಮನ ನೀಡುವಂತೆ ಕಾರ್ಯನಿರ್ವಾಹಕ ಅಧಿಕಾರಿ  ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರು ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ, ತಾಲ್ಲೂಕು ಮಟ್ಟದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಈಗಾಗಲೇ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಗತಿ ಸಾಧಿಸಲು ಸೂಚನೆ ನೀಡಿದರು. ತಾಲ್ಲೂಕಿನ ಬಳಗೆರೆ ಗ್ರಾಮ ಪಂಚಾಯಿತಿ ಕಲ್ಯಾಣಪುರ ಗ್ರಾಮದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಜನಾಂಗಗಳ ಅಲೆಮಾರಿ ಜನಾಂಗದ ಕಾಲೋನಿಗೆ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡಬೇಕು. ಬೆಸ್ಕಾಂ ಕ್ಯಾತ್ಸಂದ್ರ ವೃತ್ತದ ವ್ಯಾಪ್ತಿಯಲ್ಲಿರುವ ಬಿಸಿಎಂ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ವಿದ್ಯುತ್ ಸಂಪರ್ಕವಿಲ್ಲದಿರುವ ಬಗ್ಗೆ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಸಂಬAಧಿಸಿದ ಅಧಿಕಾರಿಗಳು ಪರಿಶೀಲಿಸಿ ಬೆಸ್ಕಾಂ ಅಧಿಕಾರಿಗಳಿಗೆ ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಬೇಕು. ಬೆಸ್ಕಾಂ ಅಧಿಕಾರಿಗಳು ಆದ್ಯತೆ ಮೇಲೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಸೂಚಿಸಿದರು. ಕೃಷಿ, ತೋಟಗಾರಿಕೆ, ರೇಷ್ಮೆ,…

Read More