ಪಾವಗಡ: ಪಟ್ಟಣದ ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವದ ಅಂಗವಾಗಿ ಏರ್ಪ ಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಸಿದ್ದ ನಂಜನಗೂಡು ನಂಜು0ಡೇ ಶ್ವರಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ನೀಲಕಂಠ ಧೀಕ್ಷಿತ್ ಭಾಗಿಯಾಗಿ ಜಪಾನಂದ ಶ್ರೀಗಳನ್ನು ಗೌರವಿಸಿ ಆಶೀರ್ವಾದ ಪಡೆದರು. ಗುರುವಾರ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವದ ಅಂಗವಾಗಿ ಆಶ್ರಮದಲ್ಲಿ ಭಕ್ತರಿಗೆ ಶ್ರೀರುದ್ರಪ್ರಶ್ನ ಹಾಗೂ ಚಮಕ ಪಾಠಗಳ ಭೋಧನೆಯ ಅಂತಿಮಘಟ್ಟದಲ್ಲಿ ಶ್ರೀನಂಜುAಡೇಶ್ವರ ಸ್ವಾಮಿಯ ವಸ್ತç, ಬಿಲ್ವಪತ್ರೆ ಹಾಗೂ ಪ್ರಸಾದಗಳೊಂದಿಗೆ ಆಗಮಿಸಿದ ನೀಲಕಂಠ ಧೀಕ್ಷಿತ್ ರವರು ಆಶ್ರಮದ ಬೆಳವಣಿಗೆ, ನಿರಂತರ ಸೇವಾಕಾರ್ಯಗಳು ಹಾಗೂ ಮತ್ತಿತರ ವಿಷಯಗಳ ಕುರಿತು ಸುಧೀರ್ಘ ಮಾತುಕತೆ ನಡೆಸಿದರು. ಇದೇ ವೇಳೆ ಶ್ರೀರುದ್ರ ಪಾಠವನ್ನು ನಂಜು0ಡೇಶ್ವರಸ್ವಾಮಿ ಪಾದಾರವಿಂದಗಳಿಗೆ ಮಸರ್ಪಿಸಬೇಕೆಂಬ ಬಯಕೆ ವ್ಯಕ್ತಪಡಿಸಿದ ಶ್ರೀಗಳಿಗೆ ಹೊಸವರ್ಷದ ಏಪ್ರಿಲ್ ೧೮ರಂದು ನಂಜನಗೂಡಿನ ಶಂಕರಮಠದ ಸಹಕಾರದಿಂದ ದೇವಸ್ಥಾನದಲ್ಲಿ ಸಲಕ ಏರ್ಪಾಟು ಮಾಡುವ ಭರವಸೆಯೊಂದಿಗೆ ಪ್ರಕಟಣೆ ನೀಡಿದರು. ಈ ವೇಳೆ ಎಸ್ಎಸ್ಕೆ ಸಂಘದ ಅಧ್ಯಕ್ಷ ಜಿ.ಎಸ್.ಅನಿಲ್ ಕುಮಾರ್, ಜಗದೀಶ್, ರಾಮನಾಥ್, ರಾಮಮೂರ್ತಿ, ಚೈತ್ರ, ಭರತ್, ಸ್ಥಳೀಯ ಅರ್ಚಕ ಸೋಮಸುಂದರA…
Author: News Desk Benkiyabale
ತುಮಕೂರು: ಸಣ್ಣ ಉದ್ದಿಮೆದಾರರೊಬ್ಬರಿಗೆ ಸಹಾಯ ಧನ ಮಂಜೂರು ಮಾಡಲು ೧.೧೫ ಲಕ್ಷ ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಸಹಾಯಕ ಎನ್.ಎಸ್.ಪ್ರಸಾದ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಒಟ್ಟು ೧.೨೫ ಲಕ್ಷ ಲಂಚಕ್ಕೆ ಒತ್ತಾಯಿಸಿದ್ದು. ಮುಂಗಡವಾಗಿ ೧೦ ಸಾವಿರ ಹಣ ಪಡೆದುಕೊಂಡಿದ್ದರು. ಗುರುವಾರ ಮಧ್ಯಾಹ್ನ ಉಳಿದ ೧.೧೫ ಲಕ್ಷ ಹಣ ತೆಗೆದುಕೊಳ್ಳುವ ಸಮಯದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ನಗರದ ವಿಜಯನಗರ ಬಡಾವಣೆಯ ಎಂ.ಎಸ್.ಚನ್ನಬಸವೇಶ್ವರ ಅವರು ತಾಲ್ಲೂಕಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಶಿವಲಿಂಗ ಇಂಡಸ್ಟ್ರೀಸ್ ಸ್ಥಾಪಿಸಿ ಸಣ್ಣ ಉದ್ದಿಮೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಎಲೆಕ್ಟ್ರಿಕಲ್ ಕಂಟ್ರೋಲ್ ಪ್ಯಾನಲ್ ತಯಾರಿಸುತ್ತಿದ್ದಾರೆ. ಮೊದಲ ಬಾರಿಗೆ ಸಣ್ಣ ಉದ್ದಿಮೆ ಆರಂಭಿಸಿದವರಿಗೆ ರಾಜ್ಯ ಸರ್ಕಾರದಿಂದ ಸಹಾಯ ಧನ ನೀಡಲಾಗುತ್ತಿದೆ. ಹಾಗಾಗಿ ಸಹಾಯ ಧನ ಮಂಜೂರು ಮಾಡುವಂತೆ ಕೋರಿ ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ) ಜಂಟಿ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದ್ದರು. ಚನ್ನಬಸವೇಶ್ವರ ಅವರಿಗೆ ೧೮.೭೫ ಲಕ್ಷ ಸಹಾಯ ಧನ ಮಂಜೂರು ಮಾಡಬೇಕಿತ್ತು. ಈ…
ಕುಣಿಗಲ್: ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸಭೆ ಗುರುವಾರ ಜರುಗಿತು. ಸಭೆಯಲ್ಲಿ ತಾಸಿಲ್ದಾರ್ ರಶ್ಮಿಯು ರವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ತೆಗೆದುಕೊಂಡಿರುವ ಮುಂಜಾಗ್ರತೆ ಕ್ರಮಗಳ ವಿವರಗಳ ಸಂಪೂರ್ಣ ಮಾಹಿತಿಯನ್ನು ಟಿಹೆಚ್ಓ ರವರಲ್ಲಿ ಕೇಳಿದಾಗ ಟಿಎಚ್ಓ ಡಾ ಮರಿಯಪ್ಪನವರು ಮಾತನಾಡಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿಸೆಂಬರ್ ೨೧ರಿಂದ ಡಿಸೆಂಬರ್ ೨೪ರ ವರೆಗೆ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಇಂದ೫ ವರ್ಷದ ಪ್ರತಿಯೊಂದು ಮಕ್ಕಳಿಗೆ ಲಸಿಕೆಯನ್ನು ಹಾಕಲಾಗುತ್ತದೆ ತಾಲೂಕಿನಲ್ಲಿ ಲಸಿಕೆಯನ್ನು ಪಡೆದುಕೊಳ್ಳುವ ಸುಮಾರು ಪಟ್ಟಣ ಸೇರಿದಂತೆ ೧೮೯೮೩ ಮಕ್ಕಳು ಇದ್ದು ಡಿಸೆಂಬರ್ ೨೧ರ ಭಾನುವಾರದಂದು ಒಟ್ಟು ೧೧೦ ಲಸಿಕಾ ಕೇಂದ್ರಗಳು ಇದ್ದು ಹೆಚ್ಚುವರಿಯಾಗಿ ನಗರದಲ್ಲಿ ೩ ಗ್ರಾಮಾಂತರದಲ್ಲಿ ೩ ಲಸಿಕ ಕೇಂದ್ರಗಳನ್ನು ತೆರೆಯಲಾಗಿದೆ ಈ ಸಂದರ್ಭದಲ್ಲಿ ೨೦ ವೈದ್ಯಾಧಿಕಾರಿಗಳು, ಲಸಿಕೆ ಹಾಕುವವರು ೪೦೧, ಮೇಲ್ವಿಚಾರಕರು ೨೦ ಮಂದಿ ಕೆಲಸ ನಿರ್ವಹಿಸಲಿದ್ದಾರೆ ನಮ್ಮ ತಾಲೂಕಿನಲ್ಲಿ ನಗರ ಪ್ರದೇಶದಲ್ಲಿ ೯೭೦೫ ಗ್ರಾಮಾಂತರದಲ್ಲಿ ೪೨೫೮೩ ಒಳಗೊಂಡ0ತೆ ಒಟ್ಟು…
ತುಮಕೂರು: ತುಮಕೂರು ನಗರದ ಗಾರ್ಡನ್ ರಸ್ತೆಯಲ್ಲಿರುವ ಸವಿತಾ ಸಮಾಜ ಜಿಲ್ಲಾ ಸಂಪರ್ಕ ಕೇಂದ್ರದ ವತಿಯಿಂದ ಸವಿತಾ ಸಮಾಜದ ಅವಿವಾಹಿತರ ಅನುಕೂಲಕಕ್ಕಾಗಿ ವಧು-ವರರ ಅನ್ವೇಷಣಾ ಕೇಂದ್ರವನ್ನು ಸವಿತಾ ಸಮಾಜ ಯುವಪಡೆಯ ಜಿಲ್ಲಾಧ್ಯಕ್ಷರಾದ ಕಟ್ವೆಲ್ ರಂಗನಾಥ್ ಅವರ ನೇತೃತ್ವದಲ್ಲಿ ಉದ್ಘಾಟನೆಯನ್ನು ಮಾಡಲಾಯಿತು. ಕಟ್ವೆಲ್ ರಂಗನಾಥ್ರವರು ಮಾತನಾಡುತ್ತಾ ಪ್ರಸ್ತುತದ ದಿನಗಳಲ್ಲಿ ನಮ್ಮ ಸಮಾಜದಲ್ಲಿ ವಿವಾಹದ ವಯಸ್ಸಿಗೆ ಬಂದಿರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಜಾತಕ ಹೊಂದಾಣಿಕೆ, ಪರಸ್ಪರ ಅನ್ವೇಷಣೆ ಮಾಡುವುದು ತುಂಬಾ ಕಷ್ಟಕರವಾಗುತ್ತಿದೆ, ಸರಿಯಾದ ಜೋಡಿ ಸಿಗುವಲ್ಲಿ ಬಹಳ ಕಷ್ಟವನ್ನು ಅನುಭವಿಸುತ್ತಿರುವುದನ್ನು ಮನಗಂಡು ನಮ್ಮ ಸಮಾಜದ ಜಿಲ್ಲೆಯಲ್ಲಿನ ಹಲವಾರು ಹಿರಿಯರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಇಂದು ವಧು-ವರರ ಅನ್ವೇಷಣಾ ಕೇಂದ್ರವನ್ನು ತೆರೆಯಲಾಗಿದ್ದು, ಮದುವೆ ಅನ್ವೇಷಣೆ ಮಾಡುತ್ತಿರುವ ಸವಿತಾ ಸಮಾಜದ ಬಂಧುಗಳು ನಮ್ಮ ಕಛೇರಿಗೆ ಖುದ್ದು ಭೇಟಿ ನೀಡಿ ತಮ್ಮ ವಿವರಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ನಮ್ಮ ಸಂಪರ್ಕ ಕೇಂದ್ರದ ವತಿಯಿಂದ ಎರಡೂ ಕಡೆಯವರೊಟ್ಟಿಗೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವಂತಹ ಕಾರ್ಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು. ಈ…
ತುಮಕೂರು: ತಾಂತ್ರಿಕವಾಗಿ ದೇಶ ಬೆಳೆಯುತ್ತಿದ್ದು “ಕೃತಕ ಬುದ್ಧಿಮತ್ತೆ’ ತಂತ್ರಜ್ಞಾನದಿ0ದಾಗಿ ಇನ್ಮಿಲ್ಲದ ಸಂಶೋಧ ನೆಗಳನ್ನು ನಡೆಯುತ್ತಿವೆ. ಬಾಹ್ಯಕಾಶ, ಆರೋಗ್ಯ, ತಂತ್ರಜ್ಞಾನ ಸೇರಿದಂತೆ ದೇಶದ ಭದ್ರತೆ ಮತ್ತು ಭವಿಷ್ಯಕ್ಕಾಗಿ ಇಂದಿನ ವಿದ್ಯಾರ್ಥಿ ಗಳು ಸಂಶೋಧನಾತ್ಮಕ ಅಧ್ಯಯನಗಳನ್ನು ನಡೆಸಬೇಕಾಗಿದೆ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಶ್ರೀನಿವಾಸ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾ ನಿಕ್ ಅಂಡ್ ಟೆಲಿಕಮ್ಯುನಿಕೇಶನ್ ವಿಭಾಗ ಮತ್ತು ಬೆಂಗಳೂರಿನ ಸಹಾಯೋಗದೊಂದಿಗೆ ಬುಧುವಾರದಂದು ಹಮ್ಮಿಕೊಳ್ಳಲಾಗಿದ್ದ ೫ನೇ ಅಂತರಾಷ್ಟ್ರೀಯ ಮೊಬೈಲ್ ನೆಟ್ವರ್ಕ್ ಅಂಡ್ ಟೆಲಿ ಕಮ್ಯುನಿಕೇಷನ್ಸ್-೨೦೨೫ ಸಮ್ಮೇಳನದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿದ ಅವರು, ದೇಶದಲ್ಲಿ ತಂತ್ರಜ್ಞಾನ ಬೆಳೆಯುತ್ತಿದ್ದರೂ ಅದರಲ್ಲಿನ ಲೋಪ ದೋಷಗಳು ಮತ್ತು ಸಮಸ್ಯೆ ಸವಾಲುಗಳು ಎದುರಾಗುತ್ತಿವೆ. ಸೈಬೈರ್ ಕ್ರೈಂ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಸುರಕ್ಷತಾ ಹಾದಿಯನ್ನು ಕಂಡುಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳು ಕಲಿಯುವ ಹಂತದಲ್ಲಿಯೇ ಸಂಶೋಧನಾತ್ಮಕವಾಗಿ ಅಧ್ಯಯನಶೀಲರಾದರೆ ಮುಂದಿನ ದಿನಗಳಲ್ಲಿ ಅಂತಾರಾಷ್ಟಿಯ ಮಟ್ಟದಲ್ಲಿ ದೇಶೀಐ ತಂತ್ರಜ್ಞಾನವನ್ನು ಮುಂಚೂಣಿಗೆ ತರಬಹುದು ಎಂದರು. ಸಂಸ್ಥೆಯ ಉಪಾಧ್ಯಕ್ಷರಾದ ಡಾ.ಚಂಗಪ್ಪ…
ಕುಣಿಗಲ್: ಎಡೆಯೂರು ಸಿದ್ಧಲಿಂಗೇಶ್ವರ ಸ್ವಾಮಿಗಳನ್ನು ಬರಿ ಪವಾಡಪುರುಷರಾಗಿ ನೋಡಿ ದ್ದೇವೆ ಆದರೆ ಅವರ ಜ್ಞಾನಶಕ್ತಿ ಸಮಾಜದ ಡೊಂಕು ತಿದ್ದುವ ಭಂಡಾರವಾಗಿತ್ತು ಎಂದು ತುಮಕೂರು ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ಧಲಿಂಗಪ್ಪ ತಿಳಿಸಿದರು. ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂ ಗೇಶ್ವರ ದೇಗುಲದ ಸಮೀಪವಿರುವ ಶ್ರೀ ಸಿದ್ಧ ಲಿಂಗೇಶ್ವರ ಪ್ರೌಢಶಾಲೆಯಲ್ಲಿ ಕುಣಿಗಲ್ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಾಗಡಿ ಕಸಾಪ ಸಹಯೋಗದಲ್ಲಿ ನಡೆದ ಶ್ರೀ ಗುರು ಸಿದ್ಧಲಿಂಗೇಶ್ವರ ಸಮಗ್ರ ವಚನಗಳ ಸಂಗ್ರಹ ಮತ್ತು ಅರ್ಥ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸಿದ್ಧಲಿಂಗೇಶ್ವರ ತತ್ವಗಳು ಮತ್ತು ಅವರ ಆ ಧ್ಯಾತ್ಮ ಸಿದ್ಧಾಂತ ಬದುಕಿನ ದಿಕ್ಕನ್ನು ಬದಲಿಸುತ್ತದೆ ಯೋಗಶಕ್ತಿ, ತಪಶಕ್ತಿಯಿಂದ ಇಂದಿಗೂ ಸಾಕಷ್ಟು ಭಕ್ತರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ಇವರು ಬರೆದಿರುವ ಅಮೂಲ್ಯ ವಚನಗಳ ಸಂಗ್ರಹವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡಿದೆ ವಚನಗಳಿಗೆ ಭಾವಾರ್ಥಗಳನ್ನು ಬರೆದು ಪುಸ್ತಕ ಹೊರತಂದು ಸಿದ್ಧಲಿಂಗೇಶ್ವರರ ವಚನಗಳನ್ನು ಉಳಿಸುವ ಕೆಲಸವಾಗಿದೆ. ಸಿದ್ಧಲಿಂಗೇಶ್ವರ ಸ್ವಾಮಿಗಳ ಗದ್ದಿಗೆ ದರ್ಶನ ಪಡೆಯುವವರು ಪುಸ್ತಕವನ್ನು ಓದಬೇಕು ಮತ್ತು ಎಡೆಯೂರು ಇತಿಹಾಸ…
ತುಮಕೂರು: ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಸಂಬ0ಧ ಕೈಗೊಂಡಿದ್ದ ಪೂರ್ವಭಾವಿ ಚಟುವಟಿಕೆಯಲ್ಲಿ ಶೇ. ೬೦.೭೧ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಮಹಾನಗರ ಪಾಲಿಕೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ-೨೦೨೬ರ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ೨೦೦೨ರ ಮತದಾರರ ಪಟ್ಟಿಯನ್ನು ಆಧಾರವಾಗಿಟ್ಟುಕೊಂಡು ಪ್ರಸ್ತುತ ೨೦೨೫ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಮ್ಯಾಪಿಂಗ್ ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ನಿವಾರಿಸಿ, ನಿಖರ ಮತ್ತು ದೋಷರಹಿತ ಪಟ್ಟಿಯನ್ನು ಸಿದ್ಧಪಡಿಸುವುದು ಅರಿವು ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ ಎಂದರು. ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ಕ್ಕೆ ಸಂಬAಧಿಸಿದAತೆ ಈವರೆಗೆ ಶೇ. ೬೦.೭೧ರಷ್ಟು ಪ್ರಗತಿಯನ್ನು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.…
ಕುಣಿಗಲ್: ಭಾರತೀಯ ಸಂಸ್ಕೃತಿಯ ಪ್ರತೀಕವಾದ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದೆ. ಪ್ರತಿಯೊಬ್ಬ ನಾಗರೀಕರ ಹಕ್ಕುಗಳನ್ನು ಗೌರವಿಸಬೇಕು. ಭಾರತೀಯ ಸಂವಿಧಾನವು ಮಾನವನ ಘನತೆ ಎತ್ತಿ ಹಿಡಿಯುವ ಹಲವಾರು ಮೌಲ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ಮಾನವ ಹಕ್ಕುಗಳ ಪಾವಿತ್ರ್ಯತೆಯನ್ನು ಅರಿಯಬೇಕೆಂದು ಸಂಪನ್ಮೂಲ ವ್ಯಕ್ತಿಗಳಾದ ಡಾ.ಎಂ.ಎಸ್.ನಾಗರಾಜು ಕರೆ ನೀಡಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಏರ್ಪಡಿಸಿದ್ದ ಭಾರತೀಯ ಸಂವಿಧಾನ ಮತ್ತು ಮಾನವೀಯ ಮೌಲ್ಯಗಳು ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭಾರತೀಯ ಸಂವಿಧಾನವು ಮೂಲಭೂತ ಹಕ್ಕುಗಳನ್ನು ನೀಡುವ ಜೊತೆಗೆ ಎಲ್ಲರಿಗೂ ನ್ಯಾಯ, ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ, ಮಾನವ ಘನತೆ, ಧರ್ಮ ನಿರಪೇಕ್ಷತೆಯನ್ನು ಪ್ರತಿಪಾದಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ವ್ಯಕ್ತಿ ಸಹ ಉನ್ನತ ರಾಜಕೀಯ ಅಧಿಕಾರ ಪಡೆಯುವ ಅವಕಾಶ ನೀಡಿದೆ, ಯುವಜನರು ಸಂವಿಧಾನದತ್ತ ಮೌಲ್ಯಗಳ ಪಾಲಿಸಿ ಜವಾಬ್ದಾರಿಯುತ ಪ್ರಜೆಗಳಾಗಿ ಎಂದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಧಾಕೃಷ್ಣ ಮಾತನಾಡಿ ಮಾನವಹಕ್ಕುಗಳನ್ನು ಎಲ್ಲರೂ ಗೌರವಿಸಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನ…
ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹಿತ್ತಲಪುರ ಗ್ರಾಮದ ಸರ್ವೆ ನಂ ೫೨ ರಲ್ಲಿರುವ ಅಯ್ಯನಗುಡ್ಡೆಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅಧಿಕಾರಿಗಳು ರಾತ್ರಿ ಏಳುಗಂಟೆ ಸಮಯದಲ್ಲಿ ಬಂದು ಸ್ಥಳ ಪರಿಶೀಲನೆ ನಡೆಸಿ ಸ್ಥಳದಲ್ಲಿ ಗುರುತು ಮಾಡಿ ಹೊಗಿರುವುದು ಇದೀಗ ಗ್ರಾಮದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ, ಶನಿವಾರ ರಂದು ತುಮಕೂರು ಉಪ ವಿಭಾಗಧಿಕಾರಿ,ತಹಶೀಲ್ದಾರ್,ಅರಣ್ಯ ಇಲಾಖೆಯ ಅಧಿಕಾರಿಗಳು ಕಂದಾಯ ಇಲಾಖೆಯ ಹಾಗೂ ಗಣಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಹಿತ್ತಲಪುರ ಗ್ರಾಮದ ಅಯ್ಯನಗುಡ್ಡೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳದಲ್ಲಿ ಗುರುತು ಮಾಡಿರುವುದು ಇದೀಗ ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ ಬುಧವಾರ ಉಜ್ಜನಿ, ಹಿತ್ತಲಪುರ, ಹಾಗೂ ಬಿ.ಜಿ ಕೋಪ್ಪಲು ಗ್ರಾಮಸ್ಥರು ಅಯ್ಯನಗುಡ್ಡೆ ಯಲ್ಲಿರುವ ಸಾಧು ಸಂತರು ವಾಸಿಸುವ ಗುಹೆಗೆ ಬೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಕಲ್ಲು ಗಣಿಗಾರಿಕೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದರು, ಬಳಿಕ ಮಾಧ್ಯಮದವರೊಂದಿಗೆ ಗ್ರಾಮಸ್ಥರು ಮಾತನಾಡಿ ಶನಿವಾರ ರಾತ್ರಿ ಏಳು ಗಂಟೆಯ ಸಮಯದಲ್ಲಿ ಅಧಿಕಾರಿಗಳು ಬಂದು ಗಣಿಗಾರಿಕೆ ನಡೆಸಲು…
ಸಿರಾ: ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ದಾಸರಾಗಿ ತಮ್ಮ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಹಾಗಾಗಿ ಪ್ರಬುದ್ಧ ದೇಶದ ಆಸ್ತಿಯಾಗಬಲ್ಲ ಯುವಕರು ಇಂತಹ ದುಶ್ಚಟಗಳ ದಾಸರಾಗದೆ ತಮ್ಮ ಅಕ್ಕ ಪಕ್ಕದಲ್ಲಿ ಒಡನಾಟದಲ್ಲಿ ಇರುವವರನ್ನು ಸಹ ನಶೆಯಿಂದ ಮುಕ್ತಗೊಳಿಸಲು ಸಹಕರಿಸಬೇಕಾಗಿ ಶಿರಾ ನಗರ ಪಿಎಸ್ಐ ರೇಣುಕಾ ಯಾದವ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬುಧವಾರ ಬುಕ್ಕಾಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಅಪರಾಧ ತಡೆ ಮಾಸಾಚರಣೆ ಹಾಗೂ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಆರೋಗ್ಯವಂತ ಯುವ ಸಮೂಹ ದೇಶದ ಆಸ್ತಿಯಾ ಗುತ್ತದೆ ಒಂದು ದೇಶ ಮುನ್ನಡೆಯಬೇಕಾದರೆ ದುಡಿಯುವ ಕೈಗಳ ಸಂಖ್ಯೆ ಹೆಚ್ಚಾಗಬೇಕು ಅವುಗಳು ಆರೋಗ್ಯವಂತವಾಗಿ ಶಕ್ತಿಯು ತವಾಗಬೇಕಾದರೆ ನಶೆ ಎಂಬ ಪಾಶದಿಂದ ಅವುಗಳನ್ನು ದೂರ ಮಾಡ ಬೇಕು ಹಾಗಾಗಿ ಯುವಕರು ಧೂಮಪಾನ, ಮಧ್ಯಪಾನ, ಇದ್ದಂತಹ ದುಶ್ಚಟಗಳಿಂದ ದೂರವಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ದೇಶದ ಪ್ರಗತಿಗೆ ನಿಮ್ಮಿಂದ ಆಗುವಂತಹ ಕಾಣಿಕೆಗಳನ್ನು ನೀಡುವಂತಹ ಪ್ರಯತ್ನ ಮಾಡಬೇಕು ಎಂದರು. ಅಪರಾಧ ನಡೆದ…











