Author: News Desk Benkiyabale

ತುಮಕೂರು: ತುಮಕೂರು ವಿಶ್ವ ವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನ ಪ್ರವಾಹದ ಸಂಕೇತವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬಣ್ಣಿಸಿದ್ದಾರೆ. ತುಮಕೂರು ಜಿಲ್ಲೆಯ ಬಿದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ‘ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡ’ಗಳನ್ನು ಶುಕ್ರವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಜ್ಞಾನಸಿರಿ” ಎಂಬ ಹೆಸರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜವನ್ನು ಬೆಳಗಿಸುವ, ನಿರಂತರವಾಗಿ ಹರಿಯುವ ಜ್ಞಾನದ ಪ್ರವಾಹವನ್ನು ಸಂಕೇತಿಸುತ್ತದೆ. ಹೊಸ ಶೈಕ್ಷಣಿಕ ಕಟ್ಟಡ ಮತ್ತು ಕಲಾ ಕಟ್ಟಡವು ವಿಶ್ವವಿದ್ಯಾನಿಲಯದ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಈ ಕಟ್ಟಡಗಳು ಕಲಿಕಾ ಸೌಲಭ್ಯಗಳನ್ನು ಹೆಚ್ಚಿಸುತ್ತವೆ ಮತ್ತು ಸಂಶೋಧನೆ, ನಾವೀನ್ಯತೆ ಮತ್ತು ಸೃಜನಶೀಲತೆಗೆ ಹೊಸ ದೃಷ್ಟಿಕೋನಗಳನ್ನು ತೆರೆಯುತ್ತವೆ ಎಂದರು. ಈ ನೂತನ ಕಟ್ಟಡಗಳು ಬೋಧನೆ, ತರಬೇತಿ, ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಮತ್ತಷ್ಟು ಬಲಪಡಿಸುವ ಆಧುನಿಕ ಸೌಲಭ್ಯಗಳನ್ನು ಹೊಂದಿವೆ. ಇದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ಒದಗಿಸುತ್ತದೆ. ಈ ಕಟ್ಟಡಗಳು ಹೊಸ ಶಕ್ತಿ, ಹೊಸ ನಿರ್ದೇಶನ ಮತ್ತು ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ. ಪರೀಕ್ಷಾ…

Read More

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿಯ ಹಿಂದಿನ ಮುಖ್ಯಾಧಿಕಾರಿ ನಾಗಭೂಷಣ್ ಅವರು ವರ್ಗಾವಣೆಗೊಂಡು ಅಧಿಕಾರದಿಂದ ಬಿಡುಗಡೆಗೊಂಡ ನಂತರವೂ ಪಟ್ಟಣ ಪಂಚಾಯಿತಿಯ ಚೆಕ್‌ಗಳನ್ನು ಆನ್‌ಲೈನ್ ಮೂಲಕ ಡ್ರಾ ಮಾಡಿಸುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹಾಲಿ ಪ.ಪಂ. ಕೌನ್ಸಿಲರ್ ಅಬೂಬಕರ್ ಸಿದ್ದೀಕ್ ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಈ ಸಂಬ0ಧ ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಆರೋಪ: ಮಾಧ್ಯಮದ ಮುಂದೆ ದಾಖಲೆಗಳನ್ನು ಪ್ರದರ್ಶಿಸಿದ ಅಬೂಬಕರ್ ಸಿದ್ದೀಕ್ ಅವರು, ನಾಗಭೂಷಣ್ ಅವರು ಆಗಸ್ಟ್ ತಿಂಗಳಲ್ಲಿ ಹುಳಿಯಾರಿನಿಂದ ವರ್ಗಾವಣೆಗೊಂಡ ಬಳಿಕದ ಚಟುವಟಿಕೆಗಳನ್ನು ವಿವರಿಸಿದರು. ರಿಲೀವ್ ಮತ್ತು ಜಾಯಿನ್: ಮುಖ್ಯಾಧಿಕಾರಿಯಾಗಿದ್ದ ನಾಗಭೂಷಣ್ ಅವರು ಆಗಸ್ಟ್ ೧೨ ರಂದು ತುಮ ಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರದಿಂದ ಬಿಡುಗ ಡೆಗೊಂಡಿದ್ದರು. ಅದಾದ ಬಳಿಕ ಆಗಸ್ಟ್ ೧೪ ರಂದು ಗಂಗಾವ ತಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಚೆಕ್ ಡ್ರಾ ೧ (ವರ್ಗಾವಣೆ ಬಳಿಕ): ಗಂಗಾವತಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನವೇ, ಅಂದರೆ ಆಗಸ್ಟ್ ೧೪ ರಂದು ಸಂಜೆ ೫ ಗಂಟೆ ೩೫ ನಿಮಿಷಕ್ಕೆ ಹುಳಿಯಾರು ಪ.ಪಂ.ನ…

Read More

ತುಮಕೂರು: ವಿರ್ದ್ಯಾಥಿ ಮತ್ತು ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ. ಆಗ ಮಾತ್ರ ಶೈಕ್ಷಣಿಕ ಸಾಧನೆಯ ಮೆಟ್ಟಿಲನ್ನು ಏರಲು ಸಾಧ್ಯ ಎಂದು ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ಎಂಜನಿಯರಿAಗ್ ಕಾಲೇಜಿನ ಜಿಪಿ ನೆಕ್ಸೆಸ್ ಸಭಾಂಗಣದಲ್ಲಿ ಗರುವಾರದಂದು ಏರ್ಪಡಿಸಲಾಗಿದ್ದ ಎಂಸಿಎ, ಎಂಬಿಎ ಮತ್ತು ಎಂಟೆಕ್ ಪದವಿ ಕೋರ್ಸ್ಗಳ ಪ್ರಥಮ ವರ್ಷದ ತರಗತಿಗಳ ಉದ್ಗಾಟನಾ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ನಿರಂತರ ಪರಿಶ್ರಮವು ವಿರ್ದ್ಯಾಥಿಗಳ ಜೀವನಕ್ಕೆ ಅಗತ್ಯ. ಸಮಾಜದಲ್ಲಿನ ಪ್ರತಿಯೋಬ್ಬ ವ್ಯಕ್ತಿಯೊಂದಿಗೆ ನಿಮ್ಮ ಸಂಪರ್ಕ ಇರಬೇಕು. ಅವರಿಂದ ಕಲಿತು ನಿಮ್ಮ ಜ್ಞಾನವನ್ನು ವೃದಿಸಿಕೊಳ್ಳಬೇಕು ಎಂದರು. ಸಾಮಾಜಿಕ ಸಮಸ್ಯೆಗಳಲ್ಲಿ ವಿಫಲ ಪ್ರಯತ್ನಗಳನ್ನು ಮೆಟ್ಟಿನಿಂತು ನಿರಂತರ ಕಲಿಕೆಯಡೆಗೆ ನಿಮ್ಮ ಮನಸನ್ನು ಸದೃಡಗೊಳಿಸಿಕೊಂಡು, ಪರಸ್ಪರ ನಂಬಿಕೆ ಮತ್ತು ವಿಶ್ವಾಸದಿಂದ ಜೀವನ ನಡೆಸಬೇಕು ಎಂದು ಹೇಳಿದ ಸ್ವಾಮೀಜಿ, ವಿರ್ದ್ಯಾಥಿ ಮತ್ತು ಶಿಕ್ಷಕರ ನಡುವೆ ಪರಸ್ಪರ ನಂಬಿಕೆ ಮತ್ತು ವಿಶ್ವಾಸ ಮುಖ್ಯ. ಆಗ ಮಾತ್ರ ಸಾಧನೆಯ…

Read More

ತುಮಕೂರು: ಜಿಲ್ಲಾ ಆಸ್ಪತ್ರೆಯನ್ನು ಪಿಪಿ ಮಾಧರಿಯಲ್ಲಿ ಖಾಸಗೀಕರಣ ಮಾಡುತ್ತಿರುವುದರ ವಿರುದ್ಧ ಇಂದು ಜಿಲ್ಲೆಯ ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಾರ್ವತ್ರಿಕ ಆರೋಗ್ಯ ಆಂದೋಲನ, ಸ್ಲಂ ಜನಾಂದೋಲನ ಕರ್ನಾಟಕ ಸಿಐಟಿಯು,ಎಐಎಂಎಸ್‌ಎಸ್, ಎಪಿಸಿಆರ್, ಬಹುಜನ ಸಮಾಜಪಾರ್ಟಿ, ತಮಟೆ ಕೂಲಿ ಕಾರ್ಮಿಕರ ಸಂಘಟನೆ ಪಾವಗಡ, ಸಫಾಯಿಕರ್ಮಚಾರಿಗಳ ಕಾವಲು ಸಮಿತಿ, ಪ್ರಾಂತರೈತ ಸಂಘ, ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ, ನೂರಾರು ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಪ್ರತಿಭಟನೆ ಮಾಡಿ, ಖಾಸಗೀಕರಣ ಮಾಡುವ ಕುತಂತ್ರವನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿಗಳು ನವೆಂಬರ್ ೭ ರಂದು ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಜಿಲ್ಲಾಸ್ಪತ್ರೆಯನ್ನು ಉನ್ನತೀಕರಿಸುವ ಶಂಕುಸ್ಥಾಪನೆ ಹಾಗೂ ಮಡಿಕಲ್ ಕಾಲೇಜ್, ಘೋಷಣೆಗೆ ಬರುತ್ತಿದ್ದು ತುಮಕೂರು ಜಿಲ್ಲಾಸ್ಪತ್ರೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಇದು ಬಡವರು ರೈತರು ಅಸಂಘಟಿತ ವಲಯದ ಮಹಿಳೆಯರು ಹೆಚ್ಚಾಗಿ ಆರೋಗ್ಯ ಸೇವೆಗಾಗಿ ಬಳಸಿಕೊಳ್ಳುತ್ತಿದ್ದು ಇದನ್ನು ಸರ್ಕಾರವೇ ನಡೆಸಬೇಕೆಂದು ಒತ್ತಾಯಿಸಲಾಯಿತು ಸಾರ್ವತ್ರಿಕ ಆರೋಗ್ಯ ನೀತಿಯನ್ನು ರಾಜ್ಯ ಸರ್ಕಾರ ರೂಪಿಸ ಬೇಕು ಸಿ.ಯತಿರಾಜ್, ಹಿರಿಯ ಪರಿಸರವಾದಿ ಸಿ.ಯತಿರಾಜು…

Read More

ತುಮಕೂರು: ವಿವಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ವಿವಿ ಉಳಿಸಿ ಹೋರಾಟ ಸಮಿತಿಯ ಸಾಹಿತಿಗಳು, ಯುವಜನರು, ವಿದ್ಯಾರ್ಥಿ ಹಾಗೂ ದಲಿತ ನಾಯಕರುಗಳನ್ನು ಪರಿಗಣಿಸದೆ ಕಡೆಗಣಿಸಿ ರುವುದನ್ನು ಖಂಡಿಸಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ವತಿಯಿಂದ ನಗರದ ವಿವಿ ಕುಲಪತಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ತುಮಕೂರು ವಿವಿ ಆರಂಭವಾದ ದಿನಗಳಿಂದಲೂ ವಿವಿ ಉಳಿಸಿ ಹೋರಾಟ, ಹಳೆಯ ಲಾಂಛನವನ್ನೇ ಮರುಸ್ಥಾಪಿಸಬೇಕು ಮತ್ತು ಶುಲ್ಕ ಹೆಚ್ಚಳ ವಿರೋಧಿಸಿ ನಿರಂತರ ಹೋರಾಟ ನಡೆಸುತ್ತಾ ಬಂದ ಸಾಹಿತಿ ಬರಗೂರು ರಾಮಚಂದ್ರಪ್ಪ, ಜಿಲ್ಲೆಯ ಪ್ರಗತಿಪರ ಚಿಂತಕರಾದ ಕೆ.ದೊರೈರಾಜ್, ನಿವೃತ್ತ ಪ್ರಾಂಶುಪಾಲ ಪ್ರೊ.ಶ್ರೀನಿವಾಸಯ್ಯ, ಸಾಹಿತಿಗಳಾದ ಕೆ.ಬಿ.ಸಿದ್ದಯ್ಯ, ಜಿ.ವಿ.ಆನಂದಮೂರ್ತಿ, ಚಿದಂಬರಯ್ಯ, ದಲಿತ ಸಂಘಟನೆ ನಾಯಕ ಕೊಟ್ಟ ಶಂಕರ್, ಡಿವೈಎಫ್‌ಐ ಮುಖಂಡ ಎಸ್.ರಾಘವೇಂದ್ರ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷರಾಗಿದ್ದ ಈ.ಶಿವಣ್ಣ, ದಲಿತ ಮುಖಂಡ ಎ.ನರಸಿಂಹಮೂರ್ತಿ ಮೊದಲಾದವರು ವಿವಿ ಉಳಿವಿಗಾಗಿ ನಿರಂತರ ಹೋರಾಟ ನಡೆಸಿದ್ದರು. ಆದರೆ ವಿವಿಯ ಜ್ಞಾನಸಿರಿ ಕ್ಯಾಂಪಸ್ ಉದ್ಘಾಟನೆಗೆ ಹೋರಾಟ ಸಮಿತಿಯ ಎಲ್ಲಾ ನಾಯಕರನ್ನು ಕಡೆಗಣಿಸಿ ಏಕಪಕ್ಷೀಯವಾಗಿ ತಮಗೆ ಬೇಕಾಗಿರುವಂತಹ ಹೆಸರುಗಳನ್ನು ಮಾತ್ರ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿದ್ದಾರೆ…

Read More

ತುಮಕೂರು: ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ (ಪಿಪಿಪಿ) ಸ್ಥಾಪನೆ ಕೈಬಿಡುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಈ ಸಂಬ0ಧ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಭಾರತ ಕಮ್ಯನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಈಗಾಗಲೇ ತುಮಕೂರು ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಹಾಗೂ ನವೀಕರಣದ ನೆಪದಲ್ಲಿ ನೆಲಸಮ ಮಾಡಿ ಖಾಸಗಿ ಸಹಭಾಗಿತ್ವಕ್ಕೆ ಒಪ್ಪಿಸಲು ಸಿದ್ಧತೆ ನಡೆಸಿರುವುದು ಖಂಡನೀಯ. ಸುಮಾರು ೩೨ ಎಕರೆ ಇದ್ದು ಜಿಲ್ಲಾಸ್ಪತ್ರೆಯನ್ನು ೫ ಎಕರೆಯಷ್ಟನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿದರು. ಸಾವಿರಾರು ಕೋಟಿ ಬೆಲೆ ಬಾಳುವ ೩೨ ಎಕರೆ ಜಾಗದಲ್ಲಿ ಇರುವ ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ನಿರ್ಮಾಣ ಮಾಡಿದರೆ ಮುಂದೆ ಖಾಸಗಿಯವರ ಸ್ವತ್ತಾಗಲಿದೆ. ಇದರಿಂದಾಗಿ ಬಡ ಮಕ್ಕಳು ವೈದ್ಯರಾಗುವ ಕನಸು ನನಸಾಗುವುದಿಲ್ಲ.…

Read More

ತುಮಕೂರು: ಕಬ್ಬಿಗೆ ಹೆಚ್ಚಿನ ದರ ನಿಗದಿಗೆ ಆಗ್ರಹಿಸಿ ಬೆಳಗಾಂನಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟವನ್ನು ಬೆಂಬಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹಾಗೂ ಹುಳಿಯಾರಿನಲ್ಲಿ ಕಳೆದ ೩೦ ದಿನಗಳಿಂದ ನಡೆಯುತ್ತಿರುವ ಕಸ ವಿಲೇವಾರಿ ಘಟಕದ ರೈತರ ಹೋರಾಟ ಬೆಂಬಲಿಸಿ, ಕೂಡಲೇ ಸಮಸ್ಯೆ ಇತ್ಯರ್ಥಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಈ ಸಂಬAಧ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಕಳೆದ ೮ ದಿನಗಳಿಂದ ಬೆಳಗಾಂನಲ್ಲಿ ರೈತರು ಪ್ರತಿ ಟನ್ ಕಬ್ಬಿಗೆ ೩೫೦೦ ರೂ. ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಕಬ್ಬು ಬೆಳೆಗಾರರ ಬೇಡಿಕೆಯನ್ನು…

Read More

ತುಮಕೂರು: ಡಿಜಿಟಲ್ ಮಾಧ್ಯಮವು ಮುಂದಿನ ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಯಶಸ್ಸು ಕಾಣಲಿದೆ. ಸಾಂಪ್ರದಾಯಿಕ ಮಾಧ್ಯಮಗಳಿಗಿಂತ ಡಿಜಿಟಲ್ ಮಾಧ್ಯಮವು ಹೆಚ್ಚು ಮಂದಿಯನ್ನು ತುಂಬ ವೇಗವಾಗಿ ತಲುಪುವ ಗುಣವೇ ಇದಕ್ಕೆ ಕಾರಣ ಎಂದು  ರವಿತೇಜ ಚಿಗಳಿಕಟ್ಟೆ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಬುಧವಾರ ಹಮ್ಮಿಕೊಂಡಿದ್ದ ‘ಆರಂಭ-೨೦೨೫’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕಳೆದ ಎರಡು ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಹೆಚ್ಚು ಮಂದಿಯನ್ನು ಪರಿಣಾಮಕಾರಿಯಾಗಿ ತಲುಪುತ್ತಿದೆ. ವೆಬ್ ಮಾಧ್ಯಮ, ವಿವಿಧ ಬಗೆಯ ಆ್ಯಪ್ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದು ಈಗ ಸುಲಭವಾಗಿದೆ. ಆರ್ಥಿಕವಾಗಿಯೂ ಈ ಮಾಧ್ಯಮಗಳು ಯಶಸ್ಸು ಕಾಣಲಾರಂಭಿಸಿವೆ ಎಂದರು. ಮಾಧ್ಯಮರ0ಗದಲ್ಲಿ ಉತ್ತಮ ಸಾಧನೆ ಮಾಡಬೇಕಾದರೆ ಕೌಶಲ ಮುಖ್ಯ. ಅದರಲ್ಲೂ ಡಿಜಿಟಲ್ ಮಾಧ್ಯಮಗಳಲ್ಲಿ ತೊಡಗಿ ಸಿಕೊಳ್ಳುವವರಿಗೆ ಅನೇಕ ಕೌಶಲಗಳನ್ನು ಏಕಕಾಲದಲ್ಲಿ ಪ್ರಯೋ ಗಿಸುವ ಕೌಶಲ ಇರಬೇಕು. ಉತ್ತಮ ಕಂಟೆ0ಟ್ ನಿರಂತ ರವಾಗಿ ನೀಡುವುದು ಡಿಜಿಟಲ್ ಮಾಧ್ಯಮದ ಪ್ರಮುಖ ಸವಾಲು ಎಂದರು. ಡಿಜಿಟಲ್ ಮಾಧ್ಯಮಗಳು ಸ್ಥಳೀಯ…

Read More

ತುಮಕೂರು:  ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ತಮ್ಮ ಮಠದಲ್ಲಿಯೇ ಅಲ್ಲದೆ ರಾಜ್ಯದ ವಿವಿಧಡೆ ಕನ್ನಡ ಮಾಧ್ಯಮದ ಐವತ್ತೇಂಟು ಪ್ರೌಢಶಾಲೆಗಳನ್ನು ತೆರೆದದ್ದೇ ಅಲ್ಲದೆ ತಮ್ಮ ಸಿದ್ಧಗಂಗಾ ಪುರಾತನ ಸಂಸ್ಥೆಯ ಮೂಲಕ ೧೫೦ಕ್ಕೂ ಹೆಚ್ಚು ಕನ್ನಡ ಸಾಹಿತ್ಯದ ಕೃತಿಗಳನ್ನು ಪ್ರಕಟಿಸಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವುದರಿಂದ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವ ಸರ್ಕಾರದ ತುಮಕೂರು ವಿಶ್ವವಿದ್ಯಾನಿಲಯಕ್ಕೆ ಡಾ. ಶಿವಕುಮಾರಸ್ವಾಮೀಜಿಯವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಇತಿಹಾಸ ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಆಗ್ರಹ ಪಡಿಸಿದರು. ಅವರು ನಗರದ ಶ್ರೀ ಸಿದ್ಧಗಂಗಾ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ೭೦ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟನೆ ಮಾತನಾಡಿದರು. ಅರವತ್ತರ ದಶಕದಲ್ಲಿ ಕರ್ನಾಟಕದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಇದ್ದ ಎರಡೇ ಕಾಲೇಜುಗಳಲ್ಲಿ ಮೈಸೂರು ಸರ್ಕಾರ ತನ್ನ ಕಾಲೇಜನ್ನು ಮುಚ್ಚಿದರೂ ಪೂಜ್ಯ ಶಿವಕುಮಾರ ಸ್ವಾಮಿಗಳು ಅದನ್ನು ಮುಚ್ಚದೆ ನಷ್ಟವಾ ದರೂ ಅದನ್ನು ಬಲಪಡಿಸಿ ಮುಂದುವರಿಸಿಕೊ0ಡು ಬಂದಿದ್ದು ಕನ್ನಡ ಭಾಷೆಯ ಮೇಲಿನ ಅವರ ಅಗಾಧ ಪ್ರೀತಿಯನ್ನು ತೋರಿಸುತ್ತದೆ…

Read More

ತುಮಕೂರು: ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’, ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳ ಲೋಕಾರ್ಪಣಾ ಸಮಾರಂಭವನ್ನು ನ.೦7 ರಂದು ಬೆಳಗ್ಗೆ ೧೧-೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಕ್ಯಾಂಪಸ್ ಲೋಕಾರ್ಪಣೆ ಮಾಡಲಿದ್ದಾರೆ. ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ನೂತನವಾಗಿ ನಿರ್ಮಾಣಗೊಂಡಿರುವ ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳ ಉದ್ಘಾಟನೆ ಮಾಡಲಿದ್ದಾರೆ. ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ, ಗೃಹಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾಗಿರುವ ಡಾ. ಎಂ. ಸಿ. ಸುಧಾಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ನವದೆಹಲಿ ಪ್ರತಿನಿಧಿಗಳಾದ ಶ್ರೀ ಟಿ.…

Read More