ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಂಘದ ವತಿಯಿಂದ ಆಯೋ ಜಿಸಲಾದ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಮ್ಮೇಳನ ಹಾಗೂ ವೈಜ್ಞಾನಿಕ ಕಾರ್ಯಾಗಾರವು ದಿ. ಮಾ.೨೯ ರಂದು ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಕುವೆಂಪು ಕಲಾ ಕ್ಷೇತ್ರದಲ್ಲಿ ವಿಜೃಂಭಣೆಯಿ0ದ ನಡೆಯಿತು. ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಬಂದ ವೈದ್ಯಕೀಯ ತಂತ್ರಜ್ಞರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ವಿಜ್ಞಾನಾಧಾರಿತ ಚರ್ಚೆಗಳಲ್ಲಿ ತೊಡಗಿಸಿಕೊಂಡರು. ವೈದ್ಯ ಕೀಯ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನಗಳ ಬಳಕೆ, ರೋಗನಿರ್ಣಯ ವಿಧಾನಗಳ ಅಭಿವೃದ್ಧಿ, ಪ್ರಯೋಗಾಲಯದ ಗುಣಮಟ್ಟ ನಿರ್ವಹಣೆ ಹಾಗೂ ಭವಿಷ್ಯದ ಸವಾಲುಗಳ ಕುರಿತು ವಿಶೇಷ ಉಪನ್ಯಾಸಗಳು ನಡೆಯಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ವಿದ್ಯಾವಾಹಿನಿ ಪ್ಯಾರಾಮೆಡಿಕಲ್ ಕಾಲೇಜು ಹಾಗೂ ವಿದ್ಯಾನಿಧಿ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ನ ಒಟ್ಟು ೧೭ ವಿದ್ಯಾರ್ಥಿಗಳು ಭಾಗವಹಿಸಿದ್ದು, ತಮ್ಮ ಅಧ್ಯಯನ ಕ್ಷೇತ್ರಕ್ಕೆ ಸಂಬ0ಧಿಸಿದ ವಿಷಯಗಳಲ್ಲಿ ತಜ್ಞರಿಂದ ಮಾರ್ಗದರ್ಶನ ಪಡೆದುಕೊಂಡರು. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪ್ರಾಯೋಗಿಕ ಪ್ರದರ್ಶನಗಳು, ಪೋಸ್ಟರ್ ಪ್ರೆಸೆಂಟೇಷನ್ಗಳು ಮತ್ತು ಸಂವಾದಾತ್ಮಕ ಅಧಿವೇಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಗಮನ ಸೆಳೆದರು.…
Author: News Desk Benkiyabale
ತುಮಕೂರು: `ಕನಸು ಸಂಘಟನೆ’ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕನಸು ಸಂಘಟನೆಯ ಸಂಸ್ಥಾಪಕರು ಆದ ದೀಪಿಕಾ ಮರಳೂರು ರವರು ಕನಸು ವಿದ್ಯಾರ್ಥಿಗಳ ಪರ ಮಹಿಳೆಯರ ಪರ ನಿರಂತರವಾಗಿ ಕಾರ್ಯ ಯೋನ್ಮುಖವಾಗುತ್ತಾ ಬಂದಿರುವ ರೀತಿಯನ್ನು ಪ್ರಸ್ತಾವಿಕ ನುಡಿಗಳಲ್ಲಿ ನುಡಿದರು. “ಮಹಿಳೆಯರ ಮೇಲಿನ ದೌರ್ಜನ್ಯ ದಿನ ದಿನ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಮತ್ತು ಯುವಜ ನಾಂಗ ಹೆಚ್ಚು ಜಾಗೃತವಾಗಬೇಕಾಗಿರುವ ಅನಿವಾರ್ಯತೆ ಇದೆ. ಕೌಟುಂಬಿಕ ವ್ಯವಸ್ಥೆಗಳಲ್ಲಿ ಮಹಿಳೆಯರ ಮೇಲಿನ ದೌರ್ಜ ನ್ಯಗಳು ದಾಖಲಾಗುತ್ತಿರುವುದು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಬೇಕು’’ ಎಂದು ಪ್ರಸಿದ್ಧ ಲೇಖಕಿ ಮತ್ತು ಮಹಿಳಾ ಹೋರಾಟಗಾರರು ಆದ ಡಾ. ಬಿ.ಸಿ. ಶೈಲಾನಾಗರಾಜ್ರವರು ಕಾರ್ಯಕ್ರಮದ ಕುರಿತು ಅಧ್ಯಕ್ಷತೆಯ ಮಾತುಗಳನ್ನು ಆಡಿದರು. ಅವರ ಅಧ್ಯಕ್ಷತೆಯಲ್ಲಿ ಕನಸು ಕಾರ್ಯಕ್ರಮದಲ್ಲಿ ಕವಿಗೋಷ್ಠಿಯನ್ನು ಆಯೋಜಿಸಲಾಗಿತ್ತು. ಕವಿಗೋಷ್ಠಿಯಲ್ಲಿ ಭಾಗಿಯಾದ ಗೀತಾ ಆರ್.ಎಸ್., ಡಾ. ವೀಣಾ, ಶಾರದಮ್ಮ, ಗೀತಾ ಭಾರತಿ, ಚಂದ್ರಕಲಾ, ಪ್ರಭ ವಸಂತ, ಮೇಘನಾ, ಲತಾ, ಶಕುಂತಲಾ, ಮುಂತಾದವರು ಭಾಗವಹಿಸಿದ್ದರು. ಕನಸು ಕಾರ್ಯಕ್ರಮದ ಉದ್ಘಾಟನೆಯನ್ನು ಈಶ್ವರಿ ಮಹಿಳಾ ಸಂಘಟನೆಯ ರಂಗಮ್ಮರವರು ನಡೆಸಿಕೊಟ್ಟರು.…
ತುಮಕೂರು: ಇತಿಹಾಸದ ಪುಟಗಳಲ್ಲಿ ಅಡಗಿ ಹೋಗಿದ್ದ ೧೪ನೇ ಶತಮಾನದ ಮಹತ್ವದ ಮಾಹಿತಿಯನ್ನೊಳಗೊಂಡ ಅಪರೂಪದ ವೀರಗಲ್ಲು ಶಾಸನವೊಂದು ನಗರದ ಸತ್ಯಮಂಗಲದಲ್ಲಿ ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಎಂ. ಕೊಟ್ರೇಶ್ ಹಾಗೂ ಡಾ. ಸುಧಾ ಜೆ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳ ತಂಡ ಈ ಅಪ್ರಕಟಿತ ಶಾಸನವನ್ನು ಗುರುತಿಸಿ ಸಂಶೋಧಿಸಿದೆ. ತುಮಕೂರು ನಗರವು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಸತ್ಯಮಂಗಲದ ಹೊಸ ಬಡಾವಣೆಗಳು ನಿರ್ಮಾ ಣವಾಗುತ್ತಿವೆ. ಇಲ್ಲಿನ ಖಾಸಗಿ ಶಾಲೆಯ ಕಾಂಪೌ0ಡ್ ಪಕ್ಕದಲ್ಲಿ ಪತ್ತೆಯಾಗಿರುವ ಈ ವೀರಗಲ್ಲು ಒಟ್ಟು ಏಳು ಸಾಲುಗಳ ಬರಹವನ್ನು ಹೊಂದಿದೆ. ಶಾಸನದ ಮಾಹಿತಿಯಂತೆ ಇದು ವಿಜಯನಗರ ಸಾಮ್ರಾಜ್ಯದ ಉದಯಕ್ಕೂ ಪೂರ್ವದ ಕಾಲಘಟ್ಟದ್ದಾಗಿದ್ದು, ಅಂದರೆ ವಿಕ್ರಮ ಸಂವತ್ಸರದಲ್ಲಿ ವೀರನರಸಿಂಗದೇವನ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಅಂದು ಈ ಭಾಗವನ್ನು ಮುರುಗಲು ರಾಜ್ಯ ಎಂದು ಕರೆಯಲಾಗುತ್ತಿತ್ತು ಹಾಗೂ ಸಿಂಗೆಯ ದಂಡನಾಯಕರು ಇಲ್ಲಿನ ಪ್ರಧಾನಿಯಾಗಿದ್ದರು ಎಂಬ ಮಹತ್ವದ ಅಂಶಗಳು ಇಲ್ಲಿ ಉಲ್ಲೇಖವಾಗಿವೆ. ವಿಶೇಷವೆಂದರೆ ಶಾಸನದ ಐದನೇ ಸಾಲಿನಲ್ಲಿ ‘ಸತ್ಯಮಂಗಲ’ ಎಂಬ…
ತುಮಕೂರು: ಏಪ್ರಿಲ್ ೧ರಿಂದ ಆರಂಭವಾ ಗಿರುವ ಸ್ವಯಂ ಗಣತಿಯಲ್ಲಿ ಸಾರ್ವಜನಿಕರು ಭಾಗ ವಹಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದ್ದಾರೆ. ತುಮಕೂರು ನಗರದ ವಿವಿಧ ಬಡಾವಣೆಗಳಿಗೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಮೊಬೈಲ್ ಮೂಲಕ ನಾಗರಿಕರು ಸ್ವಯಂ ಗಣತಿ ಮಾಡುವುದು ಹೇಗೆ ಎಂಬುದನ್ನು ಖುದ್ದು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಹತ್ತು ವರ್ಷಗಳಿಗೊಮ್ಮೆ ಭಾರತ ಸರ್ಕಾ ರ ಜನಗಣತಿ ಮಾಡುತ್ತದೆ. ಅಂತೆಯೇ ಇದೀಗ ೨೦೨೭ರ ಜನಗಣತಿ ಏಪ್ರಿಲ್ ೧ರಿಂದ ಆರಂಭ ವಾಗಿದ್ದು ಏಪ್ರಿಲ್ ೧೫ರವರೆಗೆ ಸ್ವಯಂ ಗಣತಿ ನಂತರ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಮಾಡಲಿದ್ದಾರೆ ಎಂದರು. ಪ್ರಸ್ತುತ ಏಪ್ರಿಲ್ ೧ರಿಂದ ೧೫ರವರೆಗೆ ಸ್ವಯಂ ಗಣತಿ ಆರಂಭವಾಗಿದ್ದು ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕ ವಿವರಗಳನ್ನು ದಾಖಲಿಸಬೇಕಿದೆ. ಈ ದಾಖಲೆಗಳು ಅತ್ಯಂತ ಗೌಪ್ಯವಾಗಿರಿಸಲಾಗುವುದು ಮತ್ತು ಇದು ಸರ್ಕಾರದ ಯೋಜನಗಳ ರೂಪಿಸುವ ಉದ್ದೇ ಶಕ್ಕೆ ಮಾತ್ರ ಬಳಕೆ ಆಗಲಿದೆ ಎಂದರು. ತಮ್ಮ…
ತುಮಕೂರು: ಏ.೮ರಂದು ನಡೆಯಲಿರುವ ಜನ ಸ್ಪಂದನ ಸಭೆಯಲ್ಲಿ ಗರಿಷ್ಠ ಮಟ್ಟದ ಪರಿಹಾರಗಳು ಸಿಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಏಪ್ರಿಲ್ ೮ ರಂದು ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ಪೂರ್ವ ಸಿದ್ಧತೆಪರಿಶೀಲನೆ ನಡೆಸಿದ ಅವರು, ಅಂದು ಬೆಳಿಗ್ಗೆ ೧೦.೩೦ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ ನಡೆಯಲಿದೆ ಎಂದರು. ಈವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನಸಂಪರ್ಕ ಸಭೆಯನ್ನು ಮಾಡಲಾಗಿದೆ. ಕಂದಾಯ, ಪಂಚಾಯತ್ ರಾಜ್ ಇಲಾಖೆ, ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಬ0ಧಿಸಿದ ಅಹವಾಲುಗಳನ್ನು ಸಾರ್ವಜನಿಕರು ನೀಡಿದ್ದಾರೆ. ಕೆಲವು ಪ್ರಕರಣಗಳಲ್ಲಿ ಸ್ಥಳದಲ್ಲೆ ಪರಿಹಾರಗಳನ್ನು ನೀಡಲಾಗಿದೆ. ಕೆಲವು ಕಾಲಮಿತಿಯಲ್ಲಿ ಮಾಡ ಬೇಕಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಈಗಾಗಲೆ ಕೆಲವು ಬಗೆಹರಿದಿವೆ. ಈ ಪೈಕಿ ಕಲವು ಫಲಾನುಭವಿಗಳನ್ನು ಈ ಕಾರ್ಯಕ್ರಮಕ್ಕೆ ಕರೆತರುವಂತೆ ಆಯಾ ತಾಲೂಕು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಜಿಲ್ಲಾದ್ಯ0ತ ಸುಮಾರು ೨೫೦೦ ಅಹವಾಲುಗಳು ಬಂದಿದ್ದು ಈ…
ತುಮಕೂರು: ಗುಣಮಟ್ಟದ ಹಾಲು ಶೇಖರಣೆ ಮಾಡುತ್ತಿರುವ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದೆ ಎಂದು ತುಮಕೂರು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಮತ್ತು ಪಾವಗಡ ಶಾಸಕರಾದ ಎಚ್.ವಿ.ವೆಂಕಟೇಶ್ ಹೇಳಿದರು. ತಾಲ್ಲೂಕಿನ ಅರೇಮಲ್ಲೇನಹಳ್ಳಿ ರಂಗನಾಥ ಸ್ವಾಮಿ ಬೆಟ್ಟದಲ್ಲಿ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ, ಜಿಲ್ಲಾ ರೈತರ ಮತ್ತು ಎಂ.ಪಿ.ಸಿ.ಎಸ್ ನೌಕರರ ಮತ್ತು ಸಾಮಾನ್ಯ ಕಲ್ಯಾಣ ಟ್ರಸ್ಟ್ ಮಲ್ಲಸಂದ್ರ, ತುಮಕೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಆದಿಚುಂಚನಗಿರಿ ಆಸ್ಪತ್ರೆ, ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಅರೇಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ನಡೆದ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ತಾಲೂಕಿನ ಹಾಲು ಸಹಕಾರ ಸಹಕಾರ ಸಂಘಗಳ ನಿರ್ದೇಶಕರೂ, ಹಾಲಿ ಕೆಎಂಎಫ್ ನ ನಿರ್ದೇಶಕರಾಗಿರುವ ಸಿ.ವಿ.ಮಹಲಿಂಗಯ್ಯನವರು ಹಾಲು ಸಹಕಾರ ಸಂಘದಲ್ಲಿ ಉತ್ತಮ ತಾಲೂಕಿನಲ್ಲಿ ಉತ್ತಮ ಹೆಸರುಗಳಿಸಿದ್ದಾರೆ. ಅವರನ್ನೇ ಮುಂಬ ರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಲು ಜಿಲ್ಲಾ…
ಹುಳಿಯಾರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಪರಮ ಪೂಜ್ಯ ಡಾ.ಶಿವಕುಮಾರ ಮಹಾಸ್ವಾಮೀಜಿಗಳ ೧೧೯ ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಹುಳಿಯಾರಿನ ರಾಮಗೋಪಾಲ್ ಸರ್ಕಲ್ ಬಳಿಯ ಭೈರವೇಶ್ವರ ಮೆಡಿಕಲ್ಸ್ ಮುಂಭಾಗದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಚನ್ನಬಸವಯ್ಯ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರು ಮಾತನಾಡಿ, ಡಾ. ಶಿವಕುಮಾರ ಸ್ವಾಮೀಜಿಯವರು ಇಡೀ ವಿಶ್ವಕ್ಕೆ ಮಾದರಿಯಾದವರು. ಅವರ ದಾಸೋಹ ಸಂಸ್ಕೃತಿಮತ್ತು ಬದುಕಿನ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರ ಮತ್ತು ಅನ್ನದ ದಾಸೋಹ ನೀಡಿದ ಸಿದ್ಧಗಂಗಾ ಮಠವು ಒಂದು ಪುಣ್ಯಕ್ಷೇತ್ರ. ಶ್ರೀಗಳು ಇತರ ಮಠಗಳಂತೆ ಶಾಖಾ ಮಠಗಳನ್ನು ತೆರೆಯಲು ಮುಂದಾಗದೆ, ಒಂದೇ ಮಠದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು ರೂಪಿಸಿ ದ್ದಾರೆ. ಇಂದು ದೇಶ-ವಿದೇಶಗಳಲ್ಲಿ ಇಲ್ಲಿನ ವಿದ್ಯಾರ್ಥಿಗಳು ವೈದ್ಯರಾಗಿ, ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವುದು ಶ್ರೀಗಳ ಮಾರ್ಗದರ್ಶನದ ಶಕ್ತಿಯಾಗಿದೆ.…
ಹುಳಿಯಾರು: ಕಷ್ಟಕಾಲಕ್ಕೆ ನೆರವಾಗಲಿ ಎಂದು ತಾವು ಬೆವರಿಸಿ ದುಡಿದ ಹಣವನ್ನು ಸಹಕಾರ ಸಂಘದಲ್ಲಿ ಇಟ್ಟಿದ್ದ ಬಡ ಜನರು, ಇಂದು ಅದೇ ಹಣಕ್ಕಾಗಿ ಬೀದಿ ಪಾಲಾಗಿರುವ ಕರುಣಾಜನಕ ಘಟನೆ ಹುಳಿಯಾರಿನಲ್ಲಿ ನಡೆದಿದೆ. ಹುಳಿಯಾರಿನ ದೇವರಾಜ ಅರಸು ಮುತ್ತಿನ ಸಹಕಾರ ಸಂಘದಲ್ಲಿ ಪಿಗ್ಮಿ ಹಣ ಕಳೆದುಕೊಂಡ ಸಂತ್ರಸ್ತರು ಶಾಸಕ ಸಿ.ಬಿ.ಸುರೇಶ್ ಬಾಬು ಅವರನ್ನು ಭೇಟಿ ಮಾಡಿ ತಮ್ಮ ಅಳಲನ್ನು ತೋಡಿಕೊಂಡರು. ಕನಸು ನುಚ್ಚುನೂರು: ವಿಷದ ಬಾಟಲಿ ಹಿಡಿದು ಪ್ರತಿಭಟನೆ ಸಂತೃಸ್ತರು ಶಾಸಕರ ಮುಂದೆ ಅಕ್ಷರಶಃ ಕಣ್ಣೀರು ಹಾಕಿದರು. “ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ, ಹೆಣ್ಣು ಮಕ್ಕಳ ಮದುವೆಗೆ ಮತ್ತು ಸ್ವಂತ ಮನೆಯ ಕನಸು ನನಸು ಮಾಡಿಕೊಳ್ಳಲು ನಾವು ಹೊಟ್ಟೆ ಕಟ್ಟಿ ಈ ಸಂಘದಲ್ಲಿ ಹಣ ಉಳಿತಾಯ ಮಾಡಿದ್ದೆವು. ಆದರೆ ಈಗ ನಮಗೆ ನಮ್ಮ ಹಣವೂ ಇಲ್ಲ, ಇತ್ತ ಕೇಳುವವರೂ ಇಲ್ಲದಂತಾಗಿದೆ” ಎಂದು ಗೋಳಾಡಿದರು. ಮನವಿ ಸಲ್ಲಿಸುವ ವೇಳೆ ತೀವ್ರ ಹತಾಶೆಗೊಂಡ ಕೆಲ ಸಂತ್ರಸ್ತರು, “ಹಣ ಸಿಗದಿದ್ದರೆ ನಮಗೆ ಸಾವೊಂದೇ ದಾರಿ” ಎಂದು ತಾವು ತಂದಿದ್ದ ವಿಷದ…
ಹುಳಿಯಾರು: ಸಣ್ಣಪುಟ್ಟ ವಿಚಾರಗಳಿಗೂ ಗಂಟೆಗಟ್ಟಲೆ ವಾಗ್ವಾದ, ಸದಸ್ಯರ ನಡುವಿನ ಮಾತಿನ ಚಕಮಕಿ ಹಾಗೂ ಮಧ್ಯರಾತ್ರಿಯವರೆಗೂ ನಡೆದರೂ ತೀರ್ಮಾನವಾಗದೆ ಸಭೆ ಮುಂದೂಡಿಕೆಯಾಗುತ್ತಿದ್ದ ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಈ ಬಾರಿ ಅಚ್ಚರಿಯ ಬದಲಾವಣೆ ಕಂಡುಬ0ದಿದೆ. ಶಾಸಕ ಸಿ.ಬಿ.ಸುರೇಶ್ಬಾಬು ಅವರ ಸಮ್ಮುಖದಲ್ಲಿ ಹಾಗೂ ಅಧ್ಯಕ್ಷೆ ಪ್ರೀತಿ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯು ಕೇವಲ ೬೦ ರಿಂದ ೭೦ ನಿಮಿಷಗಳಲ್ಲಿ ಮುಕ್ತಾಯಗೊಂಡು ಹೊಸ ದಾಖಲೆ ಬರೆದಿದೆ. ಅಜೆಂಡಾದಲ್ಲಿದ್ದ ೬೦ ವಿಷಯಗಳಿಗೂ ಸರ್ವಾನುಮತದ ಅಂಗೀಕಾರ: ಸಾಮಾನ್ಯವಾಗಿ ಗಂಭೀರ ಚರ್ಚೆ ಬಯಸುವ ಸುಮಾರು ೩೦ ಕ್ಕೂ ಹೆಚ್ಚು ವಿಷಯಗಳು ಅಜೆಂಡಾದಲ್ಲಿದ್ದರೂ, ಈ ಬಾರಿ ಯಾವುದೇ ಪ್ರತಿರೋಧವಿಲ್ಲದೆ ಎಲ್ಲವೂ ಸುಗಮವಾಗಿ ‘ಪಾಸ್’ ಆಗಿವೆ. ಇದ್ದು ಅಚ್ಚರಿಗೆ ಕಾರಣವಾಗಿದೆ. ಹಲವು ವರ್ಷಗಳಿಂದ ಬಾಕಿ ಇದ್ದ ಕಾಮಗಾರಿ ಬಿಲ್ ಪಾವತಿ, ಕಂದಾಯ ಮತ್ತು ನೀರಿನ ಸುಂಕ ಹೆಚ್ಚಳ, ಬಸ್ ನಿಲ್ದಾಣ ಆ ಧುನೀಕರಣ ಹಾಗೂ ಶಿಶುವಿಹಾರದ ಬಳಿ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಸಭೆ ಹಸಿರು ನಿಶಾನೆ ತೋರಿದೆ. ಸರ್ಕಾರಿ ಜಾಗದಲ್ಲಿ ಮನೆ…
ಹುಳಿಯಾರು: ಕಾರೊಂದು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಳಿಯಾರು ಹೋಬಳಿಯ ಕೋರಗೆರೆ ಬಳಿ ನಡೆದಿದೆ. ಘಟನೆಯ ವಿವರ: ತಿಮ್ಮನಹಳ್ಳಿ ಗ್ರಾಮದ ರಾಮಯ್ಯ (55) ಮೃತಪಟ್ಟ ದುರ್ದೈವಿ. ಇವರು ಬೆಳವಾಡಿ, ಹಾಗಲವಾಡಿ, ಬಿಳೆಕಲ್ಲು ಹಟ್ಟಿ ಗ್ರಾಮದ ಇತರ ನಾಲ್ವರೊಂದಿಗೆ ಅರಸೀಕೆರೆ ತಾಲ್ಲೂಕಿನ ಅಮ್ಮನಹಟ್ಟಿ ಮಾಳಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಮುಗಿಸಿ ಮರಳು ತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೋರಗೆರೆ ಸಮೀಪದ ಸೇತುವೆಗೆ ಕಾರು ವೇಗವಾಗಿ ಡಿಕ್ಕಿ ಹೊಡೆದ ರಭಸಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಸಾರ್ವಜನಿಕರ ಸಾಹಸ: ಕಾರಿನಲ್ಲಿ ಬೆಂಕಿ ಆವರಿಸುತ್ತಿದ್ದಂತೆ ಐವರೂ ಒಳಗಡೆ ಸಿಲುಕಿ ಕಿರುಚಾಡುತ್ತಿದ್ದರು. ಇದನ್ನು ಗಮನಿಸಿದ ದಾರಿಹೋಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಪ್ರಾಣದ ಹಂಗು ತೊರೆದು ಕಾರಿನ ಬಾಗಿಲುಗಳನ್ನು ಮುರಿದು ನಾಲ್ವರನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ತೀವ್ರವಾಗಿ ಬೆಂಕಿಗಾಹುತಿಯಾಗಿದ್ದ ರಾಮಯ್ಯ ಅವರು ಕಾರಿನೊಳಗೆ ಕೊನೆಯುಸಿರೆಳೆದರು. ಚಿಕಿತ್ಸೆ ಮತ್ತು ತನಿಖೆ: ಗಂಭೀರವಾಗಿ ಗಾಯಗೊಂಡಿರುವ…











