ತುರುವೇಕೆರೆ: ತಾಲೂಕಿನ ತಂಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗವಿಪುರ (ಕರೆಕಲ್ ಬಾರೆ) ಗ್ರಾಮದ ಜನರು ಕುಡಿಯುವ ನೀರಿಗಾಗಿ ಆಗ್ರಹಿಸಿ ಪಂಚಾಯಿತಿ ಮುಂಬಾಗ ಖಾಲಿ ಕೊಡ ಹಿಡಿದು ಪ್ರತಿಭಟನೆ ನೆಡೆಸಿದರು. ಗ್ರಾಮ ಮುಖಂಡ ಓಂಕಾರ ಚಾರ್ ಮಾತನಾಡಿ ನಮ್ಮ ಗ್ರಾಮದಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಮನೆಗಳಿದ್ದು ಸುಮಾರು ೧೫೦ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದೇವೆ. ನಮಗೆ ಸುಮಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಪ್ರತಿದಿನ ಜನರು ನೀರಿಗಾಗಿ ಪರಿಪಾಟಲು ಪಢುವಂತಾಗಿದೆ. ದೂರದ ರೈತರ ತೋಟಗಳ ಬೋರ್ ವೆಲ್ ಗಳಲ್ಲಿ ಬಿಟ್ಟ ಸಂದರ್ಭದಲ್ಲಿ ನೀರಿಗಾಗಿ ಕಾಯುವಂತಹ ಪರಿಸ್ಥಿತಿ ತಲೆದೋರಿದೆ. ನಮ್ಮ ಗ್ರಾಮದಲ್ಲಿನ ಬಹುತೇಖ ಜನರು ಕೂಲಿ ಕಾರ್ಮಿಕರಾಗಿದ್ದು ಪ್ರತಿದಿನ ಕೆಲಸಕ್ಕೆ ತೆರಳವುದರಿಂದ ನೀರು ಹಿಡಿಯಲು ರಾತ್ರಿ ಸಮಯದಲ್ಲಿ ತೋಟಕ್ಕೆ ತೆರಳಬೇಕಾಗಿದೆ. ಈ ಮೊದಲು ಬಹುಗ್ರಾಮ ಕುಡಿಯುವ ಯೋಜನೆಯ ಟ್ಯಾಂಕರ್ ನಿಂದ ನಮ್ಮ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲಾಗಿತ್ತು ಆದರೆ ಅದು ಬಂದ್ ಹಾಗಿದೆ. ಗ್ರಾಮದ ಎರಡು ಸಿಸ್ಟನ್ ಗಳಿಗೆ ಪಂಚಾಯಿತಿ ಬೋರ್ ವೆಲ್ ಮೂಲಕ…
Author: News Desk Benkiyabale
ತುಮಕೂರು: ನಗರದ ಬಿ.ಜಿ.ಎಸ್. ವೃತ್ತ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಭೀಮ್ ಆರ್ಮಿ ಸಂಘಟನೆಯ ವತಿಯಿಂದ ವಿವಿಧ ಬೇಡಿಕೆಗಳು ಹಾಗೂ ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಜಾಥಾ ನಡೆಸಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಭೀಮ್ ಆರ್ಮಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅಯ್ಯನಪಾಳ್ಯ ಶ್ರೀನಿವಾಸ್ ರವರು ಮಾತನಾಡಿ ತುಮಕೂರು ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರು ಹಾಗೂ ಆರೆ ಸರ್ಕಾರಿ, ಹೊರ ಗುತ್ತಿಗೆ ಮತ್ತು ಖಾಸಗಿ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲಾ ಕಾರ್ಮಿಕ ಹಾಗೂ ಅಧಿಕಾರಿ ವರ್ಗದ ಹಾಗೂ ಸಿಬ್ಬಂದಿಗಳ ಮೇಲೆ ಜಾತಿ ಆಧಾರಿತ ದೌರ್ಜನ್ಯಗಳ ನಡೆಯುತ್ತಿದ್ದು ಈ ಕುರಿತು ಅತೀ ಶೀಘ್ರವಾಗಿ ಎಚ್ಚೆತ್ತುಕೊಳ್ಳಬೇಕಿದೆ ಎಂದರು. ಮುಂದುವರೆದು ಕರ್ನಾಟಕ ಪಬ್ಲಿಕ್ ಎಂಪ್ರೆಸ್ ಶಾಲೆ, ತುಮಕೂರು ಇಲ್ಲಿ ಉಪಪ್ರಾಂಶುಪಾಲರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಶ್ರೀಮತಿ ಮಂಜುಳ ಎನ್. ಇವರನ್ನು ಸೇವೆಯಿಂದ ಅಮಾನತು ಮಾಡಬೇಕಾಗಿದೆ ಏಕೆಂದರೆ ಈಕೆ ಇದೆ…
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಹೊರ ರಾಜ್ಯ ಅಧ್ಯಯನ ಪ್ರವಾಸಕ್ಕೆ ಶಾಸಕ ಹಾಗೂ ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಚಾಲನೆ ನೀಡಿದರು. ನಗರದ ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಕೆ.ಎಸ್.ಆರ್.ಟಿ.ಸಿ ತುಮಕೂರು ವಿಭಾಗದ ೫೦ ಜನ ವಿವಿಧ ವೃಂದದ ನೌಕರರು ಮಹಾರಾಷ್ಟç, ಪಂಜಾಬ್ ಸೇರಿದಂತೆ ೧೪ ರಾಜ್ಯಗಳ ೧೫ ದಿನಗಳ ಆಧ್ಯಯನ ಪ್ರವಾಸ ಕೈಗೊಂಡಿದ್ದು,ತುಮಕೂರು ನಗರ ಶಾಸಕ ಜೋತಿ ಗಣೇಶ್,ಜಿ.ಪಂ.ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ನಿಯಂತ್ರಣಾಧಿ ಕಾರಿ ಚಂದ್ರಶೇಖರ್.ಎಸ್.ಅವರುಗಳೊAದಿಗೆ ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹಸಿರು ನಿಶಾನೆ ತೋರಿಸಿದರು. ಈ ವೇಳೆ ಮಾತನಾಡಿದ ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್,ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತುಮಕೂರು ವಿಭಾ ಗದ ನೌಕರರು ಇಂದು ಅಧ್ಯಯನ ಪ್ರವಾಸಕ್ಕಾಗಿ ಪಂಜಾಬ್, ದೆಹಲಿ ಸೇರಿದಂತೆ ೧೪ ರಾಜ್ಯಗಳಿಗೆ ಹೋಗುತ್ತಿದ್ದು,ಅಲ್ಲಿನ ಸಾರಿಗೆ ವ್ಯವಸ್ಥೆಯ ನಿರ್ವಹಣೆ,ಮೂಲಭೂತ ಸೌಕರ್ಯ,ರೂಟ್ಗಳ ನಿರ್ವಹಣೆ,ನೌಕರರಿಗೆ ದೊರೆಯುತ್ತಿರುವ ಸೌಲಭ್ಯ, ಪ್ರಯಾಣಿಕರ ರಕ್ಷಣೆ ಮತ್ತು ಕಾರ್ಯಾಚರಣೆಗೆ ವಿಧಿ,ವಿಧಾನಗಳನ್ನು ತಿಳಿಯಲು ಹಾಗು ಹತ್ತಿರದ ಪ್ರವಾಸಿ ತಾಣಗಳಿಗೆ ಭೇಟಿ…
ತುಮಕೂರು: ಕಲ್ಪತರುನಾಡಿನಲ್ಲಿ ವೈಕುಂಠ ಏಕಾದಶಿಯನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗಿದ್ದು, ವೆಂಕ ಟೇಶ್ವರ ದೇವಾಲಯಗಳಲ್ಲಿ ಗೋವಿಂದ ನಾಮಸ್ಮರಣೆ ಮೊಳಗಿದವು. ನಗರದ ವಿವಿಧ ಬಡಾವಣೆಗಳಲ್ಲಿರುವ ಹಾಗೂ ಜಿಲ್ಲೆಯ ವಿವಿಧೆಡೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಬಟವಾಡಿಯ ವೆಂಕಟೇಶ್ವರ ಸ್ವಾಮಿ ದೇವಾ ಲಯ, ಸಿರಾಗೇಟ್ ಸಮೀಪವಿರುವ ಶ್ರೀ ವೆಂಕಟೇಶ್ವಸ್ವಾಮಿ ದೇವಾಲಯ, ಜಯನಗರ ರಿಂಗ್ ರಸ್ತೆಯ ತಿರುಮಲ ನಗರ ದಕ್ಷಿಣದ ಕೆ.ಹೆಚ್.ಬಿ. ಕಾಲೋನಿಯಲ್ಲಿರುವ ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾ ಲಯ, ಸರಸ್ವತಿ ಪುರಂನ ವೆಂಕಟೇಶ್ವರ ಸ್ವಾಮಿ ದೇಗುಲ, ಜಯನಗರ ಪಶ್ಚಿಮದ ಪದ್ಮಾವತಿ ವೆಂಕಟೇಶ್ವರಸ್ವಾಮಿ ದೇವಾಲಯ, ಟಿಜಿಎಂಸಿ ಬ್ಯಾಂಕ್ ಮುಂಭಾಗದ ಮಹಾಲಕ್ಷಿ÷್ಮ ದೇವಾಲಯ, ಸೋಮೇಶ್ವರ ಪುರಂನ ಗೋಪಾಲಕೃಷ್ಣ ದೇವಾಲಯ, ಶಾಂತಿನಗರದ ಲಕ್ಷಿ÷್ಮÃವೆಂಕಟೇಶ್ವರಸ್ವಾಮಿ ದೇವಾಲಯ, ತುರುವೇಕೆರೆ ತಾಲ್ಲೂಕಿನ ಮುದುಗೆರೆ ಸಮೀಪದ ಶ್ರೀ ಕೋಡಿ ರಂಗನಾಥಸ್ವಾಮಿ ದೇವಾಲಯ, ಸಂಪಿಗೆಯ ವೆಂಕಟೇಶ್ವರ ಸ್ವಾಮಿ ದೇವಾಲಯ ಹಾಗೂ ಗುಬ್ಬಿಯ ಬೇಟೆರಾಯಸ್ವಾಮಿ ದೇವಾಲಯ, ತಿರುಮಲ…
ತುಮಕೂರು: ಜಿಲ್ಲಾಡಳಿತ ಮತ್ತು ಕುಣಿಗಲ್ ತಾಲ್ಲೂಕು ಆಡಳಿತದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ಸೋಮವಾರ ಕುಣಿಗಲ್ ತಾಲ್ಲೂಕು, ಕೊತ್ತಗೆರೆ ಹೋಬಳಿ, ಭಕ್ತರಹಳ್ಳಿ ಗ್ರಾಮದಲ್ಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಲ್. ರಾಮಣ್ಣ ರವರ ಅಧ್ಯಕ್ಷತೆಯಲ್ಲಿ ಹಾಗೂ ಭಕ್ತರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲೀಲಾವತಿ ಹೊನ್ನೇಗೌಡ ರವರ ಉಪಸ್ಥಿತಿಯಲ್ಲಿ ಆಹಾರ ಅದಾಲತ್ ಕಾರ್ಯಕ್ರಮವನ್ನು ನಡೆಸಲಾಯಿತು. ಜಂಟಿನಿರ್ದೇಶಕರು, ಆಹಾರ ಇಲಾಖೆ ಮತ್ತು ಮಾನ್ಯ ತಹಶೀಲ್ದಾರ್ ಕುಣಿಗಲ್ ತಾಲ್ಲೂಕುರವರುಗಳ ಅನುಪಸ್ಥಿತಿಯಲ್ಲಿ ಸದರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆಹಾರ ಶಿರಸ್ತೇದಾರರಾದ ಶ್ರೀಹರ್ಷ ಬಿ.ಎಸ್. ರವರು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಜಿಲ್ಲೆಯ ಪ್ರತಿ ತಾಲ್ಲೂಕಿನ ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಡಿತರ ಚೀಟಿದಾರರು ಜಿಲ್ಲಾ/ ತಾಲ್ಲೂಕು ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಅನರ್ಹರು ಪಿಹೆಚ್ಹೆಚ್(ಬಿಪಿಎಲ್) ಪಡಿತರ ಚೀಟಿ ಹೊಂದಿದ್ದಲ್ಲಿ ತಾವಾಗಿಯೇ ಎನ್ಪಿಹೆಚ್ಹೆಚ್ (ಎಪಿಎಲ್) ಪಡಿತರ…
ತುರುವೇಕೆರೆ: ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆಗಳ ಕಾಟ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೈಗೊಂಡ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎರಡನೇ ಚಿರತೆಯನ್ನು ಸೆರೆಹಿಡಿಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸೆರೆಸಿಕ್ಕ ಚಿರತೆ ಸುಮಾರು ಐದು ವರ್ಷದ ಹೆಣ್ಣು ಚಿರತೆ ಆಗಿದ್ದು, ಇದರಿಂದಾಗಿ ಕೇವಲ ಎರಡು ದಿನಗಳಲ್ಲಿ ಎರಡು ಚಿರತೆಗಳು ಸೆರೆಸಿಕ್ಕಂ ತಾಗಿದೆ. ಈಗಾಗಲೇ ಸೆರೆಹಿಡಿದಿರುವ ಎರಡೂ ಚಿರತೆ ಗಳನ್ನು ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಸುರಕ್ಷಿತವಾಗಿ ಕಾಡು ಪ್ರದೇಶಕ್ಕೆ ಬಿಡ ಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ದನ ಮೇಯಿಸಲು ತೆರಳಿದ್ದ ಸುಜಾತ ಎಂಬ ಮಹಿಳೆಯ ಮೇಲೆ ಎರಗಿದ ಚಿರತೆ ಕೊಂದು ಹಾಕಿತ್ತು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಿದೆ.
ಕೊರಟಗೆರೆ: ತುಂಬು ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿ ತಹಶೀಲ್ದಾರ್ ಮುಖೇನಾ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹುಬ್ಬಳ್ಳಿ ತಾಲೂಕಿನ ವೀರಾಪುರ ಗ್ರಾಮದ ಯುವತಿ ಅಂತ ರ್ಜಾತಿ ವಿವಾಹ ಆಗಿದ್ದಕ್ಕೆ ತಂದೆಯೇ ಮಗಳು ೭ ತಿಂಗಳು ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಭೀಕರವಾಗಿ ಕೊಲೆ ಮಾಡಿರುವುದನ್ನು ದಲಿತ ಪರ ಸಂಘಟನೆಗಳ ಒಕ್ಕೂಟ ತೀವ್ರ ವಾಗಿ ಖಂಡಿಸುತ್ತದೆ. ಬೀಕರವಾಗಿ ಹತ್ಯೆ ಮಾಡಿದ ತಂದೆಗೆ ವಿಶೇಷ ಕಾನೂನು ರಚನೆ ಮಾಡಿ ಮುಲಕ ಗಲ್ಲು ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಮಾದಿಗ ಸಮುದಾಯದ ಯುವಕ ಅಂತರ್ಜಾತಿ ವಿವಾಹವಾಗಿ ಒಂದೂವರೆ ವರ್ಷ ಕಳೆದಿದೆ. ಮಗಳು ೭ ತಿಂಗಳ ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ವಿಕೃತವಾಗಿ ಕೊಲೆ ಮಾಡಿದ ಪಾಪಿ ತಂದೆಗೆ ಸರ್ಕಾರ ವಿಶೇಷ ಕಾನೂನು ರಚಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ…
ತುರುವೇಕೆರೆ: ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿ ತಾಲೂಕಿನಲ್ಲಿನ ಚಿರತೆ ಹಾವಳಿಯನ್ನು ತಡೆಗಟ್ಟಬೇಕು ಎಂದು ಮಾಜಿ ಶಾಸಕ ಮಸಾಲಜಯರಾಮ್ ತಿಳಿಸಿದರು. ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಲಿಯಾಗಿದ್ದ ರೈತ ಮಹಿಳೆ ಸುಜಾತ ಕುಟುಂಬಕ್ಕೆ ೫೦ ಸಾವಿರ ನೆರವು ನೀಡಿ ಸಾಂತ್ವನ ಹೇಳಿ ಮಾತನಾಡಿದ ಅವರು ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ರೈತರು ತಮ್ಮ ತೋಟದ ಕೃಷಿ ಕೆಲಸಗಳು ಮಾಡಲು, ತಮ್ಮ ದನ ಹಸು ಮೇಹಿಸಲು ತೋಟ ಹೊಲಗಳಿಗೆ ತೆರಳಬೇಕಾಗಿತ್ತದೆ. ಅರಣ್ಯ ಇಲಾಖೆ ಚಿರತೆ ಹಿಡಿಯಲು ತುರ್ತು ಕ್ರಮ ಕೈಗೊಳ್ಳಬೇಕು. ಮಹಿಳೆ ಮೇಲೆ ದಾಳಿ ಮಾಡಿದ ಸ್ಥಳದ ಅಸು ಪಾಸಿನಲ್ಲಿ ಅರಣ್ಯ ಇಲಾಖೆ ೨ ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಚಿರತೆ ದಾಳಿಯಿಂದ ಸಾವು ಹಾಗುವಂತಹ ದುರ್ಘಟನೆಗಳು ಮತ್ತೆ ತಾಲೂಕಿನಲ್ಲಿ ಮರುಕಳಿಸಬಾರದು ಎಂದು ಎಚ್ಚರಿಸಿ ಹೆಚ್ಚು ಚಿರತೆ ಹಾವಳಿ ಇರುವ ಕಡೆಗಳಲ್ಲಿ ಬೋನ್ ಗಳನ್ನು ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಕೆಂಪೇಗೌಡ, ಜಯರಾಂ, ರವೀಗೌಡ, ರತೀಶ್, ತಮ್ಮಣ್ಣಗೌಡ, ಮಂಜುನಾಥ್, ಶ್ರೀಧರ್, ವಿ.ಬಿ.ಸುರೇಶ್,…
ಹುಳಿಯಾರು: ವಿದ್ಯಾರ್ಥಿ ಸಮುದಾಯವನ್ನು ದಾರಿ ತಪ್ಪಿಸುತ್ತಿರುವ ಮಾದಕ ದ್ರವ್ಯಗಳು ಅವರ ವ್ಯಾಸಂಗಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಹಾಗೆಯೇ ದೈಹಿಕ ಮತ್ತು ಮಾನಸಿಕವಾಗಿ ಮನುಷ್ಯನ ಜೀವನವನ್ನು ಜರ್ಜರಿತವನ್ನಾಗಿ ಮಾದಕ ದ್ರವ್ಯಗಳು ಮಾಡುತ್ತಿವೆ. ಮಾದಕ ದ್ರವ್ಯಗಳನ್ನು ಮಾರಾಟ ಮಾಡುವುದು ಮತ್ತು ಸೇವಿಸುವುದು ಅಪರಾಧವಾಗಿದ್ದು, ಈ ಸಂಬ0ಧ ಸಾಮಾಜಿಕ ಜಾಲತಾಣಗಳ ಬಳಕೆಯೂ ಕ್ರಿಮಿನಲ್ ಅಪರಾಧವಾಗಿದೆ ಎಂದು ಚಿಕ್ಕನಾಯಕನಹಳ್ಳಿ ವೃತ್ತ ನಿರೀಕ್ಷಕರಾದ ಜನಾರ್ದನ್ ಎಚ್ಚರಿಸಿದರು. ಹುಳಿಯಾರು-ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ, ಚಿಕ್ಕನಾಯಕನಹಳ್ಳಿ ಹಾಗೂ ಹುಳಿಯಾರು ಪೊಲೀಸ್ ಠಾಣೆಗಳ ಸಂಯುಕ್ತಾಶ್ರಯದಲ್ಲಿ ‘ಅಪರಾಧ ತಡೆ ಮಾಸಾಚರಣೆ’ ಹಾಗೂ ‘ಮಾದಕ ವ್ಯಸನ ಮುಕ್ತ ಅಭಿಯಾನ’ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಾನೂನಿನ ಚೌಕಟ್ಟುಗಳು, ಸಂಚಾರಿ ನಿಯಮಗಳು ಹಾಗೂ ಸೈಬರ್ ಅಪರಾಧಗಳ ಬಗ್ಗೆ ವಿಸ್ತöತವಾಗಿ ಮಾಹಿತಿ ನೀಡಿದರು. ಹುಳಿಯಾರು ಪೊಲೀಸ್ ಉಪನಿರೀಕ್ಷಕರಾದ ಚಿತ್ತರಂಜನ್ ಮಾತನಾಡಿ, ಮೋಜು ಮಸ್ತಿ ಮತ್ತು ಕ್ಷಣಿಕ ಸುಖ ಅನುಭವಿಸಲು ಇಂದು ಯುವ ಜನಾಂಗ ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ.…
ಮಧುಗಿರಿ: ಸಾಹಿತ್ಯಕ್ಕೆ ಮನುಷ್ಯನ ಗುಣವನ್ನು ಬದಲಾಯಿಸುವ ಶಕ್ತಿ ಇದೆ ಎಂದು ಖ್ಯಾತ ವಕೀಲರು ಹಾಗೂ ಸಾಮಾಜಿಕ ಚಿಂತಕರು ಆದ ಪ್ರೊಫೆಸರ್ ರವಿವರ್ಮ ಕುಮಾರ್ ತಿಳಿಸಿದ್ದಾರೆ ಪಟ್ಟಣದ ಕನ್ನಡ ಭವನ ನದಲ್ಲಿ ನಡೆದ ೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿ ಮಾತನಾಡುತ್ತಾ ವಿದ್ಯಾರ್ಥಿ ದೆಸೆಯಲ್ಲಿ ಕಟ್ಟ ಆರ್ ಎಸ್ ಎಸ್ ವಾಧಿಯಾಗಿದ್ದ ನನ್ನನ್ನು ಕುವೆಂಪುರವರ “ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ” ಎಂಬ ಒಂದು ಪುಸ್ತಕ ಆರ್ ಎಸ್ ಎಸ್ ನಿಂದ ದೂರ ಮಾಡಿತು ಎಂದವರು ಇದು ಸಾಹಿತ್ಯಕ್ಕೆ ಇರುವ ಶಕ್ತಿ ಎಂದು ತಿಳಿಸಿದರು. ನಮ್ಮ ತಂದೆ ಕೆಂಗರಾಮಯ್ಯ ನವರು ಮಿಡಿಗೇಶಿಯಲ್ಲಿ ಶಿಕ್ಷಕರಾಗಿದ್ದು ಈ ಸಂದರ್ಭದಲ್ಲಿ ಬಾಲ್ಯದಲ್ಲಿ ಮಧುಗಿರಿಯಲ್ಲಿ ಶಿಕ್ಷಣ ಪಡೆದಿದ್ದನ್ನು ನೆನಪಿಸಿಕೊಂಡ ಅವರು ೫೦ ವರ್ಷಗಳಿಂದ ಸಂಪೂರ್ಣವಾಗಿ ನಾಡಿನ ಹೆಸರಾಂತ ಕುವೆಂಪು ಪೂರ್ಣಚಂದ್ರ ತೇಜಸ್ವಿ ಲಂಕೇಶ್ ಕಾರಂತ ಮುಂತಾ ದವರ ಕೃತಿಗಳು ನನಗೆ ಪ್ರೇರಣೆಯಾಗಿವೆ ಇದೇ ಅಲ್ಲದೆ ತೇಜಸ್ವಿ ರವರ ಕಾರ್ವಾಲೊ ಕಾದಂಬರಿಯ ಬರವಣಿಗೆಯ ಸಂದರ್ಭದಲ್ಲಿ ಪ್ರತಿಪುಟಕ್ಕೂ ಸಾಕ್ಷಿಯಾಗಿದ್ದು ನನ್ನ…











