Author: News Desk Benkiyabale

ತುಮಕೂರು: ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿಕೆ ಮುಖ್ಯವೇ ಹೊರತು ಪ್ರಶಸ್ತಿ ಮುಖ್ಯವಲ್ಲ ಕ್ರೀಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಾಲೆಯನ್ನು ಪ್ರತಿನಿಧಿಸುವ ಹಾಗೆ ನೀವು ಆಯ್ಕೆಯಾದಾಗಲೇ ವಿಜೇತರಾಗಿದ್ದೀರಿ ವೇದಿಕೆ ನಿಮಗೆ ಸಿಕ್ಕ ಅವಕಾಶವೆಂದು ತಿಳಿಯಿರಿ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ರವರು ಅಭಿಪ್ರಾಯಪಟ್ಟರು ಶಿರ ತಾಲೂಕು ಬುಕ್ಕಾಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕುರಿತು ಅವರು ಮಾತನಾಡಿದರು ಶಿಕ್ಷಣವೆಂದರೆ ಕೇವಲ ಅಂಕಗಳಿಗೆ ಸೀಮಿತವಾಗಿ ಯಾಂಕಗಳು ಪಡೆಯುವುದು ಮಾತ್ರವಲ್ಲ ಶಿಕ್ಷಣವೆಂದರೆ ಮಗುವಿನಲ್ಲಿರುವ ಸೂಕ್ತ ಪ್ರತಿಭೆಗಳನ್ನು ಹೊರ ಚೆಲ್ಲುವುದೇ ಆಗಿದೆ ಮಗುವನ್ನು ಯಾವ ವಿಷಯದಲ್ಲಿ ಅತಿ ಪ್ರಾಮುಖ್ಯತೆ ಪಡೆದಿದೆ ಯಾವ ಕಲೆ ಮೈಗೂಡಿಸಿಕೊಂಡಿದೆ ಯಾವ ಕಲೆ ಸಂಸ್ಕೃತಿ ನೃತ್ಯ ನಾಟಕ ಆ ಮಗುವಿನಲ್ಲಿ ಆಸಕ್ತಿ ಹೊಂದಿದೆ ಎಂಬುದನ್ನು ಅರಿತು ಆ ಮಗುವಿಗೆ ಪ್ರೋತ್ಸಾಹ ನೀಡಿದಾಗ ಆ ಮಗು ಹೋಬಳಿ ತಾಲೂಕು ಜಿಲ್ಲೆ ರಾಜ್ಯ ರಾಷ್ಟ್ರಮಟ್ಟದಲ್ಲಿ ಕೀರ್ತಿ ಗಳಿಸುತ್ತದೆ ಮಗುವಿಗೆ ಸೂಕ್ತ ವೇದಿಕೆ ಅವಶ್ಯಕತೆ ಇದೆ ಇದನ್ನು ಅರಿತ ಸರ್ಕಾರ ಮಗುವಿನ ಸರ್ವತೋಮುಖ…

Read More

ತುಮಕೂರು: ಐಕ್ಯ ಫೌಂಡೇಶನ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆವತಿಯಿ0ದ ಈ ತಿಂಗಳ ೨೨ ಮತ್ತು ೨೩ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕಲ್ಪತರು ಉತ್ಸವ ಏರ್ಪಡಿಸಲಾಗಿದೆ. ಈ ವೇಳೆ ಜಿಲ್ಲೆಯ ೫೮ ಮಂದಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಐಕ್ಯ ಫೌಂಡೇಶನ್ ಅಧ್ಯಕ್ಷೆ ರೇಖಾ ಶಿವಕುಮಾರ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್ ತಿಳಿಸಿದರು. ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪನ್ನಗಳ ಮಾರಾಟ ಮಳಿಗೆಗ ಳನ್ನು ಉತ್ಸವದಲ್ಲಿ ತೆರೆಯಲಾಗುವುದು. ಈ ಮೂಲಕ ರೈತರ ಉತ್ಪನ್ನಗಳನ್ನು ಗ್ರಾಹಕರು ರೈತರಿಂದ ನೇರ ಖರೀದಿ ಮಾಡ ಬಹುದು ಎಂದರು. ೨೨ರAದು ಸಂಜೆ ೪.೩೦ಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಳಿಗೆಗಳ ಉದ್ಘಾಟನೆ ನೆರವೇರಿಸಿ ನಂತರ ನಡೆಯುವ ಸಮಾರಂ ಭದಲ್ಲಿ ಪ್ರಗತಿಪರ ರೈತನ್ನು ಸನ್ಮಾನಿಸಿ ಗೌರವಿಸುವರು. ರೈತಪರ ಹೋರಾಟಗಾರ ಗಂಗಾಧರ ಕಾಸರಘಟ್ಟ, ಚಲನಚಿತ್ರ ನಟ ಹನುಮಂತೇಗೌಡ, ಕಿರುತೆರೆ ನಟರಾದ ಶಿಲ್ಪ ಶೈಲೇಶ್. ಅರ್ಜುನ್ ಯೋಗೇಶ್‌ರಾಜ್ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.…

Read More

ತುಮಕೂರು: ಜಾಗತೀಕರಣದ ಹೆಸರಿನಲ್ಲಿ ಭೂಮಿಯನ್ನು ವ್ಯಾಪಾರ ವಸ್ತುವನ್ನಾಗಿ ಮಾಡಿದರೆ ಮಾನವನ ಅಂತ್ಯ ಕಟ್ಟಿಟ್ಟ ಬುತ್ತಿ ಎಂದು ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ರಾಜೇಂದ್ರ ಚೆನ್ನಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಪ್ರೊ. ಎಂ. ಡಿ.ನಂಜು0ಡಸ್ವಾಮಿ ಅಧ್ಯಯನ ಪೀಠ ಹಾಗೂ ಸ್ನಾತಕೋತ್ತರ ಅರ್ಥಶಾಸ್ತç ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಜಾಗತೀಕರಣ- ಪ್ರತಿರೋಧ ಮತ್ತು ಪರ್ಯಾಯ: ನಂಜು0ಡಸ್ವಾಮಿಯವರ ಚಿಂತನೆ’ ಕುರಿತು ಮಾತನಾಡಿದರು. ಜಾಗತೀಕರಣವು ೯೦ರ ದಶಕದಲ್ಲಿ ಅನಿವಾರ್ಯವಾಯಿತು. ಆರ್ಥಿಕವಾಗಿ ದೇಶವು ಪ್ರಬಲಗೊಳ್ಳಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವಸಾಹತುಶಾಹಿಯನ್ನು ಕೊನೆಗೊಳಿಸಿ, ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆಯನ್ನು ಕಾಣಬೇಕೆಂಬುದು ಪ್ರೊ. ಎಂ. ಡಿ. ನಂಜು0ಡಸ್ವಾಮಿಯವರ ಚಿಂತನೆಯಾಗಿತ್ತು. ಅವರು ರೈತ ಸಂಘದ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿ ಅವರ ಧ್ವನಿಯಾಗಿದ್ದರು ಎಂದರು. ಯಾವುದೇ ನಿಬಂಧನೆಗಳಿಲ್ಲದೆ ನಮ್ಮ ವಸ್ತುಗಳ ವ್ಯಾಪಾರ ಮಾಡುವುದಕ್ಕೆ ಮುಕ್ತ ಮಾರುಕಟ್ಟೆ ಸಹಾಯವಾಗುತ್ತದೆ. ಸುಂಕರಹಿತ ಮಾರುಕಟ್ಟೆ ಅರ್ಥಶಾಸ್ತçದ ಬೆಳವಣಿಗೆಗೆ ಮುಖ್ಯವಾದದ್ದು. ಅರ್ಥವ್ಯವಸ್ಥೆಯು ರಾಷ್ಟç್ರದ ಗಡಿಗಳನ್ನು ದಾಟಬೇಕು. ಇದರಿಂದ ಹೊಸ…

Read More

ಹುಳಿಯಾರು: ವಿದ್ಯಾರ್ಥಿಗಳು ಓದುವ ವಿಷಯದಲ್ಲಿ ಹಾಗೂ ಗುರಿ ಸಾಧಿಸುವಲ್ಲಿ ಸ್ವಾರ್ಥಿಗಳಾಗಬೇಕು, ಸದಾ ಕ್ರಿಯಾಶೀಲರಾಗಿರಬೇಕು, ಸ್ವಾವಲಂಭಿಗಳಾಗಿರಬೇಕು. ನಿಂತ ನೀರಿನಂತಾಗದೆ ಹರಿಯುವ ನೀರಿನಂತೆ ಪರಿಶುದ್ಧವಾದ ಮನಸ್ಸಿನಿಂದ ಇರಬೇಕು. ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವ ಬೆಳಸಿಕೊಳ್ಳಬೇಕು. ನಾನು ಎನ್ನುವ ಸ್ವಾರ್ಥ ಬಿಟ್ಟು ನಾವು ಎನ್ನುವ ನಿಸ್ವಾರ್ಥತೆಯನ್ನು ಬೆಳಸಿಕೊಂಡಾಗ ಸಮಾಜದಲ್ಲಿ ಅಜಾತಶತ್ರುವಾಗಿ ಬೆಳೆಯಬಹುದು ಎಂದು ಅಬ್ಯಾಕಸ್ ಶಿಕ್ಷಕಿ  ಮನೋಜ್ ಅವರು ತಿಳಿಸಿದರು. ಹುಳಿಯಾರಿನಲ್ಲಿ ತಾವು ನಡೆಸುತ್ತಿರುವ ಅಬ್ಯಾಕಸ್‌ನಿಂದ ಬಂದ ಲಾಭಾಂಶದಲ್ಲಿ ಹುಳಿಯಾರಿನ ಕೇಶವಾ ವಿದ್ಯಾ ಮಂದಿರದ ಎಲ್‌ಕೆಜಿಯಿಂದ ೭ ನೇ ತರಗತಿಯ ಅಷ್ಟೂ ವಿದ್ಯಾರ್ಥಿಗಳಿಗೆ ಹಾಟ್ ಅಂಡ್ ಕೋಲ್ಡ್ ವಾಟರ್ ಬಾಟಲ್‌ಗಳನ್ನು ಉಚಿತವಾಗಿ ವಿತರಿಸಿ ಅವರು ಮಾತನಾಡಿ ನಾವು ಹುಟ್ಟಿದಾಗ ಎನನ್ನೂ ತೆಗೆದುಕೊಂಡು ಬರಲಿಲ್ಲ, ಸತ್ತಾಗಲೂ ಎನ್ನನ್ನೂ ತೆಗೆದುಕೊಂಡು ಹೋಗುವುದಿಲ್ಲ. ಹಾಗಾಗಿ ದುಡಿದ ಅಷ್ಟೂ ಹಣವನ್ನು ಕೂಡಿಡದೆ ಸ್ವಲ್ಪ ಹಣವನ್ನು ಸೇವಾ ಕಾರ್ಯಗಳಿಗೆ ಬಳಸಬೇಕೆಂದು ನಿರ್ಧರಿಸಿ ವಿದ್ಯಾರ್ಥಿಗಳಿಗೆ ವಾಟರ್ ಬಾಟಲ್ ನೀಡುತ್ತಿರುವುದಾಗಿ ತಿಳಿಸಿದರು. ಮನುಷ್ಯನ ಆರೋಗ್ಯಕ್ಕೆ ನೀರು ಅತಿ ಮುಖ್ಯ. ಶುದ್ಧ ನೀರು ಕುಡಿಯುವ ಜೊತೆಗೆ…

Read More

ತುಮಕೂರು: ಬಂಜಾರ ಸಮಾಜದ ಹಲವು ಆಚಾರ-ವಿಚಾರಗಳು ನಶಿಸಿ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇವುಗಳನ್ನು ಮುಂದಿನ ತಲೆಮಾರಿಗೆ ಕಾಪಾಡಿ ಉಳಿಸಲೆಂದು ನಿಗಮವು ಒಂದು ಕೋಟಿ ಇಪ್ಪತ್ತು ಲಕ್ಷ ರೂ. ವೆಚ್ಚ ಮಾಡಿ ರಾಜ್ಯದಾದ್ಯಂತ ಕಲಾ ಮೇಳಗಳನ್ನು ಆಯೋಜಿಸುತ್ತಿದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷೆನ್.ಜಯದೇವ್ ನಾಯಕ್ ತಿಳಿಸಿದ್ದಾರೆ ನಗರದ ಬಂಜಾರ ಭವನದಲ್ಲಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಲಯ ಕಚೇರಿಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕಲಾ ಮೇಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಯುವಕರು ಈ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು ಕಾರ್ಯಕ್ರಮದಲ್ಲಿ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಡಿ. ನಾರಾಯಣ ನಾಯ್ಕ್, ಪ್ರಧಾನ ಕಾರ್ಯದರ್ಶಿ ಶಂಕರ್ ಬಿ, ತುಮಕೂರು ವಲಯ ಅಧಿಕಾರಿ ಸಂಗಮೇಶ, ಶ್ರೀ ಸೇವಾಲಾಲ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಬೇಂದ್ರ ನಾಯ್ಕ್, ನಿರ್ದೇಶಕರು ದೇಶ್ಯಾ ನಾಯ್ಕ್, ಸಕ್ರ ನಾಯ್ಕ್, ಮಾಜಿ ಜಿ.ಪಂ. ಸದಸ್ಯರು ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು…

Read More

ತುಮಕೂರು:ಕನ್ನಡ ನಾಡು ನುಡಿಗೆ ದುಡಿದವರನ್ನು ನವೆಂಬರ್ ಮಾಹೆಯಲ್ಲಿ ಇಡೀ ತಿಂಗಳು ಅವರುಗಳನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ,ನಗರದ ಸಂಘ-ಸ0ಸ್ಥೆಗಳು ಕನ್ನಡಕ್ಕಾಗಿ ದುಡಿದವರನ್ನು ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುತ್ತಿರುವುದು ನಮಗೆ ಸಂತಸ ತಂದಿದೆ,ತಾಯ0ದಿರು ತಮ್ಮ ಮಕ್ಕಳಿಗೆ ತಾಯಿ ಭಾಷೆ ಕನ್ನಡವನ್ನು ಹೇಳಿಕೊಡಿ,ನಿರ್ಭಯ ಮಹಿಳಾ ಜಾಗೃತಿ ವೇದಿಕೆ ಉತ್ತಮ ಕೆಲಸಗಳನ್ನು ಮಾಡುತ್ತಾ ಮಹಿಳೆಯರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ ಅವರ ಸಂಸ್ಥೆಯ ಜೊತೆ ಶಾಸಕನಾಗಿ ನಾನು ಸದಾ ಇರುತ್ತೇನೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು. ಅವರು ನಗರದ ೩೧ನೇ ವಾರ್ಡಿನ ಜಯನಗರ ಮಾರ್ಕೆಟ್ ಪಕ್ಕದಲ್ಲಿ ಸಂಕಲ್ಪ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಘ,ಕನ್ನಡ ಸಾಹಿತ್ಯ ಪರಿಷತ್ತು ನಗರ ಘಟಕ,ನಿರ್ಭಯ ಮಹಿಳಾ ಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ ವೈಭವದ ಕನ್ನಡ ರಾಜ್ಯೋತ್ಸವನ್ನು ಉದ್ಘಾಟಿಸಿ ಮಾತನಾಡಿದರು. ಮಾಜಿ ಶಾಸಕ ಡಾ. ಎಸ್.ರಫೀಕ್ ಅಹಮದ್ ರವರು ಮಾತನಾಡುತ್ತಾ ಸಂಘ-ಸAಸ್ಥೆಗಳಿ0ದ ಕನ್ನಡ ಭಾಷೆಗಾಗಿ ಕನ್ನಡ ಉಳಿವಿಗಾಗಿ ಜಾಗೃತಿ ಮೂಡಿಸುತ್ತಿವೆ,ನಿರ್ಭಯ ಮಹಿಳಾ ವೇದಿಕೆಯು ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದೆ,ಮಹಿಳೆಯರಿಗೆ ಎಂತಹುದೇ…

Read More

ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಸುಮಾರು ೨೯ ಕೆರೆಗಳಿಗೆ ನೀರು ಬಿಡುವ ಏತ ನೀರಾವರಿ ಯೋಜನೆಗೆ ಸರ್ಕಾರ ಹೆಚ್ಚುವರಿ ಅನುದಾನ ಮಂಜೂರು ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರ ಅವರು ನೀರಾವರಿಯಿಂದ ವಂಚಿತರಾಗಿರುವ ದಬ್ಬೇಘಟ್ಟ ಹೋಬಳಿಯ ಜನರಿಗೆ ಈ ಕಾಮಗಾರಿ ಆದಲ್ಲಿ ಬಹುಪಾಲು ನೀರಿನ ಸಮಸ್ಯೆಯನ್ನು ಬಗೆಹರಿಸಿದಂತಾಗುತ್ತದೆ. ಈಗಾಗಲೇ ಮಲ್ಲಾಘಟ್ಟ ಕೆರೆಯಿಂದ ಕಾಮಗಾರಿ ಆರಂಭವಾಗಿದೆ. ಮಲ್ಲಾಘಟ್ಟದ ಬಳಿ ಜಾಕ್ವೆಲ್ ನಿರ್ಮಿಸಲಾಗಿದೆ. ಅಲ್ಲಿಂದ ನೀರು ಹರಿಸುವ ಸಲುವಾಗಿ ಪೈಪ್ ಲೈನ್ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಈಗಾಗಲೇ ವೈಟಿ ರಸ್ತೆ ವರೆಗೆ ಪೈಪ್ ಲೈನ್ ಕಾಮಗಾರಿ ಮುಗಿದಿದೆ. ಒಟ್ಟು ೪೮ ಕೋಟಿ ಯೋಜನೆಗೆ ಸರ್ಕಾರ ಕೇವಲ ೯ ಕೋಟಿಯಷ್ಟು ಹಣ ಮಾತ್ರ ಬಿಡುಗಡೆಗೊಳಿಸಿದೆ. ಉಳಿದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆ ಚಾಲನೆಯಲ್ಲಿದೆ. ತಿಪಟೂರು, ಗುಬ್ಬಿ ತಾಲ್ಲೂಕಿನಲ್ಲಿ ಕಾಮಗಾರಿ ಮಾಡಲು ತಲಾ…

Read More

ಚಿಕ್ಕನಾಯಕನಹಳ್ಳಿ: ನಮ್ಮ ದೇಸಿ ಕ್ರೀಡೆಗಳಿಗೆ ಅವಕಾಶಗಳನ್ನು ನೀಡಿ ಅವುಗಳನ್ನು ಉಳಿಸಿ ಬೆಳೆಸುತ್ತಿರುವುದು ನಮ್ಮ ಗ್ರಾಮೀಣ ಭಾಗದಲ್ಲಿ ಅಂತಹ ಕೆಲಸವನ್ನು ಗೋಡೆಕೆರೆಯ ಶ್ರೀಲಾಲ್ಬಹದ್ದೂರ್ಶಾಸ್ತ್ರೀ ಕ್ರೀಡಾ ಸಂಘ ಕಳೆದ ೪೯ ವರ್ಷಗಳಿಂದ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆಯಲ್ಲಿ ಗೋಡೆಕೆರೆ ಮಠದ ಶ್ರೀ ಮೃತ್ಯುಂಜಯ ದೇಶೀಕೇಂದ್ರ ಸ್ವಾಮಿ ದಿವ್ಯ ಸಾನಿದ್ಯದಲ್ಲಿ ಸೋವವಾರ ರಾತ್ರಿ ಶ್ರೀ ಸಿದ್ದರಾಮೇಶ್ವರ ಸ್ವಾಮಿಯ ಲಕ್ಷ ದೀಪೋತ್ಸವದ ಅಂಗವಾಗಿ ಶ್ರೀಲಾಲ್ ಬಹದ್ದೂರ್ಶಾಸ್ತ್ರೀ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಜಗೋಸಿರಾ ಕಪ್ನ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದೆ ಗುರು ಮುಂದೆ ಗುರಿ ಇಟ್ಟುಕೊಂಡರೆ ನಮ್ಮ ಸಾಧನೆ ಸಾದ್ಯ ಎಂಬುದಕ್ಕೆ ಕಳೆದ ೪೯ ವರ್ಷಗಳಿಂದ ಈ ದೇಸಿ ಕ್ರೀಡೆಯನ್ನು ಏರ್ಪಡಿಸುತ್ತಾ ಈ ಕ್ಷೇತ್ರದ ಇಬ್ಬರು ಗುರುಗಳ ನೇತೃತ್ವದಲ್ಲಿ ನಡೆಯುತ್ತಿದೆ ಈ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಾ ಇಲ್ಲಿಗೆ ೨ ಕೋಟಿ ವೆಚ್ಚವನ್ನು ನೀಡಲಾಗಿದ್ದು ಈ ಸುಕ್ಷೇತ್ರದಲ್ಲಿನ ಮೃತ್ಯುಂಜಯಸ್ವಾಮಿಗಳು ನಿತ್ಯ ದಾಸೋಹವನ್ನು…

Read More

ತುಮಕೂರು: ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ ೫೦ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ೨೮ರಂದು ಬೆಂಗಳೂರಿನಲ್ಲಿ ನಡೆಯುಲಿರುವ ಕಾರ್ಯಕ್ರಮದಲ್ಲಿ ಐದು ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಜಿಜಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದೂ ಸೇರಿದಂತೆ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಪೂರಕ ಮಹತ್ತರ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕಪಡೆ ಲೋಕಾರ್ಪಣೆ ಹಾಗೂ ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತ ರಾಜ್ಯ ಮಟ್ಟದ ಸಮಾವೇಶಕ್ಕೆ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಮಾಜಿ ಪ್ರಧಾನಿ ಇಂದಿರಾಗಾ0ಧಿಯವರು ಬಲಿಷ್ಠ ಭಾರತ ನಿರ್ಮಾಣದ ಕನಸು ಹೊತ್ತು ೧೯೭೫ರಲ್ಲಿ ಆರಂಭಿಸಿದ ಸಮಗ್ರ ಶಿಶು ಅಭಿವದ್ಧಿ ಸೇವೆಗಳ ಯೋಜನೆ ಐಸಿಡಿಎಸ್‌ಗೆ ೫೦ ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದೇ ೨೮ರಂದು ಬೆಂಗಳೂರಿನಲ್ಲಿ ಬೃಹತ್…

Read More

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಇ-ಸ್ವತ್ತು ದಾಖಲೆಗಳನ್ನು ನೀಡುವಲ್ಲಿ ನಡೆಯುತ್ತಿರುವ ವಿಳಂಬ ಮತ್ತು ಅವ್ಯವಸ್ಥೆ ಕುರಿತು ನಾಗರಿಕರಿಂದ ಜಿಲ್ಲಾಧಿಕಾರಿಗಳಿಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ದಿಢೀರ್ ಪಾಲಿಕೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಲಿಕೆಯ ಆಸ್ತಿ ದಾಖಲಾತಿ ವಿಭಾಗದಲ್ಲಿ ಆನ್‌ಲೈನ್ ಮೂಲಕ ಸಲ್ಲಿಕೆಯಾದ ಹಲವು ಅರ್ಜಿಗಳು ಕಂದಾಯ ನಿರೀಕ್ಷಕರ ಹಂತದಲ್ಲೇ ದೊಡ್ಡ ಪ್ರಮಾಣದಲ್ಲಿ ಬಾಕಿ ಉಳಿಸಿರುವುದು, ದಾಖಲೆಗಳ ಪರಿಶೀಲನೆಗೆ ತಿಂಗಳುಗಟ್ಟಲೆ ಕಾಯುವ ಅನಿವಾರ್ಯ ಪರಿಸ್ಥಿತಿ ಮತ್ತು ಕೆಲ ಕಡೆಗಳಲ್ಲಿ ಅಧಿಕಾರಿಗಳ ಅಸಮರ್ಪಕ ಸೇವಾ ಮನೋಭಾವ ಕಂಡು ಬಂದ ಕಾರಣ ಜಿಲ್ಲಾಧಿಕಾರಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಸಲ್ಲಿಸಿದ ಅಂಕಿ-ಅ0ಶಗಳ ಪ್ರಕಾರ ನೂರಾರು ಇ-ಸ್ವತ್ತು ಅರ್ಜಿಗಳು ಕಂದಾಯ ನಿರೀಕ್ಷಕರ ಮಟ್ಟದಲ್ಲಿ ಬಾಕಿ ಉಳಿದಿದ್ದು, ಸಾರ್ವಜನಿಕರು ಸಮಯಕ್ಕೆ ದಾಖಲೆಗಳನ್ನು ಪಡೆಯಲು ಸಾಧ್ಯವಾಗದೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಸಾರ್ವಜನಿಕರನ್ನು ದಿನಗಟ್ಟಲೆ ಕಚೇರಿಯ ಸುತ್ತ ಸುತ್ತಿಸುವುದು ಅಧಿಕಾರಿಗಳ ನಿರ್ಲಕ್ಷö್ಯವನ್ನೇ ತೋರಿಸುತ್ತದೆ ಎಂದು ಜಿಲ್ಲಾಧಿಕಾರಿ ಆಕ್ರೋಶ ವ್ಯಕ್ತಪಡಿಸಿ, ಇದೇ ರೀತಿಯ…

Read More