ಹುಳಿಯಾರು: ಹುಳಿಯಾರಿನ ಗ್ರಾಮದೇವತೆ ಶ್ರೀ ಹುಳಿಯಾರಮ್ಮ ದೇವಿಯವರ ೧೩ ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮುಂಜಾನೆ ಏರ್ಪಡಿಸಿದ್ದ ಕಳಸೋತ್ಸವವು ವೈಭ ವದಿಂದ ನೆರವೇರಿತು. ಹುಳಿಯಾರು ಗ್ರಾಮದೇವತೆ ದುರ್ಗಮ್ಮನವರು , ಹುಳಿಯಾರು ಕೆಂಚಮ್ಮದೇವಿ, ಸೋಮಜ್ಜನಪಾಳ್ಯದ ಅಂತರಘಟ್ಟೆ ಅಮ್ಮನವರು, ಗೌಡಗೆರೆ ದುರ್ಗಮ್ಮ, ದಮ್ಮಡಿಹಟ್ಟಿ ಈರಬೊಮ್ಮಕ್ಕ ದೇವಿ, ,ಕೆ.ಸಿ.ಪಾಳ್ಯದ ಅಂತರಘಟ್ಟೆ ಅಮ್ಮ ಹಾಗೂ ದೊಡ್ಡಬಿದರೆ ಕರಿಯಮ್ಮ ದೇವರುಗಳ ಆಗಮನ ಹಾಗೂ ಕೂಡು ಭೇಟಿ ನಂತರ ಕಳಸೋತ್ಸವ ಆರಂಭವಾಯಿತು. ಹುಳಿಯಾರು ಕೆರೆ ಮೈದುಂಬಿದ್ದರಿAದ ಕೆರೆಯಲ್ಲಿ ಸ್ಥಾಪಿಸಲಾಗುತ್ತಿದ್ದ ಕಲಶವನ್ನು ಹುಳಿಯಾರ ಮ್ಮನವರ ಮೂಲಗುಡಿಯ ಬಳಿ ಸ್ಥಾಪಿಸಲಾಯಿತು. ಅಲ್ಲಿಂದ ಪಟ್ಟಣದಲ್ಲಿನ ಹುಳಿಯಾರಮ್ಮನ ದೇವ ಸ್ಥಾನದವರೆವಿಗೂ ಐವತ್ತಕ್ಕೂ ಹೆಚ್ಚು ಕಳಸಗಳ ಉತ್ಸವವು ಮಂಗಳವಾದ್ಯ ಹಾಗೂ ಅಪಾರ ಭಕ್ತರ ಸಮ್ಮುಖದಲ್ಲಿ ನೆರವೇರಿತು. ಉತ್ಸವದಲ್ಲಿ ಕೋಡಿಪಾಳ್ಯ, ಲಿಂಗಪ್ಪನಪಾಳ್ಯ, ಕಾಮಶೆಟ್ಟಿಪಾಳ್ಯ, ಹುಳಿಯಾರು, ಕೇಶವಾಪುರ ಹಾಗೂ ಸೋಮಜ್ಜನಪಾಳ್ಯ ಗ್ರಾಮಗಳ ಹೆಣ್ಣು ಮಕ್ಕಳು ಭಕ್ತಿ ಪೂರ್ವಕವಾಗಿ ಶ್ರೀ ಹುಳಿಯಾರಮ್ಮನವರ ಕಳಸವನ್ನು ತಲೆ ಮೇಲೆ ಹೊತ್ತು ನಡೆಮುಡಿಯೊಂದಿಗೆ ಮೂಲ ಸ್ಥಾನಕ್ಕೆ ಆಗಮಿಸಿದರು. ಈ ಕಳಸೋತ್ಸವವು ಮಂಗಳವಾದ್ಯಗಳೊAದಿಗೆ ಶ್ರೀ…
Author: News Desk Benkiyabale
ತಿಪಟೂರು: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗ ಣದಲ್ಲಿ ಜನವರಿ ಅಂತ್ಯಕ್ಕೆ ಸಂಬ0ಧಿಸಿದ0ತೆ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಯೋಜನೆಗಳ ಅಧ್ಯಕ್ಷ ಎಮ್.ಎನ್.ಕಾಂತರಾಜು ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಶಿಶು ಯೋಜನಾಧಿಕಾರಿ ಮಾತನಾಡಿ, ೨೦೨೩ರ ಆಗಸ್ಟ್ನಲ್ಲಿ ಆರಂಭವಾದ ಗೃಹಲಕ್ಷ್ಮಿ ಯೋಜನೆ ಮೂಲಕ ಆರಂಭದಲ್ಲಿ ೪೯,೪೦೮ ಫಲಾನುಭವಿಗಳಿದ್ದು, ಪ್ರಸ್ತುತ ೫೩,೬೨೫ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರಾಸರಿ ರೂ ೧೦.೭೩ ಲಕ್ಷ ಮೊತ್ತವನ್ನು ವಿತರಿಸಲಾಗುತ್ತಿದೆ. ಇದುವರೆಗೆ ತಾಲೂಕಿಗೆ ಒಟ್ಟು ರೂ.೨೫೩.೮೪ ಕೋಟಿ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದೀಗಾಗಲೇ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ೭೮೮ ಸದಸ್ಯರು ಮರಣ ಹೊಂದಿರುವ ಮಾಹಿತಿ ಸಂಗ್ರಹಿಸ ಲಾಗು ತ್ತಿದ್ದು, ಪಂಚ ಗ್ಯಾರಂಟಿ ಯೋಜನೆಯಡಿ ಹೋಬಳಿ ಮಟ್ಟದಲ್ಲಿ ಶಿಬಿರಗಳನ್ನು ಆಯೋಜಿಸಿ, ಬಂದ ಅರ್ಜಿಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ, ೫೮,೨೬೭ ಮಹಿಳಾ ಪ್ರಧಾನ ಮತ್ತು ೨,೫೨೮ ಪುರುಷ ಪ್ರಧಾನ ಪಡಿತರ ಚೀಟಿಗಳು ಸೇರಿ ಒಟ್ಟು ೬೧,೦೧೬ ಪಡಿತರ ಚೀಟಿಗಳು ಇದೆ ಎಂದು ತಿಳಿಸಿದರು. ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ…
ಕೊರಟಗೆರೆ: ಶಿಕ್ಷಕರಿಗೆ ಹಾಗೂ ಶಿಕ್ಷಕರೇತರ ಪದವಿಧರರಿಗೆ ಸಮಸ್ಯೆಗಳು ಬಹಳಷ್ಟು ಹತ್ತಿರದಿಂದ ಕಂಡಿದ್ದು, ಅವರ ಸಮಸ್ಯೆಗಳನ್ನ ಪರಿಹರಿಸಲು ನನಗೆ ಒಂದು ಅವಕಾಶ ನೀಡಿ ಎಂದು ಆಗ್ನೇಯ ಪದವಿಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಹೊಳವನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಬೇಟಿ ನೀಡಿ ಮತಯಾಚನೆ ಮಾಡಿ ಮಾತನಾಡಿದರು. ನಾನು ಸಾಕಷ್ಟು ವರ್ಷದಿಂದ ಕಾಂಗ್ರೆಸ್ ಪಕ್ಷವನ್ನ ಸಂಘಟನೆ ಮಾಡಿಕೊಂಡು ಬಂದಿದ್ದೇನೆ. ಈ ಬಾರಿ ನಮ್ಮ ನಾಯಕರಾದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಆಶಿರ್ವಾದದಿಂದ ಆಗ್ನೇಯ ಪದವಿಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾನೆ. ದೇಶ ಹಾಗೂ ರಾಜ್ಯದಲ್ಲಿ ನಿರುದ್ಯೋಗ ತಾಂಡವಾಡುತ್ತಿದ್ದು, ಅನೇಕ ಯುವಕರು ಹಾಗೂ ಯುವತಿಯರು ಬಡತನದಲ್ಲಿರದ್ದರು ಸಹ ಉತ್ತಮ ವ್ಯಾಸಂಗ ಮಾಡಿದರೂ ಕೆಲಸ ಇಲ್ಲದೆ ಹಾಗೆ ಉಳಿದ್ದಾರೆ. ನನಗೆ ನಿಮ್ಮ ಅಮೂಲ್ಯವಾದ ಒಂದು ಮತ ನೀಡಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಂಡಿ ಎಂದು ಮನವಿ ಮಾಡಿದರು. ನಗರ ಬ್ಲಾಕ್ ಕಾಂಗ್ರೆಸ್…
ತುಮಕೂರು: ಕೇಂದ್ರ ಸರ್ಕಾರಕ್ಕೆ ರೈತ-ಕಾರ್ಮಿಕ-ಜನವಿರೋಧಿ ನೀತಿಗಳನ್ನು ಕೈಬಿಡಲು ಒತ್ತಾಯಿಸಿ. ೨೦೨೬ ಫೆಬ್ರವರಿ ೧೨ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ದೇಶವ್ಯಾಪ್ತಿ ಉತ್ಪಾದನೆ ಮತ್ತು ಸೇವೆ ಸ್ಥಗಿತ ಮಾಡಿ ಬಂದ್ ಮಾಡಲು ಕೇಂದ್ರ ಕಾರ್ಮಿಕ ಸಂಘಟನೆಗಳು ಜಂಟಿ ಸಮಿತಿ ತೀರ್ಮಾನ ಮಾಡಿರುವುದರಿಂದ ತುಮಕೂರು ನಗರದ ಜನಚಳುವಳಿಕೇಂದ್ರದಲ್ಲಿ ಪ್ರಚಾರಂದೋಲನಕ್ಕೆ ಸಿಐಟಿಯು ರಾಜ್ಯ ಉಪಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರು ಸೈಯದ್ ಮುಜೀಬ್ ರವರು ಚಾಲನೇ ನೀಡುವ ಮೂಲಕ ಕೇಂದ್ರದಲ್ಲಿ ೩ ನೇ ಬಾರಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರವು ೨೦೨೫ ನವೆಂಬರ್ ನಾಲ್ಕು ಲೇಬರ್ ಜಾರಿಗೊಳಿಸುವುದಾಗಿ ೨೧ ರಂದು ಕೋಡ್ಗಳನ್ನು ಘೋಷಿಸಿದೆ. ನಂತರ ೨೦೨೫ ಡಿಸೆಂಬರ್ ೩೦ ರಂದು ನಾಲ್ಕು ಕೋಡ್ಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ೨೦೨೬ ರಿಂದ ಏಪ್ರಿಲ್ ೧ ರಿಂದ ದೇಶಾದ್ಯಂತ ಈ ನಾಲ್ಕು ಕೋಡ್ಗಳು ಕಾರ್ಯಚರಣೆಗೆ ಬರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ವ್ಯಾಪಕವಾದ ಪ್ರಚಾರವನ್ನು ಕೈಗೊಂಡಿದೆ. ಕೇಂದ್ರ ಸರ್ಕಾರದ ಈ ನಡೆಯನ್ನು ವಿರೋಧಿಸಿ ದೇಶದ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳು…
ಚಿಕ್ಕನಾಯಕನಹಳ್ಳಿ: ಕೆರೆಗಳಲ್ಲಿ ತಮ್ಮ ಹೊಲ ತೋಟಗಳಿಗೆ ಮಣ್ಣು ಹೊಡೆದುಕೊಳ್ಳು ರೈತರು, ಗ್ರಾಮಸ್ಥರು, ಜೆಸಿಬಿ, ಟ್ರಾಕ್ಟರ್ ಮಾಲೀಕರುಗಳು ಸೇರಿ ಕೆರೆ ಅಭಿವೃದ್ದಿ ಸಮಿತಿ ಮಾಡಿಕೊಳ್ಳುವ ಮೂಲಕ ರೈತರು ಕಾನೂನು ರೀತಿಯಲ್ಲಿ ವೈಜ್ಞಾನಿಕವಾಗಿ ಎಷ್ಟು ಮಣ್ಣನ್ನು ತೆಗೆಯಬೇಕು ಎಂಬುದನ್ನು ಆ ಸಮಿತಿಯೊಂದಿಗೆ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದೊಂದಿಗೆ ತೀರ್ಮಾನ ಮಾಡಿ ಕಾನೂನು ರೀತಿಯಲ್ಲಿ ಕೆರೆಯ ಮಣ್ಣನ್ನು ಹೊಡೆದುಕೊಳ್ಳಿ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಾಲ್ಲೂಕಿನ ಕೆರೆಗಳಲ್ಲಿ ಮಣ್ಣು ಮತ್ತು ಮರಳು ತೆಗೆಯುತ್ತಿರುವ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿರುವ ೩೮ ಕೆರೆಗಳಿಗೂ ಆಯಾ ಕೆರೆಗಳ ಗ್ರಾಮದ ಹಾಗೂ ಸುತ್ತಮುತ್ತಲ ರೈತರ ಮುಖಂಡರನ್ನೊಳಗೊ0ಡ ಕೆರೆ ಅಭಿವೃದ್ದಿ ಸಮಿತಿಯನ್ನು ಮಾಡಿಕೊಂಡು ರೈತರ ಹೊಲ ತೋಟಗಳಿಗೆ ಅಗತ್ಯವಿರುವಂತಹ ಮಣ್ಣನ್ನು ಹೊಡೆದುಕೊಳ್ಳಲು ನಿಮ್ಮಲ್ಲೇ ತೀರ್ಮಾನ ಮಾಡಿಕೊಳ್ಳಿ, ಕಾನೂನು ರೀತಿಯ ಮಾನದಂಡಗಳನ್ನು ಇಟ್ಟು ಕೊಂಡು ಮಣ್ಣನ್ನು ತೆಗೆಯಿರಿ ಇದಕ್ಕೆ ಸಂಬ0ಧ ಪಟ್ಟಂತೆ ರೈತರಿಗೆ ಅನುಕೂಲ ಮಾಡಿಕೊಡಿ ಎಂದ ಅವರು ಪ್ರತಿ ಕೆರೆಯ ಸಮಿತಿಯನ್ನು…
ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ನಿರ್ದೇಶನ ನೀಡಿದರು. ನಗರದಲ್ಲಿ ಸೋಮವಾರ ಕೆಯುಡಬ್ಲೂಜೆ ಜಿಲ್ಲಾಧ್ಯಕ್ಷ ಎಲ್.ಯೋಗೇಶ್ ನೇತೃತ್ವದ ನಿಯೋಗವು ಜಿಲ್ಲೆಯ ಗ್ರಾಮೀಣಭಾಗದ ಕಾರ್ಯನಿರತ ಪತ್ರಕರ್ತರಿಗೆ ಆಶ್ರಯ ಯೋಜನೆ ಅಡಿ ನಿವೇಶನ ಹಂಚುವ ವೇಳೆ ಪರಿಗಣಿ ಸಬೇಕೆಂಬ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವ್ಯಾಪ್ತಿಗೆ ಒಳಪಡುವ ಸದಸ್ಯರಿದ್ದು, ಅವರನ್ನು ಗುರುತಿಸಿ ನಿವೇಶನ ನೀಡುವಂತೆ ಜಿಲ್ಲಾಧಿಕಾರಿ ಶುಭಕಲ್ಯಾಣ್ಗೆ ಸೂಚಿಸಿದರು. ಸಂಘವು ಒದಗಿಸುವ ತಾಲೂಕುವಾರು ಪತ್ರಕರ್ತರ ಪಟ್ಟಿಯನ್ನು ಜಿಲ್ಲಾಡಳಿತ ಗಮನದಲ್ಲಿರಿಸಿಕೊಂಡು ಆದ್ಯತೆ ಮೇರೆಗೆ ನಿವೇಶನ ನೀಡಬೇಕು. ಜಿಲ್ಲಾ ಕೇಂದ್ರದಲ್ಲಿ ನಿವೇಶನ ನೀಡಲು ಸಾಧ್ಯವಿಲ್ಲ. ಹಾಗಾಗಿ, ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪತ್ರಕರ್ತರ ಹೆಸರನ್ನು ಗ್ರಾಮಸಭೆ ಮುಂದಿಡುವ ಪಟ್ಟಿಯಲ್ಲಿ ಸೇರಿಸಿ ಕ್ರಮವಹಿಸಲು ತಿಳಿಸಿದರು. ಈ ವೇಳೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಜಯನುಡಿ ಜಯಣ್ಣ,…
ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಜರುಗಿತು. ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ ರಾಷ್ಟçಧ್ವ ಜಾರೋಹಣ ನೆರವೇರಿಸಿ ಧ್ವಜಾ ವಂದನೆಯನ್ನು ಸ್ವೀಕರಿಸಿ ಮಾತನಾಡಿ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರು ಹೋರಾಟ ನಡೆಸಿದ್ದು, ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವ ಮಾದರಿಯ ಆಡಳಿತಕ್ಕೆ ಅಗತ್ಯವಾದ ನಿಯಮಗಳನ್ನು ರೂಪಿಸಿ ಶ್ರೇಷ್ಠ ಸಂವಿಧಾನವನ್ನು ರಚಿಸಿಕೊಟ್ಟ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಿಸಿಬೇಕು. ೧೯೪೯ರ ನವೆಂಬರ್ ೨೬ರಂದು ಅಂಗೀಕಾರಗೊ0ಡು ೧೯೫೦ರ ಜನವರಿ ೨೬ರಂದು ಜಾರಿಗೆ ಬಂದ ಸಂವಿಧಾನವೇ ಭಾರತದ ಆಡಳಿತದ ಅಡಿಪಾಯವಾಗಿದೆ. ಸಂವಿಧಾನವು ನಾಗರಿಕರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನಿರ್ದಿಷ್ಟಪಡಿಸಿದ್ದು, ಭಾರತದಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿದೆ ಎಂದರು. ಇ0ದು ಭಾರತ ಶಿಕ್ಷಣ, ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಯೋಗ, ಅಧ್ಯಾತ್ಮ, ಸಂಸ್ಕೃತಿ, ಆರೋಗ್ಯ, ರಕ್ಷಣೆ ಹಾಗೂ ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದು, ಜಗತ್ತೇ ಭಾರತದತ್ತ ಗಮನ…
ಪಾವಗಡ: ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ, ಈ ಮಲತಾಯಿ ಧೋರಣೆಯಿಂದ ರಾಜ್ಯಗಳಿಗೆ ಅನಾನುಕೂಲವಾಗುತ್ತಿದೆ ಎಂದು ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ತಿಳಿಸಿದರು. ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಏರ್ಪಡಿಸಲಾಗಿದ್ದ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು ೧೯೫೦ ಜನವರಿ ೨೬ ರಂದು ಭಾರತದ ಸಂವಿಧಾನವು ಜಾರಿಗೆ ಬಂದಿದ್ದನ್ನು ಸ್ಮರಿಸಲು ಪ್ರತಿ ವರ್ಷ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನವು ನಮಗೆ ನೀಡಿರುವ ಹಕ್ಕುಗಳನ್ನು ರಕ್ಷಿಸಿಕೊಳ್ಳುವುದು ಮತ್ತು ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು. “ನಾವೆಲ್ಲರೂ ಭಾರತೀಯರು” ಎಂಬ ಭಾವನೆಯೊಂದಿಗೆ, ಯಾವುದೇ ತಾರತಮ್ಯವಿಲ್ಲದ, ಸಮಾನತೆಯ ಭಾರತವನ್ನು ಕಟ್ಟುವುದು ಇಂದಿನ ತುರ್ತು ಅಗತ್ಯವಾಗಿದೆ.ಸಂವಿಧಾನ ಜಾರಿಯಾಗುವ ಮುನ್ನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಎಲ್ಲಾ ಸೌಕರ್ಯಗಳಿಂದ ವಂಚಿತರಾಗಿದ್ದರು, ಸಂವಿಧಾನ ಜಾರಿಯಾದ ನಂತರ ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರೆದಿದ್ದಾರೆ…
ತಿಪಟೂರು: ನಗರದ ಕಾಸ್ಮೋಪಾಲಿಟನ್ ಕ್ಲಬ್ವತಿ ಯಿಂದ ೭೭ನೇ ಗಣರಾಜ್ಯೋತ್ಸವದ ಪ್ರಯುಕ್ತ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ಭಾರತೀಯ ಸೇನೆಯಲ್ಲಿ ೨೦ ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿವೃತ್ತ ಯೋಧರಾದ ಮಾಚಕಟ್ಟೆ ತಾಂಡ್ಯದ ತುಳಸಿರಾಮ್ ನಾಯಕ್ ಹಾಗೂ ತಿಪಟೂರು ನಗರದ ಟಿ. ಆರ್. ಚಿದಾನಂದ ಅವರನ್ನು ಕ್ಲಬ್ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷ ಗಂಗಾಧರಯ್ಯ ಮಾತನಾಡಿ ದೇಶರಕ್ಷಣೆಗೆ ತಮ್ಮ ಜೀವನವನ್ನು ಸಮರ್ಪಿಸಿದ ಯೋಧರ ಸೇವೆ ಅಮೂಲ್ಯ ವಾಗಿದ್ದು, ಇಂತಹ ಸನ್ಮಾನಗಳು ಯುವ ಪೀಳಿಗೆಗೆ ದೇಶಭಕ್ತಿಯ ಪ್ರೇರಣೆಯಾಗ ಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯದರ್ಶಿ ಮಾದಿಹಳ್ಳಿ ಸಿದ್ದರಾಮಣ್ಣ ಮಾತನಾಡಿ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ತಮ್ಮ ದೂರ ದೃಷ್ಟಿ ಮತ್ತು ಅಪಾರ ಬೌದ್ಧಿಕ ಶ್ರಮದಿಂದ ರಚಿಸಿ ೧೯೫೦ರ ಜನವರಿ ೨೬ರಂದು ಭಾರತವು ತನ್ನದೇ ಆದ ಸಂವಿಧಾನದ ಮೂಲಕ ಪ್ರಜೆಗಳೇ ಪ್ರಭುಗಳು ಎಂಬ ತತ್ವವನ್ನು ಅಧಿಕೃ ತವಾಗಿ ಅಂಗೀಕರಿಸಿದ್ದು, ಸಂವಿಧಾನವು ಕೇವಲ ಹಕ್ಕುಗ ಳನ್ನು ಮಾತ್ರವಲ್ಲದೆ ಕರ್ತವ್ಯಗಳ ಹೊಣೆಗಾರಿಕೆಯನ್ನು ಸಹ ನಾಗರೀಕರಿಗೆ ನೀಡಿದೆ. ಸ್ವಾತಂತ್ರ್ಯವು ಭಗತ್ಸಿಂಗ್, ಸುಭಾಷ್…
ತುಮಕೂರು: ವಾರಕ್ಕೆ ಐದು ದಿನಗಳ ಬ್ಯಾಂಕಿ0ಗ್ ಸೇವೆಯನ್ನು ಜಾರಿ ಮಾಡಬೇಕೆಂದು ಆಗ್ರಹಿಸಿ ರಾಷ್ಟಾçದ್ಯಂತ ೮ ಲಕ್ಷಕ್ಕೂ ಹೆಚ್ಚು ಜನ ಬ್ಯಾಂಕ್ ಉದ್ಯೋಗಿಗಳು ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದು, ತುಮಕೂರಿನಲ್ಲೂ ಸಹ ಯುಎಫ್ಬಿಯು ಸಂಘಟನೆ ಪ್ರತಿಭಟನೆ ನಡೆಸಿದೆ. ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರ ವಾರದಲ್ಲಿ ೫ ದಿನಗಳ ಬ್ಯಾಂಕಿ0ಗ್ ಸೇವೆಗೆ ಅನುಮೋದನೆಯನ್ನು ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದು ಇಂದಿನ ಮುಷ್ಕರಕ್ಕೆ ಎಡೆಮಾಡಿಕೊಟ್ಟಿದೆ ಎಂದು ಯುಎಫ್ಬಿಯು ಸಂಚಾಲಕ ಕೆ.ಎನ್. ವಾದಿರಾಜ ಹೇಳಿದರು. ಏನಿದು ವಿವಾದ.? ಬ್ಯಾಂಕಿ0ಗ್ ಕ್ಷೇತ್ರದಲ್ಲಿ ೨೦೧೫ರಲ್ಲಿ ವಾರಕ್ಕೆ ಆರು ದಿನ ಕೆಲಸ ನಿರ್ವಹಿಸಲಾಗುತ್ತಿದ್ದರು. ಆಗಲೇ ವಾರಕ್ಕೆ ೫ ದಿನಗಳ ಸೇವೆಯನ್ನು ಜಾರಿ ಮಾಡುವಂತೆ ಮನವಿ ಸಲ್ಲಿಸಲಾಗಿತ್ತು. ಮನವಿಯನ್ನು ಪರಿಷ್ಕರಣೆ ಮಾಡಿ ೨೦೧೮ರಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರ ಮಾತ್ರ ಬ್ಯಾಂಕಿ0ಗ್ ಗೆ ರಜೆಯನ್ನು ನೀಡಿ ಉಳಿದ ಶನಿವಾರಗಳಂದು ಸಂಪೂರ್ಣ ಸೇವೆಯನ್ನು ಒದಗಿಸುವಂತೆ ಅನುಮೋದಿಸಲಾಗಿತ್ತು. ಇದುವರೆವಿಗೂ ಅದರ ಪ್ರಕಾರವೇ ಬ್ಯಾಂಕಿ0ಗ್ ಕೆಲಸ ನಿರ್ವಹಿಸುತ್ತಿದ್ದು, ಈ ಮಧ್ಯೆ ಉಳಿದ ಶನಿವಾರಗಳನ್ನೂ…











