Author: News Desk Benkiyabale

ಚಿಕ್ಕನಾಯಕನಹಳ್ಳಿ: ಸರ್ಕಾರಿ ಯೋಜನೆಗಳು ನೈಜ ಪಲಾನುಭವಿಗಳಿಗೆ ತಲುಪಿದಾಗ ಮಾತ್ರ ಆ ಯೋಜನೆ ರೂಪಿಸಿದ್ದಕ್ಕು ಸಾ ರ್ಥಕ ರೈತರು ಇಂತಹ ಯೋಜನೆಗಳನ್ನು ಸದ್ಬ ಳಕೆ ಮಾಡಿಕೊಂಡು ಕೃಷಿಯಲ್ಲಿ ಸ್ವಾವಲಂಬಿ ಸಾಧಿ ಸಬೇಕು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದ ಆವರಣದಲ್ಲಿ ಸೋಮವಾರ ಕೃಷಿ ಇಲಾಖೆಯವತಿಯಿಂದ ರೈತರಿಗೆ ಬಿತ್ತನೆ ಕೂರಿಗೆಗಳನ್ನು ವಿತರಿಸಿ ಮಾತನಾಡಿದ ಅವರು ನಮ್ಮ ಹಳೆಯ ವ್ಯವಸಾಯ ಪದ್ದತಿಯಿಂದ ನಮ್ಮ ದೇಶದಲ್ಲಿ ಆಹಾರದ ಸಮಸ್ಯೆ ಉಂಟಾದ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಮೂಲಕ ಅತ್ಯಾದುನಿಕ ತಂತ್ರಜ್ಞಾನಗಳನ್ನು ಬಳಸಿ ಆಹಾರ ಸಮಸ್ಯೆಯನ್ನು ಬಗೆಹರಿಸಲಾಯಿತು ಇಂದು ನಮ್ಮ ದೇಶ ಆಹಾರದ ಉತ್ಪಾದನೆಯಲ್ಲಿ ಸ್ವವಲಂಬಿ ಸಾಧಿಸುವುದರೊಂದಿಗೆ ಬೇರೆ ರಾಷ್ಟ್ರಗಳಿಗೆ ಕೇಲವು ಆಹಾರದ ವಸ್ತುಗಳನ್ನು ರಪ್ತು ಮಾಡುತ್ತಿದೆ ಈ ನಿಟ್ಟಿನಲ್ಲಿ ನಮ್ಮ ರೈತರು ಇಂತಹಅದುನಿಕ ತಂತ್ರಾಜ್ಞಾನ ಕೂರಿಗೆ ಯಂತ್ರಗಳನ್ನು ನೀಡಿದ್ದು ಇವುಗಳನ್ನು ಬಳಸಿಕೊಂಡು ಬಿತ್ತನೆ ಮಾಡಿ ಇಂತಹ ಸೌಲಭ್ಯಗಳನ್ನು ಬಳಸಿಕೊಂಡು ಸ್ವಾವ ಲಂಬಿಗಳಾಗಿ ಎಂದರು. ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೆಶಕ ಶಿವರಾಜ್ ಕುಮಾರ್ ಮಾತನಾಡಿ…

Read More

ತುರುವೇಕೆರೆ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲಿ ತಾಲೂಕಿನಿಂದ ಸುಮಾರು ೨.೫೧ ಕೋಟಿಗೂ ಅಧಿಕ ಮಹಿಳೆಯರು ರಾಜ್ಯದ ವಿವಿಧೆಡೆಗೆ ಪ್ರಯಾಣ ಬೆಳೆಸಿದ್ದಾರೆಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಗುಡ್ಡೇನಹಳ್ಳಿ ಪ್ರಸನ್ನ ತಿಳಿಸಿದರು. ಶಕ್ತಿ ಯೋಜನೆಯಡಿ ೫೦೦ ಕೋಟಿ ಮಹಿಳೆಯರು ಪ್ರಯಾಣ ಬೆಳೆಸಿದ್ದ ಹಿನ್ನೆಲೆಯಲ್ಲಿ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದ ಅವರು ರಾಜ್ಯ ಸರ್ಕಾರ ೧೧-೬-೨೩ ರಿಂದ ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ೩೦-೫-೨೫ ರವರೆಗೆ ತುರುವೇಕೆರೆಯ ಡಿಪೋ ಬಸ್ ನಲ್ಲಿ ೩.೬೨.೦೪೯೧೨ ಮಂದಿ ಮಹಿಳೆಯರು ಮತ್ತು ಪುರುಷರು ಸೇರಿ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಇದರಲ್ಲಿ ೨.೫೧.೩೮,೬೫೨ ಮಂದಿ ಮಹಿಳೆಯರೇ ಇದ್ದಾರೆ. ಜಿಲ್ಲೆಯೊಳಗೆ ಪ್ರಯಾಣಿಸಿರುವ ಮಹಿಳೆಯರ ಸಂಖ್ಯೆ ೧,೬೨,೩೧,೦೧೦ ಮಂದಿ. ಜಿಲ್ಲೆಯ ಹೊರಗೆ ಪ್ರಯಾಣಿಸಿರುವ ಮಹಿಳೆಯರ ಸಂಖ್ಯೆ ೮೯,೦೭೬೪೨ ಮಂದಿ. ಒಟ್ಟು ಈ ಪ್ರಯಾಣದಿಂದ ಕೆ ಎಸ್ ಆರ್…

Read More

ತುರುವೇಕೆರೆ: ಕ್ಷೇತ್ರದಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿಯಿಂದ ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ ಪೋಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ಆರೋಪಿಸಿದರು. ಪಟ್ಟಣ ಸಮೀಪದ ತೋಟದ ಮನೆಯಲ್ಲಿ ಸೋಮವಾರ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ವಿಧಾನಸಭಾ ಕ್ಷೇತ್ರದ ಸಿ.ಎಸ್. ಪುರ ಹೋಬಳಿಯಲ್ಲಿ ಗಾಂಜಾ ಡ್ರಗ್ಸ್ ಸೇರಿ ಮಾದಕ ವಸ್ತುಗಳ ಮಾರಾಟ ಹೆಚ್ಚಾಗಿದೆ. ಗಾಂಜಾ ಅಮಲಿಗೆ ತುತ್ತಾದ ವ್ಯಕ್ತಿಯಿಂದ ಗಲಾಟೆ ಗರ್ಷಣೆ ಸೇರಿ ಕೊಲೆ ಮಾಡುವ ಹಂತಕ್ಕೆ ತಲುಪುತ್ತಿದೆ. ಗಾಂಜಾ ಹಾವಳಿ ಮಿತಿಮೀರಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮದಾನ ವ್ಯಕ್ತಪಡಿಸಿದರು. ಗಾಂಜಾ ಸಾಗಟ ಹಾಗೂ ಮಾರಾಟದಲ್ಲಿ ವರ್ಗದ ಜನರು ಶಾಮೀಲಾಗಿದ್ದಾರೆ ಗಾಂಜಾ ಮಾರಾಟ ಮಾಡುವ ಮಾಲು ಸಮೇತ ಸಿಕ್ಕಿಬಿದ್ದರೂ ಸಹ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಲಾಗದಂತ ಸ್ಥಿತಿಗೆ ತಲುಪಿದ್ದಾರೆ. ನಮ್ಮ ಕ್ಷೇತ್ರದ ತುಂಬಾ ಹಾಗೂ ಜಿಲ್ಲೆಯಲ್ಲಿ ಡ್ರಗ್ ಪೆಡ್ಲರ್ಗಳ ಹಾವಳಿ ಹೆಚ್ಚಾಗಿದ್ದು ಅಮಾಯಕ ಯುವಕರನ್ನು…

Read More

ತುಮಕೂರು: ಗುಬ್ಬಿ ರಿಂಗ್ ರಸ್ತೆಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ರಿಯಾಯಿತಿ ದರದ ಯೂರಿಯಾ ರಸಗೊಬ್ಬರವನ್ನು ಸರಕು ವಾಹನ ಸಂಖ್ಯೆ : ಕೆಎ.೦೫-ಎಎ-೫೩೯೯ ರಲ್ಲಿ ಸಾಗಾಣಿಕೆ ಮಾಡುತ್ತಿರುವಾಗ ವಾಣಿಜ್ಯ ತೆರಿಗೆ ಅಧಿಕಾರಿ(ಜಾರಿ-೨), ಸಹಾಯಕ ಆಯುಕ್ತರು(ಜಾರಿ), ವಾಣಿಜ್ಯ ತೆರಿಗೆಗಳ ಕಛೇರಿ ತುಮಕೂರು ಇವರು ರಸ್ತೆ ಜಾಗೃತಿ ಕಾರ್ಯನಿರ್ವಹಿಸುತ್ತಿರುವಾಗ ವಾಹನವನ್ನು ಪರಿಶೀಲಿಸಿ ದೋಷಪೂರಿತ ದಾಖಲೆಗಳು ಕಂಡು ಬಂದ ಮೇರೆಗೆ ಕೃಷಿ ಇಲಾಖೆ, ಜಾರಿದಳ ಅಧಿಕಾರಿಗಳ ಗಮನಕ್ಕೆ ತಂದು ವಾಹನವನ್ನು ಜಪ್ತಿ ಮಾಡಿ ಇಲಾಖೆ ವಶಕ್ಕೆ ಪಡೆಯಲಾಗಿದೆ ಎಂದು ಶ್ರೀ.ಪುಟ್ಟರಂಗಪ್ಪ, ಸಹಾಯಕ ಕೃಷಿ ನಿರ್ದೇಶಕರು(ಜಾರಿದಳ-೧), ಜಂಟಿ ಕೃಷಿ ನಿರ್ದೇಶಕರ ಕಛೇರಿ, ತುಮಕೂರು ರವರು ತಿಳಿಸಿದ್ದಾರೆ. ಸದರಿ ವಾಹನದಲ್ಲಿ ಸಾವಯವ ಗೊಬ್ಬರ ಎಂಬ ಹೆಸರಿನಲ್ಲಿ ಅಕ್ರಮವಾಗಿ ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು (೨೦ ಟನ್ ಅಂದಾಜು ಮೌಲ್ಯ ರೂ.೮೭೦೩೩೩/- ಎಂಟು ಲಕ್ಷ ಎಪ್ಪತ್ತು ಸಾವಿರದ ಮೂರು ನೂರ ಮೂವತ್ಮೂರು ಮಾತ್ರ) ಸೂಕ್ತ ದಾಖಲೆಗಳಿಲ್ಲದೆ, ಕೃಷಿ ಇಲಾಖೆಯ ಅನುಮತಿಯಿಲ್ಲದೆ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಸಾಗಾಣಿಕೆ ಮಾಡುತ್ತಿರುವುದು, ಬಿಲ್ಲಿನಲ್ಲಿ…

Read More

ತುಮಕೂರು: ರಾಜ್ಯದ ನಂದಿನಿ ತುಪ್ಪ ಕಳೆದ ಆರೇಳು ವರ್ಷಗಳ ನಂತರ ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗಾಗಿ ಮತ್ತೆ ಟಿಟಿಡಿ ದೇವಾಲಯಕ್ಕೆ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಹಾಲು ಒಕ್ಕೂಟದಿಂದ ಟಿಟಿಡಿ ದೇವಾಲಯಕ್ಕೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್ ವಾಹನಕ್ಕೆ ತುಮುಲ್ ಅಧ್ಯಕ್ಷ ಹಾಗೂ ಶಾಸಕ ಹೆಚ್.ವಿ. ವೆಂಕಟೇಶ್ ಚಾಲನೆ ನೀಡಿದರು. ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೇರವಾಗಿ ತುಪ್ಪ ಪೂರೈಸುವ ಅವಕಾಶವನ್ನು ಕೆಎಂಎಫ್ ತನ್ನ ವ್ಯಾಪ್ತಿಯ ಹಾಲು ಒಕ್ಕೂಟಗಳಿಗೆ ಕಲ್ಪಿಸಿರುವುದರಿಂದ ತುಪ್ಪವನ್ನು ಟ್ಯಾಂಕರ್ ಮೂಲಕ ಟಿಟಿಡಿಗೆ ಪೂರೈಸುವ ಕಾರ್ಯವನ್ನು ತುಮುಲ್ ಆರಂಭಿಸಿದೆ. ಟಿಟಿಡಿಗೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್ ವಾಹನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ತುಮುಲ್ ಅಧ್ಯಕ್ಷ ಹಾಗೂ ಶಾಸಕ ಹೆಚ್.ವಿ. ವೆಂಕಟೇಶ್ ಅವರು, ತುಮಕೂರು ಹಾಲು ಒಕ್ಕೂಟದಲ್ಲಿ ಪ್ರಸ್ತುತ ಪ್ರತಿದಿನ ೧೦ಲಕ್ಷದ ೫೦ಸಾವಿರ ಲೀಟರ್ ಹಾಲು ದಾಖಲೆ ಪ್ರಮಾಣದಲ್ಲಿ ಶೇಖರಣೆಯಾಗುತ್ತಿದೆ ಎಂದರು. ಪ್ರತಿದಿನ ಶೇಖರಣೆಯಾಗುತ್ತಿರುವ ಹಾಲಿನ ಪೈಕಿ ಬೆಂಗಳೂರಿಗೆ ೧.೯೫ ಲಕ್ಷ ಲೀಟರ್ ಹಾಲು ಹಾಗೂ ತುಮಕೂರಿನಲ್ಲಿ ೧.೨೦ ಲಕ್ಷ ಲೀಟರ್ ಹಾಲು…

Read More

ತುಮಕೂರು: ಸರ್ಕಾರಿ ಜಮೀನನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡವರಿಗೆ ಶೀಘ್ರವೇ ಒತ್ತುವರಿ ತೆರವಿಗಾಗಿ ನೋಟೀಸ್ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಹಶೀಲ್ದಾರ್ ರಾಜೇಶ್ವರಿಗೆ ಸೂಚನೆ ನೀಡಿದರು. ತಾಲ್ಲೂಕಿನ ಹೆಬ್ಬೂರು ಹೋಬಳಿ ಬನ್ನಿಕುಪ್ಪೆ ಗ್ರಾಮದ ಸ.ನಂ. ೮೨ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಬಗ್ಗೆ ಶಾಸಕರು ನೀಡಿದ ದೂರಿನ ಮೇರೆಗೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಕೂಡಲೇ ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ನಿರ್ದೇಶನ ನೀಡಿದಾಗ ಮಾತನಾಡಿದ ಕಂದಾಯ ನಿರೀಕ್ಷಕ ಎಂ.ಮAಜುನಾಥ ಮಾತನಾಡಿ, ಈಗಾಗಲೇ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದ್ದು, ಜಮೀನು ಮಂಜೂರಿಗಾಗಿ ಸಲ್ಲಿಸಿರುವ ನಮೂನೆ-೫೭ನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ನಂತರ ಸ.ನಂ. ೧೫೬ರ ಹೆಬ್ಬೂರು ಅಮಾನಿಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು. ಸುಮಾರು ೪೨೦ ಎಕರೆ ವಿಸ್ತೀರ್ಣವನ್ನು ಹೊಂದಿರುವ ಈ ಕೆರೆಯ ಮಣ್ಣನ್ನು ಅಕ್ರಮವಾಗಿ ತೋಟ, ಇಟ್ಟಿಗೆ ಕಾರ್ಖಾನೆಗಳಿಗೆ ಸಾಗಾಟ ಮಾಡಲಾಗುತ್ತಿದೆ ಎಂಬ ಸಾರ್ವಜನಿಕ ದೂರುಗಳು ಬಂದಿವೆ. ಅಕ್ರಮವಾಗಿ…

Read More

ತುಮಕೂರು: ಜಿಲ್ಲೆಯಲ್ಲಿ ಸರ್ಕಾರದಿಂದ ಭೂಮಂಜೂರಾತಿಯಾದ ಜಮೀನುಗಳನ್ನು ಸಾಗುವಳಿ ಮಾಡುವ ರೈತರಿಗೆ ಎರಡು ಮೂರು ತಲೆ ಮಾರುಗಳಿಂದ ಪೋಡಿ ದುರಸ್ಥಿಯಾಗದೇ ಕ್ರಯ, ವಿಭಾಗ, ಹದ್ದುಬಸ್ತು ಕಾರ್ಯಗಳಿಗೆ ಹಾಗೂ ಹಕ್ಕು ವರ್ಗಾವಣೆಗಳಿಗೆ ಅನಾನುಕೂಲವಾಗುತ್ತಿದ್ದು, ೧೦೦೩ ದುರಸ್ಥಿಯಾಗಿರುವ ದರಖಾಸ್ತು ಕಡತಗಳ ಪ್ರಗತಿ ಸಾಧಿಸಿ ವಿಲೇವಾರಿ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಜಿಲ್ಲೆಯು ಪ್ರ ಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ದರಖಾಸ್ತು ಪೋಡಿ ದುರಸ್ಥಿ ಸಂಬAಧ ಸಾವಿರಾರು ಸಂಖ್ಯೆಯಲ್ಲಿ ರೈತರು ಕಚೇರಿಗಳಿಗೆ ಅಲೆದಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ನಂತರ ಇತ್ತೀಚೆಗೆ ಸರ್ಕಾರದಿಂದ ದರಖಾಸ್ತು ಪೋಡಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿ ಆದೇಶಿಸಲಾಗಿದೆ. ಈ ಆದೇಶದ ಮೇರೆಗೆ ನಮೂನೆ ೧ ರಿಂದ ೫ರವರೆಗಿನ ಮಾಹಿತಿಯನ್ನು ತಂತ್ರಾAಶದಲ್ಲಿ ಭರ್ತಿ ಮಾಡಿ ಜಿಲ್ಲೆಯ ಎಲ್ಲಾ ತಹಸೀಲ್ದಾರರು ಅನುಬಂಧ-೧ನ್ನು ಸೃಜಿಸಿ ಭೂದಾಖಲೆಗಳ ಇಲಾಖೆಗೆ ಪೋಡಿ ದುರಸ್ತಿಗಾಗಿ ವರ್ಗಾಯಿಸುವ ಪ್ರಕ್ರಿಯೆಯನ್ನು ಕಾರ್ಯರೂಪಕ್ಕೆ ತಂದಿದೆ. ಇಂತಹ ಭೂ ಮಂಜೂರಿದಾರರಿಗೆ ತಹಸೀಲ್ದಾರರು ಅನುಬಂಧ-೧ರ ನಂತರ ಎಲ್ಲಾ ಭೂ ಮಂಜೂರಾತಿದಾರರಿಗೆ ನಿಯಾನುಸಾರ ಅಳತೆ ಮಾಡಿ ಹೊಸ ಸರ್ವೆ…

Read More

ತುಮಕೂರು: ವಿದ್ಯಾರ್ಥಿಗಳು ಆಶಾವಾದದ ಚಿಂತನೆಗಳೊ0ದಿಗೆ ನಿರ್ದಿಷ್ಟ ಗುರಿಗಳನ್ನು ಸಿದ್ಧಪ ಡಿಸಿಕೊಂಡಾಗ ಜೀವನ ದರ್ಶನ ಸಾಧ್ಯವಾಗುತ್ತದೆ. ಜಾಗತಿಕ ವೇದಿಕೆಯಲ್ಲಿ ಔದ್ಯೋಗಿಕ ಸ್ಥಾನಮಾನ ಪಡೆಯಬೇಕಾದರೆ ನಿರ್ವಹಣಾ ಸಾಮ ರ್ಥ್ಯ ಮತ್ತು ಕೌಶಲ್ಯಗಳನ್ನು ಹೊಂದಿರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಾಣಿಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ. ಬಿ ಶೇಖರ್ ತಿಳಿಸಿದರು. ತುಮಕೂರಿನ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರದಲ್ಲಿ ನಡೆದ ಎಂ.ಕಾA. ಎರಡನೇ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬದ್ಧತೆ, ಸಮಯಪಾಲನೆ, ವಸ್ತುನಿಷ್ಠ ಮಾದರಿಯು, ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡುವ ಮುಖೇನ ಗುಣಮಟ್ಟದ ಜೀವನಕ್ಕೆ ನಮ್ಮನ್ನು ಕರೆದೊಯ್ಯುತ್ತದೆ. ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ ಎಂದರು. ಪ್ರಾಚೀನ ಕಾಲದಲ್ಲಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು, ಹೆಣ್ಣಿನ ಅಂತಃಶಕ್ತಿ ಅರಿಯದ ಅಂದಿನ ವ್ಯವಸ್ಥೆ ಅವಳನ್ನು ನಾಲ್ಕು ಗೋಡೆಗಳ ಮಧ್ಯೆ ಬಂಧಿಸಿ ಬಾಯಿ ಮುಚ್ಚಿಸಲಾಗಿತ್ತು. ಆ ದರೆ, ಕಾಲ ಬದಲಾಗಿದೆ ಶೈಕ್ಷಣಿಕ ರಾಜಕೀಯ ಸಾಮಾಜಿಕ ವೈದ್ಯಕೀಯ ಹೀಗೆ ಎಲ್ಲ…

Read More

ಪಾವಗಡ: ಬಹು ದಿನಗಳ ಕನಸಿನ ಯೋಜನೆ ಗಳೂಂದಾದ ಜಲಜೀವನ ಮಿಷನ್ ವತಿಯಿಂದ ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಯಿಂದ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಯಾದ ಶುಭ ಕಲ್ಯಾಣ್ ರವರು ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಾ, ತಾಲ್ಲೂಕಿನ ಜನತೆಗೆ ತುಂಗಭದ್ರಾ ನದಿ ಮೂಲದ ಶುದ್ಧ ಕುಡಿಯುವ ನೀರನ್ನು ನೀಡುವ ಸದುದ್ದೇಶದಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಜುಲೈ ೨೧ ಸೋಮವಾರ ಆಗಮಿಸುತ್ತಾರೆ. ತಾಲ್ಲೂಕಿನಲ್ಲಿ ಪೂರ್ಣಗೊಂಡಿರುವ ಕಾಲವು ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಗುವುದು. ತಾಲ್ಲೂಕಿನ ಜನತೆಗೆ ಫ್ಲೋರೈಡ್ ರಹಿತವಾದ ನದಿ ಮೂಲದ ಶುದ್ಧ ಕುಡಿಯುವ ನೀರನ್ನು ನೀಡುವ ಸಲುವಾಗಿ ಸುಮಾರು ೪೩೬ ಕೋಟಿ ವೆಚ್ಚದ ಯೋಜನೆಯ ಕಾಮಗಾರಿಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಇದರಿಂದ ತಾಲೂಕಿನ ೩೩ ಹಳ್ಳಿಗಳ ಮನೆಮನೆಗೂ ನೀರನ್ನು ನೀಡಲಾಗುವುದು. ಪಿಡಬ್ಲ್ಯೂಡಿ ಇಲಾಖೆಯಿಂದ…

Read More

ಚಿಕ್ಕನಾಯಕನಹಳ್ಳಿ: ದೇಶದ ರಾಜಕಾರಣಿಗಳು ವಾರ್ಷಿಕವಾಗಿ ಶೇಕಡ ೧೦ ಹತ್ತರಷ್ಟು ಕುಡುಕ ಪ್ರಜೆಗಳನ್ನು ಸೃಷ್ಟಿಸುತ್ತಿವೆ ದುಡಿಯುವ ರೈತನಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೂಡ ರಾಜಕಾರಣಿಗಳ ಪಾಲಾಗುವ ಸ್ಥಿತಿ ತಲುಪಿದ್ದೇವೆ ರೈತರ ಪಾಲಿನ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ ಎಂದು ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ಹೊಸಳ್ಳಿ ಚಂದ್ರಣ್ಣ ಬಣದ ರಾಜ್ಯಾಧ್ಯಕ್ಷ ಹೊಸಳ್ಳಿ ಚಂದ್ರಣ್ಣ ಆತಂಕ ವ್ಯಕ್ತಪಡಿಸಿದರು. ತಾಲೂಕಿನ ಶೆಟ್ಟಿಕೆರೆ ಹೋಬಳಿ ಅಗಸರಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಾ ದೇಶದ ಐದು ಲಕ್ಷದ ನಲವತ್ತೇಳು ಸಾವಿರ ಹಳ್ಳಿಗಳು ಈ ಭಾರತದ ಆಧಾರ ಸ್ಥಂಭಗಳಾಗಿವೆ ಇವುಗಳ ಮೂಲಕವೇ ದೇಶದ ಪ್ರಗತಿಗೆ ರೈತರು ಮುನ್ನೆಲೆಯಾಗಿದ್ದಾರೆ ಇಂತಹ ಹಳ್ಳಿಗಳ ಭವಿಷ್ಯಗಳನ್ನು ನಮ್ಮ ನಾಡುವ ಜನಪ್ರತಿನಿಧಿಗಳು ತೀರಾ ಸಂಕಷ್ಟಕ್ಕೆ ದುಡುತ್ತ ಕೇವಲ ಶೇಕಡ ೩೦ರಷ್ಟಿರುವ ವ್ಯಾಪಾರಸ್ಥರ ಪರವಾಗಿ ಎಲ್ಲಾ ಸರ್ಕಾರಗಳು ಕೆಲಸ ಮಾಡುತ್ತಿವೆ ದೇಶದ ಪ್ರಗತಿ ಹಾಗೂ ದೇಶಕ್ಕೆ ಅನ್ನ ನೀಡುವ ಅನ್ನದಾತನ ಸಂಕಷ್ಟಕ್ಕೆ ಬಾರದಿರುವುದು…

Read More