Author: News Desk Benkiyabale

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್ ಪ್ರಸರಣ ಯೋಜನೆ ಹಾಗೂ ಬಿಎಸ್‌ಎನ್‌ಎಲ್ ೪ಜಿ ಸ್ಯಾಚುರೇಷನ್ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಜಿಲ್ಲಾಧಿಕಾರಿಗಳು ಮಾತನಾಡುತ್ತಾ, ಎನ್‌ಹೆಚ್-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿಯನ್ನು ಯಾವುದೇ ವಿಳಂಬವಿಲ್ಲದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಯಂತಿ ಗ್ರಾಮದಲ್ಲಿ ಮುಖ್ಯ ರಸ್ತೆ ಕಾಮಗಾರಿಗೆ ಉಂಟಾಗಿರುವ ಅಡೆತಡೆಗಳನ್ನು ಒಂದು ವಾರದೊಳಗೆ ತೆರವುಗೊಳಿಸುವಂತೆ ತಿಪಟೂರು ಉಪವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಈ ಕುರಿತು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ತಿಪಟೂರು ಉಪವಿಭಾಗಾಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ಸಮನ್ವಯ ಸಾಧಿಸಿ ಕಾಮಗಾರಿಯನ್ನು ಮುಂದುವರೆಸುವ0ತೆ ಸೂಚಿಸಿದರು. ಅಯ್ಯನಬಾವಿ ಗ್ರಾಮದಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಒತ್ತಾಯಿಸಿ ಸ್ಥಳೀಯರಿಂದ ಕಾಮಗಾರಿಗೆ ಉಂಟಾಗಿರುವ ಅಡಚಣೆ ಹಿನ್ನೆಲೆಯಲ್ಲಿ, ಕಾಮಗಾರಿಗೆ ಯಾವುದೇ ತೊಂದರೆಯಾಗದAತೆ ಅಗತ್ಯ ಪೊಲೀಸ್ ಭದ್ರತೆ ಒದಗಿಸುವಂತೆ ತಿಪಟೂರು ಉಪ…

Read More

ತುಮಕೂರು: ತುಮಕೂರು ತಾಲೂಕು ಹರಳೂರಿನ ಜಂಗಮ ಮಠ ಸುಕ್ಷೇತ್ರದಲ್ಲಿ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬವನ್ನು ವಿ.ಸೋಮಣ್ಣ ಅಭಿಮಾನಿ ಬಳಗದಿಂದ ಆಯೋಜಿಸಲಾಗಿತ್ತು. ಹರಳೂರಿನ ಜಂಗಮ ಮಠದಲ್ಲಿ ಮಠಾಧ್ಯಕ್ಷರಾದ ಶ್ರೀಶ್ರೀ ಚನ್ನಬಸವ ಸ್ವಾಮಿಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಠದ ವತಿಯಿಂದ ನಡೆಯುತ್ತಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅನಾಥಾಲಯದ ಮಕ್ಕಳಿಗೆ ಉಚಿತವಾಗಿ ಲೇಖನ ಸಾಮಗ್ರಿಗಳನ್ನು ನೀಡಿ, ಮಠದ ಆವರಣದಲ್ಲಿ ಗಿಡ ನೆಟ್ಟು, ಮಠದ ಮಕ್ಕಳಿಗೆ ಬೆಳಗಿನ ಉಪಹಾರ ನೀಡುವ ಮೂಲಕ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಹರಳೂರಿನ ಜಂಗಮ ಮಠದಲ್ಲಿ ಆಯೋಜಿಸಿದ್ದ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದ ತುಮಕೂರು ಮಹಾನಗರ ಪಾಲಿಕೆ ಮಾಜಿ ಕೌನ್ಸಿಲರ್ ಶ್ರೀಮತಿ ಗಿರಿಜಾ ಧನಿಯಾ ಕುಮಾರ್, ವಿ.ಸೋಮಣ್ಣ ಅವರು ಸಂಸದರಾದ ನಂತರ ತುಮಕೂರು ಜಿಲ್ಲೆಯ ಅಭಿವೃದ್ದಿಯ ವೇಗ ದ್ವಿಗುಣಗೊಂಡಿದೆ. ಹಲವಾರು…

Read More

ತುಮಕೂರು: ದೆಹಲಿಯ ಜಂತರ್ ಮಂತರ್ ಹಾಗೂ ದೇಶವ್ಯಾಪಿ ಏಕಕಾಲದಲ್ಲಿ ನೀಟ್‌ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಹಗರಣ, ಭ್ರಷ್ಟಾಚಾರವನ್ನು ಖಂಡಿಸಿ ಸೋನಂ ವಾಂಗ್‌ಚುಕ್‌ರವರ ಪ್ರತಿಭಟನಾ/ಸತ್ಯಾಗ್ರಹವನ್ನು ಬೆಂಬಲಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ತುಮಕೂರು ವತಿಯಿಂದ ನಗರದ ಸ್ವಾತಂತ್ರö್ಯ ಚೌಕದಲ್ಲಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಪ್ರಗತಿಪರ ಚಿಂತಕರಾದ ಪ್ರೊ.ಕೆ.ದೊರೈರಾಜ್ ಮಾತನಾಡಿ ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾಪ್ರಬುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತವನ್ನು ಪಡೆದು ಆಡಳಿತಕ್ಕೆ ಬಂದಿದೆ ಎಂಬುದು ಮರೆತಿದೆ. ದೇಶದ ರಾಜದಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ೨೧ ದಿವಸಗಳಿಂದ ಲಕ್ಷಾಂತರ ಯುವ ಜನರು ವಿದ್ಯಾರ್ಥಿಗಳು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಹಗರಣದಿಂದಾಗಿ ಬೇಸತ್ತು ಆತ್ಮಹತ್ಯೇ ಮಾಡಿಕೊಂಡಿರುವ ೨೦ಕ್ಕೂ ಅಧಿಕ ವಿದ್ಯಾರ್ಥಿಗಳ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದಾರೆ. ಇಡೀ ಸರ್ಕಾರ ಮತ್ತು ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಘಟನೆ ವಿದ್ಯಾರ್ಥಿಗಳ ಆತ್ಮಹತ್ಯೆಯಾಗಿದೆ. ಇಂತಹ ಘಟನೆ ನಡೆಯಬಾರದಿತ್ತು, ಮನುಷ್ಯ ವಿರೋಧಿ ಸಂವಿಧಾನ ವಿರೋಧಿ ಭ್ರಷ್ಠಾಚಾರಕ್ಕೆ ಕಡಿವಾಣ ಹಾಕಬೇಕೆಂದರೇ ದೇಶದ ಯುವ ಜನರು ವಿದ್ಯಾರ್ಥಿಗಳು ಎಚ್ಚರಗೊಳ್ಳಬೇಕಿದೆ.ದೇಹಲಿಯ…

Read More

ಪಾವಗಡ: ಸಾರ್ವಜನಿಕರ ಜೀವ ರಕ್ಷಿಸಬೇಕಾದ ಪುರಸಭೆ ಆಡಳಿತ ಸಂಪೂರ್ಣ ಕಣ್ಣು ಮುಚ್ಚಿ ಕುಳಿತಿದೆಯೇ? ಪಟ್ಟಣದ ರಸ್ತೆಗಳಲ್ಲಿ ಹೆಜ್ಜೆ ಇಡಲು ಭಯಪಡುವ ವಾತಾವರಣ ನಿರ್ಮಾಣವಾಗಿದ್ದರೂ ಅಧಿಕಾರಿಗಳು ಕುಂಭಕರ್ಣ ನಿದ್ರೆಯಲ್ಲಿದ್ದಾರೆಯೇ? ಶನಿವಾರ ರಾತ್ರಿ ಬೀದಿನಾಯಿಗಳ ದಾಳಿಗೆ ಸಿಲುಕಿ ವೃದ್ಧರೊಬ್ಬರು ಆಸ್ಪತ್ರೆ ಪಾಲಾಗಿರುವ ಘಟನೆ ಪುರಸಭೆಯ ನಿಷ್ಕಿçಯತೆಯನ್ನು ಎತ್ತಿಹಿಡಿದಿದೆ. ಪಾವಗಡ ಪುರಸಭೆಯ ಘೋರ ಬೇಜವಾಬ್ದಾರಿಗೆ ತಾಲೂಕಿನ ನಾಗರಿಕರು ಬಲಿಯಾಗುತ್ತಿದ್ದಾರೆ! ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿ ಸಾರ್ವಜನಿಕರು ರಸ್ತೆಗೆ ಇಳಿಯಲು ಭಯಪಡುವ ವಾತಾವರಣ ನಿರ್ಮಾಣವಾಗಿದ್ದರೂ, ಪುರಸಭೆ ಆಡಳಿತ ಯಂತ್ರ ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದೆ. ಶನಿವಾರ ರಾತ್ರಿ ಬಾಪೂಜಿ ಶಾಲೆಯ ಬಳಿ ೧೫ ನಾಯಿಗಳ ಹಿಂಡು ಭೀಕರ ದಾಳಿ ನಡೆಸಿ ಹಣ್ಣಿನ ವ್ಯಾಪಾರಿಯೊಬ್ಬರನ್ನು ತೀವ್ರವಾಗಿ ಗಾಯಗೊಳಿಸಿದ್ದು, ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ಪಟ್ಟಣದ ಆದರ್ಶ ನಗರದ ನಿವಾಸಿಯೂ ಹಣ್ಣಿನ ವ್ಯಾಪಾರಿಯೂ ಆದ ನರಸಿಂಹರಾಜು ಅವರು ಶನಿವಾರ ರಾತ್ರಿ ಸುಮಾರು ೮:೦೦ ಗಂಟೆಯ ವೇಳೆಗೆ ಕೆಲಸ ಮುಗಿಸಿ ಬಾಪೂಜಿ ಶಾಲೆಯ ಮಾರ್ಗವಾಗಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೀದಿಯಲ್ಲಿದ್ದ ಸುಮಾರು ೧೦…

Read More

ತುಮಕೂರು: ಅಂತಾರಾಷ್ಟಿಯ ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗಾತಾರ್ಹ. ಆದರೆ ರಾಜಧಾನಿ ಬೆಂಗಳೂರಿಗೆ ಪರ್ಯಾಯ ನಗರವಾಗಿ ಬೆಳೆಯುತ್ತಿರುವ ತುಮಕೂರಲ್ಲಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಿದರೆ ಕೈಗಾರಿಕೋದ್ಯಮಿಗಳು ಸೇರಿದಂತೆ ಉತ್ತರ ಕರ್ನಾಟದ ಭಾಗಕ್ಕೂ ಅನುಕೂಲವಾಗಲಿದೆ. ಹಾಗಾಗಿ ತುಮಕೂರು ಜಿಲ್ಲೆಯಲ್ಲೇ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಕನಕಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ವಿಶೇಷ ಆಸಕ್ತಿ ವಹಿಸಿದ್ದಾರೆ. ಆದರೆ ಉದ್ದೇಶಿತ ಎಲ್ಲಾ ಪ್ರಸ್ತಾವನೆಗಳ ವೈಮಾನಿಕ ದೂರಕ್ಕಿಂತ, ತುಮಕೂರು ಪ್ರಸ್ತಾವನೆ ದೂರ ಇದ್ದರೂ, ರಾಜ್ಯ ಸರ್ಕಾರ ಗುರುತಿಸಿರುವ ಎಲ್ಲಾ ಸ್ಥಳಗಳಿಗಿಂತ ಉತ್ತಮವಾಗಿದೆ. ಅಭಿವೃದ್ದಿಯಲ್ಲಿ ಸಾಮಾಜಿಕ ನ್ಯಾಯ ದೊರಕಲಿದೆ. ಕರ್ನಾಟಕ ರಾಜ್ಯದ ಬಹುತೇಕ ಪ್ರದೇಶಗಳಿಗೆ ಅನೂಕೂಲವಾಗಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಜಾಸ್ತಿ ಇದೆ, ಉದ್ದೇಶಿತ ಬೇರೆ ಪ್ರಸ್ತಾವನೆಗಳ…

Read More

ಹುಳಿಯಾರು: ಸಮಾಜಮುಖಿ ಕಾರ್ಯಗಳಿಗೆ ಹಣಕ್ಕಿಂಥ ದೊಡ್ಡ ಮನಸ್ಸು ಬೇಕು ಎಂಬುದನ್ನು ಹುಳಿಯಾರಿನ ಸವಿತಾ ಸಮಾಜದ ತಂದೆ ಮತ್ತು ಇಬ್ಬರು ಮಕ್ಕಳು ಸಾಬೀತುಪಡಿಸಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಲಾಗಿದ್ದ ಮದ್ಯವರ್ಜನ ಶಿಬಿರದ ೫೬ ಶಿಬಿರಾರ್ಥಿಗಳಿಗೆ ಸತತ ೫ ಗಂಟೆಗಳ ಕಾಲ ವಿರಮಿಸದೆ ಉಚಿತ ಕ್ಷೌರ ಸೇವೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮದ್ಯದ ವ್ಯಸನದಿಂದ ಮುಕ್ತರಾಗಿ ಹೊಸ ಜೀವನದತ್ತ ಹೆಜ್ಜೆ ಇಡುತ್ತಿರುವ ಶಿಬಿರಾರ್ಥಿಗಳಿಗೆ ಈ ಉಚಿತ ಕ್ಷೌರ ಸೇವೆಯನ್ನು ಆಯೋಜಿಸಲಾಗಿತ್ತು. ಅಚ್ಚರಿ ಎಂದರೆ, ಮಧ್ಯಾಹ್ನ ೨ ಗಂಟೆಗೆ ಕತ್ತರಿ ಹಿಡಿದ ಈ ತಂದೆ-ಮಕ್ಕಳ ತಂಡ ರಾತ್ರಿ ೭:೩೦ ರವರೆಗೂ ಎಡೆಬಿಡದೆ, ದಣಿವರಿಯದೆ ಕೆಲಸ ಮಾಡಿದೆ. ಒಟ್ಟು ೫೬ ಮಂದಿಗೆ ಅಚ್ಚುಕಟ್ಟಾಗಿ ಕ್ಷೌರ ಸೇವೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಅಪೂರ್ವ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡವರು ಒಂದೇ ಕುಟುಂಬದ ತಂದೆ ಮತ್ತು ಮಕ್ಕಳು ಎಂಬುದು ವಿಶೇಷ. ಹುಳಿಯಾರು ಸವಿತಾ ಸಮಾಜದ ಅಧ್ಯಕ್ಷರಾದ ಎಚ್.ಡಿ.ಚಂದ್ರಯ್ಯ (ತಂದೆ), ಎಚ್.ಸಿ.ಪ್ರವೀಣ್ ಕುಮಾರ್, ಸವಿತಾ ಸಮಾಜದ ಯುವ…

Read More

ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿ ವ್ಯಾಪ್ತಿಯ ಅಂಕಸAದ್ರ ಗ್ರಾಮ ಪಂಚಾಯಿತಿಯ ಹೂವಿನಕಟ್ಟೆ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ ಅವರು ಇಂದು ಭೇಟಿ ನೀಡಿ ಶಾಲೆ ಹಾಗೂ ವಸತಿ ನಿಲಯದ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ವಸತಿ ನಿಲಯದ ನಿರ್ವಹಣೆ ಹಾಗೂ ಶೈಕ್ಷಣಿಕ ವಾತಾವರಣದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಭೇಟಿಯ ವೇಳೆ ವಸತಿ ನಿಲಯದ ಅಡುಗೆಮನೆ, ಊಟದ ವ್ಯವಸ್ಥೆ, ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆರೋಗ್ಯಕರ ವಾತಾವರಣವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಮತ್ತು ಗುಣಮಟ್ಟದ ಆಹಾರ ಒದಗಿಸುವುದರೊಂದಿಗೆ ವಸತಿ ನಿಲಯದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇರುವ ಕುರಿತು ಅಧಿಕಾರಿಗಳು ಗಮನ ಸೆಳೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಸಂಬAಧಿತ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಆಡಳಿತದೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿದರು. ಸಮಸ್ಯೆಗೆ…

Read More

ಹುಳಿಯಾರು: ಯಾವುದೇ ಒಂದು ಪಟ್ಟಣದ ಪ್ರಗತಿಗೆ ಮತ್ತು ದೈನಂದಿನ ಚಟುವಟಿಕೆಗೆ ಇಂಧನ ಎಂಬುದು ರಕ್ತಸಂಚಲನದAತೆ. ಆದರೆ ಹುಳಿಯಾರು ಪಟ್ಟಣದಲ್ಲಿ ಕಳೆದ ಆರು-ಏಳು ತಿಂಗಳುಗಳಿAದ ಈ ಸಂಚಲನವೇ ಸ್ಥಗಿತಗೊಂಡAತಿತ್ತು. ಪಟ್ಟಣದ ಪ್ರಮುಖ ಕೇಂದ್ರವಾದ ಕನಕ ಸರ್ಕಲ್‌ನಲ್ಲಿದ್ದ ಯೂಸುಫ್ ಖಾನ್ ಪೆಟ್ರೋಲ್ ಬಂಕ್ ದಿಢೀರನೆ ಬಂದ್ ಆಗಿದ್ದರಿಂದ, ಇಡೀ ಪಟ್ಟಣದ ಜನತೆ ಪೆಟ್ರೋಲ್‌ಗಾಗಿ ಪೆಟ್ರೋಲ್ ಸುಡುವ ಅನಿವಾರ್ಯತೆ ಸೃಷ್ಠಿಯಾಗಿತ್ತು. ಈಗ ಆ ಕರಾಳ ದಿನಗಳು ಮುಗಿದಿದ್ದು, ಸಾರ್ವಜನಿಕರ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಅರ್ಧ ವರ್ಷದಿಂದ ಹುಳಿಯಾರಿನ ವಾಹನ ಸವಾರರ ಸ್ಥಿತಿ ನಿಜಕ್ಕೂ ಶೋಚನೀಯವಾಗಿತ್ತು. ಕೇವಲ ಒಂದು ಲೀಟರ್ ಪೆಟ್ರೋಲ್ ಅಥವಾ ಡೀಸೆಲ್ ಬೇಕಿದ್ದರೂ ಮೂರು-ನಾಲ್ಕು ಕಿಲೋಮೀಟರ್ ದೂರದ ಬಂಕ್‌ಗಳಿಗೆ ಅಲೆಯಬೇಕಾದ ದುಸ್ಥಿತಿ ಇತ್ತು. ಇದು ಅನಗತ್ಯವಾಗಿ ಗ್ರಾಹಕರಿಗೆ ಜೇಬಿಗೆ ಕತ್ತರಿ ಬೀಳುವ ಜೊತೆಗೆ ಸಮಯ ವ್ಯರ್ಥವಾಗುತ್ತಿತ್ತು. ಹರಸಾಹಸ ಪಟ್ಟು ದೂರದ ಬಂಕ್‌ಗಳಿಗೆ ತಲುಪಿದರೆ ಅಲ್ಲಿಯೂ ಇಂಧನ ಖಾಲಿಯಾಗಿರುತ್ತಿದ್ದ ಸಂದರ್ಭಗಳಿದ್ದವು. ಇದರಿಂದಾಗಿ ವಾಹನಗಳನ್ನು ತಳ್ಳಿಕೊಂಡು ಬರುವ ಸವಾರರು, ಸಮಯಕ್ಕೆ ಸರಿಯಾಗಿ ಶಾಲೆ-ಕಾಲೇಜು ತಲುಪಲಾಗದ ವಿದ್ಯಾರ್ಥಿಗಳು…

Read More

ಹುಳಿಯಾರು: ಶತಮಾನಗಳ ಇತಿಹಾಸ ಹೊಂದಿರುವ ಪಟ್ಟಣದ ಎಂ.ಪಿ.ಎಸ್. (ಪ್ರಸ್ತುತ ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲಾ ಮೈದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಅವೈಜ್ಞಾನಿಕ ಕಟ್ಟಡ ನಿರ್ಮಾಣ ಕಾಮಗಾರಿಗಳ ವಿರುದ್ಧ ಕ್ರೀಡಾಭಿಮಾನಿಗಳು, ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೈದಾನದ ಉಳಿವಿಗಾಗಿ ಶನಿವಾರ ಶಾಲೆಯ ಪ್ರಾಂಶುಪಾಲರು ಹಾಗೂ ಮುಖ್ಯೋಪಾಧ್ಯಾಯರಿಗೆ ಮನವಿ ಪತ್ರ ಸಲ್ಲಿಸಿದರು. ಹುಳಿಯಾರು ಪಟ್ಟಣದ ಹೃದಯಭಾಗದಂತಿರುವ ಈ ಕೆ.ಪಿ.ಎಸ್. ಶಾಲಾ ಮೈದಾನ ಕೇವಲ ಒಂದು ಖಾಲಿ ಜಾಗವಲ್ಲ. ಇದು ಈ ಭಾಗದ ಮಕ್ಕಳ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಪೂರಕವಾಗಿರುವ ಅಮೂಲ್ಯ ಸಾರ್ವಜನಿಕ ಆಸ್ತಿಯಾಗಿದೆ. ದಶಕಗಳಿಂದಲೂ ಮಕ್ಕಳ ಕ್ರೀಡಾ ಚಟುವಟಿಕೆಗಳು, ಕ್ರಿಕೆಟ್, ಫುಟ್‌ಬಾಲ್, ವಾಲಿಬಾಲ್, ಅಥ್ಲೆಟಿಕ್ಸ್ ಪಂದ್ಯಾವಳಿಗಳು, ಎನ್‌ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರಗಳು ಇಲ್ಲಿಯೇ ನಡೆಯುತ್ತಾ ಬಂದಿವೆ. ಇದರೊಂದಿಗೆ ತಾಲೂಕು ಮಟ್ಟದ ಸಾಂಸ್ಕöÈತಿಕ ಕಾರ್ಯಕ್ರಮಗಳು, ಸ್ವಾತಂತ್ರ÷್ಯ ದಿನಾಚರಣೆ, ಗಣರಾಜ್ಯೋತ್ಸವ ಹಾಗೂ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪ, ರಾಮಕೃಷ್ಣ ಹೆಗ್ಗಡೆ, ಸಿದ್ದರಾಮಯ್ಯ ಅವರಂತಹ ಪ್ರಮುಖ ರಾಜಕೀಯ…

Read More

ತುಮಕೂರು: ಭಾರತೀಯ ಪುರಾಣಗಳ ನೈತಿಕ ಮೌಲ್ಯಗಳನ್ನು ಸಾರುವುದಕ್ಕೆ ಯಕ್ಷಗಾನ ತಾಳಮದ್ದಳೆ ಒಂದು ಸಶಕ್ತ ಮಾಧ್ಯಮ. ಅದು ನಮ್ಮ ಸಮಾಜದ ಅಂತಃಸತ್ವವನ್ನು ಬಲಗೊಳಿಸಬಲ್ಲುದು ಎಂದು ಉದ್ಯಮಿ ಡಾ. ಹೆಚ್.ಜಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು. ಯಕ್ಷದೀವಿಗೆ ಸಂಸ್ಥೆಯು ನಗರದ ಬಯಲಾಂಜನೇಯ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಯಕ್ಷಗಾನ ತಾಳಮದ್ದಳೆ ಪರಿಚಯ ಸರಣಿಯ ಮುಕ್ತಾಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಕ್ಷಗಾನ ಬಯಲಾಟವುಒಂದು ಪರಿಣಾಮಕಾರಿ ಸಂವಹನ ಮಾಧ್ಯಮ.ಅದರ ಇನ್ನೊಂದು ರೂಪವಾದ ತಾಳಮದ್ದಳೆಯು ಮೇಲ್ಮಟ್ಟದ ಜ್ಞಾನವನ್ನು ಜನಸಾಮಾನ್ಯರಿಗೆ ತಲುಪಿಸುವ ಸಾಮರ್ಥ್ಯವನ್ನು ಹೊಂದಿದೆ.ಕರಾವಳಿ, ಮಲೆನಾಡಿನ ಈ ಕಲೆ ಬಯಲು ಸೀಮೆಯಲ್ಲೂ ಪಸರಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಭಾರತೀಯ ಮಹಾ ಕಾವ್ಯಗಳು ಹಾಗೂ ಪುರಾಣಗಳು ಜ್ಞಾನ ಹಾಗೂ ನೈತಿಕ ಮೌಲ್ಯಗಳ ಆಗರಗಳು. ಸಮಕಾಲೀನ ಸಮಾಜಕ್ಕೆ ಬೇಕಾದ ಎಲ್ಲ ಶಿಕ್ಷಣ ಅವುಗಳಲ್ಲಿ ಹುದುಗಿಕೊಂಡಿದೆ.ಆಧುನಿಕತೆಯ ಮಧ್ಯೆ ಬದುಕುತ್ತಿರುವ ಜನರಿಗೆ ಯಕ್ಷಗಾನ ತಾಳಮದ್ದಳೆಗಳು ನಿರಾಳತೆಯನ್ನು ನೀಡುವುದು ಮಾತ್ರವಲ್ಲದೆ ದೈನಂದಿನ ಬದುಕಿನ ಮೌಲ್ಯಗಳನ್ನೂ ಉಣಬಡಿಸುತ್ತವೆ ಎಂದರು. ಯಕ್ಷದೀವಿಗೆ ಕೋಶಾಧಿಕಾರಿ ಡಾ.ಸಿಬಂತಿ ಪದ್ಮನಾಭ ಮಾತನಾಡಿ, ಯಕ್ಷಗಾನ ತಾಳಮದ್ದಳೆ ಲುಪ್ತ ನಾಟ್ಯ ಎಂದೇ ಪ್ರಸಿದ್ಧವಾಗಿದೆ. ನಾಟ್ಯ ಹಾಗೂ…

Read More