ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ ನಡೆಯಿತು. ರಥೋತ್ಸವದ ಅಂಗವಾಗಿ ಸೋಮವಾರ ಬೆಳಿಗ್ಗೆಯಿಂದಲೇ ಮಹಾಲಕ್ಷ್ಮೀ ಬೇಟರಾಯಸ್ವಾಮಿಗೆ ವಿಶೇಷ ಅಭಿಷೇಕ, ವಿವಿದ ಹೂ ಅಲಂಕಾರದಿ0ದ ಅಲಂಕರಿಸಿ ಹಲವು ಪೂಜೆ ನೆರವೇರಿಸಿ ದಾರ್ಮಿಕ ವಿಧಿ ವಿದಾನ ನೆಡೆಸಿದರು. ನಂತರ ನೆರೆಯ ದೇವರಾದ ಬೇಟರಾಯಸ್ವಾಮಿಯನ್ನು ಉತ್ಸವದ ಮೂಲಕ ಕರೆ ತಂದು ರಥಕ್ಕೆ ಕುರಿಸಿ ಮಹಾ ಮಂಗಾಳಾರತಿ ಮಾಡಲಾಯಿತು.. ರಥಕ್ಕೆ ಎಡೆ ಅನ್ನ ನೈವೇದ್ಯ ಪೂಜೆ ನೆರವೇರಿಸಿದ ನಂತರ ಆಕಾಶದಲ್ಲಿ ಗರಡು ದರ್ಶನ ನೀಡಿದ ನಂತರ ಭಕ್ತರು ಬಹಳ ಬಿರು ಬಿಸಲನ್ನು ಲೆಕ್ಕಿಸದೆ ಉತ್ಸಾಹದಿಂದ ರ ಥವನ್ನು ಎಳೆದರು. ಭಕ್ತ ಸಮೂಹ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಿದರು. ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ರ ಥೋತ್ಸವಕ್ಕೂ ಮುನ್ನಾ ಭಾರತೀಯ ಸಂಪ್ರದಾಯಿಕ ಉಡುಪು ದರಿಸಿದ್ದ ಮಹಿಳೆಯರಿಂದ ಕೋಲಾಟ, ಭಜನಾ ಕಾರ್ಯಕ್ರಮ ವಾದ್ಯಗೋಷ್ಟಿಗಳು ಭಕ್ತರ ಗಮನ ಸೆಳೆಯಿತು.…
Author: News Desk Benkiyabale
ತುಮಕೂರು: ಶುಶ್ರೂಷಕಿಯರ ಕೆಲಸ ಜಗತ್ತಿನಲ್ಲೇ ಬಹಳ ಅತ್ಯುತ್ತಮವಾದ ಕೆಲಸವಾಗಿದೆ, ಶುಶ್ರೂಷಕಿಯರು ನೀಡುವ ನಿಸ್ವಾರ್ತ ಸೇವಾಮನೋಭಾವ ಎಲ್ಲರೂ ಮೆಚ್ಚುವಂತಹ ಕೆಲಸವಾಗಿದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಟ್ರಷ್ಟಿಗಳಾದ ಶ್ರೀಮತಿ ಕನ್ನಿಕಾ ಪರಮೇಶ್ವರಿಯವರು ತಿಳಿಸಿದರು. ನಗರದ ಹೊರವಲಯದ ಅಗಲಕೋಟೆಯ ಶ್ರೀ ಸಿದ್ಧಾ ರ್ಥ ವೈದ್ಯಕೀಯ ಮಹಾವಿದ್ಯಾಲಯದ ಡಾ. ಹೆಚ್.ಎಂ ಗಂಗಾದರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಸಿದ್ಧಾರ್ಥ ನರ್ಸಿಂಗ್ ಕಾಲೇಜಿನ ಘಟಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶುಶ್ರೂಷಕಿಯರು ಪ್ರತಿನಿತ್ಯ ಅಧ್ಯಯನವನ್ನು ಮಾಡುತ್ತಾ ತಮ್ಮ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆಗಳ ಬಗ್ಗೆ ಅರಿಯುತ್ತಿರಬೇಕು. ತಮ್ಮ ಕೌಶಲ್ಯಗಳನ್ನು ಉತ್ತಮಗೊಳಿಸಿಕೊಳ್ಳುತ್ತಿರಬೇಕು. ಒಬ್ಬ ರೋಗಿ ಗುಣಮುಖವಾಗಲು ಶುಶ್ರೂಷಕಿಯ ಪಾತ್ರ ಬಹಳಾ ಮುಖ್ಯವಾಗಿರುತ್ತದೆ. ಶ್ರುಶ್ರೂಷಕಿಯರು ಮಾನವೀಯ ಗುಣಗಳನ್ನು ಬೆಳೆಸಿಕೊಂಡು ರೋಗಿಗಳಿಗೆ ಉತ್ತಮ ಸೇವೆಯನ್ನು ನೀಡಿದಾಗ ಮಾತ್ರ ತಾವು ಮಾಡುತ್ತಿರುವ ಕೆಲಸಕ್ಕೆ ಒಂದು ಬೆಲೆ ಸಿಕ್ಕಂತಾಗುತ್ತದೆ. ಶುಶ್ರೂಷಕಿಯರಿಗೆ ರೋಗಿಯೊಂದಿಗೆ ಉತ್ತಮ ಸಂವಹನ ನಡೆಸಲು ನಾಲ್ಕೆöÊದು ಭಾಷೆಯ ಅರಿವಿರಬೇಕು. ಇದರಿಂದ ರೋಗಿಯೊಂದಿಗೆ ಸ್ನೇಹ ಸಂಬ0ದ ಉತ್ತಮವಾಗಿ ರೋಗಿಯು ಗುಣಮುಖನಾಗುತ್ತಾನೆ ಎಂದು ತಿಳಿಸಿದರು. ಮುಖ್ಯ ಅಥಿತಿಗಳಾದ…
ತುಮಕೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವ ಹಿಸುತ್ತಿರುವ ಪೌರ ಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ನ್ನು ಕಡ್ಡಾಯವಾಗಿ ವಿತರಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ಪೌರ ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ವೇತನ ಸೌಲಭ್ಯ ನೀಡಬೇಕೆಂದು ಹೇಳಿದರು. ಪೌರ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಪ್ರತಿ ೩ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಲು ಕ್ರಮ ವಹಿಸಬೇಕು. ಮುಂದಿನ ಸಭೆಯಲ್ಲಿ ಆರೋಗ್ಯ ತಪಾಸಣೆ ವರದಿಯನ್ನು ನೀಡಬೇಕೆಂದು ನಿರ್ದೇಶನ ನೀಡಿದರು. ಹೊರ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾ ರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಿರುವ ಇಎಸ್ಐ, ಪಿಎಫ್ ಸೌಲಭ್ಯವನ್ನು ನೀಡಬೇಕು ಹಾಗೂ ಎಲ್ಲಾ ಪೌರಕಾ ರ್ಮಿಕರು ಕಡ್ಡಾಯವಾಗಿ ಜೀವ ವಿಮೆ ಮಾಡಿಸುವಂತೆ ಕ್ರಮವ ಹಿಸಬೇಕೆಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ…
ತುಮಕೂರು: ಬಲಿಜ ಸಮುದಾಯ ವ್ಯಾಪಾರ, ವ್ಯವಹಾರ, ರಾಜಕೀಯ ಕ್ಷೇತ್ರಗಳಲ್ಲಿ ಮುಂದಿದ್ದು, ಅತ್ಯಂತ ಸಂಘಟಿತ ಸಮುದಾಯವಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ಬಲಿಜ ಸಂಘ(ರಿ). ಆಯೋಜಿಸಿದ್ದ ಕಾಲಜ್ಞಾನಿ ಶ್ರೀಯೋಗಿ ನಾರೇಯಣ ಯತೀಂದ್ರರ ೩೦೦ನೇ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಸಮುದಾಯದ ಹಿರಿಯರ ಜಯಂತಿಗಳು ಜನರನ್ನು ಒಗ್ಗೂಡಿಸಲು ಸಹಕಾರಿಯಾಗಲಿವೆ ಎಂದರು. ಕೈವಾರ ತಾತಯ್ಯ ಮಹಾನ್ ಕಾಲಜ್ಞಾನಿಗಳು, ತಮ್ಮ ಆಧ್ಯಾತ್ಮ ಶಕ್ತಿಯಿಂದಲೇ ಇಹ, ಪರದ ಬಗ್ಗೆ ಅವಲೋಕಿಸಿ, ಭೂತ, ವರ್ತಮಾನ ಮತ್ತು ಭವಿಷ್ಯ ಕುರಿತು ನಿಖರವಾಗಿ ತಮ್ಮ ಕಾಲಜ್ಞಾನ ಕೃತಿಯಲ್ಲಿ ಬರೆದಿದ್ದಾರೆ.ಆವರ ಆದರ್ಶಗಳನ್ನು ನಾವುಗಳು ಪಾಲಿಸುವ ಮೂಲಕ ಸಮಾಜದಲ್ಲಿ ಬೆಳೆಯಬೇಕಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗುತಿದ್ದು, ಅದಕ್ಕೆ ತಕ್ಕಂತೆ ನಾವುಗಳು ಬದಲಾಗುವ ಮೂಲಕ ಇಂದಿನ ಪೈಪೊಟಿ ಯುಗಕ್ಕೆ ನಮ್ಮ ಮಕ್ಕಳನ್ನು ಸಜ್ಜುಗೊಳಿಸಬೇಕಾಗಿದೆ ಎಂದು ಜಿ.ಬಿ.ಜೋತಿಗಣೇಶ್ ತಿಳಿಸಿದರು. ಬಿಜೆಪಿ ಓಬಿಸಿ ಮೋರ್ಚಾ ಕಾರ್ಯಕಾರಿಣಿ…
ತುಮಕೂರು: ತಾಲ್ಲೂಕಿನ ಬೆಳ್ಳಾವಿಯಲ್ಲಿ ಸೋಮವಾರ ಇತಿಹಾಸ ಪ್ರಸಿದ್ಧ ಪ್ರಸನ್ನ ಜಗದಾಂಬ ಸಮೇತ ಸೋಮೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ವೈಭವದಿಂದ ನೆರವೇರಿತು. ಅಲಂಕೃತ ರಥದಲ್ಲಿ ದೇವರುಗಳನ್ನು ಪ್ರಷ್ಠಾಪಿಸಿ, ಪೂಜೆ ಸಲ್ಲಿಸಿ ಮಂಗಳವಾದ್ಯಗಳೊ0ದಿಗೆ ರಥೋತ್ಸವ ನೆರವೇರಿತು. ಭಕ್ತರು ರಥ ಎಳೆದು ಭಕ್ತಿ ಸಮರ್ಪಿಸಿದರು. ಬೆಳ್ಳಾವಿ ಹಾಗೂ ಸುತ್ತಮುತ್ತಲ ಗ್ರಾಮಗಳ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ರಥೋತ್ಸವದ ಅಂಗವಾಗಿ ಬೆಳ್ಳಾವಿಯ ವಿವಿಧೆಡೆ ಕೊಪ್ಪಲುಗಳಲ್ಲಿ ಭಕ್ತರಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು. ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಟಿ.ಸಿ.ಪ್ರಭಾಕರ್ ಅವರು ಇಲ್ಲಿನ ನಿಧಿಶ್ರೀ ಫಾರಂನಲ್ಲಿ ಏರ್ಪಡಿಸಿದ್ದ ಅನ್ನದಾಸೋಹ ಸೇವೆಯನ್ನು ಬೆಳ್ಳಾವಿ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ ಉದ್ಘಾಟಿಸಿದರು. ಈ ವೇಳೆ ಮಾತಾಡಿದ ಸ್ವಾಮೀಜಿ, ಅನ್ನದಾಸೋಹ ಶೇಷ್ಠ ಸೇವೆ. ಹಸಿದವರಿಗೆ ಅನ್ನ ನೀಡುವುದು ನಮ್ಮ ಸಂಸ್ಕೃತಿ. ಮಠಮಾನ್ಯಗಳನ್ನು ಆಗಿನಿಂದಲೂ ದಾಸೋಹ ಪರಂಪರೆ ಅನುಸರಿಸಿಕೊಂಡು ಸಮಾಜಕ್ಕೆ ಮಾದರಿಯಾಗಿವೆ. ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳು ಆರಂಭಿಸಿದ ಅಕ್ಷರ, ಅನ್ನ, ಆಶ್ರಯದ ತ್ರಿವಿಧ ದಾಸೋಹ ಆದರ್ಶವಾಗಿದೆ. ಸರ್ಕಾರ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ…
ತುಮಕೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಹು ದಿನಗಳಿಂದ ಖಾಲಿಯಿರುವ ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ತುಮಕೂರಿನಲ್ಲಿ ಸೋಮವಾರ ನಡೆಯಿತು. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ ಸಹಯೋಗದಲ್ಲಿ ಸೋಮವಾರ ತುಮಕೂರು ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಆಯೋಗದ ಅಧ್ಯಕ್ಷ ಪಿ. ರಘು ಅವರು ನಗರಸಭೆ, ಪುರಸಭೆ ಸೇರಿದಂತೆ ಇತರೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದಾಗ್ಯೂ ಈವರೆಗೆ ಪೌರ ಕಾರ್ಮಿಕರ ಹುದ್ದೆ ಭರ್ತಿಗೆ ಮುಂದಾಗದ ಅಧಿಕಾರಿಗಳ ವರ್ತನೆ ಬೇಜವಾಬ್ದಾರಿಯಿಂದ ಕೂಡಿದೆ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದರು. ಸರ್ಕಾರದ ಆದೇಶ ಪೌರ ಕಾರ್ಮಿಕರ ಬಳಿಯಿದೆ. ಆದರೆ ಸಂಬ0ಧಿಸಿದ ನಗರ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳ ವಿಳಂಬಧೋರಣೆ…
ತುಮಕೂರು: ಆರ್ಥಿಕ ಸಬಲೀಕರಣದ ಮೂಲಕ ವಿಕಲಚೇತನರು ಸ್ವಾವಲಂಬಿಗಳಾಗಿ ಬಾಳಲು ಅವಕಾಶ ಕಲ್ಪಿಸಬೇಕು. ವಿಕಲಚೇತನರಿಗೆ ಜಾತಿಬೇಧವಿಲ್ಲ, ರಾಜ್ಯದಲ್ಲಿ ಸುಮಾರು ೧೨ ಲಕ್ಷಕ್ಕೂ ಅಧಿಕ ವಿಕಲಚೇತನರಿದ್ದಾರೆ. ಇವೆಲ್ಲರು ಆರ್ಥಿಕ ಚಟುವಟಿಕೆ ನಡೆಸಲು ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಈ ಬಗ್ಗೆ ಶಾಸಕರುಗಳ ಮೂಲಕ ಸರ್ಕಾರದ ಮೇಲೆ ಒತ್ತಡ ತರುವಂತೆ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ಮಾಡಿದರು. ತಿಪಟೂರು ಕಾರ್ಯಕ್ರಮ ಮುಗಿಸಿ ಭಾನುವಾರ ಜಿಲ್ಲಾ ಅಂಗವಿಕಲರ ಸಂಘದ ಅಧ್ಯಕ್ಷ ಗಂಗರಾಜು ಅವರ ತುಮಕೂರಿನ ರಿಂಗ್ ರಸ್ತೆಯಲ್ಲಿರುವ ನಿವಾಸದಲ್ಲಿ ಸೇರಿದ್ದ ವಿಕಲಚೇತನರ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ವಿಕಲಚೇತನರಿಗೆ ವಿಶೇಷ ಅವಕಾಶಗಳನ್ನು ಕಲ್ಪಿಸಿ ಅವರು ಸ್ವಾಭಿಮಾನದಿಂದ ಬಾಳುವಂತಹ ಅವಕಾಶ ಕಲ್ಪಿಸಬೇಕು ಎಂಬುದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಳಕಳಿ. ತಮ್ಮ ಅಧಿಕಾರವಧಿಯಲ್ಲಿ ಸುಮಾರು ಆರು ಲಕ್ಷ ವಿಕಲಚೇತನರಿಗೆ ವಿವಿಧ ರೀತಿಯ ಉದ್ಯೋಗ ಕಲ್ಪಿಸಲು ಕಾರಣರಾದರು. ಇವತ್ತಿಗೂ ವಿಕಲಚೇತನರ ಸಮಸ್ಯೆಗಳಿಗೆ ಕಾಳಜಿಯಿಂದ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು. ವಿಕಲಚೇತನರು ಯಾರಿಗೂ ಹೊರೆಯಾಗಬಾರದು,…
ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಸಮರ್ಪಕವೆಂದು ತೀವ್ರ ಟೀಕೆ ಮಾಡಿದ ಒಂದು ದಿನದೊಳಗೆ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಶನಿವಾರ ಪಾವಗಡಕ್ಕೆ ದೌಡಾಯಿಸಿ ಹಲವು ಇಲಾಖೆಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು. ರೊಪ್ಪ ಗ್ರಾಮದ ಬಳಿಯಿರುವ ಕುಡಿಯುವ ನೀರಿನ ಓವರ್ಹೆಡ್ ಟ್ಯಾಂಕ್ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಅಲ್ಲಿ ಕಂಡ ಅಸ್ವಚ್ಛತೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಗ್ರಾಮ ಪಂಚಾಯ್ತಿ ಪಿಡಿಒ ವಿಜಯ್ ಕುಮಾರ್ ಹಾಗೂ ಪುರಸಭೆಯ ಆರೋಗ್ಯ ನಿರೀಕ್ಷಕ ಶಂಸುದ್ದೀನ್ ಅವರನ್ನು ತರಾಟೆ ತೆಗೆದುಕೊಂಡರು. ನAತರ ಪಟ್ಟಣದ ನಾಗರಕಟ್ಟೆ ಸಮೀಪದ ಹಳೆಯ ಪಂಪ್ಹೌಸ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿ ಬರುತ್ತಿದ್ದ ತುಂಗಭದ್ರ ಕುಡಿಯುವ ನೀರನ್ನು ಸ್ವತಃ ಕುಡಿದು ನೀರಿನ ಗುಣಮಟ್ಟವನ್ನು ಪರಿಶೀಲಿಸಿದರು. ಆಶ್ರಯ ಬಡಾವಣೆಗೆ ತೆರಳಿ ಮನೆ ಮನೆಗೆ ನೀರು ಸರಬರಾಜು ಮಾಡುವ ಪೈಪ್ಲೈನ್ ವ್ಯವಸ್ಥೆ ಹಾಗೂ ನೀರಿನ ಗುಣಮಟ್ಟದ ಕುರಿತು ನಾಗರಿಕರಿಂದ ನೇರ ಮಾಹಿತಿ ಪಡೆದರು. ಶಾರದ ವಿದ್ಯಾಪೀಠ ಶಾಲೆಯಲ್ಲಿ…
ತುಮಕೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಸಮರ್ಪಕ ನೀರು ಸರಬರಾಜು ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಅವರು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತಿಯಲ್ಲಿ ಶುಕ್ರವಾರ ನಡೆದ ಶಿರಾ ಮತ್ತು ಪಾವಗಡ ತಾಲ್ಲೂಕುಗಳಿಗೆ ಸಂಬ0ಧಿಸಿದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ(ದಿಶಾ)ಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಸುಮಾರು ೨೨೦೦ ಕೋಟಿ ರೂ. ವೆಚ್ಚದಲ್ಲಿ ಪಾವಗಡ ತಾಲ್ಲೂಕಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಿ ಅನುಷ್ಠಾನಗೊಳಿಸಿದ್ದರೂ ತಾಲ್ಲೂಕಿನ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಆಗುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ. ಕುಡಿಯುವ ನೀರಿನ ಯೋಜನೆ ಸರಬರಾಜು ಮಾಡಲು ಜವಾಬ್ದಾರಿ ವಹಿಸಿಕೊಂಡಿರುವ ಏಜೆನ್ಸಿ ಹಾಗೂ ಸಂಬAಧಿಸಿದ ಇಲಾಖೆಗಳ ಅಸಮರ್ಪಕ ನಡೆಯಿಂದ ಕುಡಿಯುವ ನೀರು ಸರಬರಾಜಿನಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಈ ಸಂಬAಧ ಮಧುಗಿರಿ ಉಪವಿಭಾಗಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು. ತಮ್ಮ…
ನಗರದ ಧ್ಹಾನಾ ಪ್ಯಾಲೇಸ್ನಲ್ಲಿ ತಹರೀಕ್ ಉರ್ದು- ಅದಬ್,ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಕರು ಎಂಬ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಶಾಲೆಯ ಶಿಕ್ಷಕರು ಒಂದು ಮಾದರಿ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡರೆ, ಮಕ್ಕಳು ತಾನಾಗಿಯೇ ಶಾಲೆಗಳಿಗೆ ಪ್ರವೇಶ ಪಡೆಯುತ್ತಾರೆ.ಇಂದಿನ ಅಗತ್ಯಕ್ಕೆ ಅನುಗುಣವಾಗಿ, ಜ್ಞಾನದ ಜೊತೆಗೆ,ಮಾನವೀಯ ಗುಣಗಳನ್ನು ಕಲಿಸುವತ್ತ ಶಿಕ್ಷಕರು ಮುಂದಾಗಬೇಕೆ0ದರು. ಉರ್ದು ಒಂದು ಸುಂದರ ಭಾಷೆ, ಭಾರತದಲ್ಲಿಯೇ ಹುಟ್ಟಿ, ವಿದೇಶದಲ್ಲಿ ಹೆಚ್ಚು ಪ್ರಚಲಿತದಲ್ಲಿದೆ.ಉರ್ದು ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಉರ್ದು ಸಾಹಿತ್ಯವನ್ನು ಓದುವಂತೆ ಶಾಲೆಯ ಶಿಕ್ಷಕರುಗಳು ಪ್ರೇರೆಪಿಸಬೇಕಾಗಿದೆ. ಆ ಮೂಲಕ ಮಕ್ಕಳು ಮೊಬೈಲ್ ಬಿಟ್ಟು,ಪುಸ್ತಕ ಓದುವ ಸಂಸ್ಕೃತಿಯನ್ನು ಪ್ರೋತ್ಸಾಹಿಸಬಹುದಾಗಿದೆ.ಉರ್ದುವಿನಲ್ಲಿ ಹೇರಳವಾದ ಸಾಹಿತ್ಯ ಬಂಡಾರವಿದೆ.ಅದನ್ನು ಶಿಕ್ಷಕರು ಮಕ್ಕಳಿಗೆ ಪರಿಚಯಿಸಿದರೆ, ಅವರ ಭವಿಷ್ಯ ಉಜ್ವಲವಾಗುವುದರ ಜೊತೆಗೆ,ಮಾನವ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಡಿಡಿಪಿಐ ರಘುಚಂದ್ರ ತಿಳಿಸಿದರು. ಉರ್ದು ಶಾಲೆಗಳು ಪ್ರಮುಖವಾಗಿ ಶಿಕ್ಷಕರ ಕೊರತೆ ಎದುರಿಸುತ್ತಿದೆ.ಬಹುತೇಕ ಅತಿಥಿ ಉಪನ್ಯಾಸಕರಿಂದ ಶಾಲೆಗ ಳಲ್ಲಿ ಪಾಠ ಪ್ರವಚನ ನಡೆಯುತ್ತಿವೆ.ಉತ್ತಮ ಫಲಿತಾಂಶದ ಹಿನ್ನೆಲೆಯಲ್ಲಿ ಸ್ವಲ್ಪ ಒತ್ತಡ ಹಾಕಿದರೂ ಕೆಲಸಕ್ಕೆ ಬರುವುದಿಲ್ಲ.ಹಾಗಾಗಿ…











