Author: News Desk Benkiyabale

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಪ್ರಗತಿ ಪರ ಚಿಂತಕ ದೊರೈರಾಜು ಅಭಿಪ್ರಾಯಪಟ್ಟರು. ನಗರದಲ್ಲಿ ಮಾದಿಗ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಮೊದಲಿನಿಂದಲೂ ಬಡವರು, ಅಸಹಾಯಕರ ಹೋರಾಟಕ್ಕೆ ಧ್ವನಿಯಾಗಿದ್ದಾರೆ, ಸಾಮಾನ್ಯರೊಂದಿಗೆ ಬೆರೆ ಯುವ ಅಸಾಮಾನ್ಯಗುಣವನ್ನು ಹೊಂದಿರುವ ಕೆ.ಎನ್.ರಾಜಣ್ಣ ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲದಂತಹ ವ್ಯಕ್ತಿತ್ವದವರು ಎಂದರು. ಸಹಕಾರಿ ತತ್ವವನ್ನೇ ಉಸಿರಾಗಿಸಿಕೊಂಡು ಸಹಕಾರ ರಂಗದಲ್ಲಿ ಶೋಷಿತ ಸಮುದಾಯವನ್ನು ಗುರುತಿಸಿ, ಬೆಳೆಸಿ ರುವ ಕೆ.ಎನ್.ರಾಜಣ್ಣ ಅವರು ಸಹಕಾರಿ ರಂಗದಲ್ಲಿಯೂ ಮೀಸಲಾತಿಯನ್ನು ತರುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದ್ದು, ದಲಿತ ಸಂಘಟನೆಗಳು ಹಾಗೂ ಯುವ ಸಮುದಾಯ ಅಮೃತ ಮಹೋತ್ಸವದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಸರ್ಕಾರಿ ಎಸ್ಸಿ,ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯ ಗೌರವಾಧ್ಯಕ್ಷ ಡಾ. ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ, ಶೋಷಿತ ಸಮುದಾಯದ ಮುಖಂಡರಾಗಿರುವ ಕೆ.ಎನ್.ರಾಜಣ್ಣ ಅವರಿಗೆ ಪರ್ಯಾಯ ನಾಯಕರಿಲ್ಲ, ಸಣ್ಣ, ಪುಟ್ಟ…

Read More

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ೭೫ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಸ್ಮರಣಾರ್ಥ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ವೃಕ್ಷಮಿತ್ರ ಸಂಸ್ಥೆಯಿAದ ಶುಕ್ರವಾರ ಬಿದರೆಕಟ್ಟೆಯ ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್‌ನಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸೇರಿ ಗಿಡ ನೆಟ್ಟ ಮುಖಂಡರು ಸಚಿವ ಕೆ.ಎನ್.ರಾಜಣ್ಣನವರು ಜಿಲ್ಲೆಗೆ ಕೊಟ್ಟ ಕೊಡುಗೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಒಕ್ಕೂಟದ ಅಧ್ಯಕ್ಷ ಧನಿಯಾಕುಮಾರ್ ಮಾತನಾಡಿ, ವಿದ್ಯಾರ್ಥಿಗಳೊಂದಿಗೆ ಗಿಡನೆಡುವ ಮೂಲಕ ಅವರಲ್ಲಿ ಪರಿಸರ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗಿದೆ. ಹಸಿರೇ ಉಸಿರು, ಹಸಿರಿಲ್ಲದೆ ಉಸಿರಿಲ್ಲ ಎನ್ನವಂತೆ ಉಸಿರಾಡುವ ಆಮ್ಲಜನಕ ಪಡೆಯಲು ಗಿಡಮರ ಬೆಳೆಸಿ ಪರಿಸರ ಸಮತೋಲನ ಕಾಪಾಡಬೇಕು ಎಂದು ಹೇಳಿದರು. ಹಸಿರು ನಾಶವಾಗಿ ಪಕ್ಷಿ ಸಂಕುಲ ಕಣ್ಮರೆಯಾಗುತ್ತಿರುವ ಸಂದರ್ಭದಲ್ಲಿ ಪಕ್ಷಿಗಳಿಗೆ ಸಹಾಯವಾಗಲೆಂದು ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡಲಾಗಿದೆ. ಸಚಿವ ಕೆ.ಎನ್.ರಾಜಣ್ಣನವರ ನೆನಪಿನಲ್ಲಿ ನೆಟ್ಟ ಗಿಡಗಳು ಹೆಮ್ಮರವಾಗಿ ಬೆಳೆಯುತ್ತವೆ. ಆ ಮರಗಳು ವಿದ್ಯಾರ್ಥಿಗಳಿಗೆ ಕೆ.ಎನ್. ರಾಜಣ್ಣನವರ ಸಾಧನೆ, ಅವರ ನಾಯಕತ್ವಗುಣ ಪ್ರೇರಣೆಯಾಗಲಿ ಎಂದು ಧನಿಯಾಕುಮಾರ್ ಆಶಿಸಿದರು.…

Read More

ಶಿರಾ: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಬಲಗೊಳಿಸಲು ಕ್ಷೇತ್ರಗಳ ಪ್ರವಾಸ ಮಾಡುವುದರ ಜೊತೆಗೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಹಗರಣ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜೆಡಿಎಸ್ ಕಾರ್ಯಕರ್ತರು ಎಲ್ಲಾ ಬೂತ್ ಗಳಲ್ಲೂ ಸದಸ್ಯತ್ವ ನೊಂದಣಿ ಮಾಡಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ದರಾಗಿ ಎಂದು ರಾಜ್ಯ ಯುವ ಜೆಡಿಎಸ್ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದರು. ಗುರುವಾರದಂದು ಶಿರಾ ನಗರದ ಸಿರಿಗಂಧ ಪ್ಯಾಲೇಸ್ ನಲ್ಲಿ ನಡೆದ ಜೆಡಿಎಸ್ ಸದಸ್ಯತ್ವ ನೊಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ಪಕ್ಷಗಳು ರಾಜ್ಯದ ಸಮಸ್ಯೆಗಳ ಬಗ್ಗೆ ಗಮನ ನೀಡುವುದಿಲ್ಲ ಆದುದರಿಂದ ರಾಜ್ಯದ ನಾಡು, ನುಡಿ ,ಜಲ ಉಳಿಯಬೇಕಾದರೆ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿರಬೇಕು, ಕರ್ನಾಟಕದ ಭದ್ರತೆಗೆ ಜೆಡಿಎಸ್ ಪಕ್ಷದ ಅನಿವಾರ್ಯತೆ ಇದೆ ಎಂದು ತಿಳಿಸಿ ದರು. ಚುನಾವಣೆಯಲ್ಲಿ ಸೋಲು ಹಾಗೂ ಗೆಲುವು ಸಾಮಾನ್ಯ ಆದರೆ ಸೋತವರು ಮನೆಯಲ್ಲಿ ಕೂರದೆ ಸಮಾಜಮುಖಿಯಾಗಿ…

Read More

ತುರುವೇಕೆರೆ: ಜೆಡಿಎಸ್ ಕಾರ್ಯಕರ್ತರು ಪಕ್ಷದ ಮೇಲೆ ಇಟ್ಟಿರುವ ನಂಬಕೆ ಆಶೀರ್ವಾದ ಇರುವರೆವಿಗೂ ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ ಎಂದು ಎಂದು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ತಿಳಿಸಿದರು. ಪಟ್ಟಣದ ಚೌದ್ರಿ ಕನ್ವೇಷನ್ ಹಾಲ್ ನಲ್ಲಿ ತಾಲೂಕು ಜೆಡೆಎಸ್ ಪಕ್ಷದಿಂದ ಆಯೋಜಿಸಿದ್ದ ಜನರೊಂದಿಗೆ ಜನತಾಧಳ ಹಾಗೂ ಸದಸ್ಯತ್ವ ನೊಂದಣಿ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ನಿಷ್ಟಾವಂತ ಕಾರ್ಯಕರ್ತರ ಪಕ್ಷ ಜೆಡಿಎಸ್ ಪಕ್ಷ, ಗ್ರಾಮೀಣ ಭಾಗದಲ್ಲಿ ಇರುವ ಪಕ್ಷಕ್ಕೆ ಜೆಡಿಎಸ್ ಕಾರ್ಯಕರ್ತರೇ ಆದಾರ ಸ್ಥಂಬ, ನಿಮ್ಮಗಳ ಬೆಂಬಲ ಪ್ರೋತ್ಸಾಹದಿಂದ ಇನ್ನು ಸಹ ಗಟ್ಟಿಯಾಗಿ ನಿಂತಿದೆ. ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಲಹೆ ಸೂಚನೆಯಂತೆ ರಾಜ್ಯದಲ್ಲಿ ಪಕ್ಷ ಸಂಘಟನೆಗಾಗಿ ನಿಮ್ಮಗಳ ಜೊತೆ ಬಂದಿದ್ದೇನೆ. ನಾನು ಜೆಡಿಎಸ್ ಪಕ್ಷ ರಾಜ್ಯಾದ್ಯಕ್ಷರಾಗಿ ಅದಿಕಾರ ಸ್ವೀಕರಿಸಲು ರಾಜ್ಯ ಸುತ್ತುತ್ತಿದ್ದಾರೆ ಎಂಬ ಆರೋಪಗಳನ್ನು ಕಾಂಗ್ರೇಸ್ ನವರು ಮಾಡುತ್ತಿದ್ದಾರೆ. ನಾನು ರಾಜ್ಯಾದ್ಯಕ್ಷ ಹುದ್ದೆ ಅಕಾಂಕ್ಷಿ ಅಲ್ಲ ಸಮಾನ್ಯ ಕಾರ್ಯಕರ್ತನಾಗಿ ರಾಜ್ಯ ಸುತ್ತಿ…

Read More

ತುಮಕೂರು: ವಕೀಲರಾಗಿ ವೃತ್ತಿ ಆರಂಭಿಸಿ, ಕ್ಯಾತ್ಸಂದ್ರ್ ಟಿಎಪಿಸಿಎಂಎಸ್‌ನ ಸದಸ್ಯರಾಗುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಕಾಲಿಟ್ಟ ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃ ಎನಿಸಿಕೊಂಡಿದ್ದಾರೆ. ಇಂದು ನಡೆಯುವ ಅವರ ೭೫ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ವಕೀಲರು ಸಮವಸ್ತçದಲ್ಲಿ ಭಾಗವಹಿಸುವಂತೆ ಸಮಾನ ಮನಸ್ಕ ವಕೀಲರ ಬಳಗದ ಪರವಾಗಿ ಹಿರಿಯ ವಕೀಲರಾದ ಪಾತಣ್ಣ ಮನವಿ ಮಾಡಿದ್ದಾರೆ. ಇಂದು ಖಾಸಗಿ ಹೊಟೇಲ್ ನಲ್ಲಿ ನಡೆದ ಸಮಾನ ಮನಸ್ಕ ವಕೀಲ ಸಭೆಯಲ್ಲಿ ಮಾತನಾಡಿದ ಅವರು, ೧೯೫೧ರ ಏಪ್ರಿಲ್ ೧೩ ರಂದು ಜನಿಸಿದ ಕೆ.ಎನ್.ರಾಜಣ್ಣ,ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವದ ಗುಣ ಬೆಳೆಸಿಕೊಂಡವರು, ತುಳಿತಕ್ಕೆ ಒಳಗಾದ ಜನರ ಪರವಾಗಿ ದ್ವನಿ ಎತ್ತುವ ನಾಯಕರಲ್ಲಿ ಮೊದಲಿಗರು.ಕರೋನ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ವಕೀಲರಿಗೆ ಶೂನ್ಯ ಬಡ್ಡಿದರದಲ್ಲಿ ಡಿಸಿಸಿ ಬ್ಯಾಂಕಿನಿAದ ಸಾಲ ನೀಡಿ,ಜೀವನ ನಿರ್ವಹಣೆಗೆ ಸಹಕಾರಿಯಾಗಿದ್ದಾರೆ. ಹಾಗಾಗಿ ಅವರ ಕಾರ್ಯಕ್ರಮದಲ್ಲಿ ವಕೀಲರು ಸ್ವಯಂ ಪ್ರೇರಿತರಾಗಿ ವಕೀಲರ ಧೀರಿಸಿನಲ್ಲಿಯೇ ಪಾಲ್ಗೊಂಡರೆ ಕಾರ್ಯಕ್ರಮಕ್ಕೆ ಹೆಚ್ಚಿನ ಕಳೆ ಕಟ್ಟಿದಂತಾಗುತ್ತದೆ ಎಂದರು. ವಕೀಲರು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಜಿ.ಲಿಂಗರಾಜು ಮಾತನಾಡಿ,ಜನಪ್ರಿಯ ನಾಯಕರಾಗಿ ಕೆಎನ್‌ಆರ್…

Read More

ತುಮಕೂರು: ಮುಂದಿನ ದಿನಗಳಲ್ಲಿ ನನಗೆ ಯಾವ ಅಧಿಕಾರವೂ ಬೇಡ, ಐಶ್ವರ್ಯವೂ ಬೇಡ. ಜನ ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದಿಲ್ಲಿ ಹೇಳಿದರು. ಕ್ಯಾತ್ಸಂದ್ರದ ಚಂದ್ರಮೌಳೀಶ್ವರ ದೇವಾಲಯಕ್ಕೆ ತೆರಳುವ ಮುನ್ನ ಸರ್ಕಲ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲ ವರ್ಗದ ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ ಎಂದು ಅವರು ಹೇಳಿದರು. ಎಲ್ಲ ವರ್ಗದ ಜನರು, ಎಲ್ಲ ಪಕ್ಷದವರು ಸೇರಿ ಈ ಸಮಾರಂಭದ ಯಶಸ್ಸಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಕೇಳಿದ್ದೇನೆ. ಇದರಿಂದ ನನಗೆ ತುಂಬಾ ಸಂತೋಷವಾಗುತ್ತಿದೆ. ಮುಂದಿನ ದಿನಗಳಲ್ಲಿ ನನಗೆ ಯಾವ ಅಧಿಕಾರ, ಐಶ್ವರ್ಯ ಬೇಡ. ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸವನ್ನು ನಾನು ಸಾಯುವವರೆಗೂ ಉಳಿಸಿಕೊಂಡು ಹೋದರೆ ಸಾಕು. ಮುಂದಿನ ಆಶಯ ಏನೂ ಇಲ್ಲ ಎಂದು ತಿಳಿಸಿದರು. ರಾಜ್ಯಮಟ್ಟದಲ್ಲಿ ಕ್ಯಾತ್ಸಂದ್ರ ರಾಜಣ್ಣ ಎಂದು ಗುರುತಿಸುವ ಅವಕಾಶ ಕ್ಯಾತ್ಸಂದ್ರದ ಜನರಿಂದ ನನಗೆ ದೊರೆತಿದೆ…

Read More

ತುರುವೇಕೆರೆ: ಜಾತಿ ನಿಂದನೆ ಕಾಯಿದೆಯನ್ನು ತಾಲೂಕಿನ. ಕೆಲವು ದಲಿತ ಮುಖಂಡರು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆಂದು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ದಂಡಿನಶಿವರ ಕುಮಾರ್ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ತಾಲೂಕಿನಲ್ಲಿ ಕೆಲವು ದಲಿತ ಮುಖಂಡರು ಎನಿಸಿಕೊಂಡಿರುವ ದಲಿತರ ಪರ ಇರುವ ಕಾನೂನನ್ನು ದುರುಪಯೋಗಪಡಿಸಿಕೊಂಡು ಸಮಾಜದಲ್ಲಿ ವೈರತ್ವ ತಂದು ಹಾಕಿದ್ದಾರೆ. ಹೊಟ್ಟೆಪಾಡಿಗಾಗಿ ಇಲ್ಲದ ದೂರನ್ನು ಪೊಲೀಸ್ ಠಾಣೆಯಲ್ಲಿ ನೀಡುವ ಮೂಲಕ ಶೋಷಿತರಿಂದ ಹಣ ವಸೂಲಿ ಮಾಡುವ ದಂದೆಗೆ ಇಳಿದಿದ್ದಾರೆ ಎಂದರು. ಮಾಚೇನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಾಳಿಕಾಂಬ ಸಂಘದ ಹಣಕಾಸಿನ ವಿಚಾರದಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಸಂಘದ ಸದಸ್ಯೆ ಮಂಜುಳಾ ಎಂಬುವರಿAದ ಕೆಲವು ದಲಿತ ಮುಖಂಡರೆನೆಸಿಕೊAಡಿರುವವರು ಉದ್ದೇಶಪೂರ್ವಕವಾಗಿ ಮಂಜುಳರವರನ್ನು ಎತ್ತಿಕಟ್ಟಿ ಸಂಘದ ಸದಸ್ಯರು ಮತ್ತು ಅಧಿಕಾರಿಗಳ ವಿರುದ್ಧ ದುರುದ್ದೇಶಪೂರ್ವಕವಾಗಿ ಜಾತಿ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು. ಹಿರಿಯ ದಲಿತ ಮುಖಂಡ ಮುನಿಯೂರು ರಂಗಸ್ವಾಮಿ ಮಾತನಾಡಿ ತಾಲೂಕಿನಲ್ಲಿ…

Read More

ತುಮಕೂರು: ತನ್ನ ಅಸ್ತಿತ್ವಕ್ಕಾಗಿ ಪಂಚ ಗ್ಯಾರಂಟಿಗಳನ್ನು ನೀಡಿದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಸಮಸ್ಯೆಗಳನ್ನು ಬಗೆಹರಿಸಿ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬುಕ್ಕಾಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ತೆರಿಗೆ ಹಣವನ್ನು ಸ್ವೇಚ್ಛಾಚಾರವಾಗಿ ಬಳಸಿಕೊಳ್ಳುತ್ತಿದೆ. ಇನ್ನೊಂದೆಡೆ ಮಂತ್ರಿಗಳು ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡು ಜೈಲಿಗೆ ಹೋಗುತ್ತಿದ್ದಾರೆ ಎಂದು ಅವರು ದೂರಿದರು. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಅಳವಡಿಸುವ ವಿದ್ಯುತ್ ಪರಿವರ್ತಕಗಳ ಬೆಲೆಯನ್ನು ೨.೫ ಲಕ್ಷಕ್ಕೆ ಏರಿಸಿದ್ದಾರೆ. ಇದನ್ನು ಗಮನಿಸಿದರೆ ರೈತರ ಮೇಲೆ ಈ ಸರ್ಕಾರಕ್ಕೆ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದರು. ಮುAಬರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಸಂಘಟಿಸಲು ೫೮ ದಿನಗಳ ಕಾಲ ಪ್ರವಾಸವನ್ನು ಕೈಗೊಂಡಿದ್ದೇವೆ. ಡಿಸೆಂಬರ್ ತಿಂಗಳಲ್ಲಿ…

Read More

ತುಮಕೂರು: ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಭದ್ರತೆಯನ್ನು ಒದಗಿಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಕೈಗಾರಿಕೋದ್ಯಮಿಗಳು ಭರವಸೆ ನೀಡಿದರು. ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ತೆಯ ಸಭಾಂಗಣದಲ್ಲಿ ಜರುಗಿದ ಕೈಗಾರಿಕೋದ್ಯಮಿಗಳ ಕುಂದು ಕೊರತೆಗಳು ಹಾಗೂ ಬೇಡಿಕೆಗಳ ಮನವಿ ಕುರಿತ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು. ಕೈಗಾರಿಕೋದ್ಯಮಿಗಳು ಮತ್ತು ಪೊಲೀಸರ ನಡುವೆ ಸದಾ ಸಮನ್ವಯತೆ ಇರಬೇಕು. ಕೈಗಾರಿಕಾ ಪ್ರದೇಶಗಳಲ್ಲಿ ರೌಡಿಗಳು, ಗೂಂಡಾಗಳು, ಹಫ್ತಾ ವಸೂಲಿ, ಬ್ಲಾಕ್‌ಮೇಲ್ ಮಾಡುವಂತಹ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕೈಗಾರಿಕಾ ಪ್ರದೇಶಗಳಿಗೆ ಭದ್ರತೆ ಹಾಗೂ ಸುರಕ್ಷತೆಗಾಗಿ ನಮ್ಮ ಇಲಾಖೆ ಸನ್ನದ್ದವಾಗಿದ್ದು, ಇದಕ್ಕೆ ತಮ್ಮೆಲ್ಲರ ಸಹಕಾರ ಅತ್ಯಂತ ಅವಶ್ಯಕ ಎಂದು ಅವರು ಹೇಳಿದರು. ಹಿರೇಹಳ್ಳಿ, ಅಂತರಸನಹಳ್ಳಿ ಮತ್ತು ಸತ್ಯಮಂಗ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ಮಾಡುವುದು ಹಾಗೂ ನಿತ್ಯ ಪೊಲೀಸ್ ಗಸ್ತನ್ನು ಹೆಚ್ಚಿಸಬೇಕೆಂಬ…

Read More

ತುಮಕೂರು: ಜಿಲ್ಲೆಯ ಪೊಲೀಸರು ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ ೧೩೦ ಪ್ರಕರಣಗಳನ್ನು ಭೇದಿಸಿದ್ದು, ೫.೬೧ ಕೋಟಿ ಮೊತ್ತದ ಚಿನ್ನಾಭರಣ, ಕಾರು, ಬೈಕ್ ಹಾಗೂ ನಗದು ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಕಳೆದ ಫೆಬ್ರುವರಿಯಿಂದ ಈವರೆಗೆ ವಿವಿಧ ಪ್ರಕರಣಗಳಲ್ಲಿ ೧೭೦ ಕಳ್ಳರನ್ನು ಬಂಧಿಸಲಾಗಿದೆ. ಒಂದು ಕೊಲೆ ಪ್ರಕರಣ, ೩ ದರೋಡೆ, ೫ ಸುಲಿಗೆ, ೨೧ ಸರಗಳವು, ೩೮ ಮನೆ ಕಳವು, ೫೩ ಸಾಮಾನ್ಯ ಕಳ್ಳತನ ಸೇರಿದಂತೆ ೧೩೦ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಇಲ್ಲಿ ಮಂಗಳವಾರ ತಿಳಿಸಿದರು. ೪.೦೩ ಕೋಟಿ ಮೌಲ್ಯದ ೪.೩೧ ಕೆ.ಜಿ ಚಿನ್ನಾಭರಣಗಳು, ೭.೨೦ ಲಕ್ಷ ಬೆಲೆ ಬಾಳುವ ೭.೨೦೭ ಕೆ.ಜಿ ಬೆಳ್ಳಿ ಆಭರಣಗಳು, ೧.೧೧ ಕೋಟಿ ಮೊತ್ತದ ೯೯ ಬೈಕ್, ೪ ಕಾರು, ೨ ಟ್ರ‍್ಯಾಕ್ಟರ್, ಆಟೊ, ೩೬.೭೩ ಲಕ್ಷದ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದು, ೩ ಲಕ್ಷ ಮೌಲ್ಯದ ಜಾನುವಾರುಗಳನ್ನು ಪತ್ತೆ ಮಾಡಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತುಮಕೂರು ಉಪವಿಭಾಗದಲ್ಲಿ…

Read More