ಚಿಕ್ಕನಾಯಕನಹಳ್ಳಿ : ನನ್ನ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ವಿವಿಧ ಇಲಾಖೆಗಳ ಲ್ಲಿನ ಮದ್ಯವರ್ತಿ ಗಳ ಹಾವಳಿ ತಪ್ಪಿಸಲು ನೇರವಾಗಿ ಜನರ ಮನೆಬಾಗಿಲಿಗೆ ಮನೆ ಮಗನಾಗಿ ಬಂದಿದ್ದು ನಿಮ್ಮ ಸಮಸ್ಯೆಗಳನ್ನು ಸಾಧ್ಯವದಷ್ಟು ಸ್ಥಳದಲ್ಲೇ ಬಗೆ ಹರಿಸಲಾಗುವುದು ಎಂದು ಶಾಸಕ ಸಿ. ಬಿ. ಸುರೇಶ್ ಬಾಬು ತಿಳಿಸದರು. ತಾಲ್ಲೋಕಿನ ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆ ಗ್ರಾಮ ಪಂಚಾಯಿತಿವ್ಯಾಪ್ತಿಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ೧೪ನೇ ವಾರದ ಮನೆಬಾಗಿಲಿಗೆ ಮನೆ ಮಗ ಶೀರ್ಷಿಕೆ ಯ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತಾಡಿದ ಅವರು ಎಲ್ಲಾ ಇಲಾಖೆ ಗಳ ಅಧಿಕಾರಿಗಳು ಇಂದು ನಿಮ್ಮ ಗ್ರಾಮ ಗಳಿಗೆ ಬಂದಿದ್ದು ನಿಮ್ಮ ಯಾವುದೇ ವೈಯಕ್ತಿಕ ಇಲ್ಲವೇ ಸಾಮಾಜಿಕ ಸಮಸ್ಯೆ ಗಳಿದ್ದರು ಲಿಖಿತದ ಮೂಲಕ ಅರ್ಜಿ ನೀಡಿ ಅದರಲ್ಲಿ ನಿಮ್ಮ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ನಮೂದಿಸಿ ನಿಮ್ಮ ಅರ್ಜಿಗಳ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸಲಾಗುವುದು ಹಾಗೂ ಸಾಧ್ಯವದಷ್ಟು ಸ್ಥಳದಲ್ಲೇ ನಿಮ್ಮ ಸಮಸ್ಯೆ ಗಳನ್ನು ಬಗೆ ಹರಿಸಲಾಗುವುದು. ಎಂದ ಅವರು ಪಿ ಡಿ ಒ…
Author: News Desk Benkiyabale
ಕೊರಟಗೆರೆ: ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದೆ. ವಿದ್ಯುತ್ನಿಂತ ಉಪಯೋಗವೂ ಇದೆ, ಅಪಾಯವು ಇದೆ. ಇದಕ್ಕೆ ಯಾವುದೇ ಜಾತಿ, ಧರ್ಮ, ಬೇದವಿಲ್ಲ ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ಪಟ್ಟಣದ ಬೆಸ್ಕಾಂ ಕಚೇರಿ ಪಕ್ಕದಲ್ಲಿನ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ನೂತನ ಕಛೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಗುತ್ತಿಗೆದಾರರ ನಡುವೆ ಉತ್ತಮ ಬಾಂಧವ್ಯ ಇರಬೇಕು, ಗುತ್ತಿಗೆದಾರರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಬೇಕಿದೆ ಎಂದರು. ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ವಿದ್ಯುತ್ ಗುತ್ತಿಗೆದಾರರು ಸಂಘಟನೆ ಸ್ಥಾಪನೆ ಮೂಲಕ ಸಾಧಕ ಬಾದಕಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಗುತ್ತಿಗೆದಾರರ ಬೇಡಿಗಳನ್ನು ಆದಷ್ಟು ಬೇಗ ಈಡೇರಿಸಬೇಕಿದೆ. ಖಾಸಗಿ ಸ್ಥಳದಲ್ಲಿ ಕಚೇರಿ ತಾತ್ಕಲಿಕವಾಗಿರಲಿದ್ದು ಶಾಸಕರು ಈ ಬಗ್ಗೆ ಗಮನಹರಿಸಿ ಗುತ್ತಿಗೆದಾರರ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ, ಉದ್ಘಾಟನೆ ಮಾಡಬೇಕಿದೆ ಎಂದು ಒತ್ತಾಯ ಮಾಡಿದರು. ಕೇಂದ್ರ…
ಕೊರಟಗೆರೆ: ಸನಾತನ ಧರ್ಮ, ಸಂಸ್ಕೃತಿ, ಆಚಾರ ವಿಚಾರಗಳು ಉಳಿಯಬೇಕಾದರೆ ಪ್ರತಿಯೊಂದು ಗ್ರಾಮದಲ್ಲಿ ದೇವಾಲಯ, ಧಾರ್ಮಿಕ ಕ್ಷೇತ್ರಗಳು ನಿರ್ಮಾಣಗೊಳ್ಳಬೇಕು. ವರ್ಣರಹಿತವಾಗಿ ಬದುಕು ಕಟ್ಟಿಕೊಳ್ಳಬೇಕಾದರೆ ಇಂತಹ ಹಬ್ಬಗಳು, ಜಾತ್ರೆಗಳು ಅವಕಾಶ ಮಾಡಿಕೊಡುತ್ತವೆ ಎಂದು ಎಲೆರಾಂಪುರ ನರಸಿಂಹಗಿರಿ ಸುಕ್ಷೇತ್ರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ಕರಿದುಗ್ಗನಹಳ್ಳಿ ಮತ್ತು ಹನುಮಂತಯ್ಯನಪಾಳ್ಯ ಗ್ರಾಮದೇವತೆ ಶ್ರೀದೊಡ್ಡಮ್ಮ ದೇವಿ ದೇವಾಲಯದ ಆವರಣದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ೧ ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾದ ಶ್ರೀದೊಡ್ಡಮ್ಮದೇವಿಯ ಸ್ಥಿರಬಿಂಬ ಪ್ರತಿಷ್ಠಾಪನಾ ಕುಂಭಾಭಿಷೇಕ ಮಹೋತ್ಸವ ಹಾಗೂ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮವು ಆ.೨೯ ರಿಂದ ೩೧ ರವರೆಗೆ ನಡೆಯಲಿದೆ ಎಂದು ಹೇಳಿದರು. ದೇವಾಲಯದ ಧಾರ್ಮಿಕ ಕಾರ್ಯಕ್ರಮ ಸಿಂಹಪಾಲು ಉದ್ಯಮಿ ನಿಲೇಶ್ಗೆ ಸಲ್ಲಬೇಕು. ರಸ್ತೆ ಮತ್ತು ಮೂಲಭೂತ ಸೌಕರ್ಯದಿಂದ ವಂಚಿತಗೊAಡ ಈ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಆ.೩೧ಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಮತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ರವರು ಆಗಮಿಸಲಿದ್ದು, ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳು ಸೇರಿದಂತೆ…
ಶಿರಾ: ಪ್ರತಿಭಾ ಪುರಸ್ಕಾರ ಅನ್ನುವುದು ಸಾಮಾನ್ಯವಲ್ಲ ಅಸಾಮಾನ್ಯವಾದದ್ದು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸಿ ಮಕ್ಕಳ ಪ್ರತಿಭೆಗೆ ತಕ್ಕಂತ ಪಠ್ಯ ಸಲಕರಣೆಗಳನ್ನು ಕೊಡುಗೆಯಾಗಿ ನೀಡುವುದರಿಂದ ಮಕ್ಕಳು ಓದವುದರ ಜೊತೆಗೆ ಸಾಧನೆ ಮಾಡುವ ಸಂಕಲ್ಪವನ್ನು ತೊಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಟಿ.ಬಿ. ಜಯಚಂದ್ರ ಹೇಳಿದರು. ಶಿರಾ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ಸಾರಿ ಹೇಳಬೇಕು, ಭಾರತ ದೇಶವಲ್ಲದೆ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮುಂದಿನ ಭವಿಷ್ಯದ ಸಾಧಕರನ್ನಾಗಿ ಮಾಡಬೇಕು, ಬಾಲ್ಯದ ವಿದ್ಯಾಭ್ಯಾಸದಲ್ಲಿ ನನ್ನ ಪ್ರತಿಭೆಗೆ ಶಾಲೆಯಲ್ಲಿ ಕೊಡುಗೆಯಾಗಿ ದೊರೆತ ಒಂದು ಸಣ್ಣ ಪುಸ್ತಕ ನನ್ನಲ್ಲಿ ಓದುವ, ಸಾಧಿಸುವ ಛಲವನ್ನು ಪ್ರೆರೇಪಿಸಿದಲ್ಲದೇ ನನ್ನ ಜೀವನದ ದಿಕ್ಕನ್ನೇ ಬದಲಾಯಿಸಿದೇ ಎಂದು ಬಾಲ್ಯದ ನೆನಪು ಮೆಲುಕು ಹಾಕಿದ ಶಾಸಕರು. ಇಂತಹ ಪುರಸ್ಕಾರಗಳು ಮಕ್ಕಳಿಗೆ ಪ್ರೋತ್ಸಾಹಿಸಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ. ನಮ್ಮ ದೇಶ…
ತುಮಕೂರು: ನಗರದಲ್ಲಿ ಪಾಕಿಸ್ತಾನ ಮೂಲದ ಸಂಘಟನೆಯ ಚಟುವಟಿಕೆಗಳು ನಡೆಯುತ್ತಿದ್ದು, ಮುಸ್ಲಿಂರನ್ನು ತಪ್ಪು ದಾರಿಗೆಳೆಯುವ ಮತ್ತು ಭದ್ರತೆಯ ಆತಂಕ ಎದುರಾಗಿದೆ. ಈ ಸಂಘಟನೆಗಳ ಬಗ್ಗೆ ನಿಗಾ ವಹಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮರ್ಕಜಿ ಮಜ್ಲಿಸೆ ಮುಶಾವರತ್ ನೇತೃತ್ವದಲ್ಲಿ ತುಮಕೂರಿನ ಮುಸ್ಲಿಂ ಬಾಂಧವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ನೂರಾನಿ ಮಸೀದಿ ಅಧ್ಯಕ್ಷರು ಹಾಗೂ ಮರ್ಕಜಿ ಮಜ್ಲಿಸೆ ಮುಶಾವರತ್ ಸದಸ್ಯರಾದ ಜಾಹಿದ್ ಖಾನ್ ಶೀರಾನಿ, ಇಕ್ಬಾಲ್ ಅಹಮದ್, ನಯಾಜ್ ಅಹಮದ್ ನೇತೃತ್ವದಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ತೆರಳಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಗೋಪಾಲ್ ಹಾಗೂ ಪುರುಷೋತ್ತಮ್ ಅವರಿಗೆ ಮನವಿ ಸಲ್ಲಿಸಿ ಪಾಕಿಸ್ತಾನ ಮೂಲದ ಸಂಘಟನೆಗಳ ಬಗ್ಗೆ ತೀವ್ರ ನಿಗಾ ವಹಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಇಕ್ಬಾಲ್ ಅಹಮದ್, ರಿಯಾಜ್ ಅಹ್ಮದ್ ಗೋಹಲ್ ಶಾಹಿ ಗುಂಪು (ಎಂಎಫ್ಐ) ಪಾಕಿಸ್ತಾನದಲ್ಲಿ ಹುಟ್ಟುಕೊಂಡ ಸಂಘಟನೆಯಾಗಿದೆ. ಇದರ ಸ್ಥಾಪಕ ರಿಯಾಜ್ ಅಹ್ಮದ್ ಗೋಹರ್ ಶಾಹಿ…
ತುಮಕೂರು: ಕೆ.ಎನ್.ರಾಜಣ್ಣನವರನ್ನು ಸಚಿವ ಸಂಪುಟದಿ0ದ ವಜಾಗೊಳಿಸಿರುವುದನ್ನು ಖಂಡಿಸಿ, ಅವರನ್ನು ಮತ್ತೆ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಕೆ.ಎನ್.ಆರ್ ಹಾಗೂ ಆರ್.ಆರ್. ಅಭಿಮಾನಿ ಬಳಗ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಂಘಸ0ಸ್ಥೆಗಳ, ಅಹಿಂದ ವರ್ಗ, ಸಾಹಿತಿಗಳು, ವಿವಿಧ ಸಮಾಜಗಳ ಮುಖಂಡರೊ0ದಿಗೆ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ಇಡೀ ದಿನ ಧರಣಿ ಸತ್ಯಾಗ್ರಹ ನಡೆಸಿದರು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಆಗಮಿಸಿದ್ದ ಮುಖಂಡರು, ಕೆ.ಎನ್.ರಾಜಣ್ಣನವರು ದೇವರಾಜ ಅರಸು ಅವರ ತತ್ವಾದರ್ಶಗಳನ್ನು ತಮ್ಮ ರಾಜಕೀಯ ಬದುಕಿನಲ್ಲಿ ಅಳವಡಿಸಿಕೊಂಡು ಅವರಂತೆಯೇ ಹಿಂದುಳಿದ ವರ್ಗ, ಶೋಷಿತರ ಧ್ವನಿಯಾಗಿ ನೆರವಿಗೆ ನಿಂತವರು. ಕೆ.ಎನ್.ರಾಜಣ್ಣನವರಂತಹ ಪ್ರಭಾವಿ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡಾಗಲೆಲ್ಲಾ ಕಾಂಗ್ರೆಸ್ ಹೀನಾಯ ಸ್ಥಿತಿ ಅನುಭವಿಸಿತ್ತು. ರಾಜೀವ್ ಗಾಂಧಿ ನೇತೃತ್ವದಲ್ಲಿ ೧೯೮೪ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ೪೦೫ ಸ್ಥಾನಗಳನ್ನು ಗಳಿಸಿತ್ತು. ಆನಂತರದಿ0ದ ಪಕ್ಷ ಕುಸಿತ ಕಂಡಿತು. ಪಕ್ಷದ ಸಂಘಟನಾ ಕೊರತೆ ಹಾಗೂ ನಿಷ್ಠಾವಂತರ ಕಡಿಗಣಿಕೆಯೂ ಇದಕ್ಕೆ ಕಾರಣ. ಮುಖ್ಯಮಂತ್ರಿಯಾಗಿ ಜನಪರ ಕಾರ್ಯಕ್ರಮ ಜಾರಿಗೆ…
ತುಮಕೂರು: ಜಿಲ್ಲಾಡಳಿತದಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೨ರವರೆಗೆ ೧೧ ದಿನಗಳ ಕಾಲ ಜರುಗಲಿರುವ ದಸರಾ ಉತ್ಸವದಲ್ಲಿ ಆಗಮ ರೀತಿಯ ವಿಧಿ ವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಧಾರ್ಮಿಕ ಪೂಜಾ ವಿಧಾನಗಳ ಆಚರಣಾ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ದಸರಾ ಉತ್ಸವ ನವರಾತ್ರಿ ದಿನಗಳಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗುವ ಭವ್ಯ ಧಾರ್ಮಿಕ ಮಂಟಪದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಪ್ರತಿದಿನ ವಿವಿಧ ಅಲಂಕಾರಗಳಿAದ ಪೂಜಿಸಬೇಕು ಎಂದು ತಿಳಿಸಿದರು. ದಸರಾ ಉತ್ಸವ ಮೊದಲ ದಿನ ಬೆಳಿಗ್ಗೆ ಧಾರ್ಮಿಕ ವಿಧಿ-ವಿಧಾನಗಳಂತೆ ಗಣಪತಿ ಪೂಜೆ, ಪೂಣ್ಯಾಹ ವಾಚನ, ಭೂಮಿ ಪೂಜೆ, ಧ್ವಜ ಪೂಜೆ, ಮಂಟಪ ಪೂಜೆ ಮತ್ತು ಧ್ವಜಾರೋಹಣ, ಭಾರತ ಮಾತಾ ಪೂಜೆ, ಗಣಪತಿ ಹೋಮ ಮತ್ತು ದುರ್ಗಾ…
ತುಮಕೂರು: ಸಂವಿಧಾನದ ಆಶಯಗಳನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಿ ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣವಾಗಿರುವ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸುರವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದರು. ನಗರದ ಟೌನ್ಹಾಲ್ ವೃತ್ತದಲ್ಲಿರುವ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ರವರ ೧೧೦ನೇ ಜನ್ಮ ದಿನಾಚರಣೆಯಲ್ಲಿ ಡಿ. ದೇವರಾಜು ಅರಸು ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿ ಅವರು ಮಾತನಾಡಿದರು. ನಮ್ಮ ಸಂವಿಧಾನದ ಮೂಲ ಆಶಯವಾಗಿರುವ ಸಾಮಾಜಿಕ ನ್ಯಾಯವನ್ನು ರಾಜ್ಯದಲ್ಲಿ ಚಾಚೂ ತಪ್ಪದೇ ಅನುಷ್ಠಾನಕ್ಕೆ ತಂದ ಮುಖ್ಯಮಂತ್ರಿ ಅಂದರೆ ಡಿ. ದೇವರಾಜು ಅರಸು ರವರು ಎಂದು ಅವರು ಹೇಳಿದರು. ಕರ್ನಾಟಕದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಡಿ. ದೇವರಾಜು ಅರಸು ರವರು ರಾಜ್ಯದಲ್ಲಿ ಉಳುವವನೇ ಭೂಮಿ ಒಡೆಯ ಎಂಬ ಕಾನೂನನ್ನು ಜಾರಿಗೊಳಿಸಿ ಬಡವರ…
ದ ಪರಿಹಾರಕ್ಕೆ ಹೋರಾಟ ನಡೆಸಿದ ನೆಯ ನಡೆಸುತ್ತಿರುವ ರಾಷ್ಟ್ರೀಯ ಸಂಘಟನೆಯಾಗಿದ್ದು, ಕರ್ನಾಟಕ ದಕ್ಷಿಣ ಪ್ರಾಂತ್ಯದಲ್ಲಿ ಐದು ಸಾವಿರ ಕಾರ್ಯಕರ್ತರಿಗೆ ತರಬೇತಿ ನೀಡಿ ಬೇರುಮಟ್ಟದಲ್ಲಿ ಕೆಲಸ ಮಾಡಲು ಉತ್ತೇಜಿಸುತ್ತಿದೆ ಎಂದು ಭಾರತೀಯ ಕಿಸಾನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತೀಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ತಿಳಿಸಿದ್ದಾರೆ ಗುಬ್ಬಿ ಪಟ್ಟಣದ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿರುವ ರೈತ ಭವನದಲ್ಲಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ,ಗುಬ್ಬಿ ತಾಲೂಕು ಘಟಕದವತಿಯಿಂದ ಆಯೋಜಿಸಿದ್ದ ತಾಲೂಕು ಹಾಗೂ ಗ್ರಾಮ ಸಮಿತಿಗಳ ಪ್ರಶಿಕ್ಷಣವರ್ಗ ಕಾರ್ಯಾಗಾರವನ್ನು ಗೋ ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಿ ಮಾತನಾಡುತಿದ್ದ ಅವರು,ಸದಸ್ಯತ್ವ ಅಭಿಯಾನದಲ್ಲಿ ಕರ್ನಾಟಕದ ದಕ್ಷಿಣ ಪ್ರಾಂತ್ಯದಲ್ಲಿ ಸುಮಾರು ೪೩ ಸಾವಿರ ಜನರು ಸದಸ್ಯರಾಗಿದ್ದು, ಇವರಲ್ಲಿ ೫ ಸಾವಿರ ಜನರಿಗೆ ತರಬೇತಿ ನೀಡಲಾಗುತ್ತಿದೆ.ಈಗಾಗಲೇ ಪ್ರಾಂತೀಯ, ಜಿಲ್ಲಾ ಮಟ್ಟದ ತರಬೇತಿಗಳು ಮುಗಿದಿವೆ ಎಂದರು. ಸ್ವಾವಲ0ಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶವಾಗಿದ್ದು,ರೈತರ ಸಮಸ್ಯೆಯ ಜೊತೆಗೆ, ವಿಷಮುಕ್ತ ಆಹಾರ ನೀಡುವ ಸಾವಯವ ಕೃಷಿಯ ಮೂಲಕ…
ಹುಳಿಯಾರು: ಕಳೆದ ೧೦ ದಿನಗಳಿಂದ ಹುಳಿಯಾರು ಪಟ್ಟಣದಲ್ಲಿ ಗೊಬ್ಬರ ವಿತರಿಸುತ್ತಿದ್ದರೂ ಸಹ ರೈತರ ನೂಕುನುಗ್ಗಲು ಕಡಿಮೆ ಆಗಿಲ್ಲ. ಪರಿಣಾಮ ಸೋಮವಾರ ಪೊಲೀಸ್ ಕಣ್ಗಾವಲಿನಲ್ಲಿ ಗೊಬ್ಬರ ವಿತರಿಸುವ ಸ್ಥಿತಿ ನಿರ್ಮಾಣವಾಯಿತು. ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ ಕಳೆದ ವಾರದಿಂದ ಮಳೆ ಬೀಳುತ್ತಿರುವುದರಿಂದ ರಾಗಿ ಇನ್ನಿತರ ಬೆಳೆಗಳಿಗೆ ಮೇಲು ಗೊಬ್ಬರವಾಗಿ ನೀಡುವ ಯೂರಿಯಾಗೆ ಬೇಡಿಕೆ ಹೆಚ್ಚಿದೆ. ಪಟ್ಟಣದ ಮುಸ್ತಾಫ ಟ್ರೇರ್ಸ್, ರೈತ ಅಗ್ರಿ ಕ್ಲಿನಿಕ್ ಹಾಗೂ ಗಾಂಧಿಪೇಟೆಯ ಬಸವೇಶ್ವರ ಟ್ರೇಡರ್ಸ್ ಗೊಬ್ಬರದ ಅಂಗಡಿಗಳ ಜೊತೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲೂ ಸಹ ವಾರಕ್ಕೆ ಎರಡ್ಮೂರು ಲೋಡ್ ಗೊಬ್ಬರ ಕೊಡುತ್ತಿದ್ದರೂ ಸಹ ಬೆಳಗ್ಗೆಯಿಂದಲೇ ರೈತರು ಗೊಬ್ಬರದ ಅಂಗಡಿಗಳ ಮುಂದೆ ನಸುಕಿನಿಂದಲೇ ಸರತಿಸಾಲಿನಲ್ಲಿ ನಿಲ್ಲುವುದು ಕಡಿಮೆಯಾಗಿಲ್ಲ. ಸೋಮವಾರ ಗೊಬ್ಬರ ಬರುವ ಮುನ್ಸೂಚನೆ ತಿಳಿದ ರೈತರ ಸೋನೆ ಮಳೆಯಲ್ಲೂ ಗೊಬ್ಬರದ ಅಂಗಡಿಗಳ ಮುಂದೆ ಮೈಲುದ್ದ ಸರತಿ ಸಾಲು ನಿಂತಿದ್ದರು. ಗೊಬ್ಬರದ ಲಾರಿ ಅಂಗಡಿಗಳ ಮುಂದೆ ಬಂದಿದ್ದೇ ತಡ ಗೊಬ್ಬರದ ಚೀಲ ಅಂಗಡಿಗೆ ಇಳಿಸಲೂ ಬಿಡದೆ ಖರೀದಿಗೆ ನೂಕುನುಗ್ಗಲು ಸೃಷ್ಟಿಸಿದರು.…