Author: News Desk Benkiyabale

ತುಮಕೂರು: ಗುಬ್ಬಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಅನುಮೋದನೆ ನೀಡದೆ, ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ತುಮುಲ್ ನಿರ್ದೇಶಕರಾದ ಭಾರತಿ ಶ್ರೀನಿವಾಸ್ ನೇತೃತ್ವದಲ್ಲಿ ಗುಬ್ಬಿ ತಾಲೂಕಿನ ವಿವಿಧ ಗ್ರಾಮಗಳ ಜನರು ಪ್ರತಿಭಟನೆ ನಡೆಸಿದರು. ನಗರದ ಟೌನ್‌ಹಾಲ್ ಬಳಿಯ ಅಂಬೇಡ್ಕರ್ ಪ್ರತಿಮೆಯ ಬಳಿ ಸಮಾವೇಶಗೊಂಡ ಗುಬ್ಬಿ ತಾಲೂಕಿನ ವಿವಿಧ ಗ್ರಾಮಗಳ ಜನರು ಎ.ಆರ್. ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೂಡಲೇ ಗುಬ್ಬಿ ತಾಲೂಕಿನಲ್ಲಿ ಪ್ರಾಸ್ತಾವನೆ ಸಲ್ಲಿಸಿರುವ ಗ್ರಾಮಗಳಲ್ಲಿ ಹಾಲಿನ ಡೈರಿ ಸ್ಥಾಪಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದ ಮನವಿಯನ್ನು ಸಲ್ಲಿಸಿದರು. ಈ ವೇಳೆ ಮಾತನಾಡಿದ ತುಮುಲ್ ನಿರ್ದೇಶಕರಾದ ಶ್ರೀಮತಿ ಭಾರತಿ ಶ್ರೀನಿವಾಸ್, ತುಮಕೂರು ಡೈರಿಗೆ ಬರುವ ಹಾಲಿನಲ್ಲಿ ಗುಬ್ಬಿ ತಾಲೂಕಿನ ಹಾಲಿನ ಪ್ರಮಾಣ ಹೆಚ್ಚಾಗಿದೆ. ಹೆಚ್ಚು ಹಾಲು ಉತ್ಪಾಧಿಸುತ್ತಿರುವ ಸುಮಾರು ೩೨ ಉಪಕೇಂದ್ರಗಳಲ್ಲಿ ೯ ಕೇಂದ್ರಗಳಲ್ಲಿ ಮುಖ್ಯ ಡೈರಿಗಳಾಗಿ ಪರಿವರ್ತಿಸಲು ಅನುಮತಿ ಕೋರಿ ೬ ತಿಂಗಳ ಹಿಂದೆಯೇ ಸಹಕಾರ ಇಲಾಖೆಗಳ…

Read More

ತುಮಕೂರು: ಮಾದಾವರದಿಂದ – ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ. ಮಾದಾವರದಿಂದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆ ಯೋಜನೆಗೆ ಸ್ವಾಗತಿಸುತ್ತೇನೆ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ನನ್ನ ಅವಧಿಯಲ್ಲಿ ಶ್ರಮಿಸಿದ್ದರೂ ಈ ಹಂತಕ್ಕೆ ಹೋಗಿರಲಿಲ್ಲ. ಈಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್  ಮತ್ತು ಸರ್ಕಾರದ ವಿಶೇಷ ಆಸಕ್ತಿ ಮೆಚ್ಚುವಂತದ್ದು. ಭವಿಷ್ಯದ ದೃಷ್ಟಿಯಿಂದ ವಸಂತನರಸಾಪುರದವರೆಗೂ ವಿಸ್ತರಣೆ ಮಾಡುವುದು ಸೂಕ್ತವಾಗಿದೆ ಎಂದರು. ಯೋಜನೆಯ ಬಗ್ಗೆ ಬಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಸಂಸದ ತೇಜಸ್ವಿ ಸೂರ್ಯರವರನ್ನು ತುಮಕೂರಿಗೆ ಆಹ್ವಾನಿಸಿ, ಒಂದು ಸಂವಾದ ನಡೆಸುವುದು ಅಗತ್ಯವಾಗಿದೆ. ಕೇಂದ್ರ ಸಚಿವರಾದ  ವಿ.ಸೋಮಣ್ಣ, ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ತುಮಕೂರು ಗ್ರಾಮಾಂತರದ ಶಾಸಕ ಸುರೇಶ್ ಗೌಡ ಮತ್ತು ತುಮಕೂರು ನಗರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಶ್ರಮಿಸುವ ಭರವಸೆ ಇದೆ ಎಂದಿದ್ದಾರೆ. ಬೆಂಗಳೂರಿನ ೨ ನೇ ಅಂತರರಾಷ್ಟಿçÃಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯಲ್ಲಿ ನಿರ್ಮಾಣ ಮಾಡಲು ನನ್ನ ಅವಧಿಯಲ್ಲಿ  ಆರಂಭಿಸಲಾಗಿತ್ತು. ಈಗ ಬೆಂಗಳೂರಿನ ಅಕ್ಕ-ಪಕ್ಕದ ಸ್ಥಳಗಳಿಗೆ, ಏರ್ ಪೋರ್ಟ್ ಆಥಾರಿಟಿ ಆಫ್ ಇಂಡಿಯಾ ನೀಡಿರುವ…

Read More

ತುಮಕೂರು: ಇತಿಹಾಸ ಪ್ರಸಿದ್ದ ಗೂಳೂರು ಗಣೇಶಮೂರ್ತಿಯ ವಿಸರ್ಜನಾ ಮಹೋತ್ಸವ ಇಂದು ಮತ್ತು ನಾಳೆ ಅತ್ಯಂತ ವೈಭವಯುತವಾಗಿ ನಡೆಯಲಿದೆ ಎಂದು ಗೂಳೂರು ಶ್ರೀ ಮಹಾಗಣಪತಿ ಭಕ್ತ ಮಂಡಳಿಯ ಅಧ್ಯಕ್ಷರಾದ ಜಿ.ಎಸ್. ಶಿವಕುಮಾರ್ ತಿಳಿಸಿದ್ದಾರೆ. ಬಲಿಪಾಢ್ಯಮಿಯ ದಿನ ಸ್ಥಾಪಿಸಲಾಗುವ ಗಣೇಶ ಮೂರ್ತಿಗೆ ಕಾರ್ತಿಕ ಮಾಸದಲ್ಲಿ ೧ ತಿಂಗಳ ಕಾಲ ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯಗಳೊ0ದಿಗೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬೃಹತ್ ಗಣೇಶ ಮೂರ್ತಿಗೆ ವಿಶೇಷ ಐತಿಹ್ಯವಿದ್ದು, ೧ ತಿಂಗಳ ಕಾಲ ಗ್ರಾಮದ ಪ್ರತಿಯೊಂದು ಮನೆಯವರು ನಿತ್ಯ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸುವರು. ಪ್ರತಿದಿನ ರಾತ್ರಿ ೯ ಗಂಟೆಗೆ ಮಹಾಮಂಗಳಾರತಿ ನಡೆದಿದ್ದು, ೧೮ ಕೋಮಿನವರು ಗೂಳೂರು ಗಣಪನಿಗೆ ವಿವಿಧ ಸೇವೆ ಸಲ್ಲಿಸಿ, ವಿಸರ್ಜನೆಯಲ್ಲಿಯೂ ಪಾಲ್ಗೊಳ್ಳಲಿದ್ದಾರೆ ಎಂದರು. ಇAದು ರಾತ್ರಿ ೧೦ ಗಂಟೆಗೆ ವಿದ್ಯುತ್ ಅಲಂಕಾರ ಮತ್ತು ಹೂವಿನಿಂದ ಅಲಂಕೃತಗೊ0ಡ ಮಂಟಪದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಶ್ರೀ ಮಹಾಗಣಪತಿ ಉತ್ಸವವನ್ನು ನಾದಸ್ವರ, ಕರಡಿ ಮಜಲು, ನಾಸಿಕ್ ಡೋಲ್, ಕೇರಳದ ಜಾನಪದ ನೃತ್ಯ, ಮಂಡ್ಯದ ಕಲಾ…

Read More

ಪಾವಗಡ: ಇತ್ತೀಚೆಗೆ ಏಕೋ ಪಟ್ಟಣ ಹಾಗೂ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಕಳ್ಳತನಗಳು ಹೆಚ್ಚಾಗುತ್ತಿದೆ ಗುರುವಾರ ಮಧ್ಯರಾತ್ರಿ ಒಂದು ಗಂಟೆಯಿ0ದ ೩ ಗಂಟೆ ಸಮಯದೊಳಗೆ ಮೂರು ಅಂಗಡಿಗಳ ಮೇಲ್ಚಾವಣಿಯನ್ನು ಕತ್ತರಿಸಿ ಕೆಳಗಿಳಿದ ಕಳ್ಳರು ಸುಮಾರು ೨.೬ ಲಕ್ಷ ನಗದು ದೋಚಿರುತ್ತಾರೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಅಶ್ವಿನಿ ಮಾರ್ಕೆಟಿಂಗ್. ಆರ್ ಎಸ್ ಮೆಗಾ ಹೋಲ್ಸೇಲ್. ಲಕ್ಷ್ಮಿ ಮಾರ್ಕೆಟಿಂಗ್ ಸರ್ವಿಸ್. ಮೂರು ಸಗಟು ವ್ಯಾಪಾರಿಗಳ ಅಂಗಡಿಗಳಲ್ಲಿ ರಾತ್ರಿ ಕಳ್ಳತನವಾಗಿರುವುದು ಬೆಳಗಿನ ಜಾವ ಬೆಳಕಿಗೆ ಬಂದಿದೆ ವಿಷಯ ತಿಳಿದು ಮಾಲೀಕರು ಅಂಗಡಿಗಳಿಗೆ ಬಂದ ನೋಡಿದಾಗ ಮೇಲ್ಚಾವಣಿಯನ್ನು ಕತ್ತರಿಸಿ ಒಳಗಿಳಿದಿರುವುದು ಸಿಸಿ ಕ್ಯಾಮೆರಾ ಗಳಲ್ಲಿ ರೆಕಾರ್ಡ್ ರೆಕಾರ್ಡ್ ಆಗಿರುವುದು ತಿಳಿದು ಬಂದಿದೆ ಸ್ಥಳಕ್ಕೆ ಪೊಲೀಸರು ಭೇಟಿ ಮುಂದಿನ ಕ್ರಮಕ್ಕೆ ಪರಿಶೀಲನೆ ಸೋಲಾರ್ ಖ್ಯಾತಿಯಾದ ಪಾವಗಡ ಇತ್ತೀಚಿನ ದಿನಗಳಲ್ಲಿ ಕಳ್ಳತನಕ್ಕೆ ರಾಕೆಟ್ ವೇಗದಲ್ಲಿ ಖ್ಯಾತಿ ಹೊಂದಲು ಮುಂದುವರಿಯುತ್ತಿದೆ ಸಾರ್ವಜನಿಕ ವಲಯದಲ್ಲಿ ಅತಿ ಹೆಚ್ಚು ಆತಂಕಗಳು ಉಂಟಾಗುತ್ತಿದ್ದು ಸಾರ್ವಜನಿಕರು ತಾಲೂಕು ಆಡಳಿತ ಮತ್ತು ಜಿಲ್ಲಾ ಆಡಳಿತಕ್ಕೆ ಇಡಿ ಶಾಪ…

Read More

ತುಮಕೂರು: ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿಕೆ ಮುಖ್ಯವೇ ಹೊರತು ಪ್ರಶಸ್ತಿ ಮುಖ್ಯವಲ್ಲ ಕ್ರೀಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಾಲೆಯನ್ನು ಪ್ರತಿನಿಧಿಸುವ ಹಾಗೆ ನೀವು ಆಯ್ಕೆಯಾದಾಗಲೇ ವಿಜೇತರಾಗಿದ್ದೀರಿ ವೇದಿಕೆ ನಿಮಗೆ ಸಿಕ್ಕ ಅವಕಾಶವೆಂದು ತಿಳಿಯಿರಿ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ರವರು ಅಭಿಪ್ರಾಯಪಟ್ಟರು ಶಿರ ತಾಲೂಕು ಬುಕ್ಕಾಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕುರಿತು ಅವರು ಮಾತನಾಡಿದರು ಶಿಕ್ಷಣವೆಂದರೆ ಕೇವಲ ಅಂಕಗಳಿಗೆ ಸೀಮಿತವಾಗಿ ಯಾಂಕಗಳು ಪಡೆಯುವುದು ಮಾತ್ರವಲ್ಲ ಶಿಕ್ಷಣವೆಂದರೆ ಮಗುವಿನಲ್ಲಿರುವ ಸೂಕ್ತ ಪ್ರತಿಭೆಗಳನ್ನು ಹೊರ ಚೆಲ್ಲುವುದೇ ಆಗಿದೆ ಮಗುವನ್ನು ಯಾವ ವಿಷಯದಲ್ಲಿ ಅತಿ ಪ್ರಾಮುಖ್ಯತೆ ಪಡೆದಿದೆ ಯಾವ ಕಲೆ ಮೈಗೂಡಿಸಿಕೊಂಡಿದೆ ಯಾವ ಕಲೆ ಸಂಸ್ಕೃತಿ ನೃತ್ಯ ನಾಟಕ ಆ ಮಗುವಿನಲ್ಲಿ ಆಸಕ್ತಿ ಹೊಂದಿದೆ ಎಂಬುದನ್ನು ಅರಿತು ಆ ಮಗುವಿಗೆ ಪ್ರೋತ್ಸಾಹ ನೀಡಿದಾಗ ಆ ಮಗು ಹೋಬಳಿ ತಾಲೂಕು ಜಿಲ್ಲೆ ರಾಜ್ಯ ರಾಷ್ಟ್ರಮಟ್ಟದಲ್ಲಿ ಕೀರ್ತಿ ಗಳಿಸುತ್ತದೆ ಮಗುವಿಗೆ ಸೂಕ್ತ ವೇದಿಕೆ ಅವಶ್ಯಕತೆ ಇದೆ ಇದನ್ನು ಅರಿತ ಸರ್ಕಾರ ಮಗುವಿನ ಸರ್ವತೋಮುಖ…

Read More

ತುಮಕೂರು: ಐಕ್ಯ ಫೌಂಡೇಶನ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆವತಿಯಿ0ದ ಈ ತಿಂಗಳ ೨೨ ಮತ್ತು ೨೩ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕಲ್ಪತರು ಉತ್ಸವ ಏರ್ಪಡಿಸಲಾಗಿದೆ. ಈ ವೇಳೆ ಜಿಲ್ಲೆಯ ೫೮ ಮಂದಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಐಕ್ಯ ಫೌಂಡೇಶನ್ ಅಧ್ಯಕ್ಷೆ ರೇಖಾ ಶಿವಕುಮಾರ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್ ತಿಳಿಸಿದರು. ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪನ್ನಗಳ ಮಾರಾಟ ಮಳಿಗೆಗ ಳನ್ನು ಉತ್ಸವದಲ್ಲಿ ತೆರೆಯಲಾಗುವುದು. ಈ ಮೂಲಕ ರೈತರ ಉತ್ಪನ್ನಗಳನ್ನು ಗ್ರಾಹಕರು ರೈತರಿಂದ ನೇರ ಖರೀದಿ ಮಾಡ ಬಹುದು ಎಂದರು. ೨೨ರAದು ಸಂಜೆ ೪.೩೦ಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಳಿಗೆಗಳ ಉದ್ಘಾಟನೆ ನೆರವೇರಿಸಿ ನಂತರ ನಡೆಯುವ ಸಮಾರಂ ಭದಲ್ಲಿ ಪ್ರಗತಿಪರ ರೈತನ್ನು ಸನ್ಮಾನಿಸಿ ಗೌರವಿಸುವರು. ರೈತಪರ ಹೋರಾಟಗಾರ ಗಂಗಾಧರ ಕಾಸರಘಟ್ಟ, ಚಲನಚಿತ್ರ ನಟ ಹನುಮಂತೇಗೌಡ, ಕಿರುತೆರೆ ನಟರಾದ ಶಿಲ್ಪ ಶೈಲೇಶ್. ಅರ್ಜುನ್ ಯೋಗೇಶ್‌ರಾಜ್ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.…

Read More

ತುಮಕೂರು: ಜಾಗತೀಕರಣದ ಹೆಸರಿನಲ್ಲಿ ಭೂಮಿಯನ್ನು ವ್ಯಾಪಾರ ವಸ್ತುವನ್ನಾಗಿ ಮಾಡಿದರೆ ಮಾನವನ ಅಂತ್ಯ ಕಟ್ಟಿಟ್ಟ ಬುತ್ತಿ ಎಂದು ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ರಾಜೇಂದ್ರ ಚೆನ್ನಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಪ್ರೊ. ಎಂ. ಡಿ.ನಂಜು0ಡಸ್ವಾಮಿ ಅಧ್ಯಯನ ಪೀಠ ಹಾಗೂ ಸ್ನಾತಕೋತ್ತರ ಅರ್ಥಶಾಸ್ತç ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಜಾಗತೀಕರಣ- ಪ್ರತಿರೋಧ ಮತ್ತು ಪರ್ಯಾಯ: ನಂಜು0ಡಸ್ವಾಮಿಯವರ ಚಿಂತನೆ’ ಕುರಿತು ಮಾತನಾಡಿದರು. ಜಾಗತೀಕರಣವು ೯೦ರ ದಶಕದಲ್ಲಿ ಅನಿವಾರ್ಯವಾಯಿತು. ಆರ್ಥಿಕವಾಗಿ ದೇಶವು ಪ್ರಬಲಗೊಳ್ಳಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವಸಾಹತುಶಾಹಿಯನ್ನು ಕೊನೆಗೊಳಿಸಿ, ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆಯನ್ನು ಕಾಣಬೇಕೆಂಬುದು ಪ್ರೊ. ಎಂ. ಡಿ. ನಂಜು0ಡಸ್ವಾಮಿಯವರ ಚಿಂತನೆಯಾಗಿತ್ತು. ಅವರು ರೈತ ಸಂಘದ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿ ಅವರ ಧ್ವನಿಯಾಗಿದ್ದರು ಎಂದರು. ಯಾವುದೇ ನಿಬಂಧನೆಗಳಿಲ್ಲದೆ ನಮ್ಮ ವಸ್ತುಗಳ ವ್ಯಾಪಾರ ಮಾಡುವುದಕ್ಕೆ ಮುಕ್ತ ಮಾರುಕಟ್ಟೆ ಸಹಾಯವಾಗುತ್ತದೆ. ಸುಂಕರಹಿತ ಮಾರುಕಟ್ಟೆ ಅರ್ಥಶಾಸ್ತçದ ಬೆಳವಣಿಗೆಗೆ ಮುಖ್ಯವಾದದ್ದು. ಅರ್ಥವ್ಯವಸ್ಥೆಯು ರಾಷ್ಟç್ರದ ಗಡಿಗಳನ್ನು ದಾಟಬೇಕು. ಇದರಿಂದ ಹೊಸ…

Read More

ಹುಳಿಯಾರು: ವಿದ್ಯಾರ್ಥಿಗಳು ಓದುವ ವಿಷಯದಲ್ಲಿ ಹಾಗೂ ಗುರಿ ಸಾಧಿಸುವಲ್ಲಿ ಸ್ವಾರ್ಥಿಗಳಾಗಬೇಕು, ಸದಾ ಕ್ರಿಯಾಶೀಲರಾಗಿರಬೇಕು, ಸ್ವಾವಲಂಭಿಗಳಾಗಿರಬೇಕು. ನಿಂತ ನೀರಿನಂತಾಗದೆ ಹರಿಯುವ ನೀರಿನಂತೆ ಪರಿಶುದ್ಧವಾದ ಮನಸ್ಸಿನಿಂದ ಇರಬೇಕು. ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವ ಬೆಳಸಿಕೊಳ್ಳಬೇಕು. ನಾನು ಎನ್ನುವ ಸ್ವಾರ್ಥ ಬಿಟ್ಟು ನಾವು ಎನ್ನುವ ನಿಸ್ವಾರ್ಥತೆಯನ್ನು ಬೆಳಸಿಕೊಂಡಾಗ ಸಮಾಜದಲ್ಲಿ ಅಜಾತಶತ್ರುವಾಗಿ ಬೆಳೆಯಬಹುದು ಎಂದು ಅಬ್ಯಾಕಸ್ ಶಿಕ್ಷಕಿ  ಮನೋಜ್ ಅವರು ತಿಳಿಸಿದರು. ಹುಳಿಯಾರಿನಲ್ಲಿ ತಾವು ನಡೆಸುತ್ತಿರುವ ಅಬ್ಯಾಕಸ್‌ನಿಂದ ಬಂದ ಲಾಭಾಂಶದಲ್ಲಿ ಹುಳಿಯಾರಿನ ಕೇಶವಾ ವಿದ್ಯಾ ಮಂದಿರದ ಎಲ್‌ಕೆಜಿಯಿಂದ ೭ ನೇ ತರಗತಿಯ ಅಷ್ಟೂ ವಿದ್ಯಾರ್ಥಿಗಳಿಗೆ ಹಾಟ್ ಅಂಡ್ ಕೋಲ್ಡ್ ವಾಟರ್ ಬಾಟಲ್‌ಗಳನ್ನು ಉಚಿತವಾಗಿ ವಿತರಿಸಿ ಅವರು ಮಾತನಾಡಿ ನಾವು ಹುಟ್ಟಿದಾಗ ಎನನ್ನೂ ತೆಗೆದುಕೊಂಡು ಬರಲಿಲ್ಲ, ಸತ್ತಾಗಲೂ ಎನ್ನನ್ನೂ ತೆಗೆದುಕೊಂಡು ಹೋಗುವುದಿಲ್ಲ. ಹಾಗಾಗಿ ದುಡಿದ ಅಷ್ಟೂ ಹಣವನ್ನು ಕೂಡಿಡದೆ ಸ್ವಲ್ಪ ಹಣವನ್ನು ಸೇವಾ ಕಾರ್ಯಗಳಿಗೆ ಬಳಸಬೇಕೆಂದು ನಿರ್ಧರಿಸಿ ವಿದ್ಯಾರ್ಥಿಗಳಿಗೆ ವಾಟರ್ ಬಾಟಲ್ ನೀಡುತ್ತಿರುವುದಾಗಿ ತಿಳಿಸಿದರು. ಮನುಷ್ಯನ ಆರೋಗ್ಯಕ್ಕೆ ನೀರು ಅತಿ ಮುಖ್ಯ. ಶುದ್ಧ ನೀರು ಕುಡಿಯುವ ಜೊತೆಗೆ…

Read More

ತುಮಕೂರು: ಬಂಜಾರ ಸಮಾಜದ ಹಲವು ಆಚಾರ-ವಿಚಾರಗಳು ನಶಿಸಿ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇವುಗಳನ್ನು ಮುಂದಿನ ತಲೆಮಾರಿಗೆ ಕಾಪಾಡಿ ಉಳಿಸಲೆಂದು ನಿಗಮವು ಒಂದು ಕೋಟಿ ಇಪ್ಪತ್ತು ಲಕ್ಷ ರೂ. ವೆಚ್ಚ ಮಾಡಿ ರಾಜ್ಯದಾದ್ಯಂತ ಕಲಾ ಮೇಳಗಳನ್ನು ಆಯೋಜಿಸುತ್ತಿದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷೆನ್.ಜಯದೇವ್ ನಾಯಕ್ ತಿಳಿಸಿದ್ದಾರೆ ನಗರದ ಬಂಜಾರ ಭವನದಲ್ಲಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಲಯ ಕಚೇರಿಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕಲಾ ಮೇಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಯುವಕರು ಈ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು ಕಾರ್ಯಕ್ರಮದಲ್ಲಿ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಡಿ. ನಾರಾಯಣ ನಾಯ್ಕ್, ಪ್ರಧಾನ ಕಾರ್ಯದರ್ಶಿ ಶಂಕರ್ ಬಿ, ತುಮಕೂರು ವಲಯ ಅಧಿಕಾರಿ ಸಂಗಮೇಶ, ಶ್ರೀ ಸೇವಾಲಾಲ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಬೇಂದ್ರ ನಾಯ್ಕ್, ನಿರ್ದೇಶಕರು ದೇಶ್ಯಾ ನಾಯ್ಕ್, ಸಕ್ರ ನಾಯ್ಕ್, ಮಾಜಿ ಜಿ.ಪಂ. ಸದಸ್ಯರು ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು…

Read More

ತುಮಕೂರು:ಕನ್ನಡ ನಾಡು ನುಡಿಗೆ ದುಡಿದವರನ್ನು ನವೆಂಬರ್ ಮಾಹೆಯಲ್ಲಿ ಇಡೀ ತಿಂಗಳು ಅವರುಗಳನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ,ನಗರದ ಸಂಘ-ಸ0ಸ್ಥೆಗಳು ಕನ್ನಡಕ್ಕಾಗಿ ದುಡಿದವರನ್ನು ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುತ್ತಿರುವುದು ನಮಗೆ ಸಂತಸ ತಂದಿದೆ,ತಾಯ0ದಿರು ತಮ್ಮ ಮಕ್ಕಳಿಗೆ ತಾಯಿ ಭಾಷೆ ಕನ್ನಡವನ್ನು ಹೇಳಿಕೊಡಿ,ನಿರ್ಭಯ ಮಹಿಳಾ ಜಾಗೃತಿ ವೇದಿಕೆ ಉತ್ತಮ ಕೆಲಸಗಳನ್ನು ಮಾಡುತ್ತಾ ಮಹಿಳೆಯರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ ಅವರ ಸಂಸ್ಥೆಯ ಜೊತೆ ಶಾಸಕನಾಗಿ ನಾನು ಸದಾ ಇರುತ್ತೇನೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು. ಅವರು ನಗರದ ೩೧ನೇ ವಾರ್ಡಿನ ಜಯನಗರ ಮಾರ್ಕೆಟ್ ಪಕ್ಕದಲ್ಲಿ ಸಂಕಲ್ಪ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಘ,ಕನ್ನಡ ಸಾಹಿತ್ಯ ಪರಿಷತ್ತು ನಗರ ಘಟಕ,ನಿರ್ಭಯ ಮಹಿಳಾ ಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ ವೈಭವದ ಕನ್ನಡ ರಾಜ್ಯೋತ್ಸವನ್ನು ಉದ್ಘಾಟಿಸಿ ಮಾತನಾಡಿದರು. ಮಾಜಿ ಶಾಸಕ ಡಾ. ಎಸ್.ರಫೀಕ್ ಅಹಮದ್ ರವರು ಮಾತನಾಡುತ್ತಾ ಸಂಘ-ಸAಸ್ಥೆಗಳಿ0ದ ಕನ್ನಡ ಭಾಷೆಗಾಗಿ ಕನ್ನಡ ಉಳಿವಿಗಾಗಿ ಜಾಗೃತಿ ಮೂಡಿಸುತ್ತಿವೆ,ನಿರ್ಭಯ ಮಹಿಳಾ ವೇದಿಕೆಯು ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದೆ,ಮಹಿಳೆಯರಿಗೆ ಎಂತಹುದೇ…

Read More