ತುರುವೇಕೆರೆ: ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆಗಳ ಕಾಟ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೈಗೊಂಡ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎರಡನೇ ಚಿರತೆಯನ್ನು ಸೆರೆಹಿಡಿಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸೆರೆಸಿಕ್ಕ ಚಿರತೆ ಸುಮಾರು ಐದು ವರ್ಷದ ಹೆಣ್ಣು ಚಿರತೆ ಆಗಿದ್ದು, ಇದರಿಂದಾಗಿ ಕೇವಲ ಎರಡು ದಿನಗಳಲ್ಲಿ ಎರಡು ಚಿರತೆಗಳು ಸೆರೆಸಿಕ್ಕಂ ತಾಗಿದೆ. ಈಗಾಗಲೇ ಸೆರೆಹಿಡಿದಿರುವ ಎರಡೂ ಚಿರತೆ ಗಳನ್ನು ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಸುರಕ್ಷಿತವಾಗಿ ಕಾಡು ಪ್ರದೇಶಕ್ಕೆ ಬಿಡ ಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ದನ ಮೇಯಿಸಲು ತೆರಳಿದ್ದ ಸುಜಾತ ಎಂಬ ಮಹಿಳೆಯ ಮೇಲೆ ಎರಗಿದ ಚಿರತೆ ಕೊಂದು ಹಾಕಿತ್ತು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಿದೆ.
Author: News Desk Benkiyabale
ಕೊರಟಗೆರೆ: ತುಂಬು ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿ ತಹಶೀಲ್ದಾರ್ ಮುಖೇನಾ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹುಬ್ಬಳ್ಳಿ ತಾಲೂಕಿನ ವೀರಾಪುರ ಗ್ರಾಮದ ಯುವತಿ ಅಂತ ರ್ಜಾತಿ ವಿವಾಹ ಆಗಿದ್ದಕ್ಕೆ ತಂದೆಯೇ ಮಗಳು ೭ ತಿಂಗಳು ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಭೀಕರವಾಗಿ ಕೊಲೆ ಮಾಡಿರುವುದನ್ನು ದಲಿತ ಪರ ಸಂಘಟನೆಗಳ ಒಕ್ಕೂಟ ತೀವ್ರ ವಾಗಿ ಖಂಡಿಸುತ್ತದೆ. ಬೀಕರವಾಗಿ ಹತ್ಯೆ ಮಾಡಿದ ತಂದೆಗೆ ವಿಶೇಷ ಕಾನೂನು ರಚನೆ ಮಾಡಿ ಮುಲಕ ಗಲ್ಲು ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಮಾದಿಗ ಸಮುದಾಯದ ಯುವಕ ಅಂತರ್ಜಾತಿ ವಿವಾಹವಾಗಿ ಒಂದೂವರೆ ವರ್ಷ ಕಳೆದಿದೆ. ಮಗಳು ೭ ತಿಂಗಳ ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ವಿಕೃತವಾಗಿ ಕೊಲೆ ಮಾಡಿದ ಪಾಪಿ ತಂದೆಗೆ ಸರ್ಕಾರ ವಿಶೇಷ ಕಾನೂನು ರಚಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ…
ತುರುವೇಕೆರೆ: ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿ ತಾಲೂಕಿನಲ್ಲಿನ ಚಿರತೆ ಹಾವಳಿಯನ್ನು ತಡೆಗಟ್ಟಬೇಕು ಎಂದು ಮಾಜಿ ಶಾಸಕ ಮಸಾಲಜಯರಾಮ್ ತಿಳಿಸಿದರು. ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಲಿಯಾಗಿದ್ದ ರೈತ ಮಹಿಳೆ ಸುಜಾತ ಕುಟುಂಬಕ್ಕೆ ೫೦ ಸಾವಿರ ನೆರವು ನೀಡಿ ಸಾಂತ್ವನ ಹೇಳಿ ಮಾತನಾಡಿದ ಅವರು ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ರೈತರು ತಮ್ಮ ತೋಟದ ಕೃಷಿ ಕೆಲಸಗಳು ಮಾಡಲು, ತಮ್ಮ ದನ ಹಸು ಮೇಹಿಸಲು ತೋಟ ಹೊಲಗಳಿಗೆ ತೆರಳಬೇಕಾಗಿತ್ತದೆ. ಅರಣ್ಯ ಇಲಾಖೆ ಚಿರತೆ ಹಿಡಿಯಲು ತುರ್ತು ಕ್ರಮ ಕೈಗೊಳ್ಳಬೇಕು. ಮಹಿಳೆ ಮೇಲೆ ದಾಳಿ ಮಾಡಿದ ಸ್ಥಳದ ಅಸು ಪಾಸಿನಲ್ಲಿ ಅರಣ್ಯ ಇಲಾಖೆ ೨ ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಚಿರತೆ ದಾಳಿಯಿಂದ ಸಾವು ಹಾಗುವಂತಹ ದುರ್ಘಟನೆಗಳು ಮತ್ತೆ ತಾಲೂಕಿನಲ್ಲಿ ಮರುಕಳಿಸಬಾರದು ಎಂದು ಎಚ್ಚರಿಸಿ ಹೆಚ್ಚು ಚಿರತೆ ಹಾವಳಿ ಇರುವ ಕಡೆಗಳಲ್ಲಿ ಬೋನ್ ಗಳನ್ನು ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಕೆಂಪೇಗೌಡ, ಜಯರಾಂ, ರವೀಗೌಡ, ರತೀಶ್, ತಮ್ಮಣ್ಣಗೌಡ, ಮಂಜುನಾಥ್, ಶ್ರೀಧರ್, ವಿ.ಬಿ.ಸುರೇಶ್,…
ಹುಳಿಯಾರು: ವಿದ್ಯಾರ್ಥಿ ಸಮುದಾಯವನ್ನು ದಾರಿ ತಪ್ಪಿಸುತ್ತಿರುವ ಮಾದಕ ದ್ರವ್ಯಗಳು ಅವರ ವ್ಯಾಸಂಗಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಹಾಗೆಯೇ ದೈಹಿಕ ಮತ್ತು ಮಾನಸಿಕವಾಗಿ ಮನುಷ್ಯನ ಜೀವನವನ್ನು ಜರ್ಜರಿತವನ್ನಾಗಿ ಮಾದಕ ದ್ರವ್ಯಗಳು ಮಾಡುತ್ತಿವೆ. ಮಾದಕ ದ್ರವ್ಯಗಳನ್ನು ಮಾರಾಟ ಮಾಡುವುದು ಮತ್ತು ಸೇವಿಸುವುದು ಅಪರಾಧವಾಗಿದ್ದು, ಈ ಸಂಬ0ಧ ಸಾಮಾಜಿಕ ಜಾಲತಾಣಗಳ ಬಳಕೆಯೂ ಕ್ರಿಮಿನಲ್ ಅಪರಾಧವಾಗಿದೆ ಎಂದು ಚಿಕ್ಕನಾಯಕನಹಳ್ಳಿ ವೃತ್ತ ನಿರೀಕ್ಷಕರಾದ ಜನಾರ್ದನ್ ಎಚ್ಚರಿಸಿದರು. ಹುಳಿಯಾರು-ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ, ಚಿಕ್ಕನಾಯಕನಹಳ್ಳಿ ಹಾಗೂ ಹುಳಿಯಾರು ಪೊಲೀಸ್ ಠಾಣೆಗಳ ಸಂಯುಕ್ತಾಶ್ರಯದಲ್ಲಿ ‘ಅಪರಾಧ ತಡೆ ಮಾಸಾಚರಣೆ’ ಹಾಗೂ ‘ಮಾದಕ ವ್ಯಸನ ಮುಕ್ತ ಅಭಿಯಾನ’ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಾನೂನಿನ ಚೌಕಟ್ಟುಗಳು, ಸಂಚಾರಿ ನಿಯಮಗಳು ಹಾಗೂ ಸೈಬರ್ ಅಪರಾಧಗಳ ಬಗ್ಗೆ ವಿಸ್ತöತವಾಗಿ ಮಾಹಿತಿ ನೀಡಿದರು. ಹುಳಿಯಾರು ಪೊಲೀಸ್ ಉಪನಿರೀಕ್ಷಕರಾದ ಚಿತ್ತರಂಜನ್ ಮಾತನಾಡಿ, ಮೋಜು ಮಸ್ತಿ ಮತ್ತು ಕ್ಷಣಿಕ ಸುಖ ಅನುಭವಿಸಲು ಇಂದು ಯುವ ಜನಾಂಗ ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ.…
ಮಧುಗಿರಿ: ಸಾಹಿತ್ಯಕ್ಕೆ ಮನುಷ್ಯನ ಗುಣವನ್ನು ಬದಲಾಯಿಸುವ ಶಕ್ತಿ ಇದೆ ಎಂದು ಖ್ಯಾತ ವಕೀಲರು ಹಾಗೂ ಸಾಮಾಜಿಕ ಚಿಂತಕರು ಆದ ಪ್ರೊಫೆಸರ್ ರವಿವರ್ಮ ಕುಮಾರ್ ತಿಳಿಸಿದ್ದಾರೆ ಪಟ್ಟಣದ ಕನ್ನಡ ಭವನ ನದಲ್ಲಿ ನಡೆದ ೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿ ಮಾತನಾಡುತ್ತಾ ವಿದ್ಯಾರ್ಥಿ ದೆಸೆಯಲ್ಲಿ ಕಟ್ಟ ಆರ್ ಎಸ್ ಎಸ್ ವಾಧಿಯಾಗಿದ್ದ ನನ್ನನ್ನು ಕುವೆಂಪುರವರ “ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ” ಎಂಬ ಒಂದು ಪುಸ್ತಕ ಆರ್ ಎಸ್ ಎಸ್ ನಿಂದ ದೂರ ಮಾಡಿತು ಎಂದವರು ಇದು ಸಾಹಿತ್ಯಕ್ಕೆ ಇರುವ ಶಕ್ತಿ ಎಂದು ತಿಳಿಸಿದರು. ನಮ್ಮ ತಂದೆ ಕೆಂಗರಾಮಯ್ಯ ನವರು ಮಿಡಿಗೇಶಿಯಲ್ಲಿ ಶಿಕ್ಷಕರಾಗಿದ್ದು ಈ ಸಂದರ್ಭದಲ್ಲಿ ಬಾಲ್ಯದಲ್ಲಿ ಮಧುಗಿರಿಯಲ್ಲಿ ಶಿಕ್ಷಣ ಪಡೆದಿದ್ದನ್ನು ನೆನಪಿಸಿಕೊಂಡ ಅವರು ೫೦ ವರ್ಷಗಳಿಂದ ಸಂಪೂರ್ಣವಾಗಿ ನಾಡಿನ ಹೆಸರಾಂತ ಕುವೆಂಪು ಪೂರ್ಣಚಂದ್ರ ತೇಜಸ್ವಿ ಲಂಕೇಶ್ ಕಾರಂತ ಮುಂತಾ ದವರ ಕೃತಿಗಳು ನನಗೆ ಪ್ರೇರಣೆಯಾಗಿವೆ ಇದೇ ಅಲ್ಲದೆ ತೇಜಸ್ವಿ ರವರ ಕಾರ್ವಾಲೊ ಕಾದಂಬರಿಯ ಬರವಣಿಗೆಯ ಸಂದರ್ಭದಲ್ಲಿ ಪ್ರತಿಪುಟಕ್ಕೂ ಸಾಕ್ಷಿಯಾಗಿದ್ದು ನನ್ನ…
ತುಮಕೂರು: ಭೌತಿಕ ಜೀವನ ಸಮೃದ್ಧಗೊಂಡ0ತೆ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕಾಗಿದೆ. ಧರ್ಮದ ದಿಕ್ಸೂಚಿ ಇಲ್ಲದೇ ಹೋದರೆ ಮಾನವ ಜೀವನ ನಿರರ್ಥಕ. ವೀರಶೈವರು ಲಿಂಗಾಯತರು ಒಂದಾಗಿ ಬಾಳಿದರೆ ಧರ್ಮಕ್ಕೆ ಉಜ್ವಲ ಭವಿಷ್ಯವಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಗುರುವಾರ ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಮನುಷ್ಯ ಜೀವನದಲ್ಲಿ ಧರ್ಮ ಅರ್ಥ ಕಾಮ ಮೋಕ್ಷ ಎಂಬ ನಾಲ್ಕು ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿ ಕೊಳ್ಳದಿದ್ದರೆ ಮಾನವ ಜೀವನ ನಿರರ್ಥಕವಾಗುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಧರ್ಮದ ದಶವಿಧ ಸೂತ್ರಗಳನ್ನು ಬೋಧಿಸಿ ಎಲ್ಲರನ್ನು ಉದ್ಧರಿಸಿದ್ದಾರೆ. ವೀರಶೈವ ಧರ್ಮ ವೃಕ್ಷದ ತಾಯ್ಬೇರು ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು. ಆದರೆ ಆ ಧರ್ಮ ವೃಕ್ಷದ ಹೂ ಹಣ್ಣುಗಳಂತೆ ಬಸವಾದಿ ಶಿವಶ ರಣರಿದ್ದಾರೆ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ ವಿಜ್ಞಾನ ನಾಗರೀಕತೆ ಮತ್ತು ರಾಜಕೀಯ…
ಪಾವಗಡ: ಕ್ರಿಸ್ಮಸ್ ಎಂಬುದು ದೇವರ ಪ್ರೀತಿಯ ಮಹಾ ಸಂಕಲ್ಪದ ಸಂಕೇತವಾಗಿದ್ದು, ಯೇಸು ಕ್ರಿಸ್ತನ ದಿವ್ಯ ಜನನದ ಸ್ಮರಣರ್ಥವಾಗಿ ಜಗತ್ತಿನಾದ್ಯಂತ ಆಚರಿಸಲಾಗುವ ಮಹತ್ವದ ಹಬ್ಬವಾಗಿದೆ. ದೇವರು ಲೋಕವನ್ನು ಅಷ್ಟಾಗಿ ಪ್ರೀತಿಸಿದ್ದರಿಂದ ತನ್ನ ಏಕಮಾತ್ರ ಪುತ್ರನನ್ನು ಮಾನವ ರಕ್ಷಣೆಗೆ ನೀಡಿದನು ಎಂಬ ಸಂದೇಶವನ್ನು ಕ್ರಿಸ್ಮಸ್ ಹಬ್ಬ ಸಾರುತ್ತದೆ. ಈ ಹಿನ್ನೆಲೆಯಲ್ಲಿ ಪಾವಗಡದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಮಿಷನ್ ರ್ಚ್ನಲ್ಲಿ ದಿನಾಂಕ ೨೪-೧೨-೨೦೨೫ರ ಮಧ್ಯರಾತ್ರಿ ಕ್ರಿಸ್ಮಸ್ ಹಬ್ಬವನ್ನು ಭಕ್ತಿಪರ್ವಕವಾಗಿ ಹಾಗೂ ಸಂತೋಷಭರಿತವಾಗಿ ಆಚರಿಸಲಾಯಿತು. ರ್ಚ್ ಆವರಣವನ್ನು ದೀಪಾಲಂಕಾರ, ನಕ್ಷತ್ರಗಳು ಹಾಗೂ ಕ್ರಿಸ್ಮಸ್ ಅಲಂಕಾರಗಳಿಂದ ಸುಂದರವಾಗಿ ಸಿಂಗಾರಿಸಲಾಗಿತ್ತು. ಭಕ್ತವಿಶ್ವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಭ್ರಮವನ್ನು ಇನ್ನಷ್ಟು ರ್ಥಪರ್ಣಗೊಳಿಸಿದರು. ದಿವ್ಯ ಬಲಿಪೂಜೆಯ ಸಂರ್ಭದಲ್ಲಿ ರ್ಮಕೇಂದ್ರದ ಗುರುಗಳಾದ ವಂದನೀಯ ಸ್ವಾಮಿ ಫಾದರ್ ಕಾನಿಕಾದಾಸ್ ಅವರು ತಮ್ಮ ಪ್ರವಚನದ ಮೂಲಕ ಕ್ರಿಸ್ತನ ಜನನ ತರುವ ಶಾಂತಿ, ಪ್ರೀತಿ, ಕ್ಷಮೆ ಹಾಗೂ ಸಹೋದರತ್ವದ ಸಂದೇಶವನ್ನು ಮನಮುಟ್ಟುವಂತೆ ವಿವರಿಸಿದರು. ಇದೇ ಸಂರ್ಭದಲ್ಲಿ ದೇಶ, ರಾಜ್ಯ, ಪಾವಗಡ ತಾಲ್ಲೂಕಿನ ಒಳಿತಿಗಾಗಿ, ಜನನಾಯಕರ ಆರೋಗ್ಯ ಹಾಗೂ ಸೇವೆಗಾಗಿ…
ತುಮಕೂರು: ಮಕ್ಕಳಿಗೆ ಪಠ್ಯದ ಜೊತೆಗೆ, ಪಠ್ಯೇತರ ಚಟುವಟಿಕೆಯಾಗಿ ವಿಜ್ಞಾನ ಮತ್ತು ವಾಣಿಜ್ಯ ಶಾಸ್ತçಕ್ಕೆ ಸಂಬ0ಧಿಸಿದ “ ವೇವ್ ಸೈನ್ಸ್ ಎಕ್ಸಪೋ-2025” ವಿಜ್ಞಾನ ವಸ್ತುಪ್ರದರ್ಶನವನ್ನು ಸತ್ಯಮಂಗಲದಲ್ಲಿರುವ ಜೈನ್ ಪಿಯು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಜೈನ್ ಪಿಯು ಕಾಲೇಜಿನ ೧೫೦ಕ್ಕೂ ಹೆಚ್ಚು ಮಕ್ಕಳು ಉಪನ್ಯಾಸಕರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದ ಸುಮಾರು ೮೨ ವಿವಿಧ ರೀತಿಯ ಪ್ರಾತಕ್ಷಿಕೆಗಳು, ವಿಜ್ಞಾನ, ವಾಣಿಜ್ಯ, ಜಾನಪದ,ಭಾಷಾ ವಿಜ್ಞಾನ ಸೇರಿದಂತೆ ಹಲವು ವಿಚಾರಗಳ ಕುರಿತ ತಯಾರಿಸಿದ್ದ ಪ್ರತಿಕೃತಿಗಳು, ಭವಿಷ್ಯದಲ್ಲಿ ಭಾರತದ ವೈಜ್ಞಾನಿಕ ಬೆಳವಣಿಗೆ ಮತ್ತು ಅವುಗಳ ಉಪಯೋಗಗಳ ಕುರಿತ ಮಾಹಿತಿಯನ್ನು ಜೈನ್ ಪಿಯು ಕಾಲೇಜಿನ ಪ್ರಥಮ ಮತ್ತು ದ್ವಿತಿಯ ವರ್ಷದ ವಿದ್ಯಾರ್ಥಿಗಳು ನೋಡುಗರಿಗೆ ವಿವರಿಸುವ ಮೂಲಕ ವಿಜ್ಞಾನ ವಸ್ತು ಪ್ರದರ್ಶನದ ಮಹತ್ವವನ್ನು ಸಾರಿದರು. ತಮ್ಮ ಕಾಲೇಜು ವತಿಯಿಂದ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ “ ವೇವ್ ಸೈನ್ಸ್ ಎಕ್ಸಪೋ-೨೦೨೫ ಕುರಿತು ಮಾತನಾಡಿದ ಜೈನ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ವರುಣ್ಕುಮಾರ್,ಮಕ್ಕಳ ಬೌತಿಕ ಮತ್ತು ಬೌದ್ಧಿಕ ಬೆಳೆವಣಿಗೆಯ ದೃಷ್ಟಿಯಿಂದ ನಮ್ಮ ಕಾಲೇಜಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.…
ತುಮಕೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾಂಸ್ಕೃತಿಕ ಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಾಲ್ಕು ದಿನಗಳ ಕಾಲ ಖ್ಯಾತ ವೈದ್ಯರಾದ ದಿ. ಡಾ. ಸಿ. ಜಯರಾಮರಾವ್ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ಡಾ.ಪುನೀತ್ ರಾಜ್ ಕಪ್ ರಾಜ್ಯಮಟ್ಚದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಅನೇಕ ಮಂದಿ ಕ್ರಿಕೆಟ್ ಆಟಗಾರರನ್ನು ವಿಶ್ವಕ್ಕೆ ನೀಡಿದೆ. ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ಹಾಗೂ ತುಮಕೂರು ಜಿಲ್ಲೆಯ ಕೆ.ಎಲ್. ರಾಹುಲ್ ರವರನ್ನು ಸಹ ಕ್ರಿಕೆಟ್ ಜಗತ್ತಿಗೆ ಕೊಡುಗೆಯಾಗಿ ನಮ್ಮ ರಾಜ್ಯ ನೀಡಿದೆ ಎಂದು ಹೇಳಿದರು. ಕ್ರಿಕೆಟ್ ಸೇರಿದಂತೆ ಇತರ ಕ್ರೀಡೆಗಳು ಮನುಷ್ಯನ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಒಂದು ತಂಡ ಮಾತ್ರ ಗೆಲುವು ಸಾಧಿಸಲು ಸಾಧ್ಯ. ಹಾಗಾಗಿ ಸೋತವರು ಬೇಸರಗೊಳ್ಳದೆ ಒಂದು ತಂಡವಾಗಿ ಕ್ರೀಡಾಕೂಟದಲ್ಲಿ ಆಟ ಆಡಬೇಕು ಎಂದು ಸಲಹೆ…
ತುರುವೇಕೆರೆ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ೨೦೨೪-೨೫ ನೇ ಸಾಲಿನ ವಾರ್ಷಿಕ ಮಹಾಸಭೆ, ತಾಲ್ಲೂಕು ಹಿರಿಯ ನಾಗರೀಕರ ದಿನಾಚರಣೆ ಹಾಗೂ ೭೫ವರ್ಷ ಮೇಲ್ಪಟ್ಟ ಹಿರಿಯ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಸೋಮವಾರ ಪಟ್ಟಣದ ಹೊರಪೇಟೆಯಲ್ಲಿರುವ ವಿರಕ್ತ ಮಠದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಬಾ.ಹಾ.ರಮಾಕುಮಾರಿ ಉದ್ಘಾಟನಾ ನುಡಿಗಳನ್ನಾಡುತ್ತಾ ನಾವೆಲ್ಲಾ ಸಂಘಟಿತರಾಗುವ ಮೂಲಕ ನಮ್ಮ ಅಸ್ಥಿತ್ವ ಏನೆಂಬುದನ್ನು ತೋರಿಸಿಕೊಳ್ಳಬೇಕಾಗಿದೆ. ನಮಗೆ ಮುಖ್ಯವಾದ ೨ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕಾಗಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯಿಂದ ನಮ್ಮ ಬೇಡಿಕೆಗಳಿಗೆ ಹಿನ್ನಡೆಯಾಗುತ್ತಿದೆ. ನಮ್ಮ ಬೇಡಿಕೆಗಳು ಈಡೇರಬೇಕಾದರೆ ನಮ್ಮ ಸಂಘಟನಾ ಶಕ್ತಿ ಏನೆಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲೋಸ್ಕರ ನಿವೃತ್ತ ನೌಕರರು ಸಂಘದಲ್ಲಿ ಹೆಚ್ಚೆಚ್ಚು ನೋಂದಣಿ ಮಾಡಿಕೊಂಡು ಸಂಘಟಿತರಾಗುವ ಮೂಲಕ ಆದಷ್ಟು ಬೇಗ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕಾಗಿದೆಯಲ್ಲದೆ ಸಾರ್ವಜನಿಕರ ಕಂದಾಯದ ಹಣ ನಮಗೆ ಪಿಂಚಣಿ ರೂಪದಲ್ಲಿ ಬರುತ್ತಿದ್ದು ನಾವುಗಳೂ ಸಹಾ ನಮ್ಮ ಕೈಲಾದಷ್ಟು ಸಮಾಜದಲ್ಲಿ ಕಿಂಚಿತ್ತಾದರೂ ಸೇವೆ ಮಾಡುವ ಮೂಲಕ ನಾವುಗಳು ಋಣಮುಕ್ತರಾಗೋಣವೆಂದರು. ರಾಜ್ಯ ಸರ್ಕಾರಿ…











