Author: News Desk Benkiyabale

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ, ಸರ್ಕಾರಿ ಶಾಲೆ, ಅಂಗನವಾಡಿ ಸೇರಿದಂತೆ ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆ ಭೇಟಿ: ವೈದ್ಯರ ಗೈರು: ತಾಲೂಕಿನ ಬಿದರೆ ಗ್ರಾಮದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದಾಗ ವೈದ್ಯರು ಗೈರಾಗಿರುವುದನ್ನು ಗಮನಿಸಿದ ಅವರು ಸರ್ಕಾರಿ ಆಸ್ಪತ್ರೆಗೆ ಗ್ರಾಮಾಂತರ ಪ್ರದೇಶದ ಬಡಜನರೇ ಹೆಚ್ಚಾಗಿ ಬರುವುದರಿಂದ ವೈದ್ಯರು ಸಮಯಕ್ಕೆ ಸರಿಯಾಗಿ ಲಭ್ಯವಿರಬೇಕು. ಮನಸ್ಸಿಗೆ ತೋಚಿದಂತೆ ಬಂದರೆ ಹಳ್ಳಿಯ ಜನರ ಕಥೆ ಏನಾಗಬೇಕು? ರೋಗಿಗಳ ಚಿಕಿತ್ಸೆ ಸೇರಿದಂತೆ ಎಲ್ಲಾ ಕೆಲಸವನ್ನು ಆಸ್ಪತ್ರೆಯಲ್ಲಿರುವ ಶುಶ್ರೂಷಕಿ ಒಬ್ಬರೇ ಮಾಡುತ್ತಿದ್ದಾರಾ ಎಂದು ಕ್ಲಾಸ್ ತೆಗೆದುಕೊಂಡರು. ಆಸ್ಪತ್ರೆ ನೋಡಿದರೆ ಇಷ್ಟು ಚಿಕ್ಕದಾಗಿದ್ದು, ಇಲ್ಲಿ ಹೇಗೆ ಚಿಕಿತ್ಸೆ ನೀಡುತ್ತೀರಾ? ಆಸ್ಪತ್ರೆಯಲ್ಲಿ ಚಿಕಿತ್ಸೆ, ಔಷಧೋಪಚಾರ ನೀಡುವುದು ಸಮಾಧಾನ ತಂದಿದೆಯೇ ಎಂದು ಅಲ್ಲಿಗೆ ಬಂದಿದ್ದ0ತಹ ರೋಗಿಗಳನ್ನೇ ಪ್ರಶ್ನಿಸಿದರು. ಹೊಸ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ೩ ಕೋಟಿ ರೂ. ಹಣ ಬಿಡುಗಡೆಯಾಗಿದೆ. ಹಣ ಬಿಡುಗಡೆಯಾಗಿದ್ದರೂ ಏಕೆ ಕಾಮಗಾರಿಯನ್ನು ಆರಂಭಿಸಿಲ್ಲವೆ0ದು ಸಂಬ0ಧಪಟ್ಟ…

Read More

ಗುಬ್ಬಿ: ಎಚ್ ಎ ಎಲ್ ನಲ್ಲಿ ಸೈನಿಕರಿಗೆ ಆರು ಎಕರೆ ಜಮೀನು ಮೀಸಲು ಇರಿಸಿದ್ದು ಹಸ್ತಾಂತರಿಸುವ0ತೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಎಸ್ಸಿಎಸ್ ಕಲ್ಯಾಣ ಮಂಟಪದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ನಡೆದ ನಿವೃತ ಸೈನಿಕ ದಿವಾಕರ್ ಬಿ ಟಿ ರವರಿಗೆ ಸ್ವಾಗತ ಹಾಗೂ ಅಭಿನಂದನಾ ಸಮಾರಂಭ ಮತ್ತು ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರೈತ ದೇಶಕ್ಕೆ ಅನ್ನವನ್ನು ನೀಡಿದರೆ ದೇಶವನ್ನು ಕಾಯುವಲ್ಲಿ ಸೈನಿಕರ ಪಾತ್ರ ಮಹತ್ತರವಾದದ್ದು. ಪ್ರತಿಯೊಬ್ಬರೂ ಸೈನಿಕರಿಗೆ ಗೌರವ ನೀಡುವ ಮೂಲಕ ಅವರನ್ನು ಗೌರವಿಸಬೇಕು. ಭಾರತದಲ್ಲಿ ಮಿಲಿಟರಿ ವ್ಯವಸ್ಥೆ ಸುಭದ್ರವಾಗಿದ್ದು ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಭಾರತದ ಸೈನಿಕರ ಶೌರ್ಯ, ಧೈರ್ಯ ಎಂತದು ಎಂಬುದನ್ನು ಸಾಬೀತು ಪಡಿಸಿದ್ದಾರೆ. ಹಿಂದಿನ ಯುವ ಪೀಳಿಗೆಗೆ ದೇಶ ಹಾಗೂ ಸೈನಿಕರ ಮೇಲೆ ಅಭಿಮಾನ ಗೌರವವನ್ನು ಬೆಳೆಸಿಕೊಳ್ಳಬೇಕು. ನಾವು ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬ ತುಡಿತ…

Read More

ಶಿರಾ: ಹೈನುಗಾರಿಕೆ ರೈತರ ಜೀವನಕ್ಕೆ ವರದಾನವಾಗಿದ್ದು, ರೈತರು ಕೃಷಿ ಜೊತೆಗೆ ಹೆಚ್ಚು ಹೆಚ್ಚು ಹೈನುಗಾರಿಕೆಯಲ್ಲಿ ತೊಡಗಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಶಿರಾ ನಗರದ ನಂದಿನಿ ಕ್ಷೀರ ಭವನ ಆವರಣದಲ್ಲಿ ತುಮಕೂರು ಹಾಲು ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ೨.೫ ಕೋಟಿ ರೂಪಾಯಿ ಅನುದಾನದ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಅಂಧರ ಟಿ೨೦ ಕ್ರಿಕೇಟ್‌ನಲ್ಲಿ ನಾಯಕಿಯಾಗಿದ್ದ ಶಿರಾ ತಾಲೂಕಿನ ಕುಮಾರಿ ದೀಪಿಕಾ ಅವರಿಗೆ ಸನ್ಮಾನ, ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಸ್ವತಃ ಇಷ್ಟ ಪಟ್ಟು ಕೃಷಿ ಮಂತ್ರಿ, ಪಶು ಸಂಗೋಪನೆ, ನೀರಾವರಿ ಖಾತೆ ಕೇಳಿ ಪಡೆದಿದ್ದೆ. ಸಚಿವನಾಗಿದ್ದ ಸಂದರ್ಭದಲ್ಲಿ ಹೈನುಗಾರಿಕೆಗೆ ಪ್ರೋತ್ಸಾಹ ನೀಡಿದ್ದೇನೆ ಎಂದ ಅವರು ಶಿರಾ ತಾಲೂಕಿನಲ್ಲಿ ನಂದಿನಿ ಉತ್ಪನ್ನಗಳ ತಯಾರಿಕಾ ಘಟಕ ಸ್ಥಾಪಿ ಸಲು ೪.ಎಕರೆ ಜಮೀನನ್ನು ಮಂಜೂರು ಮಾಡಲಾಗುವುದು ಎಂದರು. ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ ಶಿರಾದಲ್ಲಿ ಶಾಸಕ ಟಿ.ಬಿ.ಜಯಚಂದ್ರ ಅವರು ನೀರನ ಹೊಳೆ ಹರಿಸಿದ್ದಾರೆ. ಎಸ್.ಆರ್.ಗೌಡ ಅವರು…

Read More

ತುಮಕೂರು: ಸುಪ್ರಿಂ ಕೋರ್ಟಿನ ತೀರ್ಪಿನ ನಡುವೆಯೂ ಒಳಮೀಸಲಾತಿ ಜಾರಿಗೆ ವಿವಿಧ ಕಾರಣಗಳನ್ನು ನೀಡಿ ನಿರ್ಲಕ್ಷ ತೋರಿರುವ ರಾಜ್ಯ ಸರಕಾರದ ವಿರುದ್ದ ಅಂಬೇಡ್ಕರ್ ಪರಿನಿಬ್ಬಾಣದ ದಿನವಾದ ಡಿಸೆಂಬರ್ ೦೬ ರಿಂದ ೧೧ರವರೆಗೆ ಮೈಸೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಕೈಗೊಳ್ಳಲಾಗಿದೆ ಎಂದು ಸಮಿತಿ ರಾಜ್ಯ ಸಂಚಾಲಕರಾದ ಕೇಶವಮೂರ್ತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಡಿಸೆಂಬರ್ ೬ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನ ಹುಂಡಿಯಿ0ದ “ಪೂರ್ಣ ಪ್ರಮಾಣದ ಒಳಮೀ ಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ”ಎಂಬ ಘೋಷ ವಾಕ್ಯ ದೊಂದಿಗೆ ಮೈಸೂರು ಚಲೋ ಜಾಥಾ ಆರಂಭಿಸಿ,ಡಿಸೆ0ಬರ್ ೧೧ ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಮುಕ್ತಾಯಗೊಳಿಸಲಾಗುವುದು ಎಂದರು. ಸರಕಾರ ಹೇಳುತ್ತಿರುವಂತೆ ಒಳಮೀಸಲಾತಿ ಯನ್ನು ಕೇವಲ ಉದ್ಯೋಗ ಮತ್ತು ಶಿಕ್ಷಣಕ್ಕೆ ಸಮಿತಗೊಳಿಸುವುದು ಸರಿಯಲ್ಲ. ರಾಜಕೀಯ ಸೇರಿದಂತೆ ಎಲ್ಲಾ ರಂಗದಲ್ಲಿಯೂ ಒಳಮೀಸಲಾತಿ ಪರಿಪೂರ್ಣವಾಗಿ ಜಾರಿಗೆ ಬರಬೇಕು ಎಂಬುದು ಪರಿಶಿಷ್ಟ ಜಾತಿಯಲ್ಲಿರುವ ೧೦೧ ಜಾತಿಗಳ…

Read More

ತುಮಕೂರು: ನಾಡಿನ ಹಬ್ಬ-ಹುಣ್ಣಿಮೆಗಳ ಆಚರಣೆ, ಪೂಜಾ ವಿಧಾನ, ಗ್ರಾಮೀಣ ಜನರ ಅಡುಗೆ, ಉಡುಗೆ, ದಾರ್ಶನಿಕರು ಸಾರಿದ ಜೀವನ ಸಾರ, ನಾಡುನುಡಿಯ ಹಿರಿಮೆ ಒಳಗೊಂಡ ದೀರ್ಘ ಅಧ್ಯಯನದ ಪ್ರಬುದ್ಧ ಲೇಖನಗಳ ಜ್ಞಾನಗುಚ್ಛ ದೇವಕಣ ಕೃತಿ ಎಂದು ಪ್ರಾಚೀನ ವಚನಕಾರ ಟಿ.ಮುರಳಿಕೃಷ್ಣಪ್ಪ ಹೇಳಿದರು. ಜ್ಞಾನಬುತ್ತಿ ಸತ್ಸಂಗ ಕೇಂದ್ರ ಹಾಗೂ ಶಾಲ್ಮಲೀ ಪ್ರಕಾಶನದಿಂದ ನಗರದ ವಾಸವಿ ಸುಜ್ಞಾನ ಮಂದಿರ ಸಭಾಂಗಣದಲ್ಲಿ ಮಂಗಳ ವಾರ ಸಂಜೆ ನಡೆದ ಹಿರಿಯ ಸಾಹಿತಿ, ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಡಾ.ಗಂಗಾಧರ ಕೊಡ್ಲಿಯವರು ರಚಿಸಿರುವ ‘ದೇವಕಣ’ ಗ್ರಂಥ ಲೋಕಾರ್ಪಣೆ ಮಾಡಿ, ಗ್ರಂಥ ಕುರಿತು ಮಾತನಾಡಿದರು. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಡಾ.ಗಂಗಾಧರ ಕೊಡ್ಲಿ ಯರರು ಪ್ರವೃತ್ತಿಯಲ್ಲಿ ಉತ್ತಮ ಸಾಹಿತ್ಯ ರಚನಾಕಾರರು, ಇದೂವರೆಗೆ ಹತ್ತು ಕೃತಿಗಳನ್ನು ರಚಿಸಿದ್ದಾರೆ, ಇವರ ದೇವರಕಣ ಶ್ರೇಷ್ಠ ಕೃತಿಯಾಗಿ ಕನ್ನಡ ಸಾಹಿತ್ಯ ಸೇರಿದೆ. ಕೃತಿಯಲ್ಲಿರುವ ಎಲ್ಲಾ ೨೪ ಲೇಖನಗಳನ್ನು ಕೃತಿಕಾರರು ಅಪಾರ ಅಧ್ಯಯನ ಮಾಡಿ ರಚಿಸಿದ ಲೇಖನಗಳಲ್ಲಿ ವಿಷಯದ ಆಳ, ಗಟ್ಟಿತನ ಕಂಡುಬರುತ್ತದೆ ಎಂದರು. ನಮ್ಮ ಗ್ರಾಮೀಣ ಪ್ರದೇಶದ ಬದುಕನ್ನು ಕುತೂಹಲದಿಂದ…

Read More

ವೈ.ಎನ್.ಹೊಸಕೋಟೆ: ಕನ್ನಡ ಸಾಹಿತ್ಯದ ಮೂಲಕ ವೈಚಾರಿಕ ಪ್ರಜ್ಞೆಯ ಕಟ್ಟಿಕೊಟ್ಟ ಶ್ರೇಷ್ಠ ಕವಿ ಕುವೆಂಪು ಎಂದು ಹಿರಿಯ ವಕೀಲ ಎಂ.ನಾಗೇ0ದ್ರಪ್ಪ ತಿಳಿಸಿದರು. ಹೋಬಳಿಯ ಪೋತಗಾನಹಳ್ಳಿ ಗ್ರಾಮದಲ್ಲಿ ಭಾನುವಾರದಂದು ಕುವೆಂಪು ಜನ್ಮದಿನಾಚರಣೆ ಸಮಿತಿಯು ಹಮ್ಮಿಕೊಂಡಿದ್ದ ಶತಮಾನ ಸಂಭ್ರಮದ ನಾಡಗೀತೆ ಜಾಗೃತಿ ಬೈಕ್ ಜಾಥವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕವಿ ಕುವೆಂಪು ವೈಚಾರಿಕ ಅರಿವಿನ ಮೂಲಕ ವಿಶ್ವಮಾನವ ಸಂದೇ ಶವನ್ನು ಕೊಟ್ಟವರು ಮತ್ತು ಮೌಢ್ಯಗಳನ್ನು ಮೀರಿ ಬೆಳಯಬೇಕು ಎಂದು ತಿಳುವಳಿಕೆ ನೀಡವರು. ಅಂತ ಮಹಾನ್ ಚೇತನದ ಚಿಂತನೆ ಗಳನ್ನು ಗ್ರಾಮೀಣ ಮಟ್ಟದಲ್ಲಿ ಪಸರಿಸುವ ಸಲುವಾಗಿ ಪೋತಗಾ ನಹಳ್ಳಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ತಾಲ್ಲೂಕಿನಲ್ಲಿರುವ ಯಾವುದೇ ಪಂಚಾಯಿತಿ ಮಟ್ಟದಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿಲ್ಲ. ಇದೊಂದು ವಿಶೇಷ ಕಾರ್ಯಕ್ರಮ. ಪ್ರತಿ ಪಂಚಾ ಯಿತಿಯಲ್ಲೂ ಇಂತಹ ಕಾರ್ಯಕ್ರಮಗಳು ನೆರವೇರಬೇಕು ಮತ್ತು ಈ ಕಾರ್ಯಕ್ರಮ ಗ್ರಾಮ ದಲ್ಲಿ ಹಿರಿಯರು, ಮಕ್ಕಳು ಎಲ್ಲರನ್ನೂ ಸೇರಿಸಿ ಕೊಂಡು ರೂಪುಗೊಳ್ಳಬೇಕು. ಕುವೆಂಪುರವರ ವಿಚಾರಧಾರೆ ಪ್ರತಿಯೊಬ್ಬರಿಗೂ ಮುಟ್ಟಬೇಕು ಎಂದರು. ನಿವೃತ್ತ ಉಪನಿರ್ದೇಶಕ ಬಸಲಿಂಗಪ್ಪ ಮಾತ ನಾಡಿ ಗ್ರಾಮೀಣ…

Read More

ತುಮಕೂರು: ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರು ವೇಕೆರೆ ತಾಲೂಕುಗಳಿಗೆ ಸಂಬ0ಧಿಸಿದ0ತೆ ಲೋಕಾಯುಕ್ತದಲ್ಲಿ ದಾಖಲಾಗಿ ಬಾಕಿಯಿರುವ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ನಡೆಸಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ೭೭ ದೂರುಗಳ ವಿಚಾರಣೆ ನಡೆಸಿ, ಸ್ಥಳದಲ್ಲೇ ೫೬ ದೂರುಗಳನ್ನು ಇತ್ಯ ರ್ಥಪಡಿಸಿದರು. ಉಳಿದ ೨೧ ದೂರುಗಳಿಗೆ ಕಾನೂನಾತ್ಮಕ ಪರಿಹಾರ ಒದಗಿಸು ವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ನಿಗದಿತ ಕಾಲಮಿತಿಯಲ್ಲಿ ಕ್ರಮ ಕೈಗೊಂಡು ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರು. ನವೆಂಬರ್ ೨೮ರ ಭೇಟಿ: ಸಂಜೆ ತಿಪಟೂರು ನಗರದಲ್ಲಿರುವ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಡಾ: ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ಅಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸಿ, ಕಂಡು ಬಂದ ಅವ್ಯವಸ್ಥೆಗಳನ್ನು ಸರಿಪಡಿಸಲು ಸಂಬ0ಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ರಲ್ಲದೆ, ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಅವ್ಯವಸ್ಥೆಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುತ್ತಾರೆ. ನವೆ0ಬರ್…

Read More

ತುಮಕೂರು: ಅಂಗನವಾಡಿ, ಬಿಸಿಊಟ, ಆಶಾ ನೌಕರರನ್ನು ಒಳಗೊಂಡ0ತೆ ದುಡಿವ ಜನರಿಗೆ ದ್ರೋಹ ಬಗೆಯುವ ೪ ಕಾರ್ಮಿಕ ಸಂಹಿತೆಗಳು ರದ್ದುಮಾಡಬೆಕು.. ದುಡಿವ ಜನರಿಗೆ ಶಾಸನ ಬದ್ದ ಸವಲತ್ತುಗಳನ್ನು ನಿರಾಕರಿಸುವ “ಶ್ರಮಶಕ್ತಿ ನೀತಿ” ೨೦೨೫ ಬೇಡವೇ ಬೇಡಾ.ಅಂಗನವಾಡಿಬಿಸಿಊಟ, ಆಶಾ, ನೌಕರರಿಗೂ ಮುಟ್ಟಿನ ರಜೆ ನೀಡಬೇಕು. ೫೬ ಲಕ್ಷ ಸ್ಕೀಮ್ ಕಾರ್ಮಿಕರ ಸೇವಾ ಷರತ್ತುಗಳ ಸುಧಾರಣೆಗೆ ಪ್ರತ್ಯೇಕ ವೇತನ ಆಯೋಗ ರಚಿಸಿ. ೨೦೧೮ ರಿಂದ ಅಂಗನವಾಡಿ, ಬಿಸಿಊಟ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ, ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ ೨೭೦೦ ರೂ., ಸಹಾಯಕಿಗೆ ೧೩೫೦ ರೂಗಳನ್ನು ಮಾತ್ರವೇ ನೀಡುತ್ತಿದೆ. ೨೦೦೯ ರಿಂದಬಿಸಿಊಟ ನೌಕರಿಗೆ ಕೇವಲ ೬೦೦ ರೂಗಳಿಗೆ ದುಡಿಸಲಾಗುತ್ತಿದೆ ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಕನಿಷ್ಠ ವೇತನವನ್ನಾದರೂ ಜಾರಿ ಮಾಡಬೇಕು. ಶಿಫಾರಸ್ಸಿನಂತೆ ಇವರನ್ನು ಉದ್ಯೋಗಸ್ಥರೆಂದೂ ಪರಿಗಣಿಸಿ ಶಾಸನ ಬದ್ಧಾ ಸೌಲಭ್ಯಗಳನ್ನು ಕೊಡಬೇಕು.ಅಂಗನವಾಡಿ ನೌಕರರನ್ನು ೩ ಮತ್ತು ೪ನೇ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು.ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿಪ್ರಾರಂಭಿಸಬೇಕು.ಎಲ್ಲಾ ಸ್ಕಿಮ್ ನೌಕರರಿಗೆ ಮಾಸಿಕ ೧೦,ಸಾವಿರ ನಿವೃತ್ತಿ ವೇತನ ನೀಡಬೇಕು.…

Read More

ತುಮಕೂರು: ಶನಿವಾರ ಬೆಳ್ಳಂ ಬೆಳಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಿಪಟೂರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ವಿದ್ಯಾರ್ಥಿ ನಿಲಯಗಳು ಮತ್ತು ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ವಚ್ಛತೆ, ಮೂಲಸೌಕರ್ಯ ಮತ್ತು ಗುಣಮಟ್ಟ ಕುರಿತು ಅಧಿಕಾರಿಗಳಿಗೆ ಕಡಕ್ ಸೂಚನೆಗಳನ್ನು ನೀಡಿದರು. ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ: ಉಪಲೋಕಾಯುಕ್ತರ ಭೇಟಿ ಹಿನ್ನೆಲೆಯಲ್ಲಿ ಎಪಿಎಂಸಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿ, ಬೆಳ್ಳಂ ಬೆಳಗ್ಗೆ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದ್ದರು. ಉಪಲೋಕಾಯುಕ್ತರು ಸ್ಥಳಕ್ಕೆ ಭೇಟಿ ನೀಡಿದ ವೇಳೆ ರೈತರೊಂದಿಗೆ ಮಾತನಾಡಿದಾಗ ಮಾರುಕಟ್ಟೆಯ ಅವ್ಯವಸ್ಥೆ ಬಗ್ಗೆ ರೈತರು ತಮ್ಮ ಅಸಮಾಧಾನವನ್ನು ಹೊರಹಾಕುತ್ಥಾ ಇಂದು ಮಾತ್ರ ಸ್ವಚ್ಛತೆ ಇದೆ. ಉಳಿದ ದಿನಗಳಲ್ಲಿ ಇಲ್ಲಿಯ ಅನೈರ್ಮಲ್ಯತೆಯನ್ನು ಊಹಿಸಲೂ ಸಾಧ್ಯವಿಲ್ಲ. ಅಂಗಡಿಗಳನ್ನು ಅನುಕೂಲಕ್ಕೆ ತಕ್ಕಂತೆ ಹಂಚಿಕೆ ಮಾಡಿದ್ದು, ಅವರಿಗೆ ಇಷ್ಟ ಬಂದ ಹಾಗೆ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ರೈತರು ದೂರು ನೀಡಿದರು. ರೈತರ ಅಹವಾಲು ಆಲಿಸಿದ ಉಪಲೋಕಾಯುಕ್ತರು ತಕ್ಷಣವೇ ಎಪಿಎಂಸಿ ಅಧಿಕಾರಿಗಳಿಗೆ ಅಂಗಡಿಗಳ ಹಂಚಿಕೆ…

Read More

ತುಮಕೂರು: ಶ್ರೀ ಹೊನ್ನಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಂಡಿನಶಿವರ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ರೋವರ್ಸ್ ಮತ್ತು ರೇಂಜರ್ಸ್, ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ಇತರ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ಎನ್‌ಎಸ್‌ಎಸ್ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊಫೆಸರ್ ಜಿ.ಬಿ. ಶಿವರಾಜು ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತರು, ನಿರ್ದೇಶಕರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಗಾಂಧೀ ವಿಚಾರಧಾರೆ ಅಧ್ಯಯನ ಇಂದಿನ ಪೀಳಿಗೆಗೆ ಅವಶ್ಯಕ ಎಂದು ಹೇಳಿದರು. ಅಲ್ಲದೆ ವಿದ್ಯಾ ರ್ಥಿಗಳಿಗೆ ಗಾಂಧೀಜಿಯವರ ವಿಚಾರಧಾರೆಗಳನ್ನು ಅಳವಡಿಸಿಕೊ ಳ್ಳುವಂತೆ ಕಿವಿ ಮಾತನ್ನು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯದುನಂದನ್ ಎಂ.ಸಿ. ಮತ್ತು ಅವರ ಸಿಬ್ಬಂದಿಗಳ ನೇತೃತ್ವದಲ್ಲಿ ಕಾಲೇಜಿನಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಕುರಿತು ಶ್ಲಾಘಿಸಿದರು. ಮತ್ತೋರ್ವ ಅತಿಥಿಗಳಾದ ಶ್ರೀ ಹೆಚ್.ಬಿ. ದಿನೇಶ್ ಜಂಟಿ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ…

Read More