Author: News Desk Benkiyabale

ಕುಣಿಗಲ್: ಪ್ರಾಣ ಹೋದರು ಸರಿಯೇ ಖಾಸಗಿ ಇಟ್ಟಿಗೆ ಕಾರ್ಖಾನೆಯಾದ ವಿನ್ನರ್ ಬರ್ಗರ್ ಗೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಕೆರೆಯಲ್ಲಿ ಮಣ್ಣನ್ನು ತೆಗೆಯಲು ಬಿಡುವುದಿಲ್ಲ ಎಂದು ಕಿತ್ನಮಂಗಲ ಕೆರೆಯ ಸುತ್ತಮುತ್ತಲ ನೂರಾರು ರೈತರು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾಂಬೆ ಶಿವಣ್ಣನವರ ನೇತೃತ್ವದಲ್ಲಿ ಕೆರೆಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶಿವಣ್ಣನವರು ಮಾತನಾಡಿ ಪ್ರತಿ ಸಭೆ ಸಮಾರಂಭಗಳಲ್ಲಿ ಶಾಸಕರು ರೈತರು, ರೈತರು ಎಂದು ಮಾತನಾಡುತ್ತಾರೆ ಆದರೆ ರೈತರ ಜೀವನಾಡಿಯಾಗಿರುವ ಕೆರೆಯ ಮಣ್ಣನ್ನು ಖಾಸಗಿ ವಿನ್ನರ್ ಬರ್ಗರ್ ಇಟ್ಟಿಗೆ ಫ್ಯಾಕ್ಟರಿಗೆ ಮಣ್ಣನ್ನು ಸಾಗಾಟ ಮಾಡುವ ವ್ಯಕ್ತಿಗೆ ಹಿನ್ನೆಲೆಯಾಗಿ ಸಹಕಾರ ನೀಡುವುದು ಎಷ್ಟು ಸರಿ? ಹೇಗಂದರೆ ಕೆರೆಯ ಮಣ್ಣನ್ನು ತುಂಬುವುದಕ್ಕೆ ತನ್ನದೇ ಆದಂತಹ ಕಾನೂನುಗಳಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡುತ್ತಾರೆ ಇವರ ಹೇಳಿಕೆ ರೈತರ ವಿರೋಧಿ ಹೇಳಿಕೆಯಾಗುವುದಿಲ್ಲವೇ? ಕೆರೆಯ ತುಂಬೆಲ್ಲ ಮರಳು ತುಂಬಿದೆ ಕೆಲವರು ಹಣದ ಆಸೆಯಿಂದ ಖಾಸಗಿ ಕಾರ್ಖಾನೆಗಳಿಗೆ, ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮನಸ್ಸು ಇಚ್ಚೆ ಮಣ್ಣು ತುಂಬಿದರೆ ಸುತ್ತಮುತ್ತಲ ಹಳ್ಳಿಗಳ ಕೊಳವೆ…

Read More

ತುಮಕೂರು: ಎಲ್ಲರೂ ಚೆನ್ನಾಗಿರಬೇಕು ಎಂಬ ಭಾವನೆ ಭಾರತೀಯರದ್ದು, ಜಗತ್ತಿಗೇ ಹಿತ ಬಯಸುವವರು ಯಾರಾದರೂ ಇದ್ದರೆ ಅವರು ಭಾರತೀಯರು ಮಾತ್ರ. ಈ ನಿಟ್ಟಿನಲ್ಲಿ ನಮ್ಮ ಸಂಸ್ಕಾರ, ಸಂಸ್ಕೃತಿ, ಆಚಾರ, ವಿಚಾರ, ದೇಶಪ್ರೇಮ, ಪರಿಸರ ಪ್ರೇಮ, ನಾಗರೀಕ ಶಿಷ್ಟಾಚಾರಗಳನ್ನು ಅನುಸರಿಸುವ ಸಂಬ0ಧ ಹಿಂದೂ ಸಮಾಜೋತ್ಸವ ಸಮಿತಿ ನಗರದ ವಿವಿಧ ಬಡಾವಣೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಕಾರ್ಯ ಕ್ರಮಗಳಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಸಮಿತಿಯ ಗೌರವಾಧ್ಯಕ್ಷರೂ ಆದ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಬುಧವಾರ ಸಿದ್ಧಗಂಗಾ ಮಠದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ದೇಶ ಚೆನ್ನಾಗಿರಬೇಕು ಎಂದರೆ ಕುಟುಂಬ ಚೆನ್ನಾಗಿರಬೇಕು. ಇಂದು ಕುಟುಂಬ ವ್ಯವಸ್ಥೆ ಶಿಥಿಲ ವಾಗುತ್ತಿದೆ. ಕುಟುಂಬಗಳಲ್ಲೇ ಸಹಕಾರವಿಲ್ಲ, ಶಾಂತಿ, ನೆಮ್ಮದಿಯಿಲ್ಲ, ಇರುವ ನಾಲ್ಕು ಜನರೇ ನಾಲ್ಕು ಮುಖಗಳಾಗಿ ಕುಳಿತುಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ದೇಶ ಸರಿಹೋಗಬೇಕು ಎಂದರೆ ಮೊದಲು ಕುಟುಂಬ ಸರಿಯಾಗಬೇಕು, ಕುಟುಂಬ ಸರಿಯಾದರೆ ಸಮಾಜ ಸರಿಯಾಗುತ್ತದೆ, ದೇಶವೂ ಸರಿಯಾಗುತ್ತದೆ. ಅದಕ್ಕಾಗಿಯೇ ಹಿಂದೂ ಸಮಾಜೋತ್ಸವ ಸಮಿತಿ ಬಡಾವಣೆಗಳಲ್ಲಿ ಮಕ್ಕಳಿಂದ ಹಿರಿಯರವರೆಗೆ ಜಾಗೃತಿ…

Read More

ಚಿಕ್ಕನಾಯಕನಹಳ್ಳಿ: ಬೇಸಿಗೆ ಆರಂಭದ ಹಿನ್ನಲೆಯಲ್ಲಿ ಸಾಂಕ್ರಾ ಮಿಕ ರೋಗಗಳ ಹತೋಟಿಗೆ ಇಡೀ ತಾಲ್ಲೂಕು ಆಡಳಿತ ಸಜ್ಜಾಗ ಬೇಕಿದೆ ಎಂದು ತಹಸೀಲ್ದಾರ್ ಶ್ರೀಮತಿ ಮಮತ ತಿಳಿಸಿದರು. ಪಟ್ಟಣದ ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಮುಂದೆ ಬೇಸಿಗೆ ಆರಂಭಗೊಳ್ಳಲಿದೆ, ಇದರ ಜೊತೆಗೆ ಜಾತ್ರೆಗಳು ಸಹ ಎಲ್ಲಡೆ ನಡೆಯಲಿದ್ದು, ದಾಸೋಹ ಹಾಗೂ ಪ್ರಸಾದ ವಿತರಣೆ ನಡೆಯುವುದರಿಂದ ಶುದ್ದ ಕುಡಿಯುವ ನೀರು ಮತ್ತು ಆಹಾರಗಳ ಬಗ್ಗೆ ನಾವು ಎಚ್ಚರಿಕೆಯಂದರಬೇಕಿದೆ. ಜಾತ್ರೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ಥಳೀಯ ಸಂಸ್ಥೆಗಳ ಮೂಲಕ ಅನುಮತಿ ಕಡ್ಡಾಯ, ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ವಿವಿಧ ಮಾಧ್ಯಮಗಳ ಮೂಲಕ ತಲುಪಿಸಬೇಕೆಂದು ಎಲ್ಲಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಗ್ರಾಮ ಲೆಕ್ಕಿಗರಿಗೆ ಸೂಚಿಸಿದರು. ಬೇಸಿಗೆ ಆರಂಭಕ್ಕೂ ಮುನ್ನ ಶಾಲೆ, ವಸತಿ ನಿಲಯ ಮುಂತಾದ ಕೇಂದ್ರಗಳಿಗೆ ಸರಬರಾಜಾಗುವ ನೀರಿನ ಮೂಲಗಳು ಹಾಗೂ ಅದರ ಶುದ್ದತೆಯ ಇತ್ತೀಚಿನ ವರದಿಯನ್ನು ನಮಗೆ ಕಳುಹಿಸಬೇಕು ಹಾಗೂ ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ…

Read More

ತುಮಕೂರು: ರಾಜ್ಯಾದ್ಯಂತ ಸುಮಾರು ೨೦ ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಸಿರಿಧಾನ್ಯಗಳನ್ನು ಬೆಳೆಸಲಾಗುತ್ತಿದ್ದು, ಅದರಲ್ಲಿ ತುಮಕೂರು ಜಿಲ್ಲೆಯಲ್ಲಿ ೧.೭೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳ ಬೆಳೆ ಬೆಳೆಯುತ್ತಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯಗಳನ್ನು ಬೆಳೆಸುವ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಂಡಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದರು. ಬುಧವಾರ ನಗರದ ಗಾಜಿನ ಮನೆಯ ಸಭಾಂಗಣದಲ್ಲಿ ಜಿಲ್ಲಾಡಾಳಿತ, ಜಿಲ್ಲಾಪಂಚಾಯತ್, ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಮತ್ತು ವಾಣಿಜ್ಯ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಿರಿಧಾನ್ಯಗಳಿಗೆ ೧೦ ಸಾವಿರ ವರ್ಷಗಳ ಇತಿಹಾಸವಿದ್ದು, ಮಾನವನು ಬೆಳೆದ ಮೊದಲ ಕೃಷಿ ಬೆಳೆಗಳಲ್ಲಿ ಸಿರಿಧಾನ್ಯಗಳು ಒಂದು, ಭಾರತದಲ್ಲಿ ಸಿರಿಧಾನ್ಯ ಬೆಳೆಯುವುದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಿರಿಧಾನ್ಯಗಳ ಉತ್ಪಾದನೆ ಕ್ರಮೇಣ ಹೆಚ್ಚುತ್ತಿದೆ ಎಂದು ಹೇಳಿದರು. ೬೦ರ ದಶಕದವರೆಗೂ ದೇಶದಲ್ಲಿ ಆಹಾರ ಉತ್ಪಾದನೆ ಕಡಿಮೆ ಇದ್ದರೂ, ೮೦ರ ನಂತರ ಕೃಷಿ ತಂತ್ರಜ್ಞಾನದಲ್ಲಿ ನಡೆದ ಅಭಿವೃದ್ಧಿಯಿಂದ ಅಕ್ಕಿ,…

Read More

ತುಮಕೂರು: ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರು ಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲೆಯಲ್ಲಿ ತೆರೆಯಲಾಗಿರುವ ಕಂಟ್ರೋಲ್ ರೂಮ್ ದೂರ ವಾಣಿ ಸಂಖ್ಯೆ ೭೩೦೪೯೭೫೫೧೯, ಅಥವಾ ೦೮೧೬-೨೨೧೩೪೦೦, ೧೫೫೩೦೪ ಈ ನಂಬರಿಗೆ ಸಾರ್ವಜನಿಕರು ದೂರು ಸಲ್ಲಿಸಬೇಕು. ಸಂಬAಧಿಸಿದ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಬಹುದಾಗಿದೆ ಎಂದರು. ಮಧುಗಿರಿ, ಶಿರಾ, ಕೊರಟಗೆರೆ ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜಾಗುತ್ತಿರುವ ಬಗ್ಗೆ ಪ್ರಯೋ ಗಾಲಯದ ವರದಿ ಬಂದಿದ್ದು, ಈಗಾಗಲೆ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಅಲ್ಲದೆ ಬಯಲು ಶೌಚ ಇನ್ನಿತರ ಸಾಂಕ್ರಾಮಿಕ ರೋಗ ಹರಡಬಹುದಾದ ವಿಷಯಗಳ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಸಾಂಕ್ರಾಮಿಕ…

Read More

ಕುಣಿಗಲ್: ತಾಲೂಕಿನ ಕಸಬಾ ಹೋಬಳಿಯ ಚನ್ನಾಪುರ ಗ್ರಾಮದ ಪಾಪಣ್ಣ (೬೫) ಎಂಬ ವ್ಯಕ್ತಿಯನ್ನು ಗಾಂಜಾ ಮಾರಾಟ ಪ್ರಕರಣದಲ್ಲಿ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಭಾನು ವಾರ ಮಧ್ಯಾಹ್ನ ಸುಮಾರು ೩.೩೦ರ ವೇಳೆಗೆ ಬೇಗೂರು ಬ್ರಿಡ್ಜ್ನ ಸರ್ವೀಸ್ ರಸ್ತೆಯಲ್ಲಿ ಅನು ಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯ ಮೇಲೆ ಕುಣಿಗಲ್ ಠಾಣೆಯ ಪೊಲೀಸರು ನಿಗಾ ವಹಿಸಿದ್ದರು. ಆತನ ಚಲನವಲನ ಶಂಕಾಸ್ಪದ ವಾಗಿದ್ದರಿಂದ ತಕ್ಷಣವೇ ವಶಕ್ಕೆ ಪಡೆದು ವಿಚಾ ರಣೆ ನಡೆಸಿದರು. ವಿಚಾರಣೆಯ ವೇಳೆ ಪಾಪಣ್ಣನ ಬಳಿ ಗಾಂಜಾ ಸೊಪ್ಪು ಪತ್ತೆಯಾಗಿದ್ದು, ಅದನ್ನು ಮಾರಾಟ ಮಾಡುವ ಉದ್ದೇಶದಿಂದಲೇ ಆತ ರಸ್ತೆಯ ಬಳಿ ಸಂಚರಿಸುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ಗಾಂಜಾ ಸೊಪ್ಪನ್ನು ಜಪ್ತಿ ಮಾಡಿಕೊಂಡು, ಆರೋಪಿ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾ0ಜಾ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂ ರ್ಣ ವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಕೂಡ ಇಂತಹ ಕಾನೂನು ಬಾಹಿರ…

Read More

ತುಮಕೂರು: ೨೦೨೬ರ ಗಣರಾಜ್ಯೋತ್ಸ ವವನ್ನು ಸುವ್ಯವಸ್ಥಿತವಾಗಿ ಹಾಗೂ ಅರ್ಥ ಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡ ಳಿತದಿಂದ ಪೂರ್ವಭಾವಿ ಸಭೆಯನ್ನು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾಮಟ್ಟದ ಅಧಿಕಾ ರಿಗಳು ಭಾಗವಹಿಸಿದ್ದರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದ್ದಾರೆ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳು ಉಂಟಾಗದ0ತೆ ಪ್ರತಿಯೊಂದು ವಿಭಾಗವೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಕಾರ್ಯಕ್ರಮದ ರೂಪು ರೇಷೆ, ಭದ್ರತಾ ವ್ಯವಸ್ಥೆ, ವೇದಿಕೆ ಸಿದ್ಧತೆ, ಗಣ್ಯರ ಆಸನ ವ್ಯವಸ್ಥೆ, ಪೆರೇಡ್, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ಸೇರಿದಂತೆ ವಿವಿಧ ಅಂಶಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಲಾಯಿತು. ಪ್ರತಿ ಇಲಾಖೆಗೆ ಸ್ಪಷ್ಟವಾದ ಕಾರ್ಯ ಹಂಚಿಕೆಯನ್ನು ಮಾಡಿ, ನಿಗದಿತ ಸಮಯದೊಳಗೆ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಯಿತು. ವಿಶೇಷವಾಗಿ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ನಗರಸಭೆ, ಆರೋಗ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಲಾಯಿತು. ಗಣರಾಜ್ಯೋತ್ಸವವು…

Read More

ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಗೊಲ್ಲಹಳ್ಳಿ ಗ್ರಾಮದ ಸರ್ಕಾರಿ ಹಳ್ಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಿಡಿಗೇಶಿ ಪಿ.ಎಸ್.ಐ ರವೀಂದ್ರ ಅವರು ತಮ್ಮ ಸಿಬ್ಬಂದಿಯೊ0ದಿಗೆ ಹಠಾತ್ ದಾಳಿ ನಡೆಸಿದರು. ದಾಳಿ ವೇಳೆ ಜೂಜಾಟದಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತರ ಬಳಿ ಪರಿಶೀಲನೆ ನಡೆಸಿದಾಗ ಜೂಜಾಟಕ್ಕೆ ಬಳಸಲಾಗುತ್ತಿದ್ದ ನಗದು ಹಣ ಪತ್ತೆಯಾಗಿದ್ದು, ಒಟ್ಟು ೫,೧೬೦ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬAಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ. ಪೊಲೀಸರ ಪ್ರಾಥಮಿಕ ವಿಚಾರಣೆ ಬಳಿಕ ಬಂಧಿತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಜೂಜಾಟ, ಮದ್ಯಪಾನ ಹಾಗೂ ಇತರ ಕಾನೂನುಬಾಹಿರ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ…

Read More

ಮಧುಗಿರಿ: ಸ್ಪರ್ಧಾಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸುವಾಗ ಒಬ್ಬ ಉತ್ತಮ ಸಾಧಕ ಹಾಗೂ ಪ್ರಯತ್ನ ನಡೆಸಿ ಸೋತವರ ಮಾರ್ಗದರ್ಶನ ಪಡೆದರೆ ಉತ್ತಮ. ಸಾಧಕನು ಗೆಲುವಿನ ತಂತ್ರಗಳ ಬಗ್ಗೆ ಮಾರ್ಗದರ್ಶನ ಮಾಡಿದರೆ , ಸೋತವನು ತಾನು ಮಾಡಿದ ತಪ್ಪುಗಳ ಬಗ್ಗೆ ತಿಳಿಸಿಕೊಡುವನು, ಇದರಿಂದ ಒಂದು ಕಡೆ ಪ್ರೇರಣೆ ಪಡೆದರೆ, ಇನ್ನೊಂದೆಡೆ ಎಡವದೇ ನಡೆಯು ವುದನ್ನು ಕಲಿತು ಪರಿಣಾಮಕಾರಿಯಾಗಿ ಪರೀಕ್ಷಾ ಸಿದ್ಧತೆ ನಡೆಸಲು ಸಹಕಾರಿಯಾಗುವುದು ಎಂದು ಹರ್ಷ ಆಫೀಸರ್ಸ್ ಅಕಾಡೆಮಿಯ ಸಂಸ್ಥಾಪಕ ಹರ್ಷ ಆರ್ ಕಿವಿಮಾತು ಹೇಳಿದರು. ಅವರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉದ್ಯೋಗ ಕೋಶ, ವಾಣಿಜ್ಯ ಶಾಸ್ತ್ರ ವಿಭಾಗ, ಐಕ್ಯೂ ಎಸಿ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಸಹಭಾಗಿತ್ವದಲ್ಲಿ ಆಯೋಜಿಸಿರುವ ಯುಜಿಸಿ-ನೆಟ್,ಕೆ-ಸೆಟ್ ಮತ್ತು ಸ್ಯಾಡ್ ಪರೀಕ್ಷೆಗಳಿಗೆ ಸಂಬ0ಧಿಸಿದ0ತೆ ಹನ್ನೆರೆಡು ದಿನಗಳ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡುತ್ತ ಅನೇಕ ಸ್ಪರ್ಧಾಥಿಗಳು ಕೋಚಿಂಗ್ ಸೆಂಟರ್ ಸೇರುವಿಕೆ ಬಗ್ಗೆ ಗೊಂದಲದಲ್ಲಿ ಇರುತ್ತಾರೆ. ಆರಂಭಿಕ ಹಂತದಲ್ಲಿ ಪರೀಕ್ಷಾ ಸಿದ್ಧತೆ ನಡೆಸುತ್ತಿದ್ದರೆ ಅವರಿಗೆ ಮಾರ್ಗದರ್ಶನ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಗಳ ಅವಶ್ಯಕತೆಯಿರುತ್ತದೆ…

Read More

ತುಮಕೂರು: ರಾಮಕೃಷ್ಣ ನಗರದ ರಾಮಕೃಷ್ಣ ವಿವೇಕಾ ನಂದ ಆಶ್ರಮ 1992ರಲ್ಲಿ ಸ್ಥಾಪನೆಗೊಂಡು ಇದೀಗ ತನ್ನ 33ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಗೆ ಸನ್ನದ್ದಗೊಂಡಿದ್ದು ಜ.10 ಮತ್ತು 11 ರಂದು ಆಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಕಾರ್ಯ ಕ್ರಮ ಆಯೋಜನೆಗೊಂಡಿರುವುದಾಗಿ ಅಧ್ಯಕ್ಷರಾದ ಡಾ. ಶ್ರೀ ವಿರೇಶಾನಂದಸರಸ್ವತಿ ಸ್ವಾಮೀಜಿಗಳು ತಿಳಿಸಿದರು. ಆಶ್ರಮದಲ್ಲಿ ಇಂದು ಬೆಳಿಗ್ಗೆ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿ, ಜ.10 ರಂದು ಬೆಳಿಗ್ಗೆ 10:30ಕ್ಕೆ ಶ್ರೀಮಾತೆ ಶಾರದಾದೇವಿ ಜನ್ಮದಿನೋತ್ಸವದ ಅಂಗವಾಗಿ 26ನೇ ವರ್ಷದ ಜೀವಂತ ದುರ್ಗಪೂಜೆ ಕಾರ್ಯ ಕ್ರಮ ಏರ್ಪಟಿದ್ದು ೨೦೦ ಅಶಕ್ತ ತಾಯಂದಿ ರಿಗೆ ಅನ್ನದಾನ, ಧಾನ್ಯ ದಾನ, ವಸ್ತçದಾನಗಳಿಂದ ಸತ್ಕರಿಸಲಾಗುವುದು ಎಂದರು. ಹೆಸರಾAತ ಕ್ಯಾನ್ಸರ್ ಚಿಕಿತ್ಸಕರಾದ  ಡಾ. ವಿಜಯಲಕ್ಷಿö?ಮ ದೇಶಮಾನೆ ಕಾರ್ಯ ಕ್ರಮ ಉದ್ಘಾಟಿಸುವರು. ಹೆಸರಾಂತ ಅರ್ಥ ತಜ್ಞ ಮೂಕನಹಳ್ಳಿ ರಂಗಸ್ವಾಮಿ, ಹೆಸರಾಂತ ಉದ್ಯಮಿ ವೀರಭದ್ರ ಬ್ಯಾಡಗಿ, ಸಮಾಜ ಸೇವಕಿ ಶಿಲ್ಪ ಬ್ಯಾಡಗಿ ಭಾಗವಹಿಸುವರು. ಅಂದು ಸಂಜೆ ೫.೩೦ಕ್ಕೆ  ಆಶ್ರಮದ ಶ್ರೇಯಸ್ಸಿಗೆ ಶ್ರಮಿಸಿದ ಸೇವಾಕರ್ತರಿಗೆ ಪುರಸ್ಕಾರ ನೀಡಲಾಗುವುದು. ಜ.11 ರಂದು ಬೆಳಿಗ್ಗೆ 10…

Read More