Author: News Desk Benkiyabale

ತುಮಕೂರು/ಶಿವಮೊಗ್ಗ: ತುಮಕೂರಿನ ಇತಿಹಾಸ ಸಂಶೋಧಕರ ತಂಡ ಶಿವಮೊಗ್ಗ ತಾಲೂಕಿನ ಬಿದಿರಿ ಗ್ರಾಮದಲ್ಲಿ ವಿಜಯನಗರ ಕಾಲದ ಅತ್ಯಂತ ಮಹತ್ವದ ಹಾಗೂ ಇಂದಿನವರೆಗೂ ಅಪ್ರಕಟಿತವಾಗಿದ್ದ ಹೊಸ ಶಾಸನವೊಂದನ್ನು ಪತ್ತೆಹಚ್ಚಿದೆ. ಪ್ರೊ. ಎಂ. ಕೊಟ್ರೇಶ್ ಅವರ ನೇತೃತ್ವದ ತಂಡವು ಬಿದಿರಿ ಗ್ರಾಮದ ಸತೀಶ್ ಎಂಬುವವರ ಅಡಿಕೆ ತೋಟದಲ್ಲಿ ಈ ಅಪರೂಪದ ಇತಿಹಾಸದ ದಾಖಲೆಯನ್ನು ಶೋಧಿಸಿದೆ. ಶಾಸನದ ಸ್ವರೂಪ ಮತ್ತು ವೈಶಿಷ್ಟ÷್ಯಗಳು : ಸುಮಾರು ಆರು ಅಡಿ ಎತ್ತರ, ಎರಡೂವರೆ ಅಡಿ ಅಗಲ ಹಾಗೂ ಅರ್ಧ ಅಡಿ ದಪ್ಪನಾಗಿರುವ ಈ ಶಾಸನವನ್ನು ಕಪುö್ಪ ಮಿಶ್ರಿತ ನೀಲಿ ಛಾಯೆಯ ಬಳಪದ ಕಲ್ಲಿನಲ್ಲಿ ಕೆತ್ತಲಾಗಿದೆ. ಕನ್ನಡ ಲಿಪಿ ಮತ್ತು ಸಂಸ್ಕöÈತ ಭಾಷೆಯನ್ನು ಹೊಂದಿರುವ ಈ ಶಾಸನದಲ್ಲಿ ಒಟ್ಟು ೪೬ ಸಾಲುಗಳನ್ನು ಕಡೆಯಲಾಗಿದೆ. ವಿಜಯನಗರ ಸಾಮ್ರಾಜ್ಯದ ಇತಿಹಾಸ ಅಧ್ಯಯನ ಮಾಡುವವರಿಗೆ, ಅಧ್ಯಾಪಕರಿಗೆ, ಸಂಶೋಧಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಈ ಹೊಸ ಶಾಸನವು ಅತ್ಯಂತ ಉಪಯುಕ್ತ ಮಾಹಿತಿಗಳನ್ನು ಒದಗಿಸಲಿದೆ. ಈ ಶಾಸನವು ಐತಿಹಾಸಿಕವಾಗಿ ಅತ್ಯಂತ ಮಹತ್ವದ್ದಾಗಿದ್ದು, ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ಕಾರಣರಾದ ರಾಜಗುರುಗಳಾದ ಮಾಧವಾರ್ಯ…

Read More

ಹುಳಿಯಾರು: ಮತದಾರರ ಪಟ್ಟಿಯನ್ನು ಅತ್ಯಂತ ನಿಖರ ಹಾಗೂ ನವೀಕೃತವಾಗಿಡುವ ಉದ್ದೇಶದಿಂದ, ಹುಳಿಯಾರು ಪಟ್ಟಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಇದರ ಅಂಗವಾಗಿ ನಿಯೋಜನೆಗೊಂಡಿರುವ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಪಟ್ಟಣದಾದ್ಯಂತ ಮನೆ ಮನೆಗೆ ಭೇಟಿ ನೀಡಿ, ಮತದಾರರಿಗೆ ಅಗತ್ಯವಿರುವ ಗಣತಿ ನಮೂನೆ ಅರ್ಜಿಗಳನ್ನು (ಎನ್ಯೂಮರೇಷನ್ ಫಾರಂ) ವಿತರಿಸುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅರ್ಜಿ ಸಲ್ಲಿಸಲು ಅಧಿಕಾರಿಗಳ ಮನವಿ: ಮನೆ ಮನೆಗೆ ತೆರಳುತ್ತಿರುವ ಅಧಿಕಾರಿಗಳು ಸಾರ್ವಜನಿಕರಲ್ಲಿ ಗಣತಿ ನಮೂನೆಗಳನ್ನು ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ, ನಿಖರವಾಗಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳು ಹಾಗೂ ಭಾವಚಿತ್ರವನ್ನು ಲಗತ್ತಿಸಿ ನಿಗದಿತ ಅವಧಿಯೊಳಗೆ ತಮಗೆ ಸಲ್ಲಿಸಬೇಕೆಂದು ಮನವಿ ಮಾಡುತ್ತಿದ್ದಾರೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? : ಈ ವಿಶೇಷ ಪರಿಷ್ಕರಣೆಯ ಕುರಿತು ಬಿಎಲ್‌ಒ ರಂಗನಾಥ್ ಅವರು ಮಾಹಿತಿ ನೀಡಿ, ೧೮ ವರ್ಷ ತುಂಬಿದ ಹೊಸ ಮತದಾರರ ಹೆಸರನ್ನು ಪಟ್ಟಿಗೆ ಸೇರ್ಪಡೆ ಮಾಡಲು, ನಿಧನರಾದ ಮತದಾರರ ಹೆಸರನ್ನು ಕೈಬಿಡಲು, ಮನೆ ಖಾಲಿ ಮಾಡಿ…

Read More

ತುಮಕೂರು: ಕೃಷಿ ಇಲಾಖೆ ಮತ್ತು ರೇಡಿಯೋ ಸಿದ್ಧಾರ್ಥ ೯೦.೮ ಎಫ್.ಎಂ. ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಸಹಯೋಗದಲ್ಲಿ “ಕೃಷಿ ಕಣಜ” ಬಾನುಲಿ ಸರಣಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಅವರು ಚಾಲನೆ ಬುಧುವಾರದಂದು ನೀಡಿದರು. ನಗರದ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಿದ್ದಾರ್ಥ ರೇಡಿಯೋ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಕೃಷಿ ಇಲಾಖೆಯ ಯೋಜನೆಗಳು ಮತ್ತು ತಾಂತ್ರಿಕ ಮಾಹಿತಿ ಸರಣಿ ಸಂವಹನ ಕಾರ್ಯಕ್ರಮ ‘ಕೃಷಿ ಕಣಜ’ ಬಾನುಲಿ ಸರಣಿಗೆ ಗಿಡಕ್ಕೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಶುಭ ಕಲ್ಯಾಣ್ ಅವರು ೩೦ ದಿನಗಳ ಸರಣಿ ಕಾರ್ಯಕ್ರಮಕ್ಕೆ ಕೃಷಿ ಇಲಾಖೆಯ ವಿವಿಧ ಅಧಿಕಾರಿಗಳನ್ನು ಕರೆಸಿ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ ಎಂದರು. ರೈತರಿಗೆ ಕೃಷಿ ಉಪಕರಣಗಳನ್ನು ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ವತಿಯಿಂದ ಈಗಾಗಲೇ ವಿತರಣೆ ಮಾಡಲಾಗಿದೆ ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರು ಕೂಡ ರೈತರು ನೀರಾವರಿ ಪದ್ಧತಿ ಹಾಗೂ ಹನಿ ನೀರಾವರಿ…

Read More

ಕೊರಟಗೆರೆ: ಕೊರಟಗೆರೆ ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ೮,೫೮೯ ಮಂದಿ ಫಲಾನುಭವಿಗಳಿಗೆ ಕಳೆದ ಕೆಲ ದಿನಗಳಿಂದ ಪಿಂಚಣಿ ಜಮೆಯಾಗದೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ವೃದ್ಧರು, ವಿಧವೆಯರು ಹಾಗೂ ವಿಕಲಚೇತನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ತಹಶೀಲ್ದಾರ್ ಮಂಜುನಾಥ್, ತಾಲೂಕಿನಲ್ಲಿ ಒಟ್ಟು ೪೫,೨೮೭ ಮಂದಿ ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಿದ್ದಾರೆ. ಅದರಲ್ಲಿ ೮,೫೮೯ ಪ್ರಕರಣಗಳು ಮೇಲ್ನೋಟಕ್ಕೆ ಅನರ್ಹ ಅಥವಾ ದಾಖಲೆಗಳ ಪರಿಶೀಲನೆಗೆ ಒಳಪಟ್ಟಿವೆ ಎಂದು ತಿಳಿಸಿದರು. ಏಕೆ ಸ್ಥಗಿತ?: ಪಿಂಚಣಿ ಸ್ಥಗಿತಕ್ಕೆ ಪ್ರಮುಖ ಕಾರಣಗಳನ್ನು ವಿವರಿಸಿದ ತಹಶೀಲ್ದಾರ್, “ನಿಗದಿತ ಅರ್ಹ ವಯಸ್ಸು ಪೂರ್ಣಗೊಳ್ಳದಿರುವುದು, ಅಗತ್ಯ ದಾಖಲೆಗಳನ್ನು ಸಲ್ಲಿಸದಿರುವುದು, ಆಧಾರ್-ರೇಷನ್ ಕಾರ್ಡ್ನಲ್ಲಿ ಹೆಸರು-ವಯಸ್ಸು ವ್ಯತ್ಯಾಸ, ಮರುಪರಿಶೀಲನೆಯಲ್ಲಿ ಅನರ್ಹತೆ ಕಂಡುಬAದಿರುವುದು ಸೇರಿದಂತೆ ವಿವಿಧ ಆಡಳಿತಾತ್ಮಕ ಕಾರಣಗಳಿವೆ ಎಂದರು. ರೂ.೪,೦೦೦ಕ್ಕೂ ಹೆಚ್ಚು ಪಿಂಚಣಿ ದರದ ಮಾಹಿತಿ ಪಡೆದ ಪ್ರಕರಣಗಳನ್ನು ಈಗಾಗಲೇ ಸರಿಪಡಿಸಲಾಗಿದೆ. ಇನ್ನುಳಿದ ಪ್ರಕರಣಗಳು ತಾತ್ಕಾಲಿಕವಾಗಿ ಮಾತ್ರ ಸ್ಥಗಿತಗೊಂಡಿವೆ, ಶಾಶ್ವತವಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪರಿಹಾರ ಏನು? ತಹಶೀಲ್ದಾರ್ ಸೂಚನೆ:…

Read More

ಕೊರಟಗೆರೆ: ಗಡಿ ಭಾಗಗಳ ಕನಸಿನ ಕೂಸಾದ ರೈಲು ಸಂಚಾರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಭಾಗದ ಸಾರ್ವಜನಿಕರ ಕನಸು ನನಸಾಗುವ ದಿನಗಳು ಬಂದAತೆ ಕಾಣಿಸುತ್ತದೆ. ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಯೋಜನೆಯನ್ನ ೨೦೧೨ರಲ್ಲಿ ಆರಂಭಿಸಲಾಯಿತ್ತು. ಒಟ್ಟು ೨೦೬ ಕಿ.ಮೀ. ಉದ್ದದ ಲೈನ್ ಆಗಬೇಕಿದೆ. ಸುಮಾರು ೧೮೫೦ ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ಘೋಷಿಸಿದ್ದರೂ, ಆ ನಂತರ ೨೫೦೦ ಕೋಟಿಗೆ ಏರಿಸಲಾಗಿದೆ. ನೆರೆಯ ಆಂಧ್ರ ಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ೧೨೫ ಕಿ.ಮೀ ವರೆಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡು ಕೆ.ರಾಮಪುರ ರೈಲ್ವೆ ನಿಲ್ದಾಣದವರೆಗೆ ಹಳಿ ಜೋಡಣೆ ಹಾಗೂ ಪ್ರಾಯೋಗಿಕವಾಗಿ ರೈಲು ಸಂಚಾರ ಮಾಡಲಾಗಿದೆ. ಕೆ.ರಾಮಪುರ ನಿಲ್ದಾಣದಿಂದ ಮಧುಗಿರಿ, ಕೊರಟಗೆರೆ, ತುಮಕೂರುವರೆಗೆ ೮೧ ಕಿ.ಮೀ ವರೆಗೂ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಲ್ಲಲ್ಲಿ ಕಾಮಗಾರಿ ಪ್ರಾರಂಭ ಮಾಡಲು ಈಗಾಗಲೇ ಮಾರ್ಗದ ಮಧ್ಯೆ ಇರುವ ಗಿಡ, ಮರ ಸೇರಿದಂತೆ ಪೆಟ್ಟಿಗೆ ಅಂಗಡಿಗಳನ್ನ ತೆರವು ಮಾಡಲಾಗುತ್ತಿದೆ. ಹಲವು…

Read More

ತುಮಕೂರು: ಬರುವ ಅಕ್ಟೋಬರ್ ವೇಳೆಗೆ ತುಮಕೂರುವರೆಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಹತ್ವದ ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ಸಂಬAಧ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪ್ಯಾಕೇಜ್ ೧೧ ಕಂಚಿಗಾನಹಳ್ಳಿ, ಮಾರಶೆಟ್ಟಿಹಳ್ಳಿ ಅರಣ್ಯ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಹತ್ವದ ಎತ್ತಿನಹೊಳೆ ಯೋಜನೆ ಕಾಮಗಾರಿ ಒಟ್ಟು ೨೫೨ ಕಿ.ಮೀ.ಇದ್ದು, ಈಗಾಗಲೇ ೨೨೦ ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ೨೩ ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಬಾಕಿ ೯ ಕಿ.ಮೀ. ಕಾಮಗಾರಿ ಆಗಬೇಕಿದೆ. ಈ ವ್ಯಾಪ್ತಿಯಲ್ಲಿ ೬ ಕಿ.ಮೀ. ಅರಣ್ಯ ಪ್ರದೇಶ ಇದ್ದುದರಿಂದ ಕಾಮಗಾರಿ ವಿಳಂಬಕ್ಕೆ ಕಾರಣವಾಯಿತು. ಇದೀಗ ಕೇಂದ್ರ ಸರ್ಕಾರ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದು, ಕಾಮಗಾರಿ ಪೂರ್ಣಗೊಂಡು ಅಕ್ಟೋಬರ್ ವೇಳೆಗೆ ತುಮಕೂರಿನವರೆಗೆ ಎತ್ತಿನಹೊಳೆ ನೀರು ಹರಿಸುವ ಎಲ್ಲಾ ಸಾಧ್ಯತೆಗಳಿವೆ ಎಂದರು. ಮಾರಶೆಟ್ಟಿಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ೧.೯ ಕಿ.ಮೀ. ಕಾಲುವೆ ಹಾದು ಹೋಗಲಿದ್ದು, ಕಾಮಗಾರಿ ವಿಳಂಬವಾಗಿತ್ತು. ಇದೀಗ ಎಲ್ಲಾ ತೊಡಕುಗಳು ಇತ್ಯರ್ಥವಾಗಿದ್ದು, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಅವರು…

Read More

ತುಮಕೂರು : ಇಂದು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋಲನ ಕರ್ನಾಟಕದಿಂದ ನಗರದ ಕನ್ನಡ ಭವನದಲ್ಲಿ ೨೪ನೇ ವರ್ಷದ ಸ್ಲಂ ವಿದ್ಯಾರ್ಥಿಗಳ ಪುರಸ್ಕಾರ ಕಾರ್ಯಕ್ರಮವನ್ನು ತುಮಕೂರು ನಗರ ಶಾಸಕರಾದ ಶ್ರೀ ಜಿ.ಬಿಜ್ಯೋತಿಗಣೇಶ್ ಉದ್ಘಟಿಸಿ ಮಾತನಾಡಿದರು. ಕೊಳಚೆ ಪ್ರದೇಶಗಳಲ್ಲಿ ಯಾವುದೇ ಸೌಲಭ್ಯಗಳಿಲ್ಲದೆ ಕಷ್ಠದ ಪರಿಸ್ಥಿತಿಗಳಲ್ಲಿ ಪೋಷಕರು ತಮ್ಮ ಮಕ್ಕಳ ಓದನ್ನು ತಮ್ಮಗೆ ತೊಂದರೆಯಿದ್ದರೂ ಇತ್ತೀಚಿನ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಒತ್ತು ನೀಡುತ್ತಿರುವುದು ಶ್ಲಾಘನೀಯ ಕಳೆದ ೨೪ ವರ್ಷಗಳಿಂದ ತುಮಕೂರು ಸ್ಲಂ ಸಮಿತಿ ಜಾತ್ಯಾತೀತವಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತ ಬಂದಿರುವುದು ಅಭಿನಂದನೀಯವಾಗಿದೆ. ಭವಿಷ್ಯದಲ್ಲಿ ಮಕ್ಕಳು ಯಾರು ಯಾರು ಏನೇನಾಗುತ್ತಾರೋ ಗೊತ್ತಿಲ್ಲ ಹಾಗಾಗಿ ಸ್ಲಂ ವಿದ್ಯಾರ್ಥಿಗಳು ಭವಿಷ್ಯದ ದೃಷ್ಠಿಯಿಂದ ವಿದ್ಯಾವಂತರಾಗಿ ಕಷ್ಠದಿಂದ ಸುಖದದಾರಿಗೆ ಬರಬೇಕು. ಇಂದು ಶಿಕ್ಷಣ ದುಬಾರಿಯಾಗಿದೆ ಆದರೂ ಸರ್ಕಾರಿ ವ್ಯವಸ್ಥೆಯನ್ನು ಉಪಯೋಗಿಸಿಕೊಂಡು ಸ್ಲಂನಲ್ಲಿರುವ ಪ್ರತಿಭಾವಂತರು ಮುಂದೆ ಬರಬೇಕೆಂದರು. ಸ್ಲಂ ಎಂದು ಕರೆಯುವುದನ್ನು ನಿಲ್ಲಿಸಬೇಕು ಇದಕ್ಕಾಗಿ ಸರ್ಕಾರ ಪರ್ಯಾಯ ಪದವನ್ನು ನಾಮಕರಣ ಮಾಡಬೇಕೆಂದು ಸದನದಲ್ಲಿ ಒತಾಯಿಸುತ್ತೇನೆ ಎಂದರು. ದೇಶಕ್ಕೆ ಸ್ವಾತಂತ್ರö್ಯ ಬಂದು…

Read More

ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ಕೆ ಇಂದಿನಿAದ ಚಾಲನೆ ನೀಡಲಾಗಿದೆ. ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನ ಜುಲೈ ೨೯ಕ್ಕೆ ಮುಕ್ತಾಯವಾಗಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಒಟ್ಟು ೬ ಹೋಬಳಿ, ೩೮೬ ಗ್ರಾಮ, ೨,೦೯,೯೪೫ ಮತದಾರರು ಹಾಗೂ ೨೪೦ ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ ಒಟ್ಟು ೨೪೦ ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಇಂದಿನಿ0ದ ತಾಲೂಕು ಮತ್ತು ಹೋಬಳಿ ನೋಡೆಲ್ ಅಧಿಕಾರಿಗಳು ಹಾಗೂ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಹೆಸರು, ವಿಳಾಸ, ಫೋಟೋ ಸೇರಿದಂತೆ ಎಲ್ಲಾ ವಿವರಗಳನ್ನು ಪರಿಶೀಲಿಸಲಿದ್ದಾರೆ. ಹೊಸ ಮತದಾರರ ಸೇರ್ಪಡೆ, ಮೃತರಾದವರ ಹೆಸರು ತೆಗೆಯುವಿಕೆ, ತಿದ್ದುಪಡಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ನೋಂದಣಾಧಿಕಾರಿ ವಿಜಯಲಕ್ಷಿ ಡಿ.ಆರ್, ಕೃಷಿ ಇಲಾಖೆ ಉಪನಿರ್ದೇಶಕ ಡಾ. ಚಂದ್ರಕುಮಾರ್ ಹಾಗೂ ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯ ಅಧಿಕಾರಿ ಉಮೇಶ್, ಕಸಬಾ ಹೋಬಳಿ ಆರ್ ಐ ಬಸವರಾಜು, ವಿ.ಎ.ಪವನ್ ಅವರು ವಿವಿಧ ಗ್ರಾಮಗಳಿಗೆ…

Read More

ತುಮಕೂರು: ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂಭಾಗದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ, ಛತ್ರಪತಿ ಶಾಹು ಮಹಾರಾಜ್ ಜಯಂತಿ ಹಾಗೂ ಕ್ರಾಂತಿಕಾರಿ ಕುಂದ್ಮಲ್ ರಂಗರಾವ್ ರವರುಗಳ ಜಯಂತ್ಯೋತ್ಸವವನ್ನು ಒಟ್ಟಿಗೆ ಆಚರಣೆ ಮಾಡಲಾಯಿತು. ಮಹಾನ್ ನಾಯಕರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಿಹಿ ಹಂಚಿಕೆ ಮಾಡುವುದರ ಮೂಲಕ ಜನ್ಮ ದಿನಾಚರಣೆಯನ್ನು ವಿಶೇಷಪೂರ್ಣವಾಗಿ ಆಚರಣೆ ಮಾಡುವುದರ ಮೂಲಕ ವಿಶೇಷ ಸಂದೇಶವನ್ನು ರವಾನೆ ಮಾಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾ ಅಧ್ಯಕ್ಷರು ಎನ್. ಕೆ ನಿಧಿ ಕುಮಾರ್ ವಹಿಸಿಕೊಂಡು ಮಹಾನ್ ನಾಯಕರುಗಳ ಜೀವನದ ಚರಿತ್ರೆಯ ಬಗ್ಗೆ ವಿಶ್ಲೇಷಣೆ ನೀಡಿದರು. ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ನಿರ್ಮಾತರು, ಭರತ ಖಂಡದ ಇತಿಹಾಸದಲ್ಲಿ ಕೇವಲ ಯುದ್ಧಗಳನ್ನು ಗೆದ್ದು ರಕ್ತದ ಹಾದಿಯಲ್ಲಿ ಸಾಮ್ರಾಜ್ಯ…

Read More

ತುಮಕೂರು: ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ,ವಿಶೇಷ ಘಟಕ ಯೋಜನೆಯ ಏಕಗವಾಕ್ಷಿ ನೀತಿ ಹಾಗೂ ಇನ್ನಿತರ ಬೇಡಿಕೆಗಳಿಗೆ ಒತ್ತಾಯಿಸಿ, ಜುಲೈ ೦೩ ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಸಮಿತಿಯಿಂದ ದಲಿತ ಜನಾಗ್ರಹ ಸಮಾವೇಶವನ್ನು ಬೆಂಗಳೂರಿನ ಪ್ರಿಡಂ ಪಾರ್ಕಿನಲ್ಲಿ ಹಮ್ಮಿಕೊಂಡಿರುವುದಾಗಿ ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದಲಿತರ ಭೂಮಿ ಹಕ್ಕಿಗಾಗಿ ದಸಂಸ ಹಲವಾರು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದೆ.ನಮ್ಮ ಹೋರಾಟದ ಭಾಗವಾಗಿಯೇ ಪಿಟಿಸಿಎಲ್ ಕಾಯ್ದೆಜಾರಿಗೆ ಬಂದರೂ ಸಮರ್ಪಕವಾಗಿ ದಲಿತರ ಜಮೀನು ಅವರಿಗೆ ದೊರೆತ್ತಿಲ್ಲ. ಪ್ರಸ್ತುತ ಡಿಸಿಎಂ ಆಗಿರುವ ದಲಿತ ಸಮುದಾಯಕ್ಕೆ ಸೇರಿದ ಡಾ.ಜಿ.ಪರಮೇಶ್ವರ್ ಕಂದಾಯ ಮಂತ್ರಿಗಳು ಆಗಿದ್ದು, ಅದ್ಯತೆಯ ಮೇರೆಗೆ ದಲಿತರಿಗೆ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು. ದಲಿತರ ಹೋರಾಟದ ಫಲವಾಗಿ ಜಾರಿಗೆ ಬಂದ ಎಸ್.ಸಿ.ಪಿ ಮತ್ತು ಟಿ.ಎಸ್‌ಪಿ ಯೋಜನೆಯ ನಿಯಮಗಳನ್ನು ಮೀರಿ ಹಣಖರ್ಚು ಮಾಡಲಾಗಿದೆ. ಕಾಯ್ದೆ ಬಂದು ದಿನದಿಂದ ಇದುವರೆಗೂ ಸುಮಾರು ೩-೪.೫೦…

Read More