Author: News Desk Benkiyabale

ಹುಳಿಯಾರು: ಶತಮಾನಗಳ ಇತಿಹಾಸ ಹೊಂದಿರುವ ಪಟ್ಟಣದ ಎಂ.ಪಿ.ಎಸ್. (ಪ್ರಸ್ತುತ ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲಾ ಮೈದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಅವೈಜ್ಞಾನಿಕ ಕಟ್ಟಡ ನಿರ್ಮಾಣ ಕಾಮಗಾರಿಗಳ ವಿರುದ್ಧ ಕ್ರೀಡಾಭಿಮಾನಿಗಳು, ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೈದಾನದ ಉಳಿವಿಗಾಗಿ ಶನಿವಾರ ಶಾಲೆಯ ಪ್ರಾಂಶುಪಾಲರು ಹಾಗೂ ಮುಖ್ಯೋಪಾಧ್ಯಾಯರಿಗೆ ಮನವಿ ಪತ್ರ ಸಲ್ಲಿಸಿದರು. ಹುಳಿಯಾರು ಪಟ್ಟಣದ ಹೃದಯಭಾಗದಂತಿರುವ ಈ ಕೆ.ಪಿ.ಎಸ್. ಶಾಲಾ ಮೈದಾನ ಕೇವಲ ಒಂದು ಖಾಲಿ ಜಾಗವಲ್ಲ. ಇದು ಈ ಭಾಗದ ಮಕ್ಕಳ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಪೂರಕವಾಗಿರುವ ಅಮೂಲ್ಯ ಸಾರ್ವಜನಿಕ ಆಸ್ತಿಯಾಗಿದೆ. ದಶಕಗಳಿಂದಲೂ ಮಕ್ಕಳ ಕ್ರೀಡಾ ಚಟುವಟಿಕೆಗಳು, ಕ್ರಿಕೆಟ್, ಫುಟ್‌ಬಾಲ್, ವಾಲಿಬಾಲ್, ಅಥ್ಲೆಟಿಕ್ಸ್ ಪಂದ್ಯಾವಳಿಗಳು, ಎನ್‌ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರಗಳು ಇಲ್ಲಿಯೇ ನಡೆಯುತ್ತಾ ಬಂದಿವೆ. ಇದರೊಂದಿಗೆ ತಾಲೂಕು ಮಟ್ಟದ ಸಾಂಸ್ಕöÈತಿಕ ಕಾರ್ಯಕ್ರಮಗಳು, ಸ್ವಾತಂತ್ರ÷್ಯ ದಿನಾಚರಣೆ, ಗಣರಾಜ್ಯೋತ್ಸವ ಹಾಗೂ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪ, ರಾಮಕೃಷ್ಣ ಹೆಗ್ಗಡೆ, ಸಿದ್ದರಾಮಯ್ಯ ಅವರಂತಹ ಪ್ರಮುಖ ರಾಜಕೀಯ…

Read More

ತುಮಕೂರು: ಭಾರತೀಯ ಪುರಾಣಗಳ ನೈತಿಕ ಮೌಲ್ಯಗಳನ್ನು ಸಾರುವುದಕ್ಕೆ ಯಕ್ಷಗಾನ ತಾಳಮದ್ದಳೆ ಒಂದು ಸಶಕ್ತ ಮಾಧ್ಯಮ. ಅದು ನಮ್ಮ ಸಮಾಜದ ಅಂತಃಸತ್ವವನ್ನು ಬಲಗೊಳಿಸಬಲ್ಲುದು ಎಂದು ಉದ್ಯಮಿ ಡಾ. ಹೆಚ್.ಜಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು. ಯಕ್ಷದೀವಿಗೆ ಸಂಸ್ಥೆಯು ನಗರದ ಬಯಲಾಂಜನೇಯ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಯಕ್ಷಗಾನ ತಾಳಮದ್ದಳೆ ಪರಿಚಯ ಸರಣಿಯ ಮುಕ್ತಾಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಕ್ಷಗಾನ ಬಯಲಾಟವುಒಂದು ಪರಿಣಾಮಕಾರಿ ಸಂವಹನ ಮಾಧ್ಯಮ.ಅದರ ಇನ್ನೊಂದು ರೂಪವಾದ ತಾಳಮದ್ದಳೆಯು ಮೇಲ್ಮಟ್ಟದ ಜ್ಞಾನವನ್ನು ಜನಸಾಮಾನ್ಯರಿಗೆ ತಲುಪಿಸುವ ಸಾಮರ್ಥ್ಯವನ್ನು ಹೊಂದಿದೆ.ಕರಾವಳಿ, ಮಲೆನಾಡಿನ ಈ ಕಲೆ ಬಯಲು ಸೀಮೆಯಲ್ಲೂ ಪಸರಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಭಾರತೀಯ ಮಹಾ ಕಾವ್ಯಗಳು ಹಾಗೂ ಪುರಾಣಗಳು ಜ್ಞಾನ ಹಾಗೂ ನೈತಿಕ ಮೌಲ್ಯಗಳ ಆಗರಗಳು. ಸಮಕಾಲೀನ ಸಮಾಜಕ್ಕೆ ಬೇಕಾದ ಎಲ್ಲ ಶಿಕ್ಷಣ ಅವುಗಳಲ್ಲಿ ಹುದುಗಿಕೊಂಡಿದೆ.ಆಧುನಿಕತೆಯ ಮಧ್ಯೆ ಬದುಕುತ್ತಿರುವ ಜನರಿಗೆ ಯಕ್ಷಗಾನ ತಾಳಮದ್ದಳೆಗಳು ನಿರಾಳತೆಯನ್ನು ನೀಡುವುದು ಮಾತ್ರವಲ್ಲದೆ ದೈನಂದಿನ ಬದುಕಿನ ಮೌಲ್ಯಗಳನ್ನೂ ಉಣಬಡಿಸುತ್ತವೆ ಎಂದರು. ಯಕ್ಷದೀವಿಗೆ ಕೋಶಾಧಿಕಾರಿ ಡಾ.ಸಿಬಂತಿ ಪದ್ಮನಾಭ ಮಾತನಾಡಿ, ಯಕ್ಷಗಾನ ತಾಳಮದ್ದಳೆ ಲುಪ್ತ ನಾಟ್ಯ ಎಂದೇ ಪ್ರಸಿದ್ಧವಾಗಿದೆ. ನಾಟ್ಯ ಹಾಗೂ…

Read More

ತುಮಕೂರು: ವಿಕಲಚೇತನ ಸ್ನೇಹಿ ವಾತಾವರಣ ನಿರ್ಮಿಸಲು ಹೊಸದಾಗಿ ನಿರ್ಮಾಣವಾಗುವ ಸರ್ಕಾರಿ ಕಟ್ಟಡಗಳ ನಕ್ಷೆ ತಯಾರಿಸುವ ಸಮಯದಲ್ಲಿ ಕಡ್ಡಾಯವಾಗಿ ರ‍್ಯಾಂಪ್ಸ್, ರೈಲಿಂಗ್ಸ್, ನಾಮಫಲಕ, ವಿಕಲಚೇತನ ಸ್ನೇಹಿ ಶೌಚಾಲಯ, ಲಿಫ್ಟ್ ಮಾರ್ಕಿಂಗ್ ಟೈಲ್ಸ್ ಅಳವಡಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ನಡೆದ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-೨೦೧೬ರ ಉಪನಿಯಮ(೭೨)ರಡಿ ಅಂಗವಿಕಲರ ಕುಂದು ಕೊರತೆ ಮತ್ತು ಜಿಲ್ಲಾ ಮಟ್ಟದ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ವಿಕಲಚೇತನರ ಪಿಂಚಣಿ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಶೀಘ್ರವಾಗಿ ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ವಿವಿಧ ಇಲಾಖೆಗಳಲ್ಲಿ ಕ್ರೋಢೀಕೃತಗೊಂಡಿರುವ ವಿಕಲಚೇತನರ ಶೇ.೫ರಷ್ಟು ಅನುದಾನವನ್ನು ಸಮರ್ಪಕವಾಗಿ ಹಾಗೂ ಉದ್ದೇಶಿತ ರೀತಿಯಲ್ಲಿ ಬಳಸಿಕೊಳ್ಳುವಂತೆ ಸಂಬA ಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರವನ್ನು ಆಗಸ್ಟ್ ೧೫ರಂದು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಪುನರಾರಂಭಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಿ…

Read More

ತುಮಕೂರು: ಜಿಲ್ಲೆಯ ಶಿರಾ, ಮಧುಗಿರಿ, ಕೊರಟಗೆರೆ ಮತ್ತು ತುಮಕೂರು ಸೇರಿದಂತೆ, ನಾಲ್ಕು ತಾಲ್ಲೂಕುಗಳನ್ನು ಒಳಗೊಂಡ ಪ್ರದೇಶದಲ್ಲಿ ತುಮಕೂರು ಏರ್ ಪೋರ್ಟ್ ನಿರ್ಮಾಣ ಮಾಡಲು ಕಳೆದ ಕೆಲವಾರು ವರ್ಷಗಳಿಂದ ಸುದ್ಧಿಯಲ್ಲಿದೆ. ತುಮಕೂರಿನ ಮಾಜಿ ಲೋಕಸಭಾ ಸದಸ್ಯರಾದ ಜಿ.ಎಸ್.ಬಸವರಾಜ್ ಅವರ ಅವಧಿಯಲ್ಲಿ ಅಡಿಪಾಯ ಹಾಕಿದ್ದು, ಶಿರಾ ಶಾಸಕರು ಹಾಗೂ ದೆಹಲಿ ವಿಶೇಷ ಪ್ರತಿನಿಧಿಯವರಾದ ಟಿ.ಬಿ.ಜಯಚಂದ್ರರವರು ಮತ್ತು ಎಲ್ಲಾ ಪಕ್ಷಗಳ ಉತ್ತರ ಕರ್ನಾಟಕದ ಸುಮಾರು ೩೭ಕ್ಕೂ ಹೆಚ್ಚು ಶಾಸಕರು ನಿರಂತರವಾಗಿ ಕಡತಗಳ ಹಂತದಲ್ಲಿ ಲಾಭಿ ಮಾಡುತ್ತಿದ್ದಾರೆ. ಅರವಿಂದಬೆಲ್ಲದ್‌ರವರ ಕಳಕಳಿ ನಿಜಕ್ಕೂ ಮೆಚ್ಚುವಂತದ್ದು. ಕರ್ನಾಟಕ ಬಿಜೆಪಿ ರಾಜ್ಯದ್ಯಾಕ್ಷರಾದ ಬಿ.ಎಸ್. ವಿಜಯೇಂದ್ರರವರ ನಿಲುವು ಸ್ವಾಗಾತಾರ್ಹವಾಗಿದೆ. ಕೇಂದ್ರ ಸರ್ಕಾರದ ನಿಲುವು ಸಹ ಪೂರಕವಾಗಿದೆ. ಇಲ್ಲಿ ಸರ್ಕಾರಿ ಭೂಮಿಯೇ ೨೦೦೦ ಕ್ಕೂ ಹೆಚ್ಚು ಎಕರೆ ದೊರೆಯಲಿದೆಯಂತೆ, ಕೇಂದ್ರ ಸರ್ಕಾರದ ಮಿತ್ರ ಯೋಜನೆಯಡಿಯಲ್ಲಿ ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ಗೆ ಪ್ರಸ್ತಾವನೆ ಸಲ್ಲಿಸುವಾಗ ೧೦೦೦ ಎಕರೆಗೂ ಹೆಚ್ಚು ಸರ್ಕಾರಿ ಜಮೀನಿನನ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪಾರ್ಕ್ನ್ನು ಕೇಂದ್ರ ಸರ್ಕಾರ ಕಲ್ಬುರ್ಗಿಗೆ ಮಂಜೂರು ಮಾಡಲಾಯಿತು. ಕೇಂದ್ರ ಸರ್ಕಾರ ನ್ಯಾಷನಲ್…

Read More

ಹುಳಿಯಾರು: ಮದ್ಯವೆಂಬ ಹೆಮ್ಮಾರಿಗೆ ತುತ್ತಾಗಿ ಬದುಕು ಕಳೆದುಕೊಳ್ಳುತ್ತಿದ್ದ ನೂರಾರು ಜೀವಗಳಿಗೆ ಹೊಸ ಭರವಸೆ ತುಂಬುವ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಂಡಿರುವ ಮದ್ಯವರ್ಜನ ಶಿಬಿರಗಳು ಸಮಾಜದಲ್ಲಿ ಮಹತ್ತರ ಬದಲಾವಣೆ ತರುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಹುಳಿಯಾರಿನಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರ. ಆರಂಭದಲ್ಲಿ ಹೆದರಿ ಓಡಲು ಯತ್ನಿಸುತ್ತಿದ್ದ ಶಿಬಿರಾರ್ಥಿಗಳು, ಕೇವಲ ಐದಾರು ದಿನಗಳಲ್ಲಿ ಶಿಸ್ತು ಮತ್ತು ಸಂಸ್ಕಾರದ ಹಾದಿಗೆ ಮರಳಿರುವುದು ಇಡೀ ಯೋಜನೆಗೆ ಸಿಕ್ಕ ದೊಡ್ಡ ಯಶಸ್ಸಾಗಿದೆ. ಆತಂಕದಿ0ದ ಆರಂಭವಾದ ಕಾವಲು: ಹುಳಿಯಾರಿನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ಆರಂಭದ ದಿನಗಳಲ್ಲಿ ಆಯೋಜಕರಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಒಂದು ದೊಡ್ಡ ಆತಂಕವಿತ್ತು. ಮದ್ಯದ ವ್ಯಸನದಿಂದ ಹೊರಬರಲಾರದೆ ಶಿಬಿರಾರ್ಥಿಗಳು ಎಲ್ಲಿ ಮಧ್ಯದಲ್ಲೇ ಓಡಿಹೋಗುತ್ತಾರೋ ಎಂಬ ಭಯದಿಂದಾಗಿ ಕಲ್ಯಾಣ ಮಂಟಪದ ಬಾಗಿಲುಗಳನ್ನು ಸಂಪೂರ್ಣವಾಗಿ ಲಾಕ್ ಮಾಡಿ ಶಿಬಿರ ನಡೆಸಲಾಗುತ್ತಿತ್ತು. ಶಿಬಿರಾರ್ಥಿಗಳು ಕೂಡ ಸಣ್ಣದೊಂದು ಸಂದಿ ಸಿಕ್ಕರೂ, ಬಾಗಿಲು ಸ್ವಲ್ಪ ತೆರೆದರೂ ಸಾಕು ಕಾಲ್ಕಿತ್ತಲು ಸನ್ನದ್ಧರಾಗಿ ಕುಳಿತಿರುತ್ತಿದ್ದರು. ಎಷ್ಟೇ ಹದ್ದಿನ ಕಣ್ಣಿಟ್ಟು…

Read More

ಹುಳಿಯಾರು: “ಬಾರಪ್ಪಾ ಮಳೆರಾಯ… ಯಾಕಪ್ಪಾ ಬರುತ್ತಿಲ್ಲ…” – ಈ ಸಾಲುಗಳು ಯಾವುದೋ ಸಿನೆಮಾ ಗೀತೆಯಲ್ಲ, ಬದಲಿಗೆ ಮುಗಿಲ ಕಡೆಗೆ ಕಣ್ಣು ನೆಟ್ಟು ಕುಳಿತಿರುವ ಕೋಟ್ಯಂತರ ಅನ್ನದಾತರ ಎದೆಯಾಳದಿಂದ ಹೊರಹೊಮ್ಮಿದ ಆಕ್ರಂದನ. ಮಳೆಯಿಲ್ಲದೆ ಕಂಗಾಲಾಗಿರುವ ಇಂದಿನ ಕೃಷಿ ಸ್ಥಿತಿಯನ್ನು ತಾಲೂಕಿನ ಹುಳಿಯಾರು ಹೋಬಳಿಯ ದೊಡ್ಡಬಿದ್ರೆ ಗ್ರಾಮದ ಯುವರೈತ ಹಾಗೂ ಹವ್ಯಾಸಿ ಗಾಯಕ ರಮೇಶ್ ಅವರು ತಮ್ಮದೇ ಶೈಲಿಯಲ್ಲಿ ಹಾಡು ಕಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊAಡಿದ್ದಾರೆ. ಪ್ರಸ್ತುತ ಈ ವಿಡಿಯೋ ಗ್ರಾಮೀಣ ಭಾಗದ ಕರುಣಾಜನಕ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಂತೆ ವೈರಲ್ ಆಗುತ್ತಿದೆ. ಅಭಿವೃದ್ಧಿ ಹೆಸರಲ್ಲಿ ವಿನಾಶ: ರೈತನ ಮಾರ್ಮಿಕ ಪ್ರಶ್ನೆ: “ಮರಗಿಡವನ್ನ ಕಡಿದೆವಾ, ಅರಣ್ಯ ನಾಶ ಮಾಡೇವಾ… ಅಭಿವೃದ್ಧಿ ಹೆಸರಲ್ಲಿ ಸರ್ವನಾಶ ಮಾಡೇವಾ…” ಎಂದು ರಮೇಶ್ ಹಾಡಿನ ಆರಂಭದಲ್ಲೇ ಪರಿಸರ ನಾಶದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಮಾನವನ ಸ್ವಾರ್ಥ, ಆಧುನಿಕತೆಯ ಹೆಸರಿನಲ್ಲಿ ನಡೆಯುತ್ತಿರುವ ಕಾಡಿನ ಅವಸಾನವೇ ಇಂದು ಮಳೆ ಕೈಕೊಡಲು ಮುಖ್ಯ ಕಾರಣ ಎಂಬುದನ್ನು ಈ ಯುವ ರೈತ ಅತ್ಯಂತ ಮಾರ್ಮಿಕವಾಗಿ ನೆನಪಿಸಿದ್ದಾರೆ. ಪ್ರಕೃತಿಯ…

Read More

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ವಡೇರಹಳ್ಳಿಯಲ್ಲಿ ಜುಲೈ ೧೫ರಂದು ವಿಷಪೂರಿತ ಕೀಟನಾಶಕ ಸೇವಿಸಿ ೫೯ ಕುರಿಗಳು  ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಸಂತ್ರಸ್ತ ಮಾಲೀಕರಾದ ಸರೋಜಮ್ಮ ಕೋಂ ಹನುಮಂತೇಗೌಡ ಅವರಿಗೆ ಪರಿಹಾರ ಹಣ ಮಂಜೂರಾತಿ ಆದೇಶ ಪತ್ರವನ್ನು ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿAದು ಮಾಲೀಕರಿಗೆ ೪,೪೨,೫೦೦ ರೂ.ಗಳ ಪರಿಹಾರ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ|| ಹೆಚ್.ಎಂ. ಶಿವಪ್ರಸಾದ್, ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಹಾಜರಿದ್ದರು.

Read More

ತುಮಕೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಕರ್ನಾಟಕ ರಾಷ್ಟç ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರ ವಿರುದ್ಧ ವಿವಿಧ ಸಂದರ್ಭಗಳಲ್ಲಿ ೬ ಪ್ರಕರಣಗಳನ್ನು ದಾಖಲಿಸಿ, ಇದೀಗ ರೌಡಿಶೀಟ್ ತೆರೆಯಲಾಗಿದೆ. ಇದು ಜನರ ಧ್ವನಿಯನ್ನು ಕುಗ್ಗಿಸುವ ಪ್ರಯತ್ನವಾಗಿದ್ದು, ನ್ಯಾಯದ ಪರವಾಗಿ ಕಾರ್ಯನಿರ್ವಹಿಸಬೇಕಾದ ಆಡಳಿತ ವ್ಯವಸ್ಥೆಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನ ಸಿಂಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ಜಿಲ್ಲೆಯಲ್ಲಿ ಎಲ್ಲಿ ಭ್ರಷ್ಟಾಚಾರ, ಅನ್ಯಾಯ ಅಥವಾ ಸಾರ್ವಜನಿಕ ಸಮಸ್ಯೆಗಳು ಎದುರಾದರೂ ಅಲ್ಲಿಗೆ ತೆರಳಿ ಜನರ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾರೆ. ಅಧಿಕಾರಿಗಳು ಎಸಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ್ದೇ ಅವರ ತಪ್ಪೇ? ಕೇವಲ ಪ್ರಶ್ನಿಸಿದ ಕಾರಣಕ್ಕೆ ಉದ್ದೇಶಪೂರ್ವಕವಾಗಿ ಪ್ರಕರಣಗಳನ್ನು ದಾಖಲಿಸಿ, ನಂತರ ಅದನ್ನೇ ಆಧಾರವನ್ನಾಗಿ ಮಾಡಿಕೊಂಡು ರೌಡಿಶೀಟ್ ತೆರೆಯುವುದು ನ್ಯಾಯಸಮ್ಮತ ಕ್ರಮವಲ್ಲ ಎಂದು ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯವೈಖರಿಯ…

Read More

ತುಮಕೂರು: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರು ಪ್ರವಾದಿ ಮಹಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ, ಆಕೆಯ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಇಂದು ಮಜೀದ್ ಇ ಅಲ್ಲಾ ನೇತೃತ್ವದಲ್ಲಿ ನೂರಾರು ಮುಸ್ಲಿಂ ಭಾಂಧವರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ಗುಂಚಿ ಸರ್ಕಲ್‌ನಲ್ಲಿ ಮಸೀದಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆಯಲ್ಲಿ ಆಗಮಿಸಿದ ನೂರಾರು ಮುಸ್ಲಿಂ ಭಾಂಧವರು ಪ್ರವಾದಿ ಮಹಮದ್ ಫೈಗಂಬರ್ ಅವರ ಬಗ್ಗೆ ಸಂದರ್ಶನವೊAದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ನಾಜಿಯಾ ಇಲಾಹಿ ಖಾನ್ ಎಂಬ ಮಹಿಳೆಯನ್ನು ಬಂಧಿಸಿ, ಆಕೆಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ, ಆಕೆಯ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಮಹಮದ್ ಫೈಗಂಬರ್ ಮತ್ತು ಅವರ ಪತ್ನಿಯ ಬಗ್ಗೆ ಆಧಾರವಿಲ್ಲದ ಆರೋಪ ಮಾಡುತ್ತಾ, ತೀರ ತುಚ್ಚವಾಗಿ ಮಾಡಿರುವ ನಾಜಿಯಾ ಇಲಾಹಿ ಖಾನ್ ಉದ್ದೇಶ ಪೂರ್ವಕವಾಗಿಯೇ ಈ ಹೇಳಿಕೆ ನೀಡಿ, ನಮ್ಮ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ಹಾಗಾಗಿ ಅವರ ವಿರುದ್ದ…

Read More

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯವನ್ನು ರಾಷ್ಟçಮಟ್ಟದಲ್ಲಿ ಕೀರ್ತಿಯ ಶಿಖರಕ್ಕೆ ಏರಿಸಿರುವ ಪ್ರೊ. ಎಂ. ವೆಂಕಟೇಶ್ವರಲು ಅವರ ಕಾರ್ಯ ವೈಖರಿ ಹೆಮ್ಮೆಯ ವಿಚಾರ. ಸರಳ ವ್ಯಕ್ತಿತ್ವ ಮತ್ತು ಶ್ರಮಜೀವಿ ಎಂಬ ಪದಗಳಿಗೆ ಅವರು ನಿದರ್ಶನವಾಗಿದ್ದಾರೆ ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ಜಪಾನಂದಜೀ ಮಹಾರಾಜ್ ಅವರು ಶ್ಲಾಘಿಸಿದರು. ನಗರದಲ್ಲಿ ಶ್ರೀ ರಾಮಕೃಷ್ಣ ಸೇವಾಶ್ರಮ (ಪಾವಗಡ), ಶ್ರೀ ಅನ್ನಪೂರ್ಣೇಶ್ವರಿ ಆಹಾರ ವಿತರಣಾ ಸಮಿತಿ (ತುಮಕೂರು), ಶ್ರೀ ಶಿರಡಿ ಸಾಯಿ ಮಂದಿರ (ಆದರ್ಶ ನಗರ, ತುಮಕೂರು) ಹಾಗೂ ಪ್ರೊ. ಎಂ. ವೆಂಕಟೇಶ್ವರಲು ಅಭಿನಂದನಾ ಗ್ರಂಥ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಜು. ೧೭ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು ಅವರ ಅಭಿನಂದನಾ ಸಮಾರಂಭ ಮತ್ತು ‘ಶಿಕ್ಷಣ ಸಿರಿ’ ಅಭಿನಂದನಾ ಗ್ರಂಥ ಲೋಕಾರ್ಪಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಕೇವಲ ಅಭಿನಂದನೆ ಸಲ್ಲಿಸುವುದಷ್ಟೇ ಅಲ್ಲ, ಗುಣಾಗ್ರಹಿಗಳಾಗಬೇಕು. ಸದಾ ಕೆಲಸಗಳಲ್ಲಿ ಮಗ್ನರಾಗಿರುವ ಪ್ರೊ. ವೆಂಕಟೇಶ್ವರಲು ಅವರ ಜೀವನ ಇತರರಿಗೆ ಆದರ್ಶವಾಗಿದೆ. ಎಐ ಕಾಲಘಟ್ಟದಲ್ಲೂ ಗುರು-ಹಿರಿಯರನ್ನು…

Read More