ತುಮಕೂರು: ಅಂತರ್ಜಾಲದಲ್ಲಿರುವುದೆಲ್ಲ ಸತ್ಯವಲ್ಲ. ಯುವಬರಹಗಾರರರು ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಂಡ ಬಳಿಕವೇ ಅಲ್ಲಿನ ಮಾಹಿತಿಯನ್ನು ತಮ್ಮ ಲೇಖನಗಳಲ್ಲಿ ಬಳಸಿಕೊಳ್ಳಬೇಕು ಎಂದು ಅಂಕಣಕಾರ, ಪತ್ರಕರ್ತ ಎ. ಆರ್. ಮಣಿಕಾಂತ್ ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಮಂಗಳವಾರ ಹಮ್ಮಿಕೊಂಡಿದ್ದ ‘ಅಂಕಣ-ನುಡಿಚಿತ್ರ ಬರವಣಿಗೆ’ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಧ್ಯಮಗಳಲ್ಲಿ ಅಭಿವ್ಯಕ್ತಿಸಬೇಕು ಎಂಬ ಹಂಬಲ ಯುವಕರಿಗೆ ಇದೆ. ಆದರೆ ಅದಕ್ಕೆ ಬೇಕಾದ ಸಿದ್ಧತೆ ಕಡಿಮೆ. ವಿದ್ಯಾರ್ಥಿಗಳು ವಿಸ್ತಾರವಾದ ಓದಿಗೆ ತಮ್ಮನ್ನು ತೆರೆದುಕೊಳ್ಳಬೇಕು. ಕೃತಕಬುದ್ಧಿಮತ್ತೆ ಹಾಗೂ ಅಂತರ್ಜಾಲದ ಮಾಹಿತಿ ಆ ಧರಿಸಿ ಬರೆಯುವ ಪ್ರವೃತ್ತಿ ಹೆಚ್ಚುತ್ತಿದೆ. ಆದರೆ ಮಾಹಿತಿಯನ್ನು ಪರಿಶೀಲಿಸಿ ಕೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು. ಅ0ಕಣಕಾರನಿಗೆ ತುಂಬ ತಾಳ್ಮೆ ಇರಬೇಕು. ಒಂದು ವಿಷಯದ ಸಂಪೂರ್ಣ ಮಾಹಿತಿ ಸಿಗುವವರೆಗೆ ಮತ್ತು ಅದು ಆತನಿಗೆ ತೃಪ್ತಿ ತರುವವರೆಗೆ ಪ್ರಕಟಿಸಲು ಅವಸರ ಮಾಡಕೂಡದು. ಸೂಕ್ಷö್ಮ ಮನಸ್ಸು, ಕಥೆಗಳನ್ನು ಕೇಳುವ ಸಹೃದಯತೆ ಇರಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಲಾ ಕಾಲೇಜಿನ ಪ್ರಾಂಶುಪಾಲ…
Author: News Desk Benkiyabale
ಕೊರಟಗೆರೆ: ಹೈಕಮಾಂಡ್ಗೆ ಕೆ.ಎನ್. ರಾಜಣ್ಣ ಬರೆದಿರುವ ಪತ್ರದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ರಾಜಣ್ಣ ಅವರು ನನಗೆ ಇನ್ನೂ ಆ ಪತ್ರವನ್ನು ತೋರಿಸಿಲ್ಲ. ಪತ್ರವನ್ನು ಸಂಪೂರ್ಣವಾಗಿ ನೋಡಿದ ನಂತರವೇ ನಾನು ಈ ಕುರಿತು ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಪತ್ರದ ವಿಷಯವನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕವೇ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ ಎಂದು ತಿಳಿಸಿದ್ದಾರೆ. ಈ ನಡುವೆ ಮಲ್ಲಿಕಾರ್ಜುನ ಖರ್ಗೆ ಅವರು ಬೇಸರಗೊಂಡಿದ್ದಾರೆ ಎನ್ನುವ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, ಖರ್ಗೆಯವರು ಎಐಸಿಸಿ ಅಧ್ಯಕ್ಷರು. ಖರ್ಗೆಯವರು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಹೇಳಿ ದರು. ಪಕ್ಷದೊಳಗೆ ಯಾವುದೇ ಗೊಂದಲ ಉಂಟಾಗಬಾರದು ಎಂಬ ಉದ್ದೇಶ ದಿಂದಲೇ ಖರ್ಗೆಯವರು ಈ ರೀತಿಯ ಹೇಳಿಕೆ ನೀಡಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಶಿರಾ: ತಾಲ್ಲೂಕಿನ ಶಿರಾ, ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ. ಘಟನೆಯ ವಿವರ: ಶಿರಾ ತಾಲ್ಲೂಕಿನ ಮುದ್ದರಂಗ ನಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋ ಡುತ್ತಿದ್ದಂತೆಯೇ ಇಡೀ ಕಾರು ಬೆಂಕಿ ಯ ಕೆನ್ನಾಲಿಗೆಗೆ ಸಿಲುಕಿ ಸಂಪೂ ರ್ಣವಾಗಿ ಭಸ್ಮವಾಗಿದೆ. ಕಾರಿನಲ್ಲಿದ್ದ ಚಾಲಕ ಹೊರಬರಲಾಗದೆ ಬೆಂಕಿಯ ನಡುವೆಯೇ ಸಿಲುಕಿ ಮೃತಪಟ್ಟಿದ್ದಾರೆ. ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹೊತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬ0ಧಿಸಿದ0ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಪತ್ತೆಗಾಗಿ…
ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸಮುದಾಯ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ. ಕೆ.ಆರ್. ರಾಜ್ಕುಮಾರ್ ರವರನ್ನೇ ಪ್ರಭಾರವಾಗಿ ಮುಂದುವರೆಸುವAತೆ ರಾಜ್ಯ ವಾಲ್ಮೀಕಿ ಕ್ರಾಂತಿ ಸೇನೆ ವತಿಯಿಂದ ಮಾಜಿ ಸಹಕಾರ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ ರವರಿಗೆ ಮನವಿ ಸಲ್ಲಿಸಲಾಯಿತು. ನಗರದ ಕ್ಯಾತ್ಸಂದ್ರದಲ್ಲಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣರವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಸೇನೆಯ ಪದಾಧಿಕಾರಿಗಳು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇ ಶಕರ ಹುದ್ದೆಯಲ್ಲಿ ಡಾ. ಕೆ.ಆರ್. ರಾಜ್ಕುಮಾರ್ ರವರನ್ನೆ ಪ್ರಭಾರವಾಗಿ ಮುಂದುವರೆಸುವ0ತೆ ಮನವಿ ಸಲ್ಲಿಸಿ ಕೋರಿದರು. ಪ್ರಸ್ತುತ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಪರಿಶಿಷ್ಟ ವರ್ಗದ ಸಮಾಜ ನಲುಗಿ ಹೋಗಿತ್ತು. ಈ ಘಟನೆಯಿಂದ ಹಲವಾರು ತನಿಖೆ, ವಿಚಾರಣೆಯನ್ನು ಎದುರಿಸಬೇಕಾದ ಕಾರಣ ಅಧಿಕಾರಿಗಳು ಈ ಹುದ್ದೆಗೆ ಬರಲು ಹಿಂದೇಟು ಹಾಕುತ್ತಿದ್ದರು. ಆ ಸಂಧರ್ಭದಲ್ಲಿ…
ತುಮಕೂರು: ನಗರದಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಯುನೈಟೆಡ್ ಕ್ರಿಶ್ಚಿಯನ್ ವೆಲ್ಫೇರ್ ಅಸೋಸಿಯೇಷನ್ ಹಾಗೂ ಬ್ಲಸೆಟ್ ತುಮ ಕೂರು ಸಂಸ್ಥೆ ವತಿಯಿಂದ ವಿಶೇಷವಾಗಿ ಏಸು ಕ್ರಿಸ್ತನ ಸಂದೇಶವನ್ನು ಸಾರುವ ಮೂಲಕ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ನಗರದ ಟೌನ್ಹಾಲ್ ವೃತ್ತದಲ್ಲಿ ಕ್ರಿಸ್ಮಸ್ ಹಬ್ಬ ಮತ್ತು ಏಸುಕ್ರಿಸ್ತನ ಸಂದೇಶವನ್ನು ಸಾರಲು ನಗರದ ಸುಮಾರು ೫೦ಕ್ಕೂ ಹೆಚ್ಚು ಚರ್ಚ್ಗಳ ಪ್ರತಿನಿಧಿಗಳು ಮತ್ತು ಸದಸ್ಯರು ಸೇರಿ ಕ್ರಿಸ್ಮಸ್ ಆಚರಿಸಿದರು. ಟೌನ್ಹಾಲ್ ವೃತ್ತದಲ್ಲಿ ಮಾಜಿ ಶಾಸಕ ಡಾ. ರಫೀಕ್ ಅಹಮದ್ ಹಾಗೂ ಇಕ್ಬಾಲ್ ಅಹಮದ್ ಅವರು ಕೇಕ್ ಕತ್ತರಿಸುವ ಮೂಲಕ ನೆರೆದಿದ್ದ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದರು. ನಗರದ ಟೌನ್ಹಾಲ್ ವೃತ್ತ, ಚರ್ಚ್ ಸರ್ಕಲ್ ವೃತ್ತ ಹಾಗೂ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ನಾಟಕ ಹಾಗೂ ಹಾಡುಗಳ ಮೂಲಕ ಏಸುಕ್ರಿಸ್ತನ ಶಾಂತಿ ಸಂದೇಶವನ್ನು ಸಾರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ೧೫ ಅಂಶಗಳ ಅಲ್ಪಸಂಖ್ಯಾತರ ಘಟ ಕದ ತುಮಕೂರು ಜಿಲ್ಲೆಯ…
ತುಮಕೂರು: ಸಂವಿಧಾನದ ಆಶಯದಂತೆ ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಮೂಲಕ ಸಾರ್ವಜನಿಕರಿಗೆ ಸಿಗಬೇಕಾದ ಹಕ್ಕುಗಳನ್ನು ಪ್ರಾಮಾಣಿಕವಾಗಿ ತಲುಪಿಸುವುದೇ ನಿಜವಾದ ಉತ್ತಮ ಆಡಳಿತ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉತ್ತಮ ಆಡಳಿತ ವಾರ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಸ್ಪಂದಿಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಮತ್ತು ಮಾಹಿತಿಯನ್ನು ಅತಿ ವೇಗವಾಗಿ ತಲುಪಿಸುವುದೇ ಅತ್ಯುತ್ತಮ ಸೇವೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು ೧,೧೧೦ ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದ್ದು, ಇದರ ಪ್ರಯೋಜನ ಸುಮಾರು ೧೮ ಸಾವಿರ ಕುಟುಂಬಗಳಿಗೆ ಲಭ್ಯವಾಗಲಿದೆ. ಅಲ್ಲದೆ ಜಿಲ್ಲೆಯು ಅತಿ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ರಾಜ್ಯದಲ್ಲೇ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದರು. ಜಿಲ್ಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವೇಗ ನೀಡಲಾಗುತ್ತಿದ್ದು, ತುಮಕೂರು-ರಾಯದುರ್ಗ ರೈಲ್ವೆ ೨೦೦೯ರ ಕೇಂದ್ರ ಬಜೆಟ್ನಲ್ಲಿ ಅನುಮೋದನೆಯಾಗಿದ್ದು, ಈ ಕಾಮಗಾರಿಗೆ ಸಂಬ0ಧಿಸಿದ ಭೂಸ್ವಾಧೀನ ಪ್ರಕ್ರಿಯೆಯು ಸಚಿವರ…
ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಜನವರಿ ೧೬ ರಿಂದ ೨೨ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ ಕಂಠೀರವ ಕ್ರೀಡಾಂಗಣದ ಒಲಂಪಿಕ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಕರ್ನಾಟಕ ಕ್ರೀಡಾಕೂಟ ೨೦೨೫-೨೬’ರ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ತುಮಕೂರು ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕಂಠೀರವ ಸ್ಟೇಡಿಯಂ ಮಾದರಿಯಲ್ಲಿ ೭೦ ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗಿದೆ. ಸಿಂಥೆಟಿಕ್ ಟ್ರ್ಯಾಕ್, ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಇದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ನಡೆಸುವ ಸಾಮಾರ್ಥ್ಯವಿದೆ ಎಂದು ಹೇಳಿದರು. ತುಮಕೂರಿನಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ೨೭ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದೆ. ನಾಲ್ಕು ಕ್ರೀಡೆಗಳನ್ನು ಮಾತ್ರ ಬೆಂಗಳೂರಿನಲ್ಲಿ ನಡೆಸಲಾಗುವುದು. ಒಲಂಪಿಕ್ ಮಟ್ಟದ ಕ್ರೀಡಾಕೂಟ ನಡೆಯಲಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಯುವಕರಿಗೆ ಉತ್ತಮ ಅವಕಾಶ ಸಿಗಲಿದೆ. ಕಳೆದ…
ತುಮಕೂರು: ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಜಾತ (೪೮) ಅವರ ಕುಟುಂಬಕ್ಕೆ ಸೋಮ ವಾರ ೫ ಲಕ್ಷ ರೂ.ಗಳ ತಾತ್ಕಾಲಿಕ ಪರಿಹಾರ ಚೆಕ್ಕನ್ನು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ವಿತರಿಸಿದರು. ಮೃತರಿಗೆ ಒಬ್ಬ ಮಗ ಹಾಗೂ ಮಗಳಿದ್ದು, ಸೋಮವಾರ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳು ಉಳಿದ ೧೫ ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಮುಂದಿನ ಎರಡು ವಾರಗಳಲ್ಲಿ ಪಾವತಿಸಲಾಗುವುದು ಎಂದು ಭರವಸೆ ನೀಡಿದರು. ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುರುವೇಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಉಪವಿಭಾಗ ಮಟ್ಟದಲ್ಲಿ ಚಿರತೆ ಹಾಗೂ ಇತರೆ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟಲು ವಿಶೇಷ ‘ಟಾಸ್ಕ್ ಫೋರ್ಸ್’ ಸಮಿತಿ ರಚಿಸಿ, ದಾಳಿ ನಡೆದ ಸ್ಥಳದಲ್ಲಿ ಅರಣ್ಯ ಅಧಿಕಾರಿಗಳು ಬೀಡು ಬಿಟ್ಟು, ಕೂಡಲೇ ಚಿರತೆಯನ್ನು ಸೆರೆ ಹಿಡಿಯಲು ವ್ಯಾಪಕ ಕೋಂಬಿ0ಗ್ ನಡೆಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು. ಗ್ರಾಮ ಪಂಚಾಯಿತಿ ಕಸ ವಿಲೇವಾರಿ ವಾಹನಗಳ ಮೂಲಕ…
ತುಮಕೂರು: ಪಠ್ಯೇತರ ಚಟುವಟಿಕೆಗಳೂ ಕೂಡ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ ಎಂದು ತುಮಕೂರು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಎಂ. ಅಭಿಪ್ರಾಯಪಟ್ಟರು. ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಜಿಲ್ಲಾ ಬಾಲಭವನ ಸಮಿತಿ ಹಾಗೂ ತಾಲ್ಲೂಕು ಬಾಲಭವನ ಸಮಿತಿ ವತಿಯಿಂದ ಕ್ಯಾತ್ಸಂದ್ರ ನಗರದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಾಶಾಲೆಯಲ್ಲಿ ೫-೧೬ ವಯೋಮಾನದ ಮಕ್ಕಳಿಗಾಗಿ ಶನಿವಾರ ಏರ್ಪಡಿಸಲಾಗಿದ್ದ ಓಟದ ಸ್ಪರ್ಧೆ ಮತ್ತು ಆಶುಭಾಷಣ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಅವರು ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಸಹಾಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ತುಮಕೂರು ನಗರ ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಹಾಗೂ ತಾಲ್ಲೂಕು ಬಾಲಭವನ ಸಮಿತಿ ಕಾರ್ಯದರ್ಶಿ ನಾಗರಾಜ್ ಕೆ. ಅವರು ಮಕ್ಕಳು ಪ್ರತಿ ಸ್ಪರ್ಧೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯ. ಸ್ಫರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳು ಸೋತರೂ ಕೂಡಾ ಮುಂದಿನ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಲು ದಾರಿಯಾಗುತ್ತದೆ ಎಂದು ತಿಳಿಸಿ ಸ್ಫರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ…
ತುಮಕೂರು: ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭವನದಲ್ಲಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇವರ ವತಿಯಿಂದ ಗಾಜಿನ ಮನೆ, ತುಮಕೂರಿನಲ್ಲಿ ಡಿಸೆಂಬರ್ ೨೯ ಮತ್ತು ೩೦, ೨೦೨೫ ರಂದು ನಡೆಯಲಿರುವ, ತುಮಕೂರು ಜಿಲ್ಲಾ ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಪರ ಸಂಘಟನೆಗಳಿ0ದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಕೆ ಎಸ್ ಸಿದ್ದಲಿಂಗಪ್ಪ ನವರು ಮಾತನಾಡಿ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ೨೦೨೫ರ ಡಿಸೆಂಬರ್ ೨೯ ಮತ್ತು ೩೦ರಂದು ೧೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ತುಮಕೂರು ನಗರದ ಗಾಜಿನ ಮನೆಯಲ್ಲಿ ಏರ್ಪಡಿಸಲಾಗಿದೆ, ಕಾರ್ಯಕ್ರಮವು ಜಿಲ್ಲೆಯ ನಾಗರಿಕರು ಮತ್ತು ಪರಿಷತ್ತಿನ ಅಜೀವ ಸದಸ್ಯರು ಹಾಗೂ ಕನ್ನಡಪರ ಸಂಘಟನೆಗಳ ಸಹಕಾರದಿಂದ ಏರ್ಪಡಿಸಲಾಗಿದೆ, ಈ ಸಮ್ಮೇಳನಕ್ಕೆ ಖ್ಯಾತ ಸಾಹಿತಿಗಳು ಸಂಶೋಧಕರು ವಿಮರ್ಶಕರು ಹಾಗೂ ಹಂಪಿ ವಿಶ್ವವಿ ದ್ಯಾನಿಲಯದ ನಿವೃತ್ತ ಕುಲ ಸಚಿವರು ಪ್ರಸ್ತುತ ಕರ್ನಾಟಕ ಸರ್ಕಾರದ ಗ್ರಂಥಾಲಯ ಇಲಾಖೆಯ ಅಧ್ಯಕ್ಷರು ಆಗಿರುವ…










