ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ ೨೧ ರಿಂದ ಏಪ್ರಿಲ್ ೪ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ನಗರದ ಎಂಪ್ರೆಸ್ ಪದವಿಪೂರ್ವ ಕಾಲೇಜಿ ನ ಆಡಿಟೋರಿಯಂನಲ್ಲಿ ಮಂಗಳವಾರ ಏರ್ಪ ಡಿಸಲಾಗಿದ್ದ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ-೧ರ ಸಂಬAಧ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಒಟ್ಟು ೧೨೯ ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಪ್ರತಿ ವಿದ್ಯಾರ್ಥಿಗೂ ವಿಶ್ವಾಸದಿಂದ ಪರೀಕ್ಷೆ ಬರೆಯುವ ವಾತಾವರಣ ಹಾಗೂ ಏಕ ರೀತಿಯಾದ ಗುಣಮ ಟ್ಟದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು. ಪರೀಕ್ಷಾ ಕಾರ್ಯವು ಅತ್ಯಂತ ಸೂಕ್ಷö್ಮ ಕಾರ್ಯ ವಾಗಿದ್ದು, ಯಾವುದೇ ಸಮಯದಲ್ಲಿ ತೊಂದರೆಗಳು ಸಂಭವಿಸಿದಲ್ಲಿ ನೇರವಾಗಿ ಜಿಲ್ಲಾಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ತಿಳಿಸಿದರು. ಜಿಲ್ಲಾ…
Author: News Desk Benkiyabale
ಗುಬ್ಬಿ: ಹನಿಟ್ರ್ಯಾಪ್ಗೆ ಸಿಲುಕಿ ಲಲನೆಗೆ ಲಕ್ಷಾಂತರ ರೂಗಳ ದಂಡ ತೆತ್ತ ಗುಬ್ಬಿ ಪಟ್ಟಣ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಜಿ.ಎನ್ ಅಣ್ಣಪ್ಪಸ್ವಾಮಿ ನಂತರದ ದಿನಗಳಲ್ಲಿ ಬರೋಬ್ಬರಿ ೨೦ ಲಕ್ಷ ರೂಗಳ ಹಣದ ಬೇಡಿಕೆಗೆ ಹೆದರಿ ಗುಬ್ಬಿ ಪೊಲೀಸರ ಮೊರೆಹೋಗಿ ದೂರು ದಾಖಲಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಟ್ಟಣದ ಪಟ್ಟಣ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಜೊತೆಗೆ ಹಾಲಿ ಸದಸ್ಯ ಜಿ.ಎನ್ ಅಣ್ಣಪ್ಪ ಸ್ವಾಮಿ ಲಲನೆಯರ ಪ್ರೇಮಪಾಶದ ಮೋಸದ ಬಲೆಗೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡ ವ್ಯಕ್ತಿ. ಫೇಸ್ ಬುಕ್ ನಲ್ಲಿ ಬಂದ ಫ್ರೆಂಡ್ ರಿಕ್ವೆಸ್ಟ್ ಗೆ ಒಪ್ಪಿಗೆ ನೀಡಿ ನಂತರ ಹಾಯ್, ಬಾಯ್, ಗುಡ್ ಮಾರ್ನಿಂಗ್, ಅಂತೆಲ್ಲ ಬೆಳೆದ ಸಲುಗೆ ಮಿತಿ ಮೀರಿ ವಿಡಿಯೋ ಕಾಲಿಂಗ್ ಮಾಡಿ ಮಾತನಾಡುವ ಘಟ್ಟ ತಲುಪಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಮಹಿಳೆ ಹಲವು ಕಡ ಬಲವಂತವಾಗಿ ಕರೆಸಿಕೊಂಡು ಮದುವೆಯಾಗುವಂತೆ ಒತ್ತಾಯಿಸುತ್ತಿದಳು ಎನ್ನಲಾಗಿದೆ. ನಾನು ನಿಮ್ಮನ್ನ ಪ್ರೀತಿಸುತ್ತಿದ್ದೇನೆ ಮದುವೆ ಮಾಡಿಕೊಳ್ಳಿ ಎಂದು ಒತ್ತಡ ಹೇರುತ್ತಿದ್ದು ಇದಕ್ಕೆ ಒಪ್ಪದಿದ್ದ ಕಾರಣ…
ತುಮಕೂರು: ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಸಂದೇಶದ ಮೂಲಕ ವಿಶ್ವದಲ್ಲಿ ಶಾಂತಿ, ನೆಮ್ಮದಿ ಬಯಸಿದ್ದ ಜಗದ್ಗುರು ಶ್ರೀರೇಣುಕಾಚಾರ್ಯರು ವಿಶ್ವಕಂಡ ಮೇರು ವ್ಯಕ್ತಿತ್ವದ ದಾರ್ಶಾನಿಕರು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇ ತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ತುಮಕೂರು ಜಿಲ್ಲಾ ಜಿಲ್ಲೆಯ ವೀರಶೈವ, ಲಿಂಗಾಯಿತ ಸಮಾಜದ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವೀರಶೈವ ಧರ್ಮದ ಸಂಸ್ಥಾಪಕರಾದ ಜಗದ್ಗುರು ಶ್ರೀರೇಣುಕಾ ಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಮಾನವ ಧರ್ಮಕ್ಕೆ, ಜಯವಾಗಲಿ, ಧರ್ಮದಿಂದಲೇ ವಿಶ್ವ ಶಾಂತಿ ಎಂಬ ಉಕ್ತಿಗಳು ಸೇರಿದಂತೆ ೧೦ಕ್ಕು ಹೆಚ್ಚು ತತ್ವಗಳನ್ನು ಜನರಿಗೆ ಭೋಧಿಸುವ ಮೂಲಕ ಜನರಲ್ಲಿ ಶಾಂತಿ,ನೆಮ್ಮದಿ ನೆಲೆಸುವಂತೆ ಮಾಡಿದ ಕೀರ್ತಿ ಶ್ರೀಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲಬೇಕು ಎಂದರು. ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಪ್ರಾಚೀನ ಧರ್ಮ ಪ್ರವರ್ತಕರಲ್ಲಿ ಒಬ್ಬರಾದ ಶ್ರೀಜಗದ್ಗುರು…
ತುಮಕೂರು : ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸಮಸ್ಯೆಗಳಿಗೆ ಸಂಬAಧಿಸಿದ ಸಾರ್ವಜನಿಕ ದೂರುಗಳನ್ನು ಸಲ್ಲಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಸಂಜೆ ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸಹಾಯವಾಣಿ ಕೇಂದ್ರವು ದಿನದ ೨೪ ಗಂಟೆಗಳ ಕಾಲವೂ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಯನ್ನು ತ್ವರಿತವಾಗಿ ವಿಶ್ಲೇಷಿಸಿ, ಅಗತ್ಯವಿದ್ದಾಗ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು. ಸಹಾಯವಾಣಿ ಕೇಂದ್ರದಲ್ಲಿ ದಾಖಲಾಗುವ ಸಾರ್ವಜನಿಕರ ಸಮಸ್ಯೆ ಹಾಗೂ ಪರಿಹಾರ ಕ್ರಮದ ವರದಿಯನ್ನು ಪ್ರತಿದಿನ ತಮಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆ ತಲೆದೋರಿದಾಗ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಜನ-ಜಾನುವಾರುಗಳಿಗೆ ನೀರಿನ ಪೂರೈಕೆ, ಶುದ್ಧೀಕರಣ ಮತ್ತು ಲಭ್ಯತೆ ಬಗ್ಗೆ ಮುಂದಿನ ಸಭೆಯಲ್ಲಿ ಮಾಹಿತಿ ನೀಡಬೇಕು ಸೂಚನೆ ನೀಡಿದರು. ಕೊಳವೆ ಬಾವಿ…
ಹುಳಿಯಾರು: ಬಡವರಿಗೆ ಗಂಭೀರ ಕಾಯಿಲೆಗಳಾದಾಗ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪುನಃ ಯಶಸ್ವಿನಿ ಯೋಜನೆ ಜಾರಿಗೆ ತಂದಿದೆ. ಆದರೆ ಜನರಿಗೆ ಅನುಕೂಲವಾಗುವ ಈ ಯೋಜನೆಯ ನೊಂದಣಿಗೆ ಕ್ಷಿಣಿಸಿದೆ. ಸಿಬ್ಬಂದಿಗಳ ಮೂಲಕ ಅರಿವು ಮೂಡಿಸಿ ಯಶಸ್ವಿನಿ ನೊಂದಣಿ ಪ್ರಗತಿ ಶೇ.೧೦೦ ರಷ್ಟು ಸಾಧಿಸುವಂತೆ ಹುಳಿಯಾರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಡ್ಡಿಪುಟ್ಟಣ್ಣ ಅವರು ಸಿಇಒ ಶಿವಣ್ಣ ಅವರಿಗೆ ಸೂಚನೆ ನೀಡಿದರು. ಹುಳಿಯಾರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಶೇರುದಾರರಾಗಿರುವ ಎಸ್ಸಿಎಸ್ಟಿ ಸಮುದಾಯದವರಿಗೆ ಉಚಿತ ವಾಗಿ ಯಶಸ್ವಿನಿ ಯೋಜನೆಗೆ ನೊಂದಾ ಣಿ ಮಾಡಬಹುದಾಗಿದೆ. ಆದರೆ ಅರಿವಿನ ಕೊರತೆ ಯಿಂದಾಗಿ ಇದೂವರೆವಿಗೂ ಬಹಳಷ್ಟು ಮಂದಿ ನೊಂದಣಿ ಮಾಡಿಸಿಲ್ಲ ಎಂದು ತಿಳಿಸಿದರು. ೧ ಗ್ರಾಂ ಒಡವೆಗೆ ೪೬೦೦ ರೂನಂತೆ ಶೇ.೧ ರ ಬಡ್ಡಿ ದರದಲ್ಲಿ ಇದುವರೆವಿಗೂ ಒಡವೆ ಸಾಲ ಕೊಡಲಾಗುತ್ತಿತ್ತು. ಈಗ ೧ ಗ್ರಾಂ ಒಡವೆ ಬೆಲೆ…
ಹುಳಿಯಾರು: ಹುಳಿಯಾರು ಹೋಬಳಿಯ ಬೋರನಕಣಿವೆ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡಸುತ್ತಿದ್ದ ಹಸಿರು ಶಾಲಾ ಕಾರ್ಯಕ್ರಮ ಶನಿವಾರ ಸಂಪನ್ನಗೊAಡಿತು. ಪ್ರತಿ ಎರಡನೇ ಮತ್ತು ನಾಲ್ಕನೇ ಶನಿವಾರ ನಡೆದ ಚಟುವಟಿಕೆಯಾಧಾರಿತ ಕಾರ್ಯಕ್ರಮ ಮಕ್ಕಳಲ್ಲಿ ಪರಿಸರ ಪ್ರಜ್ಞೆಮೂಡಿಸುವಲ್ಲಿ ಯಶ ಕಂಡಿದೆ. ಮಾಸ್ ಟ್ರಸ್ಟ್ ಅಧ್ಯಕ್ಷೆ ಎನ್,ಇಂದಿರಮ್ಮ ಮಾತನಾಡಿ, ಇದೊಂದು ವಿಶಿಷ್ಟ ಕಾರ್ಯಕ್ರಮ. ಇಂತಹ ಕಾರ್ಯಕ್ರಮ ಯಾವ ಶಾಲೆಯಲ್ಲೂ ನಡೆದಿರಲು ಸಾಧ್ಯವಿಲ್ಲ. ನಾಲ್ಕು ಜನ ಸಂಪನ್ಮೂಲ ವ್ಯಕ್ತಿಗಳ ಸ್ವಪ್ರೇರಣೆಯಿಂದ ಈ ಕಾರ್ಯಕ್ರಮ ನಡೆಸಲಾಯಿತು. ಪಠ್ಯಾದಾರಿತ ಮತ್ತು ಜೀವನ್ಮಖಿ ಆಶಯ ಹೊಂದಿದ್ದ ಕಾರ್ಯಕ್ರಮ ಮಕ್ಕಳಲ್ಲಿ ಪಠ್ಯ ವಿಷಯ ಆಸಕ್ತಿ ಬೆಳೆಸುವುದಕ್ಕಿಂತ ಪರಿಸರ ಪ್ರೀತಿಯನ್ನು ಹೆಚ್ಚು ಬೆಳೆಸಿದೆ ಎಂದು ಹೇಳಿದರು. ವಿಶ್ರಾಂತ ಪ್ರಾಂಶುಪಾಲರಾದ ಯು.ಪಿ. ಉಮಾದೇವಿ ಮಾತನಾಡಿ ಪರಿಸರ ಪ್ರೀತಿಯನ್ನು ಬೆಳಸಿಕೊಂಡಿರುವ ನೀವು ತರಗತಿಯಲ್ಲಿ ಸಕ್ರಿಯವಾಗಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿರುವುದು ನಮಗೆ ಖುಷಿ ತಂದಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಮಾಸ್ ಟ್ರಸ್ಟ್ ಕಾರ್ಯದರ್ಶಿ ರಾಮಕೃಷ್ಣಪ್ಪ ಮಾತನಾಡಿ ನಾವೆಲ್ಲರೂ ಪಕ್ಷಿ ತಜ್ಞ ಸಲಿಂ ಆಲಿ ಯವರ ಹೇಳಿಕೆ ಮನುಷ್ಯನಿಲ್ಲದೆ ಪ್ರಾಣಿ…
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು. ಮೋರಗಾನಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳಿAದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ಅಹವಾಲು ನೀಡಿದ್ದರು. ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಹವಾಲಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಕುಡಿಯುವ ನೀರಿನ ಸಮಸ್ಯೆಗೆ ತುರ್ತಾಗಿ ಪರಿಹಾರ ಒದಗಿಸಬೇಕೆಂದು ತಹಶೀಲ್ದಾರ್ ಮಂಜುನಾಥ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಾಂತರಾಜು ಅವರಿಗೆ ಸೂಚನೆ ನೀಡಿದರು. ನಂತರ ಜಾನುವಾರುಗಳ ಮೇವಿನ ಬಗ್ಗೆ ಆಲಿಸಿದ ಅವರು ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದAತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರಲ್ಲದೆ ಜನರು ವಾಸಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿಬ ರಲು…
ತುಮಕೂರು: ಸುಮಾರು ೪ ಲಕ್ಷ ರೂಪಾಯಿ ಮೌಲ್ಯದ ಬೆಲೆ ಬಾಳುವ ಚಿನ್ನದ ಒಡವೆಗಳನ್ನು ಆಟೋ ಚಾಲಕರೊಬ್ಬರು ವಾರಸುದಾರರಿಗೆ ಹಿಂತಿ ರುಗಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ಹನುಮಂತಪುರ ನಿವಾಸಿ ರವಿಕುಮಾರ್ ಎಂಬುವರೇ ವಾರಸುದಾರರಿಗೆ ಚಿನ್ನದ ಒಡವೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ. ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಗಾಯತ್ರಿ ಎಂಬುವರು ೪ ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನದ ಒಡವೆಗಳಿದ್ದ ಬ್ಯಾಗ್ನ್ನು ಬಿಟ್ಟು ಹೋಗಿದ್ದರು. ಈ ಚಿನ್ನದ ಒಡವೆಗಳಿದ್ದ ಬ್ಯಾಗ್ನ್ನು ಆಟೋ ಚಾಲಕ ರವಿಕುಮಾರ್ ಅವರು ಗಾಯತ್ರಿರವರಿಗೆ ವಾಪಸ್ ನೀಡಿದ್ದು, ಆಟೋ ಚಾಲಕ ರವಿಕುಮಾರ್ರವರಿಗೆ ಗಾಯತ್ರಿ ರವರು ಧನ್ಯವಾದ ತಿಳಿಸಿದ್ದಾರೆ. ಗಾಯತ್ರಿ ಅವರು ಕುಂದೂರು ಗ್ರಾಮದಲ್ಲಿ ತಮ್ಮ ಸಂಬAಧಿಕರೊಬ್ಬರ ಮನೆಗೆ ಸೀಮಂತ ಕಾರ್ಯಕ್ರಮಕ್ಕೆ ಬಂದಿದ್ದರು. ಸೀಮಂತ ಮುಗಿದ ಮೇಲೆ ಮೂವರು ಆಟೋದಲ್ಲಿ ಬಸ್ ನಿಲ್ದಾಣಕ್ಕೆ ತೆರಳಿದ್ದರು. ಆಟೋದಿಂದ ಬಸ್ ನಿಲ್ದಾಣದಲ್ಲಿ ಇಳಿಯುವಾಗ ಮಹಿಳೆ ಚಿನ್ನದ ಆಭರಣಗಳು ಇರುವ ಬ್ಯಾಗ್ ಮರೆತು ಹೋಗಿದ್ದರು. ಬಳಿಕ ಸ್ವಲ್ಪ ದೂರ ಹೋದ ಮೇಲೆ ನೆನಪು ಮಾಡಿಕೊಂಡು…
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಸಲಿನ ಬಜೆಟ್ ಸಂಪೂರ್ಣ ರೈತ ವಿರೋಧಿ, ದಲಿತ ವಿರೋಧಿಜನ ವಿರೋಧಿ ಹಿಂದೂ ವಿರೋಧಿಯಾಗಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರ ದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಟ್ರಾಕ್ಟರ್ ರ್ಯಾಲಿ ನಡೆಸಿದ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾ ಮಯ್ಯ ಮಂಡಿಸಿದ ಬಜೆಟ್ ಮತ ಬ್ಯಾಂಕ್ ರಾಜಕಾರಣಕ್ಕೋಸ್ಕರ ಅಲ್ಪಸಂಖ್ಯಾತರನ್ನು ಓಲೈಸಿರುವ ಹಿಂದೂ ವಿರೋಧಿ ಎಂದು ತಮ್ಮನ್ನು ಸಾಬೀತು ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿ ಬಜೆಟ್ನಲಿ ರೈತರು, ದಲಿತರು, ಜನಸಾ ಮಾನ್ಯರ ಹಿತವನ್ನು ಧಿಕ್ಕರಿಸಿ ವಂಚಿಸಿದ್ದಾರೆ ಎಂದು ಟೀಕಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮೋಸ ಮಾಡಿ, ಅವರು ರಚಿಸಿದ ಸಂವಿಧಾನಕ್ಕೆ ಕಾಂಗ್ರೆಸ್ ನವರು ಅಪಚಾರ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ…
ತುಮಕೂರು: ಮಹಿಳೆಯರ ಪರವಾಗಿ ಹೋರಾಟ ನಡೆಸಿದಮಹಿಳಾ ಸಾಧಕಿಯರನ್ನು ವಿಶ್ವ ಮಹಿಳಾ ದಿನದಂದು ಸ್ಮರಣೆಮಾಡಬೇಕು. ದರು. ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಮಾಡಿ ಉನ್ನತ ಸ್ಥಾನಮಾನ ಗಳಿಸಿದವರು ಇಂದಿನ ಮಹಿಳೆಯರಿಗೆಆದರ್ಶವಾಗಬೇಕು. ಆತ್ಮವಿಶ್ವಾಸ, ಆತ್ಮಸ್ಥೆöÊರ್ಯ ಬೆಳೆಸಿಕೊಂಡು ಮಹಿಳೆಯರು ಎಲ್ಲಾ ಕ್ಷೇತ್ರಗಳಲಿ ಸಾಮರ್ಥ್ಯ ಸಾಧಿಸಬಹುದು ಎಂದು ಹಿರಿಯ ನ್ಯಾಯವಾದಿ ಮರಿಚೆನ್ನಮ್ಮ ಹೇಳಿದರು. ತುಮಕೂರು ಜಿಲ್ಲಾ ಮಹಿಳಾ ವಕೀಲರು ಭಾನುವಾರ ನಗರದಲ್ಲಿವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕೇಕ್ ಕತ್ತರಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮರಿಚೆನ್ನಮ್ಮನವರು, ನಮ್ಮಲ್ಲಿ ಅನೇಕ ಮಹಿಳೆಯರು ಮಹಿಳಾ ಶೋಷಣೆ ವಿರುದ್ಧ ಧ್ವನಿ ಮಾಡಿ ಹೋರಾಟ ಮಾಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ, ಅಕ್ಕಮಹಾದೇವಿ, ಸಾವಿತ್ರಿ ಬಾಯಿ ಬಾಪುಲೆ ಮೊದಲಾದವರು ಮಹಿಳೆಯರ ಪರ ಕ್ರಾಂತಿಕಾರಕ ಹೋರಾಟ ಮಾಡಿದರು. ಅವರು ನಮಗೆ ಪ್ರೇರಣೆಯಾಗಬೇಕು. ಫ್ರಾನ್ಸ್, ಜರ್ಮನಿ, ರಷ್ಯಾ ಮುಂತಾದ ದೇಶಗಳಲ್ಲಿ ಮಹಿಳಾ ಕಾರ್ಮಿಕರ ಮೇಲೆ ನಡೆಯುತ್ತಿದ್ದ ದೌರ್ಜನ್ಯ, ಶೋಷಣೆ, ಮಾನವಹಕ್ಕುಗಳ ಉಲ್ಲಂಘನೆ ವಿರುದ್ಧ ಆರಂಭವಾದ ಹೋರಾಟ ಮಹಿಳಾ ದಿನ ಆಚರಣೆಗೆ ಕಾರಣವಾಯಿತು. ಇಂದು ಪ್ರಪಂಚದ ಎಲ್ಲಾ…










