ಶಿರಾ: ನಗರದ ಅಮರಾಪುರ ರಸ್ತೆಯ ಪ್ರೆಸಿಡೆನ್ಸಿ ಕಾಲೇಜು ಸಮೀಪದ ‘ಬೇಕ್ ಪಾಯಿಂಟ್’ ರಸ್ತೆ ತಿರುವಿನಲ್ಲಿ ಬುಧವಾರ ರಾತ್ರಿ ಸುಮಾರು ೯.೩೦ಕ್ಕೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಶಿವಕುಮಾರ್ (೫೦) ಮೃತಪಟ್ಟಿದ್ದಾರೆ. ಶಿವಕುಮಾರ್ ಅವರು ರಸ್ತೆ ದಾಟುತ್ತಿದ್ದ ವೇಳೆ ಎದುರಿನಿಂದ ಶಿರಾ ಕಡೆಗೆ ವೇಗವಾಗಿ ಬರುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ಶಿವಕುಮಾರ್ ಅವರು ಮೊಟ್ಟೆ ವ್ಯಾಪಾರ ಮಾಡುತ್ತಿದ್ದರು. ಎಂದಿನAತೆ ರಾತ್ರಿ ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಂಬುಲೆನ್ಸ್ ಡ್ರೆöÊವರ್ ವಾಹನ ನಿಲ್ಲಿಸದೆ ಪರಾರಿಯಾಗಿರುತ್ತಾನೆ. ಮೃತರಿಗೆ ಮೂವರು ಪುತ್ರರು ಇದ್ದು, ಅಂತ್ಯಕ್ರಿಯೆಯನ್ನು ಚನ್ನನಕುಂಟೆಯಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು. ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ನಡೆದಿರುವಂತಹ ಕಳ್ಳತನ, ದರೋಡೆಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ವ್ಯಕ್ತಿಗಳು ಮತ್ತು ವಶಪಡಿಸಿಕೊಂಡ ವಸ್ತುಗಳ ವಿವರಗಳು. ದಾಖಲಾಗಿರುವಂತಹ ಪ್ರಕರಣಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್.ಕೆ.ವಿ ಅವರ ನೆತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸ್ ಠಾಣಾವಾರು ಅರೋಪಿಗಳ ಹೆಸರು ಮತ್ತು ವಿಳಾಸ: ಮಹೇಶ ಎಂ.ಎ ಬಿನ್ ಅಶ್ವತ್ಥನಾರಾಯಣ, ೨೮ ವರ್ಷ, ಎಲೆಕ್ಟಿçಕಲ್ ಕೆಲಸ, ಸ್ವಂತ ಸ್ಥಳ: ಮರಿತಿಮ್ಮನಹಳ್ಳಿ ಗ್ರಾಮ, ಕಸಬಾ ಹೋಬಳಿ, ಮಧುಗಿರಿ ತಾಲ್ಲೂಕು, ಹಾಲಿ ವಾಸ: ಕರಡಿಪುರ, ಮಧುಗಿರಿ ಟೌನ್ ತುಮಕೂರು ಜಿಲ್ಲೆ.ಈ ಪ್ರಕರಣದಲ್ಲಿ ವಶಪಡಿಸಿಕೊಂಡ ಮಾಲುಗಳ ವಿವರ : ಜಮೀನುಗಳಲ್ಲಿ ಬೋರ್ ವೆಲ್ ಗೆ ಅಳವಡಿಸುವ ೬೬ ವಿವಿಧ ಕಂಪನಿಯ ಸ್ಟಾರ್ಟರ್ ಗಳು ಅಂದಾಜು ಬೆಲೆ ೯,೫೦,೦೦೦ ( ಒಂಬತ್ತುವರೆ ಲಕ್ಷ ) ರೂಗಳು, ಒಂದು ರೊಟೇಟಿಂಗ್ ಸಿ.ಸಿ ಕ್ಯಾಮೆರಾ ಅಂದಾಜು ಬೆಲೆ ೨೫,೦೦೦ ( ಇಪ್ಪತ್ತೆ0ದು ಸಾವಿರ ) ರೂಗಳು, ಅಂದಾಜು ಬೆಲೆ ೨,೦೦,೦೦೦ ( ಎರಡು ಲಕ್ಷ ) ರೂಗಳು, ಅಂದಾಜು ಬೆಲೆ ೫೦,೦೦೦ ರೂಗಳು. ಒಟ್ಟು…
ಬೆಂಗಳೂರು/ತುಮಕೂರು: “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊAಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಅಪಾರ್ಟೆ್ಮಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ೨೦೨೬ ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನೆಹರು ತಾರಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. “ಆಗಸ್ಟ್ ೬ ರವರೆಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು, ಸಲಹೆಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ನನಗೆ ಬರೆಯಬಹುದು. ಇದನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಆಸ್ತಿ ಕೊಂಡವರಿಗೆ ಅನುಕೂಲವಾಗುವಂತೆ ಈ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ. ಎಲ್ಲಾ ಪಕ್ಷದ ನಾಯಕರಿಗೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶ ನೀಡಲಾಗಿದೆ. ಶಾಸಕರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು. ಏಕಪಕ್ಷೀಯವಾಗಿ ನಾನು ನಿರ್ಧಾರ ಮಾಡಲು ಸಾಧ್ಯವಿಲ್ಲ” ಎಂದರು. “ನಿಮ್ಮ ಯಾವುದೇ ಸಲಹೆ ಸೂಚನೆಗಳಿದ್ದರೂ…
ತುಮಕೂರು: ರಾಷ್ಟಿಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಬಾಕಿ ಉಳಿದಿರುವ ಎಲ್ಲಾ ಅಡೆ-ತಡೆಗಳನ್ನು ತ್ವರಿತವಾಗಿ ನಿವಾರಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬA0ಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಎನ್ಎಚ್-೨೦೬ರ ಮಲ್ಲಸಂದ್ರ-ಕರಡಿ ಹಾಗೂ ಕರಡಿ-ಬಾಣಾವರ ವಿಭಾಗಗಳ ನಾಲ್ಕು ಪಥಗಳ ರಸ್ತೆ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರ ವಿರೋಧದಿಂದ ಉಂಟಾಗಿರುವ ಸಮಸ್ಯೆಗಳು, ಬಾಕಿ ಇರುವ ವಿದ್ಯುತ್ ಹಾಗೂ ಇತರೆ ಉಪಯುಕ್ತತಾ ಸೇವೆಗಳ ಸ್ಥಳಾಂತರ, ಕಾಲುವೆ ದಾಟುವ ಕಾಮಗಾರಿಗಳು ಮತ್ತು ಸಂಚಾರ ಸುರಕ್ಷತೆಗೆ ಸಂಬ0ಧಿಸಿದ ವಿಷಯಗಳನ್ನು ಸಭೆಯಲ್ಲಿ ಸವಿಸ್ತಾರವಾಗಿ ಅವರು ಪರಿಶೀಲಿಸಿದರು. ಕಾಮಗಾರಿಗಳ ಪ್ರಗತಿಗೆ ಯಾವುದೇ ರೀತಿಯ ವಿಳಂಬವಾಗದ0ತೆ ಸಂಬAಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಬಾಕಿ ಇರುವ ಎಲ್ಲ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಸಭೆಯಲ್ಲಿ ರಾಷ್ಟಿಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ, ಬೆಸ್ಕಾಂ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಸಂಬAಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹುಳಿಯಾರು: ಇಂದಿನ ಸಮಾಜದಲ್ಲಿ ಮಕ್ಕಳು ಹಠಕ್ಕೆ ಬಿದ್ದು ಪೋಷಕರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪೋಷಕರು ದಿನಕ್ಕೆ ಕನಿಷ್ಠ ಹತ್ತು ನಿಮಿಷವಾದರೂ ದೇವರನ್ನು ಸ್ಮರಿಸುವುದರೊಂದಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕಲಿಸಬೇಕು ಎಂದು ಜ್ಞಾನಪ್ರಭು ಯಳನಾಡು ಮಠದ ಜ್ಞಾನಪ್ರಭು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ಹುಳಿಯಾರು ಹೋಬಳಿ ಯಳನಡು ಮಠದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ‘ಹಳ್ಳಿಗೊಂದು ವಚನ ದೀಪ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಸಂಸ್ಕಾರ ಮತ್ತು ಸಂಸ್ಕöÈತಿಯು ವ್ಯಕ್ತಿಯ ಜೀವನಕ್ಕೆ ಶಾಂತಿ, ನೆಮ್ಮದಿ ಹಾಗೂ ಸನ್ಮಾರ್ಗವನ್ನು ತೋರಿಸುತ್ತದೆ. ಮನೆಯಲ್ಲಿ ತಂದೆ-ತಾಯಿ ಪ್ರತಿನಿತ್ಯ ಮಾಡುವ ದೇವರ ಪೂಜೆ, ಗುರುವಿನ ಪೂಜೆ ಮತ್ತು ಅವರ ಕಾಯಕದ ಬದುಕನ್ನು ಮಕ್ಕಳು ಚಿಕ್ಕ ವಯಸ್ಸಿನಿಂದಲೇ ನೋಡುತ್ತಾ ಬೆಳೆದರೆ, ಅವರೂ ಅದನ್ನೇ ಅನುಕರಿಸುತ್ತಾರೆ. ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೊನ್ನೇಬಾಗಿ ಬಸವರಾಜು ಮಾತನಾಡಿ, ತಾಲ್ಲೂಕಿನಲ್ಲಿ ಶರಣ ಪರಿಷತ್ತಿನ ವತಿಯಿಂದ ತಿಂಗಳಿಗೊಮ್ಮೆ ‘ಹಳ್ಳಿಗೊಂದು ವಚನ ದೀಪ’ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಶರಣರ ತತ್ವಾದರ್ಶಗಳನ್ನು…
ತುಮಕೂರು: ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿAದ ಸಂಭವಿಸಿರುವ ಸಾವುಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗವಾಗಿರುವ ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುನ್ನೆಚ್ಚರಿಕೆ ಹಾಗೂ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಗಳವಾರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಬರ ಪರಿವೀಕ್ಷಣೆ ಮತ್ತು ಮುಂಗಾರು ಹಂಗಾಮಿನ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ನೆರೆ ರಾಜ್ಯವಾಗಿರುವ ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿAದ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿದ್ದು, ಆಂಧ್ರಪ್ರದೇಶದ ಗಡಿ ಜಿಲ್ಲೆಯಾಗಿರುವ ತುಮಕೂರಿನ ಪಾವಗಡ ತಾಲ್ಲೂಕು ಭಾಗದಲ್ಲಿ ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ತಾಲ್ಲೂಕು ಆಡಳಿತದ ಅಧಿಕಾರಿಗಳಿಗೆ ಅವರು ಸೂಚಿಸಿದರು. ಪ್ರಸ್ತುತ ಮುಂಗಾರು ಹಂಗಾಮಿನ ಮಳೆಯ ಸ್ಥಿತಿ, ಬಿತ್ತನೆ ಪ್ರಗತಿ, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ ಕುರಿತು ಸಮಗ್ರವಾಗಿ ಪರಿಶೀಲಿಸಿದ ಅವರು, ಮಳೆಯಿಂದ ಉಂಟಾದ ಹಾನಿಗಳಿಗೆ…
ಪಾವಗಡ: ನೆರೆ ರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಗಡಿ ತಾಲೂಕಾದ ತಾಲೂಕು ಆಡಳಿತ ತೀವ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ತಹಶೀಲ್ದಾರ್ ಅವರ ಕಟ್ಟುನಿಟ್ಟಿನ ಆದೇಶದ ಮೇರೆಗೆ ತಾಲೂಕಿನ ಐದು ಪ್ರಮುಖ ಗಡಿ ಭಾಗಗಳಲ್ಲಿ ತಕ್ಷಣದಿಂದಲೇ ಹೊಸ ಚೆಕ್ಪೋಸ್ಟ್ಗಳನ್ನು ಕಾರ್ಯಗತಗೊಳಿಸಲಾಗಿದೆ. ಆಂಧ್ರಪ್ರದೇಶದಿAದ ಪಾವಗಡ ತಾಲೂಕಿನೊಳಗೆ ಪ್ರವೇಶಿಸುವ ಪ್ರತಿಯೊಬ್ಬ ಸಾರ್ವಜನಿಕರನ್ನು ಹಾಗೂ ವಾಹನಗಳನ್ನು ಗಡಿಯಲ್ಲಿಯೇ ತಡೆದು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ ತಾಲೂಕಿನ ಗಡಿಭಾಗದ ಐದು ಕಡೆಗಳಲ್ಲಿ ತೆರೆಯಲಾಗಿರುವ ಈ ತನಿಖಾ ಕೇಂದ್ರಗಳ ಸಂಪೂರ್ಣ ಜವಾಬ್ದಾರಿಯನ್ನು ಆಯಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ. ಆರೋಗ್ಯ ಇಲಾಖೆಯ ನಿರ್ದೇಶನದಂತೆ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ಸಾರ್ವಜನಿಕರ ಥರ್ಮಲ್ ಸ್ಕಿçÃನಿಂಗ್ ನಡೆಸುತ್ತಿದ್ದಾರೆ ತಾಲೂಕಿನ ಪ್ರಮುಖ ಗಡಿ ಪ್ರದೇಶಗಳಾದ ರಾಜವಂತಿ, ಕೊಡಮೊಡಗು, ನಾಗಲಾಪುರ ಹಾಗೂ ಪೋತಗಾನಹಳ್ಳಿ ಗ್ರಾಮಗಳ ಸಂಪರ್ಕ ರಸ್ತೆಗಳಲ್ಲಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಗಡಿ ದಾಟುವ ಮುನ್ನ ಪ್ರತಿಯೊಬ್ಬರ ಆರೋಗ್ಯ ಸ್ಥಿತಿಗತಿ ಹಾಗೂ ಅಗತ್ಯ ಮಾಹಿತಿಗಳನ್ನು ಸಿಬ್ಬಂದಿ ದಾಖಲಿಸಿಕೊಳ್ಳುತ್ತಿದ್ದಾರೆ. ನೆರೆ…
ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ತುಮಕೂರು ಜಿಲ್ಲೆಯ ಮಾನ್ಯತೆ ಪಡೆದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು. ಸಭೆಯಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಅಂಗವಾಗಿ ಮತದಾರರಿಗೆ ವಿತರಿಸಬೇಕಾದ ಗಣತಿ ನಮೂನೆಗಳ ಪೈಕಿ ದಿನಾಂಕ: ೧೪.೭.೨೦೨೬ ಸಮಯ ೧೨ ಗಂಟೆಗೆ ಶೇ.೯೮.೧೧ರಷ್ಟು ನಮೂನೆಗಳನ್ನು ಈಗಾಗಲೇ ವಿತರಿಸಲಾಗಿದ್ದು, ಉಳಿದ ವಿತರಣೆ ಕಾರ್ಯವನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ, ಮತದಾರರಿಂದ ಭರ್ತಿ ಮಾಡಿ ಹಿಂತಿರುಗಿಸಲಾದ ಗಣತಿ ನಮೂನೆಗಳ ಪೈಕಿ ಶೇ.೩೪.೧೨ರಷ್ಟು ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಜುಲೈ ೨೯ರೊಳಗೆ ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಈಗಾಗಲೇ ೮೮೪೧…
ಹುಳಿಯಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಳಿಯಾರಿನಲ್ಲಿ ಹಮ್ಮಿಕೊಂಡಿರುವ ಈ ಮಧ್ಯವರ್ಜನ ಶಿಬಿರವು ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು ನೀಡುವ ಒಂದು ಅದ್ಭುತ ಕಾರ್ಯಕ್ರಮವಾಗಿದೆ ಎಂದು ಚಲನಚಿತ್ರ ನಿರ್ಮಾಪಕ ನಂದಿಹಳ್ಳಿ ಶಿವಣ್ಣ ಅಭಿಪ್ರಾಯಪಟ್ಟರು. ಹುಳಿಯಾರಿನ ಬಸವೇಶ್ವರ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ನ ಜಂಟಿ ಆಶ್ರಯದಲ್ಲಿ, ಸ್ಥಳೀಯ ವಿವಿಧ ಸಂಘ-ಸAಸ್ಥೆಗಳು, ದಾನಿಗಳು ಹಾಗೂ ನವಜೀವನ ಸಮಿತಿಗಳ ಸಹಕಾರದೊಂದಿಗೆ ಆಯೋಜಿಸಿರುವ ೨೦೮೮ ನೇ ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಮದ್ಯ ಕುಡಿದು ಬೀದಿಗಳಲ್ಲಿ ತೂರಾಡುತ್ತಿದ್ದವರು, ಹೆಂಡತಿ-ಮಕ್ಕಳೊAದಿಗೆ ಜಗಳ ಆಡುತ್ತಿದ್ದವರ ಬದುಕನ್ನು ಪರಿವರ್ತಿಸಿ, ಹೊಸ ಜೀವನ ತಂದುಕೊಡುವಲ್ಲಿ ಧರ್ಮಸ್ಥಳದ ಶಿಬಿರಗಳು ಪ್ರಮುಖ ಪಾತ್ರ ವಹಿಸಿವೆ. ಇಂದು ಶಿಬಿರದಲ್ಲಿ ಭಾಗವಹಿಸಿರುವ ೬೦ ಮಂದಿ ಶಿಬಿರಾರ್ಥಿಗಳು ಕೇವಲ ವ್ಯಕ್ತಿಗಳಾಗಿ ಉಳಿಯದೆ ಸಮಾಜಕ್ಕೆ ಮಾದರಿಯಾಗಬೇಕು. ಸರ್ಕಾರವು ಆದಾಯಕ್ಕಾಗಿ ಮದ್ಯದ ಅಂಗಡಿಗಳನ್ನು ಹೆಚ್ಚಿಸುತ್ತಿದ್ದರೂ, ‘ನಾವು ಕುಡಿಯುವುದಿಲ್ಲ’ ಎಂಬ ಗಟ್ಟಿ ತೀರ್ಮಾನ ನಿಮ್ಮದಾಗಬೇಕು. ನಿಮ್ಮನ್ನು ನಂಬಿರುವ ಹೆಂಡತಿ ಮತ್ತು ಮಕ್ಕಳ…
ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟç ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-೨೦೪೭” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ಹೊಸದಾಗಿ ನಿರ್ಮಿಸಲಾದ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಮತ್ತು ಶೈಕ್ಷಣಿಕ ಬ್ಲಾಕ್ ೨ರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶ್ವವಿದ್ಯಾನಿಲಯದಲ್ಲಿ ನಿರ್ಮಾಣ ಗೊಂಡಿರುವ ಹೊಸ ಮೂಲಸೌಕರ್ಯಗಳು ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಂಶೋಧಕರಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ರಾಷ್ಟಿçÃಯ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ವಿಶ್ವವಿದ್ಯಾನಿಲಯದ ಹೆಗ್ಗಳಿಕೆಯನ್ನು ಹೆಚ್ಚಿಸಲಿವೆ ಎಂದು ರಾಜ್ಯಪಾಲರು ವಿಶ್ವಾಸ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯಕ್ಕೆ ಹಲವು ಬಾರಿ ಭೇಟಿ ನೀಡಿರುವುದಾಗಿ ತಿಳಿಸಿದ ರಾಜ್ಯಪಾಲರು, ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಪ್ರಶಂಸನೀಯವಾಗಿದ್ದು, ಸರ್ಕಾರದ ಜೊತೆಗೆ ವಿವಿಧ…

