ತುಮಕೂರು: ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಅದರೊಂದಿಗೆ ಶಿವಜ್ಞಾನದ ಅರಿವು ಮತ್ತು ಆಚರಣೆ ಮುಖ್ಯ. ಚಿಂತೆ ಚಿಂತನಗೊ0ಡಾಗ ಬಾಳು ವಿಕಾಸಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಸೋಮವಾರ ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್(ರಿ) ಆಶ್ರಯದಲ್ಲಿ ಜರುಗಿದ ಧನುರ್ಮಾಸದ ಇಷ್ಟಲಿಂಗ ಮಹಾಪೂಜಾ-ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಈಶ ನಿರ್ಮಿತವಾದ ಈ ಪ್ರಪಂಚದಲ್ಲಿ ಇರುವುದೆಲ್ಲವೂ ಅಮೂ ಲ್ಯ ಸಂಪತ್ತು. ಚಿನ್ನವಿಲ್ಲದೇ ಬದುಕಬಹುದು. ಆದರೆ ಅನ್ನವಿಲ್ಲದೇ ಬದುಕಲಾಗದು. ಶ್ರದ್ಧಾವಂತರಾದ ಭಾರತೀಯರು ಮಣ್ಣು, ನೀರು, ಗಾಳಿ, ಬೆಂಕಿ, ಕಲ್ಲುಗಳಲ್ಲಿ ದೇವರನ್ನು ಕಂಡು ಪೂಜಿಸಿದವರು. ದೇವರ ಮೇಲಿನ ನಂಬಿಕೆ ಶಾಶ್ವತ ನಂದಾದೀಪ. ನಂಬಿಗೆ ವಿಶ್ವಾಸಗಳನ್ನು ಎಂದಿಗೂ ಕಳೆದುಕೊಳ್ಳಬಾರದು. ಮನಸ್ಸೆಂಬ ಚಂಚಲ ಅಲೆಗಳ ಹೊಯ್ದಾಟವನ್ನು ಶಾಂತ ಪ್ರಶಾಂತಗೊಳಿಸುವ ಮಾರ್ಗವೇ ಆಧ್ಯಾತ್ಮವಾಗಿದೆ ಎಂದು ಶ್ರೀ ಜಗದ್ಗುರು ರೇಣುಕಾ ಚಾರ್ಯರು ಸಿದ್ಧಾಂತ ಶಿಖಾಮಣಿ ಧರ್ಮ ಗ್ರಂಥದಲ್ಲಿ ನಿರೂ ಪಿಸಿದ್ದಾರೆ. ಮನುಷ್ಯನಿಗೆ ಏನೆಲ್ಲ ಸಂಪತ್ತು ಸಂಪನ್ಮೂಲ…
Author: News Desk Benkiyabale
ತುಮಕೂರು: ನ್ಯಾಯಾಲಯಕ್ಕೆ ನೀಡಿದ ಮೌಖಿಕಭರವಸೆ ಹುಸಿಗೊಳಿಸಿ, ೬೦೦೦ಕ್ಕು ಹೆಚ್ಚು ಅತಿಥಿ ಉಪನ್ಯಾಸಕರನ್ನು, ಅವರ ೨೦ ವರ್ಷಗಳ ಸೇವೆಯನ್ನು ಪರಿಗಣಿಸಿದೆ, ಆರ್ನಹ ಎಂಬ ಹಣೆಪಟ್ಟಿ ಕಟ್ಟಿ, ಸೇವೆಯಿಂದ ತೆಗೆದು ಹಾಕಿರುವ ಉನ್ನತ ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿ,೨೦೨೬ರ ಜನವರಿ ೦೫ ರಂದು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಮುಖ್ಯಮಂತ್ರಿಗಳ ಮನೆಯ ಮುಂದೆ ಹೋರಾಟ ನಡೆಸುವುದಾಗಿ ಸಂಘದ ಅಧ್ಯಕ್ಷರಾದ ಲೋಕೇಶ್.ಪಿ.ಸಿ.ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೨೦ಕ್ಕೂ ಹೆಚ್ಚು ವರ್ಷಗಳ ಕಾಲ ನಮ್ಮಿಂದ ಸೇವೆ ಪಡೆದು, ಈಗ ಅನರ್ಹಎಂದು ಹೇಳಿ ಕೆಲಸದಿಂದ ತೆಗೆಯುವ ಮೂಲಕ ಹೈಕೋರ್ಟ ಆದೇಶ ಉಲ್ಲಂಘನೆಯ ಜೊತೆಗೆ, ಯುಜಿಸಿ ನಿಯಮವನ್ನು ರಾಜ್ಯ ಸರಕಾರ ಗಾಳಿಗೆ ತೂರಿದೆ. ಸರಕಾರದ ಈ ಜನವಿರೋಧಿ ನಡೆಯ ವಿರುದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಜೊತೆಗೆ, ಪ್ರಾಥಮಿಕ ಶಾಲೆಗಳಲ್ಲಿ ಕೆಪಿಎಸ್ ಮ್ಯಾಗ್ನಟ್ ಶಾಲೆಯ ಹೆಸರಿನಲ್ಲಿ ಅತಂತ್ರರಾಗಿರುವ ೭೦ ಸಾವಿರ ಅತಿಥಿ ಉಪನ್ಯಾಸಕರು ಒಗ್ಗೂಡಿ ಹೋರಾಟದಲ್ಲಿ ಪಾಲ್ಗೊಳ್ಳ ಲಾಗುವುದು ಎಂದರು. ನಾವು ಸರಕಾರಿ ಪ್ರಥಮದರ್ಜೆ ಕಾಲೇಜಿಗೆ…
ತುಮಕೂರು: ತುಮಕೂರು ತಾಲ್ಲೂಕು ಹೆಬ್ಬೂರಿನ ದಿ.ಕೆ.ಎಸ.ಪುಟ್ಟಣ್ಣಯ್ಯ ರೈತ ಭವನದಲ್ಲಿ ರೈತ ದಿನಾಚರಣೆ, ಕೆ.ಎಸ್. ಪುಣ್ಣಯ್ಯ ಜಯಂತಿ, ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್ ದಿನಾಚರಣೆ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎನ್.ಗೋವಿಂದರಾಜು ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎನ್.ಗೋವಿಂದರಾಜು ಮಾತನಾಡಿ, ಇಂದು ರೈತ ದಿನಾಚರಣೆ. ಸರಕಾರ ಇಂದು ರೈತ ದಿನಾಚರಣೆಯನ್ನು ಆಚರಿಸುವ ಮೂಲಕ ಮಾಜಿ ಪ್ರಧಾನಿ ಚೌದರಿ ಚರಣ್ಸಿಂಗ್ ಅವರ ಸ್ಮರಿಸುವ ಕೆಲಸವನ್ನು ಮಾಡುತ್ತಿದೆ.ಇದಕ್ಕಾಗಿ ಸರಕಾರಕ್ಕೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಸರಕಾರ ಕೇವಲ ಕೃಷಿ, ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಲ್ಲಿ ದಾಖಲೆಗಾಗಿ ಒಂದಿಷ್ಟು ರೈತರನ್ನು ಸೇರಿಸಿ, ಭಾಷಣ ಮಾಡಿ ಹೊಗುವುದರಿಂದ ರೈತರ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ. ಕೃಷಿಕರು ಇಂದು ಬಹಳ ಕಷ್ಟದಲ್ಲಿದ್ದಾರೆ.ಕೃಷಿಗೆ ಹಾಕಿದ ಬಂಡವಾಳ ವಾಪಸ್ಸ ಬಾರದೆ, ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸರಕಾರದ ಅಂಕಿ ಅಂಶಗಳ…
ಹುಳಿಯಾರು: ಹುಳಿಯಾರು ಕಸ ವಿಲೇವಾರಿ ಘಟಕವನ್ನು ಎಚ್.ಮೇಲನಹಳ್ಳಿ ಬಳಿ ನಿರ್ಮಾಣ ಮಾಡಲು ನಾವು ಬಿಡುವುದಿಲ್ಲ. ಹುಳಿಯಾರು ಸಮೀಪದಲ್ಲೇ ಸಾಕಷ್ಟು ಸರ್ಕಾರಿ ಭೂಮಿ ಇರುವಾಗ ೨೦ ಕಿ.ಮೀ. ದೂರದ ಎಚ್.ಮೇಲನಹಳ್ಳಿಯ ಭೂಮಿಯ ಮೇಲೆ ಕಣ್ಣೇಕೆ? ಎಂದು ಸ್ಥಳೀಯರು ತಹಸೀಲ್ದಾರ್ ಅವರನ್ನು ಪ್ರಶ್ನಿಸಿದ ಘಟನೆ ಶನಿವಾರ ನಡೆದಿದೆ. ಹುಳಿಯಾರಿನ ಕಸ ವಿಲೇವಾರಿ ಘಟಕ ನಿರ್ಮಿಸಲು ಎಚ್.ಮೇಲ ನಹಳ್ಳಿ ಸರ್ವೆ ನಂಬರ್ ೬೯ ಹಾಗೂ ೬೯/೩ ರಲ್ಲಿ ಈ ಹಿಂದಿನ ತಹಸೀಲ್ದಾರ್ ಕೆ.ಪುರಂದರ ಅವರು ಸ್ಥಳ ಗುರುತಿಸಿದ್ದು ನೂತನÀ ತಹಸೀಲ್ದಾರ್ ಎಂ.ಮಮತ ಅವರು ಶನಿವಾರ ಸ್ಥಳ ವೀಕ್ಷಣೆಗೆ ಆಗಮಿ ಸಿದ್ದರು. ಈ ಸಂದರ್ಭದಲ್ಲಿ ಘಟಕ ನಿರ್ಮಾಣ ಸ್ಥಳಕ್ಕೆ ಹೋ ಗದೆ ಗ್ರಾಮದಲ್ಲೇ ಸ್ಥಳೀಯರು ಕಾರಿಗೆ ಮುತ್ತಿಗೆ ಹಾಕಿ ವ್ಯಾಪಕ ವಿರೋಧ ವ್ಯಕ್ತಪಡಿಸಿದರು. ಹಿಂದಿನ ತಹಸೀಲ್ದಾರ್ ಅವರ ನಡೆಯನ್ನು ತೀರ್ವವಾಗಿ ಖಂಡಿಸಿದರು. ಎಚ್.ಮೇಲನಹಳ್ಳಿ ಗ್ರಾಮದಲ್ಲೇ ೧೮೦೦ ರಿಂದ ೨೦೦೦ ಸಾವಿರ ಜನಸಂಖ್ಯೆ ಇದೆ. ಅಲ್ಲದೆ ಊರಿಗೆ ಹೊಂದಿಕೊAಡAತೆ ಹನುಮ ದಾಸಯ್ಯನಪಾಳ್ಯ, ಜಯಸುವರ್ಣಪುರ, ಲಂಬಾಣಿತಾAಡ್ಯ ಹಾಗೂ ತೋಟದ…
ತುಮಕೂರು: ಜಿಲ್ಲೆಯ ನಿರಾಶ್ರಿತರು, ಬಡವರು ನಿರ್ಗತಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಸತಿ ನಿವೇಶನದ ಜಾಗಗಳನ್ನು ಗುರುತಿಸಿದ್ದು ಅಲೆಮಾರಿ, ಅರೆ ಅಲೆಮಾರಿ ಅಕ್ಕಿ ಪಿಕ್ಕಿ ಹಂದಿ ಜೋಗಿ ಸಮುದಾಯಗಳಿಗೆ ನಿವೇಶನ ಕಲ್ಪಿಸಲು ತುಮಕೂರು ಹೊರವ ಲಯದ ಕೇಂದ್ರೀಯ ವಿದ್ಯಾಲಯದ ಬಳಿ ಅಮಲಾಪುರದ ಸರ್ವೆ ನಂ. ೩೧ ರಲ್ಲಿ ಈಗಾಗಲೇ ಒಂದು ಎಕ್ಕರೆ ಜಮೀನು ನೀಡಿದ್ದು ಆದರೆ ಇಲ್ಲಿಗೆ ಮೂಲ ಭೂತ ಸೌಕರ್ಯ ಕಲ್ಪಿಸುವಲ್ಲಿ ಜಿಲ್ಲಾ ಆಡಳಿತದ ಅಧಿಕಾರಿಗಳು ವಿಫಲವಾಗಿದ್ದು ಕೂಡಲೇ ಮೂಲಭೂತ ಸೌಕರ್ಯ ಕಲ್ಪಿಸಿ ಹಕ್ಕುಪತ್ರ ನೀಡದೆ ಹೋದರೆ ಜನವರಿ ೧೦ ರಿಂದ ಇಲ್ಲಿ ಅನಿರ್ದಿಷ್ಟ ಅವಧಿ ಹೋರಾಟ ನಡೆಸಲಾಗುವುದು ಎಂದು ಅಂಬೇಡ್ಕರ್ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಕೆ.ಎಮ್.ಸಂದೇಶ್ ಅವರು ತಿಳಿಸಿದರು. ತುಮಕೂರು ನಗರ ಹೊರವಲಯದ ಅಮಲಾಪುರ ಕೇಂದ್ರೀಯ ವಿದ್ಯಾಲಯದ ಬಳಿ ಇರುವ ಹಂದಿ ಜ್ಯೋಗಿಗಳ ವಾಸಸ್ಥಾನಕ್ಕೆ ಭೇಟಿ ಸುದ್ದಿಗಾರರ ಬಳಿ ಮಾತನಾಡಿದರು ತುಮಕೂರು ಜಿಲ್ಲೆಯ ಸುಮಾರು ೫೦ಕ್ಕೂ ಹೆಚ್ಚು ನಿರ್ಗತಿಕರು ಅಲೆಮಾರಿಗಳಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಒಂದು…
ತುಮಕೂರು: ತುರುವೇಕೆರೆ ತಾಲೂಕಿನಲ್ಲಿ ಹೊಸ ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅರ್ಹ ಫಲಾನುಭವಿಗಳಿಗೆ ಮುಂದಿನ ಒಂದು ತಿಂಗಳೊಳಗೆ ಪಡಿತರ ಚೀಟಿ ವಿತರಿಸಲಾಗುವುದು ಎಂದು ಶಾಸಕ ಎಂ.ಟಿ. ಕೃಷ್ಣಪ್ಪ ತಿಳಿಸಿದರು. ಸೋಮವಾರ ಪಟ್ಟಣದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಆಹಾರ ಅದಾಲತ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲೂಕಿನಲ್ಲಿ ಹೊಸ ಪಡಿತರ ಚೀಟಿಗಾಗಿ ಒಟ್ಟು ೨,೦೯೪ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ೧೬೫೪ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿಯಿರುವ ೪೪೨ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಅನ್ನ ಸುವಿಧ ಯೋಜನೆ ಯಡಿ ೭೫ ವರ್ಷ ಮೇಲ್ಪಟ್ಟ ಏಕ ಸದಸ್ಯರಾಗಿರುವ ವಯೋವೃದ್ಧರ ಮನೆ ಬಾಗಿಲಿಗೆ ಪಡಿತರ ತಲುಪಿಸುವ ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಇದರಿಂದ ವಯೋವೃದ್ಧರು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಕಾಯುವ…
ತುಮಕೂರು: ಸಾಮಾಜಿಕ ಕಳಕಳಿ ಹೊಂದಿರುದ ದಿನಪತ್ರಿಕೆಗಳನ್ನು ರೂಪಿಸುವ ಹೊಣೆ ಹೊತ್ತಿರುವ ಸಂಪಾದಕರು ದಿನನಿತ್ಯ ಬಿಡುವಿಲ್ಲದೆ ಕೆಲಸ ಮಾಡಬೇಕಾಗುತ್ತದೆ. ಈ ಕಾರ್ಯಭಾರದಲ್ಲಿ ಅವರು ತಮ್ಮ ಖಾಸಗಿ ಬದುಕನ್ನೂ ಕಳೆದುಕೊಳ್ಳುವಷ್ಟು ಒತ್ತಡ ಬರಬಹುದು. ಎಷ್ಟೇ ಕಾರ್ಯ ಒತ್ತಡದ ನಡುವೆಯೂ ತಮ್ಮ ಕುಟುಂಬಕ್ಕಾಗಿ ಸಮಯ ಮೀಸಲಿಟ್ಟು ಅವರೊಂದಿಗೆ ಬೆರೆತು ಕುಟುಂಬದ ಕಲ್ಯಾಣಕ್ಕೆ ಪ್ರಯತ್ನಿಸಬೇಕು ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದಿ0ದ ಹಮ್ಮಿಕೊಂಡಿದ್ದ ರಾಷ್ಟಿçಯ ಪತ್ರಿಕಾ ದಿನಾಚರಣೆ, ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಸಮಿತಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ವಿಶ್ವವಿದ್ಯಾಲಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಮ್ಮ ಹಾಲಪ್ಪ ಪ್ರತಿಷ್ಠಾನದಡಿ ಚಿನ್ನದ ಪದಕ ನೀಡಲಾಗುತ್ತಿದೆ. ಇದೇ ರೀತಿ ಪತ್ರಕರ್ತರ ಕಲ್ಯಾಣ ಹಾಗೂ ಪ್ರೋತ್ಸಾಹಕ್ಕಾಗಿ ಸಾಧ್ಯವಾದಷ್ಟು ದತ್ತಿ ಹಣ ಮೀಸಲಿಡುವ ಮೂಲಕ ಅವರ ವೃತ್ತಿ ಬದುಕಿಗೆ ಶಕ್ತಿ ತುಂಬುವ ಪ್ರಯತ್ನ ಮಾಡುವುದಾಗಿ ಹೇಳಿದರು.…
ತುಮಕೂರು: ತಂತ್ರಜ್ಞಾನವು ಮಾನವೀಯತೆಗೆ ಸೇವೆ ಸಲ್ಲಿಸಿದಾಗ ಮಾತ್ರ ಅದರ ಅತ್ಯುನ್ನತ ಮೌಲ್ಯವನ್ನು ಸಾಧಿಸುತ್ತದೆ. ಹೊಸ ತಂತ್ರಜ್ಞಾನಗಳು ಸುರಕ್ಷಿತವೂ,ನೈತಿಕವು ಆಗಿರಬೇಕು.ಆಗ ಮಾತ್ರ ಹೆಚ್ಚು ದಿನ ಜನರ ಮದ್ಯ ಉಳಿಯಲು ಸಾಧ್ಯ ಎಂದು ಯುಎಸ್ಎಯ ಪ್ಲೋರಿಡಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ.ಎಸ್.ಎಸ್ ಐಯ್ಯಂಗಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಎಸ್.ಐ.ಟಿಯ ಬಿರ್ಲಾ ಸಭಾಂಗಣದಲ್ಲಿ ಎಸ್.ಐ. ಟಿಯ ಕಂಪ್ಯೂಟರ್ ಸೈನ್ ಮತ್ತು ಇನ್ಫಾರಮೇಷನ್ ಸೈನ್ ವಿಭಾಗದಿಂದ ಎಐಸಿಇಟಿ ಸಹಯೋಗದಲ್ಲಿ ಆಯೋಜಿಸಿದ್ದ ಮೂರನೇ ಐಸಿಇಸಿಐಟ-೨೦೨೫ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು,ಈ ಸಮ್ಮೇಳನವು ಶೈಕ್ಷಣಿಕ ಕ್ಷೇತ್ರದ ಸಂಶೋಧಕರು,ಉದ್ಯಮದ ವೃತ್ತಿಪರರು, ನೀತಿ ನಿರೂಪಕರು ಮತ್ತು ಯುವ ವಿದ್ವಾಂಸರನ್ನು ಒಟ್ಟುಗೂಡಿಸುವ ಮೂಲಕ ಆ ತತ್ವಶಾಸ್ತ್ರವನ್ನು ಪ್ರತಿಬಿಂಬಿಸುತ್ತದೆ.ಪ್ರತಿಯೊಬ್ಬರೂ ಮಾಹಿತಿ ತಂತ್ರಜ್ಞಾನಗಳ ಭವಿಷ್ಯಕ್ಕೆ ವಿಶಿಷ್ಟವಾದ ಬೆಳಕನ್ನು ಕೊಡುಗೆ ನೀಡುತ್ತಾರೆ ಎಂದರು. ತ0ತ್ರಜ್ಞಾನದ ಭಾಗವಾಗಿರುವ ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫರಮೇಷನ್ ಟೆಕ್ನಾಲಜಿಯ ಉದಯೋನ್ಮುಖ ಯುವಜನತೆ ಜಾಗತಿಕ ವೇದಿಕೆಯ ಭಾಗವಾಗಲು ಇಂತಹ ಸಮ್ಮೇಳನಗಳು ವೇದಿಕೆಯಾಗಲಿವೆ.ಈ ರೀತಿಯ ಸಮ್ಮೇಳನಗಳು ಕೇವಲ ಶೈಕ್ಷಣಿಕ ಕೂಟಗಳಲ್ಲ,ವಿಚಾರಗಳ ಜೀವಂತ ಪರಿಸರ ವ್ಯವಸ್ಥೆಗಳು. ಅವು ಸಿದ್ಧಾಂತ ಮತ್ತು…
ಪಾವಗಡ: ತಾಲೂಕಿನ ವೈ.ಈ.ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ‘ನಶೆ ಮುಕ್ತ ಕರ್ನಾಟಕ’ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಐಕ್ಯೂಎಸಿ ಹಾಗೂ ಪಾವಗಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ಮಾತನಾಡಿ, ಇಡೀ ತುಮಕೂರು ಜಿಲ್ಲೆಯಲ್ಲಿ ಪಾವಗಡ ತಾಲೂಕಿನಲ್ಲಿ ಅತಿ ಹೆಚ್ಚು ಮಾದಕ ದ್ರವ್ಯ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು. ಇತ್ತೀಚಿನ ವರ್ಷಗಳಲ್ಲಿ ಯುವ ಸಮೂಹ ದುಶ್ಚಟಗಳಿಗೆ ದಾಸರಾಗುತ್ತಿರುವುದು ಆತಂಕಕಾರಿ ವಿಷಯವಾಗಿದ್ದು, ಸಮಾಜದಲ್ಲಿ ವ್ಯಸನಿಗಳ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಇಲಾಖೆಗೆ ತಿಳಿಸಬೇಕು ಎಂದು ಮನವಿ ಮಾಡಿದರು. ಮಾಹಿತಿ ನೀಡುವವರ ಹೆಸರನ್ನು ಸಂಪೂರ್ಣವಾಗಿ ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದರು. ಜೊತೆಗೆ ‘ನಶೆ ಮುಕ್ತ ಕರ್ನಾಟಕ’ ಆಪ್ ಅಭಿವೃದ್ಧಿಪಡಿಸಲಾಗಿದ್ದು, ಆಪ್ ಮೂಲಕವೂ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ವಿ.ಎನ್. ಮುರುಳಿಧರ್ ಮಾತನಾಡಿ, ಯುವಕರು ಮಾದಕ ದ್ರವ್ಯಗಳ ದುಶ್ಚಟಕ್ಕೆ ಬಲಿಯಾಗಬಾರದು ಎಂದು ಎಚ್ಚರಿಸಿದರು. ಮಾದಕ ವಸ್ತುಗಳ ಬಳಕೆಯು ತೀವ್ರ ಮಾನಸಿಕ, ಸಾಮಾಜಿಕ…
ತುಮಕೂರು: ಎತ್ತಿನ ಹೊಳೆ ಯೋಜನೆಯ ಸುಮಾರು ೨೫೨ ಕಿ.ಮಿ. ನಾಲಾ ಕಾಮಗಾರಿಯಲ್ಲಿ ೨೩೫ ಕಿಮಿ ಕಾಮಗಾರಿ ಪೂರ್ಣಗೊಂಡಿದ್ದು, ಹಾಸನ ಜಿಲ್ಲೆ ಬೇಲೂರು ತಾಲೂಕಿನ ಆರು ಕಿ.ಮಿ.ಅರಣ್ಯ ಜಾಗದಲ್ಲಿ ನಾಲಾ ಕಾಮಗಾರಿ ಪೂರ್ಣಗೊಂಡರೆ ಮುಂದಿನ ೨೦೨೬ರ ಜೂನ್ ವೇಳೆಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಎತ್ತಿನಹೊಳೆ ಯೋಜನೆಯ ಮುಖ್ಯ ಇಂಜಿನಿಯರ್ ಆನಂದ ಸ್ಪಷ್ಟನೆ ನೀಡಿದ್ದಾರೆ. ನಗರದ ಅಮರಜೋತಿ ನಗರದಲ್ಲಿರುವ ವಿಶ್ವೇಶ್ವರಯ್ಯ ಜಲನಿಗಮದ ಕಚೇರಿ ಎದುರು ಎತ್ತಿನಹೊಳೆ ಯೋಜನೆ ನಮ್ಮದಾಗಲಿ ಎಂಬ ಘೋಷವಾಕ್ಯದೊಂದಿಗೆ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ನೇತೃತ್ವದಲ್ಲಿ ಪಕ್ಷಾತೀತವಾಗಿ ಹಮ್ಮಿಕೊಂಡಿದ್ದ ಎತ್ತಿನಹೊಳೆ ಅಭಿಯಾನದಲ್ಲಿ ಪ್ರತಿಭಟನಾಕಾರರ ಪ್ರಶ್ನೆಗಳಿಗೆ ಉತ್ತರಿಸಿದ ಅಧಿಕಾರಿಗಳು,ಪಶ್ಚಿಮ ಘಟ್ಟದಲ್ಲಿ ಹುಟ್ಟಿ ಅರಬ್ಬಿ ಸಮುದ್ರ ಸೇರುವ ಮಳೆಯ ನೀರನ್ನು ಸಂಗ್ರಹಿಸಿ, ಪೂರ್ವದಲ್ಲಿ ರುವ ಬಯಲು ಸೀಮೆಯ ೭ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಹರಿಸುವ ಯೋಜನೆ ಇದಾಗಿದೆ ಎಂದರು. ಎತ್ತಿನಹೊಳೆಗೆ ಈ ಯೋಜನೆಯಿಂದ ಒಟ್ಟು ೨೪.೭೮ ಟಿ.ಎಂ.ಸಿ ನೀರು…











