Author: News Desk Benkiyabale

ತುಮಕೂರು: ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಸರಣಿ ಹಗರಣ, ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಇದರ ವಿರುದ್ಧ ಬಿಜೆಪಿಯಿಂದ ಸಾಕಷ್ಟು ಪ್ರತಿಭಟನೆ ನಡೆದಿವೆ. ಇಷ್ಟಾಗಿಯೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಟೀಕಿಸಿದರು. ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಆತಂಕ ಮೂಡಿಸಿವೆ. ಸರ್ಕಾರ ಆರೋಗ್ಯ ಸೇವೆಯನ್ನು ಸಮರ್ಪಕವಾಗಿ ಒದಗಿಸುತ್ತಿಲ್ಲ, ಆರೋಗ್ಯ ಇಲಾಖೆಯ ತಿಮಿಂಗಿಲಗಳು ಬಾಣಂತಿಯರನ್ನು ನುಂಗುತ್ತಿವೆ. ಇದಕ್ಕೆಲ್ಲಾ ಸರ್ಕಾರವೇ ನೇರ ಹೊಣೆ.…

Read More

ತುಮಕೂರು: ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯೋನ್ಮುಖರಾಗಿರುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅತ್ಯವಶ್ಯ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು. ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್ ಮತ್ತು ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ದೇಶ, ರಾಜ್ಯದಲ್ಲಿನ ನಾಗರಿಕರನ್ನು ರಕ್ಷಣೆ ಮಾಡುವಂತೆ ಪೊಲೀಸರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಉತ್ತಮ ಆರೋಗ್ಯ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಇಂತಹ ಕ್ರೀಡಾಕೂಟ ಆಯೋಜಿಸುವುದು ಬಹುಮುಖ್ಯ ಎಂದರು. ಪೊಲೀಸರು ವರ್ಷಕ್ಕೊಮ್ಮೆ ಮೂರು ದಿನ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಮುಖ್ಯವಲ್ಲ. ತಮ್ಮ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳಲು ಸಮಯ ಸಿಕ್ಕಾಗ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯ ಎಂದು ಸಲಹೆ ನೀಡಿದರು. ಸಾರ್ವಜನಿಕರಿಗೆ ಸರ್ಕಾರ ಎಂದಾಕ್ಷಣ ನೆನಪಾಗುವುದು ಪೊಲೀಸ್ ಇಲಾಖೆ. ಪೊಲೀಸರ ಬಗ್ಗೆ ಜನರು ನಂಬಿಕೆ ಇಟ್ಟಿದ್ದಾರೆ. ನಿಮ್ಮ ಕೈಯಲ್ಲಿ…

Read More

ಹುಳಿಯಾರು: ಇತ್ತೀಚೆಗೆ ಮಹಿಳೆಯರು ಮೈಕ್ರೋ ಫೈನಾನ್ಸ್ಗಳಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ತುಂಬಾ ವಿಷಾದನೀಯ ಎಂದು ಚಿಕ್ಕನಾಯಕನಹಳ್ಳಿ ಕೆನರಾ ಬ್ಯಾಂಕಿನ ಕ್ಷೇತ್ರಧಿಕಾರಿಗಳಾದ ಎನ್.ಜಿ.ಮಧುಸೂದನ್ ಎಂದರು. ಕೆನರಾ ಬ್ಯಾಂಕ್ ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರದಿAದ ಕುಪ್ಪೂರು ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜನ ಸುರಕ್ಷಾ ಅಭಿಯಾನ ಶಿಬಿರದಲ್ಲಿ ಅವರು ಮಾತನಾಡಿದರು. ಮಹಿಳೆಯರು ಬ್ಯಾಂಕುಗಳಲ್ಲಿ ಸ್ವಸಹಾಯಗಳ ಮುಖಾಂತರ ಕಡಿಮೆ ಬಡ್ಡಿ ದರದಲ್ಲಿ ದೊರೆಯುವ ಸಾಲ ಪಡೆಯುವಂತೆ ಸಲಹೆ ನೀಡಿದರು. ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಆರ್.ಎಂ.ಕುಮಾರಸ್ವಾಮಿ ಮಾತನಾಡುತ್ತಾ ಹೊಸ ವರ್ಷದ ಪ್ರಯುಕ್ತ ಹಲವಾರು ಸಂದೇಶಗಳನ್ನು ಮೊಬೈಲ್ ಮುಖಾಂತರ ಸೈಬರ್ ಕಳ್ಳರು ಕಳುಹಿಸುತ್ತಿದ್ದು ಅವುಗಳನ್ನು ತಿರಸ್ಕರಿಸಬೇಕೆಂದು ಹಾಗೇನಾದರೂ ಆದಲ್ಲಿ 1930 ಕ್ಕೆ ಕರೆ ಮಾಡಬೇಕೆಂದು ತಿಳಿಸಿದರು, ಕೆನರಾ ಬ್ಯಾಂಕಿನ ರಂಗಸ್ವಾಮಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷಣಿಯಾದ ರೆಹನಾ ಬಾನು, ಸಂಜೀವಿನಿ ಒಕ್ಕೂಟದ ಎಲ್‌ಸಿಆರ್‌ಪಿ ಕಲ್ಪನ, ಆಶಾ ಕಾರ್ಯಕರ್ತೆ ಹೇಮಾವತಿ, ಪ್ರತಿನಿಧಿ ಮಂಜುಳಾ ಮುಂತಾದವರು ವೇದಿಕೆಯನ್ನು ಕುರಿತು ಮಾತನಾಡಿದರು.…

Read More

ತುಮಕೂರು: ಯುವಜನರು, ಅದರಲ್ಲಿಯೂ ಹೆಣ್ಣು ಮಕ್ಕಳು ಓದುವ ಸಮಯದಲ್ಲಿ ಇನ್ನಿಲ್ಲದ ಆಕರ್ಷಣೆಗೆ ಒಳಗಾಗಿ, ದಾರಿ ತಪ್ಪಿದರೆ, ಬದುಕಿನದ್ದಕ್ಕೂ ಸಂಕಷ್ಟದ ಜೀವನ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಶ್ರೀಮತಿ ನೂರುನ್ನಿಸಾ ಎಚ್ಚರಿಸಿದ್ದಾರೆ. ನಗರದ ಮಳೆಕೋಟೆಯ ಧಾನಿಶ್ ಸಭಾಂಗಣದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ತೆಹ್ರಿರಿಕ್‌ಎ ಉರ್ದು ಆದಬ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೌಲಾನ ಅಬ್ದುಲ್ ಕಲಾಂ ಆಜಾದ್ ಶಾಲೆಯ ಮಕ್ಕಳಿಗೆ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಮೊಬೈಲ್, ಇನ್ನಿತರ ಅಕರ್ಷಣೆಗಳಿಂದ ದೂರವಿದ್ದು,ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಂಡರೆ,ಸಾಧಕರ ಪಟ್ಟಿಯಲ್ಲಿ ನಿಲ್ಲಬಹುದು.ಇದಕ್ಕೆ ನನ್ನ ಜೀವನವೇ ಉದಾಹರಣೆ ಎಂದರು. ನಮ್ಮ ತಂದೆ, ತಾಯಿ, ನಮಗೆ ಬೇಕಾದನ್ನು ಕೊಡಿಸಲಿಲ್ಲ,ಒಳ್ಳೆಯ ಶಾಲೆಗೆ ಸೇರಿಸಲಿಲ್ಲ ಎಂದು ದೂರುವ ಬದಲು ಇರುವುದರಲ್ಲಿಯೇ ಕಷ್ಟಪಟ್ಟು ಓದಿ,ಒಳ್ಳೆಯ ಅಂಕ ಪಡೆದು,ಇರುವ ಅವಕಾಶಗಳನ್ನು ಬಳಸಿಕೊಂಡರೆ ನೀವು ಕೂಡ ನಮ್ಮಂತೆ ನ್ಯಾಯಾಧೀಶರೋ,ವಕೀಲರೋ,ಅಧಿಕಾರಿಗಳೋ ಆಗಬಹುದು.ಮನೆಯಲ್ಲಿ ಅಪ್ಪ, ಅಮ್ಮ ನಮಗೆ ಸಮಯ ನೀಡುತ್ತಿಲ್ಲ ಎಂದು ಸೊಷಿಯಲ್ ಮೀಡಿಯಾದಲ್ಲಿ…

Read More

ತುಮಕೂರಿನ ಬಾರ್‌ಲೈನ್ ರಸ್ತೆಯಲ್ಲಿರುವ ಕೃಷ್ಣಮಂದಿರದಲ್ಲಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರ 5ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ವಿಶೇಷ ಹೋಮ-ಪೂಜಾದಿಗಳು ನೆರವೇರಿದವು. ನಂತರ ಕೃಷ್ಣ ಮಂದಿರದ ಸೇರಿದಂತೆ ಜಯಪುರದ ಲಕ್ಷಿ÷್ಮ ದೇವಸ್ಥಾನ ಮುಂಭಾಗ ಹಾಗೂ ಮೈದಾಳದ ಶಿವಶೈಕ್ಷಣಿಕ ಅನಾಥಾಶ್ರಮದ ಮುಂಭಾಗ ಅನ್ನಸಂತರ್ಪಣೆ ನಡೆಸಲಾಯಿತು.

Read More

ತುಮಕೂರು: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜûಮ್ ಜûಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಕೆ. ಪ್ರಸನ್ನಕುಮಾರ್ ಉಪಸ್ಥಿತರಿದ್ದರು. ಸ್ವಾಮೀಜಿ ಅವರಿಗೆ ತುಮಕೂರು ವಿವಿಯ 17ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಸ್ವಾಮೀಜಿ ಅವರು ಘಟಿಕೋತ್ಸವದಲ್ಲಿ ಭಾಗವಹಿಸಿರಲಿಲ್ಲ. ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಚುನಾವಣೆಯಲ್ಲಿ ತಳ ಸಮುದಾಯದ ಮತಗಳನ್ನು ಪಡೆಯುವ ಪಕ್ಷಗಳು, ಚುನಾವಣೆಯ ನಂತರ ಆ ಸಮುದಾಯಗಳಿಗೆ ನೀಡಿದ ಭರವಸೆಗಳನ್ನು, ಹಿತವನ್ನು ಮರೆಯುತ್ತಾರೆ. ರಾಜಕೀಯ ಇಚ್ಛಾಶಕ್ತಿ ಹಾಗೂ ಅಸಂಘಟನೆಯ ಕೊರತೆಯಿಂದಾಗಿ ಮೀಸಲಾತಿ ಸರಿಯಾದ ಪ್ರಮಾಣದಲ್ಲಿ ಹಂಚಿಯಾಗುತ್ತಿಲ್ಲ. ನೀತಿಯಿಂದ ಮನುಷ್ಯನ ವ್ಯಕ್ತಿತ್ವವನ್ನು ಅಳೆದಾಗ ಸಮ ಸಮಾಜ ರೂಪುಗೊಳ್ಳಲಿದೆ ಎಂದರು. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಪ್ರಸನ್ನಾನಂದ ಸ್ವಾಮೀಜಿ ಅವರು ಗದಗ ಜಿಲ್ಲೆಯ ಹಿರೇಮಣ್ಣೂರಿನವರು. ಶಾಲಾ ವಿದ್ಯಾಭ್ಯಾಸ…

Read More

ತುಮಕೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ತುಮಕೂರಿನ ಜ್ಞಾನ ಸಿಂಧು ಸ್ವಾಮಿ ಅವರನ್ನು ಆಯ್ಕೆ ಮಾಡಿ ಕೆ ಆರ್ ಎಸ್ ಪಕ್ಷದ ಕಾರ್ಯಕಾರಿ ಸಮಿತಿ ಆದೇಶ ಹೊರಡಿಸಿದೆ. ಪಕ್ಷವೂ ಮುಂಬುರವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಣೆ ಮಾಡಲು ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಪುನರಚನೆ ಕಾರ್ಯ ಕೈಗೊಂಡಿತ್ತು. ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹೆಸರು ಸೂಚಿಸಿ ಮತ ಹಾಕುವ ಪ್ರಕ್ರಿಯೆ ಯಲ್ಲಿ ಒಮ್ಮತದಿಂದ ರಾಜ್ಯ ಕಾರ್ಯದರ್ಶಿಯಾಗಿದ್ದ ಜ್ಞಾನಸಿಂಧುಸ್ವಾಮಿ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಪಕ್ಷದ ಬಲವರ್ಧನೆ, ಸಂಘಟನಾ ಚಾತುರ್ಯ, ನಾಯಕತ್ವ ಹಾಗೂ ವಿವಿಧ ಆಯಾಮಗಳಲ್ಲಿ ಮುಂದೆ ಇರುವ ಅವರನ್ನು ಪಕ್ಷವು ಉನ್ನತಮಟ್ಟಕ್ಕೆ ಆಯ್ಕೆ ಮಾಡುವ ಮೂಲಕ ಮತ್ತಷ್ಟು ಜವಾಬ್ದಾರಿ ಹಂಚಿದೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಜ್ಞಾನಸಿಂಧು ಸ್ವಾಮಿ ಅವರು, ಪಕ್ಷಕ್ಕೆ ದುಡಿದ ಪ್ರಾಮಾಣಿಕತೆಯನ್ನು ಗಮನಿಸಿ ಉಪಾಧ್ಯಕ್ಷ ಸ್ಥಾನಕ್ಕೇರಿಸಿ ಆಯ್ಕೆ ಮಾಡಿದ್ದು ಪಕ್ಷದಲ್ಲಿ ನನ್ನ ಜವಾಬ್ದಾರಿಯನ್ಮು…

Read More

ಹುಳಿಯಾರು: ಭಾರತದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ 193 ನೇ ಜನ್ಮ ದಿನಾಚರಣೆಯನ್ನು ಹುಳಿಯಾರು ಪಟ್ಟಣ ಪಂಚಾಯ್ತಿಯ ಸೋಮಜ್ಜನಪಾಳ್ಯ ಶಾಲೆಯಲ್ಲಿ ಶುಕ್ರವಾರ ಆಚರಣೆ ಮಾಡಲಾಯಿತು. ಶಾಲಾ ಹಿರಿಯ ಶಿಕ್ಷಕಿಯಾದ ಓಂಕಾರಮ್ಮ ಹೆಚ್ ಸಿ ರವರು ಮಾತನಾಡಿ, ಸಾವಿತ್ರಿ ಬಾಯಿ ಪುಲೆಯವರು ಹೆಣ್ಣು ಮಕ್ಕಳಿಗೆ ಮೊದಲು ಅಕ್ಷರ ಬಿತ್ತಿದ ಅಕ್ಷರದವ್ವ. ತಳಸಮುದಾಯ ಹೆಣ್ಣು ಮಕ್ಕಳಿಗೆ 18 ಶಾಲೆಗಳನ್ನು ತೆರೆದು ಮೇಲುಜಾತಿ ಗಂಡಸರಿಗೆ ಮಾತ್ರ ಮೀಸಲಾಗಿದ್ದ ವಿದ್ಯೆಯನ್ನು ಹೆಣ್ಣು ಮಕ್ಕಳಿಗೆ ತಲುಪಿಸಿದವರು ಎಂದು ಹೇಳಿದರು. ಕೆಸರು, ಸಗಣಿ ಎರಚಿ ಕೇಕೆ ಹಾಕಿದ ಜನರೆದುರು ಹಠವಾದಿಯಾಗಿ ಅಕ್ಷರ ಕಾಯಕ ಮಾಡಿದರು. ಮುಸ್ಲಿಂ, ದಲಿತ, ಹಿಂದುಳಿದ ಹಾಗೂ ಬ್ರಾಹ್ಮಣ ವಿಧವೆಯರ ಮಕ್ಕಳಿಗೂ ಶಿಕ್ಷಣದ ಹಕ್ಕು ದೊರಕಿಸಿ ಕೊಡಲು ಮುನ್ನುಡಿ ಬರೆದ ಮಹಾ ತಾಯಿ. ಅಂದು ಪ್ಲೇಗ್ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾಗ ಅದೇ ರೋಗಕ್ಕೆ ತುತ್ತಾಗಿ ಅಸುನೀಗಿದರು. ಇವರ ಹೋರಾಟಕ್ಕೆ ಬೆಂಬಲವಾಗಿ ನಿಂತವರು ಅವರ ಪತಿ ಜ್ಯೋತಿ ಬಾಪುಲೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ…

Read More

ತುಮಕೂರು : ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯವನ್ನು ಹೆಸಗಿದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನವರು ವಿರುದ್ಧ ಭೀಮ್ ಆರ್ಮಿ ತುಮಕೂರು ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾ ಪೊಲಿಸ್ ವರಿಷ್ಠಾಧಿ ಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾದ ಅಯ್ಯನಪಾಳ್ಯ ಶ್ರೀನಿವಾಸ ಮೂರ್ತಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡುತ್ತಾ ಮಹಿಳೆಯೊಬ್ಬರು ತಮ್ಮ ಜಮೀನು ವಿಚಾರವಾಗಿ ದೂರು ನೀಡಲು ಮಧುಗಿರಿ ಡಿ.ವೈ.ಎಸ್.ಪಿ. ಕಛೇರಿಗೆ ಆಗಮಿಸಿದ್ದಂತಹ ಸಂದರ್ಭದಲ್ಲಿ ಡಿ.ವೈ.ಎಸ್.ಪಿ. ರಾಮಚಂದ್ರಪ್ಪನವರು ಲೈಂಗಿಕ ದೌರ್ಜನ್ಯವನ್ನು ಮಾಡಿದ್ದಾರೆ ಎಂದು ಹೇಳಲಾಗಿ ಸುದ್ಧಿ ಪ್ರಸಾರವಾಗಿದ್ದ ಹಿನ್ನಲೆಯಲ್ಲಿ ಈ ಒಂದು ಅಮಾನುಷ ಘಟನೆಯಿಂದ ಪೊಲೀಸ್ ಇಲಾಖೆ ಮತ್ತು ವ್ಯವಸ್ಥೆಯ ಮೇಲೆ ಸಾರ್ವಜನಿಕರಿಗೆ ಬೇಸರ ಮೂಡಿಸಿರುವುದಲ್ಲದೇ, ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸ ಕಳೆದು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಮಚಂದ್ರಪ್ಪನವರು ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಾದ ಡಿ.ವೈ.ಎಸ್.ಪಿ. ಸ್ಥಾನದಲ್ಲಿದ್ದಾರೆ ತಮ್ಮ ಸನ್ನಿಧಾನಕ್ಕೆ ದೂರದ ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು…

Read More

ಹುಳಿಯಾರು: ಕೇಂದ್ರ ಸರ್ಕಾರದ ರಾಜ್ಯ ಸಚಿವ ವಿ.ಸೋಮಣ್ಣ ಅವರು ಹುಳಿಯಾರು ಹೋಬಳಿ ಮಟ್ಟದ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಗುರುವಾರ ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ನಡೆಸಿದರು. ಈ ಸಭೆಯಲ್ಲಿ ಹುಳಿಯಾರಿನ ಯುವಕರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮಾಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತಹಸೀಲ್ದಾರ್ ಕೆ.ಪುರಂದರ ಅವರಿಗೆ ಶೀಘ್ರ ಕನಿಷ್ಟ 1 ಎಕರೆ ಭೂಮಿ ಗುರುತಿಸಿ ಹಣ ಬಿಡುಗಡೆ ಮಾಡಿಸುತ್ತೇನೆ ಎಂದರು. ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಲ್ಲಿ ಟ್ರೆöÊನಿಂಗ್ ಪಡೆದಿದ್ದರೂ ಸಹ ಬ್ಯಾಂಕ್‌ಗಳು ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಫಲಾನುಭವಿಗಳು ದೂರಿದರು. ಇದಕ್ಕೆ ಸಚಿವರು ಈಗಾಗಲೇ ಜಿಲ್ಲಾಧಿಕಾರಿಗಳ ಸಭೆ ಮಾಡಿದ್ದು ತರಬೇತಿ ಪಡೆದ ಎಲ್ಲರಿಗೂ ಲೋನ್ ಕೊಡಿಸಲು ತಿಳಿಸಿದ್ದೇನೆ. ಇನ್ನೊಂದು ವಾರದಲ್ಲಿ ಸಮಸ್ಯೆ ಪರಿಹಾರವಾಗಲಿದೆ ಎಂದರು. ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಅರ್ಜಿ ಹಾಕಿದ್ದೇನೆ. ಕೆಲಸ ಕೊಡಿಸಿ ಸಾರ್ ಎಂದು ಅನೇಕರು ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು ಸಚಿವರಲ್ಲಿ ಮನವಿ ಮಾಡಿದರು. ರೈಲ್ವೆ ಇಲಾಖೆಯಲ್ಲಿ ಈಗ ಮೊದಲಿನಂತೆ ನೇರ ನೇಮಕಾತಿ ಇಲ್ಲ.…

Read More