Author: News Desk Benkiyabale

ಚಿಕ್ಕನಾಯಕನಹಳ್ಳಿ: ಜ.18 ಮತ್ತು 19 ರಂದು ಬೆಂಗಳೂರಿನಲ್ಲಿ ನಡೆಯುವ ಅಖಿಲಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಮಹೋತ್ಸವದ ಮಹಾ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಎಸ್. ರಾಘವೇಂದ್ರ ತಿಳಿಸಿದರು. ಪಟ್ಟಣದ ನಗರ ಬ್ರಾಹ್ಮಣ ಸಭಾದ ಉಪಾಧ್ಯಕ್ಷರಾದ ಕೆ.ಎಸ್. ಚಂದ್ರಶೇಖರಯ್ಯನವರ ಸ್ವಗೃಹದಲ್ಲಿ ನಡೆದ ಸಮಾಜಬಾಂಧವರ ಸಭೆಯಲ್ಲಿ ಮಾತನಾಡಿ ಜ.18 ಹಾಗೂ 19 ರಂದು ಬೆಂಗಳೂರನ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ 50ನೇವರ್ಷದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ “ವಿಶ್ವಾಮಿತ್ರ” ನಡೆಯಲಿದೆ. ಸಮ್ಮೇಳನದ ಉದ್ಘಾಟನೆ ಹಾಗೂ ಲಕ್ಷ ಗಾಯತ್ರಿ ಹೋಮದ ಪೂರ್ಣಾಹುತಿ ಯನ್ನು ಶ್ರೀ ಶೃಂಗೇರಿ ಶಾರದಾಪೀಠಾಧೀಶ್ವರರಾದ ಶ್ರೀವಿದುಶೇಖರ ಭಾರತೀಸ್ವಾಮಿಗಳು ನೆರವೇರಿಸುವರು. ಎರಡು ದಿನಗಳ ಕಾಲ ನಡೆಯುವ ಈ ಭವ್ಯಸಮ್ಮೇಳನದಲ್ಲಿ ತ್ರಿಮತಸ್ಥ ಮಠಾಧೀಶರು ಭಾಗವಹಿಸುವರು. ವಿಚಾರ ಗೋಷ್ಠಿ, ವಿಪ್ರಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ವೇದಾಪಾರಾಯಣ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನಕ್ಕೆ ಲಕ್ಷಕ್ಕೂ ಮಿಗಿಲಾಗಿ ಸಮಾಜಬಾಂಧವರು ಭಾಗವಹಿಸಿಲಿದ್ದಾರೆ ಎಂದರು. ಎರಡು ದಿನದ ಈ ಸಮ್ಮೇಳನಕ್ಕೆ ತಾಲ್ಲೂಕು…

Read More

ಚಿಕ್ಕನಾಯಕನಹಳ್ಳಿ: ಶಂಬುಗಡಿಯಲ್ಲಿ 38ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ರೈತನಾಯಕ ಜಗತ್‌ಸಿಂಗ್ ದಲ್ಗೆöÊವಾಲಾ ರ ಬೇಡಿಕೆ ಈಡೇರಿಸಿ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರ ತಕ್ಷಣ ಮುಂದಾಗಬೇಕೆAದು ರೈತಸಂಘ ಹಾಗೂ ಹಸಿರುಸೇನೆ ಸದಸ್ಯರು ಮನವಿ ಸಲ್ಲಿಸಿದರು. ತಾಲ್ಲೂಕು ರೈತಸಂಘ ಹಾಗೂ ಹಸಿರುಸೇನೆಯ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯೊಂದಿಗೆ ತಾಲ್ಲೂಕು ಕಚೇರಿಗೆ ಮಹಾತ್ಮ ಗಾಂಧೀಜಿಯ ಭಾವಚಿತ್ರದೊಂದಿಗೆ ಕೆಲನಿಮಿಷಗಳ ಕಾಲ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಸೀಬಿಲಿಂಗಯ್ಯ ಮಾತನಾಡಿ ಈ ಹಿಂದೆ ದೆಹಲಿಯಲ್ಲಿ ನಡೆದ ರೈತ ಚಳುವಳಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೆರಿಸುವ ಭರವಸೆಯನ್ನು ನೀಡಿತ್ತು. ಆದರೆ ಎರಡುವರ್ಷ ಕಳೆದರೂ ಲಿಖಿತ ಬೇಡಿಕೆಯಂತೆ ಎಂಎಸ್‌ಪಿಯನ್ನು ಕಾನೂನಾತ್ಮಕವಾಗಿ ಜಾರಿ ಮಾಡಲಿಲ್ಲ, ವಿದ್ಯುತ್‌ನ್ನು ಖಾಸಗೀಕರಣ ಮಾಡಬಾರದೆಂಬ ನಮ್ಮ ಬೇಡಿಕೆ ಈಡೆರಿಸದ ಕಾರಣ ಪುನಃ ಹರಿಯಾಣದ ಶಂಭು ಗಡಿಯಲ್ಲಿ ರೈತನಾಯಕ ಜಗತ್‌ಸಿಂಗ್ ದಲ್ಗೆöÊವಾಲಾರವರು ಉಪವಾಸ ಸತ್ಯಾಗ್ರಹ ಕೈಗೊಂಡು 38ದಿನಗಳು ಕಳೆದು ಜೀವನ್ಮರಣದ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ಸುಪ್ರೀಂಕೋರ್ಟ್ ಕಳವಳವ್ಯಕ್ತಪಡಿಸಿ ಪಂಜಾಬ್ ಹಾಗೂ ಕೇಂದ್ರ ಸರ್ಕಾರಗಳು ತಕ್ಷಣ ಈ ಬಗ್ಗೆ…

Read More

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆಯಲ್ಲಿ ಮಹಿಳೆಯರಿಗೆ ಬುಧವಾರ ಯುವ ಉದ್ಯಮಿ ತರಬೇತಿ ಆರಂಭವಾಯಿತು. ನವದಿಶಾ ವತಿಯಿಂದ ಒಂದು ವಾರ ಕಾಲ ನಡೆಯುವ ತರಬೇತಿಯಲ್ಲಿ ಮಹಿಳೆಯರು ಬಯಸುವ ವಿವಿಧ ಉದ್ಯಮಗಳ ಬಗ್ಗೆ ತರತಿಯನ್ನು ನೀಡಲಾಗುವುದು. ತರಬೇತಿಯ ನಂತರ ಉದ್ಯಮ ಆರಂಭಿಸಲು ಆಕತ್ಯವಿರುವವರಿಗೆ ಹಣಕಾಸು ದೊರೆಯುವ ಸಂಸ್ಥೆ ಅಥವಾ ಸಬ್ಸಿಡಿ ಯೋಜನೆಯ ಬಗ್ಗೆ ಪೂರ್ಣ ಮಾಹಿತಿ ನೀಡಲಾಗುವುದು. ಉದ್ಯಮ ಆರಂಭಿಸಿದ ಮೇಲೆ ಉತ್ಪನ್ನಗಳ ಮಾರಾಟಕ್ಕೆ ಅಗತ್ಯ ಮಾರುಕಟ್ಟೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಲಾಗುವುದು.ಮಹಿಳೆಯು ಯಶಸ್ವಿ ಉದ್ಯಮಿಯಾಗಲು ಅಗತ್ಯ ಮೂರು ವರ್ಷಗಳ ಕಾಲ ಅಗತ್ಯ ಮಾರ್ಗದರ್ಶನವನ್ನು ಪೂರೈಸಲಾಗುವುದು ಎಂದು ತರಬೇತುದಾರರಾದ ಅಶ್ವಿನಿ ಮತ್ತು ಸಿ.ಎಂ.ಎಸ್ ಗೌಡ ತಿಳಿಸಿದರು. ತರಬೇತಿಯನ್ನು ಉದ್ಘಾಟಿಸಿದ ಸೃಜನ ಮಹಿಳಾ ಸಂಘಟನೆಯ ಅಧ್ಯಕ್ಷೆ ಇಂದಿರಮ್ಮನವರು ಮಹಿಳೆಯರು ಉದ್ಯಮಿಯಾಗಿ ಆರ್ಥಿಕ ಸಬಲೀಕರಣ ಗೊಳ್ಳಬೇಕೆಂದರು. ಸುವರ್ಣ ವಿದ್ಯಾಚೇತನದ ರಾಮಕೃಷ್ಣಪ್ಪ ಮಹಿಳೆಯರಿಗೆ ಬದ್ಧತೆ ಆತ್ಮವಿಶ್ವಾಸ ಮತ್ತು ಜನರ ಒಡನಾಟ ಉದ್ಯಮಿಯಾಗಲು ಮುಖ್ಯ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿ ಕೆಂಪಯ್ಯ ಮಾತನಾಡಿ ಪ್ರತಿಯೊಬ್ಬರಿಗೂ ವಿಶೇಷವಾದ ಶಕ್ತಿ ಮತ್ತು ಕುಶಲತೆ…

Read More

ಹುಳಿಯಾರು: ಸಂಸತ್ ಚುನಾವಣೆಯಲ್ಲಿ ನಾನು ದಿಕ್ಕುತಪ್ಪಿದ್ದೆ. ಹೋದ ಕಡೆಯಲ್ಲ ನಾನು ಹೊರಗಿನವನು, ಗೆದ್ದ ಮೇಲೆ ಜಿಲ್ಲೆ ಕಡೆ ತಿರುಗಿ ನೋಡಲ್ಲ. ಹೀಗೆ ಒಂದೊAದು ಕಡೆ ಒಂದೊAದು ರೀತಿಯ ಜಾಪಾಳ್ ಮಾತ್ರೆ ಹಾಕುತ್ತಿದ್ದರು. ಈ ಅಪಪ್ರಚಾರಕ್ಕೆ ಕಿವಿ ಕೊಡದೆ ಪಕ್ಷ, ಜಾತಿ ನೋಡದೆ ಎಲ್ಲರೂ ಇವ ನಮ್ಮವ ಇವ ನಮ್ಮವ ಎಂದು ಮತ ಹಾಕಿದ್ದೀರಿ. ನಾನೂ ಕೂಡ ಜಾತಿ ಪಕ್ಷ ನೋಡದೆ ಜಿಲ್ಲೆಯ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದೇವೆ. ದೇಶದಲ್ಲೇ ತುಮಕೂರು ಜಿಲ್ಲೆಯನ್ನು ಮಾದರಿ ಮಾಡುವ ಗುರಿ ಇಟ್ಟುಕೊಂಡಿದ್ದೇನೆ ಎಂದು ಕೇಂದ್ರ ಸರ್ಕಾರದ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಹುಳಿಯಾರು ಅಂಬೇಡ್ಕರ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದುಕೊರತೆ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಇನ್ನೆರಡು ವರ್ಷದಲ್ಲಿ ಜಿಲ್ಲೆಯಲ್ಲಿ ಎಲ್ಲೂ ರೈಲ್ವೆ ಗೇಟ್ ಇಲ್ಲದಂತೆ ಮಾಡಿ ರೈಲು ಮತ್ತು ಇತರೆ ವಾಹನಗಳು ತಡೆರಹಿತವಾಗಿ ಓಡಾಡುವಂತೆ ಮಾಡತ್ತೇನೆ. ನೆನೆಗುದಿಗೆ ಬಿದ್ದಿರುವ ಜಿಲ್ಲೆಯಲ್ಲಿ ಹಾದು ಹೋಗುವ ರೈಲ್ವೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿಸಿದ್ದೇನೆ. ನಿಂತಿರುವ ರಾಷ್ಟಿçÃಯ ಹೆದ್ದಾರಿ…

Read More

ತಿಪಟೂರು: ಸರಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬoಧಿತರು ಅಸ್ಟರ್ ಅಲಿ ಮತ್ತು ಮತ್ತೊಬ್ಬ ಆರೋಪಿ ಮಹಾರಾಷ್ಟ್ರದ ಹೈದರ್ ಅಲಿ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿoದ ಒಟ್ಟು 05 ಪ್ರಕರಣಗಳಲ್ಲಿ 7 ಲಕ್ಷ ರೂ ಬೆಲೆ ಬಾಳುವ 100 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಹಾಗೂ 1 ಲಕ್ಷ ರೂ ಬೆಲೆ ಬಾಳುವ ಬಜಾಜ್ ಪಲ್ಸರ್ ಬೈಕ್‌ನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಡಿ. 17 ರಂದು ತಿಪಟೂರು ಟೌನ್ ಮಂಜುಳಮ್ಮ ಗಾರ್ಡನ್ ಏರಿಯಾ ವಾಸಿಯಾದ ವೆಂಕಟಮ್ಮ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಬೈಕ್ ನ ಹಿಂಬದಿ ಸವಾರ ಕಿತ್ತುಕೊಳ್ಳಲು ಹೋದಾಗ ಆಕೆ ಬಿಗಿಯಾಗಿ ಹಿಡಿದುಕೊಂಡಿದ್ದರಿoದ ಅರ್ಧ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುವ ಸಂಬoಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಈ ಪ್ರಕರಣಗಳ ಆರೋಪಿ ಮತ್ತು ಮಾಲನ್ನು ಪತ್ತೆ ಹಚ್ಚಲು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ ಮರಿಯಪ್ಪ, ಅಬ್ದುಲ್ ಖಾದರ್ ರವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚನೆ ಮಾಡಿದ್ದು ತಂಡದಲ್ಲಿ ತಿಪಟೂರು ಉಪ ವಿಭಾಗದ ವಿನಾಯಕ ಎನ್ ಶೆಟಿಗೆರಿ…

Read More

ತುಮಕೂರು: ರಾಜ್ಯದಲ್ಲಿ ಶೇಕಡ 33ರಷ್ಟು ನಿರ್ಣಾಯಕ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗದ ಸಮಾಜದವರು ಸಂಘಟಿತರಾಗದ ಕಾರಣ ರಾಜಕೀಯ, ಸಾಮಾಜಿಕ ಶಕ್ತಿ ಇಲ್ಲದಂತಾಗಿದೆ. ಇನ್ನುಮುಂದೆ ಹಿಂದುಳಿದ ವರ್ಗದವರು ಒಗ್ಗಟ್ಟಾಗಿ ತಮ್ಮ ಪಾಲು ಕೇಳುವಷ್ಟು ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಬಿಜೆಪಿ ನಾಯಕ, ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ನ ನಿರ್ದೇಶಕ ಎನ್.ನರೇಶ್‌ಕುಮಾರ್ ಹೇಳಿದರು. ಬಿಜೆಪಿ ಹಿಂದುಳಿದ ಮೋರ್ಚಾ ನಾಯಕ ಸ್ಪೂರ್ತಿ ಚಿದಾನಂದ ಆವರ ನಗರದ ನಿವಾಸಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಸ್ಥಳಿಯ ಮುಂಡರರೊAದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ಹಲವು ವರ್ಷಗಳಿಂದ ಅವಕಾಶ ವಂಚಿತರಾಗುತ್ತಲೇ ಬಂದಿದ್ದಾರೆ. ಹಿಂದುಳಿದ ವರ್ಗಗಳ ಸಣ್ಣಪುಟ್ಟ ಸಮಾಜಗಳು ಒಂದುಗೂಡಬೇಕು. ರಾಜಕೀಯ ಸಮಾವೇಶ ಮಾಡಿ ರಾಜಕೀಯ ಪಕ್ಷಗಳ ರಾಜ್ಯ, ರಾಷ್ಟಿçÃಯ ನಾಯಕರಿಗೆ ತಮ್ಮ ಶಕ್ತಿ ತೋರಿಸಿ ಸಂದೇಶ ನೀಡಿ ರಾಜಕೀಯ ಅವಕಾಶ ಪಡೆಯಬೇಕು, ಇಲ್ಲವಾದರೆ ನಿರ್ಲಕ್ಷö್ಯಕ್ಕೀಡಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಂಘಟನೆಯಾಗಿಲ್ಲ ಎನ್ನುವ ಕಾರಣಕ್ಕೆ ಹಿಂದುಳಿದ ವರ್ಗಗಳ ಮುಖಂಡರು ಚುನಾವಣೆಗಳಲ್ಲಿ ಸ್ಪರ್ಧೆ ಮಾಡಲು ರಾಜಕೀಯ ಪಕ್ಷಗಳು ಅವಕಾಶ ನೀಡುತ್ತಿಲ್ಲ, ಸರ್ಕಾರದ ನೇಮಕಾತಿಗಳಲ್ಲೂ ಈ…

Read More

ಚಿಕ್ಕನಾಯಕನಹಳ್ಳಿ: ಬರಶಿಡ್ಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯ ವ್ಯಾಪ್ತಿಯಲ್ಲಿ ಎಂಟು ಹಳ್ಳಿಯಿಂದ 710 ಕುಟುಂಬಗಳು ಒಂದಿದ್ದು ಸಂಘದ ಮೂಲಕ 272 ಕೇವಲ ಷೇರುದಾರರನ್ನು ಹೊಂದಿದ್ದರು 2024 ಹಾಗೂ 25ರ ಚುನಾವಣೆಗೆ ಸಾಲ ಪಡೆದಿರುವ ಕ್ಷೇತ್ರದಿಂದ 188 ಮಂದಿ ಸಾಲ ಪಡೆಯದವರ ಕ್ಷೇತ್ರದಿಂದ ಕೇವಲ 14 ಮಂದಿ ಉಳಿದ 70 ಮಂದಿಯ ಷೇರುಗಳು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಾರೆ ಎಂದು ಹಾಗೂ ಅವರ ಸಂವಿಧಾನಿಹಕ್ಕನ್ನು ಮಟಗುಗೊಳಿಸಿದ್ದಾರೆ ಎಂದು ಬರ್ಶಿಡ್ಲಳ್ಳಿ ಗ್ರಾಮದ ಸಂಘದ ಉಪಾಧ್ಯಕ್ಷರಾದ ನಟರಾಜು ಹಾಗೂ ನಿರ್ದೇಶಕರಾದ ಉಮೇಶ್ ಮಾಜಿ ನಿರ್ದೇಶಕ ರಾಜಶೇಖರ್ ಇವರುಗಳು ಆರೋಪಿಸಿದ್ದರು. ಬರಶಿಡ್ಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಷೇರ್ ಲೆಡ್ಜರ್ ಪುಸ್ತಕದ ಪುಟ ಸಂಖ್ಯೆ 10 ಹಾಗೂ 7 ರ ಲೆಡ್ಜರ್ ಪುಸ್ತಕದಲ್ಲಿ ಸಭಾ ನಡಾವಳಿಗಳಲ್ಲಾಗಲಿ ಆಡಿಟ್ ವರದಿಯಲ್ಲಾಗಲಿ ಹೆಸರಿಲ್ಲದವರನ್ನ ಷೇರುದಾರರಿಗೆ ಮಾಡಿಕೊಂಡು ಅಲ್ಲದೆ ಕೇವಲ 100 ರೂಪಾಯಿ ಷೇರು ಹೊಂದಿರುವ ಸುಮಾರು 65 ಮಂದಿಗೂ ಹೆಚ್ಚಿದ್ದು ಲಕ್ಷ್ಮಿ ನಾಗರಾಜು ಕೋಟಿಗಲ್ಲು ಮಂಜಮ್ಮ…

Read More

ತುಮಕೂರು: ಅಮರ ಶಿಲ್ಪಿ ಜಕಣಾಚಾರಿ ಅವರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ವಿಶೇಷವಾದ ಕೌಶಲ್ಯವನ್ನು ತಮ್ಮ ಪ್ರತಿಭೆ ಮೂಲಕ ತೋರಿಸಿದ್ದಾರೆ. ಇಂದಿನ ಯುವ ಶಿಲ್ಪಿಗಳಿಗೆ ಅಮರಶಿಲ್ಪಿ ಜಕಣಾಚಾರಿ ಸ್ಫೂರ್ತಿಯಾಗಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಹೇಳಿದರು. ನಗರದ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ವಿಶ್ವ ಕರ್ಮ ಸೇವಾ ಸಮಿತಿ ಸಹಯೋಗದಲ್ಲಿ ಅತ್ಯಂತ ಸರಳವಾಗಿ ಏರ್ಪಡಿಸಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಅಮರಶಿಲ್ಪಿ ಜಕಣಾಚಾರಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿ ಅವರು ಮಾತನಾಡಿದರು. ಶಿಲ್ಪಿಗಳು ದೇಶದ ನಾಗರಿಕತೆಯ ರಾಯಭಾರಿಗಳು. ಶಿಲ್ಪಿಗಳು ಲೋಹದ ಜತೆ, ಮರಗಳ ಜತೆ, ಪ್ರಕೃತಿ ಜತೆ, ಭವಿಷ್ಯಕ್ಕೆ ಬೇಕಾಗಿರುವ ಕುರುಹುಗಳನ್ನು ಬಿಟ್ಟು ಹೋಗುವಂತಹ ಕೆಲಸ ಮಾಡಿ ಸಂಸ್ಕöÈತಿ, ಕಲೆಯನ್ನು ಜೀವಂತವಾಗಿಡುವ ಕೆಲಸವನ್ನು ಮಾಡುತ್ತಾರೆ ಎಂದರು. ತುಮಕೂರು ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಕೈದಾಳವನ್ನು ಅಮರಶಿಲ್ಪಿ…

Read More

ತುಮಕೂರು: ಮತ, ಧರ್ಮ, ಮೌಢ್ಯಗಳ ಅಂಧಶ್ರದ್ಧೆಯನ್ನು ತೊರೆದು ವಿಜ್ಞಾನ ಮತ್ತು ಅಧ್ಯಾತ್ಮದ ಮೊರೆ ಹೋದಾಗ ‘ನಮಗೂ-ಲೋಕಕ್ಕೂ ಕಲ್ಯಾಣವಾಗಲಿದೆ’ ಎಂದು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿದಾನಂದ ಗೌಡ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕುವೆಂಪು ಅಧ್ಯಯನ ಪೀಠ ಬುಧವಾರ ಆಯೋಜಿಸಿದ್ದ ಕುವೆಂಪು: ಮಾತು ಮಂಥನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಆತ್ಮಶ್ರೀಗಾಗಿ ವಿಜ್ಞಾನ ಮತಿಗಳಾಗಿ’ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಉತ್ತಮ ಆರೋಗ್ಯದ, ಭಾವನೆಗಳ, ಬುದ್ಧಿಯ ಬೆಸುಗೆಯಲ್ಲಿ ‘ತಾನು ಯಾರು?’ ಎಂಬುದನ್ನು ಅರಿತು ಆತ್ಮದ ಅರಿವು-ಆತ್ಮಶ್ರೀ ಸಾಧಿಸಬೇಕು. ಉತ್ತಮ ಆಲೋಚನೆಗಳನ್ನು, ಭಾವನೆಗಳನ್ನು ಅನುಭವಿಸಬೇಕು. ಅಧ್ಯಯನಶೀಲತೆ, ಏಕಾಗ್ರತೆ, ಸಂಯಮದ ಆತ್ಮಾನುಸಂಧಾನದಲ್ಲಿ ತಪಸ್ವಿಗಳಾಗಬೇಕು ಎಂದು ತಿಳಿಸಿದರು. ಆತ್ಮದ ಸಾರ್ವಭೌಮತ್ವವನ್ನು ಸಾಧಿಸಿದರೆ ಬದುಕು ಗಟ್ಟಿಗೊಳ್ಳುತ್ತದೆ. ಇದರಿಂದ ಆತ್ಮಹತ್ಯೆಗಳ, ಮನಸ್ತಾಪಗಳ ಸಂಖ್ಯೆ ಕ್ಷೀಣಿಸಲಿದೆ. ‘ನಾನು ಯಾರು?’ ಎಂಬ ಆತ್ಮಾವಲೋಕನವಾದರೆ ಪ್ರತ್ಯೇಕತೆಯ ಭಾವ ಕಳಚಿ ಏಕತೆಯ ಬೆಸುಗೆ ಚಿಗುರಿ ಸಮಾನತೆ ಸ್ಪುಟಿಸಲಿದೆ. ವೇದೋಪನಿಷತ್ತುಗಳ ಆಂತರಿಕ ಮಿತಿ ತೊರೆದು ವೈಜ್ಞಾನಿಕ ಮನೋಭಾವದಿಂದ ಎಲ್ಲವನ್ನೂ ಸ್ವೀಕರಿಸಿದರೆ ಪಕ್ಷಪಾತವಿರದ, ವಸ್ತುನಿಷ್ಠತೆಯ ಪ್ರಾಯೋಗಿಕ ಪುರಾವೆಗೆ ಸಾಕ್ಷಿಯಾಗುತ್ತೇವೆ…

Read More

ತುಮಕೂರು: ಹಿರಿಯ ಅಂತರರಾಷ್ಟಿçÃಯ ಅಥ್ಲೇಟಿಕ ಕ್ರೀಡಾಪಟು ಟಿ.ಕೆ.ಆನಂದ ಅವರ 77ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸನ್ಮಾನ ಮತ್ತು ದಾರಿ ದೀಪ ಚಾರಿಟಬಲ್ ಟ್ರಸ್ಟ್ಗೆ ಸಹಕಾರ ನೀಡಿದ ಹಿರಿಯರನ್ನು ಗೌರವಿಸುವ ಕಾರ್ಯಕ್ರಮ ಮುಂಜಾನೆ ಗೆಳೆಯರ ಬಳಗದಿಂದ ಹಮ್ಮಿಕೊಳ್ಳಲಾಗಿತ್ತು. ಪ್ರೌಢಶಾಲಾ ವಿಧ್ಯಾರ್ಥಿಯಾಗಿದ್ದ ದಿನದಿಂದಲೂ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಹಲವಾರು ರಾಜ್ಯ, ರಾಷ್ಟç ಮತ್ತು ಅಂತರರಾಷ್ಟಿçÃಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಪದಕಗಳ ಪಡೆದಿರುವ ಟಿ.ಕೆ. ಆನಂದ, ತಮ್ಮಂತೆಯೇ ಕ್ರೀಡೆ, ಸಾಹಿತ್ಯ, ಸಹಕಾರ, ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಹಿರಿಯ, ಕಿರಿಯ ಕ್ರೀಡಾಪಟುಗಳನ್ನು ಗುರುತಿಸಿ, ಪ್ರೋತ್ಸಾಹಿಸುತ್ತಾ, ಕ್ರೀಡಾ ವಾತಾರಣ ಸೃಷ್ಟಿಸಿ, ಹಲವರ ಸಾಧನೆಗೆ ಸ್ಪೂರ್ತಿ ನೀಡಿದ್ದಾರೆ. ಇಂತಹ ವ್ಯಕ್ತಿಯ 77ನೇ ಜನ್ಮ ದಿನವನ್ನು ಸಮಾಜದ ಎಲ್ಲ ವರ್ಗದವರು ಸೇರಿ ಆಚರಿಸುವ ಮೂಲಕ ಮತ್ತಷ್ಟು ಸ್ಪೂರ್ತಿದಾಯಕ ಕೆಲಸಗಳನ್ನು ಉತ್ತೇಜನ ನೀಡಿದರು. ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್ ಅವರನ್ನು ಅಭಿನಂದಿಸಿ ಮಾತನಾಡಿದ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಧನಿಯಕುಮಾರ್,ವಿದ್ಯಾರ್ಥಿ ದಿಸೆಯಿಂದಲೂ ಇಂದಿನ ಗೃಹ ಸಚಿವರಾದ…

Read More