Author: News Desk Benkiyabale

ಚಿಕ್ಕನಾಯಕನಹಳ್ಳಿ; ತಾಲೂಕಿನ ಕೃಷಿಕ ಸಮಾಜದ ಚುನಾವಣಾ ಪ್ರತಿನಿಧಿಗಳಾಗಿ2025 ಹಾಗೂ 2030 ನೇ ಸಾಲಿಗೆ ಈ ಕೆಳಕಂಡವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಜಯಚಾಮರಾಜೇಂದ್ರಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಂಕಜ್ ನಲ್ಲಿ ನಿವಾಸಿ ಆರ್ ಗಂಗಾಧರಯ್ಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪಿ ದೊಡ್ಡ ರಂಗಪ್ಪ ಪ್ರಧಾನ ಕಾರ್ಯದರ್ಶಿಯಾಗಿ ಡಿ ಆರ್ ವಿಶ್ವನಾಥ್ ಜಿಲ್ಲಾ ಪ್ರತಿನಿಧಿಯಾಗಿ ಬಿ ಎನ್ ಲೋಕೇಶ್ ಖಜಾಂಚಿಯಾಗಿ ಹೆಚ್ಚಿಸಿ ಪ್ರಕಾಶ್ ಇವರುಗಳು ಅವಿರೋಧ ಆಯ್ಕೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹಾಗೂ ತಾಲೂಕ್ ಕೃಷಿಕ ಸಮಾಜ ಮತ್ತು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ಘೋಷಿಸಿದ್ದಾರೆ.

Read More

ತುಮಕೂರು: ರಾಜ್ಯ ಸರ್ಕಾರಿ ನಿವೃತ್ತ ನೌಕರರು ಆರೋಗ್ಯ ಕಾಪಾಡಿಕೊಂಡು ಸಾಮಾಜಿಕ ಚಟಿವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಂಘದ ಜಿಲ್ಲಾ ಶಾಖೆಯ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನಿವೇಶನ, ಅನುದಾನ ಪಡೆಯಲು ಜಿಲ್ಲಾ ಸಚಿವ ಡಾ.ಪರಮೇಶ್ವರ್ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಬಳಿಗೆ ನಿಯೋಗ ತೆರಳಿ ಅನುಕೂಲ ಪಡೆಯಬೇಕು, ನಿಮ್ಮ ನಿಯೋಗಕ್ಕೆ ತಾವೂ ಕೈ ಜೋಡಿಸುವುದಾಗಿ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳಿಧರ ಹಾಲಪ್ಪ ಹೇಳಿದರು. ನಗರದ ಬಾಲಭವನದಲ್ಲಿ ಮಂಗಳವಾರ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ದಿನಾಚರಣೆ ಹಾಗೂ ಹಿರಿಯ ಚೇತನಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾಕಷ್ಟು ಕಾರ್ಖಾನೆಗಳು ಇವೆ, ಅವುಗಳ ಸಿಎಸ್‌ಆರ್ ಫಂಡ್ ಅನ್ನು ಕೇಳಿ ಪಡೆದು ಬಳಕೆ ಮಾಡಿಕೊಳ್ಳಿ ಎಂದು ಸಲಹೆ ಮಾಡಿದರು. ಹಲವು ವರ್ಷ ಕಾಲ ಸರ್ಕಾರಿ ಸೇವೆ ಸಲ್ಲಿಸಿ ಅನುಭವ, ಆಡಳಿತ ಸಾಮರ್ಥ್ಯ ಹೊಂದಿರುವ ನಿವೃತ್ತ ನೌಕರರನ್ನು ಜಿಲ್ಲಾಡಳಿತದ ವಿವಿಧ ಸಮಿತಿಗಳಿಗೆ ನೇಮಕ ಮಾಡುವಂತೆ ಮನವಿ…

Read More

ತುಮಕೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸರಕಾರದಿಂದ ನೀಡುವ ಸೌಲಭ್ಯ ಹಾಗೂ ಕಾನೂನು ಸೇವೆಗಳ ಬಗ್ಗೆ ದಲಿತ ಕಾಲೋನಿಗಳಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಪ.ಜಾತಿ ಮತ್ತು ಪ.ಪಂಗಡದವರಿಗೆ ನೀಡಲಾಗುತ್ತಿರುವ ಸವಲತ್ತುಗಳ ಬಗೆಗಿನ ಮಾಹಿತಿ ಕೊರತೆಯಿಂದ ಅನೇಕರು ಸೌಲಭ್ಯ ವಂಚಿತರಾಗುತ್ತಿದ್ದು, ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕಾರ್ಮಿಕ ನೀತಿಗೆ ವಿರೋಧವಾಗಿ ಕೆಲವು ಕೈಗಾರಿಕೆಗಳಲ್ಲಿ ಸಮಯ ಮೀರಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ ಎಂದು ಸಮಿತಿ ಸದಸ್ಯರು ಆರೋಪಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕೈಗಾರಿಕೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚನೆ ನೀಡಿದರು. ಪ.ಜಾತಿ ಮತ್ತು ಪ.ಪಂಗಡದವರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಲಾದ ಕೊಳವೆ ಬಾವಿಗಳಲ್ಲಿ ನೀರು ಸಿಗದೆ ಹೋದರೂ…

Read More

ತುಮಕೂರು : ಜಿಲ್ಲೆಯ ಪಾವಗಡ ತಾಲ್ಲೂಕಿನ ನಿವೇಶನ ರಹಿತರಿಗೆ ವಿವಿಧ ವಸತಿ ಯೋಜನೆಗಳಡಿ 2,800 ನಿವೇಶನಗಳ ವಿತರಣೆ ಮಾಡಲು ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ತಿಳಿಸಿದರು. ಪಾವಗಡ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ನೀವೇಶನ ರಹಿತರಿಗೆ ನಿವೇಶನ ವಿತರಣೆ ಮಾಡಲು ಸುಮಾರು 189 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಈಗಾಗಲೇ ವಿತರಣೆ ಮಾಡಲು ಉದ್ದೇಶಿತ ನಿವೇಶನಗಳನ್ನು ಸಮತಳ ಮಾಡಿಸಲಾಗಿದೆ ಎಂದರು. ನಿವೇಶನ ವಿತರಣೆ ಪಾರದರ್ಶP Àತೆಯಿಂದ ಕೂಡಿರಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ನಿವೇಶನ ಹಂಚಿಕೆಯಾಗಬೇಕು ಎಂದರಲ್ಲದೆ, ತಾಲ್ಲೂಕಿನಲ್ಲಿ ಕೈಗೊಂಡಿರುವ ಜಲಜೀವನ್ ಮಿಷನ್ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಗಳಲ್ಲಿ ಲೋಪ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮವಹಿಸುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ(ಅಭಿವೃದ್ಧಿ) ಸಂಜೀವಪ್ಪ, ಮುಖ್ಯ ಕಾರ್ಯಪಾಲಕ ಅಭಿಯಂತರರು ಕುಮಾರಸ್ವಾಮಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜಾನಕೀರಾಮ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು…

Read More

ತುಮಕೂರು: ಇಪಿಎಸ್-95 ಪಿಂಚಿಣಿದಾರರ ಸಮಸ್ಯೆಗಳ ಕುರಿತು ಪ್ರಧಾನಿ ಮತ್ತು ವಿತ್ತ ಸಚಿವರ ಜೊತೆ ಎರಡರೆಡು ಬಾರಿ ಚರ್ಚೆ ನಡೆಸಿದ್ದು, ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ 7500 ರೂ ಮಾಸಿಕ ಪಿಂಚಿಣಿ ನೀಡುವ ಭರವಸೆಯನ್ನು ನೀಡಿದ್ದಾರೆ. ಒಂದು ವೇಳೆ ಸರಕಾರ ಮಾತಿಗೆ ತಪ್ಪಿದರೆ, ದೇಶದ 78 ಲಕ್ಷ ನಿವೃತ್ತ ನೌಕರರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದು ಎನ್.ಎ.ಸಿ. ರಾಷ್ಟಿçÃಯ ಅಧ್ಯಕ್ಷರಾದ ಕಮಾಂಡರ್ ಅಶೋಕ್ ರಾವುತ್ ತಿಳಿಸಿದ್ದಾರೆ. ನಗರದ ಕೊಲ್ಲಾಪುರದಮ್ಮ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ತುಮಕೂರು ವಿಭಾಗ, ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಟ್ರಸ್ಟ್ (ರಿ) ವತಿಯಿಂದ ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಟ್ರಸ್ಟ್ಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ತಮ್ಮ ಜೀವಿತಾವಧಿಯನ್ನು ಜನರ ಸೇವೆಗೆ ಮುಡಿಪಾಗಿಟ್ಟಿರುವ ನಾವುಗಳು ಮಾಸಿಕ 800 ರೂಗಳಿಂದ 1800ವರೆಗೆ ಮಾತ್ರ ಪಿಂಚಿಣಿ ಪಡೆಯುತ್ತಿದ್ದು,ಇಂದಿನ ಬೆಲೆ ಹೆಚ್ಚಳದಲ್ಲಿ ಯಾವುದಕ್ಕೂ ಸಾಲದಾಗಿದೆ. ಹಾಗಾಗಿ ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ ಮಾಸಿಕ 7500 ರೂ ಪಿಂಚಿಣಿ ಮತ್ತು ಡಿ.ಎ. ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ…

Read More

ತುಮಕೂರು : ಯುವ ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯಡಿ ನೀಡುವ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು. ಜಿಲ್ಲಾಧಿಕಾರಿ ಕೊಠಡಿಯಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, 2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರ/ಖಾಸಗಿ ಉದ್ಯೋಗ ಹೊಂದದೇ ಇರುವ, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ರಾಜ್ಯದಲ್ಲಿ ವಾಸವಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್, ಇಲಾಖೆಯ ಸಿಬ್ಬಂದಿ ಅರುಣ್…

Read More

ತುಮಕೂರು : ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸಬಲೀಕರಣಗೊಳಿಸುವ ಸಲುವಾಗಿ ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ ಪೂರೈಕೆ ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಜಿಲ್ಲೆಯ ಶಿರಾ ತಾಲ್ಲೂಕು ಚಂಗಾವರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಪಿಎಂ ಕುಸುಮ್ ಘಟಕ ಸಿ ಯೋಜನೆಯಡಿ ನಿರ್ಮಿಸುತ್ತಿರುವ 2.4 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅಳವಡಿಕೆ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ ತಡೆರಹಿತ ಸುಸ್ಥಿರ ವಿದ್ಯುತ್ ಸರಬರಾಜು ಮಾಡಲು ಈ ಸೋಲಾರ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯ ಶಿರಾ ತಾಲ್ಲೂಕಿನ ಚಂಗಾವರದಲ್ಲಿ ನಿರ್ಮಿಸಿರುವ ಸೋಲಾರ್ ಪ್ಲಾಂಟ್‌ನಿAದ 944 ಕೃಷಿ ಪಂಪ್ ಸೆಟ್‌ಗಳಿಗೆ ವಿದ್ಯುತ್ ಒದಗಿಸಲು ಸಾಧ್ಯವಾಗಲಿದೆ. ಈ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕಾಗಿ 11 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಚಂಗಾವರದಲ್ಲಷ್ಟೇ ಅಲ್ಲದೆ ಶಿರಾ ತಾಲ್ಲೂಕಿನ ಚಿಕ್ಕಬಾಣಗೆರೆಯಲ್ಲಿಯೂ 25 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು 6.5 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್…

Read More

ಹುಳಿಯಾರು: ಅಧಿಕಾರಿಗಳಿಗೆ ಕರ್ತವ್ಯದ ಪ್ರಜ್ಞೆ ಮತ್ತು ಜನಪ್ರತಿನಿಧಿಗಳಿಗೆ ಇಚ್ಚಾಶಕ್ತಿ ಇಲ್ಲದಿದ್ದರೆ ಸಾರ್ವಜನಿಕರ ಹಣ ಹೇಗೆ ವ್ಯರ್ಥವಾಗುತ್ತದೆ ಎನ್ನುವುದಕ್ಕೆ ಹುಳಿಯಾರು ಪಟ್ಟಣ ಪಂಚಾಯ್ತಿಯ ಪದವಿ ಕಾಲೇಜಿನ ಪಕ್ಕದಲ್ಲಿರುವ ನೀರಿನ ಓವರ್ ಹೆಡ್ ಟ್ಯಾಂಕ್ ನಿದರ್ಶನವಾಗಿದೆ. ಈ ಟ್ಯಾಂಕ್ ಕಟ್ಟಿ ಬರೋಬ್ಬರಿ ಹದಿನೈದು ವರ್ಷಗಳು ಕಳೆದಿದ್ದರೂ ಇಲ್ಲಿಯವರೆಗೂ ಒಂದೇ ಒಂದು ಹನಿ ನೀರನ್ನು ಟ್ಯಾಂಕ್ ಕಂಡಿಲ್ಲ. ಹೌದು, ಹುಳಿಯಾರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಲಿಂಗಪ್ಪನಪಾಳ್ಯ, ಸೋಮಜ್ಜನಪಾಳ್ಯ, ವೈ.ಎಸ್.ಪಾಳ್ಯ ಗ್ರಾಮಗಳ ನೀರಿನ ಬವಣೆ ನೀಗಿಸುವ ಸಲುವಾಗಿ 2007 ರಲ್ಲಿ ಸ್ವಜಲದಾರೆ ಯೋಜನೆಯಡಿ ಲಕ್ಷಾಂತರ ಹಣ ವ್ಯಯಿಸಿ ಪದವಿ ಕಾಲೇಜು ಪಕ್ಕದಲ್ಲಿ ಓವರ್ ಹೆಡ್ ಟ್ಯಾಂಕ್ ಕಟ್ಟಲಾಗಿತ್ತು. ಈ ಟ್ಯಾಂಕ್‌ಗೆ ಹುಳಿಯಾರು ಕೆರೆಯಲ್ಲಿನ ಕೊಳವೆಬಾವಿಯಿಂದ ನೀರು ಪೂರೈಸಿ ಈ ಮೂರು ಹಳ್ಳಿಗಳಿಗೆ ಸಮರ್ಪಕವಾಗಿ ನೀರು ಪೂರೈಸುವುದು ಉದ್ದೇಶವಾಗಿತ್ತು. ಆದರೆ ಇಲ್ಲಿಯವರೆವಿಗೆ ಈ ಟ್ಯಾಂಕ್‌ಗೆ ಒಂದೇ ಒಂದು ದಿನ ನೀರು ತುಂಬಿಸಿದ ನಿದರ್ಶನವಿಲ್ಲ.ಲಿಂಗಪ್ಪನಪಾಳ್ಯದ ನೂರಾರು ಮನೆಗಳಿಗೆ ಇರುವ ಏಕೈಕ ಕೊಳವೆಬಾವಿಯಿಂದ ನೀರು ಪೂರೈಸಲಾಗುತ್ತಿದೆ. ಈ ಕೊಳವೆಬಾವಿ ಕೆಟ್ಟು ರಿಪೇರಿ…

Read More

ಮಧುಗಿರಿ : ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಎಂಬ ಗಾದೆ ಮಾತಿನಂತೆ ಸಮಾಜದಲ್ಲಿ ಪ್ರಜ್ಞಾವಂತರೆನಿಕೊAಡ ಸರ್ಕಾರಿ ನೌಕರರ ಪದಾಧಿಕಾರಿಗಳು ಮದ್ಯದ ಅಮಲಿನಲ್ಲಿ ಬಾಟಲಿಗಳಿಂದ ಹೊಡೆದಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನೌಕರರ ಸಂಘದ ಚುನಾವಣೆ ಸಂಪೂರ್ಣಗೊAಡಿದ್ದರೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳು ಪರಸ್ಪರ ನಿಂದನೆಗಳನ್ನು ಮಾಡಿಕೊಳ್ಳುವುದರ ಜೊತೆಗೆ ಚಪ್ಪಲಿಗಳಲ್ಲಿ ಹೊಡೆದಾಡಿಕೊಂಡು ಕುಡಿದ ಅಮಲಿನಲ್ಲಿ ಮಧ್ಯದ ಬಾಟಲ್ ಗಳಿಂದ ಕೊಲೆ ಯತ್ನಕ್ಕೆ ಪ್ರಯತ್ನಿಸಿರುವ ಘಟನೆ ನೆಲಮಂಗಲ ಸಮೀಪದ ಡಾಬಾದಲ್ಲಿ ನಡೆದಿರುವ ಬಗ್ಗೆ ಮದುಗಿರಿಯಲ್ಲಿ ಬೆಳ್ಳಂ ಬೆಳಗ್ಗೆ “”ಟಾಕ್ ಆಫ್ ದಿ ಟೌನ್’’ ಆಗಿದೆ. ಶನಿವಾರ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಚುನಾವಣೆ ನಡೆದು ಷಡಾಕ್ಷರಿ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮಧುಗಿರಿಯ ಸರ್ಕಾರಿ ನೌಕರರ ಸಂಘದವರು ಮಧುಗಿರಿಗೆ ವಾಪಾಸ್ಸಾಗುತ್ತಿದ್ದಾಗ, ಘಟನೆ ನಡೆದಿದ್ದು, ಷಡಾಕ್ಷರಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕೆಲವರಿಗೆ ಇಷ್ಟವಾಗಿಲ್ಲ. ಈ ವಿಷಯವೇ ಈ ಎಲ್ಲಾ ಘಟನಾವಳಿಗಳಿಗೆ ಕಾರಣವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೃಷ್ಣೆಗೌಡರಿಗೆ ಬೆಂಬಲ ನೀಡಿದ್ದ ಲಿಂಗಾಯಿತ ಸಮುದಾಯಕ್ಕೆ…

Read More

ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಾಡಾಗಿದ್ದ ರಾಜ್ಯ ಮಟ್ಟದ ಅಂತರ ಕಾಲೇಜು ವಾಲಿ ಬಾಲ್ ಸ್ಪರ್ದೆಯಲ್ಲಿ, ಪುರುಷರ ವಿಭಾಗದಲ್ಲಿ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಿಜಿಎಸ್ ಕಾಲೇಜಿಗೆ ಚಾಂಪಿಯನ್ ಪಟ್ಟ ದೊರೆತಿದೆ. ಮಂಗಳೂರಿನ ನಿಟ್ಟೆ ಕಾಲೇಜು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನವನ್ನು ತುಮಕೂರಿನ ಎಸ್.ಎಸ್.ಐ.ಟಿ ಮತ್ತು ಎಸ್.ಐ.ಟಿ ಕಾಲೇಜುಗಳು ಪಡೆದುಕೊಂಡಿವೆ. ಮಹಿಳೆಯರ ವಿಭಾಗದಲ್ಲಿ ತುಮಕೂರಿನ ಎಸ್.ಎಸ್.ಐ.ಟಿ ಕಾಲೇಜಿನ ಮಹಿಳೆಯರ ತಂಡ ಮೊದಲ ಸ್ಥಾನ ಪಡೆದುಕೊಂಡರೆ, ಹಾಸನದ ಎನ್.ಎ.ವಿ.ಕೆೆ.ಐ.ಎಸ್ಎಂ ಜಿನಿಯರಿAಗ್ ಕಾಲೇಜು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಸ್ಟರ್ಧೆಯಲ್ಲಿ 16 ಪುರುಷರ ತಂಡಗಳು, ಮತ್ತು 6 ಮಹಿಳೆಯರ ತಂಡಗಳು ರಾಜ್ಯದ ಹಾಸನ, ಮಂಗಳೂರು, ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಕಾಲೇಜುಗಳಿಂದ ಆಗಮಿಸಿದ್ದವು. ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಎಸ್.ಎಸ್.ಐ.ಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್. ರವಿಪ್ರಕಾಶ ಅವರು ರಾಜ್ಯದ ವಿವಿಧ ಜಿಲ್ಲಾ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ…

Read More