Author: News Desk Benkiyabale

ತುಮಕೂರು: ನಾವು ವಾಸಿಸುವ ಹಟ್ಟಿಯೊಳಗೆ ಹೋಗಲು ದಾರಿ ಬಿಡದಂತೆ ಅಕ್ರಮವಾಗಿ ಬೇಲಿ ಹಾಕಿಕೊಂಡಿರುವ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಿ ದಾರಿ ಬಿಡಿಸಿಕೊಡುವಂತೆ ಶಿರಾ ತಾಲ್ಲೂಕು ಹುಲಿಕುಂಟೆ ಹೋಬಳಿ ಬೆಜ್ಜಿಹಳ್ಳಿ ಗೊಲ್ಲರಹಟ್ಟಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಶುಕ್ರವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಗೆ ಅಗಮಿಸಿದ ಬೆಜ್ಜಿಹಳ್ಳಿ ಗೊಲ್ಲರಹಟ್ಟಿಯ ಗ್ರಾಮಸ್ಥರುಗಳು ಹಟ್ಟಿಗೆ ಹೋಗಲು ಇರುವ ಕಾನೂನು ಬದ್ಧ ದಾರಿಯನ್ನೇ ಅತಿಕ್ರಮಿಸಿ ಬಲಾಢ್ಯರು ಬೇಲಿ ನಿರ್ಮಿಸಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಿತಾಪತಿ ಮಾಡುತ್ತಿದ್ದು, ಇದೀಗ ದಾರಿಯನ್ನೇ ಬಂದ್ ಮಾಡಿದ್ದಾರೆ. ಹೀಗಾದರೆ ನಾವು ನಮ್ಮ ವಾಸ ಸ್ಥಳದ ಊರಿಗೆ ಹೋಗುವುದಾದರೂ ಹೇಗೆ? ಈ ಕೂಡಲೇ ಸದರಿ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡು ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು. ಬೆಜ್ಜಿಹಳ್ಳಿ ಗ್ರಾಮದ ಸ.ನಂ.102/1, 102/2, 102/3 ರಲ್ಲಿ ಮೂಲ ದಾಖಲೆಯಲ್ಲಿ ದಾರಿ ಗುರುತಿಸಿದೆ. ಕ್ರಯ ಪತ್ರದಲ್ಲಿನ ದಾಖಲೆಯಲ್ಲಿ ಪಾಲುಪತ್ರ ವಿಭಾಗ ನೋಂದಣಿ ದಾಖಲೆಯಲ್ಲಿ ದಾರಿ ಇದೆ. ಆಕಾರ್ ಬಂದ್‌ನAತೆ ಒಂದು ಎಕರೆ ನಾಲ್ಕು ಗುಂಟೆ ಜಮೀನಿನಲ್ಲಿ…

Read More

ತುಮಕೂರು: ವಿದ್ಯಾರ್ಥಿಗಳು ಉತ್ತಮ ಕಲಿಕೆಯೊಂದಿಗೆ ದೇಶದ ಮುಂದಿನ ಸಂಪದ್ಭರಿತ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಡಯಟ್ ಪ್ರಾಂಶುಪಾಲರಾದ ಕೆ. ಮಂಜುನಾಥ್ ಕರೆ ನೀಡಿದರು. ತಾಲ್ಲೂಕಿನ ಗೊಲ್ಲಹಳ್ಳಿ ಬಳಿ ಇರುವ ಜವಹರ್ ನವೋದಯ ವಿದ್ಯಾಲಯದಲ್ಲಿ ಏರ್ಪಡಿಸಿದ್ದ 36ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪಠ್ಯ ಮತ್ತು ಪಠ್ಯೇತರ ಜ್ಞಾನ ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಮುಂದಿನ ಹೆಜ್ಜೆಯನ್ನು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಇಡಬೇಕು. ಈ ಮೂಲಕ ಹೆತ್ತವರು ಹಾಗೂ ಶಾಲೆಯ ಶಿಕ್ಷಕರ ಕನಸನ್ನು ಈಡೇರಿಸಬೇಕು ಎಂದು ಸಲಹೆ ನೀಡಿದರು. ಈ ಹಿಂದೆ ಋಷಿಮುನಿಗಳ ಆಶ್ರಮದಲ್ಲಿ ಇದ್ದ ಶಿಕ್ಷಣ ಕಲಿಕೆಯ ಪರಿಕಲ್ಪನೆಯಲ್ಲಿ ಜವಹರ್ ನವೋದಯ ವಿದ್ಯಾಲಯದಲ್ಲಿ ಮಕ್ಕಳಿಗೆ ಶಿಕ್ಷಣ ದೊರೆಯುತ್ತಿದೆ. ಈ ಶಾಲೆಯಲ್ಲಿ ಕಲಿಯುವ ಅವಕಾಶ ಎಲ್ಲ ಮಕ್ಕಳಿಗೂ ಸಿಗುವುದಿಲ್ಲ. ಇಲ್ಲಿ ಕಲಿಯುತ್ತಿರುವ ಮಕ್ಕಳ ಪೂರ್ವಜನ್ಮದ ಪುಣ್ಯ ಎಂದರು. 1986 ರಲ್ಲಿ ಅಂದಿನ ಪ್ರಧಾನಿಗಳು ಇಡೀ ದೇಶಕ್ಕೆ ನೀಡಿದ ಬಹುದೊಡ್ಡ ಕೊಡುಗೆ ನವೋದಯ ವಿದ್ಯಾಲಯ. ಅಂದು ಅವರು ರೂಪಿಸಿದ ಶಿಕ್ಷಣ ನೀತಿ…

Read More

ತುಮಕೂರು : ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ತುಮಕೂರು ನಗರ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನ ಮುಖ್ಯ. ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನ ಚಾಲನೆ ಮಾಡಿದರೆ ಅಪರಾಧ. ಕಾನೂನು ಮೀರಿ ವಾಹನ ಚಾಲನೆ ಮಾಡಿದ ಅಪ್ರಾಪ್ತ ವಯಸ್ಸಿನ ಮಕ್ಕಳ ಪೋಷಕರು ನ್ಯಾಯಾಲಯಕ್ಕೆ ದಂಡ ಕಟ್ಟಬೇಕು. ಚಾಲನಾ ಪರವಾನಗಿ ಹೊಂದಿದ ಹಾಗೂ 18 ವರ್ಷ ತುಂಬಿದವರು ಮಾತ್ರ ವಾಹನ ಚಲಾಯಿಸಬಹುದು. ವೇಗವಾಗಿ ವಾಹನ ಚಾಲನೆ, ಹೆಲ್ಮೆಟ್ ಧರಿಸದೆ ವಾಹನ ಚಾಲನೆ…

Read More

ತುಮಕೂರು: ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ಕೋರ್ಸ್ಗಳಿಗೆ ಸೇರಲು ಹಿಂಜರಿಯಬಾರದು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ: ಬಾಲಗುರುಮೂರ್ತಿ ಕರೆ ನೀಡಿದರು. ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ 2 ದಿನಗಳ ಸಿಇಟಿ, ನೀಟ್ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಾಹಿತಿ ಕೊರತೆ ಕಾರಣದಿಂದಾಗಿ ಬಹುತೇಕ ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನದ ಕೋರ್ಸುಗಳಿಗೆ ಸೇರಲು ಹಿಂದೇಟು ಹಾಕುವಂತಾಗಿದೆ. ಇದನ್ನು ಹೋಗಲಾಡಿಸಲು ಜಿಲ್ಲೆಯಾದ್ಯಂತ ವಿಜ್ಞಾನ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು. ಗ್ರಾಮೀಣ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೀಳರಿಮೆ ಬೆಳೆಸಿಕೊಳ್ಳದೇ ಸಿಕ್ಕ ಶೈಕ್ಷಣಿಕ ಅವಕಾಶಗಳನ್ನು ಆತ್ಮವಿಶ್ವಾಸದಿಂದ ಬಳಸಿಕೊಂಡು ಯಶಸ್ಸು ಸಾಧಿಸಬೇಕು. ಅವಕಾಶ ಇದ್ದವರು ಉನ್ನತ ಶಿಕ್ಷಣ ಗಳಿಸುವುದು ಮುಖ್ಯವಲ್ಲ. ಬದಲಾಗಿ ಅವಕಾಶ ವಂಚಿತರು ಛಲದಿಂದ ಉನ್ನತ ಶಿಕ್ಷಣ ಗಳಿಸುವುದು ಮುಖ್ಯ ಎಂದರಲ್ಲದೆ, ಬರುವ ಫೆಬ್ರವರಿ ತಿಂಗಳಲ್ಲಿ ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳಿಗೆ 10 ದಿನಗಳ…

Read More

ತುಮಕೂರು: ದೇಶವನ್ನು ಸೂಪರ್ ಪವರ್ ಆಗಿಸುವಲ್ಲಿ ವಿದ್ಯಾರ್ಥಿಗಳು ಮತ್ತು ನವ ಯುವಕರ ಕೊಡುಗೆ ಅತ್ಯಗತ್ಯ. ಪ್ರತಿಯೊಬ್ಬ ಯುವಕನು ಉದ್ಯೋಗವನ್ನು ಹುಡುಕುವುದರ ಜೊತೆಗೆ ತಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿ ಸುವಂತಾಗಬೇಕು. ಮೊದಲು ಸಿಕ್ಕಿರುವ ಉದ್ಯೋಗಾವಕಾಶಗಳನ್ನು ಉಪಯೋಗಿಸಿಕೊಂಡು ನಂತರ ವೇತನದ ಬಗ್ಗೆ ಯೋಚಿಸಿ, ಉದ್ಯೋಗಾವಕಾಶಗಳು ಚಿಕ್ಕದಿರಲಿ ದೊಡ್ಡದಿರಲಿ ಬಳಸಿಕೊಳ್ಳುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಎಂದು ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ತುಮಕೂರು ವಿಶ್ವವಿದ್ಯಾನಿಲಯದ ಉದ್ಯೋಗ ಕೋಶ, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ರೆಡ್ಡೀಸ್ ಫೌಂಡೇಶನ್ (ರಿ), ತುಮಕೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ನಡೆದ ಉದ್ಯೋಗ ಮೇಳ-2025 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಮಾತನಾಡಿದರು. ಈ ಉದ್ಯೋಗ ಮೇಳಕ್ಕೆ…

Read More

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿರವರ ಸಮಕ್ಷದಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ 10 ಗಂಟೆ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟವಾಯಿತು. ತುಮಕೂರು ಗ್ರಾಮಾಂತರ, ತಿಪಟೂರು, ಮಧುಗಿರಿ, ಪಾವಗಡ ಹಾಗೂ ಗುಬ್ಬಿ ತಾಲ್ಲೂಕುಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಕುಣಿಗಲ್, ಸಿರಾ, ಕೊರಟಗೆರೆ ತಾಲ್ಲೂಕಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು, ತುರುವೇಕೆರೆ ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಿಂದ ಸ್ವತಂತ್ರ ಅಭ್ಯರ್ಥಿ ಜಯಗಳಿಸಿದ್ದಾರೆ. ತುಮಕೂರು ತಾಲ್ಲೂಕಿನಿಂದ ಸ್ಪರ್ಧಿಸಿದ್ದ ಹೆಚ್.ಎಂ. ನಂಜೇಗೌಡ 83 ಮತಗಳನ್ನು ಪಡೆದು ಹೆಚ್.ಕೆ. ರೇಣುಕಾಪ್ರಸಾದ್ (66 ಮತ) ರವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಗುಬ್ಬಿ ತಾಲ್ಲೂಕಿನಿಂದ ಶಾಸಕ ಹಾಗೂ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ…

Read More

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾಗಿವೆ, ಗುಬ್ಬಿಯಲ್ಲಿ ಹೆಚ್‌ಎಲ್‌ಎಲ್ ಆರಂಭಗೊAಡಿದೆ, ಈ ಕೈಗಾರಿಕೆಗಳಲ್ಲಿ ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮ ರೂಪಿಸುವ ಕುರಿತು ಶಾಸಕರುಗಳೊಂದಿಗೆ ಸಮಾಲೋಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರು ತಾಲ್ಲೂಕು ಗೂಳೂರಿನಲ್ಲಿ ಗುರುವಾರ ನಡೆದ ಗೂಳೂರು ಹೋಬಳಿ ಮಟ್ಟದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ವಿತರಣೆ ಮಾಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ದೂರದೃಷ್ಟಿ ಚಿಂತನೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಯೋಜನೆಗಳ ಫಲ ಜನರಿಗೆ ತಲುಪಬೇಕು. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ತಂದು ತುಮಕೂರು ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಆರು ತಿಂಗಳಲ್ಲಿ ಸುಮಾರು 20 ರೈಲ್ವೆ ಗೇಟುಗಳಲ್ಲಿ ಮೇಲುಸೇತುವೆ, ಕೆಳಸೇತುವೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ನೆನೆಗುದಿಗೆ…

Read More

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ತುಮಕೂರು ಜಿಲ್ಲೆಯ ನಗರ ಹಾಗೂ ಪ್ರತಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್ ಸೈಟ್ www.ksoumysuru.ac.in \  https://ksouportal.com/reg_sc/StudyCentreRegistration.aspx ನಲ್ಲಿ ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿದ ಅರ್ಜಿಯನ್ನು *ಡೀನ್ (ಅಧ್ಯಯನ ಕೇಂದ್ರ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025ರ ಜನವರಿ 18. ಮುಂದುವರಿದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಪ್ರವೇಶಾತಿಯನ್ನು…

Read More

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಸಂಬAಧ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ತುಮಕೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯಾ ಮತಗಟ್ಟೆ, ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿ, ಚುನಾವಣಾಧಿಕಾರಿಗಳ ಕಚೇರಿ ಹಾಗೂ ಛಿeo.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಣumಞuಡಿ.ಟಿiಛಿ.iಟಿ ವೆಬ್‌ಸೈಟ್‌ಗಳಲ್ಲಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ನಿವಾಸ ವ್ಯಾಪ್ತಿಯ ಮತಗಟ್ಟೆಗಳಲ್ಲಿನ ಮತದಾರರ ಪಟ್ಟಿಗಳಲ್ಲಿ ತಮ್ಮ ಹಾಗೂ ತಮ್ಮ ಮನೆಯ ಸದಸ್ಯರ ಹೆಸರುಗಳು ನಮೂದಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದಾಗಿದೆ. ಮತದಾರರ ಸೇರ್ಪಡೆಗೆ ನಮೂನೆ-6; ಅನಿವಾಸಿ ಭಾರತೀಯರ ಹೆಸರುಗಳ ಸೇರ್ಪಡೆಗೆ ನಮೂನೆ-6ಎ; ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ/ಹೆಸರು ತೆಗೆದು ಹಾಕಲು ನಮೂನೆ-7 ಹಾಗೂ ಮತದಾರರ ನಿವಾಸ ಬದಲಾವಣೆ/ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ/ ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಎಪಿಕ್ ನೀಡುವಿಕೆ/ ಅಂಗವಿಕಲ ವ್ಯಕ್ತಿ ಎಂದು ಗುರುತಿಸುವುದಕ್ಕೆ ನಮೂನೆ-8ರಲ್ಲಿ ಮನವಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು: ಇತ್ತೀಚೆಗಷ್ಟೇ ತುಮಕೂರಿನ ಆರ್ ಟಿ ಒ ಕಚೇರಿ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆ ಸಂಗ್ರಹಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಿಗ್ಗೆ ದಿಬ್ಬೂರು ವಾಸಿ ,ಗೃಹಸಚಿವರ ಆಪ್ತನೆಂದು ಸ್ವಯಂ ಬಿಂಬಿಸಿಕೊAಡಿದ್ದ ಆರ್ ಟಿ ಓ ಏಜೆಂಟ್ ಸತೀಶ್ ಮನೆ ಮತ್ತು ನಿವೃತ್ತ ಆರ್ ಟಿ ಓ ,ಎಸ್ ರಾಜುರವರ ಬೆಂಗಳೂರಿನ ಮನೆ , ರಾಜು ಮಗಳ ಮನೆ, ಅವರ ಬೆಂಗಳೂರು, ಹೊಸಪೇಟೆ ಮನೆ ಸೇರಿದಂತೆ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ಆರ್ ಟಿ ಓ ಆಗಿ ಹಲವು ವರ್ಷ ಸೇವೆ ಸಲ್ಲಿಸಿದ ರಾಜು ನಿವೃತ್ತರಾಗಿದ್ದರು. ಬೆಂಗಳೂರಿನ ಅವರ ಮನೆ ಮತ್ತು ಬೇನಾಮಿ ಹೆಸರಿನಲ್ಲಿ ತಮ್ಮ ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿಪಾಸ್ತಿ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರುಗಳ ಮನೆ ಸೇರಿದಂತೆ ಐದು ಕಡೆ ದಾಳಿ ನಡೆದಿದೆ.ರಾಜು ಅವರಿಗೆ ಆಪ್ತನೆಂದು ಹೇಳಲಾದ ದಿಬ್ಬೂರು ಸತೀಶ್ ಮನೆಗೂ ಲೋಕಾಯುಕ್ತ ಇನ್ಸ್ ಫೆಕ್ಟರ್ ಶಿವರುದ್ರಪ್ಪ ಮೇಟಿ ನೇತೃತ್ವದಲ್ಲಿ ದಾಳಿ…

Read More