ತುಮಕೂರು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ) ಬೆಂಗಳೂರು ಇವರು ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 29 ರ ಭಾನುವಾರ ಕುಣಿಗಲ್ ತಾಲೂಕು ಯಡಿಯೂರಿನ ಶ್ರೀತೋಂಟದ ಸಿದ್ದಲಿಂಗೇಶ್ವರ ಸ್ವಾಮಿ ಸನ್ನಿದಿಯಲ್ಲಿ ಆಯೋಜಿಸಲಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತುಮಕೂರು ಜಿಲ್ಲಾಧ್ಯಕ್ಷ ಡಾ.ವಿಜಯಕುಮಾರ್ ಕಮ್ಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಸಿದ್ದ ಸಾಹಿತಿ,ಬಸವತತ್ವ ಮತ್ತು ಶರಣತತ್ವದ ಬಗ್ಗೆ ಆಳವಾದ ಜ್ಞಾನವುಳ್ಳ ರಂಜಾನ್ ದರ್ಗಾ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಗೆ ಜರುಗುವ ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಕಲ್ಬುರ್ಗಿಯ ಆಳಂದದ ಶ್ರೀತೋಂಟದಾರ್ಯ ಅನುಭವ ಮಂಟಪದ ಶ್ರೀಕೋರಣೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. ಪ್ರಾಸ್ತಾವಿಕ ನುಡಿಗಳನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟೇಶ್ ಎಸ್.ಉಪ್ಪಾರ್ ನುಡಿಯಲಿದ್ದು,ಸಮ್ಮೇಳನವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಎಲ್.ಎನ್.ಮುಕುಂದರಾಜ್ ಉದ್ಘಾಟಿಸಲಿದ್ದಾರೆ ಎಂದರು. ಸಮ್ಮೇಳನಾಧ್ಯಕ್ಷರ ಭಾಷಣದ…
Author: News Desk Benkiyabale
ತುಮಕೂರು: ಪ್ರಜಾಪ್ರಭುತ್ವದ ಕಾಳಜಿಗಳ, ಅಸ್ಮಿತೆಯ, ಬಹುತ್ವದ ಹಾಗೂ ಸಂಯುಕ್ತ ರಾಜಕಾರಣದ ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವುದು ದುರ್ದೈವದ ಸಂಗತಿ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತç ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದÀ ಸಹಯೋಗದಲ್ಲಿ ಆಯೋಜಿಸಿರುವ ‘ಭಾರತೀಯ ಪ್ರಜಾಪ್ರಭುತ್ವದ ಕಾಳಜಿಗಳು: ಅಸ್ಮಿತೆ, ಬಹುತ್ವ ಹಾಗೂ ಸಂಯುಕ್ತ ರಾಜಕಾರಣ’ ವಿಷಯದ ಕುರಿತ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ದೇಶದ ಹಿತಚಿಂತನೆಯು ಪಕ್ಷದಿಂದ ನಾಯಕರ ಹಿತಚಿಂತನೆಗೆ ಇಳಿದಿದೆ. ವ್ಯಕ್ತಿಗತ ರಾಜಕಾರಣ ಎಂದಿಗೂ ಅಸಮಾನತೆಯನ್ನು ತೋರಿಸುತ್ತದೆ. ಸರ್ಕಾರವನ್ನು, ದುರಾಡಳಿತವನ್ನು ಟೀಕಿಸಿದರೆ ದೇಶವನ್ನು ಟೀಕಿಸಿದಂತೆ ಎಂದು, ದೇಶ ವಿರೋಧಿ ಚಟುವಟಿಕೆಯ ಕಾನೂನಿನ ಅಡಿಯಲ್ಲಿ ಬಂಧಿಸುತ್ತಾರೆ. ನಾಯಕತ್ವ ಏಕತ್ವವಾಗಿ ಸರ್ವಾಧಿಕಾರ…
ಚಿಕ್ಕನಾಯಕನಹಳ್ಳಿ : ಪಟ್ಟಣದ ಕಲ್ಪವೃಕ್ಷ ಕೋ-ಆಪರೇಟಿವ್ ಬ್ಯಾಂಕಿಗೆ ಆಡಳಿತ ಮಂಡಳಿಯ ಚುನಾವಣೆ ಭಾನುವಾರ ಸಂಜೆಯವರೆಗೂ ನಡೆಯಿತು. ನಂತರ ಮತ ಎಣಿಕೆ ನಡೆದು ಫಲಿತಾಂಶ ಹೊರಬಿದ್ದಿದೆ. ಚುನಾವಣಾಧಿಕಾರಿ ಹರೀಶ್ ಕುಮಾರ್ ಘೋಷಿಸಿದ ಫಲಿತಾಂಶದ ಪ್ರಕಾರ, ಚಲಾವಣೆಯಾಗಿರುವ ಒಟ್ಟು ಮತಗಳಲ್ಲಿ 12 ಮತಗಳು ತಿರಸ್ಕೃತಗೊಂಡಿವೆ. ಮಿಕ್ಕಂತೆ, ಕಣದಲ್ಲಿದ್ದ ಒಟ್ಟು ಅಭ್ಯರ್ಥಿಗಳಲ್ಲಿ, ರಮೇಶ್ ಬಾಬು 360 ಮತಗಳು, ಸಿಎಂ ರಂಗಸ್ವಾಮಿ 308 ಮತಗಳು, ಬೀರಪ್ಪ 304 ಮತಗಳು, ಸಿ ಎಸ್ ರಮೇಶ್ 284 ಮತಗಳು, ಮಂಜುನಾಥ್ 282 ಮತಗಳು, ಮಹಮ್ಮದ್ ಕಲಂದರ್ 280 ಮತಗಳು, ಸಿಬಿ ರೇಣುಕಸ್ವಾಮಿ 278 ಮತಗಳು, ಸಿ ಎಲ್ ದೊಡ್ಡಯ್ಯ 265 ಸಿ ಎಚ್ ದೊರೆ ಮುದ್ದಯ್ಯ 248 ಮತಗಳನ್ನು ಪಡೆಯುವ ಮೂಲಕ ಕೋ-ಆಪರೇಟಿವ್ ಬ್ಯಾಂಕ್’ನ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಅಲ್ಲದೆ ಈಗಾಗಲೇ ಮೀಸಲು ಹಿಂದುಳಿದ ವರ್ಗ ಹೇಗೆ ಶಶಿಧರ್ ಹಿಂದುಳಿದ ವರ್ಗ ಬಿ ಸಿಜಿ ಮಂಜುನಾಥ್ ಪರಿಶಿಷ್ಟ ಜಾತಿ ಸಿಎಚ್ ಪ್ರಕಾಶ್ ಪರಿಶಿಷ್ಟ ಪಂಗಡ ಮೀಸಲು…
ತುಮಕೂರು: ದೇಶದ ಪ್ರಜಾಪ್ರಭುತ್ವವು ವಿವಿಧ ರೀತಿಯಲ್ಲಿ ವ್ಯಾಖ್ಯಾನಕ್ಕೆ ಒಳಗಾಗುತ್ತಿರುವುದು ದುರದೃಷ್ಟಕರ. ಗಾಂಧಿ, ಅಂಬೇಡ್ಕರ್ ಅವರ ಕೊಡುಗೆಗಳನ್ನು ಬಯಸುವ ನಾಗರಿಕನಿಗೆ, ಅವರ ಆದರ್ಶ, ನಿಷ್ಠೆ, ತತ್ತ÷್ವಗಳನ್ನೂ ಪಾಲಿಸಬೇಕೆಂಬ ಕನಿಷ್ಠ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಪ್ರೊ. ಆರ್. ಎಲ್. ಎಂ. ಪಾಟೀಲ್ ಬೇಸರ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತç ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದÀ ಸಹಯೋಗದಲ್ಲಿ ಆಯೋಜಿಸಿರುವ ‘ಭಾರತೀಯ ಪ್ರಜಾಪ್ರಭುತ್ವದ ಕಾಳಜಿಗಳು: ಅಸ್ಮಿತೆ, ಬಹುತ್ವ ಹಾಗೂ ಸಂಯುಕ್ತ ರಾಜಕಾರಣ’ ವಿಷಯದ ಕುರಿತ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಮ್ಮೇಳನದಲ್ಲಿ ಮಾತನಡಿದರು. ಭಾರತ ಸ್ವತಂತ್ರವಾದ ಸಂದರ್ಭದಲ್ಲಿ- ರಾಜಕೀಯವೆಂದರೆ ಪ್ರಜೆಗಳ ಸೇವೆ. ಅಭಿವೃದ್ಧಿಯೇತರ ಆಡಳಿತದಿಂದ ರಾಷ್ಟç ನಿರ್ಮಾಣ ಸಾಧ್ಯ. ದೇಶವನ್ನು ಮುನ್ನಡೆಸಲು ಸಂವಿಧಾನ, ಕಾನೂನಿನ ಅಗತ್ಯವಿದೆ.…
ತುಮಕೂರು: ನಗರದ ಶೆಟ್ಟಿಹಳ್ಳಿ ಮುಖ್ಯ ರಸ್ತೆಯಲ್ಲಿರುವ ವಿಶಾಲಾಕ್ಷಮ್ಮ ಸದಾಶಿವಯ್ಯ ಕಲ್ಯಾಣ ಮಂಟಪದಲ್ಲಿ 2024ರ ಡಿಸೆಂಬರ್ 26ರಿಂದ 29ರವರೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಕರ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಜಗದ್ಗುರು ಪಂಚಾಚಾರ್ಯಸೇವಾ ಟ್ರಸ್ಟ್ (ರಿ) ನ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಡಿಸೆಂಬರ್ 26 ರಿಂದ 29ರವರಗೆ ಪ್ರತಿದಿನ ಬೆಳಗ್ಗೆ 5 ಗಂಟೆಯಿAದ 7 ಗಂಟೆಯವರೆಗೆ ಇಷ್ಟಲಿಂಗಪೂಜೆ ಮತ್ತು ಸಂಜೆ 6:30ರಿಂದ ಜನಜಾಗೃತಿ ಧರ್ಮ ಸಮಾರಂಭ ಜರುಗಲಿದೆ. ಮುಖ್ಯ ಅಥಿತಿಗಳಾಗಿ ಶಾಸಕರಾದ ಜಿ.ಬಿ.ಜೋತಿಗಣೇಶ್,ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಂಬಿಕಾ ಹುಲಿನಾಯ್ಕರ್,ಜಿ.ಮರಿಸ್ವಾಮಿ, ಟಿ.ಸಿ.ಓಹಿಲೇಶ್ವರ್,ಶಶಿ ಹುಲಿಕುಂಟೆ ಮಠ ಅವರುಗಳು ಪಾಲ್ಗೊಳ್ಳಲಿದ್ದಾರೆ. ಹಿರಿಯರಿಗೆ ಗುರುರಕ್ಷೆ ಇರುತ್ತದೆ. ಸುದ್ದಿಗೋಷ್ಠಿಯಲ್ಲಿ ಶ್ರೀಪಂಚಾಚಾರ್ಯ ಸೇವಾ ಟ್ರಸ್ಟ್ನ ಕಾರ್ಯದರ್ಶಿ ಹೆಚ್.ಎಸ್.ಬಸ್ಮಾಂಗಿ ರುದ್ರಯ್ಯ, ಸಹಕಾರ್ಯದರ್ಶಿ ಜಿ.ಎಸ್.ಸಿದ್ದರಾಜು, ಧರ್ಮದರ್ಶಿಗಳಾದ ಜ.ಸಿ.ವಿರೂಪಾಕ್ಷ, ಶ್ರೀಮತಿ ವೈ.ಕೆ.ಜೋತಿ, ಪಾಲ್ಗೊಂಡಿದ್ದರು.
ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್ ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು. ಹಾಸನ, ತಿಪಟೂರು, ಹುಳಿಯಾರು, ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣವಾಗಲಿದೆ. ತುಮಕೂರು ಜಿಲ್ಲೆಯಲ್ಲಿ 40 ಕಿ.ಮೀ.ನಲ್ಲಿ ಹಾದು ಹೋಗಲಿದೆ. 500 ಕೋಟಿ ರೂ. ವೆಚ್ಚದಲ್ಲಿ ಪುಣೆ-ಬೆಂಗಳೂರು 500 ಕಿ.ಮೀ. ವ್ಯಾಪ್ತಿಯಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಆಗಲಿದೆ ಎಂದರು. ತುಮಕೂರು ಲೋಕಸಭಾ ಕ್ಷೇತ್ರದ ಪ್ರತಿ ಹೋಬಳಿಗೆ ಹೋಗಿ ಜನರ ಸಮಸ್ಯೆಗಳನ್ನು ಆಲಿಸುತ್ತೇನೆ. ಒಂದು ದಿನಕ್ಕೆ ಎರಡು ಹೋಬಳಿಯಂತೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ ಎಂದು ಅವರು ಹೇಳಿದರು. ಒಂದು ವಾರದಲ್ಲಿ ಮೂರು ದಿನ ಒಂದು ರೌಂಡ್ ಮಗಿಸಿ, ಎರಡನೇ ರೌಂಡ್ಗೆ…
ತುಮಕೂರು: ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ ಎಂದು ನಾಗವಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಗೌರಮ್ಮ ಮೂಡ್ಲಯ್ಯ ಅಭಿಪ್ರಾಯಪಟ್ಟರು. ಗ್ರಾಮಾಂತರದ ನಾಗವಲ್ಲಿ ಗ್ರಾಮದ ಕರ್ನಾಟಕ ಪಬ್ಲೀಕ್ ಶಾಲೆಯ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ(ರಿ) ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳ ಮತ್ತು ನೌಕರರ ಸಂಘ, ತುಮಕೂರು ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ತುಮಕೂರು ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರ ಪಾತ್ರ ಬಹಳ ಮುಖ್ಯವಾಗಿದೆ. ಹಳ್ಳಿಗಳಲ್ಲಿನ ಸಮಸ್ಯೆಗಳ ಪರಿಹಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹಳ್ಳಿಗಳಲ್ಲಿ ಮುಖ್ಯವಾಗಿ ಚರಂಡಿ,ಕುಡಿಯುವ ನೀರು ಮತ್ತು ಇತರೆ ಕೆಲಸ ಕಾರ್ಯಗಳಿಗೆ ಸದಾ ಒತ್ತು ನೀಡುತ್ತಿರುವ ಅಧಿಕಾರಿಗಳ ಆರೋಗ್ಯಕ್ಕೆ ಕ್ರೀಡಾಕೂಟ ಸಹಕಾರಿ ಎಂದು ಹೇಳಿದರು. ತುಮಕೂರು…
ತುಮಕೂರು: ಜಾಗತಿಕ ಸ್ಥಿತಿಗತಿ ನೋಡಿದರೆ ಆಂತರಿಕ ಶಾಂತಿಯ ಅಗತ್ಯವಿದೆ. ವಿಶ್ವದಲ್ಲಿ ಶಾಂತಿ ನೆಲೆಸಲು ಯೋಗ, ಧ್ಯಾನ ಬದುಕಿನ ಅನಿವಾರ್ಯ ಅಂಗವಾಗಬೇಕು ಎಂದು ಯೋಗ ಗುರು ಡಾ. ಎಂ. ಕೆ. ನಾಗರಾಜರಾವ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಯೋಗ ಅಧ್ಯಯನ ಮತ್ತು ಸಂಶೋಧನ ವಿಭಾಗವು ಶನಿವಾರ ಆಯೋಜಿಸಿದ್ದ ‘ವಿಶ್ವ ಧ್ಯಾನ ದಿನ’ ಆಚರಣೆಯಲ್ಲಿ ಮಾತನಾಡಿದರು. ಯೋಗ, ಧ್ಯಾನದ ಮಹತ್ವ ಹಾಗೂ ಅಭ್ಯಾಸ ಕ್ರಮಗಳ ಕುರಿತು ತಿಳಿಸುತ್ತ, ಪರರನ್ನು ಹಿಮ್ಮೆಟ್ಟಿಸುವ ಕ್ರೌರ್ಯ ಮನೋಭಾವ ನಾಶವಾಗಲು, ಸ್ವ-ಅರಿವಿನ ವಿಚಾರ ಮಾಡಲು ಮನಃಶಾಂತಿ ಆಂತರ್ಯದಲ್ಲಿ ನೆಲೆಸಬೇಕಿದೆ. ಶಾಂತಿ ನೆಲೆಸಲು ಧ್ಯಾನ ಸಹಕಾರಿಯಾಗಲಿದೆ ಎಂದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ., ಯೋಗ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಂಯೋಜಕ ಡಾ. ಎ. ಎಂ. ಮಂಜುನಾಥ, ನೆದರ್ಲ್ಯಾಂಡ್ ಯೋಗ ಶಿಕ್ಷಕಿ ವೆಂಡಿ ಮ್ಯಾಂಡ್ರೆಸ್, ಜರ್ಮನಿಯ ಸುಸಾನ ಸ್ಟಾçಸ್ಬರ್ಗರ್, ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ನಾಗರಿಕರು ಭಾಗವಹಿಸಿದ್ದರು.
ತುಮಕೂರು: ಶಿಕ್ಷಣ ಸಂಸ್ಥೆಯ ಸ್ಥಾಪನೆಯ ಮೂಲಕ ನುರಾರು ಜನರಿಗೆ ಉದ್ಯೋಗ ಮತ್ತು ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾರಿದೀಪವಾದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶಿಕ್ಷಣ ಭೀಷ್ಮ ಡಾ.ಹೆಚ್.ಎಂ.ಗAಗಾಧರಯ್ಯನವರ 29ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಸಿದ್ಧಾರ್ಥ ನಗರದಲ್ಲಿ ಇಂದು ನಡೆಯಿತು. ಬೌದ್ಧ ಭಿಕ್ಖು ಮಹಾಸಂಘದ ಬಂತೇಜಿ ಮತ್ತು ಸಹಸದಸ್ಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿವಂಗತ ಡಾ.ಹೆಚ್.ಎಮ್.ಗಂಗಾಧರಯ್ಯನವರ 29ನೇ ವರ್ಷದ ಪುಣ್ಯಸ್ಮರಣೆಯನ್ನು ಬೌದ್ಧ ಬಿಕ್ಕುಗಳಿಂದ ತಿಸರಣ ಗಮನ ಮತ್ತು ಗ್ರಹಣ ಹಾಗೂ ಪುಣ್ಯಾನುಮೋದನಾ ಸ್ಮರಣೆ ಮತ್ತು ನುಡಿ ನಮನವನ್ನು ಸಲ್ಲಿಸಲಾಯಿತು. ದಿವಂಗತ ಡಾ.ಹೆಚ್.ಎಮ್.ಗಂಗಾಧರಯ್ಯ, ಶ್ರೀಮತಿ ಗಂಗಾಮಾಳಮ್ಮ ಮತ್ತು ಡಾ.ಜಿ.ಶಿವಪ್ರಸಾದ್ರವರ ಸಮಾಧಿಗೆ ಪೂಜೆ ಮಾಡಿ ಪುಷ್ಪಮಾಲೆ ಸಲ್ಲಿಸುವ ಮೂಲಕ ಧಾರ್ಮಿಕ ಕೈಂಕರ್ಯಗಳನ್ನು ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಹಾಗೂ ಕುಟುಂಬದ ಸದಸ್ಯರು ವಿಧಿ ವಿಧಾನಗಳನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ, ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ…
ತುಮಕೂರು: ಮನುಷ್ಯರಿಂದಲೇ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ, ಸಮಾಜದ ನೆಮ್ಮದಿಗೆ ಅಗತ್ಯವಾದ ನಡವಳಿಕೆಗಳನ್ನು ಮನುಷ್ಯ ರೂಪಿಸಿಕೊಳ್ಳುವ ಮೂಲಕ ಮಾನವ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಜಯಂತ್ ಕುಮಾರ್ ಕರೆ ನೀಡಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿAದು ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ನಾಗರಿಕರು ಮಾನವ ಹಕ್ಕುಗಳ ವ್ಯಾಪ್ತಿಯನ್ನು ತಿಳಿಯುವುದು ಅವಶ್ಯಕವಾಗಿದೆ. ಕವಿ ರವೀಂದ್ರನಾಥ ಠಾಗೋರ್ ಹೇಳುತ್ತಾರೆ “ಚಿಟ್ಟಿಗಳು ವರ್ಷಗಳ ಕಾಲ ಜೀವಿಸುವುದಿಲ್ಲ, ಕೆಲವು ದಿನವಷ್ಟೇ ಅವುಗಳ ಜೀವನ. ಅವು ಇರುವಷ್ಟು ಕಾಲ ಪರಸ್ಪರ ನೆಮ್ಮದಿ, ಸುಖದಿಂದ ಬಾಳುತ್ತವೆ” ಇದೇ ರೀತಿ ಮನುಷ್ಯರು ಕೂಡ ಸುಖವಾಗಿ ಜೀವಿಸಬೇಕು. ಇತರರಿಗೆ ತೊಂದರೆ ಕೊಟ್ಟು ಜೀವಿಸುವಂತಹ ಕ್ರಿಯೆ, ಭಾವನೆಗಳನ್ನು ತ್ಯಜಿಸಬೇಕೆಂದು ತಿಳಿಸಿದರು.…











