ತುಮಕೂರು: ಶಿಕ್ಷಣ ಕಲಿಕೆ ಮತ್ತು ಸಾಂಸ್ಕöÈತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆಡಿಟೋರಿಯಂನಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕöÈತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲಿಕೆಗೆ ಬಡವ, ಶ್ರೀಮಂತ ಎಂಬ ಭೇದ-ಭಾವ ಇರುವುದಿಲ್ಲ. ದೇವರು ಎಲ್ಲರಿಗೂ ಒಂದೇ ರೀತಿಯಾದ ಬುದ್ಧಿಶಕ್ತಿಯನ್ನು ಕೊಟ್ಟಿರುತ್ತಾನೆ. ಆ ಬುದ್ಧಿಶಕ್ತಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಬೇಕು ಎಂದು ಕರೆ ನೀಡಿದರು. ಉತ್ತಮ ಶಿಕ್ಷಣ ಪಡೆಯಲು ಲಭ್ಯವಿರುವ ಉತ್ತಮ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು. ಅಂಕ, ಪದವಿ ಮನುಷ್ಯನ ವ್ಯಕ್ತಿತ್ವದ ಮಾನದಂಡವಲ್ಲ. ವಿದ್ಯಾರ್ಥಿಗಳು…
Author: News Desk Benkiyabale
ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷರು, 11,65,030 ಮಹಿಳೆಯರು ಹಾಗೂ 88 ಇತರೆ ಸೇರಿದಂತೆ ಒಟ್ಟು 23,05,502 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸಂಜೆ ಜರುಗಿದ ಮಾನ್ಯತೆ ಪಡೆದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ ಚುನಾವಣಾ ಆಯೋಗ ಹೊರಡಿಸಿದ್ದ ವೇಳಾಪಟ್ಟಿಯಂತೆ 2024ರ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಮತದಾರರಿಗೆ 2024ರ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೆ ಕಾಲಾವಕಾಶ ನೀಡಲಾಗಿತ್ತು. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನವೆಂಬರ್ 9, 10, 23 ಹಾಗೂ 24ರಂದು ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಅರ್ಹತಾ ದಿನಾಂಕ:1.1.2025ಕ್ಕನ್ವಯವಾಗುವAತೆ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು…
ತುಮಕೂರು: ಕಳೆದ ವರ್ಷ ಜಿಲ್ಲೆಯಲ್ಲಿ 20 ಕೋಟಿಯಷ್ಟು ಹಣವನ್ನು ಸೈಬರ್ ಅಪರಾಧಿಗಳು ಕಬಳಿಸಿದ್ದಾರೆ. ಸೈಬರ್ ಅಪರಾಧಗಳ ತೀವ್ರತೆ ಹೆಚ್ಚಾಗಿರುವುದರಿಂದ ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಭಿಯಾನವಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ವಿ. ಅಶೋಕ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಪ್ರಜಾಪ್ರಗತಿ ದಿನಪತ್ರಿಕೆ-ಪ್ರಗತಿ ಟಿವಿ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಸೈಬರ್ ಅಪರಾಧ ಜಾಗೃತಿ ಅಭಿಯಾನ’ದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ನಮ್ಮ ಜಿಲ್ಲೆಯೊಂದರಲ್ಲೇ 2022ರಲ್ಲಿ 2.5 ಕೋಟಿ, 2023ರಲ್ಲಿ ಸುಮಾರು 4 ಕೋಟಿ ಹಣ ಸೈಬರ್ ವಂಚಕರ ಪಾಲಾಗಿದೆ. ರಾಜ್ಯದಲ್ಲಿ 2000 ಕೋಟಿ ಹಣವನ್ನು ಸೈಬರ್ ಕಳ್ಳರು ದೋಚಿದ್ದಾರೆ. ಇದರಲ್ಲಿ 1000 ಕೋಟಿ ಬೆಂಗಳೂರಿಗರು ಕಳೆದುಕೊಂಡಿದ್ದಾರೆ. ಇದರಿಂದ ಸೈಬರ್ ಅಪರಾಧಿಗಳ ಬಲಿಪಶುಗಳು ಮಾನಸಿಕ ಆಘಾತಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಹಿರಿಯ ನಾಗರಿಕರೇ ಸೈಬರ್ ಅಪರಾಧಿಗಳ ಮೊದಲ…
ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಹಾಡುಹಗಲೇ ಪತ್ರಿಕಾ ಸಂಪಾದಕ ರಾಮಾಂಜನಪ್ಪ ಅವರ ಮೇಲಿನ ದಾಳಿ ಖಂಡಿಸಿ, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಜಿ.ಕರುಣಾಕರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ, ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದು, ಜಿಲ್ಲೆಯ ಪಾವಗಡದಲ್ಲಿ ನಡೆದಂತಹ ಘಟನೆಯೇ ಇದಕ್ಕೆ ತಾಜಾ ಉದಾಹರಣೆಯಾಗಿದೆ. ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದರು. ಪಾವಗಡ ಪಟ್ಟಣದಲ್ಲಿ ಸೋಮವಾರ ರಾಮಾಂಜಿನಪ್ಪ ಅವರ ಮೇಲೆ ಹಲ್ಲೆ ಮಾಡಿದವರನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.…
ತುಮಕೂರು: ರಾಜ್ಯದಲ್ಲಿ ಊಒPಗಿ(ಹ್ಯೂಮನ್ ಮೆಟಾನ್ಯೂಮೊ ವೈರಸ್) ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ವಯ ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತç ಅಥವಾ ಟಿಶ್ಯೂ ಪೇಪರ್ನಿಂದ ಮುಚ್ಚಿಕೊಳ್ಳಬೇಕು. ಕೈಗಳನ್ನು ಆಗಾಗ ಸಾಬೂನು ಅಥವಾ ಸ್ಯಾನಿಟೈಸರ್ನಿಂದ ತೊಳೆದುಕೊಳ್ಳಬೇಕು. ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು. ಬಳಸಿದ ಟಿಶ್ಯೂ, ಕರವಸ್ತçವನ್ನು ಪುನರ್ ಬಳಕೆ ಮಾಡಬಾರದು. ಅನಾರೋಗ್ಯದ ಲಕ್ಷಣಗಳಿದ್ದವರು ಸಭೆ-ಸಮಾರಂಭದಲ್ಲಿ ಭಾಗವಹಿಸದಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. ಶಾಲಾ ಮಕ್ಕಳಲ್ಲಿ ಊಒPಗಿ ಸೋಂಕು ಹೆಚ್ಚಾಗಿ ಕಂಡು ಬರುವ ಸಾಧ್ಯತೆಯಿರುವುದರಿಂದ ಶೀತ, ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ವೈದ್ಯರ ಬಳಿ ಕರೆದೊಯ್ದು…
ತುಮಕೂರು: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿಗಳ ನೇರ ನೇಮಕಾತಿಗೆ ಸಂಬAಧಿಸಿದAತೆ ತಾತ್ಕಾಲಿಕ ಪರಿಷ್ಕೃತ ಆಯ್ಕೆ ಪಟ್ಟಿಯನ್ವಯ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಬಹು ಉಪಯೋಗಿ ಸಭಾಂಗಣದಲ್ಲಿAದು ನಡೆದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ದಾಖಲೆಗಳನ್ನು ಪರಿಶೀಲಿಸುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಪರಿಶೀಲನಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು. ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಿ ನಿಯೋಜಿತ ಪರಿಶೀಲನಾಧಿಕಾರಿಗಳು ನಿಗಧಿತ ನಮೂನೆಯ ಅಂಕಣಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. ಭರ್ತಿ ಮಾಡಿದ ನಂತರ ಅಭ್ಯರ್ಥಿಗಳಿಂದ ಅಗತ್ಯ ದಾಖಲೆಗಳ 2 ಸೆಟ್ ದೃಢೀಕೃತ ನಕಲುಗಳನ್ನು ಪಡೆಯಬೇಕು ಎಂದು ಸೂಚಿಸಿದರು.
ತುಮಕೂರು: ಬೀದಿಬದಿ ವ್ಯಾಪಾರಿಗಳು ಸಂಘಟಿತರಾಗಬೇಕು, ಸಂಘಟನೆಯಾಗಿ ಶಕ್ತಿ ಬೆಳೆಸಿಕೊಂಡು ಸರ್ಕಾರದ ಸೌಲಭ್ಯ ಪಡೆಯುವುದು, ಪರಸ್ಪರ ಸಹಕಾರದಿಂದ ಬೆಳವಣಿಗೆ ಆಗಬೇಕು ಎಂದು ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಶ್ರಮ ಜೀವಿ ಬೀದಿಬದಿ ವ್ಯಾಪಾರಿಗಳ ರಾಜ್ಯ ಸಂಘದಿAದ ಸೋಮವಾರ ನಗರದ ಕೆ.ಆರ್.ಬಡಾವಣೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ಬೀದಿಬದಿ ವ್ಯಾಪಾರಿಗಳು ಸಣ್ಣ ಪ್ರಮಾಣದಲ್ಲಿ ವ್ಯಾಪಾರ ಆವಲಂಬಿಸಿ ಬದುಕು ಸಾಗಿಸುತ್ತಿದ್ದಾರೆ., ಇಂತಹ ವ್ಯವಹಾರಸ್ಥರಿಗೆ ಸರ್ಕಾರದ ವಿವಿಧ ಯೋಜನೆಗಳು, ಸವಲತ್ತುಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿ ಅವರಿಗೆ ಅವುಗಳ ಪ್ರಯೋಜನ ದೊರೆಯುವಂತೆ ಮಾಡಬೇಕು ಎಂದು ಹೇಳಿದರು. ಬಡವರ ಮನೆ ಚಿಕ್ಕದಾದರೂ ಮನಸು ದೊಡ್ಡದು, ಶ್ರೀಮಂತರ ಮನೆ ದೊಡ್ಡದಾಗಿದ್ದರೂ ಅವರ ಮನಸು ಚಿಕ್ಕದು. ಕನ್ನಡದ ಬಗ್ಗೆ ಪ್ರೀತಿ ಅಭಿಮಾನ, ರಾಜ್ಯೋತ್ಸವ ಆಚರಣೆ ಮಾಡುವುದು ಇಂತಹ ಬಡವರ್ಗದ ಜನರೇ ಹೆಚ್ಚು. ಶ್ರೀಮಂತರು ರಾಜ್ಯೋತ್ಸದಂತಹ ಆಚರಣೆಗೆ ಹೆಚ್ಚು ಆಸಕ್ತಿ ತೋರುವುದಿಲ್ಲ. ಕನ್ನಡ ಪ್ರೇಮ ಇಂತಹವರಲ್ಲಿ ಮನೆಮಾಡಿದೆ ಎಂದರು. ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮಾತನಾಡಿ, ಶ್ರಮಜೀವಿ…
ತುಮಕೂರು: ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಸರಣಿ ಹಗರಣ, ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಇದರ ವಿರುದ್ಧ ಬಿಜೆಪಿಯಿಂದ ಸಾಕಷ್ಟು ಪ್ರತಿಭಟನೆ ನಡೆದಿವೆ. ಇಷ್ಟಾಗಿಯೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಟೀಕಿಸಿದರು. ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಆತಂಕ ಮೂಡಿಸಿವೆ. ಸರ್ಕಾರ ಆರೋಗ್ಯ ಸೇವೆಯನ್ನು ಸಮರ್ಪಕವಾಗಿ ಒದಗಿಸುತ್ತಿಲ್ಲ, ಆರೋಗ್ಯ ಇಲಾಖೆಯ ತಿಮಿಂಗಿಲಗಳು ಬಾಣಂತಿಯರನ್ನು ನುಂಗುತ್ತಿವೆ. ಇದಕ್ಕೆಲ್ಲಾ ಸರ್ಕಾರವೇ ನೇರ ಹೊಣೆ.…
ತುಮಕೂರು: ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯೋನ್ಮುಖರಾಗಿರುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅತ್ಯವಶ್ಯ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು. ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್ ಮತ್ತು ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ದೇಶ, ರಾಜ್ಯದಲ್ಲಿನ ನಾಗರಿಕರನ್ನು ರಕ್ಷಣೆ ಮಾಡುವಂತೆ ಪೊಲೀಸರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಉತ್ತಮ ಆರೋಗ್ಯ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಇಂತಹ ಕ್ರೀಡಾಕೂಟ ಆಯೋಜಿಸುವುದು ಬಹುಮುಖ್ಯ ಎಂದರು. ಪೊಲೀಸರು ವರ್ಷಕ್ಕೊಮ್ಮೆ ಮೂರು ದಿನ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಮುಖ್ಯವಲ್ಲ. ತಮ್ಮ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳಲು ಸಮಯ ಸಿಕ್ಕಾಗ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯ ಎಂದು ಸಲಹೆ ನೀಡಿದರು. ಸಾರ್ವಜನಿಕರಿಗೆ ಸರ್ಕಾರ ಎಂದಾಕ್ಷಣ ನೆನಪಾಗುವುದು ಪೊಲೀಸ್ ಇಲಾಖೆ. ಪೊಲೀಸರ ಬಗ್ಗೆ ಜನರು ನಂಬಿಕೆ ಇಟ್ಟಿದ್ದಾರೆ. ನಿಮ್ಮ ಕೈಯಲ್ಲಿ…
ಹುಳಿಯಾರು: ಇತ್ತೀಚೆಗೆ ಮಹಿಳೆಯರು ಮೈಕ್ರೋ ಫೈನಾನ್ಸ್ಗಳಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ತುಂಬಾ ವಿಷಾದನೀಯ ಎಂದು ಚಿಕ್ಕನಾಯಕನಹಳ್ಳಿ ಕೆನರಾ ಬ್ಯಾಂಕಿನ ಕ್ಷೇತ್ರಧಿಕಾರಿಗಳಾದ ಎನ್.ಜಿ.ಮಧುಸೂದನ್ ಎಂದರು. ಕೆನರಾ ಬ್ಯಾಂಕ್ ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರದಿAದ ಕುಪ್ಪೂರು ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜನ ಸುರಕ್ಷಾ ಅಭಿಯಾನ ಶಿಬಿರದಲ್ಲಿ ಅವರು ಮಾತನಾಡಿದರು. ಮಹಿಳೆಯರು ಬ್ಯಾಂಕುಗಳಲ್ಲಿ ಸ್ವಸಹಾಯಗಳ ಮುಖಾಂತರ ಕಡಿಮೆ ಬಡ್ಡಿ ದರದಲ್ಲಿ ದೊರೆಯುವ ಸಾಲ ಪಡೆಯುವಂತೆ ಸಲಹೆ ನೀಡಿದರು. ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಆರ್.ಎಂ.ಕುಮಾರಸ್ವಾಮಿ ಮಾತನಾಡುತ್ತಾ ಹೊಸ ವರ್ಷದ ಪ್ರಯುಕ್ತ ಹಲವಾರು ಸಂದೇಶಗಳನ್ನು ಮೊಬೈಲ್ ಮುಖಾಂತರ ಸೈಬರ್ ಕಳ್ಳರು ಕಳುಹಿಸುತ್ತಿದ್ದು ಅವುಗಳನ್ನು ತಿರಸ್ಕರಿಸಬೇಕೆಂದು ಹಾಗೇನಾದರೂ ಆದಲ್ಲಿ 1930 ಕ್ಕೆ ಕರೆ ಮಾಡಬೇಕೆಂದು ತಿಳಿಸಿದರು, ಕೆನರಾ ಬ್ಯಾಂಕಿನ ರಂಗಸ್ವಾಮಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷಣಿಯಾದ ರೆಹನಾ ಬಾನು, ಸಂಜೀವಿನಿ ಒಕ್ಕೂಟದ ಎಲ್ಸಿಆರ್ಪಿ ಕಲ್ಪನ, ಆಶಾ ಕಾರ್ಯಕರ್ತೆ ಹೇಮಾವತಿ, ಪ್ರತಿನಿಧಿ ಮಂಜುಳಾ ಮುಂತಾದವರು ವೇದಿಕೆಯನ್ನು ಕುರಿತು ಮಾತನಾಡಿದರು.…











