Author: News Desk Benkiyabale

ತುಮಕೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರಿಗೆ ಕರ್ನಾಟಕ ರಣಧೀರರ ವೇದಿಕೆ (ರಿ.) ಕೊಡಮಾಡುವ ರಾಣಿ ಚೆನ್ನಭೈರಾದೇವಿ ಪ್ರಶಸ್ತಿ 2024ಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜûಮ್ ಜûಮ್ ಭಾಜನರಾಗಿದ್ದಾರೆ. ಕನ್ನಡ ನಾಡು-ನುಡಿ, ನೆಲ, ಜಲ, ಭಾಷೆ, ಸಾಹಿತ್ಯ ಹಾಗೂ ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿರುವವರಿಗೆ ಈ ಪ್ರಶಸ್ತಿ ನೀಡಲಾಗುವುದು. ಇತ್ತೀಚೆಗೆ ನೆಲಮಂಗಲದಲ್ಲಿ ನಡೆದ 5ನೆಯ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಭುವನೇಶ್ವರಿ ಹಬ್ಬ ಮತ್ತು ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ 2024ರ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ರಣಧೀರರ ವೇದಿಕೆ (ರಿ.) ಸಂಸ್ಥಾಪಕ ಅಧ್ಯಕ್ಷ ಶಂಕರ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ ಗೌಡ ಕೆ. ಎಸ್., ಮತ್ತಿತರ ಗಣ್ಯರು ಈ ಸಂದರ್ಭ ಹಾಜರಿದ್ದರು.

Read More

ತುಮಕೂರು: ಸುವರ್ಣಸೌಧದಲ್ಲಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಗೂಂಡಾ ವರ್ತನೆ, ಕೊಲೆ ಬೆದರಿಕೆ ಹಾಕಿ, ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಶಾಂತಿ, ಅರಾಜಕತೆ, ಅಭದ್ರತೆ ಸೃಷ್ಟಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ದಿನದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ಜನರನ್ನು ವಂಚಿಸುತ್ತಾ ಬಂದಿದೆ. ತನ್ನ ಆಡಳಿತ ಹುಳುಕನ್ನು ಜನ ಪ್ರಶ್ನೆ ಮಾಡಬಾರದು ಎಂದು ವಿವಾದಗಳನ್ನು ಸೃಷ್ಟಿಮಾಡಿಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವನ್ನು ಸರ್ಕಾರ ಮಾಡುತ್ತಿದೆ ಎಂದು ದೂರಿದರು. ಜಿಲ್ಲಾ…

Read More

ತುಮಕೂರು: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಾನಾಯಕ ಡಾ. ಬಿ.ಆರ್ ಅಂಬೇಡ್ಕರ್ ಪ್ರಜಾ ಸೇನೆ, ಆಲ್ ಇಂಡಿಯಾ ಬಹುಜನ ಸಮಾಜದ ಪಾರ್ಟಿ ಸೇರಿದಂತೆ ವಿವಿಧ ದಲಿತ ಪರ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್‌ಹಾಲ್ ವೃತ್ತದಲ್ಲಿ ಜಮಾಯಿಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಅಮಿತ್ ಶಾ ಹೇಳಿಕೆ ವಿರುದ್ಧ ಆಕ್ರೋಶ ಹೊರ ಹಾಕಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅಂಬೇಡ್ಕರ್ ಹೆಸರು ಉಚ್ಛರಿಸುವುದು ಈಗ ಫ್ಯಾಷನ್ ಆಗಿದೆ. ಅಂಬೇಡ್ಕರ್ ಹೆಸರು ಉಚ್ಛರಿಸುವ ಬದಲು ದೇವರ ಹೆಸರನ್ನು ಉಚ್ಛರಿಸಿದರೆ ಏಳು ಜನ್ಮದವರೆಗೂ ಸ್ವರ್ಗ ಪಡೆಯಬಹುದು ಎಂದು ಹೇಳಿಕೆ ನೀಡುವ ಮೂಲಕ ಅಂಬೇಡ್ಕರ್‌ರವರಿಗೆ…

Read More

ತುಮಕೂರು: ಇತ್ತೀಚಗೆ ಕೇಂದ್ರದ ಗೃಹ ಸಚಿವ ಅಮಿತ್ ಷಾ ಅವರು ಸಂಸತ್ತಿನಲ್ಲಿ ಮಾತನಾಡುವ ವೇಳೆ, ಅಂಬೇಡ್ಕರ್ ಎಂಬುದು ವ್ಯಸನವಾಗಿದೆ. ಅಂಬೇಡ್ಕರ್ ಅವರ ಬದಲು ದೇವರ ಹೆಸರು ಹೇಳಿದ್ದರೆ ಸ್ವರ್ಗ ಪ್ರಾಪ್ತಿಯಾಗುತಿತ್ತು ಎಂದು ನೀಡಿರುವ ಹೇಳಿಕೆಯನ್ನು ಖಂಡಿಸಿ, ರೈತರು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು, ರೈತ-ಕಾರ್ಮಿಕ ಸಂಘಟನೆ, ಸ್ಲಂ ಜನಾಂದೋಲನ ಸಮಿತಿ ಸದಸ್ಯರು, ಸ್ವಾತಂತ್ರ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ಸ್ವಾತಂತ್ರ ಚೌಕದಲ್ಲಿ ಸಮಾವೇಶಗೊಂಡಿದ್ದ ಮುಖಂಡರು, ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಮಿತ್ ಷಾ ಅವರನ್ನು ಕೂಡಲೇ ಕೇಂದ್ರ ಸಚಿವ ಸಂಪುಟದಿAದ ಕೈಬಿಡಬೇಕು, ಹಾಗೆಯೇ ಅವರ ಹೇಳಿಕೆಯನ್ನು ಸಮರ್ಥಿಸುತ್ತಿರುವ ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಹಿರಿಯ ಚಿಂತಕ ಕೆ.ದೊರೆರಾಜು ಮಾತನಾಡಿ, ಅಂಬೇಡ್ಕರ್ ಎಂಬುದು ವ್ಯಕ್ತಿಯಲ್ಲ. ಅದೊಂದು ಶಕ್ತಿ. ಇಡೀ ವಿಶ್ವವೇ ಅವರ ವಿದ್ವತ್‌ಗೆ ತಲೆಬಾಗಿದೆ. ಸಾವಿರಾರು ಭಾಷೆ, ಜಾತಿ, ಧರ್ಮಗಳಿರುವ ಭಾರತದಂತಹ ಬಹು ಸಂಸ್ಕೃತಿಯ ನಾಡಿಗೆ ಹೊಂದುವAತಹ, ಎಲ್ಲರಿಗೂ ಸಮಪಾಲು ದೊರೆಯುವಂತ ಸಂವಿಧಾನವನ್ನು ನೀಡಿದ್ದಾರೆ. ಇಂತಹ ಸರ್ವಗುಣ ಸಂಪನ್ನ ವ್ಯಕ್ತಿಯ ಬಗ್ಗೆ…

Read More

ಕೊರಟಗೆರೆ: ಡಿ.17ರಂದು ಲೋಕಸಭಾ ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನ ಖಂಡಿಸಿ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ಮೂಲಕ ಆಗ್ರಹಿಸಿ ಗ್ರೇಡ್-2 ತಹಶೀಲ್ದಾರ್ ರಾಮ್‌ಪ್ರಸಾದ್ ಮುಖೇನಾ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಚಿಂತಕರ ಕೇಂದ್ರ ಗೃಹ ಸಚಿವರನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಯನ್ನ ಏರ್ಪಡಿಸಿದ್ದರು. ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಭಾರತದ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಲೋಕಸಭಾ ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ದೇಶದ ಎಲ್ಲಾ ದಲಿತ ಸಂಘ-ಸAಸ್ಥೆಗಳು ಖಂಡಿಸುತ್ತೇವೆ. ದಲಿತರು ಶೋಷಣೆಗೆ ಒಳಗಾಗಿದ್ದಾಗ ಯಾವ ದೇವರು ಸಹ ನಮ್ಮನ್ನು ಕಾಪಾಡಲಿಲ್ಲ ಸಂವಿಧಾನವೊAದೇ ದಲಿತರಿಗೆ ರಕ್ಷಣೆ ನೀಡಿ ಸಮಾನತೆ ಕಲ್ಪಿಸಿರುವುದು ಎಂದು ಆಕ್ರೋಶ ಹೊರಹಾಕಿದರು. ಪಪಂ ಸದಸ್ಯ ಕೆ.ಎನ್.ನಟರಾಜು ಮಾತನಾಡಿ ಸಚಿವರಾಗಿ ನೀವು…

Read More

ತುಮಕೂರು: ನಗರದ ಗಂಗಸAದ್ರದಲ್ಲಿ 6 ಎಕರೆ ಜಾಗದಲ್ಲಿ ನೂತನವಾಗಿ ಸುಸಜ್ಜಿತವಾಗಿ ರುದ್ರವನವನ್ನು ವೀರಶೈವ ಸಮಾಜದಿಂದ ನಿರ್ಮಾಣ ಮಾಡಿದ್ದು, ಅಲ್ಲಿ ಸಿದ್ದೇಶ್ವರ ದೇವಾಲಯ ಸ್ಥಾಪನೆ ಮಾಡಿ, ಎಂಟು ದಿಕ್ಕುಗಳಲ್ಲಿ ಲಿಂಗಮುದ್ರೆ ಕಲ್ಲುಗಳನ್ನು ನೆಟ್ಟು ಲೋಕಾರ್ಪಣೆ ಮಾಡಲಾಗಿದೆ. ಶವಸಂಸ್ಕಾರಕ್ಕಾಗಿ ಸಮಾಜದವರು ಈ ರುದ್ರಭೂಮಿಯನ್ನು ಬಳಸಿಕೊಳ್ಳಬಹುದು ಎಂದು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಹೇಳಿದರು. ನಗರದ ವೀರಶೈವ ಕಲ್ಯಾಣಮಂಟಪದಲ್ಲಿ ಗುರುವಾರ ನಡೆದ ಸಮಾಜ ಸೇವಾ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಬನಶಂಕರಿಯ ರುದ್ರಭೂಮಿಯಲ್ಲಿ 1960ರಿಂದ ಶವಸಂಸ್ಕಾರ ಮಾಡಿಕೊಂಡು ಬರಲಾಗುತ್ತಿದೆ. ಇಲ್ಲಿ ಜಾಗದ ಕೊರತೆ ಎದುರಾಗಿದೆ. ಹೀಗಾಗಿ ಗಂಗಸAದ್ರದ ರುದ್ರವನ ನಿರ್ಮಾಣ ಮಾಡಿ ಅಂತ್ಯಸAಸ್ಕಾರ ಕಾರ್ಯಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಇದೂವರೆಗೆ ಸಮಾಜದಿಂದ ಶವಸಂಸ್ಕಾರಕ್ಕೆ ಯಾವುದೇ ಶುಲ್ಕ ಪಡೆಯದೆ ಉಚಿತವಾಗಿ ಮಾಡಲಾಗುತ್ತಿತ್ತು, ಅದರ ಖರ್ಚನ್ನು ಸಮಾಜ ಭರಿಸುತ್ತಿತ್ತು. ಸಭೆಯ ಸರ್ವಸದಸ್ಯರ ಒಪ್ಪಿಗೆ ಮೇರೆಗೆ ಉಚಿತ ಸೇವೆ ಮುಂದುವರೆಸುವುದಾಗಿ ಹೇಳಿದ ಅಧ್ಯಕ್ಷ ಟಿ.ಬಿ.ಶೇಖರ್, ಶಕ್ತಿ ಇರುವವರು ರುದ್ರಭೂಮಿಯ ಅಭಿವೃದ್ಧಿ ದೇಣಿಗೆ ನೀಡಿ…

Read More

ಚಿಕ್ಕನಾಯಕನಹಳ್ಳಿ: ಗ್ಯಾರೆಂಟಿ ಯೋಜನೆಯ ಉದ್ದೇಶ ಜನಸಾಮಾನ್ಯರಿಗೆ ಸಹಾಯ ಮಾಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಹಾಗೂ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಸಿಡಿ ಚಂದ್ರಶೇಖರ್ ಹೇಳಿದರು. ಅವರು ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿದ ಸಂದರ್ಭದಲ್ಲಿ ಮಾತನಾಡುತ್ತಾ ನಾವು ಸರ್ಕಾರದ ಪ್ರತಿನಿಧಿಗಳಾಗಿದ್ದೇವೆ. ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅಧಿಕಾರಿಗಳ ಮೂಲಕ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಈಗಿರುವಾಗ ಸಾರ್ವಜನಿಕರು ಮತ್ತು ಅಧಿಕಾರಿಗಳ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕಿದೆ ಎಂದು ವರದಿಗಳನ್ನು ಪರಿಶೀಲಿಸಿದರು. ಗೃಹಲಕ್ಷ್ಮಿ ಯೋಜನೆಯಲ್ಲಿ ಆಗಸ್ಟ್ 23 ರಿಂದ ಸೆಪ್ಟೆಂಬರ್ 24ರ ವರೆಗೆ ಪರಿಶಿಷ್ಟ ಜಾತಿ ಮಹಿಳೆಯರು 9558 ಕುಟುಂಬಗಳು ಪರಿಶಿಷ್ಟ ಪಂಗಡದ 3835 ಕುಟುಂಬ ಅಲ್ಪಸಂಖ್ಯಾತರ ಪಂಗಡದಿAದ 3166 ಕುಟುಂಬ ಹಿಂದುಳಿದ ವರ್ಗದ 16537 ಕುಟುಂಬ ಇತರೆ ವರ್ಗದ 21293 ಒಟ್ಟಿಗೆ 54, 389 ಕುಟುಂಬದ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ನೆರವು ಪಡೆಯುವ ಮೂಲಕ…

Read More

ತುಮಕೂರು: ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಮಾತದಾನ ಅತ್ಯಂತ ಪ್ರಮುಖವಾಗಿದ್ದು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಜನತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಆರ್. ಅಧಿಕಾರಿಗಳಿಗೆ ಸೂಚಿಸಿದರು. ನಗರದ ನಿರೀಕ್ಷಣಾ ಮಂದಿರ ಸಭಾಂಗಣದಲ್ಲಿAದು ಸಭೆ ನಡೆಸಿ ಮಾತನಾಡಿದ ಅವರು, ವಿವಿಧ ಶಿಕ್ಷಣ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವಕರು ಚುನಾವಣೆ ಸಂದರ್ಭಗಳಲ್ಲಿ ತಮ್ಮ ಕ್ಷೇತ್ರಗಳಿಗೆ ತೆರಳಿ ಮತದಾನ ಮಾಡಲು ಆಸಕ್ತಿ ತೋರದೆ ಇರುವುದರಿಂದ ಅವರು ಇರುವ ಸ್ಥಳಗಳಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು. ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಯಡಿ ಸ್ವೀಕೃತವಾದ ಅರ್ಜಿಗಳು, ಮನೆ-ಮನೆ ಸಮೀಕ್ಷೆಯ ಪ್ರಗತಿ ಹಾಗೂ ಇ.ಪಿ.ರೇಷಿಯೋ, ಜೆಂಡರ್ ರೇಷಿಯೋ ಮುಂತಾದ ಮತದಾರರ ಪಟ್ಟಿಯ ಸಂಬAಧ ಸಾಧಿಸಿರುವ ಪ್ರಗತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರನ್ನು ನೋಂದಣಿ ಮಾಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಇ.ಪಿ. ರೇಷಿಯೋ ಮತ್ತು ಜೆಂಡರ್ ರೇಷಿಯೋ…

Read More

ತುಮಕೂರು: ಸಮಾಜದ ಪ್ರತಿಯೊಬ್ಬರೂ ತಾರತಮ್ಯವಿಲ್ಲದೆ, ಸಮಾನವಾಗಿ ಬಾಳುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಹಕ್ಕುಗಳ ಅರಿವಿಲ್ಲದವರಿಂದ ಕಾನೂನಿನ ಉಲ್ಲಂಘನೆ ಆಗಬಹುದು ಅಥವಾ ಹಕ್ಕುಗಳ ಬಗ್ಗೆ ತಿಳಿದಿಲ್ಲದವರ ಮೇಲೆ ದೌರ್ಜನ್ಯ ನಡೆಯಬಹುದು. ಈ ಕಾರಣದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾನವ ಹಕ್ಕುಗಳ ಅರಿವು ಮೂಡಿಸಬೇಕು ಎಂದು ಅಡಿಷನಲ್ ಎಸ್ಪಿ ವಿ.ಮರಿಯಪ್ಪ ಹೇಳಿದರು. ಮಾನವ ಹಕ್ಕುಗಳ ಜಾಗೃತಿ ದಳ ಹಾಗೂ ವಿದ್ಯೋದಯ ಕಾನೂನು ಕಾಲೇಜಿನ ಆಶ್ರಯದಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾರೂ ಯಾರ ಹಕ್ಕನ್ನು ಕಸಿಯುವಂತಿಲ್ಲ, ಎಲ್ಲರಿಗೂ ಸಮಾನ ಹಕ್ಕಿದೆ. ಇದಕ್ಕೆ ಸಂಬAಧಿಸಿದAತೆ ನಿಬಂಧನೆಗಳನ್ನು ರೂಪಿಸಲಾಗಿದೆ. ಹಕ್ಕುಗಳ ಅರಿವು ಬೆಳೆಸಿಕೊಂಡರೆ ಸಮಾಜದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬಾಳಲು ಸಾಧ್ಯವಾಗುತ್ತದೆ ಎಂದರು. ಮಾನವ ಹಕ್ಕುಗಳ ಅರಿವಿಲ್ಲದವರು, ಕಾನೂನಿನ ತಿಳವಳಿಕೆಯಿಲ್ಲದವರು, ಅಮಾಯಕರು ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಂತಹವರಲ್ಲಿ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಅವರ ಹಕ್ಕುಗಳು ದಮನವಾಗದಂತೆ ನೆರವಾಗಬೇಕು. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆದು…

Read More

ತುಮಕೂರು: ತುಮಕೂರಿನ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮ, ಇನ್ಫೋಸಿಸ್ ಫೌಂಡೇಶನ್ ಹಾಗೂ ತುಮಕೂರು ವಿವಿಯ ಸಮಾಜಕಾರ್ಯ ವಿಭಾಗದ ಸಹಯೋಗದಲ್ಲಿ ತಮಿಳುನಾಡಿನ ಕೃಷ್ಣಗಿರಿ, ತಿರುವಣ್ಣಾಮಲೈ, ತಿಂಡಿವನA, ವಿಲ್ಲುಪುರಂ ಪ್ರದೇಶಗಳಲ್ಲಿ ಫೆಂಗಲ್ ಚಂಡಮಾರುತದಿAದ ಸಂತ್ರಸ್ತರಾದ ಜನರಿಗೆ ಪರಿಹಾರ ವಸ್ತುಗಳನ್ನು ವಿತರಿಸಲಾಯಿತು. ಸಂತ್ರಸ್ತರಿಗೆ ಆಹಾರ ಸಾಮಗ್ರಿಗಳು, ಕಂಬಳಿ, ಬಟ್ಟೆ ಸೇರಿದಂತೆ 3000 ರೂಪಾಯಿ ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು. ಕಳೆದ ಒಂದು ವಾರದಿಂದ ಶುರುವಾಗಿರುವ ಪರಿಹಾರ ವಿತರಣಾ ಕಾರ್ಯವು ಇದೇ ಡಿ.30ರ ವರೆಗೂ ಮುಂದುವರಿಯಲಿದ್ದು, ಫೆಂಗಲ್ ಚಂಡಮಾರುತದಿAದ ಹಾನಿಗೊಳಗಾಗಿರುವ ತಮಿಳುನಾಡಿನ ವಿವಿಧ ಪ್ರದೇಶಗಳ ಸಂತ್ರಸ್ತರಿಗೆ ನೆರವಾಗಲಿದೆ. ‘ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಜನರಿಗೆ ವಿವಿಧ ರೀತಿಯಲ್ಲಿ ಸಹಾಯ ಮಾಡಲು ಇನ್ಫೋಸಿಸ್ ಪ್ರತಿಷ್ಠಾನವು ಶ್ರೀ ರಾಮಕೃಷ್ಣ ಸೇವಾಶ್ರಮದೊಂದಿಗೆ ಕಳೆದ 32 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪುದುಚೇರಿ, ವಿಲ್ಲುಪುರಂ, ಕಡಲೂರು, ತಿರುವಣ್ಣಾಮಲೈ, ಕೃಷ್ಣಗಿರಿ ಸೇರಿದಂತೆ ಫೆಂಗಲ್ ಪೀಡಿತ ಜಿಲ್ಲೆಗಳಿಗೆ ಪರಿಹಾರ ಸಾಮಗ್ರಿಗಳನ್ನು ನೀಡುತ್ತಿದ್ದೇವೆ. ಮೊದಲ ಹಂತದಲ್ಲಿ ಕೃಷ್ಣಗಿರಿ ಜಿಲ್ಲೆ ಹಾಗೂ ಸಮೀಪದ ವೆಟ್ಟಿಯಂಪಟ್ಟಿ, ಕಲ್ಲಾವಿಯಲ್ಲಿ 1,000 ಜನರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ.…

Read More