ತುಮಕೂರು: ಕೈಗಾರಿಕೆ ಮತ್ತು ವಾಣಿಜ್ಯ ಗ್ರಾಹಕರು ಡೀಸೆಲ್, ಪೆಟ್ರೋಲ್ ಮತ್ತು ನೈಸರ್ಗಿಕ ಅನಿಲವನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ. ಅನಧಿಕೃತ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟ, ಮಾರ್ಗಾಂತರ, ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಡೀಸೆಲ್, ಪೆಟ್ರೋಲ್ ಹಾಗೂ ನೈಸರ್ಗಿಕ ಅನಿಲವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದಲ್ಲಿ ಅಥವಾ ಇಂಧನದ ಅಸಾಧಾರಣ ದಾಸ್ತಾನು ಮತ್ತು ಚಲನವಲನಗಳು ಹಾಗೂ ತಾತ್ಕಾಲಿಕ ಕೊರತೆ ಸೃಷ್ಠಿಸುವಂತಹ ಪ್ರಕರಣಗಳು ಕಂಡು ಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ಮತ್ತು ಸಂಬAಧಪಟ್ಟ ನಿಯಮಗಳಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕೆ ಮತ್ತು ವಾಣಿಜ್ಯ ಗ್ರಾಹಕರು ಸಾರ್ವಜನಿಕ ವಲಯಗಳ ತೈಲ ಕಂಪನಿಗಳ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸಬಾರದು. ಬೃಹತ್ ಗ್ರಾಹಕರು ತಮ್ಮ ಬೇಡಿಕೆಯನ್ನು ಚಿಲ್ಲರೆ ಮಾರಾಟ ಮಳಿಗೆಗಳ ಮುಖಾಂತರ ಖರೀದಿ ಮಾಡದೇ ಕಡ್ಡಾಯವಾಗಿ ನೇರವಾಗಿ ಮುಖಾಂತರವೇ ಖರೀದಿಸಬೇಕು. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಗ್ರಾಹಕರು ಪ್ಲಾಸ್ಟಿಕ್ ಕ್ಯಾನ್ಗಳಲ್ಲಿ ಡೀಸೆಲ್ ಖರೀದಿಸುವುದನ್ನು ಉತ್ತೇಜಿಸಬಾರದು ಎಂದು…
Author: News Desk Benkiyabale
ತುಮಕೂರು: ಭಾರತೀಯ ಅಂಚೆ ಇಲಾಖೆ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹಾಗೂ ಆದಿತ್ಯ ಬಿರ್ಲಾ ಹೆಲ್ತ್ ಇನ್ಶೂರೆನ್ಸ್ ಸಹಯೋಗದಲ್ಲಿ ಜಾರಿಯಲ್ಲಿರುವ ಜಿ.ಎ.ಜಿ. ಅಪಘಾತ ವಿಮೆ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ವಿಮೆದಾರರ ಕುಟುಂಬಕ್ಕೆ ೧೫ ಲಕ್ಷ ರೂ. ಮೊತ್ತದ ವಿಮೆ ಕ್ಲೆöÊಮ್ ಚೆಕ್ ವಿತರಣೆ ಮಾಡಲಾಯಿತು. ಜಿಲ್ಲೆಯ ಕೊರಟಗೆರೆ ತಾಲ್ಲೂಕು ಎಲೆರಾಂಪುರ ಗ್ರಾಮ ಕುಂಚಿಟಿಗರ ಮಠದಲ್ಲಿ ಇತ್ತೀಚೆಗೆ ಜರುಗಿದ ಕಾರ್ಯಕ್ರಮದಲ್ಲಿ ಈ ಚೆಕ್ ವಿತರಿಸಲಾಯಿತು. ತುಮಕೂರು ತಾಲ್ಲೂಕು ಕೋರಾ ಗ್ರಾಮದ ಅಂಬರಯ್ಯ ಅವರು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಮೂಲಕ ವಾರ್ಷಿಕ ಕೇವಲ ೭೪೯ ರೂ.ಗಳ ಪ್ರೀಮಿಯಂ ಪಾವತಿಸಿ ಅಪಘಾತ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊAಡಿದ್ದರು. ದುರದೃಷ್ಟವಶಾತ್ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟ ಹಿನ್ನೆಲೆಯಲ್ಲಿ, ಯೋಜನೆಯ ನಿಯಮಾನುಸಾರ ಅವರ ನಾಮಿನಿಯಾಗಿರುವ ಭರತರತ್ನ (ಅಂಬರಯ್ಯ ಅವರ ಪುತ್ರ) ಅವರಿಗೆ ೧೫,೦೦,೦೦೦ ರೂ. ವಿಮೆ ಕ್ಲೆöÊಮ್ ಮಂಜೂರಾಯಿತು. ವಿಮೆ ಕ್ಲೆöÊಮ್ ಚೆಕ್ ಅನ್ನು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ತುಮಕೂರು ಶಾಖೆಯ ಹಿರಿಯ ವ್ಯವಸ್ಥಾಪಕ ಸಿ.ಎಚ್. ಚೈತನ್ಯ…
ಹುಳಿಯಾರು: ಇಲ್ಲಿನ ಬಾಲಾಜಿ ಥಿಯೇಟರ್ ಹಿಂಭಾಗದ ಇಂದಿರಾ ನಗರದ ೪ ನೇ ವಾರ್ಡಿನಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗೆ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ರಸ್ತೆ ಒತ್ತುವರಿ ಸಮಸ್ಯೆ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿದಿದೆ. ರಸ್ತೆ ಒತ್ತುವರಿ ಸಮಸ್ಯೆಯ ಹಿನ್ನೆಲೆ: ಇಂದಿರಾ ನಗರದ ವಾರ್ಡ್ ನಂ. ೪ ರಲ್ಲಿ ಅಲ್ಪಸಂಖ್ಯಾತರ ಇಲಾಖೆಯಿಂದ ಅಜಗರ್ ಅವರ ಮನೆಯಿಂದ ಅಲೀಂಜಾನ್ ರವರ ಮನೆಯವರೆಗೆ ಹೊಸದಾಗಿ ರಸ್ತೆ ನಿರ್ಮಾಣ ಕಾಮಗಾರಿ ಮಂಜೂರಾಗಿತ್ತು. ಆದರೆ, ಸ್ಥಳೀಯ ನಿವಾಸಿಯೊಬ್ಬರು ತಮಗೆ ಸೇರಿದ ಸೈಟ್ ನಂ. ೧೨೭ ರ ನಿಗದಿತ ಅಳತೆಗಿಂತ ಹೆಚ್ಚಾಗಿ ರಸ್ತೆಯ ಜಾಗವನ್ನು ಒತ್ತುವರಿ ಮಾಡಿಕೊಂಡು ಕಾಂಪೌAಡ್ ಮತ್ತು ಮೆಟ್ಟಿಲು ನಿರ್ಮಿಸಿದ್ದರು. ಇದರಿಂದಾಗಿ ಕಳೆದ ೫-೬ ತಿಂಗಳುಗಳಿAದ ಮಂಜೂರಾಗಿದ್ದ ರಸ್ತೆ ಕಾಮಗಾರಿಯನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲದೆ, ಇದೇ ಕಾರಣಕ್ಕೆ ಈ ಹಿಂದೆ ಸುಮಾರು ೩ ರಿಂದ ೪ ಬಾರಿ ರಸ್ತೆ ಕಾಮಗಾರಿ ಸ್ಥಳಾಂತರಗೊAಡು ಸಾರ್ವಜನಿಕರಿಗೆ, ವೃದ್ಧರಿಗೆ ಹಾಗೂ ರೋಗಿಗಳಿಗೆ ಓಡಾಡಲು ತೀವ್ರ ತೊಂದರೆಯಾಗಿತ್ತು. ಸ್ಥಳದಲ್ಲಿ ಸಾರ್ವಜನಿಕರ ಪ್ರತಿಭಟನೆ:…
ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ ಯುವಜನರು ದೂರ ಸರಿಯುತ್ತಿದ್ದು, ಯುವ ಮನಸ್ಸುಗಳನ್ನು ಶಾಸ್ತಿçÃಯ ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಮಾಡಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಹಾಗು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಕರ್ನಾಟಕ ವಿಕಾಸ ರಂಗ(ರಿ), ತುಮಕೂರು ಶಾಖೆವತಿಯಿಂದ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಯೋಗದಲ್ಲಿ ಸಂಗೀತ ಕ್ಷೇತ್ರದ ದಿಗ್ಗಜರಾದ ತ್ಯಾಗರಾಜರು,ಮುತ್ತುಸ್ವಾಮಿ ದೀಕ್ಷಿತರು ಹಾಗೂ ಶ್ಯಾಮಾಶಾಸ್ತಿçಗಳ ನೆನಪಿನಲ್ಲಿ ಆಯೋಜಿಸಿದ್ದ ?ಶಾಸ್ತಿçÃಯ ಸಂಗೀತೋತ್ಸವ? ಕಾರ್ಯಕ್ರಮದಲ್ಲಿ ಸಾಮಾಜಿಕ ಕಳಕಳಿಯ ಮುಳ್ಳು ಹಾದಿ ಚಲನಚಿತ್ರದ ಟ್ರೆöÊಲರ್ ಬಿಡುಗಡೆ ಮಾಡಿ ಮಾತನಾಡುತಿದ್ದ ಅವರು,ಸಂಗೀತಕ್ಕೆ ಎಂತಹವರನ್ನು ಸೆಳೆಯುವ ಗುಣವಿದೆ.ಸಭಾಂಗಣದಲ್ಲಿ ಬಹುತೇಕ ಹಿರಿಯರನ್ನೇ ಕಾಣುತ್ತಿದ್ದೇವೆ. ಭವಿಷ್ಯದ ವಾರಸುದಾರರಾಗಿರುವ ಯುವಜನರು ಇಂತಹ ಸಂಗೀತ ಕ್ಷೇತ್ರವನ್ನು ಮುನ್ನೆಡೆಸುವಂತಾಗಬೇಕು. ಹಾಗಾಗಿ ಯುವಜರನ್ನು ಶಾಸ್ತಿçÃಯ ಸಂಗೀತಕ್ಕೆ ಸೆಳೆಯುವ ಪ್ರಯತ್ನ ನಡೆಯಬೇಕೆಂದರು. ಭಾರತದಲ್ಲಿ ಇಂದು ಶೇ೬೦ಕ್ಕಿಂತಲೂ ಹೆಚ್ಚು ಯುವ ಸಮೂಹವಿದೆ. ಇಂತಹ ಯುವ ಸಮೂಹ…
ತುಮಕೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲಿಯೂ ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸುವ ಕೆಲಸ ಮಾಡಿಲ್ಲ. ಇದು ಬಿಜೆಪಿಯಾ ಊಹಾಪೋಹ ಅಷ್ಟೇ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಜಯನಗರ ಪೂರ್ವದಲ್ಲಿರುವ ತಮ್ಮ ಗೃಹ ಕಚೇರಿ ಬಳಿ ಎಸ್.ಐ.ಆರ್.ಗೆ ಪೂರಕವಾಗಿ ಹೆಲ್ಪ್ ಲೈನ್ಗೆ ಚಾಲನೆ ನೀಡಿ ಮಾತನಾಡಿದ ಅವರು,ಒಂದು ಮತಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸಬೇಕೆಂದರೆ,ರೇಷನ್ ಕಾರ್ಡು, ಪಾರ್ಸೊ್ಪರ್ಟ್, ಬ್ಯಾಂಕ್ ಪಾಸ್ ಪುಸ್ತಕ ಸೇರಿದಂತೆ ಕನಿಷ್ಠ ದಾಖಲಾತಿಗಳಾದರೂ ಬೇಕು.ಅಂತಹ ಯಾವ ಕಾರ್ಯವನ್ನು ರಾಜ್ಯ ಸರಕಾರ ಮಾಡುತ್ತಿಲ್ಲ.ಎಸ್.ಐ.ಆರ್. ಮೂಲಕ ಕಾಂಗ್ರೆಸ್ ಮತದಾರರನ್ನು ಕಿತ್ತು ಹಾಕಬಹುದು ಎಂಬ ಭ್ರಮೆಯಲ್ಲಿದ್ದ ಬಿಜೆಪಿಗೆ,ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಎಸ್.ಐ.ಆರ್.ನಿರಾಸೆ ತಂದಿದೆ.ಹಾಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಯಾವುದೇ ಹುರುಳು ಇಲ್ಲ ಎಂದರು. ಚುನಾವಣಾ ಆಯೋಗ, ಎಸ್.ಐ.ಆರ್. ಪ್ರಕ್ರಿಯೆ ಸರಿಯಾಗಿದೆಯೇ?, ಇಲ್ಲವೇ? ಎಂಬುದನ್ನು ತಿಳಿಯಲು ಎಲ್ಲಾ ಪಕ್ಷಗಳಿಗೂ ಬೂತ್ ಮಟ್ಟದ ಏಜೆಂಟ್ರಿಗೆ(ಬಿಎಲ್ಎ-೦೨) ಅಧಿಕೃತವಾಗಿ ಅವಕಾಶ ನೀಡಿದೆ.ಅವರಿಂದ ಮಾಹಿತಿ ಪಡೆಯಲಿ, ಅದನ್ನು ಬಿಟ್ಟು ನಾವು ಅಂದುಕೊAಡಿದ್ದು ಸಾಧ್ಯವಾಗುವುದಿಲ್ಲ…
ಕೊರಟಗೆರೆ: ೨೫೦೦ಕೋಟಿ ಅನುಧಾನದ ತುಮಕೂರು-ರಾಯದುರ್ಗ ರೈಲ್ವೆ ಕಾಮಗಾರಿಗೆ ೨೦ವರ್ಷ ಆದ್ಮೇಲೆ ಮತ್ತೇ ಚಾಲನೆ ಸಿಕ್ಕಿದೆ. ೨೦೨೭ರ ಮುಕ್ತಾಯಕ್ಕೆ ಕೊರಟಗೆರೆ-ಮಧುಗಿರಿ ಮೂಲಕ ಪಾವಗಡಕ್ಕೆ ರೈಲ್ವೆ ಸಂಚಾರ ಮಾಡಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದರು. ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ರೈಲ್ವೆ ಇಲಾಖೆಯಿಂದ ಏರ್ಪಡಿಸಲಾಗಿದ್ದ ರೈಲ್ವೆ ನಿಲ್ದಾಣ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದರು. ಚಿಕ್ಕಬಳ್ಳಾಪುರದಿಂದ ಬೈರೇನಹಳ್ಳಿ ರಾಷ್ಟಿçÃಯ ಹೆದ್ದಾರಿ ಕಾಮಗಾರಿ ಮುಕ್ತಾಯವಾಗಿ ಸಂಚಾರಕ್ಕೆ ಸಿದ್ದವಾಗಿದೆ. ಶಿರಾ-ಬಡವನಹಳ್ಳಿ-ಮಧುಗಿರಿ-ಬೈರೇನಹಳ್ಳಿಯ ರಾಷ್ಟಿçÃಯ ಹೆದ್ದಾರಿ ಕಾಮಗಾರಿ ಗುದ್ದಲಿ ಪೂಜೆಗೆ ಸಿದ್ದತೆ ನಡೆದಿದೆ. ಕೊರಟಗೆರೆ, ಮಧುಗಿರಿ, ಶಿರಾ ಮತ್ತು ಪಾವಗಡ ಕ್ಷೇತ್ರಗಳು ತುಮಕೂರಿನ ಅಂಗವಾಗಿ ಅಭಿವೃದ್ದಿ ಆಗಲಿವೆ ಎಂದರು. ದಾಬಸ್ಪೇಟೆ, ಕೊರಟಗೆರೆ, ಮಧುಗಿರಿ, ಪಾವಗಡ ಮಾರ್ಗ ಕಲ್ಯಾಣ ದುರ್ಗಕ್ಕೆ ಕೇಂದ್ರ ಸರಕಾರದಿಂದ ರಾಷ್ಟಿçÃಯ ಹೆದ್ದಾರಿಯ ರೂಪುರೇಷು ಸಿದ್ದವಾಗಿದೆ. ಇದು ನಿಮ್ಮ ಮತದ ಶಕ್ತಿಯಾಗಿದ್ದು ಸೋವಣ್ಣನ ಕೂಡುಗೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಒಂದಾಗಿ ಕೆಲಸ ಮಾಡಿದರೇ ಮಾತ್ರ ಅಭಿವೃದ್ದಿ ತಾನಾಗಿಯೇ ಆಗಲಿದೆ ಎಂದು ಹೇಳಿದರು.…
ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬAಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ. ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ ೧೨೦೦ ವಿಶ್ವವಿದ್ಯಾಲಯಗಳು ಇದ್ದು, ೪೩,೦೦೦ ಕಾಲೇಜುಗಳು ಹಾಗೂ ೪೩ ದಶಲಕ್ಷ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದು ದೇಶದ ಬಹುದೊಡ್ಡ ಪರಿವರ್ತನೆ. ಆದರೆ ಜಾಗತಿಕವಾಗಿ ಉದ್ಯಮ ಮತ್ತು ಶಿಕ್ಷಣದ ನಡುವೆ ಅಂತರವಿದ್ದು, ತಾವು ಕೊಡುವ ಶಿಕ್ಷಣ ಉದ್ಯಮಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು. ಇದಕ್ಕಾಗಿ ಬೋಧಕರ ಕೊರತೆ ನೀಗಿಸಬೇಕು ಹಾಗೂ ಪ್ರಾದೇಶಿಕವಾಗಿ ಸಮಾನಾಂತರ ಬೋಧನೆಗೆ ವ್ಯವಸ್ಥೆ ಕಲ್ಪಿಸಬೇಕು. ಈ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಅವಶ್ಯಕತೆಯಿದೆ ಎಂದು ಅವರು ತಿಳಿಸಿದರು. ಜಗತ್ತಿನ ಯಾವುದೇ…
ತುರುವೇಕೆರೆ: ರೋಟರಿ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದು ಈ ವರ್ಷ ಸುಮಾರು ೧೨೦೦ ಹೆಚ್ಚು ಗಿಡ ನೆಡುವ ಗುರಿ ಹೊಂದಲಾಗಿದೆ ಎಂದು ರೋಟರಿ ಕ್ಲಬ್ ನೂತನ ಅದ್ಯಕ್ಷ ಸಂತೋಷ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ೨೦೨೬-೨೭ ನೇ ಸಾಲಿನ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಕ್ಲಬ್ ಸ್ಥಾಪನೆಯಾಗಿ ೧೨ವರ್ಷ ಪೂರೈಸಿದ್ದು ಅದರ ಸವಿನೆನಪಿಗಾಗಿ ೧೨ ಸೇವಾ ಕಾರ್ಯ ಕೈಗೊಳ್ಳಲಾಗಿದೆ. ತುರ್ತು ವೈದ್ಯಕೀಯ ಹೆಚ್ಚಿನ ತುರ್ತು ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆಯನ್ನು ಆರಂಭಿಸಲಾಗುತ್ತಿದೆ. ನೂತನ ಆಂಬುಲೆನ್ಸ್ ನ್ನು ಖ್ಯಾತ ಹೃದಯ ರೋಗ ತಜ್ಞ ಹಾಗೂ ಸಂಸದರಾದ ಡಾ. ಸಿಎನ್ ಮಂಜುನಾಥ್ ಆಗಮಿಸಿ ಚಾಲನೆ ನೀಡಲಿದ್ದಾರೆ ಎಂದರು. ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉನ್ನತ ಸಾದನೆ ಮಾಡಿದ ತಾಲೂಕಿನ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಶಾಲಾ…
ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಐ.ಆರ್ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲಾ ಕಾಂಗ್ರೆಸ್ನ ಮಂಚೂಣಿ ಘಟಕಗಳ ಅಧ್ಯಕ್ಷರುಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳ ಸಭೆಯಲ್ಲಿ ಡಿಸಿಸಿ ಅಧ್ಯಕ್ಷ ಜಿ.ಚಂದ್ರ ಶೇಖರ ಗೌಡ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ, ಭಾರತ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕೇವಲ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಿಗೆ ಅನ್ವಯವಾಗದೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಇದೇ ಮತದಾರರ ಪಟ್ಟಿ ಬಳಕೆ ಮಾಡುವುದರಿಂದ ಕಾಂಗ್ರೆಸ್ ಮುಖಂಡರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಒಂದೇ ಒಂದು ಆರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಸರಕಾರ ನಮಗೇನು ಮಾಡಿಲ್ಲ ಎಂದು ನಿರ್ಲಕ್ಷ ತೋರಿದರೆ, ಪಕ್ಷದ ಜೊತೆಗೆ ನೀವು ಸಹ ಅಧಿಕಾರದಿಂದ ದೂರ ಉಳಿಯಬೇಕಾಗುತ್ತದೆ.ಹಾಗಾಗಿ ಎಸ್.ಸಿ, ಎಸ್.ಟಿ, ಓಬಿಸಿ, ಕಾರ್ಮಿಕ, ವಕೀಲರ ಸೆಲ್ಗಳ ಮುಖಂಡರು ಹಾಗೂ ಮಹಿಳಾ ವಿಭಾಗ, ರೈತ ವಿಭಾಗ, ನೆಹರು ಬಾಲಮಂಚ್ ಸೇರಿದಂತೆ…
ಚಿಕ್ಕನಾಯಕನಹಳ್ಳಿ: ತಾಲೂಕಿನ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರುಗಳು ಹಾಗೂ ದಿನಗುತ್ತಿಗೆ ನೌಕರರ ನಡುವಿನ ವೈಮನಸ್ಯದಿಂದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಪರಿಸರ ಅದಕ್ಕೆ ಇದೆ ಎಂದು ರೈತ ಸಂಘದ ಹಾಗೂ ಸುಭಾಷ್ ಚಂದ್ರ ಬೋಸ್ ಆಟೋ ಚಾಲಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಜಿಲ್ಲಾ ಆಯುಷ್ ಅಧಿಕಾರಿಗೆ ನೀಡಿದ ದೂರಿನ ಅನ್ವಯ ಇಂದು ಚಿಕ್ಕನಾಯಕನಹಳ್ಳಿ ಆಯುರ್ವೇದ ಆಸ್ಪತ್ರೆಗೆ ಬೇಟಿ ನೀಡಿ ದೂರುದಾರರ ಸಮಕ್ಷಮ ಸಭೆ ನಡೆಸಲಾಯಿತು. ದೂರುದಾರರಾದ ಮಧುಸೂದನ್ ಮಾತನಾಡಿ ವೈದ್ಯರು ಹಾಗೂ ಸಿಬ್ಬಂದಿಗಳ ನಡುವಿನ ಸಮನ್ವಯ ಕೊರತೆಯಿಂದಾಗಿ ಸ್ಥಳೀಯ ರೋಗಿಗಳಿಗೆ ಚಿಕಿತ್ಸೆ ಸಮರ್ಪಕವಾಗಿ ಸಿಗುತ್ತಿಲ್ಲ ಎಂದು ಆರೋಪಿಸಿದರು. ಗೈರು ಹಾಜರಾಗಿರುವ ವೈದ್ಯ ವೀಣಾಕುಮಾರಿ ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಾಯಿಸಿದರು. ಸುಮಾರು ಏಳೆಂಟು ವರ್ಷಗಳಿಂದ ಇರುವಂತ ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವಂತೆ ಹಾಗೂ ಆಸ್ಪತ್ರೆಯ ಸ್ವಾಸ್ಥ÷್ಯ ಕಾಪಾಡುವಂತೆ ಮನವಿ ಮಾಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾಕ್ಟರ್ ಗಂಗಾಧರ್ ದೂರು ಸ್ವೀಕರಿಸಿ ಮಾತನಾಡುತ್ತಾ ಈಗಾಗಲೇ ತನಿಕಾ ತಂಡವನ್ನು ರಚಿಸಲಾಗಿದ್ದು ಈ ವಾರದಲ್ಲಿ ಆಸ್ಪತ್ರೆಗೆ ಭೇಟಿ…

