ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಕರ್ನಾಟಕ ಬ್ಯಾಂಕ್, ವಿವೇಕಾನಂದ ರಸ್ತೆ ಶಾಖೆಯಲ್ಲಿ ಉತ್ತಮ ಆಡಳಿತ ವಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿಯ ಅಭಿಯಾನ ವ್ಯವಸ್ಥಾಪಕ ದೊಡ್ಡವಲಪ್ಪ ಮಾತನಾಡಿ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿ.ಎಂ. ಸ್ವ-ನಿಧಿ) ಯೋಜನೆಯನ್ನು ೨೦೨೦ರಲ್ಲಿ ಕರೋನ ಲಾಕ್ ಡೌನ್ ಸಮಯದಲ್ಲಿ ಕೇಂದ್ರ ಸರ್ಕಾರ ಜಾರಗೊಳಿಸಿತ್ತು. ಬೀದಿ ವ್ಯಾಪಾರಿಗಳು ಬ್ಯಾಂಕ್ ಮೂಲಕ ಮೊದಲನೇ ಹಂತದಲ್ಲಿ ರೂ.೧೦,೦೦೦/- ಸಾಲ ಪಡೆದು ಒಂದು ವರ್ಷದೊಳಗೆ ಮರುಪಾವತಿ ಮಾಡಿದ ನಂತರ ಎರಡನೇ ಹಂತದಲ್ಲಿ ರೂ.೨೦,೦೦೦/- ಸಾಲ ಪಡೆಯಬ ಹುದು, ಎರಡನೇ ಹಂತದ ಸಾಲವನ್ನು ಹದಿನೆಂಟು ತಿಂಗಳಲ್ಲಿ ಮರುಪಾವತಿ ಮಾಡಿ ಮೂರನೇ ಹಂತದಲ್ಲಿ ರೂ.೫೦೦೦೦/- ಸಾಲ ಪಡೆಯಬಹುದು, ಶೇ.೭ ರಷ್ಟು ಬಡ್ಡಿ ಸಹಾಯಧನ ಹಾಗೂ ಡಿಜಿಟಲ್ ವ್ಯವಹಾರ ಮಾಡಿದರೆ ಪ್ರತಿ ತಿಂಗಳೂ ಪ್ರತ್ಸಾಹ ಧನ ರೂ.೧೦೦/- ರವರೆಗೆ ಪಡೆಯಬಹುದಾಗಿದೆ. ಪ್ರಸ್ತುತ ಡಿಸೆಂಬರ್ ೨೦೨೪ಕ್ಕೆ ಯೋಜನೆ ಮುಕ್ತಾಯವಾಗಿತ್ತು. ಪ್ರಸ್ತುತ…
Author: News Desk Benkiyabale
ತುಮಕೂರಿನ: ಸಿದ್ದಾರ್ಥ ಪ್ರಥಮ ದರ್ಜೆ ವಾಣಿಜ್ಯ ವಿಭಾಗದ ವತಿ ಯಿಂದ ಆಯೋಜಿಸಲಾದ ಯುವ ಸಿದ್ದಾರ್ಥ-೨೫ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ನಂತರ ತುಮಕೂರು ಜಿಲ್ಲೆಯ ಪಿಯು ಉಪ ನಿರ್ದೇಶಕರಾದ ಡಾ. ಬಾಲ ಗುರುಮೂರ್ತಿ ರವರು ವಾಣಿಜ್ಯ ವಿದ್ಯಾರ್ಥಿ ಗಳಿಗೆ ಶಿಕ್ಷಣದ ಗುಣಮಟ್ಟದ ಜೊತೆ ಕೌಶಲ್ಯ ಜ್ಞಾನ ಹೆಚ್ಚಿಸಲು ಉತ್ತಮ ವೇದಿಕೆಯಾಗಿದ್ದು ಇಂತಹ ಸ್ಪರ್ಧಾತ್ಮಕ ಕಾರ್ಯಕ್ರಮ ಅತ್ಯಂತ ಅಗತ್ಯ ಎಂದು ತಿಳಿಸಿದರು. ಅತಿಥಿಯಾಗಿ ಆಗಮಿಸಿದ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾದ ಬಿ. ನಂಜು0ಡಪ್ಪ ರವರು ಮಾತನಾಡುತ್ತಾ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜು ಸದಾ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದು ವಿದ್ಯಾರ್ಥಿಗಳಿಗೆ ಉತ್ತಮ ಮೌಲ್ಯಗಳನ್ನು ಬೆಳೆಸಿ ಸಮಾಜಕ್ಕೆ ಒಳ್ಳೆಯ ನಾಗರಿಕರನ್ನು ಸದಾ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಪಿಯು ಉಪ ನಿರ್ದೇ ಶಕರಾದ ಡಾ. ಬಾಲ ಗುರುಮೂರ್ತಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ ಹೇಮಲತಾ,…
ಮಧುಗಿರಿ: ಸ್ನೇಹ ಸಮ್ಮಿಲನ ಸಮಾರಂಭಗಳು ನಮಗೆ ಶಾಲೆಯ ಬಗ್ಗೆ ಗೌರವ ಹೆಚ್ಚುವಂತೆ ಮಾಡುತ್ತದೆ. ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಪಿ. ರಾಮಕೃಷ್ಣಪ್ಪ ಅಭಿಪ್ರಾಯ ಪಟ್ಟರು. ತಾಲೂಕಿನ ದೊಡ್ಡೇರಿ ಹೋಬಳಿ ದಬ್ಬೇಗಟ್ಟ ಸರ್ಕಾರಿ ಫ್ರೌಢಶಾ ಲೆಯಲ್ಲಿ ೨೦೦೨- ೦೩ ನೇ ಸಾಲಿನ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಸ್ನೇಹಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ೧೯೯೩ ರಲ್ಲಿ ಈ ಶಾಲೆಯು ಆರಂಭವಾಯಿತು, ಕೊಠಡಿಗಳ ಕೊರತೆಯಿಂದ ಗುಡಿಸಿಲಿನಲ್ಲಿ ಪಾಠಮಾಡುತ್ತಿದ್ದೆವು. ಶಾಲೆ ಆರಂಭವಾದಾಗಿನಿ0ದ ೨೧ ವರ್ಷಗಳ ಕಾಲ ಒಂದೇ ಶಾಲೆಯಲ್ಲಿ ಸೇವೆಸಲ್ಲಿಸಿದ್ದೇನೆ. ಈ ಶಾಲೆಯ ನೆನಪುಗಳು ಎಂದಿಗೂ ನನ್ನಿಂದ ಅಳಿಸಲಾಗುವುದಿಲ್ಲ, ಅಂದಿನ ಕಾಲದಲ್ಲಿ ನಮ್ಮ ಶಾಲೆಗೆ ಪ್ರವೇಶಾತಿ ಪಡೆಯಲು ಪೈಪೋಟಿ ಇತ್ತು, ಕಾರಣ ಇಲ್ಲಿನ ಎಲ್ಲಾ ಸಿಬ್ಬಂದಿಗಳು ಪೈಪೋಟಿಯಿಂದ ಪಾಠ ಮಾಡುತ್ತಿದ್ದರು. ಮುಂದೆಯೂ ದಬ್ಬೇಗಟ್ಟ ಶಾಲೆಯ ಒಳ್ಳೆಯ ಹೆಸರು ಉಳಿಯಬೇಕು ಎಂದರು. ಗಣಿತ ಶಿಕ್ಷಕ ಗುರುಪ್ರಸಾದ್ ಮಾತನಾಡಿ ನನ್ನ ವೃತ್ತಿ ಜೀವನದಲ್ಲೊಂದು ನನಗೆ ಹೆಗ್ಗುರುತು ನೀಡಿದ ಶಾಲೆ ಎಂದರೆ…
ಮಧುಗಿರಿ: ಪಟ್ಟಣದ ಐತಿಹಾಸಿಕ ಸುಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ವೃಕುಂಠ ಏಕಾದಶಿ ಪ್ರಯುಕ್ತ ಏರ್ಪಡಿಸಿದ್ದ ದ್ವಾರದರ್ಶನ ಅಪಾರ ಭಕ್ತಾಧಿಗಳ ಸಮ್ಮುಖದಲ್ಲಿ ಬಾರಿ ವಿಜೃಂಭಣೆಯಿ0ದ ನೆರವೇರಿತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ದಂಪತಿ, ಎಂಎಲ್ಸಿಆರ್ ರಾಜೇಂದ್ರ ,ಹಿರಿಯ ಐಎಎಸ್ ಅಧಿಕಾರಿ ಉಮಾಶಂಕರ್ ,ಐಎಎಸ್ ಅಧಿಕಾರಿ ಮಧುಗಿರಿ ತಾಲೂಕಿನ ಗೋವಿಂದರಾಜು,ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಎಸ್ ಪಿ ಅಶೋಕ್ ಕೆ ವಿ ಜಿ.ಪಂ ಸಿಇಒ ಪ್ರಭು, ಮಾಜಿ ಶಾಸಕ ಎಂ.ವಿ .ವೀರಭದ್ರಯ್ಯ, ಉಪವಿಭಾಗಿಧಾರಿ ಗೋಟೂರು ಶಿವಪ್ಪ, ತಹಸೀಲ್ದಾರ್ ಎಚ್ ಶ್ರೀನಿವಾಸ್ ,ತಾ.ಪಂ ಇ ಓ ಲಕ್ಷ್ಮಣ್, ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಹನುಮಂತ ರಾವ್, ಕೊರಟಗೆರೆಯ ಎಚ್. ಮಹದೇವ್ ,ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಡಾ.ಎಂ.ಜಿ.ಶ್ರೀನಿವಾಸಮೂರ್ತಿ, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾವಿರಾರು ಭಕ್ತಾದಿಗಳು ದೇವರ ದರ್ಶನ ಪಡೆದು ಪುನೀತರಾದರು. ಭಾನುವಾರ ಸಂಜೆ ದೇವರಿಗೆ ಅಭಿಷೇಕ ನಡೆಯಿತು. ಸೋಮವಾರ ಮುಂಜಾನೆ ಉತ್ಸವ ಮೂರ್ತಿಯನ್ನು ದೇಗುಲದ ಸುತ್ತ ಮೂರು ಬಾರಿ ಪ್ರಕಾರೋತ್ಸವ ಮಾಡಿ…
ವೈ.ಎನ್.ಹೊಸಕೋಟೆ: ಒಂಟಿ ಮಹಿಳೆಯರಿಗೆ ಬೈಕ್ನಲ್ಲಿ ಡ್ರಾಪ್ ಕೊಡುವುದಾಗಿ ನಂಬಿಸಿ ಕರೆದುಕೊಂಡು ಹೋಗಿ ಚಿನ್ನಾಭರಣಗಳನ್ನು ಸುಲಿಗೆ ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಆರೋಪಿ ಯನ್ನು ಬಂಧಿಸಿ, ಆತನಿಂದ ರೂ. ೩.೨೦ ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಬೈಕನ್ನು ಪೋಲೀಸರು ವಶ ಪಡಿಸಿಕೊಂಡಿದ್ದಾರೆ. ಆರೋಪಿಯು ಆಂಧ್ರಪ್ರದೇಶ ಅನಂತಪುರ0 ಪಟ್ಟಣ ಸಮೀಪದ ಸೋಮಲದೊಡ್ಡಿ ಗ್ರಾಮದ ಬಂಡಿ ಸುಬ್ರಮಣ್ಯಂ ಆಗಿದ್ದು ಹಣ ಗಳಿಕೆಗೆ ಈ ದರೋಡೆ ಮಾರ್ಗವನ್ನು ಅನುಸರಿಸಿರುವುದು ತಿಳಿದು ಬಂದಿದೆ. ದಿನಾಂಕ ೨೩-೧೧-೨೦೨೫ ರಂದು ಸೂಲನಾಯಕನಹಳ್ಳಿ ಗೇಟ್ನಿಂದ ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ದುರ್ಗಮ್ಮ ಎಂಬಾಕೆಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಬೈಕಿನಲ್ಲಿ ಹತ್ತಿಸಿಕೊಂಡು ರಸ್ತೆ ಪಕ್ಕದ ಜಮೀನಿನೊಳಗೆ ಬೈಕನ್ನು ಓಡಿಸಿಕೊಂಡು ಹೋಗಿ, ಆಕೆಯ ಚಿನ್ನದ ವಡವೆಗಳನ್ನು ಬಿಚ್ಚಿ ಕೊಡುವಂತೆ ಹೆದರಿಸಿ, ನಿರಾಕರಿಸಿದಾಗ ಕಿವಿಯಲ್ಲಿನ ಓಲೆಗಳನ್ನು ಕಿತ್ತು ರಕ್ತ ಗಾಯಪಡಿಸಿ ಪರಾರಿಯಾಗಿದ್ದನು. ಅದರಂತೆ ದಿನಾಂಕ ೦೮-೧೨-೨೦೨೫ ರಂದು ಪಳವಳ್ಳಿ ಕಟ್ಟೆಯ ಮೇಲೆ ಊರಿಗೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದ ದೊಡ್ಡಹಳ್ಳಿಯ ಗುಂಡಮ್ಮ ಎಂಬುವರನ್ನು ಬೈಕಿನಲ್ಲಿ ಡ್ರಾಪ್ ಕೊಡುವುದಾಗಿ ನಂಬಿಸಿ ಕೂರಿಸಿಕೊಂಡು ರಸ್ತೆ…
ಹುಳಿಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸೋರಲಮಾವು ಶ್ರೀ ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ ಪೂಜಾ ಕಾರ್ಯಕ್ರಮ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಚಿಕ್ಕನಾಯಕನಹಳ್ಳಿ ಮಾದಿಹಳ್ಳಿ ಹಿರೇಮಠದ ಶ್ರೀ ಚನ್ನಮಲ್ಲಿ ಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಮನುಷ್ಯನಿಗೆ ಬದುಕಿ ಬಾಳ ಬೇಕಾದರೆ ಧರ್ಮದ ಆಚರಣೆಗೆ ಧರ್ಮದ ಅವಶ್ಯಕತೆ ಬಹಳಷ್ಟು ಇದೆ ಅದನ್ನು ಆಚರಣೆಗೆ ತರಬೇಕು. ನಾವು ಧರ್ಮವನ್ನು ರಕ್ಷಣೆ ಮಾಡಿದರೆ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತದೆ ಎಲ್ಲೂ ಕೈ ಬಿಡಲ್ಲ. ಆದುನಿಕ ಯುಗದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗದಂತಹ ವಾತಾವರಣ ನಿರ್ಮಾಣವಾಗಿದೆ. ಇಂತಹ ಕಾಲಘಟ್ಟದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯ ಯೋಜನೆ ದಾರಿ ದೀಪವಾಗುತ್ತಿದೆ ಎಂದರು. ಗ್ರಾಪಂ ಸದಸ್ಯರಾದ ಸಿದ್ದಲಿಂಗಸ್ವಾಮಿ ಮಾತನಾಡಿ ಧರ್ಮಸ್ಥಳ ಸಂಸ್ಥೆ ಮಾಡದ ಕೆಲಸ ಇಲ್ಲ. ಗ್ರಾಮೀಣ ಮಟ್ಟದ ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸುವಲ್ಲಿ ನೇರವಾಗಿದೆ. ಆರ್ಥಿಕ ಸ್ವಾವಲಂಬನೆ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದೆ. ಆರ್ಥಿಕ ಶಿಸ್ತು ಕಲ್ಪಿಸಿ ಕೊಟ್ಟಿದೆ ಎಂದು ತಿಳಿಸಿದರು. ಗ್ರಾ.ಪಂ ಅಧ್ಯಕ್ಷರಾದ ಚಂದ್ರಮ್ಮ,…
ಮಧುಗಿರಿ: ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿಯಾಗಲಿದೆ ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ತಿಳಿಸಿದರು. ಪಟ್ಟಣದ ಅದ್ವೈತ ಆಂಗ್ಲ ಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡುತ್ತಾ ಪ್ರಾಥಮಿಕ ಹಂತದಲ್ಲೇ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಬೆಳೆಸಬೇಕಾಗಿದೆ ಅದರಲ್ಲೂ ಗ್ರಾಮಾಂತರ ಪ್ರದೇಶಗಳ ಶಾಲೆಗಳಲ್ಲಿ ಇಂತಹ ವಸ್ತು ಪ್ರದರ್ಶನಗಳನ್ನು ಏರ್ಪಡಿಸಿ ಆ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.. ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎನ್ ಹನುಮಂತರಾಯಪ್ಪ ಮಾತನಾಡಿ ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಲು ಸಹಾಯಕಾರಿಯಾಗಲಿದೆ ಜೊತೆಗೆ ವಿಜ್ಞಾನ ವಸ್ತು ಪ್ರದರ್ಶನ ಅನುಭವದ ಕಲಿಕೆ ಆಗಲಿದೆ ಇದರಿಂದ ಮಕ್ಕಳಲ್ಲಿನಾ ಪ್ರತಿಭೆ ಗುರುತಿಸಲು ಸಹಾಯಕಾರಿಯಾಗಲಿದೆ ಇದೇ ಅಲ್ಲದೆ ಮುಂದಿನ ಪೀಳಿಗೆಗೆ ವಿಜ್ಞಾನದ ಬಗ್ಗೆ ಆಸಕ್ತಿ ವಹಿಸಲು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಮತ್ತು ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕಾರಿಯಾಗಲಿದೆ ಎಂದರು. ಸAಸ್ಥೆಯ ಕಾರ್ಯದರ್ಶಿ ಹಾಗೂ ಪುರಸಭಾ ಮಾಜಿ ಅಧ್ಯಕ್ಷ ಲಾಲಾ ಪೇಟೆ ಮಂಜುನಾಥ್ ಮಾತನಾಡಿ ವಿಜ್ಞಾನದ…
ಸಿರಾ: ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ್ಯುವೆಲರಿ ಅಂಗಡಿಗಳು, ಹೋಟೆಲ್ಗಳು ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಿಗಾಗಿ ಜಾಗೃತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ದರೋಡೆ, ಸುಲಿಗೆ ಹಾಗೂ ಕಳವು ಪ್ರಕರಣಗಳ ಕುರಿತು ಮಾಹಿತಿ ನೀಡಿ, ಇಂತಹ ಅಪರಾಧಗಳನ್ನು ತಡೆಯಲು ಅಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಸೈರನ್ ವ್ಯವಸ್ಥೆ ಅಳವಡಿಸಿ ಸದಾ ಕಣ್ಗಾವಲು ಇರಿಸಿಕೊಳ್ಳುವಂತೆ ಸೂಚನೆ ನೀಡಲಾಯಿತು. ಇದಲ್ಲದೆ, ಇತ್ತೀಚಿನ ಆರ್ಬಿಐ ಹಾಗೂ ಪೊಲೀಸ್ ಇಲಾಖೆ ಮಾರ್ಗಸೂಚಿಗಳ ಅನುಸಾರ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಂಗಡಿ ಮಾಲೀಕರಿಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬ0ದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು. ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಪೊಲೀಸ್ ಇಲಾಖೆ ಸದಾ ಭದ್ರತೆಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.
ತುಮಕೂರು: ಸಿರಿಧಾನ್ಯಗಳು ಪೋಷಕಾಂ ಧಗಳ ಸಂಪತ್ತಾಗಿದ್ದು, ಮಧುಮೇಹದಂತಹ ರೋಗಗ ಳಿಗೆ ಮದ್ದಿನಂತೆ ಕೆಲಸ ಮಾಡುತ್ತವೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮಣ್ ಕಲ್ಲಣ್ಣನವರ್ ಅಭಿಪ್ರಾಯಪಟ್ಟರು. ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಕೃಷಿ ಇಲಾಖೆ, ವತಿಯಿಂದ ಸಿರಿಧಾನ್ಯ ಉತ್ಪನ್ನ ಗಳ ಕುರಿತು ಗ್ರಾಹಕರಿಗೆ ಜಾಗೃತಿ ಮೂಡಿಸಲು ಸಿರಿಧಾನ್ಯ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನವಣೆ, ಸಾಮೆ, ಕೊರಲೆ ಖಾದ್ಯಗಳು ಮಧುಮೇಹ ರೋಗಿಗಳಿಗೆ ಅಮೃತ ಸಮಾನ ವಾಗಿದ್ದು, ರಕ್ತದಲ್ಲಿನ ಗ್ಲುಕೋಸ್ ನಿಯಂತ್ರಣಕ್ಕೆ ಸಹಕಾರಿಯಾಗುತ್ತವೆ ಎಂದರಲ್ಲದೆ, ರಾಗಿ ಹೆಚ್ಚಿನ ಕ್ಯಾಲ್ಷಿಯಂ ಹಾಗೂ ರಂಜಕಾ0ಶ ಹೊಂದಿರುವುದರಿ0ದ ಎಲುಬು ಮತ್ತು ಹಲ್ಲುಗಳನ್ನು ಗಟ್ಟಿಗೊಳಿಸುವುದರೊಂದಿಗೆ ಮಕ್ಕಳ ಮತ್ತು ಮಹಿಳೆಯರ ಆರೋಗ್ಯಕ್ಕೆ ವಿಶೇಷವಾಗಿ ಪ್ರಯೋಜನಕರವಾಗುತ್ತದೆ ಎಂದು ಹೇಳಿದರು. ಸಜ್ಜೆ ಮತ್ತು ಸಾಮೆ ಹೆಚ್ಚಿನ ಕಬ್ಬಿಣದಂಶ ಹೊಂದಿರುವುದರಿ0ದ ರಕ್ತಹೀನತೆ ತಡೆಗಟ್ಟಲು ಸಹಕಾರಿಯಾಗಿ. ಮೆಗ್ನೀಶಿಯಂ, ಬಿ-ಸಂಪುಟದ ವಿಟಮಿನ್ಗಳು ಹಾಗೂ ಕೆಲವೆಡೆ ಪ್ರೋಟೀನ್ ಅಂಶ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ರೋಗನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯಮಾಡುತ್ತವೆ. ಸಿರಿಧಾನ್ಯಗಳ ಕೃಷಿಗೆ ಹೆಚ್ಚಿನ ನೀರಿನ ಅಗತ್ಯವಿಲ್ಲ. ಒಣಬೇಸಾಯದಲ್ಲಿ ಬೆಳೆಯಲು…
ತುಮಕೂರು: ಈಗಿನ ಮಕ್ಕಳಿಗೆ ಮೊಬೈಲ್ ಬಳಕೆಗೆ ದಾಸರಾಗದೆ ಓದುವ ಹವ್ಯಾಸ ಬೆಳೆಸುವುದು ಅಗತ್ಯವಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮಂಗಳವಾರ ಗಾಜಿನ ಮನೆಯ ಸಭಾಂಗಣದಲ್ಲಿ 17 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸನ್ಮಾನ ಮತ್ತು ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಅತಿಯಾದ ಮೊಬೈಲ್ ಬಳಕೆಯಿಂದ ಕೇವಲ ತಾಂತ್ರಿಕ ಜ್ಞಾನ ಬೆಳಸಿಕೊಳ್ಳಬಹುದೇ ಹೊರತು ಮಾನವೀಯ ಸಂಬAಧ ಹಾಗೂ ನೈತಿಕ ಮೌಲ್ಯಗಳಿಂದ ದೂರವಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಹಿಂದಿನ ದಿನಗಳಲ್ಲಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಅಕ್ಕಪಕ್ಕದವರನ್ನು ಪರಿಚಯ ಮಾಡಿಕೊಂಡು ಅನುಭವಗಳನ್ನು ಹಂಚಿಕೊಳ್ಳುವ ಸಂಸ್ಕೃತಿ ಇತ್ತು. ಆದರೆ ಇಂದು ಮೊಬೈಲ್ ಬಳಕೆಯಿಂದಾಗಿ ಮನುಷ್ಯ ಮನುಷ್ಯರ ನಡುವಿನ ಬಾಂಧವ್ಯ ಕ್ಷೀಣಿಸುತ್ತಿದೆ. ಅತಿಯಾದ ಮೊಬೈಲ್ ಬಳಕೆ ಯುವ ಪೀಳಿಗೆಯಲ್ಲಿ ಮಾನಸಿಕ ಮತ್ತು ಸಾಮಾಜಿಕ ಅನಾಹುತಗಳನ್ನು ಸೃಷ್ಟಿಸುತ್ತಿದೆ ಎಂದರು. ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಓದು ಅನಿವಾರ್ಯ. ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸದಿದ್ದರೆ ಭಾಷೆಯ ಉಳಿವು ಕಷ್ಟ…










