ತುಮಕೂರು : ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸನ್ನ ಸಾಧಿಸಲು ಸಾಧ್ಯವಾಗುತ್ತದೆ. ಪ್ರಾಮಾಣಿಕವಾಗಿ ನಿರಂತರ ಸಾಧನೆಯಲ್ಲಿ ತೊಡಗಿಸಿಕೊಂಡರೆ ಸಫಲತೆ ಕಾಣಬಹುದು ಎಂದು ಇಸ್ರೋದ ಮಾಜಿ ಪ್ರಾಜೆಕ್ಟ್ ಇಂಜಿನಿಯರ್ ಹಾಗೂ ವಿಜ್ಞಾನಿ ಕೆ.ಟಿ. ಸುಂದರಮೂರ್ತಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು. ತುಮಕೂರಿನ ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 18ನೇ ಬ್ಯಾಚ್ನ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಹಳೆ ವಿದ್ಯಾರ್ಥಿಸಂಘದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನವೋದಯ ವಿದ್ಯಾಲಯದ ಕಾರ್ಯ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಹನುಮಂತ ರೆಡ್ಡಿ ಅವರು ಮಾತನಾಡಿ, ಶಾಲೆಯ ಸುಂದರ ಪರಿಸರವನ್ನು ಅಂದಗೆಡದAತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಿಸಿದರು. ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಶ್ರೀಕಲಾರವರು ಪ್ರಾಸ್ತಾವಿಕವಾಗಿ ಮಾತನಾಡಿ ಹಳೆ ವಿದ್ಯಾರ್ಥಿಗಳ 18 ನೇ ಬ್ಯಾಚಿನ ವಿದ್ಯಾರ್ಥಿಗಳು 2024 25 ನೇ ಸಾಲಿನಲ್ಲಿ ಹಮ್ಮಿಕೊಂಡ ವೃತ್ತಿ ಮಾರ್ಗದರ್ಶನ ಶಿಬಿರ, ವೈದ್ಯಕೀಯ ಶಿಬಿರ ಮೊದಲಾದ…
Author: News Desk Benkiyabale
ತುಮಕೂರು: ನಮ್ಮ ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ನ್ಯಾಯವಾದಿ, ಸುಫಿಯಾ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್. ರಮೇಶ್ ಪ್ರತಿಪಾದಿಸಿದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜು ಸಮಾಜಕಾರ್ಯ ವಿಭಾಗ, ವರದಕ್ಷಿಣೆ ವಿರೋಧಿ ವೇದಿಕೆ-ಸಾಂತ್ವನ ಕೇಂದ್ರದ ವತಿಯಿಂದ ವಿಶ್ವ ವಿದ್ಯಾಲಯದ ಚಿವುಕಲ ಸಭಾಂಗಣದಲ್ಲಿ ಆಯೋಜಿಸಿದ್ದ, ಮಾನವ ಹಕ್ಕುಗಳ ದಿನಾಚರಣೆ ವಿಚಾರಗೋಷ್ಟಿ- ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಂತಿ ಸಹಬಾಳ್ವೆಗೆ ಒತ್ತು ಕೊಡುವುದಕ್ಕಿಂತ ಅಶಾಂತಿ, ಅಸಹನೆಗೆ ಒತ್ತು ನೀಡುವವರ ಸಂಖ್ಯೆ ಸಮಾಜದಲ್ಲಿ ಹೆಚ್ಚುತ್ತಿದೆ. ಧರ್ಮ ಜಾತಿಗಳನ್ನು ಮುಂದಿಟ್ಟುಕೊAಡು ಕಲಹಗಳಾಗುತ್ತಿವೆ. ಮಾರಣ ಹೋಮಗಳು ನಡೆಯುತ್ತಿವೆ. ಇವುಗಳ ಬಗ್ಗೆ ಯುವ ಜನತೆ ಎಚ್ಚರಿಕೆಯಿಂದ ಇರಬೇಕು ಎಂದರು. ನಮ್ಮ ಸಂವಿಧಾನವು ಘನತೆಯ ಹಕ್ಕನ್ನು ಪ್ರತಿಪಾದಿಸಿದೆ. ಆದರೆ ಒಟ್ಟಾರೆ ಸಮಾಜದಲ್ಲಿ ಅಂತಹ ವಾತಾವರಣವೇ ಕಾಣುತ್ತಿಲ್ಲ. ಆರೋಗ್ಯ ಸಮಸ್ಯೆ ಸುಧಾರಿಸಿಲ್ಲ. ಎಲ್ಲರಿಗೂ ಆರೋಗ್ಯ ವ್ಯವಸ್ಥೆ ಕೈಗೆಟುಕುತ್ತಿಲ್ಲ. ವಿದ್ಯೆ ಕಲಿತವರಿಗೆ ಉದ್ಯೋಗ ಸಿಗುತ್ತಿಲ್ಲ. ಇದರಿಂದಾಗಿ ಭ್ರಮನಿರಸನಗೊಂಡ ಯುವಕರು ಅಡ್ಡದಾರಿ…
ತುಮಕೂರು: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾಗಿದ್ದ ಎಸ್.ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಇವರ ನಿಧನಕ್ಕೆ ತುಮಕೂರಿನಲ್ಲಿಯೂ ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ಬಿಜಿಎಸ್ ವೃತ್ತದಲ್ಲಿ ಎಸ್ ಎಂ ಕೃಷ್ಣ ಅಭಿಮಾನಿಗಳು ಸೇರಿದಂತೆ ವಿವಿಧ ಮುಖಂಡರು ಜಾತ್ಯಾತೀತವಾಗಿ ಎಸ್ ಎಂ ಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂತಾಪ ಸೂಚಿಸಿದರು. ಸಂತಾಪ ಸೂಚನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಚ್.ನಿಂಗಪ್ಪ ಮಾತನಾಡಿ, ‘ಎಸ್ ಎಂ ಕೃಷ್ಣ ಅವರು ಓರ್ವ ಅಜಾತ ಶತ್ರು ಆಗಿದ್ದರು. ಹಣಕಾಸು ಸಚಿವರಾಗಿ, ರಾಜ್ಯದ ಸಿಎಂ ಆಗಿ, ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ತುಂಬಾ ನೋವು ಉಂಟುಮಾಡಿದೆ’’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಂತಾಪ ಸಭೆಯಲ್ಲಿ ಮುಖಂಡರಾದ ಸಿದ್ದಲಿಂಗೇಗೌಡ, ಹನುಮಂತೇಗೌಡ, ಗಿರೀಶ್, ದೊಡ್ಡಲಿಂಗಪ್ಪ, ವಿಜಯ್ ಗೌಡ, ರವೀಗೌಡ, ಮಂಜುಳಾಶಿವರಾಜ್ ಸೇರಿದಂತೆ ಇತರೆ ಅಭಿಮಾನಿಗಳು ಇದ್ದರು.
ತುಮಕೂರು: ವಿಕಲ ಚೇತನರು ತಮ್ಮ ವಿಕಲತೆಯನ್ನು ಮೆಟ್ಟಿನಿಂತು ಆತ್ಮಬಲ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವ ಛಲ ರೂಢಿಸಿಕೊಳ್ಳಿ. ತಮ್ಮ ಅಂಗವೈಫಲ್ಯವನ್ನು ಸವಾಲಾಗಿ ಸ್ವೀಕರಿಸಿ ಸಾಧಿಸಿರಿ. ಈ ಪ್ರಯತ್ನದಲ್ಲಿ ಹಲವರು ಯಶಸ್ವಿಯಾಗಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಮಹಾಲಕ್ಷಿö್ಮ ಬಡಾವಣೆಯ ದಾರಿದೀಪ ಟ್ರಸ್ಟ್ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ದೇವರು ಒಂದನ್ನು ಕಿತ್ತುಕೊಂಡರೆ ಇನ್ನೊಂದನ್ನು ಕೊಡುತ್ತಾನೆ ಎನ್ನುವಂತೆ ವಿಕಲಚೇತನರ ಅಂಗವನ್ನು ಕಿತ್ತುಕೊಂಡರೆ ಅವರಲ್ಲಿ ಅಗಾಧವಾದ ಬುದ್ಧಿಶಕ್ತಿ, ನೈತಿಕ ಬಲವನ್ನು ನೀಡಿರುತ್ತಾನೆ. ಅದರ ಮೂಲಕ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ ಎಂದರು. ವಿಕಲ ಚೇತನರು ಯಾರಿಗೂ ಹೊರೆಯಲ್ಲ, ಅವರಿಂದ ಸಮಸ್ಯೆಯೂ ಇಲ್ಲ. ಆದರೆ ಎಲ್ಲಾ ಅಂಗಗಳು ಚೆನ್ನಾಗಿದ್ದು ಮನಸನ್ನು ವಿಕೃತಗೊಳಿಸಿಕೊಂಡಿರುವ ಮನೋವಿಕಲರಿಂದ ಸಮಾಜಕ್ಕೆ ಅಪಾಯವೇ ಹೆಚ್ಚು. ಅನುಕೂಲ ಇರುವವರು ವಿಕಲಚೇತನರಿಗೆ ನೆರವಾಗಬೇಕು. ತುಮಕೂರಿನಲ್ಲಿ ಸಹಾಯಾಸ್ತ ಚಾಚುವವರಿಗೆ ಕೊರತೆಯಿಲ್ಲ, ಸಹಾಯದ ಮೂಲಕ ಅವರ ಆತ್ಮವಿಶ್ವಾಸ ಹೆಚ್ಚಿಸಲಿ, ಪರಸ್ಪರ ನೆರವಾಗುವ ಮೂಲಕ ಸಮಾಜದಲ್ಲಿ ಸೌಹಾರ್ದತೆ,…
ತುಮಕೂರು: ಮಾನಸಿಕ ಏಕತೆಯ ತತ್ತ÷್ವದಿಂದ ರಾಮಾಯಣ ಮಹಾಕಾವ್ಯ ವಿಶ್ವ ಕಥನವಾಯಿತು. ಇವತ್ತಿಗೆ ಬೇಕಾದ ರಾಜಕೀಯ ನೈತಿಕತೆಯ ಪಾಠವನ್ನು, ಜೀವನ ಮೌಲ್ಯವನ್ನು ರಾಮಾಯಣ ಸಾರುವುದರಿಂದ ‘ರಾಮಾಯಣ ಮರುಹುಟ್ಟುಗಳ ಮಹಾಕಾವ್ಯ’ವಾಗಿ ನಮಗೆಲ್ಲ ಕಾಣುತ್ತದೆ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಇಂಗ್ಲಿಷ್ ಸಾಹಿತ್ಯ ಅಧ್ಯಯನ ವಿಭಾಗ ಹಾಗೂ ಡಿವಿಜಿ ಕನ್ನಡ ಅಧ್ಯಯನ ಕೇಂದ್ರವು ಜಂಟಿಯಾಗಿ ಹಮ್ಮಿಕೊಂಡಿರುವ ‘ರಾಮಾಯಣಂಗಳ್: ರಾಮಾಯಣವನ್ನು ಅರ್ಥಮಾಡಿಕೊಳ್ಳುವ ಬಗೆ’ ಎಂಬ ಪರಿಕಲ್ಪನೆಯ ಎರಡು ದಿನಗಳ ‘ಸಹಿತ-2’ ಸಾಹಿತ್ಯೋತ್ಸವಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ಅಧಿಕಾರಕ್ಕೇರಲು ರಾಮನ ಹೆಸರನ್ನು ಬಳಸುತ್ತಿರುವ ಸಂದರ್ಭವಿದು. ರಾಮಾಯಣ ಗರ್ಭಗುಡಿಯ ಕಾವ್ಯವೆಂಬ ತಪ್ಪುಗ್ರಹಿಕೆ ಮಾಯವಾಗಬೇಕು. ಮಹಾಕಾವ್ಯಗಳು ರಾಜಕೀಯ ಅಸ್ತçವಾದಾಗ ಅದರ ಅಸ್ಮಿತೆ ನಾಶವಾಗುತ್ತದೆ. ರಾಮಾಯಣ ಅಧ್ಯಯನಶೀಲ ಕಾವ್ಯವಾಗಿ ವಾಸ್ತವತೆ ಮತ್ತು ಕಲ್ಪಿತ ಕಥೆಗಳ ಸಮನ್ವಯವಾಗಿದೆ. ಆತ್ಮಸ್ಥೆöÊರ್ಯದ ಮಹಾಕಾವ್ಯ ರಾಮಾಯಣದಲ್ಲಿ ಹತಾಶೆಯಿಲ್ಲ. ಸಾಂಸ್ಕೃತಿಕ ಘಟಕಗಳನ್ನು, ಸಂಸ್ಕೃತಿಯ ಚಲನಶೀಲತೆ, ಅಧಿಕಾರ-ಭೋಗದ ನಿರಸನದ ಸ್ಥಿತ್ಯಂತರಗಳನ್ನು ಕಾಣಬಹುದು ಎಂದು ತಿಳಿಸಿದರು. ಸಮಕಾಲೀನ ಸಂದರ್ಭದಲ್ಲಿರುವ ಪ್ರಸ್ತುತತೆಯಿಂದ ರಾಮಾಯಣದ ಕಥನವನ್ನು…
ತುಮಕೂರು: ನಗರದಲ್ಲಿ ಕಳ್ಳರ ಅಟ್ಟಹಾಸ ಮಿತಿ ಮೀರುತ್ತಿದ್ದು, ಒಂದೇ ರಾತ್ರಿ ಸುಮಾರು 6 ಅಂಗಡಿಗಳ ಬಾಗಿಲು ಮೀಟಿ ಸರಣಿ ಕಳ್ಳತನ ಮಾಡಿರುವ ಘಟನೆ ನಡೆದಿದೆ. ನಗರದ ಬಿ.ಹೆಚ್. ರಸ್ತೆಯಲ್ಲಿರುವ ಸುಮಾರು 6 ಅಂಗಡಿಗಳಲ್ಲಿ ತಡರಾತ್ರಿ ಕಳ್ಳರು ತಮ್ಮ ಕೈಚಳ ತೋರಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ನಗದು ಹಾಗೂ ಇತರೆ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ನಗರದ ತುಮಕೂರು ವಿಶ್ವವಿದ್ಯಾನಿಲಯದ ಮುಂಭಾಗದಲ್ಲಿರುವ ಆಧೀಶ್ವರ ಮಾರ್ಕೆಟಿಂಗ್, ಬಿ.ಹೆಚ್. ರಸ್ತೆಯಲ್ಲಿರುವ ಅಪೊಲೋ ಮೆಡಿಕಲ್ ಸ್ಟೋರ್, ಉಡ್ಲ್ಯಾಂಡ್, ಕಾಂತಿಸ್ವೀಟ್ಸ್, ಅಥರ್ವ ಮೆಡಿಸ್ಕಿನ್ ಕ್ಲಿನಿಕ್ ಸೇರಿದಂತೆ 6 ಅಂಗಡಿಗಳ ಬಾಗಿಲು ಮೀಟಿ ಒಳನುಗ್ಗಿರುವ ಕಳ್ಳರು ಗಲ್ಲಾಪೆಟ್ಟಿಗೆ ಒಡೆದು ನಗದು ಹಾಗೂ ಅಂಗಡಿಯಲ್ಲಿದ್ದ ಇತರೆ ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದಾರೆ. ಆಧೀಶ್ವರ ಮಾರ್ಕೆಟಿಂಗ್ ಅಂಗಡಿ ಮಳಿಗೆಯಲ್ಲಿ 42 ಸಾವಿರಕ್ಕೂ ಅಧಿಕ ಹಾಗೂ ಅಪೊಲೋ ಮೆಡಿಕಲ್ ಸ್ಟೋರ್ನಲ್ಲಿ 62 ಸಾವಿರಕ್ಕೂ ಅಧಿಕ ನಗದನ್ನು ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಈ ಎಲ್ಲಾ ಅಂಗಡಿಗಳ ಷೆಟರ್ ಮೀಟಿ ಒಳನುಗ್ಗಿರುವ ಕಳ್ಳರು ಅಂಗಡಿಗಳ ಒಳಗಿದ್ದ…
ತುಮಕೂರು: ಭಾರತ ಸರಕಾರದ ಕ್ರೀಡಾ ಇಲಾಖೆಗೆ ನೋಂದಾಯಿತವಾಗಿರುವ ಭಾರತ್ ಒಲಂಪಿಕ್ ಸಂಸ್ಥೆಗೆ ಸದಸ್ಯ ಸಂಸ್ಥೆಯಾಗಿರುವ ಯೋಗಾಸನ ಭಾರತವು ಇದೇ ಡಿಸೆಂಬರ್ 12 ರಿಂದ 15 ರವರೆಗೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಐದನೆಯ ಹಿರಿಯರ ರಾಷ್ಟಿçÃಯ ಯೋಗಾಸನ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಶ್ರೀ ಸಿದ್ಧಲಿಂಗ ಮಹಢಸ್ವಾಮೀಜಿ ತಿಳಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಎಸ್ ಜಿ ಎಸ್ ಅಂತರರಾಷ್ಟಿçÃಯ ಯೋಗ ಪ್ರತಿಷ್ಠಾನ ವಿದ್ಯಾಲಯ ಇವರುಗಳ ಸಹಯೋಗದೊಂದಿಗೆ ಡಿಸೆಂಬರ್ 12ರಿಂದ 15 ರವರೆಗೆ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಸುತ್ತಿದೆ. ಈ ಸ್ಪರ್ಧೆಗೆ 30 ರಾಜ್ಯ ತಂಡಗಳೊAದಿಗೆ ಒಟ್ಟು 32 ತಂಡಗಳಿAದ 800ಕ್ಕೂ ಹೆಚ್ಚು ಕ್ರೀಡಾಪಟುಗಳು, 80ಕ್ಕೂ ಹೆಚ್ಚು ತೀರ್ಪುಗಾರರು ಹಾಗೂ ರಾಷ್ಟಿçÃಯ ಮತ್ತು ಅಂತರರಾಷ್ಟಿçÃಯ ಯೋಗಾಸಂಸ್ಥೆಯ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ ಎಂದರು. ತುಮಕೂರು ನಗರದಲ್ಲಿ ಇಂತಹ ಬೃಹತ್ ಯೋಗಾಸನ ಸ್ವರ್ಧೆ ನಡೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.ಒಳ್ಳೆಯ ಆರೋಗ್ಯದ ದೃಷ್ಟಿಯಿಂದ ಯೋಗಾಸನ ಒಳ್ಳೆಯದು. ಅಂತರರಾಷ್ಟಿçÃಯ ಮಟ್ಟದಲ್ಲಿ ಯೋಗಾಸನ…
ತುಮಕೂರು: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ನೀಡುವ ರಾಷ್ಟಿçÃಯ ‘ವೀರಭದ್ರ ಪ್ರಶಸ್ತಿ’ಯನ್ನು ಈ ತಿಂಗಳ 12ರಂದು ಕೇಂದ್ರ ಜಲಶಕ್ತ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪ್ರದಾನ ಮಾಡಲಾಗುತ್ತಿದೆ. ವೇದಿಕೆಯ ಕಾರ್ಯದರ್ಶಿ ಎಸ್.ಸೋಮಶೇಖರ ಗಾಂಧಿ ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ದೆಹಲಿಯ ಭಾರತ್ ಮಂಟಪ ಸಭಾಂಗಣದಲ್ಲಿ ಈ ತಿಂಗಳ 12ರ ಸಂಜೆ 5 ಗಂಟೆಗೆ ನಡೆಯುವ ಸಮಾರಂಭದಲ್ಲಿ ಸಚಿವ ವಿ.ಸೋಮಣ್ಣ ಅವರಿಗೆ ವೀರಭದ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜ್ಯೋಷಿ, ಶೋಭಾ ಕರಂದ್ಲಾಜೆ ಹಾಗೂ ರಾಜ್ಯದ ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಹೇಳಿದರು. ಇದೂವರೆಗೆ ವೀರಭದ್ರ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಸಿ ಸಂಸದ, ಕೆಎಲ್ಇ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರಭಾಕರ ಕೋರೆ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿ ಸುಮಾರು 40 ವರ್ಷ ಕಾಲ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಈಗ ಕೇಂದ್ರ…
ತುಮಕೂರು: ಭಾಷಾಂತರ, ರೂಪಾಂತರಗಳನ್ನು ಕಂಡಿರುವ ರಾಮಾಯಣದಲ್ಲಿ ಭಾವ ಸತ್ಯವೇ ಕಾವ್ಯ ರೂಪವಾಗಿ ವಾಲ್ಮೀಕಿಯ ಕಲ್ಪನೆಯಲ್ಲಿ ರಸವತ್ತಾಗಿ, ಕವಿಯ ಧ್ವನಿಯಾಗಿ ಮಹಾಕಾವ್ಯವಾಗಿ ಮೂಡಿಬಂದಿದೆ ಎಂದು ಶತಾವಧಾನಿ ಡಾ. ಆರ್. ಗಣೇಶ್ ತಿಳಿಸಿದರು. ತುಮಕೂರು ವಿವಿಯ ಇಂಗ್ಲಿಷ್ ಸಾಹಿತ್ಯ ಅಧ್ಯಯನ ವಿಭಾಗವು ಹಾಗೂ ಡಿವಿಜಿ ಕನ್ನಡ ಅಧ್ಯಯನ ಕೇಂದ್ರವು ಸೋಮವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ವಾಲ್ಮೀಕಿ ರಾಮಾಯಣದ ಕಾವ್ಯ ಸೌಂದರ್ಯ’ ಕುರಿತು ಮಾತನಾಡಿದರು. ವಾಲ್ಮೀಕಿ ರಚಿಸಿದ ರಾಮಾಯಣದಲ್ಲಿ ಸಂತೋಷ, ಸತ್ಪೆçÃರಣೆ, ರಸ, ಧ್ವನಿಯ ಔಚಿತ್ಯ, ಸಮಾಧಾನ, ಧೈರ್ಯ, ಸಂಕಟ, ಶೋಕ, ಕುಟುಂಬ ವಿಸ್ತರಣೆ, ಕಾರುಣ್ಯ, ಕೃಪೆ, ಪ್ರಕೃತಿಯ ಸೌಂದರ್ಯ, ಉತ್ಪೆçÃಕ್ಷೆ, ಕಾಲಗಳ ವರ್ಣನೆ, ಜೀವನ ಮೌಲ್ಯ, ಕಲೆ, ಆನಂದವನ್ನು ಕಾಣಬಹುದು ಎಂದು ಹೇಳಿದರು. ಹನುಮಂತ ಸೀತೆಗೆ ತುಂಬುವ ಧೈರ್ಯ ಬದುಕಿನ ದೃಷ್ಟಿಯನ್ನು ಸಕಾರಾತ್ಮವಾಗಿ ಕಾಣಲು ಸಹಕಾರಿಯಾಗುತ್ತದೆ. ರಾಮಾಯಣ ಕಾವ್ಯದ ದೃಷ್ಟಿಯಲ್ಲಿ ಸಮಾಜವನ್ನು ಬೆಸೆದು ಬಾಳುವ ರಾಮನ ಸರಳತೆಯನ್ನು ಕಾಣಬಹುದು. ನವ್ಯಕಾವ್ಯಗಳಲ್ಲಿ ಕಂಡುಬರುವ ನಿಗೂಢತೆ ರಾಮಾಯಣ ಕಾವ್ಯದಲ್ಲಿ ಇಲ್ಲದಿರುವುದರಿಂದ ಈ ಕಾವ್ಯವನ್ನು ಆಲಿಸಿದಾಗ ಧ್ವನಿಯಾಗುತ್ತದೆ,…
ತುಮಕೂರು: ನಗರದಲ್ಲಿ ಸುಸಜ್ಜಿತ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ಮಾಣವಾಗಿದೆ. ಆದರೆ ನಿಲ್ದಾಣದ ಎದುರು ಅಶೋಕ ರಸ್ತೆಯ ಸಂಚಾರ ವ್ಯವಸ್ಥೆ ಸುಗಮವಾಗಿಲ್ಲ, ಸುರಕ್ಷಿತವಾಗಿಯೂ ಇಲ್ಲ. ರಸ್ತೆಯಲ್ಲಿ ಆಟೋಗಳು, ಖಾಸಗಿ ವಾಹನಗಳ ಅಡ್ಡಾದಿಡ್ಡಿ ಸಂಚಾರ, ರಸ್ತೆಬದಿ ಅವೈಜ್ಞಾನಿಕವಾಗಿ ವಾಹನ ನಿಲುಗಡೆ ಮಾಡುವುದರಿಂದ ಇಲ್ಲಿ ಸಂಚಾರ ಮಾಡುವುದು ನರಕಯಾತನೆಯಾಗಿದೆ. ಬಸ್ನಿಲ್ದಾಣದ ಎದುರು ಅಶೋಕ ರಸ್ತೆಯ ಎರಡೂ ಬದಿಯಲ್ಲಿ ದಿನವಿಡೀ ವಾಹನಗಳು ಭರ್ತಿಯಾಗಿ ನಿಂತಿರುತ್ತವೆ. ಈ ರಸ್ತೆಯ ಅಂಗಡಿಗಳಿಗೆ ಬರುವ ಗ್ರಾಹಕರು ತಮ್ಮ ವಾಹನ ನಿಲುಗಡೆ ಮಾಡಲು ಜಾಗವೇ ಇಲ್ಲದಂತಾಗಿದೆ. ಇದರಿಂದ ಇಲ್ಲಿನ ವ್ಯಾಪಾರಸ್ಥರ ವ್ಯವಹಾರಕ್ಕೂ ತೊಂದರೆಯಾಗಿದೆ. ಗ್ರಾಹಕರು ದೂರದಲ್ಲೆಲ್ಲೂ ವಾಹನ ನಿಲ್ಲಿಸಿ ಬರುವಂತಾಗಿದೆ. ರಸ್ತೆಬದಿ ಮಾತ್ರವಲ್ಲದೆ, ಫುಟ್ಪಾತ್ ಮೇಲೂ ವಾಹನ ನಿಲುಗಡೆ ಮಾಡಿ ಪಾದಚಾರಿಗಳ ಓಡಾಟಕ್ಕೂ ತೊಂದರೆಯಾಗಿದೆ. ತಮ್ಮ ವೃತ್ತಿ, ವ್ಯವಹಾರಗಳಿಗೆ ಬೆಂಗಳೂರು ಮತ್ತಿತರ ಊರುಗಳಿಗೆ ನಿತ್ಯ ಹೋಗಿಬರುವವರು ಈ ರಸ್ತೆ ಬದಿ, ಫುಟ್ಪಾತ್ನಲ್ಲಿ ವಾಹನ ನಿಲ್ಲಿಸಿ ಹೋಗುತ್ತಾರೆ. ಹೀಗಾಗಿ ಇಲ್ಲಿನ ಅಂಗಡಿಗಳಿಗೆ ವ್ಯವಹಾರಕ್ಕೆ ಬರುವವರಿಗೆ ವಾಹನ ನಿಲುಗಡೆ ಮಾಡಲು ಜಾಗ ಇರುವುದಿಲ್ಲ. ಬಸ್ ಪ್ರಯಾಣಿಕರ…











