Author: News Desk Benkiyabale

ಚಿಕ್ಕನಾಯಕನಹಳ್ಳಿ : ತಮ್ಮ ಹುಟ್ಟುಹಬ್ಬದ ದಿನವನ್ನು ಗಿಡ ನೆಡುವ ಮೂಲಕ ನೆನಪಿಸಿಕೊಂಡ ಅಧ್ಯಾಪಕಿ ಬಿ ಎಸ್ ಸಾಹೇರಾ ಬಾನು, ಬುಧವಾರದಂದು ಕಾತ್ರಿಕೆಹಾಲ್-ತೀರ್ಥಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ 70 ಗಿಡಗಳನ್ನು ನೆಡುವುದರ ಮೂಲಕ ಪರಿಸರ ಕಾಳಜಿಗೆ ಮಾದರಿಯಾದರು. ಕಾತ್ರಿಕೆಹಾಲ್ ಗ್ರಾಮದ ಡಾ.ಅಂಬೇಡ್ಕರ್ ಪ್ರೌಢಶಾಲೆಯ ಅಧ್ಯಾಪಕಿಯಾದ ಇವರು, ಅಧ್ಯಾಪನ ವೃತ್ತಿಯ ಜೊತೆಗೆ ಒಂದಿಲ್ಲೊAದು ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿರುತ್ತಾರೆ. ಈ ಹಿಂದೆ, ಕೆಂಪರಾಯನಹಟ್ಟಿಯ ಮಾರ್ಗದಲ್ಲಿ ಬಸ್ ಸೌಕರ್ಯವಿಲ್ಲದೆ ನಿತ್ಯ ಪರದಾಡುತ್ತಿದ್ದ ಶಾಲಾ ಮಕ್ಕಳಿಗಾಗಿ ಸ್ಥಳೀಯ ಅಧಿಕಾರಿ ಮತ್ತು ಜನಪ್ರತಿನಿಧಿಗಳ ಬಳಿ ಮನವಿ ಸಲ್ಲಿಸಿದ್ದರು. ಅವರಿಂದ ಏನೂ ಪ್ರಯೋಜನವಾಗದ ಕಾರಣ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದವರೆಗೂ ಬಸ್ ಸೌಕರ್ಯಕ್ಕಾಗಿ ತಮ್ಮ ಮನವಿಯನ್ನು ಕೊಂಡೊಯ್ದರು. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಆದೇಶದ ಮೇರೆಗೆ ಅಂತಿಮವಾಗಿ ಆ ಮಾರ್ಗಕ್ಕೆ ಬಸ್ ಸೌಕರ್ಯ ಒದಗಿತು. ಕಾತ್ರಿಕೆಹಾಲ್ ಗ್ರಾಮದ ಡಾ ಅಂಬೇಡ್ಕರ್ ಪ್ರೌಢಶಾಲೆಯ ಅಧ್ಯಾಪಕಿಯಾಗಿ ಕಳೆದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಿ ಎಸ್ ಸಾಹೇರಾ ಬಾನು, ತಮ್ಮ…

Read More

ತುಮಕೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜೀವಶಾಸ್ತ್ರ ಉಪನ್ಯಾಸಕರ ವೇದಿಕೆ ಮತ್ತು ವಾಸವಿ ಪದವಿಪೂರ್ವ ಕಾಲೇಜು ತುಮಕೂರು ವತಿಯಿಂದ ಜೀವಶಾಸ್ತ್ರ ವಿಷಯದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ತುಮಕೂರು ನಗರದ ವಾಸವಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಾಗಾರ ಉದ್ಘಾಟಿಸಿ ಜೀವಶಾಸ್ತ್ರ ವಿಷಯದ ವೇದಿಕೆ ಮೂಲಕ ಸಿದ್ಧಪಡಿಸಿರುವ 2024-25 ನೇ ಸಾಲಿನ ದ್ವಿತೀಯ ಪಿಯುಸಿ ಜೀವಶಾಸ್ತ್ರ ವಿಷಯದ ಪ್ರಾಯೋಗಿಕ ಯೋಜಿತ ಕಾರ್ಯಗಳ ಕೈಪಿಡಿ ಬಿಡುಗಡೆ ಮಾಡಿದ ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಮಾತನಾಡಿ, ಜಿಲ್ಲೆಯ ಫಲಿತಾಂಶ ಹೆಚ್ಚಿಸಲೂ ನಿಮ್ಮ ಸಹಕಾರ ಅಗತ್ಯ. ಇಲಾಖೆಯ ನಿಯಮದಂತೆ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ. ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳು ನೀವು ಸಿದ್ಧಪಡಿಸಿದ ಮಾದರಿಯ ಪ್ರಶ್ನೆಪತ್ರಿಕೆ ನೋಡಿ ವಾರ್ಷಿಕ ಪರೀಕ್ಷೆಯನ್ನೂ ಯಾವುದೇ ಆತಂಕ ಪಡದೆ ಪರೀಕ್ಷೆಯನ್ನೂ ಬರೆಯಬೇಕು ಎಂದರು. ಈ ವರ್ಷ ಪ್ರಾಯೋಗಿಕ ಪರಿಕ್ಷೆಯಲ್ಲಿ ವೆಬ್ ಕ್ಯಾಮರಾ ಎಲ್ಲಾ ಪರೀಕ್ಷಾ ಕೇಂದ್ರಗಳು ಕಡ್ಡಾಯವಾಗಿ ಅಳವಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಎಲ್ಲಾ ಕಾಲೇಜಿನ ಮಕ್ಕಳು ನಮ್ಮ ಮಕ್ಕಳೇ…

Read More

ಚಿಕ್ಕನಾಯಕನಹಳ್ಳಿ; ದಕ್ಕಲಿಗ ಅಲೆಮಾರಿಗಳು ವಾಸವಿರುವ ಪಟ್ಟಣದ ಗಾಂಧಿನಗರಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ ನಾಗಲಕ್ಷ್ಮಿ ಚೌಧರಿ’ಯವರು ಶುಕ್ರವಾರ ಭೇಟಿ ನೀಡಿ ಅಲ್ಲಿನ ಮಹಿಳೆ ಮತ್ತು ಮಕ್ಕಳ ಕುಂದು-ಕೊರತೆ ಬಗ್ಗೆ ಪರಿಶೀಲನೆ ನಡೆಸಿ, ಸ್ಥಳೀಯ ಆಡಳಿತದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಶುಕ್ರವಾರ ಬೆಳಗ್ಗೆ ತಾಲ್ಲೂಕಿನ ಹುಳಿಯಾರು ಪಟ್ಟಣದ ಕನಕ ವೃತ್ತದಲ್ಲಿ ರಾಷ್ಟ್ರೀಯ ಸಂತ-ಕವಿ ಕನಕದಾಸರ ಪುತ್ಥಳಿಯ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು, ತಾಲ್ಲೂಕಿನ ಅಲೆಮಾರಿಗಳ ಕುಂದು-ಕೊರತೆಗಳ ಬಗ್ಗೆ ಖುದ್ದಾಗಿ ತೆರಳಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು. ಹುಳಿಯಾರು ಪಟ್ಟಣದ ಕೆರೆ ದಂಡೆಯಲ್ಲಿ ವಾಸವಿರುವ ಅಲೆಮಾರಿಗಳು ಮತ್ತು ಬಡ ಕುಟುಂಬಗಳ ಪರಿಸ್ಥಿತಿ ಕಂಡು, ಅಧಿಕಾರಿಗಳಿಗೆ ಹಲವು ಸಲಹೆ-ಸೂಚನೆಗಳನ್ನು ಸ್ಥಳದಲ್ಲೇ ನೀಡಿದರು. ಅಲ್ಲಿನ ಮಕ್ಕಳು ಮತ್ತು ಮಹುಳೆಯರ ಜೊತೆ ಸ್ನೇಹ-ಸಲುಗೆಯಿಂದ ಒಳಗೊಂಡ ಮಹಿಳಾ ಆಯೋಗದ ಅಧ್ಯಕ್ಷರು, ಅಲ್ಲಿನ ಎಲ್ಲ ಬಡವರಿಗೂ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಅವರ ಜೊತೆ ಪ್ರಗತಿಪರ ಚಿಂತಕ ಹಾಗೂ ಯುವನಾಯಕ ನಿಕೇತ್ ರಾಜ್ ಮೌರ್ಯ ಕೂಡ ಇದ್ದರು. ನಂತರ, ಸ್ವತಃ ವೃತ್ತಿಯಿಂದ…

Read More

ತುಮಕೂರು: ಮಾಗಡಿ ತಾಲೂಕುಗಳಿಗೆ ಹೇಮಾವತಿ ನೀರಿ ತೆಗೆದುಕೊಂಡು ಹೋಗಲು ನಿರ್ಮಿಸುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಕೇನಾಲ್ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು, ಜಿಲ್ಲೆಗೆ ನಿಗಧಿಯಾಗಿರುವ ನೀರನ್ನು ಸಂಪೂರ್ಣವಾಗಿ ಹರಿಸಬೇಕು ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊAಡು ಡಿಸೆಂಬರ್ 07 ಶನಿವಾರ ಸಂಯುಕ್ತ ಕಿಸಾನ್ ಕರ್ನಾಟಕ ನೇತೃತ್ವದಲ್ಲಿ ವಿವಿಧ ರೈತಪರ ಸಂಘಟನೆಗಳು ಕಪ್ಪುಪಟ್ಟಿ ಧರಿಸಿ,ಬೃಹತ್ ಪ್ರತಿಭಟನಾ ಧರಣಿಯನ್ಬು ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಂಡಿವೆ. ಸುದ್ದಿಗೋಷ್ಟಿ ಯಲ್ಲಿಂದು ಮಾತನಾಡಿದ ಸಂಯುಕ್ತ ಹೋರಾದ ಸಿ.ಯತಿರಾಜು,ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು,ಎಕೆಐಎಸ್Àನ ಎಸ್.ಎನ್.ಸ್ವಾಮಿ, ಪ್ರಾಂತ ರೈತ ಸಂಘದ ಚನ್ನಬಸಣ್ಣ, ಅಜ್ಜಪ್ಪ, ಎಐಕೆಎಸ್ನ ಕಂಬೇಗೌಡ ,ವೆಂಕಟೇಗೌಡ,ಮಹಿಳಾ ವಿಭಾಗದ ಜಯಮ್ಮ ಅವರುಗಳು, ಜಿಲ್ಲೆಯ ಜನಪ್ರತಿನಿಧಿಗಳು, ರೈತರ ಹಿತ ಮರೆತು,ಮತ ರಾಜಕೀಯದ ಮೇಲಾಟ ನಡೆಸುತ್ತಿದ್ದಾರೆ. ಹಾಗಾಗಿ ರೈತ ಸಂಘಟನೆಗಳು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿವೆ ಎಂದರು. ಸAಯುಕ್ತ ಹೋರಾಟದ ಸಂಚಾಲಕ ಸಿ.ಯತಿರಾಜು,ತುಮಕೂರು ಶಾಖಾ ನಾಲೆಯಿಂದ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ಏಕಾಏಕಿ ಆರಂಭಿಸಿ ಜಿಲ್ಲೆಯ ಜನರಲ್ಲಿ, ಮುಖ್ಯವಾಗಿ ರೈತರಿಗೆ ತೀವ್ರವಾದ ಆತಂಕವನ್ನು ಸರಕಾರ ಸೃಷ್ಟಿ ಮಾಡಿದೆ.ತುಮಕೂರು ಜಿಲ್ಲೆಯ…

Read More

ತುಮಕೂರು: ಜಗತ್ತಿಗೆ ಯೋಗ ಹೇಳಿಕೊಟ್ಟವರು ಭಾರತೀಯರು.ಆದರೆ ಇಂದು ಪ್ರಪಂಚದಲ್ಲಿ ಯೋಗ ಅಭ್ಯಾಸವಿಲ್ಲದ ದೇಶಗಳೇ ಇಲ್ಲ.ಇದು ಭಾರತೀಯರೆಲ್ಲರೂ ಹೆಮ್ಮೆ ಪಡುವ ವಿಚಾರ ಎಂದು ಯೋಗ ಗುರು ಡಾ.ಎಂ.ಕೆ.ನಾಗರಾಜರಾವ್ ತಿಳಿಸಿದ್ದಾರೆ. ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ ಕಾಲೇಜು ಯೋಗಾಸನ ಸ್ಪರ್ಧೆ ಹಾಗೂ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಸಮೀಕ್ಷೆಯ ಪ್ರಕಾರ 2028ನೇ ವರ್ಷದ ವೇಳೆಗೆ ಜಗತ್ತಿನಲ್ಲಿ 18 ಮಿಲಿಯನ್ ಯೋಗ ಮ್ಯಾಟ್‌ಗಳು ಮಾರಾಟವಾಗಲಿವೆ ಎಂಬ ನಿರೀಕ್ಷೆಯಿದೆ ಎಂದರು. ಯೋಗ ಎನ್ನುವಂತಹದ್ದು, ಅನುಭವಿಸಿ ಮಾಡುವ ಒಂದು ದೈಹಿಕ ಚಟುವಟಿಕೆ. ಯೋಗಕ್ಕೆ ಭಾರತವೇ ತವರೂರಾದರೂ ವಿದೇಶಗಳ ರೀತಿ ಶಿಸ್ತು ಮತ್ತು ಶಾಸ್ತಿçÃಯ ಬದ್ದ ಅಭ್ಯಾಸ ನಮ್ಮಲ್ಲಿ ಕಡಿಮೆಯಾಗಿದೆ.ಇದು ಭಾರತೀಯರು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ವಿಚಾರವಾಗಿದೆ. ಯೋಗವನ್ನು ಒಂದು ಚಿಕಿತ್ಸೆ,ಔಷದಿ ಎನ್ನುವ ರೀತಿಯಲ್ಲಿ ನೋಡುವ ಬದಲು ಒಂದು ಜೀವನ ಕ್ರಮವಾಗಿ ಅಳವಡಿಸಿಕೊಂಡರೆ ಹೆಚ್ಚಿನ ಉಪಯೋಗವಾಗಲಿದೆ.45ವರ್ಷದ ನಂತರ ಒಂದಿಲೊAದು ರೋಗವಿಲ್ಲ ಎಂದು ಹೇಳುವ…

Read More

ತುಮಕೂರು: ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿಬೇಕು ಎಂದು ಕೋರಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸೋಮವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಒಕ್ಕೂಟದ ಮುಖಂಡರು, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಅವರು ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಿಂದುಳಿದವರು, ಶೋಷಿತರಿಗೆ ನೆರವಾಗಿವೆ. ಧ್ವನಿ ಇಲ್ಲದ ವರ್ಗದ ಧ್ವನಿಯಾಗಿ ಅರಸು ಅವರು ಹಲವಾರು ಕಾರ್ಯಕ್ರಮಗಳ ಮೂಲಕ ನಾಡಿಗೆ ಕೊಡುಗೆ ನೀಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಜಾರಿಗೆ ತಂದು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸಿದ್ದರು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣಕರ್ತರು. ಇವರ ಸೇವೆ ಸದಾ ಸ್ಮರಣೀಯ. ಇಂತಹ ಮಹನೀಯರಿಗೆ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪÀ್ರಶಸ್ತಿ ನೀಡಿ ಅವರ ಸೇವೆಯನ್ನು ಗೌರವಿಸಬೇಕು ಎಂದು ಮುಖ್ಯಮಂತ್ರಿಗಳಿಗೆ…

Read More

ತುಮಕೂರು: ಚಲಿಸುತ್ತಿದ್ದ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಡಿಯಾದ ಪರಿಣಾಮ ದೆಹಲಿ ಮೂಲದ ಪತ್ರಕರ್ತೆ ಸೇರಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಸುಮಾರು 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಿರಾ ತಾಲ್ಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ಸರಹದ್ದಿನ ರಾಷ್ಟಿçÃಯ ಹೆದ್ದಾರಿ-48ರಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತಪಟ್ಟಿರುವವರನ್ನು ದೆಹಲಿ ಮೂಲದ ಪತ್ರಕರ್ತೆ ಊರ್ವಿ ನಯನ್ (25), ಪ್ರಿಯಾಂಕ (25) ಹಾಗೂ ಶುಬಾಳಿ ಸಿಂಗ್ (28) ಎಂದು ಗುರುತಿಸಲಾಗಿದೆ. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಮಾರ್ಗಮಧ್ಯೆ ಸೋಮವಾರ ಮುಂಜಾನೆ 4.15 ರಲ್ಲಿ ಸಿರಾ ತಾಲ್ಲೂಕು ಕಳ್ಳಂಬೆಳ್ಳ ಸಮೀಪದ ಚಿಕ್ಕನಹಳ್ಳಿ ಸೇತುವೆ ಬಳಿ ರಾಷ್ಟಿçÃಯ ಹೆದ್ದಾರಿ-48 ರಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ಪಲ್ಟಿ ಹೊಡೆದಿದೆ. ಈ ಪರಿಣಾಮ ಬಸ್‌ನಲ್ಲಿದ್ದ ಸುಮಾರು 29 ಪ್ರಯಾಣಿಕರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಗಾಯಗೊಂಡಿರುವ ಗಾಯಾಳುಗಳನ್ನು ಸಿರಾ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು…

Read More

ತುಮಕೂರು: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದAತಹ ಕೃತ್ಯಗಳನ್ನು ಖಂಡಿಸಿ ಇದೇ 4ರಂದು ಬುಧವಾರ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿವಿಧ ಮಠಾಧೀಶರು, ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಹೋರಾಟ ಬೆಂಬಲಿಸಿ ವಿವಿಧ ಮಠಗಳ ಸ್ವಾಮೀಜಿಗಳು, ಸಂಘಸAಸ್ಥೆಗಳ ಮುಖಂಡರು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೋರಾಟ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದರು. ಬೆಟ್ಟದಹಳ್ಳಿ ಗವಿ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಸಖಲ ಜೀವಿಗಳಿಗೂ ಲೇಸು ಬಯಸುವುದೇ ಎಲ್ಲಾ ಧರ್ಮಗಳ ಆಶಯವಾಗಿದೆ. ಪ್ರಕೃತಿ ನಮಗೆ ಎಲ್ಲವನ್ನೂ ಕೊಟ್ಟಿದೆ. ಇಲ್ಲಿ ಎಲ್ಲರೂ ಸಮಾನವಾಗಿ ಬದುಕಲು ಆಶ್ರಯ ನೀಡಿದೆ. ಆದರೆ ಹಿಂಸೆಯನ್ನು ಪ್ರತಿಪಾದಿಸುತ್ತಾ ದೌರ್ಜನ್ಯ ಮಾಡುವುದನ್ನು ಯಾವ ಧರ್ಮವೂ ಒಪ್ಪುವುದಿಲ್ಲ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸುತ್ತೇವೆ ಎಂದರು. ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಧರ್ಮಗುರುಗಳು ಸಂದೇಶ ನೀಡಬೇಕು, ಬಾಂಗ್ಲಾದಲ್ಲಿ ಹಿಂಸೆಯ ಕೃತ್ಯದಲ್ಲಿ ಭಾಗವಹಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಶಾಂತಿ…

Read More

ತುಮಕೂರು : ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ-ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ಗೊಳಗಾದವರಿಗೆ ಶೀಘ್ರವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ತಹಶೀಲ್ದಾರರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ ತುಮಕೂರು, ತುರುವೇಕೆರೆ ಹಾಗೂ ಕುಣಿಗಲ್ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ ಮಳೆಯಿಂದ ಹಾನಿಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದರು. ಬೆಳೆ ಹಾನಿಯಲ್ಲಿ ಪರಿಹಾರ ಹಣ ಪಾವತಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ಬಾಕಿ ಉಳಿದ ಪರಿಹಾರ ಹಣ ನೀಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಜಿಲ್ಲೆಯಲ್ಲಿ ವಕ್ಫ್ ಆಸ್ತಿಗೆ ಸಂಬAಧಿಸಿದAತೆ ರೈತರಿಗೆ ನೋಟಿಸ್ ನೀಡಿರುವ ಪ್ರಕರಣಗಳಿದ್ದಲ್ಲಿ ಕೂಡಲೇ ನನ್ನ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ…

Read More

ತುಮಕೂರು: ಮುಂಜಾನೆ ಗೆಳೆಯರ ಬಳಗ ಹಾಗೂ ವಿಘ್ನೇಶ್ವರ ಗೆಳೆಯರ ಬಳಗದವತಿಯಿಂದ ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪಡೆದ ವೀರಶೈವ ಬ್ಯಾಂಕಿನ ಉಪಾಧ್ಯಕ್ಷರಾದ ಹೆಬ್ಬಾಕ ಮಲ್ಲಿಕಾರ್ಜುನಯ್ಯ ಅವರಿಗೆ ಅಭಿನಂದನೆ ಹಾಗೂ ಗೆಳೆಯರ ಬಳಗದ ಮಾರ್ಕೇಟ್ ದಿನೇಶ ಮತ್ತು ಕೃಷ್ಣರಾವ್ ಅವರ ಹುಟ್ಟು ಹಬ್ಬದ ಅಂಗವಾಗಿ ಮೂವರನ್ನು ಅಭಿನಂದಿಸಲಾಯಿತು. ಮುAಜಾನೆ ಗೆಳೆಯರ ಬಳಗದ ಅಧ್ಯಕ್ಷ ಹಾಗೂ ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್ ಮಾತನಾಡಿ,ವಿದ್ಯಾರ್ಥಿ ದಿಸೆಯಿಂದಲೂ ನಾಯಕತ್ವದ ಗುಣ ಹೊಂದಿರುವ ಹೆಬ್ಬಾಕ ಮಲ್ಲಿಕಾರ್ಜುನ್ ಅವರು,ಸಹಕಾರ ಕ್ಷೇತ್ರವಲ್ಲದೆ ಎಲ್ಲಾ ಕ್ಷೇತ್ರದಲ್ಲಿಯೂ ತಮ್ಮದೇ ಆದ ರೀತಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ.ಕ್ರೀಡಾಪಟುಗಳಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ಅವರು ರಾಜ್ಯಮತ್ತು ರಾಷ್ಟçಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗಿದ್ದಾರೆ.ಅವರಿಗೆ ಈ ಬಾರಿಯ ಸಹಕಾರ ರತ್ನ ಪ್ರಶಸ್ತಿ ಬಂದಿರುವುದು ನಮ್ಮಂತಹ ಹಲವರಿಗೆ ಸಂತೋಷವಾಗಿದೆ.ಅವರು ಈ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆಯನ್ನು ಮಾಡುವಂತಾಗಲಿ ಎಂದರು ಮುAಜಾನೆ ಗೆಳೆಯರ ಬಳಗದ ಧನಿಯಕುಮಾರ್ ಮಾತನಾಡಿ, ಸರಳ ಸಜ್ಜನಿಕೆಗೆ ಹೆಸರಾದ ಹೆಬ್ಬಾಕ ಮಲ್ಲಿಕಣ್ಣ ಅವರಿಗೆ ಈ ಬಾರಿಯ…

Read More