ಬೆಳಗಾವಿ/ತುಮಕೂರು: ಬೆಳಗಾವಿಯಲ್ಲಿ ತುಮ ಕೂರು ಗ್ರಾಮಾಂತರದ ಅಭಿವೃದ್ಧಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದ ತುಮ ಕೂರು ಗ್ರಾಮಾಮತರ ಶಾಸಕ ಸುರೇಶ್ ಗೌಡ. ಮುಖ್ಯಮಂತ್ರಿಗಳ ವಿಶೇಷ ಅನುದಾನವಾಗಿ ನಿರೀಕ್ಷಿತವಾಗಿರುವ 25 ಕೋಟಿ ರೂಪಾಯಿ ನಿಧಿ ಸಂಬ0ಧಿಸಿದ0ತೆ ಬೆಳಗಾವಿಯ ವಸತಿಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಲಾಯಿತು. ಮುಂದಿನ ಅಧಿವೇಶನವನ್ನು ಗಮನದಲ್ಲಿಟ್ಟು ಕೊಂಡು, ತುಮಕೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದು ಅಗತ್ಯ ಅನುದಾನ ಬಿಡುಗಡೆಗೆ ಸಿದ್ಧತೆ ನಡೆಸಲಾಯಿತು. ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿ, ಜನೋಪಯೋಗಿ ಯೋಜನೆಗಳು ಹಾಗೂ ಸಾರ್ವಜನಿಕ ಅಗತ್ಯಗಳನ್ನು ಪೂರೈಸುವ ಕಾರ್ಯಕ್ರಮಗಳನ್ನು ಕ್ರಿಯಾ ಯೋಜನೆಯಲ್ಲಿ ಒಳಗೊಂಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪ್ರಭಾ ಕರ್ ಅವರು ಉಪಸ್ಥಿತರಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ವಿಶೇಷ ಅನುದಾನ ಮಹತ್ವದ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪ ಡಿಸಿದರು. ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆಯಾದ ಬಳಿಕ ಯೋಜನೆಗಳನ್ನು ತ್ವರಿತವಾಗಿ ಜಾರಿಗೆ…
Author: News Desk Benkiyabale
ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊ ಳಿಸುವ ನಿಟ್ಟಿನಲ್ಲಿ, ತಮ್ಮಗೆ ನಿಯೋಜಿಸಲಾದ ಕಾರ್ಯಗಳನ್ನು ಅಚ್ಚುಕ ಟ್ಟಾಗಿ ಮತ್ತು ಸಮಯಕ್ಕೆ ಸರಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 29 ಹಾಗೂ 30ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗ ಳನ್ನು ಕೈಗೊಳ್ಳಲು 14 ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು. ಜಿಲ್ಲೆಯ ಪ್ರತಿ ತಾಲೂಕಿನಿಂದ ಒಂದೊ0ದು ಕಲಾ ತಂಡ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊ0ದಿಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆಯನ್ನು ನಗರದ ಮಹಾನಗರ ಪಾಲಿಕೆ ಮುಂಭಾ ಗದಿಂದ ಎಂ.ಜಿ. ರಸ್ತೆ, ಗುಂಚಿ ಚೌಕ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ಆಯೋಜಿ ಸಲಾಗುತ್ತದೆ ಎಂದು ಅವರು ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮಕ್ಕೆ ವ್ಯಾಪಕವಾದ ಪ್ರಚಾರಗೊಳಿಸಿ…
ಚಿಕ್ಕನಾಯಕನಹಳ್ಳಿ: ರೈತರು ಪೌತಿ ಖಾತೆ ಸಂಬAಧ ಎದುರಿಸುತ್ತಿರುವ ಸಮಸ್ಯೆಗಳನ್ನು ಮನಗಂಡು, ಡಿಸೆಂಬರ್ ೨೯ರಂದು ಚಿಕ್ಕನಾಯ ಕನಹಳ್ಳಿ ಪಟ್ಟಣದ ತೀ. ನಂ. ಶ್ರೀ ಭವನದಲ್ಲಿ ಪೌತಿ ಖಾತೆ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಶಾಸಕ ಸುರೇಶ್ ಬಾಬು ಸೋಮವಾರ ತಿಳಿಸಿದ್ದಾರೆ. ಈ ಆಂದೋಲನದ ಮೂಲಕ ಪೌತಿ ಖಾತೆ ಸಂಬ0ಧಿತ ಗೊಂದಲಗಳಿಗೆ ಪರಿಹಾರ ಒದಗಿಸುವ ಉದ್ದೇಶವಿದ್ದು, ರೈತರು ಇದರ ಸಂಪೂರ್ಣ ಸದು ಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು. ಪೌತಿ ಖಾತೆ ಪ್ರಕ್ರಿಯೆಯಲ್ಲಿ ರೈತರಿಗೆ ಎದುರಾಗುತ್ತಿರುವ ಅಡಚಣೆಗಳನ್ನು ನಿವಾ ರಿಸಲು ಸಂಬ0ಧಪಟ್ಟ ಅಧಿಕಾರಿಗಳ ಸಹಕಾರ ದೊಂದಿಗೆ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಆಂದೋಲನದಲ್ಲಿ ಭಾಗವಹಿಸುವ ರೈತರು ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು ಎಂದು ಶಾಸಕ ಸುರೇಶ್ ಬಾಬು ಸೂಚಿಸಿದರು. ಮೃತರ ಹೆಸರಿನಲ್ಲಿ ಇರುವ ಪಹಣಿ ದಾಖಲೆಗಳು, ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಸೇರಿದಂತೆ ಸಂಬ0ಧಪಟ್ಟ ಎಲ್ಲಾ ದಾಖಲೆಗಳನ್ನು ಹಾಜರುಪಡಿಸಿದರೆ ಪೌತಿ ಖಾತೆ ಪ್ರಕ್ರಿಯೆ ಸುಲಭಗೊಳ್ಳಲಿದೆ ಎಂದು ಹೇಳಿದರು.…
ತುಮಕೂರು: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಸ್ಪೋಟಿಸುವುದಾಗಿ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಬಾಂಬ್ ಬೆದರಿಕೆ ಮಾಹಿತಿ ಪಡೆದ ತಕ್ಷಣವೇ ಪೊಲೀಸ್ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿ, ಜಿಲ್ಲಾಧಿಕಾರಿ ಕಚೇರಿಗೆ ಬ್ ನಿಷ್ಕಿçಯ ದಳವನ್ನು ದೌಡಾಯಿಸಿದ್ದಾರೆ. ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ ಕಚೇರಿ ಸೇರಿದಂತೆ ಸಂಪೂರ್ಣ ಕಚೇರಿ ಆವರಣವನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಭದ್ರತಾ ಕ್ರಮವಾಗಿ ಕಚೇರಿ ಸಿಬ್ಬಂದಿಯ ಗುರು ತಿನ ಚೀಟಿಗಳನ್ನು ಪರಿಶೀಲಿಸಲಾಗುತ್ತಿದ್ದು, ಮೈನ್ ಗೇಟ್ನಲ್ಲಿ ಒಬ್ಬೊಬ್ಬರನ್ನೇ ಒಳಗೆ ಬಿಡಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿಯ ಹೊರಭಾಗದಲ್ಲಿ ಪೊಲೀ ಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಅಧಿಕಾರಿಗಳು ಕಚೇರಿಯಿಂದ ಹೊರಗೆ ನಿಂತಿದ್ದಾರೆ. ಸದ್ಯ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರ ಣದ ಬಗ್ಗೆ ತನಿಖೆ ಮುಂದುವರಿದಿದೆ.
ತುಮಕೂರು: ತುಮಕೂರು ಸೇರಿದಂತೆ ರಾಜ್ಯದ ಬಯಲು ಸೀಮೆಯ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ವಿಳಂಬಕ್ಕೆ ನಿಜವಾದ ಕಾರಣಗಳೇನು ಎಂದು ತಿಳಿಸುವ ನಿಟ್ಟಿನಲ್ಲಿ ಡಿಸೆಂಬರ್ 18ರ ಗುರುವಾರ ಬೆಳಗ್ಗೆ 10 ಗಂಟೆಗೆ ತುಮಕೂರಿನ ಅಮರಜೋತಿ ನಗರದಲ್ಲಿರುವ ಎತ್ತಿನಹೊಳೆ ಕಚೇರಿಗೆ ಸಾರ್ವಜನಿಕರೊಂದಿಗೆ ಭೇಟಿ ನೀಡಿ ಚರ್ಚೆ ನಡೆಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಸುಧಾ ಟೀ ಹೌಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಎತ್ತಿನಹೊಳೆ ಯೋಜನೆ ವಿಳಂ ಭಕ್ಕೆ ಕಾರಣಗಳು ಮತ್ತು ಪರಿಹಾರ ಎಂಬ ವಿಷಯ ಕುರಿತ ಸಮಾಲೋಚನಾ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಕಳೆದ ಸಭೆಯ ನಿಗಧಿಯಂತೆ ದೆಹಲಿಯಲ್ಲಿ ಸಚಿವರಾದ ಸಿ.ಆರ್.ಪಾಟೀಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.ಆದರೆ ಸಚಿವಾಲಯ ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳಿಂದ ವಿಳಂಬವಾಗಿದೆ ಎಂದು ಹೇಳುತಿದ್ದಾರೆ. ಹಾಗಾಗಿ ನಿಜವಾದ ಅಡೆ,ತೆಡೆ ಯಾರಿಂದ ಆಗಿದೆ.ಇದರ ಹಿಂದಿನ ಉದ್ದೇಶವೇನು ಎಂದು ಜಿಲ್ಲೆಯ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಡಿಸೆಂಬರ್ ೧೮ರ ಗುರುವಾರ ಎತ್ತಿನಹೊಳೆ ಯೋಜನೆಯ ಹಿರಿಯ ಅಧಿಕಾರಿಗ ಳನ್ನು…
ತುಮಕೂರು: ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನವಿರೋಧಿ ಧೋರಣೆ ಹೊಂದಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ಜನಪರ ಅಂಶಗಳನ್ನು ಒಳಗೊಂಡ ರಾಜಕೀಯ ಆಂದೋಲನ ರೂಪಿಸುವ ನಿಟ್ಟಿನಲ್ಲಿ ಸಿಪಿಐ(ಎಂ) ರಾಜ್ಯದಾದ್ಯಂತ ಕೈಗೊಂಡಿರುವ ಪರ್ಯಾಯ ರಾಜಕಾರಣಕ್ಕಾಗಿ ಜನದನಿಯ ರ್ಯಾಲಿ ಎಂಬ ಬೃಹತ್ ಪ್ರತಿಭಟನಾ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿಸೆಂಬರ್ ೨೧ ರಂದು ಬೆಂಗಳೂರಿನಲ್ಲಿ ಜರಗಲಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಡಾ.ಪ್ರಕಾಶ್ ತಿಳಿಸಿದರು. ಜನಚಳವಳಿ ಕೇಂದ್ರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,೨೦೨೫ರ ನವೆಂಬರ್ ೦೧ ರಿಂದ ಡಿಸೆಂಬರ್ ೨೦ ರವರೆಗೆ ನಡೆದಿರುವ ಕಾರ್ಯಕರ್ತರ ಮನೆ ಮನೆ ಭೇಟಿ, ಕಿರುಪತ್ರ ಹಂಚುವಿಕೆ ಮೂಲಕ ಜನರಿಗೆ ಆಳುವ ಪಕ್ಷಗಳ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡುವುದಲ್ಲದೆ, ಹೊಸ ರಾಜಕೀಯ ಶಕ್ತಿಯ ಉದಯಕ್ಕೆ ನಾಂದಿ ಹಾಡುವಂತೆ ಮನವೊ ಲಿಸುವ ಪ್ರಯತ್ನ ನಡೆದಿದೆ.ಇದರ ಸಮಾರೋಪ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಡಿಸೆಂಬರ್ ೨೧ ರಂದು ಸುಮಾರು ೩೦ ಸಾವಿರಕ್ಕೂ ಅಧಿಕ ರೈತರು, ಕಾರ್ಮಿಕರು, ಯುವಜನರು ಭಾಗವಹಿಸಲಿದ್ದಾರೆ ಎಂದರು. ಕೇ0ದ್ರದ ಎಡಿಎ…
ತುಮಕೂರು: ಸಂಘಟನೆಯಲ್ಲಿ ಗುರುತಿಸಿಕೊಂಡವರು ಜನಪ ರವಾಗಿ ರಬೇಕು. ಅವರ ಹೋರಾಟ ಪಾರದರ್ಶಕವಾಗಿದ್ದರೆ ಜನರ ಬೆಂಬಲ ದೊರೆಯುತ್ತದೆ. ನೇರ ಪ್ರಶ್ನೆ ಮಾಡುವ, ನ್ಯಾಯ ಕೇಳುವ ಶಕ್ತಿ ಸಂಘಟನೆಯಿ0ದ ಬರುತ್ತದೆ, ಮಾಡುವ ಕೆಲಸದಲ್ಲಿ ಪ್ರಾಮಾ ಣಿಕತೆ ಇದ್ದರೆ ಸಮಾಜದಲ್ಲಿ ಗೌರವವೂ ದೊರೆಯುತ್ತದೆ ಎಂದು ವಿಜಯಸೇನೆ ರಾಜ್ಯಾಧ್ಯಕ್ಷ ಹೆಚ್.ಎನ್.ದೀಪಕ್ ಹೇಳಿದರು. ಸೋಮವಾರ ನಗರದಲ್ಲಿ ವಿಜಯಸೇನೆಯ ನಗರ ಮಹಿಳಾ ಘಟಕ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾ ಡಿದ ಅವರು, ರಾಜಕೀಯ ಪಕ್ಷಗಳಲ್ಲಿ ಸ್ಥಾನಮಾನಗಳು ಬದಲಾಗ ಬಹುದು, ಆ ದರೆ ಬಲಿಷ್ಠವಾದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡವರಿಗೆ ಅವರದ್ದೇ ಆದ ಸ್ಥಾನ ಉಳಿದಿರುತ್ತದೆ. ನ್ಯಾಯದ ಪರ ಪ್ರಶ್ನೆ ಮಾಡುವ ಶಕ್ತಿ ಬೆಳೆಯುತ್ತದೆ. ಈ ಮೂಲಕ ನಾಯಕತ್ವ ಬೆಳೆಸಿಕೊಳ್ಳಬಹುದು ಎಂದರು. ಸಂಘಟನೆಯವರು ಯಾವತ್ತೂ ನೊಂದವರ ಧ್ವನಿಯಾಗಿ, ನ್ಯಾಯಕ್ಕಾಗಿ ಹೋರಾಟ ಮಾಡುವ ಮನೋಭಾವ ಹೊಂದಿ ರಬೇಕು. ಭ್ರಷ್ಟರಿಗೆ ಸಿಂಹಸ್ವಪ್ನವಾಗಿ ಹೋರಾಟ ಮಾಡಿ ನ್ಯಾಯ ಕೊಡಿಸಬೇಕು. ಹೋರಾಟದಲ್ಲಿ ಪ್ರಾಮಾಣಿಕತೆ ಇದ್ದರೆ ಯಶಸ್ವಿ ಯಾಗಬಹುದು. ಸಂಘಟನೆಯಲ್ಲಿ ಹೋರಾಟ, ನಾಯಕತ್ವ ರೂಪಿಸಿಕೊಂಡರೆ ರಾಜಕೀಯ ಸ್ಥಾನಮಾನಗಳನ್ನು ಪಡೆಯಲೂ ಅವಕಾಶವಾಗುತ್ತದೆ…
ಕೊರಟಗೆರೆ: ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತಿಮುಖ್ಯ. ಕ್ರೀಡಾಂಗಣವು ಮಕ್ಕಳಿಗೆ ಗೆಲುವು ಮತ್ತು ಸೋಲಿನ ಜೀವನದ ಪಾಠ ಕಲಿಸುತ್ತದೆ. ನಮ್ಮ ದೇಶದ ದ್ಯಾನ್ಚಂದ್, ಸಚಿನ್, ಪಿ.ವಿ.ಸಿಂಧು ಅಂತಹ ಕ್ರೀಡಾಪಟುಗಳೇ ನನ್ನ ಶಾಲೆಯ ಮಕ್ಕಳ ಸಾಧನೆಗೆ ಸ್ಪೂರ್ತಿ ಎಂದು ಸಾರಂಗ ಅಕಾಡೆಮಿ ಅಧ್ಯಕ್ಷ ಅಜಯ್ಕುಮಾರ್ ತಿಳಿಸಿದರು. ಕೊರಟಗೆರೆ ಪಟ್ಟಣದ ಶ್ರೀರಾಘವೇಂದ್ರ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ವಾರ್ಷಿಕ ಕ್ರೀಡಾ ಕಾರ್ಯಕ್ರಮದಡಿ ಸೋಮವಾರ ಏರ್ಪಡಿಸಲಾಗಿದ್ದ ರಾಘಕ್ರೀಡೆ-೨೦೨೫ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹುಮುಖ್ಯ. ಟಿವಿ ಮತ್ತು ಮೊಬೈಲ್ ಮಕ್ಕಳ ಶೈಕ್ಷಣಿಕ ಜೀವನಕ್ಕೆ ಅಪಾಯ. ಪೋಷಕರು ಮಕ್ಕಳ ಶೈಕ್ಷಣಿಕ ಜೀವನದ ಬಗ್ಗೆ ಕಡ್ಡಾಯವಾಗಿ ಶಾಲೆಗೆ ಬೇಟಿನೀಡಿ ಪರಿಶೀಲನೆ ನಡೆಸಬೇಕಿದೆ. ಕ್ರೀಡಾಕೂಟ ಯಶಸ್ವಿಗೆ ಕಾರಣರಾದ ಪೋಷಕರು ಮತ್ತು ಶಿಕ್ಷಕರಿಗೆ ಧನ್ಯವಾದ ಎಂದರು. ರಾಘವೇ0ದ್ರ ಶಾಲೆ ಆಡಳಿತ ಅಧಿಕಾರಿ ಕೆ.ಎನ್.ರುದ್ರೇಶ್ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಕ್ರೀಡಾ ಚಟುವಟಿಕೆ ಬಹುಮುಖ್ಯ. ನಮ್ಮ ಶಾಲೆಯಲ್ಲಿ ಚಿಣ್ಣರಸಂತೆ, ಪುಡ್ಪೇಸ್ಟ್, ಜಂಗಲ್ ಡೇ,…
ತುಮಕೂರು: ತುಮಕೂರು ನಗರದ ಎಂ.ಜಿ.ರಸ್ತೆಯಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಅವರ ಪರಿನಿರ್ವಾಣ ದಿವಸ್ ಕಾರ್ಯಕ್ರಮದಲ್ಲಿ ಅಂಬೇಡ್ಕರ್ರವರ ಆಶಯದಂತೆ ವಿದ್ಯೆ ಎನ್ನುವುದು ಸಾಧಕನ ಸ್ವತ್ತೇ ವಿನಹ ಸೋಮಾರಿಗಳ ಸ್ವತ್ತಲ್ಲ ಎಂಬ ನಾನ್ನುಡಿಯಂತೆ ಬಾಬಾ ಸಾಹೇಬರು ನಡೆದು ಬಂದ ದಾರಿ ಅವರ ಜೀವನ ಚರಿತ್ರೆಯನ್ನು ಹಬ್ಬತ್ತನಹಳ್ಳಿ ಶ್ರೀನಿವಾಸ್ ವಿವರಿಸಿದರು. ಮತ್ತೊಬ್ಬ ಹಿರಿಯ ಹೋರಾಟಗಾರರಾದ ಎಂ.ರಾಮಯ್ಯ ಮಾತನಾಡಿ ತುಮಕೂರು ಜಿಲ್ಲೆಯ ದಲಿತಪರ ಹೋರಾಟಕ್ಕೆ ಮೆರುಗು ನೀಡಿದವರು ಧೀಮಂತ ನಾಯಕ ದಿವಂಗತ ಎಂ.ಸಿ ರಾಜು ರವರು ಇಂದು ನಮ್ಮೊಟ್ಟಿಗೆ ಇಲ್ಲ, ಆದರೆ ಅವರ ಆದರ್ಶಗಳು ಹಾಗೂ ಹೋರಾಟ ಮನೋಭಾವವನ್ನು ಎಲ್ಲರೂ ಅನುಸರಿಸಬೇಕು ಅವರು ದೀನ ದಲಿತರ ಪರವಾಗಿ ಅದೇಷ್ಟೋ ಧ್ವನಿ ಎತ್ತಿದ್ದಾರೆ, ಅವರನ್ನು ಮಾದರಿಯಾಗಿ ನಾವುಗಳು ಅನುಸರಿಸಬೇಕು ಎಂದು. ಮತ್ತೊಬ್ಬ ಹಿರಿಯ ಮುಖಂಡರು ಹಾಗೂ ಜಯನುಡಿ ಪತ್ರಿಕೆ ಸಂಪಾದಕರಾದ ಜಯನುಡಿ ಜಯಣ್ಣ ಮಾತನಾಡಿ ಬಾಬಾ ಸಾಹೇಬರ ವಿಚಾರಧಾರೆಗಳನ್ನು ಕಾಲಕಾಲಕ್ಕೆ ಸ್ಮರಿಸಿಕೊಂಡು. ವಿದ್ಯೆಗೆ ಒತ್ತು ನೀಡಿದರೆ ನಮ್ಮ ಜೀವನ ಪಾವನವಾಗುತ್ತಿದೆ ಅದೂ ಅಲ್ಲದೆ ಪ್ರತಿಯೊಬ್ಬ ದಲಿತ ಮುಖಂಡರು…
ಕೊರಟಗೆರೆ: ತಾಲೂಕಿನ ತಣ್ಣೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಆಂಜನೇಯಸ್ವಾಮಿ ಸೇವಾ ಟ್ರಸ್ಟ್ ಹಾಗೂ ಸಪ್ತಗಿರಿ ಆಸ್ಪತ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸಿದರು. ಟ್ರಸ್ಟ್ ಅಧ್ಯಕ್ಷ ಗೋವಿಂದಯ್ಯ ಮಾತನಾಡಿ ಗ್ರಾಮೀಣ ಭಾಗದಲ್ಲಿ ಬಡತನದಿಂದ ಅನೇಕ ಯುವಕರು ಹಾಗೂ ವಯೋವೃದ್ಧರು ಪಟ್ಟಣಕ್ಕೆ ಹೋಗಿ ಚಿಕಿತ್ಸೆ ಪಡೆಯಲು ಆಗದಂತಹ ಪರಿಸ್ಥಿತಿ ಇನ್ನೂ ಹಳ್ಳಿಗಳಲ್ಲಿ ಇದ್ದಾರೆ. ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯದ ರಕ್ಷಣೆ ಬಹು ಮುಖ್ಯ ಆದ್ದರಿಂದ ನಮ್ಮ ಸೇವಾ ಟ್ರಸ್ಟ್ ಪದಾಧಿಕಾರಿಗಳು ನಮ್ಮ ತಾಲೂಕಿನ ಬಡ ಜನರಿಗೆ ಅನುಕೂಲವಾಗಲಿ ಎಂದು ಈ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದೇವೆ ಇದರ ಸದುಪಯೋಗವನ್ನು ಪಡೆದುಕೊಂಡು ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಪ್ತಗಿರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಧನುಷ್ ಮಾತನಾಡಿ , ನಮ್ಮ ಆಸ್ಪತ್ರೆಯ ನುರಿತ ವೈದ್ಯಾಧಿಕಾರಿಗಳು ತಣ್ಣೇನಹಳ್ಳಿ ಗ್ರಾಮಕ್ಕೆ ಬಂದಿದ್ದಾರೆ. ನಿಮ್ಮ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಆಂಜನೇಯಸ್ವಾಮಿ ಸೇವಾ ಟ್ರಸ್ಟ್ನ ಮುಖಂಡರು…











