Author: News Desk Benkiyabale

ಪಾವಗಡ: ಶಿಕ್ಷಣಕ್ಕೆ ಒತ್ತು ಕೊಟ್ಟು ಶಿಕ್ಷಕ ರನ್ನು ಪುರಸ್ಕರಿಸಿದ ಮಾಜಿಶಾಸಕ ಕೆ.ಎಂ. ತಿಮ್ಮರಾಯಪ್ಪ. ತಾಲೂಕಿನ ನಾಯ್ಡುಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರಾರ್ಜಿದೇಸಾಯಿ ವಸತಿ ಶಾಲೆ ಕೋಡಿಗೆಹಳ್ಳಿ ಇಲ್ಲಿ ನಿಡಗಲ್ ಹೋಬಳಿ ನ್ಯಾಯದಗುಂಟೆ ಗ್ರಾಮ ಪಂಚಾಯಿತಿ ನಾಗರಿಕ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ೧೦೦% ಫಲಿತಾಂಶ ಜಿಲ್ಲೆಯಲ್ಲಿ ದ್ವಿತೀಯ ತಾಲೂಕಿನ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಪ್ರಾಂಶುಪಾಲರಿಗೆ ಮತ್ತು ಶಿಕ್ಷಕರಿಗೆ ಸನ್ಮಾನಿಸಿ ಅಭಿನಂದಿಸಿದರು. ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದಅವರು, ವಿದ್ಯಾರ್ಥಿಗಳು ಮೊಬೈ ಲ್ ಗೀಳಿನಿಂದ ದೂರವಿದ್ದು ಶಿಕ್ಷಣದ ಕಡೆ ಹೆಚ್ಚು ಗಮನಹರಿಸಿ, ಪೋಷಕರ ಕನಸನ್ನು ನನಸು ಮಾಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು. ಜೆಡಿಎಸ್ ತಾಲೂಕು ಅಧ್ಯಕ್ಷರಾದ ಎನ್ ಎ ಈರಣ್ಣ ಮಾತನಾಡುತ್ತಾ ನಿಡಗಲ್ ಹೋಬಳಿಗೆ ಮುರಾರ್ಜಿ ಕಾಲೇಜಿನ ಅವಶ್ಯಕತೆ ಇದೆ ಎಂದು ಈ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಈ ನಮ್ಮ ಶಾಲೆ ಜಿಲ್ಲೆಯಲ್ಲಿ ಉತ್ತಮ ಸ್ಥಾನ ಪಡೆದುಕೊಂಡಿದೆ ಶಿಕ್ಷಕರು ಮತ್ತು ಪ್ರಾಂಶುಪಾಲರ ಶ್ರಮದಿಂದ ಉತ್ತಮ ಸಾಧನೆ…

Read More

ತುಮಕೂರು: ಇತಿಹಾಸ ಕಾಲಘಟ್ಟದಲ್ಲಿ ಸಾಮಂತರಾಗಿ ಸ್ಥಳೀಯವಾಗಿ ಆಳ್ವಿಕೆ ಮಾಸುತ್ತಿದ್ದ ನಾಡಪ್ರಭುಗಳನ್ನು ಪ್ರಬಲ ಸಮುದಾಯದವರು ಇತ್ತೀಚಿನ ದಿನಗಳಲ್ಲಿ ಅವರನ್ನು ಸಾಮ್ರಾಟರಾಜರಂತೆ ವೈಭವೀಕರಿಸುತ್ತಿರುವುದು ಇತಿಹಾಸಕ್ಕೆ ಮಾಡುತ್ತಿರುವ ಅಪಚಾರ ಈ ಪ್ರವೃತ್ತಿ ಎಲ್ಲಾ ಸಮುದಾಯಗಳಲ್ಲಿ ಹೆಚ್ಚಾಗುತ್ತಿರುವುದು ವಿಷಾದನೀಯ ಸಂಗತಿ ಎಂದು ಕನ್ನಡ ವಿ.ವಿ.ಯ ಇತಿಹಾಸ ಪ್ರಾಧ್ಯಾಪಕ ಡಾ. ಚನ್ನಸ್ವಾಮಿ ಸೋಸಲೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಬೆಂಗಳೂರಿನ ಸುಹಾಸ್‌ಗ್ರಾಫಿಕ್ಸ್ ಪ್ರಕಟಿಸಿರುವ ಡಾ. ಡಿ.ಎನ್.ಯೋಗೀಶ್ವರಪ್ಪನವರು ಸಂಶೋಧಿಸಿ ರಚಿಸಿರುವ ಕಲ್ಪಹಾಸ ಕೃತಿಯನ್ನು ಶ್ರೀ ಸಿದ್ಧಗಂಗಾ ಕಾಲೇಜಿನ ಡಾ. ಶ್ರೀ ಶ್ರೀ ಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ಬಿಡುಗಡೆಯಾದ ಕೃತಿಯನ್ನು ಕುರಿತು ಮಾತನಾಡಿದರು. ಒಂದು ಜಿಲ್ಲೆಗೆ ಸೀಮಿತವಾದಂತಹ ಸಮಗ್ರ ಇತಿಹಾಸವನ್ನು ಕಟ್ಟಿಕೊಡುವುದು ಸುಲಭದ ಮಾತಲ್ಲ. ಇಂತಹ ಇತಿಹಾಸ ರಚನೆಯಲ್ಲಿ ಡಾ. ಡಿ.ಎನ್.ಯೋಗೀಶ್ವರಪ್ಪನವರು ಸವಾಲಾಗಿ ಸ್ವೀಕರಿಸಿ ಮೌಖಿಕ ಮತ್ತು ಚಾರಿತ್ರಿಕ ದಾಖಲೆಗಳನ್ನು ಸಮಚಿತ್ತದಿಂದ ಪೂರ್ವಾಗ್ರಹವಿಲ್ಲದೆ ಅಧ್ಯಯನಮಾಡಿ ಪರಾಮರ್ಶಿಸಿ ಕಲ್ಪಹಾಸ ಕೃತಿಯನ್ನು ರಚಿಸಿದ್ದಾರೆ. ಈ ಜಿಲ್ಲೆಯ ೧೮೦೦ ವರ್ಷಗಳ ಇತಿಹಾಸವನ್ನು ಒಳಗೊಂಡಿರುವ ಈ ಕೃತಿ ಈ ಜಿಲ್ಲೆಯ ಇತಿಹಾಸಕ್ಕೆ ಕೊಟ್ಟ…

Read More

ತುಮಕೂರು: ಕೊರಟಗೆರೆ ತಾಲ್ಲೂಕು ಶ್ರೀ ಕ್ಷೇತ್ರ ಸಿದ್ಧರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ ಸಮಾರಂಭ ಈ ತಿಂಗಳ ೮ರಂದು ನಡೆಯಲಿದ್ದು, ಇದರ ಅಂಗವಾಗಿ ಜಗದ್ಗುರು ರೇಣುಕಾಚಾರ್ಯರು, ಜಗಜ್ಯೋತಿ ಬಸವೇಶ್ವರರ ಜಯಂತುತ್ಸವ, ಸಾಮೂಹಿಕ ವಿಹಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಏರ್ಪಾಟಾಗಿದೆ. ಸಿದ್ಧರಬೆಟ್ಟ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ಮಠದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇದೇ ೭ರಂದು ನಡೆಯುವ ಪುಸ್ತಕ ದಾಸೋಹ ಸಮಾರಂಭವನ್ನು ಅಟವಿ ಶಿವಲಿಂಗ ಸ್ವಾಮೀಜಿ ಉದ್ಘಾಟಿಸುವರು. ತಗ್ಗಿಹಳ್ಳಿ ರಾಮಕೃಷ್ಣ ಮಠದ ರಮಾನಂದ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಸಿದ್ಧಲಿಂಗ ದೇಶಿಕೇಂದ್ರ ಸ್ವಾಮೀಜಿ, ಚಿಮ್ಮಲಗಿ ಮಠದ ಸಿದ್ಧರೇಣುಕಾ ಶಿವಾಚಾರ್ಯ ಸ್ವಾಮೀಜಿ, ತೆವಡೆಹಳ್ಳಿ ಮಠದ ಗೋಸಲ ಚನ್ನಬಸವೇಏಶ್ವರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸುವರು ಎಂದರು. ಇದೇ ೮ರಂದು ಭಾನುವಾರ ಬೆಳಿಗ್ಗೆ ೭.೩೦ಕ್ಕೆ ರೇಣುಕಾಚಾರ್ಯರು, ಸಿದ್ಧೇಶ್ವರಸ್ವಾಮಿ, ಬಸವೇಶ್ವರರ ಬೆಳ್ಳಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ನಂತರ ಸಾಮೂಹಿಕ ವಿವಾಹದ ಶಾಸ್ತç ಹಾಗೂ ಧಾರೆ ಕಾರ್ಯಕ್ರಮ…

Read More

ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಸಹಕಾರಿಯಾಗಲಿದೆ ಎಂದು ವರದರಾಜ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ.ದುರ್ಗಾದಾಸ್ ಅಸ್ರಣ್ಣರವರು ತಿಳಿಸಿದರು. ನಗರದ ಶೆಟ್ಟಿಹಳ್ಳಿ ಹೊರವಲಯದ ಜಯನಗರ ದಕ್ಷಿಣದಲ್ಲಿರುವ ವರದರಾಜ ಶಿಕ್ಷಣ ಸಂಸ್ಥೆಯಲ್ಲಿ ಜೂನ್ ೫ ರಂದು ಗುರುವಾರ ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಮಾವು ಮೇಳ-೨೦೨೫ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಡಾ.ದುರ್ಗಾದಾಸ್ ಅಸ್ರಣ್ಣರವರು ಮಾತನಾಡುತ್ತಾ ಉದ್ಯಮಶೀಲತಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿಗಳಿಂದಲೇ ಪ್ರಾರಂಭಿಸಲಾದ ಈ ಮೇಳದಲ್ಲಿ ಸುಮಾರು ೪೦ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಸುಮಾರು ೫೦೦ಕ್ಕೂ ಹೆಚ್ಚು ಸಾರ್ವಜನಿಕರು ಮಳಿಗೆಗಳಿಗೆ ಭೇಟಿ ನೀಡಲಾಗಿತ್ತು. ಈ ಮಾವು ಮೇಳದ ಯಶಸ್ಸಿಗೆ ಕಾರಣರಾಗಿದ್ದಾರೆ. ರುಚಿ-ರುಚಿಯಾದ ಬಾದಾಮಿ, ರಸಪೂರಿ, ತೋತಾಪುರಿ ಸೇರಿದಂತೆ ಹಲವು ತಳಿಯ ಮಾವಿನ ಹಣ್ಣುಗಳನ್ನು ಸವಿಯಲಾಗಿತ್ತು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವರದರಾಜ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾದ ವರುಣ್ ಅಸ್ರಣ್ಣರವರು ಮಾತನಾಡುತ್ತಾ ಮಾವು ಮೇಳದಲ್ಲಿ ವಿಜೇತರಾದವರಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಮಾವು…

Read More

ತುಮಕೂರು: ತುಮಕೂರು ಮಹಾನಗರ ಪಾಲಿಕೆ ಆವರಣ ದಲ್ಲಿ ಇಂದು ನಡೆದ ಉದ್ಯಮಿ ಪರವಾನಿಗೆ ಮೇಳವನ್ನು ಆಯೋ ಜಿಸಲಾಗಿದ್ದು, ಉದ್ದಿಮೆದಾರರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದರಿ ಉದ್ಯಮಿ ಪರವಾನಿಗೆ ಮೇಳದಲ್ಲಿ ನಗರದ ಆಸಕ್ತಿ ಉದ್ದಿಮೆದಾರರು ೫೦೦ ಹೆಚ್ಚು ಸಂಖ್ಯೆಯಲ್ಲಿ ಆಗಮಿಸಿ ಉದ್ಯಮಿ ಪರವಾನಿಗೆಗೆ ಇ ವ್ಯಾಪಾರ ಸಾಫ್ಟ್ವೇರ್ ನಲ್ಲಿ ಪಡೆಯಲು ಅವಶ್ಯಕತೆ ಇರುವ ದಾಖಲಾತಿಗಳನ್ನು ಸಲ್ಲಿಸಿದರು ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ೩೫ ವಾರ್ಡ್ಗಳಿಂದ ಹೋಟೆಲ್,ಚಿನ್ನ,ಬೆಳ್ಳಿ,ದಿನಸಿ ಅಂಗಡಿ, ಮಾಲ್, ಮಾರ್ಟ್,ಹೊಸೈರಿಗಳು,ಕಿರಾಣಿ ಅಂಗಡಿ, ವ್ಯಾಪಾರ ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ಹೀಗೆ ಸುಮಾರು ೨೦೫ ರೀತಿಯ ಉದ್ಯಮಿಗಳಿದ್ದು,ಇದರ ದರ ಮತ್ತು ಸಂಬAಧಸಿದ ದಾಖಲಾತಿಗಳು ಆನ್ಲೈನ್ ಮೂಲಕ ಹೊಸ ಸಾಪ್ಟ್ವೇರ್ ಇ ವ್ಯಾಪಾರ್ ತಂತ್ರಾAಶದಿAದ ಹಾಗು ವೆಬ್ಸೈಟ್ ವಿಳಾಸ :hಣಣಠಿ://WWW.mಡಿಛಿ.govಣ.iಟಿ ಅರ್ಜಿ ಸಲ್ಲಿಸಬಹುದಾಗಿದೆ. ಉದ್ದಿಮೆ ಪರವಾನಗಿ ಮೇಳದ ಕುರಿತು ಮಾತನಾಡಿದ ಪಾಲಿಕೆ ಯ ಆಯುಕ್ತರಾದ ಆಶ್ವಿಜ ಅವರು, ತುಮಕೂರು ನಗರದಲ್ಲಿ ೧೩,೦೦೦ ಉದ್ಯಮಗಳಿದ್ದು,ಪ್ರತಿ ವರ್ಷ ಉದ್ಯಮಿ ಪರವಾನಿಗೆ ನವೀಕರಣ ಮಾಡಿಕೊಂಡು ವ್ಯಾಪಾರ ವಹಿವಾಟು ಮಾಡಿಕೊಂಡು ಹೋಗುತ್ತಿದ್ದಾರೆ.ಬಾಕಿ…

Read More

ತುಮಕೂರು: ಎಲ್ಲ ಸಮುದಾಯದ ಯುವಕರು ಸಮಾಜದ ಮುಖ್ಯವಾಹಿನಿಗೆ ಬರಲು ಕ್ರೀಡೆಗಳು ಅತ್ಯವಶ್ಯ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಗ್ನಿವಂಶ ಕ್ಷತ್ರೀಯ ತಿಗಳ ಯೂತ್ ಪೋರ್ಸ್(ರಿ) ಸಂಸ್ಥೆ ವತಿಯಿಂದ ಎರಡು ದಿನಗಳ ಕಾಲ ಏರ್ಪಡಿಸಲಾಗಿರುವ ಅಗ್ನಿಶ್ರೀ ಕಪ್ ಹೆಸರಿನ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಯುವಕರು ಎಲ್ಲ ರೀತಿಯ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಅವರು ಕರೆ ನೀಡಿದರು. ಅಗ್ನಿವಂಶ ಕ್ಷತೀಯ ತಿಗಳ ಯೂತ್ ಪೋರ್ಸ್ (ರಿ) ಸಂಸ್ಥೆಯು ಯುವಕರನ್ನು ಸಂಘಟಿಸಿ ಕ್ರಿಕೆಟ್ ಟೂರ್ನಿಮೆಂಟ್ ಆಯೋಜಿಸಿರುವುದು ಒಳ್ಳೆಯ ಕಾರ್ಯ. ಮುಂದಿನ ದಿನಗಳಲ್ಲಿ ಈ ಕಾರ್ಯ ಹೀಗೆ ಮುಂದುವರೆಯಲಿ ಎಂದು ಆಶಿಸಿದರು. ಕನ್ನಡ ಸೇನೆಯ ಧನಿಯಕುಮಾರ್ ಮಾತನಾಡಿ, ಒಂದು ಸಮಾಜದಿಂದ ಕ್ರಿಕೆಟ್ ಟೂರ್ನಿಮೆಂಟ್ ಆಯೋಜಿಸಿರುವುದು ತುಂಬಾ ಒಳ್ಳೆಯ ಬೆಳವಣಿಗೆ. ಇದು ಯಶಸ್ವಿಯಾಗಲಿ ಎಂದು ಹಾರೈಸಿದರು. ಸ್ಮಾರ್ಟ್ಸಿಟಿ ವತಿಯಿಂದ ಜೂನಿಯರ್ ಕಾಲೇಜು…

Read More

ತುಮಕೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ತ್ಯಾಗ, ಬಲಿದಾನ ಸ್ಮರಿಸುವ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿAದ ಆಚರಿಸಲಾಯಿತು. ಜಿಲ್ಲೆಯ ಕುಣಿಗಲ್, ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಮಧುಗಿರಿ, ಸಿರಾ, ಪಾವಗಡ ಹಾಗೂ ತುಮಕೂರು ತಾಲ್ಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿ, ಹೊಸ ಉಡುಪುಗಳನ್ನು ಧರಿಸಿ ಆಯಾ ತಾಲ್ಲೂಕು ಕೇಂದ್ರಗಳ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ ೧೦ಕ್ಕೆ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮಕ್ಕಾ ಮಸೀದಿ, ಈದ್ಗಾ ಮೊಹಲ್ಲಾ ಪಕ್ಕದಲ್ಲಿರುವ ಕೌಸರ್ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲೂ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನಕ್ಕೆ ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಶೇಖರಗೌಡ, ಕೆಂಚಮಾರಯ್ಯ, ರೇವಣಸಿದ್ದಯ್ಯ, ಅಸ್ಲಾಂಪಾಷ, ಡಿವೈಎಸ್ಪಿ ಚಂದ್ರಶೇಖರ್ ಅವರು ಭೇಟಿ ನೀಡಿ ಮುಸ್ಲಿಂ…

Read More

ತುಮಕೂರು: ಪದವಿ ಮುಗಿಸಿ, ಉದ್ಯೋಗ ಪಡೆಯುವ, ಸ್ವಯಂ ಉದ್ಯೋಗ ಮಾಡುವ ಕನಸ್ಸುಕಾಣುತ್ತಿರುವ ಯುವಜನತೆ ಮತ್ತು ಉದ್ದಿಮೆದಾರರೊಂದಿಗೆ ನೇರ ಸಂಪರ್ಕ ಏರ್ಪಡಿಸುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಪ್ರತಿ ತಿಂಗಳಿಗೊAದು ಕಾರ್ಯಕ್ರಮ ಏರ್ಪಡಿಸುವ ಮೂಲಕ ವಿದ್ಯಾರ್ಥಿ ಯುವಜನರು ಮತ್ತು ಕೈಗಾರಿಕೆಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ ಎಂದು ಹಾಲಪ್ಪ ಪ್ರತಿ಼ಷ್ಠಾನದ ಅಧ್ಯಕ್ಷ ಹಾಗೂ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಕ್ರೋಮೋಡ್ ಬಯೋಟೇಕ್ ಆವರಣದಲ್ಲಿ ಅಂತಿಮ ವರ್ಷದ ಔಷಧ ವಿಜ್ಞಾನ ಮತ್ತು ಅರೆ ವೈದ್ಯಕೀಯ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕೈಗಾರಿಕಾ ಭೇಟಿಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು, ಉದ್ಯೋಗಾಧಾರಿತ (ಜಾಬ್) ಶಿಕ್ಷಣ ಕಲಿಯುತ್ತಿರುವ ಮಕ್ಕಳು ಕೈಗಾರಿಕೆಗಳಿಗೆ ಭೇಟಿ ನೀಡುವುದರಿಂದ ಒಂದು ಉದ್ಯಿಮೆ ಎಂದರೆ ಏನು, ಅದರಲ್ಲಿ ಏನೇನು ಅಡಕವಾಗಿದೆ. ಇದರ ಹಿಂದಿನ ಶ್ರಮ, ಯಾವೆಲ್ಲಾ ಇಲಾಖೆಗಳ ಸಹಕಾರ, ಸಹಯೋಗ ಇದೆ ಎಂಬುದನ್ನು ಖುದ್ದು ತಿಳಿಯುವುದರ ಜೊತೆಗೆ, ಕೈಗಾರಿಕೆಗಳಿಗೆ ಸಂಬAಧಿಸಿದAತಹ ಸಿಡಾಕ್, ಡಿಐಸಿ, ಕೆ.ಎಸ್.ಎಫ್.ಸಿ, ಕೆಐಎಡಿಬಿ ಹೀಗೆ ಸಂಬAಧಿಸಿದ ಇಲಾಖೆಯಿಂದ ಮಾಹಿತಿ ಮತ್ತು…

Read More

ಗುಬ್ಬಿ: ದನದ ಕೊಟ್ಟಿಗೆ ಗೊಬ್ಬರ ಬಳಸಿ ರಾಗಿ ಬೆಳೆದು ಯಶಸ್ವಿಯಾದ ಮಾಜಿ ಶಾಸಕ ಮಸಾಲೆ ಜಯರಾಮ್. ಸಾವಯುವ ಗೊಬ್ಬರವನ್ನು ಬಳಸಿ ರಾಗಿ.ಭತ್ತ. ಹಾಗೂ ಬಾಳೆ ತೆಂಗಿನ ಗಿಡಗಳು ಮತ್ತು ಸಿದ್ದು ಹಲಸಿನ ಗಿಡಗಳನ್ನು ಬೆಳೆಸಿ ಉತ್ತಮ ರೀತಿಯಲ್ಲಿ ರುಚಿಕರವಾದ ಆಹಾರವನ್ನು ಸೇವನೆ ಮಾಡಬಹುದು ಹಾಗಾಗಿ ರೈತರು ದನದ ಕೊಟ್ಟಿಗೆ ಗೊಬ್ಬರವನ್ನು ಬಳಸಿ ಬೆಳೆಯುವ ಬೆಳೆಯಲ್ಲಿ ಉತ್ತಮ ಆರೋಗ್ಯ ಸಿಗುತ್ತದೆ ಎನ್ನುತ್ತಾರೆ. ರಾಸಾಯನಿಕ ಗೊಬ್ಬರವನ್ನು ಬಳಸುವುದಕ್ಕಿಂತ ದನದ ಕೊಟ್ಟಿಗೆ ಗೊಬ್ಬರವನ್ನು ಬಳಸಿ ರಾಗಿ ಬೆಳೆಯುವುದರಿಂದ ಉತ್ತಮ ಇಳುವರಿಯನ್ನು ಪಡೆಯಬಹುದು ಹಾಗೆ ರಾಗಿ ತೆನೆಯಲ್ಲಿ ಹೆಚ್ಚು ಇಳುವರಿ ಸಹ ಬೀಳುತ್ತದೆ. ತುರುವೇಕೆರೆ ಕ್ಷೇತ್ರದ ಮಾ.ಶಾಸಕ ಮಸಾಲೆ ಜಯರಾಮ್ ಅವರು ತಮ್ಮ ಫಾರಂ ಹೌಸ್ ನಲ್ಲಿ ವಿವಿಧ ತಳಿಯ, ಹಳ್ಳಿಕಾರ್ ,ಅಮೃತ್ ಮಹಲ್ ,ಮಲೆನಾಡ ಗಿಡ್ಡ ,ಪುಂಗನೂರು,ಗಿರ್ ತಳಿಯ ನಾಟಿ ಹಸು ಮತ್ತು ಎತ್ತುಗಳನ್ನು ಸಾಕಿದ್ದು ಇವುಗಳ ಸಗಣಿ ಯಿಂದ ಕೊಟ್ಟಿಗೆ ಗೊಬ್ಬರ ಶೇಖರಿಸಿ ರಾಗಿ ಬೆಳೆಯನ್ನು ಬೆಳೆದು ಉತ್ತಮ ರೀತಿಯಲ್ಲಿ ಇಳುವರಿ ಬಂದಿರುವುದು ಸಂತಸ…

Read More

ತುಮಕೂರು: ಜಾತಿ, ಮತ, ಪಂಗಡ ಬಿಟ್ಟು ಎಲ್ಲಾ ಜನರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ.ಶ್ರೀಶಿವಕುಮಾರಸ್ವಾಮೀಜಿ ಎಂದು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ.ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿದ್ದಗಂಗಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂಸ್ಥಾಪಕರ ದಿನಾಚರಣೆ ಹಾಗೂ ಸ್ಪೂರ್ತಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಂಸ್ಥಾಪಕರಾದ ಶ್ರೀಶಿವಕುಮಾರಸ್ವಾಮೀಜಿಗಳ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಜಾತಿ ಭೇಧವಿಲ್ಲದೆ ಎಲ್ಲಾ ವರ್ಗದ ಮಕ್ಕಳಿಗೆ ಅನ್ನ, ಅಕ್ಷರ ,ಆಶ್ರಯ ನೀಡಿ, ಅವರ ಉನ್ನತ್ತಿಗೆ ಶ್ರಮಿಸಿದ ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ ಎಂದರು. ಭಕ್ತರಿAದ ನಡೆದಾಡುವ ದೇವರು ಎಂದು ಕರೆಯಿಸಿಕೊಂಡ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಮಠದಲ್ಲಿ ಓದುತ್ತಿರುವ ಮಕ್ಕಳನ್ನೇ ದೇವರೆಂದು ತಿಳಿದು, ಅವರ ಸೇವೆಯಲ್ಲಿ ಇಡೀ ಜೀವನವನ್ನೇ ಸವೆಸಿದವರು. ನಡೆ,ನುಡಿಗಳಲ್ಲಿ ವೆತ್ಯಾಸವಿಲ್ಲದೆ ಬದುಕಿದವರು. ಮಕ್ಕಳ ಜೊತೆಗೆ, ಗೋವುಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ಶ್ರೀಗಳು, ಮಾತೃ ಹೃದಯದ ಅವರು ಆನಾಥ ಮಕ್ಕಳಿಗೆ ತಾಯಿ ಯಾಗಿಯೇ ಸಾಕಿ ಸಲುಹಿದವರು.ಇಂದು ಇಡೀ ವಿಶ್ವದಲ್ಲಿ ಸಿದ್ದಗಂಗಾ ಮಠದಲ್ಲಿ ಓದಿದ ಮಕ್ಕಳು ಇದ್ದಾರೆ.ಅವರು ಶ್ರೀಮಠಕ್ಕೆ ಬಂದಾಗ…

Read More