Author: News Desk Benkiyabale

ತುರುವೇಕೆರೆ: ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ತೊಂದರೆಗಳ ಬಗ್ಗೆ ತಾಲೂಕಿನಾದ್ಯಂತ ಜಾಗೃತಿ ಆಂದೋಲನ ಮಾಡಲಾಗುವುದು ಎಂದು ತಹಸೀಲ್ದಾರ್ ಎ.ಎನ್. ಕುಂಇ ಅಹಮದ್ ತಿಳಿಸಿದರು. ತಾಲೂಕು ಕಛೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಾದಕ ದ್ರವ್ಯಗಳು ತಾಲೂಕಿನಲ್ಲಿ ಮಾರಾಟವಾಗುತ್ತಿದೆ ಎಂಬ ಸಂಗತಿ ತಿಳಿದು ಬಂದಿದ್ದು. ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ಹಲವಾರು ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಸಮಾಜಘಾತುಕ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ ಇದನ್ನು ತಪ್ಪಿಸುವ ಸಲುವಾಗಿ ತಾಲೂಕು ಆಡಳಿತ ಮಾದಕ ವಸ್ತುಗಳ ಮುಕ್ತ ತಾಲೂಕನ್ನಾಗಿ ಮಾಡಲು ಪಣ ತೊಟ್ಟಿದೆ ಎಂದು ತಿಳಿಸಿದರು. ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಉಂಟು ಮಾಡುವುದು. ಮಾದಕ ವಸ್ತುಗಳನ್ನು ಮಾರಾಟ ಮಾಡುವವರು ಮತ್ತು ಮಾದಕ ವಸ್ತುಗಳನ್ನು ಸೇವಿಸುವವರ ಬಗ್ಗೆಯೂ ಮಾಹಿತಿ ನೀಡಲು ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಅಲ್ಲದೆ ಅವರಿಗೆ ತಾಲೂಕು ಆಡಳಿತದಿಂದ ಗೌಪ್ಯವಾಗೇ ಬಹುಮಾನವನ್ನೂ ಸಹ ನೀಡಲಾಗುವುದು. ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತ ತಂಡ…

Read More

ತುಮಕೂರು : ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಹಂತದ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ಗುಲಾಬಿ ಆಂದೋಲನ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಸುಮಾರು 3 ಲಕ್ಷ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ಗುಲಾಬಿ ನೀಡುವ ಮೂಲಕ ತಂಬಾಕು ದುಷ್ಪರಿಣಾಮಗಳು ಹಾಗೂ ತಂಬಾಕು ಚಟದಿಂದ ಮುಕ್ತಿ ಹೊಂದುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್, ಸ್ಥಾನಿಕ ವೈದ್ಯಾಧಿಕಾರಿ ಡಾ: ಚೇತನ್, ತಾಲೂಕು ಆರೋಗ್ಯ ಅಧಿಕಾರಿ ಡಾ: ಲಕ್ಷ್ಮೀಕಾಂತ್, ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಹೆಚ್. ಬಿ. ಪ್ರಕಾಶ್, ಜಿಲ್ಲಾ ಆರೋಗ್ಯ…

Read More

ತುಮಕೂರು : ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಅನುಷ್ಟಾನಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಹಕಾರ ಅಗತ್ಯ. ತಂಬಾಕಿನಿAದ ತಯಾರಿಸಿದ ಉತ್ಪನ್ನಗಳನ್ನು ಬಳಕೆ ಮಾಡಿದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸಬೇಕು. ತಂಬಾಕಿನ ಚಟದಿಂದ ಹಲವಾರು ಕುಟುಂಬಗಳು ಬಡತನ ರೇಖೆಗಿಂತ ಕೆಳಗೆ ಬರುತ್ತಿವೆ. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣಕ್ಕಾಗಿ ತಂಬಾಕು ನಿಷೇಧ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಪೊಲೀಸ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮತ್ತಿತರ ಇಲಾಖೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಈ…

Read More

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಸಮಾಜಕಾರ್ಯ ವಿಭಾಗ, ರಾಜ್ಯಶಾಸ್ತç ವಿಭಾಗ, ಕಲಾ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಸ್ನಾತಕೋತ್ತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪುರುಷ ವಿದ್ಯಾರ್ಥಿ ನಿಲಯಗಳು ರಾಷ್ಟಿçÃಯ ಗ್ರಂಥಾಲಯದ ಸಪ್ತಾಹದ ಅಂಗವಾಗಿ ಗುರುವಾರ ಆಯೋಜಿಸಿದ್ದ ‘ಗ್ರಂಥಾಲಯ ಜಾಥಾ’ಗೆ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮತ್ತು ಕುಲಸಚಿವೆ ನಾಹಿದಾ ಜûಮ್ ಜûಮ್ ಚಾಲನೆ ನೀಡಿದರು. ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಅಧ್ಯಕ್ಷ ಪ್ರೊ. ಬಿ. ಟಿ. ಸಂಪತ್ ಕುಮಾರ್, ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ. ರಮೇಶ್ ಬಿ., ರಾಜ್ಯಶಾಸ್ತç ವಿಭಾಗದ ಅಧ್ಯಕ್ಷ ಪ್ರೊ. ಬಸವರಾಜ ಜಿ., ಕಲಾ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸುಮಾದೇವಿ ಎಸ್., ಸ್ನಾತಕೋತ್ತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪುರುಷ ವಿದ್ಯಾರ್ಥಿ ನಿಲಯಗಳ ನಿಲಯಪಾಲಕರಾದ ಡಾ. ಕುಮಾರ…

Read More

ತುಮಕೂರು: ಸ್ವಾತಂತ್ರ÷್ಯ ಭಾರತದ ಮೊದಲ ಪ್ರಧಾನಿ ಪಂಡಿತ ಜವಹರ್ ನೆಹರು ಅವರು ಅಧುನಿಕ ಭಾರತದ ನಿರ್ಮಾತೃವಾಗಿದ್ದು, ಅವರ ದೂರದೃಷ್ಟಿ ಆಡಳಿತದಿಂದಲೇ ಭಾರತ ಅಭಿವೃದ್ಧಿ ಶೀಲ ರಾಷ್ಟçಗಳ ಪಾಲಿಗೆ ಸೇರಲು ಸಾಧ್ಯವಾಯಿತು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಪಂಡಿತ್ ನೆಹರು ಅವರು 134 ನೇ ಜನ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗರ್ಭ ಶ್ರೀಮಂತ ಮನೆತನದಲ್ಲಿ ಜನಿಸಿ, ದೇಶಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ಮಹಾನ್ ದೇಶಪ್ರೇಮಿ ನೆಹರು ಎಂದು ಬಣ್ಣಿಸಿದರು. ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ದೇಶದ ಸ್ವಾತಂತ್ರ÷್ಯ ಹೋರಾಟದಲ್ಲಿ ಪಾಲ್ಗೊಂಡ ನೆಹರು ಅವರ ಬಗ್ಗೆ ಕೆಲ ವಿಕೃತ ಮನಸ್ಸುಗಳು ಮನಬಂದತೆ ಮಾತನಾಡುವುದನ್ನು ನೋಡಿದಾಗ ಮನಸ್ಸಿಗೆ ನೋವಾಗುತ್ತದೆ. ನೆಹರು ಅವರಿಗೆ ಮಕ್ಕಳು ಮತ್ತು ಗುಲಾಬಿ ಎಂದರೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲು ಸಲಹೆ ನೀಡಿದ್ದರು. ಮಕ್ಕಳಿಗೆ ಅಚ್ಚುಮೆಚ್ಚಿನ ಚಾಚಾ ಆಗಿ,…

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಹಾಗೂ ತುಮಕೂರು ಜಿಲ್ಲಾ ಕುಳುವ ಮಹಾಸಂಘ (ರಿ.)ವತಿಯಿಂದ ನವೆಂಬರ್ 17 ರ ಭಾನುವಾರ ಬೆಳಗ್ಗೆ 10:30 ಗಂಟೆಗೆ ಕನ್ನಡ ಭವನದಲ್ಲಿ ನಿಜ ನುಲಿಚಂದಯ್ಯ ಅವರ 917 ನೇ ಜನ್ಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಕುಳುವ ಮಹಾ ಸಂಘದ ಜಿಲ್ಲಾಧ್ಯಕ್ಷ ಲೋಕೇಶ್ ಸ್ವಾಮಿ ತಿಳಿಸಿದ್ದಾರೆ. ಕರ್ನಾಟದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿರುವ ಸಾಮಾಜಿಕ ಪರಿವರ್ತನಾ ಕ್ರಾಂತಿಯು 12ನೇ ಶತಮಾನದಲ್ಲಿ ಬಸವಾದಿ ಪ್ರಮಥರಿಂದ ಕಾಯಕತ್ವದ ಆಧಾರದಲ್ಲಿ ಜಾತಿ, ಲಿಂಗ, ಧರ್ಮವೆಂಬ ಬೇಧಭಾವವಿಲ್ಲದೆ ಶರಣರ ದಾಸೋಹದ ಮೂಲಕ ಕಾಯಕಗೈದವರುಶರಣ ಶ್ರೀ ನುಲಿಯ ಚಂದಯ್ಯ. ಇವರು ಬಸವಣ್ಣನವರ ಸಮಕಾಲೀನರಾಗಿದ್ದು, ಅವರ ಜೊತೆ ಕೈಜೋಡಿಸಿದ ಪ್ರಮುಖ ಶರಣರಲ್ಲಿ ಇವರು ಒಬ್ಬರಾಗಿರುತ್ತಾರೆ. ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿರುವ ಇವರು ಹುಟ್ಟಿದ್ದು ವಿಜಾಪುರ ಜಿಲ್ಲೆ ಶವಣಗಿ, ಮುಂದೆ ಕಲ್ಯಾಣಕ್ಕೆ ಬಂದು, ಕಾಯಕ ದಾಸೋಹಗಳಲ್ಲಿ…

Read More

ತುಮಕೂರು: ಕ್ರೀಡೆ, ನಾಟಕ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ತುಮಕೂರು ತಾಲೂಕಿನ ಮೇಳೆಹಳ್ಳಿ ಗ್ರಾಮದ ಮಕ್ಕಳು ನಿರಂತರವಾಗಿ ರಾಜ್ಯ ಮತ್ತು ರಾಷ್ಟçಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಊರಿನ ಹೆಸರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರ‍್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರಕ್ಕೆ ಸಮೀಪದ ಮೇಳೆಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿರುವ ಹಿನ್ನೆಲೆಯಲ್ಲಿ ಹಿಮಾಲಯ ಜೊತೆಗೂಡಿ ಮಕ್ಕಳನ್ನು ಬೀಳ್ಕೂಡುವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಗ್ರಾಮೀಣ ಭಾಗದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ.ಆದರೆ ಅವರಿಗೆ ಸರಿಯಾದ ಮರ‍್ಗರ‍್ಶನ ಮತ್ತು ಹಣಕಾಸಿನ ನೆರವು ನೀಡಿದರೆ, ಅವರು ಸಹ ಒಲಂಪಿಕ್‌ನಂತಹ ಕ್ರೀಡೆಗಳಲ್ಲಿ ಭಾಗವಹಿಸಿ ದೇಶಕ್ಕೆ ಹೆಸರು ತರುವ ಕೆಲಸ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡಲು ಹಿಮಾಲಯ ಕಂಪನಿ ಮುಂದೆ ಬಂದಿರುವುದು ಸ್ವಾಗತರ‍್ಹ ಬೆಳೆವಣಿಗೆ. ಇದೇ ರೀತಿ ತುಮಕೂರು ಪರಿಸರದಲ್ಲಿ ಕರ‍್ಯಚಟುವಟಿಕೆ ನಡೆಸುತ್ತಿರುವ ಕೈಗಾರಿಕೆಗಳು ಗ್ರಾಮೀಣ…

Read More

ಸಮಾಜದಲ್ಲಿ ಮಕ್ಕಳಿಲ್ಲದ ಎಷ್ಟೋ ದಂಪತಿಗಳು ಬದುಕಿನುದ್ದಕ್ಕೂ ಕೊರಗಿನಲ್ಲೆ ಅಂತ್ಯ ಕಾಣುತ್ತಾರೆ. ಕೆಲ ತಾಯಂದಿರು ವಿವಿಧ ಕಾರಣಗಳಿಂದ ಹೆತ್ತ ಮಗುವನ್ನೇ ಆಸ್ಪತ್ರೆ, ಬೀದಿ ಪಾಲು ಮಾಡುತ್ತಿದ್ದಾರೆ. ಮಗು ಬೇಡವಾದಲ್ಲಿ ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ, ಪೊದೆಗಳಲ್ಲಿ ಎಸೆದು ಹೋಗುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಬೇಡವಾದ ಮಗುವನ್ನು ಎಲ್ಲೆಂದರಲ್ಲಿ ಎಸೆದು ಹಿಂಸಿಸದೆ ಜಿಲ್ಲಾಸ್ಪತ್ರೆ ಹೆರಿಗೆ ವಾರ್ಡ್, ನಗರದಲ್ಲಿರುವ ಬಾಲಕಿಯರ ಬಾಲಮಂದಿರದ ಆವರಣ, ಕುಣಿಗಲ್ ತಾಲೂಕು ಭಕ್ತರಹಳ್ಳಿ ವಾಣಿಗೆರೆಯಲ್ಲಿರುವ ದಯಾಕಿರಣ ದತ್ತು ಕೇಂದ್ರದಲ್ಲಿ ಪರಿತ್ಯಕ್ತ ಮಕ್ಕಳಿಗಾಗಿಯೇ ಅಳವಡಿಸಿರುವ “ಮಮತೆಯ ತೊಟ್ಟಿಲು”ನಲ್ಲಿ ಹಾಕುವ ಮೂಲಕ ಎಳೆಯ ಜೀವಗಳನ್ನು ರಕ್ಷಿಸಬೇಕು. ಪರಿತ್ಯಕ್ತ ಮಕ್ಕಳನ್ನು ಗಮನಿಸಿ ವರದಿ ಮಾಡದಿದ್ದಲ್ಲಿ ಅಪರಾಧ: ಬಾಲನ್ಯಾಯ ಕಾಯ್ದೆ-2015 ತಿದ್ದುಪಡಿ 2021ರನ್ವಯ ಯಾವುದೇ ವ್ಯಕ್ತಿ, ಯಾವುದೇ ಸಂಸ್ಥೆ, ಆಸ್ಪತ್ರೆ, ಹೆರಿಗೆ ಆಸ್ಪತ್ರೆ, ನರ್ಸಿಂಗ್ ಹೋಂ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತೊರೆಯಲ್ಪಟ್ಟ ಮಕ್ಕಳನ್ನು 24 ಗಂಟೆಯೊಳಗಾಗಿ ಮಕ್ಕಳ ಸಹಾಯವಾಣಿ-1098, ಸ್ಥಳೀಯ ಪೊಲೀಸ್ ಠಾಣೆ, ಮಕ್ಕಳ ಕಲ್ಯಾಣ ಸಮಿತಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕ…

Read More

ತುಮಕೂರು: ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ  ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ತುಮಕೂರು ಜಿಲ್ಲಾ ಬಾಲಕ-ಬಾಲಕಿಯರ ಕಬಡ್ಡಿ ತಂಡಗಳ ಆಯ್ಕೆ ಪ್ರಕ್ರಿಯೆಯನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನ. 15 ರಂದು ಬೆಳಿಗ್ಗೆ 8.30ಕ್ಕೆ ಹಮ್ಮಿಕೊಳ್ಳಲಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಆಸಕ್ತ ಕಬಡ್ಡಿ ಕ್ರೀಡಾಪಟುಗಳು ಭಾಗವಹಿಸುವಂತೆ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಕೃಷ್ಣೇಗೌಡ ಪ್ರಕಟಣೆಯಲ್ಲ ಕೋರಿದ್ದಾರೆ. ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ  ಕೋಲಾರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಜೂನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್-2024ನ್ನು ಕೋಲಾರದ ಬೈರೇಗೌಡ ನಗರ ಮೈದಾನದಲ್ಲಿ ನ. 22 ರಿಂದ 24 ರವರೆಗೆ ಆಯೋಜಿಸಲಾಗಿದೆ. ಈ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಲಿಚ್ಚಿಸುವ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನ. 15 ರಂದು ನಡೆಯಲಿದೆ. ಈ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಲಿಚ್ಚಿಸುವ ಬಾಲಕ ಕ್ರೀಡಾಪಟುಗಳು 70 ಕೆ.ಜಿ. ಮೀರಬಾರದು, 20 ವರ್ಷ (31-01-2025ಕ್ಕೆ) ಮೀರಿರಬಾರದು. ಬಾಲಕಿಯರು 65 ಕೆ.ಜಿ ಮೀರಬಾರದು 20 ವರ್ಷ (31-01-2025ಕ್ಕೆ) ಮೀರಿರಬಾರದು. ಆಯ್ಕೆ…

Read More

ತುಮಕೂರು : ದೇಶದುದ್ದಕ್ಕೂ ಎಲ್ಲಾ ಜನ ಸಮುದಾಯದಲ್ಲಿ ಸ್ವಾಭಿಮಾನದ ಕಿಚ್ಚು ಹತ್ತಿಸಿ ಸಮ ಸಮಾಜದ ನಿರ್ಮಾಣಕ್ಕೆ ಸಮತೆಯನ್ನು ಬೋಧಿಸಿದ ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಹಂಪಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಎಸ್. ಚಿನ್ನಸ್ವಾಮಿ ಸೋಸಲೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ: ಗುಬ್ಬಿವೀರಣ್ಣ ಕಲಾ ಕ್ಷೇತ್ರದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು. ಕರ್ನಾಟಕ ಜನಸಂಸ್ಕೃತಿಯಲ್ಲಿ ಸಮಾನ ಭಾವ ಮೂಡಿಸಿ ವಾಸ್ತವತೆಯನ್ನು ಸಾರಿದ ಶರಣ ಸಾಹಿತ್ಯದ ರೂವಾರಿ ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅಂತೆಯೇ ದೇಶದಾದ್ಯಂತ ತಳಸಮುದಾಯಗಳನ್ನು ಸಮತೆಯೆಡೆಗೆ ಸಾಗಲು ಬೆಳಕು ತೋರಿದ ಡಾ: ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಅವಶ್ಯಕತೆಯಿದೆ ಎಂದರು. ಇತಿಹಾಸದಲ್ಲಿ ತಳ ಸಮುದಾಯದ ಓಬವ್ವ ಒಬ್ಬ ಕಾವಲುಗಾರನ ಪತ್ನಿಯಾಗಿ ಸ್ವಾಮಿನಿಷ್ಠೆಗಾಗಿ ಹಾಗೂ ತಮ್ಮ ರಾಜ್ಯದ ಉಳಿವಿಗಾಗಿ ಒನಕೆಯಿಂದ…

Read More