ತುಮಕೂರು ನಗರದ ಶಿರಾಗೇಟ್ ಕನಕ ವೃತ್ತದಲ್ಲಿ ಭಕ್ತ ಕನಕದಾಸರ 537ನೇ ಜಯಂತಿಯ ಪ್ರಯುಕ್ತ ರೇವಣಸಿದ್ದೇಶ್ವರ ಮಠದ ಶ್ರೀ ಬಿಂದು ಶೇಖರ್ ಒಡೆಯರ್ ಸಾನಿಧ್ಯದಲ್ಲಿ ಕನಕದಾಸರ ಪುತ್ತಳಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿ ಉತ್ಸವಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಚಾಲನೆ ನೀಡಿದರು. ಶಾಸಕ ಜಿಬಿ ಜ್ಯೋತಿಗಣೇಶ್ ಜಿ.ಪಂ ಸಿಇಓ ಜಿ.ಪ್ರಭು,ಪ್ರಜಾ ಪ್ರಗತಿ ಸಂಪಾದಕರಾದ ಎಸ್ ನಾಗಣ್ಣ, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ,ಪಾಲಿಕೆ ಆಯುಕ್ತರಾದ ಬಿ ವಿ ಆಶ್ವೀಜ,ಪೋಲಿಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಕಾಳಿದಾಸ ವಿದ್ಯಾರ್ಧಕ ಸಂಘದ ಅಧ್ಯಕ್ಷ ಮೈಲಪ್ಪ ,ಕುರುಬ ಸಂಘದ ಜಿಲ್ಲಾಧ್ಯಕ್ಷ ಟಿ ಆರ್ ಸುರೇಶ್ ಪಾಲಿಕೆ ಮಾಜಿ ಸದಸ್ಯರುಗಳಾದ ಎನ್ ಮಹೇಶ್,ಕೆಂಪರಾಜು,ಇಂದ್ರ ಕುಮಾರ್ , ಲಕ್ಷಿ÷್ಮ ನರಸಿಂಹರಾಜು,ಭೀಮ ರಾಜು, ಕಸಾಪ ಅಧ್ಯಕ್ಷರಾದ ಕೆ ಎಸ್ ಸಿದ್ದಲಿಂಗಪ್ಪ, ರ್ಮರಾಜ್,ಜ್ವಾಲಾಮಾಲ ರಾಜಣ್ಣ,ಅನಿಲ್ ಕುಮಾರ್ , ನಳಿನಾ ಇಂದ್ರ ಕುಮಾರ್ ,ಯೋಗೀಶ್ ,ಹಾಗೂ ಜನಾಂಗದ ಮುಖಂಡರು ಗಳು ಉಪಸ್ಥಿತರಿದ್ದರು.
Author: News Desk Benkiyabale
ತುಮಕೂರು : ಕನಕದಾಸರು ತಮ್ಮ ಕೀರ್ತನೆ ಮತ್ತು ವಚನಗಳ ಮೂಲಕ ವೈಚಾರಿಕತೆಗೆ ಹೊಸ ಅರ್ಥ ತಂದು ಕೊಟ್ಟ ಶ್ರೇಷ್ಠ ದಾಸಸಂತರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಳಿದಾಸ ವಿದ್ಯಾವರ್ಧಕ ಸಂಘ ಮತ್ತು ಜಿಲ್ಲೆಯ ಕುರುಬರ ಸಂಘ ಸಂಸ್ಥೆಗಳ ವತಿಯಿಂದ ಸೋಮವಾರ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆದ ಸಂತಶ್ರೇಷ್ಠ ಕನಕದಾಸರ 537ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕದಾಸರು ಬಾಲ್ಯದಲ್ಲಿ ಅಪಾರ ದೈವಭಕ್ತಿಯನ್ನು ಹೊಂದಿದ್ದರು. ದೇವರಿಲ್ಲದ ಸ್ಥಳವೇ ಇಲ್ಲಾ ದೇವರು ನಮ್ಮ ಸರಿ-ತಪ್ಪುಗಳನ್ನು ಗಮನಿಸುತ್ತಿರುತ್ತಾನೆ. ಸರಿದಾರಿಯಲ್ಲಿ ನಡೆದಾಗ ಮಾತ್ರ ದೇವರಿಗೆ ನಾವು ಪ್ರಿಯವಾಗುತ್ತೇವೆ ಎಂದು ನಂಬಿದ್ದರು. ಕನಕದಾಸರ ನಂಬಿಕೆಯAತೆ ನಾವು ಮಾಡುವ ಪ್ರತಿಯೊಂದು ಕೆಲಸವನ್ನು ನಮ್ಮ ಸುತ್ತಮುತ್ತಲಿನ ಜನ ಗಮನಿಸುತ್ತಿರುತ್ತಾರೆ ಎಂಬ ಎಚ್ಚರಿಕೆ ಇರಬೇಕು. ಯಾವುದೇ ಕೆಲಸವಾಗಲಿ ಶ್ರದ್ಧೆ- ಭಕ್ತಿಯಿಂದ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ತಿಳಿಸಿದರಲ್ಲದೆ…
ಹುಳಿಯಾರು: ಹುಳಿಯಾರಿನ ದುರ್ಗಮ್ಮನ ಗುಡಿ ಬೀದಿಯಲ್ಲಿರುವ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯು 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಯುವಕ ಯುವತಿಯರಿಗೆ 2 ತಿಂಗಳ ಉಚಿತ ಟೈಲರಿಂಗ್ ತರಬೇತಿ (ಸಿದ್ದ ಉಡುಪು ತಯಾರಿಕೆ) ನೀಡಲಿದ್ದು, ಆಸಕ್ತರು ಮೇಲ್ಕಂಡ ವಿಳಾಸದಲ್ಲಿ 25/11/2024 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಪಡೆದಂತವರಿಗೆ ಜಿಲ್ಲೆಯ ಪ್ರಖ್ಯಾತ ಗಾರ್ಮೆಂಟ್ಸ್ ಗಳಲ್ಲಿ ಉದ್ಯೋಗ ಕಲ್ಪಿಸಲು ನೆರವು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಿ.ಎನ್.ಪ್ರಭು, ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆ. ಹುಳಿಯಾರು 9141689595 9448748259.
ತುಮಕೂರು: ಮಾದಕ ವ್ಯಸನ ಇಂದು ಸಾಮಾಜಿಕ ಪಿಡುಗಾಗಿ ಪರಿಣಮಿಸುತ್ತಿದೆ. ಈ ವ್ಯಸನದಿಂದ ಸಮಾಜವನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಸಿದ್ದಾರ್ಥ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್ರವಿಪ್ರಕಾಶ್ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾನಿಲಯದಲ್ಲಿ ಬಯೋ ಮೆಡಿಕಲ್ ಇಂಜಿನಿಯರಿAಗ್ ವಿಭಾಗದಿಂದ ಶನಿವಾರದಂದು ಆಯೋಜಿಸಿದ್ದ ‘ಬಯೋ ಮೆಡ್ ಸ್ಪಾರ್ಕ2024’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಹೆಚ್ಚಾಗಿ ಮಕ್ಕಳು ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇದರಿಂದಾಗಿ ಸಮಾಜದ ಆರೋಗ್ಯ ಹಾಳಾಗುತ್ತಿದೆ. ಹಲವಾರು ಪೋಷಕರಿಗೆ ಮಾದಕ ವ್ಯಸನದ ಸಾಮಾಜಿಕ ಪಿಡುಕು ಬಹುದೊಡ್ಡ ತಲೆ ನೋವಾಗಿ ಪರಿಣಮಿಸುತ್ತದೆ. ಹೀಗೆ ಮುಂದುವರಿದರೆ ಇಡೀ ಒಂದು ಯುವ ತಲೆಮಾರು ನಾಶವಾಗುವ ಭೀತಿಯಿದೆ. ಹಾಗಾಗಿ ನಾವೆಲ್ಲರೂ ಈ ಮಾದಕ ವ್ಯಸನದ ವಿರುದ್ಧ ಹೋರಾಡಬೇಕಿದೆ ಎಂದು ವಿದ್ಯಾರ್ಥಿಗಳಿಗೆ ಡಾ.ಎಂಎಸ್ರವಿಪ್ರಕಾಶ್ ಅವರು ಕರೆ ನೀಡಿದರು. ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಕೆವಿಎಂ ಮೆಡ್ಟೆಕ್ನ ಸಂಸ್ಥಾಪಕ ನಿರ್ದೇಶಕರಾದ ವೈಶ್ಣಮಿ ಕೃಷ್ಣನ್ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಅಭ್ಯಾಸವನ್ನು ರೂಢಿಸಿಕೊಂಡು ನೆಮ್ಮದಿ ಜೀವನ ನಡೆಸಬೇಕು.…
ತುಮಕೂರು: ನ.18ರಂದು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವಕೀಲರು ಮತ್ತು ಸಮಾಜ ಸೇವಕರಾದ ಆರ್.ತಿಪ್ಪೇಸ್ವಾಮಿರವರಿಗೆ ಸಂತಶ್ರೇಷ್ಠ ಕನಕದಾಸರ 537ನೇ ಜಯಂತ್ಯುತ್ಸವದಲ್ಲಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಸಮಾಜಸೇವೆಗಾಗಿ ತುಮಕೂರು ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿರವರನ್ನು ಜಿಲ್ಲಾಡಳಿತ ಗುರುತಿಸಿ ಅವರಿಗೆ ಕನಕದಾಸರ ಜಯಂತಿಯಲ್ಲಿ ಸನ್ಮಾನ ಮಾಡುತ್ತಿರುವುದಕ್ಕೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ ಹರ್ಷ ವ್ಯಕ್ತಪಡಿಸಿ ಆರ್.ತಿಪ್ಪೇಸ್ವಾಮಿರವರು ಸಮಾಜಸೇವೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ ಸಮುದಾಯದ ಒಳಿತಿಗಾಗಿ,ಜಿಲ್ಲಾ ಕುರುಬರ ಸಂಘದ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ,ಬಡವರು, ದೀನ ದಲಿತರಿಗಾಗಿ,ಬಾಯಿಲ್ಲದವರಿಗೆ ಧ್ವನಿಯಾಗಿ ಉಚಿತ ಕಾನೂನು ಸಲಹೆಗಳನ್ನು ನೀಡುತ್ತಾ ಸಮಾಜ ಮತ್ತು ಸಮುದಾಯದ ಒಳಿತಿಗಾಗಿ ದುಡಿಯುತ್ತಿರುವುದು ನಮಗೆ ಹೆಮ್ಮೆ,ಅವರಿಗೆ ಪ್ರಶಸ್ತಿ ಬಂದಿರುವುದು ವಕೀಲರ ಸಮುದಾಯಕ್ಕೆ ಸಹ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು. ಆರ್.ತಿಪ್ಪೇಸ್ವಾಮಿರವರಿಗೆ ಪ್ರಶಸ್ತಿ ಬಂದಿರುವುದಕ್ಕೆ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು,ಹಿರಿಯ,ಕಿರಿಯ ವಕೀಲರು,ಪತ್ರಕರ್ತರು ಜಿಲ್ಲಾ ಕುರುಬರ ಸಂಘ, ಕಾಳಿದಾಸ ವಿದ್ಯಾವರ್ಧಕ ಸಂಘ,ಕುರುಬ ಸಮುದಾಯದ ಗಣ್ಯರು, ಹರ್ಷ ವ್ಯಕ್ತಪಡಿಸಿದ್ದಾರೆ.
ತುಮಕೂರು: ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ಕ್ಯಾಂಪಸ್ ಮಾಡಲು ವಿವಿಯ ಜೀವವೈವಿಧ್ಯ ಕೋಶದೊಂದಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ವಿವಿ ವಿಜ್ಞಾನ ಕಾಲೇಜಿನ ಜೀವಾವರಣಶಾಸ್ತç ಮತ್ತು ಪರಿಸರ ವಿಜ್ಞಾನ ಅಧ್ಯಯನ ವಿಭಾಗವು ಶುಕ್ರವಾರ ಆಯೋಜಿಸಿದ್ದ ‘ತುಮಕೂರು ವಿವಿ ಆವರಣ ಹಾಗೂ ಬಿದರಕಟ್ಟೆ ಕ್ಯಾಂಪಸ್ನಲ್ಲಿ ಮರಗಳ ಜಿಯೋ ಟ್ಯಾಗಿಂಗ್ ಮತ್ತು ಜೀವವೈವಿಧ್ಯ ದಾಖಲಾತಿ’ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕೇವಲ ಪ್ರಚಾರಕ್ಕಾಗಿ ಸಸಿಗಳನ್ನು ನೆಡಬಾರದು. ಸಸಿಯು ಹೆಮ್ಮರವಾಗುವ ತನಕವೂ ಅದರ ಪಾಲನೆ, ಪೋಷಣೆ ನಮ್ಮದಾಗಬೇಕು. ಮಾಲಿನ್ಯ ರಹಿತ ಪರಿಸರ ನಿರ್ಮಿಸಲು ಸಾಧ್ಯವಾಗದಿದ್ದರೂ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಶುದ್ಧ ಗಾಳಿ, ನೀರು ನಮ್ಮ ಆರೋಗ್ಯ ಕಾಪಾಡುವುದರಲ್ಲಿ ಮುಖ್ಯಪಾತ್ರವಹಿಸುತ್ತವೆ ಎಂದರು. ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಶೇಟ್ ಎಂ. ಪ್ರಕಾಶ್, ಜೀವಾವರಣಶಾಸ್ತç ಮತ್ತು ಪರಿಸರ ವಿಜ್ಞಾನ ಅಧ್ಯಯನ ವಿಭಾಗದ ಡಾ. ದ್ವಾರಕಾನಾಥ್ ವಿ. ಉಪಸ್ಥಿತರಿದ್ದರು.
ತುಮಕೂರು : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಡಿಸೆಂಬರ್ 2ರಂದು ಆಗಮಿಸುತ್ತಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ, ಸವಲತ್ತುಗಳ ವಿತರಣೆಗೆ ಸಕಲ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷ ಉಂಟಾಗದAತೆ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳಲ್ಲಿ ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ವರದಿ ಸಲ್ಲಿಸಬೇಕು ಹಾಗೂ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಕೆಲಸಗಳು ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಲಿರುವ ಕಾಮಗಾರಿ, ಶಂಕುಸ್ಥಾಪನೆ ನೆರವೇರಿಸಲಿರುವ ಕಾಮಗಾರಿ ಹಾಗೂ ಇಲಾಖೆಗಳಿಂದ ವಿತರಿಸಲಾಗುವ ಸವಲತ್ತುಗಳ ವಿವರವನ್ನು ದೃಢೀಕರಿಸಿ ನಿಖರ ಮಾಹಿತಿಯನ್ನು ಸಲ್ಲಿಸಬೇಕು. ಸವಲತ್ತು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ, ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರುವ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶಿಸಿದರು. ಸಭೆಯಲ್ಲಿ ಅಪರ…
ಮಧುಗಿರಿ: ದೂರವಾಣಿಯಿಂದ ವಿದ್ಯಾರ್ಥಿಗಳ ಜೀವನ ವಿಕಾಸವಾಗಬೇಕೆ ಹೊರತು ವಿಕಾರವಾಗಬಾರದು, ಎಂದು ಕುಂಚಿಟಿಗ ಮಹಾ ಸಂಸ್ಥಾನ ಮಠ ಶ್ರೀಕ್ಷೇತ್ರ ಹೊಸದುರ್ಗ ಶ್ರೀ ಶ್ರೀ ಶಾಂತವೀರ ಮಹಾ ಸ್ವಾಮೀಜಿ ತಿಳಿಸಿದ್ದಾರೆ. ಕೊರಟಗೆರೆ ತಾಲೂಕಿನ ಕಾಶಿ ಅನ್ನಪೂರ್ಣೇಶ್ವರಿ ಮಹಾಸಂಸ್ಥಾನ ಮಠದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಇರಕಸಂದ್ರ ಕಾಲೋನಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು* ದೂರಸಂಪರ್ಕ ಅನೇಕ ಸಾಂಸಾರಿಕ ತೊಡಕುಗಳಿಗೆ ಕಾರಣವಾಗಿದೆ ಶಿಕ್ಷಣವೆಂದರೆ ಕೇವಲ ಉದ್ಯೋಗಕ್ಕಾಗಿ ಅಲ್ಲ ಶಿಕ್ಷಣವನ್ನು ಸಂಸ್ಕಾರಕ್ಕಾಗಿ ಸನ್ನಡತೆಗಾಗಿ ಸದಾಚಾರಕ್ಕಾಗಿ ಸದುವಿನಯಕ್ಕಾಗಿ ಪಡೆದಾಗ ಶಿಕ್ಷಣಕ್ಕೆ ಮೌಲ್ಯ ಸಿಗುತ್ತದೆ ಕೇವಲ ಅಂಕಗಳಿಕೆಗಾಗಿ ಶಿಕ್ಷಣಕ್ಕೆ ಮಾರುಹೋಗಿರುವ ಇಂದಿನ ವಿದ್ಯಾರ್ಥಿಗಳು ಮತ್ತು ಪೋಷಕರು ನೈತಿಕ ಶಿಕ್ಷಣದಿಂದ ದೂರಸರಿತಿರುವುದು ಆತಂಕಕಾರಿ ಬೆಳವಣಿಗೆ ಗುರುಕುಲ ಮಾದರಿ ಸಾಮಾಜಿಕ ಬದ್ಧತೆ ಜನಪರ ಜೀವ ಪರ ಸೌಹಾರ್ದ ಸಹಬಾಳ್ವೆಯ ಶ್ರೇಷ್ಠ ಶಿಕ್ಷಣದ ಅಗತ್ಯತೆ ಇಂದು ಹೆಚ್ಚಾಗಿ ಬೇಕಾಗಿದೆ ರಾಷ್ಟ್ರೀಯ ಸೇವ ಯೋಜನೆಯ ಮೂಲಕ ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ರೂಡಿಸಿಕೊಂಡು…
ತುಮಕೂರು: ಸಾಮಾಜಿಕ ವಾಸ್ತವ ಹಾಗೂ ಅರಿವು ಪಡೆಯಲು ವಿದ್ಯರ್ಥಿಗಳು ರೈತ ಚಳವಳಿ, ಸಮತಾವಾದಿ ಚಳವಳಿಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ತಪ್ಪಿಲ್ಲ. ಇದರಿಂದ ಸೋಷಿಯೋ ಎಕನಾಮಿಕ್ ರ್ಥವಾಗುವುದರೊಂದಿಗೆ ವಕೀಲಿ ವೃತ್ತಿಗೂ ಅನುಕೂಲವಾಗುತ್ತದೆ ಎಂದು ಹಿರಿಯ ಪತ್ರರ್ತ ಹಾಗೂ ವಕೀಲರಾದ ವೀರೇಂದ್ರ ಪಿ.ಎಂ ತಿಳಿಸಿದರು. ನಗರದ ಶೆಟ್ಟಿಹಳ್ಳಿ ರಸ್ತೆಯ ಸುಫಿಯ ಕಾನೂನು ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ 2024-25ನೇ ಶೈಕ್ಷಣಿಕ ಸಾಲಿನ ಕ್ರೀಡೆ, ಎನ್ ಎಸ್ ಎಸ್, ಕಾನೂನು ಸೇವೆಗಳ ಕೇಂದ್ರ, ಯುವ ರೆಡ್ ಕ್ರಾಸ್, ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಕಾನೂನು ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತೀಯ ಕರ್ಪೊರೇಟ್ ಕ್ಷೇತ್ರ ದಿನದಿಂದ ದಿನಕ್ಕೆ ವಿಸ್ತರಿಸಿಕೊಳ್ಳುತ್ತಿದೆ. ಅದಕ್ಕೆ ಪೂರಕವಾಗಿ ತಯಾರಿ ಅಗತ್ಯವಾಗಿದೆ. ವ್ಯವಹಾರಿಕ ಜಗತ್ತಿಗೆ ಹೊಂದಿಕೊಳ್ಳಲು ಸಿನಿಮಾ, ವಾಣೀಜ್ಯ ವಿಷಯಾಂಶಗಳನ್ನೂ ಬಿಡದೆ ಅಧ್ಯಯನ ಮಾಡಬೇಕು. ಭಾಷಾ ಕೌಶಲ್ಯ, ಬರವಣಿಗೆ, ಸಂವಹನ ಕಲೆ ವಕೀಲಿ ವೃತ್ತಿಯಲ್ಲಿ ಕೈ ಹಿಡಿಯುತ್ತದೆ. ಇಂಗ್ಲೀಷ್ ಜೊತೆಗೆ ಮಾತೃ ಭಾಷೆ ಕನ್ನಡದಲ್ಲಿ…
ತುಮಕೂರು; ವಿದ್ಯಾರ್ಥಿಗಳು ತ್ಯಾಗ ಮತ್ತು ಸತ್ಯದ ಮನೋಭಾವನೆ ಬೆಳೆಸಿಕೊಂಡರೆ, ಸಾಧನೆಯ ಮಾರ್ಗದಲ್ಲಿ ನಡೆಯಲು ಸಹಕಾರಿಯಾಗುತ್ತದೆ ಎಂದು ನಿವೃತ್ತಿ ಐಜಿಪಿ ಶಂಕರ ಬಿದರಿ ಅಭಿಪ್ರಾಯಪಟ್ಟಿದ್ದಾರೆ. ಸಿದ್ದಗಂಗಾ ಮಠದಲ್ಲಿ ಸಿದ್ದಗಂಗಾ ವಿದ್ಯಾರ್ಥಿ ಸಂಘ, ಸನಿವಾಸ ವಿದ್ಯಾಸಂಸ್ಥೆಗಳು ಹಾಗೂ ಶ್ರೀಸಿದ್ದಗಂಗಾ ಮಠವತಿಯಿಂದ ಅಯೋಜಿಸಿದ್ದ ಹಿರಿಯ ಚಲನಚಿತ್ರನಟ ದೊಡ್ಡಣ್ಣ ಅವರ ಹುಟ್ಟು ಹಬ್ಬ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಇಂದು ನೇರವಾದ, ಸತ್ಯದ ಹಾಗೂ ಪ್ರಾಮಾಣಿಕ ಮಾರ್ಗದಲ್ಲಿ ನಡೆಯುವವರ ಸಂಖ್ಯೆ ಕಡಿಮೆಯಾಗಿದೆ.ಪ್ರತಿಯೊಬ್ಬರು ಬೇರೆಯವರಿಂದ ಪ್ರಾಮಾಣಿಕತೆ, ಸತ್ಯ,ನೇರವಾದ ಮಾರ್ಗಗಳನ್ನು ಬಯಸುತ್ತಾರೆ. ಅದು ತಮ್ಮಿಂದಲೇ ಆರಂಭವಾಗಬೇಕು.ಆಗಲೇ ದೇಶದಲ್ಲಿ ಪರಿವರ್ತನೆ ಸಾಧ್ಯ ಎಂದರು. ನೀವು ಗಳಿಸುವ ಅಂಕಗಳು ಉದ್ಯೋಗ ಪಡೆಯಲು ಮಾತ್ರ.ಉದ್ಯೋಗಕ್ಕೆ ಸೇರಿದ ನಂತರ ನಿಮ್ಮ ಪ್ರಾಮಾಣಿಕತೆ, ಸಹದ್ಯೊಗಿಗಳೊಂದಿಗಿನ ನಡವಳಿಕೆ,ಇತರರ ಕಷ್ಟ,ಸುಖಃಗಳಿಗೆ ಸ್ಪಂದಿಸುವ ಗುಣ ಎಲ್ಲವೂ ನಿಮ್ಮನ್ನು ಮೇಲ್ಮಟ್ಟಕ್ಕೆ ತೆಗೆದು ಕೊಂಡು ಹೋಗುತ್ತದೆ.ಬಹುಸಂಸ್ಕೃತಿಯ ನಾಡಾದ ಭಾರತದಲ್ಲಿ ಎಲ್ಲಾ ಧರ್ಮ,ಜಾತಿ,ಭಾಷೆಗಳ ಜನರು ಒಗ್ಗೂಡಿ ಭಾರತಾಂಭೆಯ ಮಕ್ಕಳಂತೆ ಬದುಕುಬೇಕಾಗಿದೆ.ಬಸಣ್ಣನವರ ವಚನದಂತೆ ಇವ ನಮ್ಮವ ಎಂದು ಕೊಂಡು ಶಾಂತಿ, ಸೌಹಾರ್ಧತೆಯಿಂದ ಬದುಕುವಂತಹ…











