ತುಮಕೂರು: ದೇಶದಲ್ಲಿನ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಭಿಪ್ರಾಯ ಪಟ್ಟಿದ್ದಾರೆ. ಜಿಲ್ಲಾ ಪಂಚಾಯತ್ನಲ್ಲಿ ಬುಧವಾರ ಗ್ರಾಮ ಪಂಚಾಯತಿಗಳಿಗೆ ನೂತನವಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ರೂಪಿಸಲಾಗಿರುವ ದೇಶದ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಕಾಯ್ದೆಯಲ್ಲಿ ವ್ಯಕ್ತವಾಗುವ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಯ ೩ ಹಂತದ ಆಡಳಿತ ವ್ಯವಸ್ಥೆ ಜಗತ್ತಿನ ಯಾವುದೇ ದೇಶದಲ್ಲಿ ಇಲ್ಲ. ಗ್ರಾಮ ಸ್ವರಾಜ್ ಪರಿಕಲ್ಪನೆಯ ಪಂಚಾಯತ್ ವ್ಯವಸ್ಥೆ ಮಾದರಿಯಾಗಿದೆ ಎಂದು ಅವರು ಹೇಳಿದರು. ಗ್ರಾಮ ಪಂಚಾಯತಿ ಪರಿಕಲ್ಪನೆ ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಾಗಿದ್ದು, ನಮ್ಮ ಆಡಳಿತವನ್ನು ನಾವೇ ಮಾಡಿಕೊಳ್ಳಬೇಕು ಎಂಬ ಸರಳ ತತ್ವದ ಆಧಾರದ ಮೇಲೆ ರೂಪಿಸಲಾಗಿತ್ತು. ಸ್ವಾತಂತ್ರಾö್ಯ ನಂತರ ಅದನ್ನು ಸಂವಿಧಾನದಲ್ಲಿ ಅಳವಡಿಸಿಕೊಂಡು ಅಧಿಕಾರ ವಿಕೇಂದ್ರೀಕರಣಗೊಳಿಸುವ ಉದ್ದೇಶದಿಂದ ಜನರ ಕೈಗೆ ಅಧಿಕಾರ ನೀಡುವ…
Author: News Desk Benkiyabale
ತುಮಕೂರು: ಇತ್ತೀಚಗೆ ಬೆಂಗಳೂರಿನಲ್ಲಿ ನಡೆದ೧೪ನೆಯ ರಾಜ್ಯ ಮಟ್ಟದ ರೈಫಲ್ ಶೂಟಿಂಗ್ ಕ್ರೀಡಾಕೂಟದಲ್ಲಿ ತುಮಕೂರು ಜಿಲ್ಲೆಯ ಕ್ರೀಡಾಪಟುಗಳು ೧೯ ಪದಕಗಳು ಲಭಿಸಿವೆ. ಬೆಂಗಳೂರು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಶೂಟಿಂಗ್ ರೇಂಜ್ ನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ತುಮಕೂರಿನ ಶೂಟರ್ಗಳು ೯ ಚಿನ್ನದ ಪದಕ. ೯ ಬೆಳ್ಳಿಪದಕ. ೧ಕಂಚಿನ ಪದಕ ಸೇರಿದಂತೆ ೧೯ ಪದಕಗಳನ್ನು ಪಡೆದು ತುಮಕೂರು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧೆಡೆಗಳಿಂದ ೮೦೦ ಶೂಟರ್ಗಳು ಭಾಗವಹಿಸಿದ್ದು,ವಿವೇಕಾನಂದ ಶೂಟಿಂಗ್ ಸಂಸ್ಥೆಯಿAದ ೩೦ ಜನ ಶೂರ್ಸ್ ಭಾಗವಹಿಸಿದ್ದರು. ವನಿತಾ ೧೫ ವರ್ಷದ ಬಾಲಕಿ ದಾಖಲೆಯ ಮೊತ್ತ ೩೩೬ ಅಂಕಗಳನ್ನು ಗಳಿಸಿ ಇಡೀ ರಾಜ್ಯಕ್ಕೆ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಎಲ್ಲಾ ವಿಭಾಗದಲ್ಲೂ ಮೊದಲ ಸ್ಥಾನ ಗಳಿಸಿದ್ದಾರೆ. ಪ್ಯಾರಾಶೂಟರ್ ಹರ್ಷರವರು ಎರಡು ಚಿನ್ನದ ಪದಕವನ್ನು ಗಳಿಸಿರುತ್ತಾರೆ. ಸಮರ್ ಶಾನ್ಬೋಗ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕಗಳನ್ನು ಗಳಿಸಿರುತ್ತಾರೆ, ವಿಶ್ರುತ ,ಅಮೃತ ಹಾಗೂ ಪ್ರಿಯಾ ಗುಂಪು ವಿಭಾಗಗಳಲ್ಲಿ ಪದಕಗಳನ್ನು ಗಳಿಸಿರುತ್ತಾರೆ. ೨೨ ಶೂಟರ್ ಗಳು…
ತುಮಕೂರು: ಪಂಚಾ0ಗ ನೋಡುವುದಕ್ಕಿಂತ ನಮ್ಮ ದೇಹದ ಪಂಚ ಅಂಗಗಳ ಕಡೆ ಗಮನ ನೀಡಿ. ಮನೆಯ ವಾಸ್ತುವಿಗಿಂತ ಮನಸ್ಸಿನ ವಾಸ್ತುವಿನ ಕಡೆ ಗಮನವಿರಲಿ” ಎಂದು ಪ್ರಖ್ಯಾತ ಪವಾಡ ಬಯಲು ಸಂಶೋಧಕ ಹಾಗೂ ಚಿಂತಕ ಪ್ರೊ.ಹುಲಿಕಲ್ ನಟರಾಜ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪವಾಡ ಬಯಲು ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ತಮ್ಮ ವಿಶಿಷ್ಟ ಶೈಲಿಯ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳನ್ನು ಮಂತ್ರಮುಗ್ಧರನ್ನಾಗಿಸಿದ ಅವರು, ಹಲವು ಪವಾಡಗಳ ಹಿಂದಿರುವ ವೈಜ್ಞಾನಿಕ ಸತ್ಯಗಳನ್ನು ಕಣ್ಣಿಗೆ ಕಟ್ಟುವಂತೆ ಸಾಬೀತುಪಡಿಸಿದರು. “ಮನುಷ್ಯ ಕಂಡುಹಿಡಿದ ತಂತ್ರಜ್ಞಾನ ಸದಾ ಅಪ್ಡೇಟ್ ಆಗುತ್ತಿದೆ, ಆದರೆ ಮನುಷ್ಯನ ಮನಸ್ಸು ಮಾತ್ರ ಔಟ್ ಡೇಟೆಡ್ ಆಗುತ್ತಿದೆ. ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಸಬೇಕೇ ಹೊರತು ಅದಕ್ಕೆ ದಾಸರಾಗಬಾರದು. ಇಂದಿನ ಮಕ್ಕಳು ಮೊಬೈಲ್ ವ್ಯಾಮೋಹದಿಂದ ದೂರ ಸರಿದು, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜ್ಞಾನವೇ ನಿಜವಾದ ಶಕ್ತಿ. ಇಂದಿನ ಶಿಕ್ಷಣ ಮಾರುಕಟ್ಟೆಯ ಸರಕಾಗುವುದಕ್ಕಿಂತ ಮಾನವೀಯತೆಯ ಸರಕಾಗಬೇಕಿದೆ. ಶಿಕ್ಷಣವು ಕೇವಲ ಪರೀಕ್ಷೆಗಾಗಿ ಇರದೆ,…
ತುಮಕೂರು: ಮತಗಟ್ಟೆ ಮಟ್ಟದಲ್ಲಿ ತಮ್ಮ ರಾಜಕೀಯ ಪಕ್ಷದ ಬೂತ್ ಮಟ್ಟದ ಏಜೆಂಟರುಗಳನ್ನು ನೇಮಿಸಿ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಮಾನ್ಯತೆ ಪಡೆದ ರಾಷ್ಟಿçÃಯ ಮತ್ತು ರಾಜ್ಯ ರಾಜಕೀಯ ಪಕ್ಷಗಳು ತುಮಕೂರು ಜಿಲ್ಲೆಯ ಮತಗಟ್ಟೆ ಮಟ್ಟದಲ್ಲಿ ತಮ್ಮ ಪಕ್ಷದ ಮತಗಟ್ಟೆ ಏಜೆಂಟರುಗಳನ್ನು ನಿಯಮಾನುಸಾರ ನೇಮಿಸಿ ನಿಗದಿತ ನಮೂನೆಯಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಹಾಗೂ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ತಮ್ಮ ಪಕ್ಷದ ಏಜೆಂಟರುಗಳು ಎಸ್ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಮನ್ವಯ ಮಾಡಿಕೊಂಡು ಸಹಕರಿಸಬೇಕು ಎಂದು ಅವರು ತಿಳಿಸಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ತುಮಕೂರು ಜಿಲ್ಲೆಯಲ್ಲಿ ಕಳೆದ ೯ ದಿನಗಳಲ್ಲಿ ಶೇ. ೮೬.೯೨ರಷ್ಟು ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ. ವಿತರಣೆ ಕಾರ್ಯವನ್ನು ಮುಂದಿನ…
ತುಮಕೂರು: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಿತರಿಸಲಾಗುತ್ತಿದೆ. ಪ್ರಸ್ತುತ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆ ಹಣ್ಣಿನ ದರ ಕಡಿಮೆ ಇದ್ದು, ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಪಿ.ಜಿ.ತಿಮ್ಮೇಗೌಡ ಹಾಗೂ ಸಂಘದ ಪದಾಧಿಕಾರಿಗಳು ತುಮಕೂರು ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಂಘದ ಪದಾಧಿಕಾರಿಗಳೊಂದಿಗೆ ನಿಯೋಗ ತೆರಳಿ ಮನವಿ ಸಲ್ಲಿಸಿರುವ ಅವರು, ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ ರೂ೭.೫೦ ರಿಂದ ೮.೦೦ರವರೆಗೆ ಏರಿಕೆಯಾಗಿರುವುದರಿಂದ, ಪ್ರತಿ ವಿದ್ಯಾರ್ಥಿಗೆ ಪ್ರತಿದಿನ ೨ ರಿಂದ ೩ ರವರೆಗೆ ಹೆಚ್ಚುವರಿ ವೆಚ್ಚವನ್ನು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ತಮ್ಮ ಸ್ವಂತ ಹಣದಿಂದ ಭರಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಆಡಳಿತಾತ್ಮಕವಾಗಿಯೂ ಕಾರ್ಯಸಾಧ್ಯವಲ್ಲ ಎಂಬುದು ಶಿಕ್ಷಕರ ಮನವಿಯಾಗಿದೆ. ಶಿಕ್ಷಕರ ಕರ್ತವ್ಯ ವಿದ್ಯಾರ್ಥಿಗಳಿಗೆ ಗುಣಮಟ್ಟದ…
ತುಮಕೂರು: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅವರು ಬುಧವಾರ ೧೭೫ ನೇರಪಾವತಿ ಪೌರಕಾರ್ಮಿಕರಿಗೆ ನೇರಪಾವತಿ ಆದೇಶ ಪತ್ರವನ್ನು ವಿತರಿಸಿದರು. ನಗರದ ಮಹಾನಗರಪಾಲಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ನೇರ ಪಾವತಿ ಪೌರಕಾರ್ಮಿಕರಿಗೆ ನೇರ ಪಾವತಿ ಆದೇಶ ಪತ್ರ ವಿತರಣೆ, ಪಿಪಿಪಿ ಎಲ್ಇಡಿ ಯೋಜನೆಯಡಿ ಹೆಚ್ಚುವರಿ ಬೀದಿ ದೀಪ ಅಳವಡಿಸುವ ಕಾಮಗಾರಿ, ಯುಜಿಡಿ-ನಮಸ್ತೆ ಕಿಟ್ಸ್ ಪರಿಕರಗಳ ಹಾಗೂ ಪರಿಹಾರ ವಿತರಣೆ, ಪೌರ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ ಹಾಗೂ ಶಾಲಾ ಶುಲ್ಕ ಮರುಪಾವತಿ, ಕಾರ್ಯನಿರತ ಪತ್ರಕರ್ತರಿಗೆ ನಗದು ರಹಿತ ಆರೋಗ್ಯ ವಿಮೆ ಸೌಲಭ್ಯ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಆದೇಶ ಪತ್ರವನ್ನು ವಿತರಿಸಿ ಮಾತನಾಡುತ್ತಾ, ಪೌರಕಾರ್ಮಿಕರ ಕುಟುಂಬದ ಹಿತ ದೃಷ್ಟಿಯಿಂದ ಅವರ ನೇಮಕಾತಿಯನ್ನು ಖಾಯಂ ಮಾಡಲಾಗಿದೆ. ಪೌರ ಕಾರ್ಮಿಕರ ಯೋಗ ಕ್ಷೇಮಕ್ಕಾಗಿ ಪಾಲಿಕೆಯು ಜೊತೆಗಿರುವುದರೊಂದಿಗೆ ವಿವಿಧ ಸೌಲಭ್ಯಗಳನ್ನು ನೀಡಲಿದೆ ಎಂದು ತಿಳಿಸಿದರು. ತುಮಕೂರು ನಗರವು ಉದ್ಯಾನನಗರಿ ಬೆಂಗಳೂರಿನAತೆಯೇ ವೇಗವಾಗಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರೂ ಸಹ ಸ್ವಚ್ಛ ನಗರವನ್ನಾಗಿ…
ಶಿರಾ: ರಾಜ್ಯದ ೩,೮೦೦ಕ್ಕೂ ಅಧಿಕ ಸ್ಲಂಗಳಲ್ಲಿ ಸ್ಲಂ ಜನರ ಸಂಘಟನೆಯು ವಿಸ್ತಾರಗೊಳ್ಳಬೇಕು. ಈ ಸಂಘಟನೆಯು ಬುದ್ಧ, ಬಸವ, ಅಂಬೇಡ್ಕರ್ ಅವರ ಆಶಯಗಳ ಹಾದಿಯಲ್ಲಿ ಮುನ್ನಡೆದು, ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸಬೇಕು ಎಂದು ಖ್ಯಾತ ನ್ಯಾಯವಾದಿಗಳು ಹಾಗೂ ಮಾನವ ಬಂಧುತ್ವ ವೇದಿಕೆಯ ರಾಜ್ಯ ಮುಖಂಡ ಅನಂತ್ ನಾಯ್ಕ್ ಕರೆ ನೀಡಿದರು. ಇಲ್ಲಿನ ಲೋಹಿಯಾ ಸಮತಾ ವಿದ್ಯಾಲಯದ ಬಂಧುತ್ವ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ಲಂ ಜನರ ಭೂಮಿ, ವಸತಿ ಮತ್ತು ಸಂವಿಧಾನಾತ್ಮಕ ಹಕ್ಕುಗಳ ಕುರಿತ ರಾಜ್ಯಮಟ್ಟದ ಎರಡು ದಿನಗಳ ಕಾರ್ಯಾಗಾರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ಕಾರ್ಯಾಗಾರವನ್ನು ಸ್ಲಂ ಜನರ ಸಂಘಟನೆ ಕರ್ನಾಟಕ, ಮಾನವ ಬಂಧುತ್ವ ವೇದಿಕೆ ಹಾಗೂ ಆಕ್ಷನ್ ಏಡ್ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಸ್ಲಂಗಳು ಮಿನಿ ಭಾರತದಂತೆ: ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸ್ಲಂಗಳು ಮಿನಿ ಭಾರತದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿವೆ. ಇಲ್ಲಿನ ಜನರ ಭ್ರಾತೃತ್ವ ಮತ್ತು ಭಾವೈಕ್ಯತೆಯನ್ನು…
ಪಾವಗಡ: ಪಟ್ಟಣದ ಶನಿಮಹಾತ್ಮ ವೃತ್ತದ ಬಳಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಪ್ರಕರಣವನ್ನು ಪಾವಗಡ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಜುಲೈ ೨ರಂದು ಸಂಜೆ ಸುಮಾರು ೫.೩೦ರ ವೇಳೆ ಆಂಧ್ರ ಪ್ರದೇಶದ ಮಡಕಶಿರ ಪಟ್ಟಣದ ಖಾಸಗಿ ಗಾರ್ಮೆಂಟ್ ಕಂಪನಿಯಲ್ಲಿ ಕೆಲಸ ಮುಗಿಸಿ ಸ್ವಗ್ರಾಮ ಪಳವಳ್ಳಿಗೆ ತೆರಳುತ್ತಿದ್ದ ನಾಗಲಕ್ಷಿ÷್ಮ ಯವರ ಮೇಲೆ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದ ಬಳಿಕ ಅವರ ಕಿವಿಯಲ್ಲಿದ್ದ ಜುಮುಕಿ ಹಾಗೂ ಕೊರಳಿನಲ್ಲಿದ್ದ ಮಾಂಗಲ್ಯ ಸರ ಸೇರಿದಂತೆ ಬೆಲೆಬಾಳುವ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾಗಿದ್ದ. ಹಲ್ಲೆಯಿಂದ ಗಾಯಗೊಂಡ ನಾಗಲಕ್ಷಿ÷್ಮ ಯವರನ್ನು ಸ್ಥಳೀಯರು ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ತನಿಖೆ ಕೈಗೊಂಡು ಆಂಧ್ರ ಪ್ರದೇಶದ ಮಡಕಶಿರ ತಾಲ್ಲೂಕಿನ ಗೊಲ್ಲಪಲ್ಲಿ ಗ್ರಾಮದ ನಾಗಪ್ಪರವರ ಮಗನಾದ ಮಂಜುನಾಥ್ ರವರು ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಘಟನೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದರಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣವನ್ನು ಗಂಭೀರವಾಗಿ…
ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕನ್ಗುನ್ಯಾ ರೋಗಗಳನ್ನು ನಿಯಂತ್ರಿಸಲು ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ಜನರಲ್ಲಿ ಮನವಿ ಮಾಡಿದರು. ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಮಹಾನಗರಪಾಲಿಕೆ ಆವರಣದಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಡೆಂಗ್ಯೂ ಹಾಗೂ ಚಿಕನ್ಗುನ್ಯಾ ರೋಗವು ವೈರಾಣುಗಳಿಂದ ಬರುವ ಖಾಯಿಲೆಗಳಾಗಿದ್ದು, ಸೊಳ್ಳೆ ಕಡಿತದಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ರೋಗವನ್ನು ನಿಯಂತ್ರಿಸಲು ಜನ ಸಮುದಾಯದ ಸಹಭಾಗಿತ್ವ ಅಗತ್ಯ. ಮಳೆ ನೀರು ಸಂಗ್ರಹದ ಸ್ಥಳದಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಜನಸಮುದಾಯ ತಮ್ಮ ಮನೆಯ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದAತೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮವನಿ ಮಾಡಿದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|| ಹಂಸ…
ಹುಳಿಯಾರು: ಹುಳಿಯಾರಿನ ನೂರು ವರ್ಷಗಳ ಇತಿಹಾಸವಿರುವ ಬ್ರಿಟೀಷರ ಕಾಲದ ಭವ್ಯ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಕಟ್ಟಡದ ಗೋಡೆಗಳ ಮೇಲೆ ಗಿಡಗಳು ಬೆಳೆದು, ಇಡೀ ಪಾರಂಪರಿಕ ಕಟ್ಟಡವೇ ಹಾಳಾಗುತ್ತಿರುವ ಆತಂಕದ ಕುರಿತು ಪತ್ರಿಕೆ ಇತ್ತೀಚೆಗೆ ವಿಸ್ತöÈತವಾದ ವಿಶೇಷ ವರದಿಯನ್ನು ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು. ಈ ವರದಿಯ ಫಲಾಶ್ರುತಿಯಾಗಿ ಸದ್ಯ ಶಿಕ್ಷಣ ಇಲಾಖೆಯು ಎಚ್ಚೆತ್ತುಕೊಂಡಿದ್ದು, ಕಟ್ಟಡದ ಮೇಲಿದ್ದ ದೊಡ್ಡ ದೊಡ್ಡ ಗಿಡಗಳನ್ನು ತೆರವುಗೊಳಿಸುವ ಮೂಲಕ ಪ್ರಾಥಮಿಕ ಕ್ರಮಕ್ಕೆ ಮುಂದಾಗಿದೆ. ಇಲಾಖೆಯ ಈ ತಕ್ಷಣದ ಸ್ಪಂದನೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆಯಾದರೂ, ಕಾಮಗಾರಿ ಅರ್ಧಕ್ಕೆ ನಿಂತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬ್ರಿಟಿಷರ ಕಾಲದ ಈ ಐತಿಹಾಸಿಕ ಕಟ್ಟಡವನ್ನು ಸಾಂಪ್ರದಾಯಿಕ ಗಾರೆಯಿಂದ ಅತ್ಯಂತ ಸುಭದ್ರವಾಗಿ ನಿರ್ಮಿಸಲಾಗಿದ್ದರೂ, ಗೋಡೆಗಳ ಮೇಲೆ ಬೆಳೆದಿದ್ದ ಗಿಡಗಳ ಬೇರುಗಳು ಆಳಕ್ಕೆ ಇಳಿದು ಇಡೀ ವಾಸ್ತುಶಿಲ್ಪಕ್ಕೆ ಧಕ್ಕೆ ತರುತ್ತಿದ್ದವು. ಪತ್ರಿಕೆಯ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ದೊಡ್ಡ ಗಿಡಗಳನ್ನು ಕತ್ತರಿಸಿ ಹಾಕಿರುವುದರಿಂದ ಗೋಡೆಗಳು ಸಂಪೂರ್ಣ ಡ್ಯಾಮೇಜ್ ಆಗುವ ತಕ್ಷಣದ ಆತಂಕ ಸದ್ಯಕ್ಕೆ ದೂರಾಗಿದೆ.…

