Author: News Desk Benkiyabale

ತುಮಕೂರು: ಭೌತಿಕ ಜೀವನ ಸಮೃದ್ಧಗೊಂಡ0ತೆ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕಾಗಿದೆ. ಧರ್ಮದ ದಿಕ್ಸೂಚಿ ಇಲ್ಲದೇ ಹೋದರೆ ಮಾನವ ಜೀವನ ನಿರರ್ಥಕ. ವೀರಶೈವರು ಲಿಂಗಾಯತರು ಒಂದಾಗಿ ಬಾಳಿದರೆ ಧರ್ಮಕ್ಕೆ ಉಜ್ವಲ ಭವಿಷ್ಯವಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಗುರುವಾರ ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಮನುಷ್ಯ ಜೀವನದಲ್ಲಿ ಧರ್ಮ ಅರ್ಥ ಕಾಮ ಮೋಕ್ಷ ಎಂಬ ನಾಲ್ಕು ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿ ಕೊಳ್ಳದಿದ್ದರೆ ಮಾನವ ಜೀವನ ನಿರರ್ಥಕವಾಗುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಧರ್ಮದ ದಶವಿಧ ಸೂತ್ರಗಳನ್ನು ಬೋಧಿಸಿ ಎಲ್ಲರನ್ನು ಉದ್ಧರಿಸಿದ್ದಾರೆ. ವೀರಶೈವ ಧರ್ಮ ವೃಕ್ಷದ ತಾಯ್ಬೇರು ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು. ಆದರೆ ಆ ಧರ್ಮ ವೃಕ್ಷದ ಹೂ ಹಣ್ಣುಗಳಂತೆ ಬಸವಾದಿ ಶಿವಶ ರಣರಿದ್ದಾರೆ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ ವಿಜ್ಞಾನ ನಾಗರೀಕತೆ ಮತ್ತು ರಾಜಕೀಯ…

Read More

ಪಾವಗಡ: ಕ್ರಿಸ್ಮಸ್ ಎಂಬುದು ದೇವರ ಪ್ರೀತಿಯ ಮಹಾ ಸಂಕಲ್ಪದ ಸಂಕೇತವಾಗಿದ್ದು, ಯೇಸು ಕ್ರಿಸ್ತನ ದಿವ್ಯ ಜನನದ ಸ್ಮರಣರ‍್ಥವಾಗಿ ಜಗತ್ತಿನಾದ್ಯಂತ ಆಚರಿಸಲಾಗುವ ಮಹತ್ವದ ಹಬ್ಬವಾಗಿದೆ. ದೇವರು ಲೋಕವನ್ನು ಅಷ್ಟಾಗಿ ಪ್ರೀತಿಸಿದ್ದರಿಂದ ತನ್ನ ಏಕಮಾತ್ರ ಪುತ್ರನನ್ನು ಮಾನವ ರಕ್ಷಣೆಗೆ ನೀಡಿದನು ಎಂಬ ಸಂದೇಶವನ್ನು ಕ್ರಿಸ್ಮಸ್ ಹಬ್ಬ ಸಾರುತ್ತದೆ. ಈ ಹಿನ್ನೆಲೆಯಲ್ಲಿ ಪಾವಗಡದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಮಿಷನ್ ರ‍್ಚ್‌ನಲ್ಲಿ ದಿನಾಂಕ ೨೪-೧೨-೨೦೨೫ರ ಮಧ್ಯರಾತ್ರಿ ಕ್ರಿಸ್ಮಸ್ ಹಬ್ಬವನ್ನು ಭಕ್ತಿಪರ‍್ವಕವಾಗಿ ಹಾಗೂ ಸಂತೋಷಭರಿತವಾಗಿ ಆಚರಿಸಲಾಯಿತು. ರ‍್ಚ್ ಆವರಣವನ್ನು ದೀಪಾಲಂಕಾರ, ನಕ್ಷತ್ರಗಳು ಹಾಗೂ ಕ್ರಿಸ್ಮಸ್ ಅಲಂಕಾರಗಳಿಂದ ಸುಂದರವಾಗಿ ಸಿಂಗಾರಿಸಲಾಗಿತ್ತು. ಭಕ್ತವಿಶ್ವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಭ್ರಮವನ್ನು ಇನ್ನಷ್ಟು ರ‍್ಥಪರ‍್ಣಗೊಳಿಸಿದರು. ದಿವ್ಯ ಬಲಿಪೂಜೆಯ ಸಂರ‍್ಭದಲ್ಲಿ ರ‍್ಮಕೇಂದ್ರದ ಗುರುಗಳಾದ ವಂದನೀಯ ಸ್ವಾಮಿ ಫಾದರ್ ಕಾನಿಕಾದಾಸ್ ಅವರು ತಮ್ಮ ಪ್ರವಚನದ ಮೂಲಕ ಕ್ರಿಸ್ತನ ಜನನ ತರುವ ಶಾಂತಿ, ಪ್ರೀತಿ, ಕ್ಷಮೆ ಹಾಗೂ ಸಹೋದರತ್ವದ ಸಂದೇಶವನ್ನು ಮನಮುಟ್ಟುವಂತೆ ವಿವರಿಸಿದರು. ಇದೇ ಸಂರ‍್ಭದಲ್ಲಿ ದೇಶ, ರಾಜ್ಯ, ಪಾವಗಡ ತಾಲ್ಲೂಕಿನ ಒಳಿತಿಗಾಗಿ, ಜನನಾಯಕರ ಆರೋಗ್ಯ ಹಾಗೂ ಸೇವೆಗಾಗಿ…

Read More

ತುಮಕೂರು: ಮಕ್ಕಳಿಗೆ ಪಠ್ಯದ ಜೊತೆಗೆ, ಪಠ್ಯೇತರ ಚಟುವಟಿಕೆಯಾಗಿ ವಿಜ್ಞಾನ ಮತ್ತು ವಾಣಿಜ್ಯ ಶಾಸ್ತçಕ್ಕೆ ಸಂಬ0ಧಿಸಿದ “ ವೇವ್ ಸೈನ್ಸ್ ಎಕ್ಸಪೋ-2025” ವಿಜ್ಞಾನ ವಸ್ತುಪ್ರದರ್ಶನವನ್ನು ಸತ್ಯಮಂಗಲದಲ್ಲಿರುವ ಜೈನ್ ಪಿಯು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಜೈನ್ ಪಿಯು ಕಾಲೇಜಿನ ೧೫೦ಕ್ಕೂ ಹೆಚ್ಚು ಮಕ್ಕಳು ಉಪನ್ಯಾಸಕರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದ ಸುಮಾರು ೮೨ ವಿವಿಧ ರೀತಿಯ ಪ್ರಾತಕ್ಷಿಕೆಗಳು, ವಿಜ್ಞಾನ, ವಾಣಿಜ್ಯ, ಜಾನಪದ,ಭಾಷಾ ವಿಜ್ಞಾನ ಸೇರಿದಂತೆ ಹಲವು ವಿಚಾರಗಳ ಕುರಿತ ತಯಾರಿಸಿದ್ದ ಪ್ರತಿಕೃತಿಗಳು, ಭವಿಷ್ಯದಲ್ಲಿ ಭಾರತದ ವೈಜ್ಞಾನಿಕ ಬೆಳವಣಿಗೆ ಮತ್ತು ಅವುಗಳ ಉಪಯೋಗಗಳ ಕುರಿತ ಮಾಹಿತಿಯನ್ನು ಜೈನ್ ಪಿಯು ಕಾಲೇಜಿನ ಪ್ರಥಮ ಮತ್ತು ದ್ವಿತಿಯ ವರ್ಷದ ವಿದ್ಯಾರ್ಥಿಗಳು ನೋಡುಗರಿಗೆ ವಿವರಿಸುವ ಮೂಲಕ ವಿಜ್ಞಾನ ವಸ್ತು ಪ್ರದರ್ಶನದ ಮಹತ್ವವನ್ನು ಸಾರಿದರು. ತಮ್ಮ ಕಾಲೇಜು ವತಿಯಿಂದ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ “ ವೇವ್ ಸೈನ್ಸ್ ಎಕ್ಸಪೋ-೨೦೨೫ ಕುರಿತು ಮಾತನಾಡಿದ ಜೈನ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ವರುಣ್‌ಕುಮಾರ್,ಮಕ್ಕಳ ಬೌತಿಕ ಮತ್ತು ಬೌದ್ಧಿಕ ಬೆಳೆವಣಿಗೆಯ ದೃಷ್ಟಿಯಿಂದ ನಮ್ಮ ಕಾಲೇಜಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.…

Read More

ತುಮಕೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾಂಸ್ಕೃತಿಕ ಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಾಲ್ಕು ದಿನಗಳ ಕಾಲ ಖ್ಯಾತ ವೈದ್ಯರಾದ ದಿ. ಡಾ. ಸಿ. ಜಯರಾಮರಾವ್ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ಡಾ.ಪುನೀತ್ ರಾಜ್ ಕಪ್ ರಾಜ್ಯಮಟ್ಚದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಅನೇಕ ಮಂದಿ  ಕ್ರಿಕೆಟ್ ಆಟಗಾರರನ್ನು ವಿಶ್ವಕ್ಕೆ ನೀಡಿದೆ. ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ಹಾಗೂ ತುಮಕೂರು ಜಿಲ್ಲೆಯ ಕೆ.ಎಲ್. ರಾಹುಲ್ ರವರನ್ನು ಸಹ ಕ್ರಿಕೆಟ್ ಜಗತ್ತಿಗೆ ಕೊಡುಗೆಯಾಗಿ ನಮ್ಮ ರಾಜ್ಯ ನೀಡಿದೆ ಎಂದು ಹೇಳಿದರು. ಕ್ರಿಕೆಟ್ ಸೇರಿದಂತೆ ಇತರ ಕ್ರೀಡೆಗಳು ಮನುಷ್ಯನ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಒಂದು ತಂಡ ಮಾತ್ರ ಗೆಲುವು ಸಾಧಿಸಲು ಸಾಧ್ಯ. ಹಾಗಾಗಿ ಸೋತವರು ಬೇಸರಗೊಳ್ಳದೆ ಒಂದು ತಂಡವಾಗಿ ಕ್ರೀಡಾಕೂಟದಲ್ಲಿ ಆಟ ಆಡಬೇಕು ಎಂದು ಸಲಹೆ…

Read More

ತುರುವೇಕೆರೆ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ೨೦೨೪-೨೫ ನೇ ಸಾಲಿನ ವಾರ್ಷಿಕ ಮಹಾಸಭೆ, ತಾಲ್ಲೂಕು ಹಿರಿಯ ನಾಗರೀಕರ ದಿನಾಚರಣೆ ಹಾಗೂ ೭೫ವರ್ಷ ಮೇಲ್ಪಟ್ಟ ಹಿರಿಯ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಸೋಮವಾರ ಪಟ್ಟಣದ ಹೊರಪೇಟೆಯಲ್ಲಿರುವ ವಿರಕ್ತ ಮಠದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಬಾ.ಹಾ.ರಮಾಕುಮಾರಿ ಉದ್ಘಾಟನಾ ನುಡಿಗಳನ್ನಾಡುತ್ತಾ ನಾವೆಲ್ಲಾ ಸಂಘಟಿತರಾಗುವ ಮೂಲಕ ನಮ್ಮ ಅಸ್ಥಿತ್ವ ಏನೆಂಬುದನ್ನು ತೋರಿಸಿಕೊಳ್ಳಬೇಕಾಗಿದೆ. ನಮಗೆ ಮುಖ್ಯವಾದ ೨ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕಾಗಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯಿಂದ ನಮ್ಮ ಬೇಡಿಕೆಗಳಿಗೆ ಹಿನ್ನಡೆಯಾಗುತ್ತಿದೆ. ನಮ್ಮ ಬೇಡಿಕೆಗಳು ಈಡೇರಬೇಕಾದರೆ ನಮ್ಮ ಸಂಘಟನಾ ಶಕ್ತಿ ಏನೆಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲೋಸ್ಕರ ನಿವೃತ್ತ ನೌಕರರು ಸಂಘದಲ್ಲಿ ಹೆಚ್ಚೆಚ್ಚು ನೋಂದಣಿ ಮಾಡಿಕೊಂಡು ಸಂಘಟಿತರಾಗುವ ಮೂಲಕ ಆದಷ್ಟು ಬೇಗ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕಾಗಿದೆಯಲ್ಲದೆ ಸಾರ್ವಜನಿಕರ ಕಂದಾಯದ ಹಣ ನಮಗೆ ಪಿಂಚಣಿ ರೂಪದಲ್ಲಿ ಬರುತ್ತಿದ್ದು ನಾವುಗಳೂ ಸಹಾ ನಮ್ಮ ಕೈಲಾದಷ್ಟು ಸಮಾಜದಲ್ಲಿ ಕಿಂಚಿತ್ತಾದರೂ ಸೇವೆ ಮಾಡುವ ಮೂಲಕ ನಾವುಗಳು ಋಣಮುಕ್ತರಾಗೋಣವೆಂದರು. ರಾಜ್ಯ ಸರ್ಕಾರಿ…

Read More

ತುಮಕೂರು: ಭಾವೈಕ್ಯತೆ ಮತ್ತು ಆಧ್ಯಾತ್ಮ ಜ್ಞಾನ ಭಾರತದ ಉಸಿರು. ಜೀವನದ ಉನ್ನತಿಗೆ ಸಂಸ್ಕಾರ-ಸನ್ಮಾರ್ಗ ದರ್ಶನದ ಅವಶ್ಯಕತೆಯಿದೆ. ಆತ್ಮ ಸಂಯಮ ಆಧ್ಯಾತ್ಮ ಜ್ಞಾನದ ಅಡಿಪಾಯವಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ನಿಂದ ಸಂಘ ಟಿಸಿದ ಧನುರ್ಮಾಸದ ಇಷ್ಟಲಿಂಗ ಮಹಾಪೂಜಾ-ಜನ ಜಾಗೃತಿ ಧರ್ಮ ಸಮಾರಂಭದ ೨ನೇ ದಿನದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಭೂಮಿಯಲ್ಲಿ ಬಿತ್ತಿದ ಬೀಜಕ್ಕೆ ನೀರು ಗೊಬ್ಬರ ಮತ್ತು ರಕ್ಷಣೆ ಎಷ್ಟು ಅವಶ್ಯಕವೋ ಹಾಗೆಯೇ ನೀತಿಗೆ ಧರ್ಮವು ಅಷ್ಟೇ ಅವಶ್ಯಕವಾಗಿದೆ. ಸಾತ್ವಿಕ ಮತ್ತು ತಾತ್ವಿಕ ಹಿತ ಚಿಂತನೆಗಳನ್ನು ಬೋಧಿಸುವುದೇ ಗುರುವಿನ ಧರ್ಮ. ನಡೆದಾಡುವ ದಾರಿಯಲ್ಲಿ ಬಿದ್ದ ಕಲ್ಲು ಮುಳ್ಳುಗಳನ್ನು ಎತ್ತಿ ಹಾಕುವುದೇ ನಿಜವಾದ ಧರ್ಮ. ಪರಿಶುದ್ಧವಾದ ಮತ್ತು ಪವಿತ್ರವಾದ ಜೀವನ ರೂಪಿಸಿಕೊಳ್ಳುವ ಧರ್ಮ ಪ್ರಜ್ಞೆ ಮತ್ತು ಆಚರಣೆ ಮುಖ್ಯ. ಮೌಲ್ಯಗಳು ಕಣ್ಮರೆಯಾಗುತ್ತಿರುವ ಸಂದಿಗ್ಧ ಸಂದರ್ಭದಲ್ಲಿ ಮತ್ತೆ ಅವುಗಳನ್ನು ಉಳಿಸಿ ಬೆಳೆಸು ತ್ತ ಎಲ್ಲರೂ…

Read More

ತುಮಕೂರು: ಅಂತರ್ಜಾಲದಲ್ಲಿರುವುದೆಲ್ಲ ಸತ್ಯವಲ್ಲ. ಯುವಬರಹಗಾರರರು ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಂಡ ಬಳಿಕವೇ ಅಲ್ಲಿನ ಮಾಹಿತಿಯನ್ನು ತಮ್ಮ ಲೇಖನಗಳಲ್ಲಿ ಬಳಸಿಕೊಳ್ಳಬೇಕು ಎಂದು ಅಂಕಣಕಾರ, ಪತ್ರಕರ್ತ ಎ. ಆರ್. ಮಣಿಕಾಂತ್ ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಮಂಗಳವಾರ ಹಮ್ಮಿಕೊಂಡಿದ್ದ ‘ಅಂಕಣ-ನುಡಿಚಿತ್ರ ಬರವಣಿಗೆ’ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಧ್ಯಮಗಳಲ್ಲಿ ಅಭಿವ್ಯಕ್ತಿಸಬೇಕು ಎಂಬ ಹಂಬಲ ಯುವಕರಿಗೆ ಇದೆ. ಆದರೆ ಅದಕ್ಕೆ ಬೇಕಾದ ಸಿದ್ಧತೆ ಕಡಿಮೆ. ವಿದ್ಯಾರ್ಥಿಗಳು ವಿಸ್ತಾರವಾದ ಓದಿಗೆ ತಮ್ಮನ್ನು ತೆರೆದುಕೊಳ್ಳಬೇಕು. ಕೃತಕಬುದ್ಧಿಮತ್ತೆ ಹಾಗೂ ಅಂತರ್ಜಾಲದ ಮಾಹಿತಿ ಆ ಧರಿಸಿ ಬರೆಯುವ ಪ್ರವೃತ್ತಿ ಹೆಚ್ಚುತ್ತಿದೆ. ಆದರೆ ಮಾಹಿತಿಯನ್ನು ಪರಿಶೀಲಿಸಿ ಕೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು. ಅ0ಕಣಕಾರನಿಗೆ ತುಂಬ ತಾಳ್ಮೆ ಇರಬೇಕು. ಒಂದು ವಿಷಯದ ಸಂಪೂರ್ಣ ಮಾಹಿತಿ ಸಿಗುವವರೆಗೆ ಮತ್ತು ಅದು ಆತನಿಗೆ ತೃಪ್ತಿ ತರುವವರೆಗೆ ಪ್ರಕಟಿಸಲು ಅವಸರ ಮಾಡಕೂಡದು. ಸೂಕ್ಷö್ಮ ಮನಸ್ಸು, ಕಥೆಗಳನ್ನು ಕೇಳುವ ಸಹೃದಯತೆ ಇರಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಲಾ ಕಾಲೇಜಿನ ಪ್ರಾಂಶುಪಾಲ…

Read More

ಕೊರಟಗೆರೆ: ಹೈಕಮಾಂಡ್‌ಗೆ ಕೆ.ಎನ್. ರಾಜಣ್ಣ ಬರೆದಿರುವ ಪತ್ರದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ರಾಜಣ್ಣ ಅವರು ನನಗೆ ಇನ್ನೂ ಆ ಪತ್ರವನ್ನು ತೋರಿಸಿಲ್ಲ. ಪತ್ರವನ್ನು ಸಂಪೂರ್ಣವಾಗಿ ನೋಡಿದ ನಂತರವೇ ನಾನು ಈ ಕುರಿತು ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಪತ್ರದ ವಿಷಯವನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕವೇ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ ಎಂದು ತಿಳಿಸಿದ್ದಾರೆ. ಈ ನಡುವೆ ಮಲ್ಲಿಕಾರ್ಜುನ ಖರ್ಗೆ ಅವರು ಬೇಸರಗೊಂಡಿದ್ದಾರೆ ಎನ್ನುವ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, ಖರ್ಗೆಯವರು ಎಐಸಿಸಿ ಅಧ್ಯಕ್ಷರು. ಖರ್ಗೆಯವರು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಹೇಳಿ ದರು. ಪಕ್ಷದೊಳಗೆ ಯಾವುದೇ ಗೊಂದಲ ಉಂಟಾಗಬಾರದು ಎಂಬ ಉದ್ದೇಶ ದಿಂದಲೇ ಖರ್ಗೆಯವರು ಈ ರೀತಿಯ ಹೇಳಿಕೆ ನೀಡಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Read More

ಶಿರಾ: ತಾಲ್ಲೂಕಿನ ಶಿರಾ, ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ. ಘಟನೆಯ ವಿವರ: ಶಿರಾ ತಾಲ್ಲೂಕಿನ ಮುದ್ದರಂಗ ನಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋ ಡುತ್ತಿದ್ದಂತೆಯೇ ಇಡೀ ಕಾರು ಬೆಂಕಿ ಯ ಕೆನ್ನಾಲಿಗೆಗೆ ಸಿಲುಕಿ ಸಂಪೂ ರ್ಣವಾಗಿ ಭಸ್ಮವಾಗಿದೆ. ಕಾರಿನಲ್ಲಿದ್ದ ಚಾಲಕ ಹೊರಬರಲಾಗದೆ ಬೆಂಕಿಯ ನಡುವೆಯೇ ಸಿಲುಕಿ ಮೃತಪಟ್ಟಿದ್ದಾರೆ. ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹೊತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬ0ಧಿಸಿದ0ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಪತ್ತೆಗಾಗಿ…

Read More

ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸಮುದಾಯ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ. ಕೆ.ಆರ್. ರಾಜ್‌ಕುಮಾರ್ ರವರನ್ನೇ ಪ್ರಭಾರವಾಗಿ ಮುಂದುವರೆಸುವAತೆ ರಾಜ್ಯ ವಾಲ್ಮೀಕಿ ಕ್ರಾಂತಿ ಸೇನೆ ವತಿಯಿಂದ ಮಾಜಿ ಸಹಕಾರ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ ರವರಿಗೆ ಮನವಿ ಸಲ್ಲಿಸಲಾಯಿತು. ನಗರದ ಕ್ಯಾತ್ಸಂದ್ರದಲ್ಲಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣರವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಸೇನೆಯ ಪದಾಧಿಕಾರಿಗಳು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇ ಶಕರ ಹುದ್ದೆಯಲ್ಲಿ ಡಾ. ಕೆ.ಆರ್. ರಾಜ್‌ಕುಮಾರ್ ರವರನ್ನೆ ಪ್ರಭಾರವಾಗಿ ಮುಂದುವರೆಸುವ0ತೆ ಮನವಿ ಸಲ್ಲಿಸಿ ಕೋರಿದರು. ಪ್ರಸ್ತುತ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಪರಿಶಿಷ್ಟ ವರ್ಗದ ಸಮಾಜ ನಲುಗಿ ಹೋಗಿತ್ತು. ಈ ಘಟನೆಯಿಂದ  ಹಲವಾರು ತನಿಖೆ, ವಿಚಾರಣೆಯನ್ನು ಎದುರಿಸಬೇಕಾದ ಕಾರಣ ಅಧಿಕಾರಿಗಳು ಈ ಹುದ್ದೆಗೆ ಬರಲು ಹಿಂದೇಟು ಹಾಕುತ್ತಿದ್ದರು. ಆ ಸಂಧರ್ಭದಲ್ಲಿ…

Read More