ತುಮಕೂರು ತುಮಕೂರಿನಲ್ಲಿ ಶನಿವಾರ ಕರೆಯಲಾಗಿದ್ದ ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆಯನ್ನು ಅಧಿಕಾರಿಗಳ ಅಲಭ್ಯತೆ ಕಾರಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಮುಂದೂಡಿದರು. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಕೈಗೊಳ್ಳಲಾದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಇನ್ನಿತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸುವ ಸಂಬAಧ ಶನಿವಾರ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆ ಅಪರಾಹ್ನ ನಿಗಧಿಯಾಗಿತ್ತು. ಸಮಿತಿ ಸದಸ್ಯರು ಚಿತ್ರದುರ್ಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಮುಗಿಸಿ ತುಮಕೂರು ತಲುಪುವ ವೇಳೆಗೆ ಸ್ವಲ್ಪ ವಿಳಂಬವಾಯಿತಾದರೂ ಜಿಲ್ಲೆಯಲ್ಲಿ ಉಪಲೋಕಾಯುಕ್ತರು ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸುವ ಹಾಗೂ ಹಳೆಯ ಪ್ರಕರಣಗಳ ವಿಲೇವಾರಿ ಸಂಬAಧಿಸಿದAತೆ ನಿನ್ನೆಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಅಧಿಕಾರಿಗಳು ಲೋಕಾಯುಕ್ತರ ಸಭೆಯಲ್ಲಿ ಹಾಜರಿರುವುದಾಗಿ ಹಿರಿಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಮಾಹಿತಿ ಪಡೆದು ಸಮಸ್ಯೆಗಳ ಪರಿಹಾರಕ್ಕೆ…
Author: News Desk Benkiyabale
ಹುಳಿಯಾರು:\ ಒಂದು ವರ್ಷ ಕಳೆದರೂ ನರೇಗಾ ಕಾಮಗಾರಿ ಮಾತ್ರ ಇಲ್ಲಿ ಮುಗಿದಿಲ್ಲ. ಅರ್ಧಕ್ಕೆ ಕೆಲಸ ನಿಂತಿರುವುದರಿAದ ಮಳೆ ಬಂದರೆ ಕೆಸರು, ಬೇಸಿಗೆಯಲ್ಲಿ ಧೂಳಾಗಿ ರಸ್ತೆ ಮಾರ್ಪಡುತ್ತದೆ. ಪರಿಣಾಮ ನಿತ್ಯ ಅಧಿಕಾರಿಗಳಿಗೆ ಹಿಡಿಶಾಪ ಹಾಕಿ ಓಡಾಡಬೇಕಿದೆ. ಇದು ಹುಳಿಯಾರು ಹೋಬಳಿಯ ದಸೂಡಿ ಗ್ರಾಮ ಪಂಚಾಯ್ತಿ ಮೈಲೇಕಲ್ಲಹಟ್ಟಿ ರಸ್ತೆಯ ದುಸ್ಥಿತಿ. ದಸೂಡಿ ಗ್ರಾಮ ಪಂಚಾಯ್ತಿಯಿAದ ಕೇವಲ ೧ ಕಿಮೀ ದೂರದಲ್ಲಿರುವ ಮೈಲಕಲ್ಲಹಟ್ಟಿ ಎಂಬ ಪುಟ್ಟ ಗ್ರಾಮವಿದೆ. ಈ ಗ್ರಾಮದವರು ದಸೂಡಿಗೆ ಬಂದೋಗಲು ಹಾಗೂ ದಸೂಡಿ ಮತ್ತು ದಬ್ಬಗುಂಟೆಯವರು ತಮ್ಮತಮ್ಮ ಜಮೀನುಗಳಿಗೆ ಓಡಾಡಲು ಈ ಮಣ್ಣು ರಸ್ತೆ ಅವಲಂಬಿಸಿದ್ದರು. ಆದರೆ ಈ ರಸ್ತೆ ತೀರಾ ಹದಗೆಟ್ಟು ಸಂಚಾರ ದುಸ್ತರವಾಗಿತ್ತು. ಸ್ಥಳೀಯರ ಒತ್ತಾಯದ ಮೇರೆಗೆ ಸ್ಥಳೀಯ ಗ್ರಾಮ ಪಂಚಾಯ್ತಿಯಿAದ ೨೦೨೨-೨೩ ನೇ ಸಾಲಿನ ನರೇಗಾ ಯೋಜನೆಯಡಿ ದುರಸ್ತಿ ಕಾರ್ಯ ಕೈಗೆತ್ತಿಕೊಂಡರು. ದಸೂಡಿ ಮೈಲೇಕಲ್ಲಹಟ್ಟಿಯಿಂದ ದೇವರ ಮರಡಿ ಕೆರೆಯವರೆವಿಗೂ ೩ ಲಕ್ಷ ರೂ. ವೆಚ್ಚದಲ್ಲಿ ಜಲ್ಲಿ ರಸ್ತೆ ಕಾಮಗಾರಿ ಆರಂಭಿಸಿದರು. ಆದರೆ ರಸ್ತೆಗೆ ಅಲ್ಲಲ್ಲಿ ಮಣ್ಣು ಹಾಕಿದ್ದು ಬಿಟ್ಟರೆ…
ತುಮಕೂರು ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ ೩ ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :- ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊAಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆAದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು-ನೋವುಗಳು ಉಂಟಾಗಬಹುದಾದ್ದರಿAದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ. ರಾಜ್ಯ/ಜಿಲ್ಲಾಡಳಿತ/ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು…
ತುಮಕೂರು : ಸರ್ಕಾರವು ತನ್ನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾ ನಗರ ಪಾಲಿಕೆ ಸಹಯೋಗದಲ್ಲಿ ನಗರದ ಬಾಲ ಭವನ ಸಭಾಂಗಣದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದ್ದು, ಜಾತಿ ಗಣತಿ ಆಧಾರದ ಮೇಲೆ ಶೇಕಡಾ 3ರಷ್ಟಿದ್ದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗ ಮತ್ತು ಶಿಕ್ಷಣಕ್ಕೆ ಮಾತ್ರ ಈ ಮೀಸಲಾತಿ ಅನ್ವಯವಾಗಲಿದೆ ಎಂದು ತಿಳಿಸಿದರು. ಸ್ವಾವಲಂಬಿ ಬದುಕು ನಡೆಸಲು ಪರಿಶಿಷ್ಟ ವರ್ಗದ ಸುಮಾರು 5000 ಯುವಕ/ಯುವತಿಯರಿಗೆ ವಿವಿಧ ತರಬೇತಿ ನೀಡಲಾಗಿದೆಯಲ್ಲದೆ 74367 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ. ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ 12 ಬುಡಕಟ್ಟು ಸಮುದಾಯದ 48000 ಕುಟುಂಬಗಳಿಗೆ…
ಗುಬ್ಬಿ : ತಲ್ವಾರ್ ಎಂಬ ಮಾರಕಾಸ್ತ್ರ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಭೂಪ.!! ಎಂಬ ಶರ್ಷಿಕೆಯಡಿ ಸುದ್ದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ತಲ್ವಾರ್ ಝಳಪಿರುವ ಬಗ್ಗೆ ಇಬ್ಬರ ಮೇಲೆ ಪ್ರಕರಣ ದಾಖಲಿಸಿ ರ್ವ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಗುಬ್ಬಿ ಪಟ್ಟಣದಲ್ಲಿ ಕೆಲ ಮುಸ್ಲಿಂ ಸಮುದಾಯದ ಯುವಕರು ನಡುರಸ್ತೆಯಲ್ಲಿ ಸ್ನೇಹಿತರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಮಾರಕಾಸ್ತ್ರ ಹಿಡಿದು ಕೇಕ್ ಕತ್ತರಿಸುವ ಮೂಲಕ ವಿಚಿತ್ರವಾಗಿ ಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ರಸ್ತೆಯನ್ನು ಅಡ್ಡಗಟ್ಟಿ ತಲ್ವಾರ್ ಹಿಡಿದು ಬೆದರಿಸಿರುವ ಬಗ್ಗೆ ಸರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆ ಸುರ್ಣ ಪ್ರಗತಿ ವೆಬ್ ನ್ಯೂಸ್ ಪ್ರಕರಣದ ಬಗ್ಗೆ ಸುದ್ದಿ ಪ್ರಸಾರ ಮಾಡಿತ್ತು ಇದರ ಬೆನ್ನಲ್ಲೇ ದೂರು ದಾಖಲಿಸಿ ಕ್ರಮ ಜರುಗಿಸಲಾಗಿದೆ. ತಲ್ವಾರ್ ಜಳಪಿಸಿರುವ ಪ್ರಕರಣದ ಆರೋಪಿಗಳ ತಂಡವನ್ನು ಪತ್ತೆ ಮಾಡಲು ತುಮಕೂರು ಜಿಲ್ಲಾ ಎಸ್ಪಿ ಅಶೋಕ್ ಕೆ.ವಿ ವಿಶೇಷ ತಂಡವನ್ನ ರಚಿಸಿ ಕರ್ಯಾಚರಣೆ ಕೈಗೊಂಡು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ, ಸೈಯದ್ ಶರೂಕ್ ಎಂಬತನನ್ನು…
ಕೊರಟಗೆರೆ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೊಳವನಹಳ್ಳಿ ಗ್ರಾಮದ ನಾಡ ಕಚೇರಿ ಒಳಗೆ ನೀರು ಸೋರುತ್ತಿದ್ದು, ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದ್ದಾವೆ ಎಂದು ಸಾರ್ವಜನಿಕರು ದೂರಿದರು. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರ ಸ್ಥಾನದಲ್ಲಿರುವ ನಾಡಕಚೇರಿ ಹಾಗೂ ಕಂದಾಯ ಅಧಿಕಾರಿಗಳ ಕಚೇರಿ ಸಂಪೂರ್ಣ ನೀರು ನಿಲ್ಲುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಈ ಎರಡು ಇಲಾಖೆಯ ಕಟ್ಟಡಗಳು ಸಂಪೂರ್ಣ ಶೀಥಲವಾಗಿದ್ದು, ಮಳೆ ಬಂದರೆ ಸಾಕು ಕಚೇರಿಯ ಒಳಗೆ ನೀರು ನಿಲ್ಲುತ್ತಿದ್ದು, ಅನೇಕ ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು. ಕಟ್ಟಡ ಶಿಥಿಲಗೊಂಡಿದ್ದು, ಮಳೆ ಬಂದಾಗ ಕಟ್ಟಡದ ಹಲವೆಡೆ ಸೋರಲಿದೆ ಕಚೇರಿಯ ಸಿಬ್ಬಂದಿಗಳು ಮಳೆ ಬಂದಾಗ ದಾಖಲೆಗಳನ್ನ ಸಂರಕ್ಷಿಸುವುದು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ನಾಡಕಚೇರಿ ಆರೋಗ್ಯ ಇಲಾಖೆಗೆ ಸೇರಿದ್ದು, ಹೋಬಳಿ ಕೇಂದ್ರದಲ್ಲಿರುವ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲ. ಈ ಕಟ್ಟಡ ೬೦ ವರ್ಷಕ್ಕೂ ಹಳೆಯ ಕಟ್ಟಡವಾಗಿದ್ದು, ಯಾವಾಗ ಬೀಳುತ್ತದೆಯೋ…
ತುಮಕೂರು : _ಗಣಿಗಾರಿಕೆ ಕಂಪನಿಯಲ್ಲಿ ಪಾಲುದಾರಿಕೆ ಕೊಡಿಸುವುದಾಗಿ ನಂಬಿಸಿ ತುಮಕೂರಿನ ಉದ್ಯಮಿ ಜಿ. ಶ್ರೀನಿವಾಸ ಮಿತ್ರ ಬಳಿ 6.40 ಕೋಟಿ ರೂ. ಪಡೆದು ವಂಚಿಸಿದ ಆರೋಪ ಸಂಬಂಧ ತುಮಕೂರಿನ ರಾಜ್ಯ ಬಿಜೆಪಿ ಎಸ್ ಟಿ ಘಟಕದ ಉಪಾಧ್ಯಕ್ಷ ಆರ್.ಅನಿಲ್ ಕುಮಾರ್ ಸೇರಿದಂತೆ ಐವರ ವಿರುದ್ಧ ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿಗಳಾದ ಕೆ.ಆರ್. ಶ್ರೀನಿವಾಸರೆಡ್ಡಿ, ಡಿ.ಆರ್.ಇಂದಿರಾ, ಬಸವರಾಜು ಹಾಗೂ ಶಶಿ ಎಂಬುವವರ ವಿರುದ್ಧ ಕ್ರಿಮಿನಲ್ ಪಿತೂರಿ, ವಂಚನೆ ಹಾಗೂ ನಂಬಿಕೆ ದ್ರೋಹ ಆರೋಪದ ಮೇರೆಗೆ ಎಫ್ಐಆರ್ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ತುಮಕೂರು ಮೂಲದ ಶ್ರೀನಿವಾಸ ಮಿತ್ರ ಅವರಿಗೆ 2023ರ ಮಾರ್ಚ್ನಲ್ಲಿ ಬಸವರಾಜು ಹಾಗೂ ಶಶಿ ಮುಖಾಂತರ ಅನಿಲ್ಕುಮಾರ್ ಇತರರು ಪರಿಚಯವಾಗಿದ್ದರು. ಹೊಳಲ್ಕೆರೆ ತಾಲೂಕಿನ 210 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ವಿಟು ಎ ಐರನ್ ಮೈನಿಂಗ್ ಲಿಮಿಟೆಡ್ ಕಂಪನಿ ಗಣಿಗಾರಿಕೆ ನಡೆಸುತ್ತಿದ್ದು, 10 ಕೋಟಿ ರೂ ಬಂಡವಾಳ ಹೂಡಿದರೆ ಕಂಪನಿಯಲ್ಲಿ 25ರಷ್ಟು ಮಾಲೀಕತ್ವ ನೀಡಿ ಲಾಭ ಕೊಡಲಾಗುವುದು ಎಂದು ನಂಬಿಸಿದ್ದರು. ಅನಿಲ್ಕುಮಾರ್…
ತುಮಕೂರು: ಕ್ರಿಯೇಟಿವ್ ೫ ಇವೆಂಟ್ಸ್ ಕಂಪೆನಿಯ ಹೆಸರನ್ನು ದುರುಪಯೋಗ ಪಡಿಸಿಕೊಂಡು, ಆಡಿಷನ್ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ತಿಲಕ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕ್ರಿಯೇಟಿವ್ ೫ ಇವೆಂಟ್ಸ್ ಸಂಸ್ಥೆಯನ್ನು ಪತ್ರಕರ್ತ ಧನಂಜಯ್ ಅವರನ್ನು ನೋಂದಣಿ ಮಾಡಿಸಿದ್ದು, ಲೇಬಲ್ ರಿಜಿಸ್ಟೆçÃಷನ್ ಟ್ರೇಡ್ ಮಾರ್ಕ್ ಹಾಗೂ ಲೋಗೊ ರಿಜಿಸ್ಟೆçÃಷನ್ ಆಗಿದ್ದರು ಸಹ, ಸಂಸ್ಥೆಯ ಲೋಗೋ ಹಾಗೂ ಹೆಸರನ್ನು ದುರುಪಯೋಗಪಡಿಸಿಕೊಂಡು ಬೆಂಗಳೂರು ಮೂಲದ ಅರ್ಪಿತಾ ದೇವ್ ಜೈನ್, ತುಮಕೂರಿನ ದಿವ್ಯಾನಿ ಜೈನ್ ಫಾನೇಶ್ ಮತ್ತು ಇತರರು ಫ್ಯಾಷನ್ ಶೋ ಆಡಿಷನ್ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಬೆAಗಳೂರಿನಲ್ಲಿ ಆಡಿಷನ್ ಮಾಡುವ ಮೂಲಕ ಸಂಸ್ಥೆಯ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದು, ೦೭/೦೪/೨೦೨೪ರಂದು ನಗರದ ಹಟ್ ಹೋಟೇಲ್ನಲ್ಲಿ ಫ್ಯಾಷನ್ ಶೋ ಆಡಿಷನ್ ಕರೆದಿದ್ದು, ಇನ್ಸ್ಟಾ, ಫೇಸ್ಬುಕ್ ಮೂಲಕ ಪ್ರಚಾರ ಮಾಡಿ, ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಹಣ ವಸೂಲಿ ಮಾಡಿ ಅದನ್ನು ಸಂಸ್ಥೆಯ ಮೇಲೆ ಹೊರಿಸಲು ಕುತಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅರ್ಪಿತಾ ದೇವ್ ಜೈನ್, ತುಮಕೂರಿನ ದಿವ್ಯಾನಿ ಜೈನ್,…
ತುಮಕೂರು: ಲೈಂಗಿಕ ಅಲ್ಪಸಂಖ್ಯಾತರು,ಅAಗವಿಕಲರುಗಳನ್ನು ಒಳಗೊಂಡು ತುಮಕೂರು ಮಹಾನಗರಪಾಲಿಕೆ ಕೈಗೊಂಡಿರುವ ಈ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ಇಡೀ ದೇಶಕ್ಕೆ ಮಾದರಿಯಾಗಿದ್ದು, ಇದನ್ನು ಎಲ್ಲಾ ಮಹಾನಗರಗಳಿಗೆ ವಿಸ್ತರಿಸಲು ಭಾರತ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ಮಹಿಳಾ ಹೋರಾಟಗಾರತಿ ಹಾಗೂ ಭಾರತ ಚುನಾವಣಾ ಆಯೋಗದ ಸಲಹಾ ಸಮಿತಿ ಸದಸ್ಯೆ ಡಾ.ಅಕೈ ಪದ್ಮಶಾಲಿ ತಿಳಿಸಿದ್ದಾರೆ. ನಗರದ ಟೌನಹಾಲ್ ಮುಂಭಾಗದಲ್ಲಿ ಭಾರತ್ ಚುನಾವಣಾ ಆಯೋಗದ ಸಲಹೆಯಂತೆ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಸ್ವೀಪ್ ಕಮಿಟಿ ೧೩೨ನೇ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಇದುವರೆಗೂ ಯಾರು ತಲುಪಲಾಗದ ಅಂಗವಿಕಲರು, ಲೈಂಗಿಕ ಅಲ್ಪಸಂಖ್ಯಾತರು ಸೇರಿದಂತೆ ದ್ವನಿಯಿಲ್ಲದ ಜನರು ಭಾಗವಹಿಸುವಂತೆ ಮಾಡುವ ಮೂಲಕ ಸಂವಿಧಾನದ ಆಶಯ ಮತ್ತು ಸಂಸತ್ತಿನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ ಎಂದರು. ಗ್ರಾಮೀಣ ಭಾಗಕ್ಕಿಂತ ನಗರದಲ್ಲಿ ಅತಿ ಕಡಿಮೆ ಮತದಾನವಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.ವಿದ್ಯಾವಂತರು ಮತದಾನದಿಂದ ದೂರವಾಗುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ.ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಒಂದು ಹಬ್ಬ. ಇದರಲ್ಲಿ ನಾವೆಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳಬೇಕಿದೆ.ಆ…
ಹುಳಿಯಾರು: ಹುಳಿಯಾರು ಹೋಬಳಿಯ ಬೋರನ ಕಣಿವೆ ಜಲಾಶಯದಿಂದ ಹಿರಿ ಯೂರು ತಾಲೂಕಿನ ಗಾಯಿತ್ರಿ ಜಲಾ ಶಯಕ್ಕೆ ನೀರು ಬಿಡುವುದನ್ನು ವಿರೋಧಿಸಿ ಜಲಾಶಯದ ಬಳಿ ಅಚ್ಚು ಕಟ್ಟುದಾರರು ಪ್ರತಿಭಟನೆಗೆ ಮುಂದಾದರು. ಶಾಸಕ ಸಿ.ಬಿ.ಸುರೇಶ್ಬಾಬು ಅವರು ದೂರವಾಣಿ ಮೂಲಕ ೧೫ ದಿನ ಹಳ್ಳಕ್ಕೆ, ೧೫ ದಿನ ನಾಲೆಗೆ ಹರಿಸುವ ಸೂತ್ರದೊಂದಿಗೆ ರೈತರ ಮನವೊಲಿಸುವಲ್ಲಿ ಯಶ್ವಿಯಾದರು. @ ಘಟನೆಯ ಹಿನ್ನೆಲೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜೆಜಿಹಳ್ಳಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಅಭಾವ ಎದುರಾಗಿದ್ದು ಬೋರನಕಣಿವೆ ಜಲಾಶಯದಿಂದ ಗಾಯಿತ್ರಿ ಜಲಾಶಯಕ್ಕೆ ಹಳ್ಳದ ಮುಖಾಂತರ ೩ ಅಡಿ ನೀರು ಹರಿಸಲು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಕೋರಿದ್ದರು. ಅದರಂತೆ ಪ್ರದೇಶಿಕ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ೩ ದಿನಗಳ ಕಾಲ ನಿರಂತರವಾಗಿ ಗಾಯಿತ್ರಿ ಜಲಾಶಯಕ್ಕೆ ನೀರು ಬಿಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದರು. @ ಜಯಚಂದ್ರ ಪತ್ರ ಪ್ರದೇಶಿಕ ಆಯುಕ್ತರು ೩ ದಿನಗಳ ಕಾಲ ನೀರು ಬಿಡಲು ಬರೆದ ಪತ್ರಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರದ ನವದೆಹಲಿ…











