ತುಮಕೂರು ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆಹಚ್ಚುವಿಕೆ (ಉಚಿತ) ಹೆಚ್ಚು ಪರಿಣಾಮಕಾರಿಯಾಗಿಸವು ತಮ್ಮ ಅಧ್ಯಕ್ಷತೆಯಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶ ನಡೆಸಬೇಕು ಎಂದು ಅಶ್ವಿನಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಜಿಲ್ಲಾ ಒಕ್ಕಲಿಗರ ಒಕ್ಕೂಟ ಹಾಗೂ ವಿಜಯ ಆಸ್ಪತ್ರೆ ವತಿಯಿಂದ ಡಾ. ಟಿ.ಎಸ್. ವಿಜಯಕುಮಾರ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು. ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ ದಿನೇಶ್ಗುಂಡೂರಾವ್ ಅವರನ್ನು ಭೇಟಿ ಮಾಡಿದ ಡಾ. ವಿಜಯಕುಮಾರ್ ಅವರು, ಈಗಾಗಲೇ ೩೦ ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಸ್ತನದ ಕ್ಯಾನ್ಸರ್, ಮಾಮ್ಮೊಗ್ರಫಿ, ಗರ್ಭಕೋಶದ ಕಂಠದ ಕ್ಯಾನ್ಸರ್, ಪ್ಯಾಪ್ಸ್ಮಿಯರ್, ಅಲ್ಟಾçಸೌಂಡ್ ಸ್ಕಾ÷್ಯನ್ ಪರೀಕ್ಷೆಗಳನ್ನು ಕಳೆದ ನವೆಂಬರ್ ತಿಂಗಳಿನಿAದ ಉಚಿತವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಸಾವಿರಾರು ಮಹಿಳೆಯರು ಇದರ ಪ್ರಯೋಜನೆ ಪಡೆದಿದ್ದಾರೆ. ಈ ಕಾರ್ಯಕ್ರಮ ೧೪ ತಿಂಗಳ ವರೆಗೆ ಮುಂದುವರೆಸಿಕೊAಡು ಹೋಗಲು ತಮ್ಮ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು. ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆ ಹಚ್ಚುವಿಕೆ ಮತ್ತಷ್ಟು ಪರಿಣಾಮಕಾರಿಯಾಗಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಬಹಳ…
Author: News Desk Benkiyabale
ತುಮಕೂರು ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ಮಕ್ಕಳು ಪೋಷಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಮಹಾನಗರಪಾಲಿಕೆಯ ೧೫ನೇ ವಾರ್ಡಿನ ಸದಸ್ಯೆ ಶ್ರೀಮತಿ ಗಿರಿಜಾ ಧನಿಯಕುಮಾರ್ ತಿಳಿಸಿದ್ದಾರೆ. ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಬಯಲು ರಂಗಮAದಿರದಲ್ಲಿ ಜುಲೈ ೨೮ರ ವಿಶ್ವ ಪರಿಸರ ಸಂರಕ್ಷಣಾ ದಿನ ಹಾಗೂ ಪ್ಲಾಸ್ಟಿಕ್ ಮುಕ್ತ ತುಮಕೂರು ಅಭಿಯಾನದ ಅಂಗವಾಗಿ ನಗರಪಾಲಿಕೆ,೧೫ನೇ ವಾರ್ಡಿನ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಕುಮಾರ್,ಜೆ.ಡಿ.ಸ್ಕೂಲ್ ಅಫ್ ಅರ್ಟ್ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಾಲಾ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡುಸುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಭವಿಷ್ಯ ಪ್ರಜೆಗಳಾದ ಮಕ್ಕಳು,ತಾವು ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿಕೊಳ್ಳು ವುದಲ್ಲದೆ,ಮನೆಯಲ್ಲಿ ತಮ್ಮ ತಂದೆ,ತಾಯಿಗಳಿಗೆ, ನೆರೆ, ಹೊರೆಯವರಿಗೂ ತಿಳಿಸುವ ಪರಿಸರ ರಾಯಭಾರಿಗಳಾಗಿ ಕೆಲಸ ಮಾಡಬೇಕೆಂದರು. ಬಾಲಾಜಿ ಪುಡ್ವರ್ಲ್ಡ್ನ ಸಂತೋಷ್ ಮಾತನಾಡಿ,ಕನ್ನಡ ಸೇನೆಯ ಅಧ್ಯಕ್ಷ ಧನಿಯಕುಮಾರ್ ಮತ್ತು ಶ್ರೀಮತಿ ಗಿರಿಜಾ ಧನಿಯಕುಮಾರ್ ಅವರದ್ದು ಸೃಜನ ಶೀಲ ವ್ಯಕ್ತಿತ್ವ.ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ…
ತುಮಕೂರು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿಯಾಗಿ ರಾಜ್ಯದ ಸ್ಲಂ ನಿವಾಸಿಗಳ ಹಕ್ಕೋತ್ತಾಯಗಳಿಗೆ ಸಂಬAಧಿಸಿದ ಮನವಿ ಪತ್ರವನ್ನು ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಸಲ್ಲಿಸಿ ಗಮನ ಸೆಳೆದರು. ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೂ ಹಿಂದಿನ ಅವಧಿಯಲ್ಲಿ ಸ್ಲಂ ನಿವಾಸಿಗಳಿಗೆ ಸಂಬAಧಿಸಿದAತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ನಗರ ಪ್ರದೇಶದ ಸ್ಲಂಗಳಲ್ಲಿ ಅತಿಹೆಚ್ಚು ಬಡವರು ಕೊಳಗೇರಿಗಳಿಲ್ಲಿದ್ದಾರೆ. ಅಹಿಂದ ಸಮುದಾಯಕ್ಕೆ ಸೇರಿದ ಇಲ್ಲಿನ ಜನರ ಸಮಗ್ರವಾದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು ನಮ್ಮ ಪÀಕ್ಷದ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳು, ಪೌರಕಾರ್ಮಿಕರು, ಅಸಂಘಟಿತ ಕಾರ್ಮಿಕರಿಗೆ ನೀಡಿರುವ ಭರವಸೆಯನ್ನು ಈಡೇರಿಸುತ್ತೇವೆ. ಈ ಮೂಖೇನ ಸಾಮಾಜಿಕ ಅರ್ಥಿಕವಾಗಿ ಹಿಂದುಳಿದಿರುವ ಸ್ಲಂ ನಿವಾಸಿಗಳಿಗೆ ಸಾಮಾಜಿಕ ನ್ಯಾಯವನ್ನು ನೀಡಿರುವ ಮೂಲಕ ಸಂವಿಧಾನದ ಖಾತ್ರಿಗಳನ್ನು ನೀಡಲಾಗುವುದೆಂದರು. ಭೂಮಿ ಆಧಾರಿತ ವಸತಿ ಹಕ್ಕು ಕಾಯಿದೆ ಜಾರಿಯಾಗಲಿ: ಎ.ನರಸಿಂಹಮೂರ್ತಿ ಸ್ಲA ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ ಸ್ಲಂ ಜನಾಂದೋಲನ ಸಂಘಟನೆ ಚುನಾವಣಾ ಪೂರ್ವದಲ್ಲಿ ಸಂವಿಧಾನ ಉಳಿಸಿ…
ತುಮಕೂರು ನಗರದಲ್ಲಿ ಕಳೆದ ೨ ದಿನಗಳಿಂದ ತುಂತುರು ಸೋನೆ ಮಳೆ ಸುರಿಯುತ್ತಿದ್ದು, ಜನಸಾಮಾನ್ಯರ ದಿನನಿತ್ಯದ ಕೆಲಸ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲಾಗದೆ ಹೈರಾಣಾಗಿದ್ದಾರೆ. ಬೆಳ್ಳಂಬೆಳ್ಳಿಗೆಯೇ ಮೋಡ ಕವಿದ ವಾತಾವರಣದೊಂದಿಗೆ ಜಿಟಿ ಜಿಟಿ ಮಳೆಯಾಗುತ್ತಿರುವುದರಿಂದ ಹಾಲು, ತರಕಾರಿ ತರಲು ಮನೆಯಿಂದ ಹೊರ ಬರಬೇಕಾದರೆ ಛತ್ರಿ ಆಶ್ರಯಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆಯೇ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಗುತ್ತಿದ್ದು, ಜನಸಾಮಾನ್ಯರು ನಿತ್ಯದ ಸಾಮಗ್ರಿಗಳನ್ನು ಕೊಳ್ಳಲು ಮಾರುಕಟ್ಟೆ, ಅಂಗಡಿಗಳಿಗೆ ತೆರಳಲು ಕಸಿವಿಸಿ ಉಂಟಾಗುತ್ತಿದೆ. ಮಹಿಳೆಯರು, ಮಕ್ಕಳು, ವೃದ್ಧರು, ಯುವಕರು, ಯುವತಿಯರು ತುಂತುರು ಮಳೆ ನಡುವೆಯೇ ಛತ್ರಿಗಳನ್ನು ಹಿಡಿದು ಮನೆಗಳಿಂದ ಹೊರ ಬಂದು ಹಾಲು, ತರಕಾರಿ, ಹೂವು ಖರೀದಿಸುತ್ತಿದ್ದ ದೃಶ್ಯಗಳು ಕಂಡು ಬಂತು. ಇನ್ನು ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಗಳ ನೌಕರರು, ಶಾಲಾ – ಕಾಲೇಜು ವಿದ್ಯಾರ್ಥಿಗಳು ಸಹ ಜರ್ಕಿನ್ ಧರಿಸಿ ಛತ್ರಿ ಹಿಡಿದು ತೆರಳುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿವೆ. ಗ್ರಾಮೀಣ ಪ್ರದೇಶಗಳಲ್ಲೂ ಜಿಟಿ ಜಿಟಿ ಮಳೆಯಾಗುತ್ತಿರುವುದರಿಂದ ದನ ಕರುಗಳ ಮೇವಿಗೂ ತೊಂದರೆ…
ತುಮಕೂರು ವೈದ್ಯಕೀಯ ಕ್ಷೇತ್ರ ಸೇವಾ ಕ್ಷೇತ್ರವಾಗಿದ್ದು, ಜನರ ಸೇವೆ ಮಾಡುವುದೇ ವೈದ್ಯರ ಪ್ರಥಮ ಆದ್ಯತೆಯಾಗಬೇಕು. ವೈದ್ಯರಲ್ಲಿ ಸೇವಾ ಮನಸ್ಥಿತಿ ಸದಾ ಜಾಗೃತವಾಗಿರಬೇಕು. ಜನರ ಜೀವನವನ್ನು ಬದಲಾಯಿಸುವ ಶಕ್ತಿ ವೈದ್ಯರಿಗೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಅಭಿಪ್ರಾಯ ಪಟ್ಟರು. ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೂಪರ್ ಸ್ಪೆಷಾಲಿಟಿ ಹೊರ ರೋಗಿ ವಿಭಾಗ ಹಾಗೂ ಸಿಬ್ಬಂದಿ ವಸತಿ ಗೃಹ ಸಮುಚ್ಚಯದ ಉದ್ಘಾಟನೆ ನೆರವೇರಿಸಿ, ನಂತರ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಅಭಿವೃದ್ದಿ ಹೊಂದುತ್ತಿರುವ ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಬೆಳವಣಿಗೆ ಅತಿ ಮುಖ್ಯವಾಗುತ್ತದೆ. ಯಾವುದೇ ದೇಶದ ಅಥವಾ ರಾಜ್ಯದ ಆರೋಗ್ಯ ಮತ್ತು ಶೈಕ್ಷಣಿಕ ವಲಯ ಅತ್ಯುತ್ತಮವಾಗಿದ್ದಲ್ಲಿ ಆ ದೇಶವನ್ನು ಅಭಿವೃದ್ದಿ ಹೊಂದಿದ ದೇಶವೆಂದು ಪರಿಗಣಿಸಬಹುದಾಗಿದೆ. ಸಮಾಜದ ಸಾಮಾನ್ಯ ಮನುಷ್ಯನಿಗೂ ಸಹ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆಗಳು ದೊರಕಬೇಕು ಎಂಬುವುದೇ ತಮ್ಮ ಆಶಯವಾಗಿದೆ ಎಂದ…
ತುಮಕೂರು ವಿದ್ಯಾರ್ಥಿಗಳು ಕಾಣುವ ಕನಸಿಗೂ ನಡೆಯುತ್ತಿರುವ ದಾರಿಗೂ ಸಂಬAಧವಿದ್ದರಷ್ಟೇ ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧ್ಯ ಎಂದು ನವೋದಯ ಐ.ಎ.ಎಸ್ ಅಕಾಡೆಮಿ ನಿರ್ದೇಶಕ ಎಂ. ಉದಯ್ ಸಾಗರ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಶಾಸ್ತç ವಿಭಾಗವು ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ತರಬೇತಿ’ಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಪೋಷಕರು ತನ್ನ ಮಕ್ಕಳು ಒಳ್ಳೆಯ ಸ್ಥಾನ ತಲುಪಬೇಕೆಂಬ ನಿರೀಕ್ಷೆಯಲ್ಲಿರುತ್ತಾರೆ. ಅಂತಹ ನಿರೀಕ್ಷೆಯನ್ನು ವಿದ್ಯಾರ್ಥಿಯಾಗಿ ನೀವು ನನಸು ಮಾಡಬೇಕು ಎಂದರು. ವಿದ್ಯಾರ್ಥಿ ಜೀವನದ ಪ್ರತಿಕ್ಷಣವೂ ಅಮೂಲ್ಯವಾದ ಸಮಯವಾಗಿರುತ್ತದೆ. ಈ ಸಮಯವನ್ನು ವ್ಯರ್ಥ ಮಾಡದೆ ಉಪಯೋಗಿಸಿಕೊಳ್ಳಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ ಕರಿಯಣ್ಣ, ಕೇವಲ ಪದವಿ ಪಡೆದರೆ ಉನ್ನತ ಸ್ಥಾನಕ್ಕೆ ಏರುತ್ತೇವೆ ಎಂಬುದು ತಪ್ಪು ಗ್ರಹಿಕೆ. ಆದ್ದರಿಂದ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಳ್ಳೆಯ ತಯಾರಿ ನಡೆಸಿ ಯಶಸ್ವಿಯಾಗಬೇಕು ಎಂದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಶಾಸ್ತç…
ತುಮಕೂರು ಹೇಮಾದ್ರಿ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕೇಂದ್ರ ತುಮಕೂರು ಇವರ ವತಿಯಿಂದ ಲಕ್ಕೇನ ಹಳ್ಳಿ ಗ್ರಾಮ, ಒ.ಊ. ಪಟ್ಟಣ ಗ್ರಾಮ ಪಂಚಾಯ್ತಿ, ಗುಬ್ಬಿ ತಾಲ್ಲೂಕು, ತುಮಕೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಮಾಜ ಕಾರ್ಯ ಗ್ರಾಮೀಣ ಶಿಬರದ ಎರಡನೇ ದಿನದ ಬೆಳಗಿನ ಕಾರ್ಯಕ್ರಮವು ಸಹಭಾಗಿತ್ವದೊಂದಿಗೆ ಗ್ರಾಮೀಣ ವಿಶ್ಲೇಷಣೆ ಯಾಗಿದ್ದು ಇದರ ಮುಖ್ಯ ಉದ್ದೇಶ ಗ್ರಾಮದ ಬಗ್ಗೆ ತಿಳಿದುಕೊಳ್ಳುವುದಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಮುಖ್ಯಸ್ಥರಾದ ಶ್ರೀಯುತ ಪಾಂಡುರAಗಪ್ಪನವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯರಾದ ಶ್ರೀಯುತ ಲಕ್ಷ್ಮಣ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಗ್ರಾಮೀಣ ಭಾಗದಲ್ಲಿ ನಡೆಯುವ ಶಿಬಿರದ ಮಹತ್ವವನ್ನು ಶಿಬಿರಾರ್ಥಿಗಳಿಗೆ ತಿಳಿಸಿದರು. ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದಂತಹ ಶ್ರೀಯುತ ಅ.ಅ. ಪಾವಟೆಯವರು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಜನರ ಸಹಭಾಗಿತ್ವದೊಂದಿಗೆ ತಯಾರಾದ ಸಾಮಾಜಿಕ ನಕ್ಷೆ, ಸಂಪನ್ಮೂಲ ಶ್ರೇಣೀಕರಣ ಹಾಗೂ ಚಪಾತಿ ನಕ್ಷೆಯನ್ನು ವಿವರಿಸುವ ಮೂಲಕ, ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಗ್ರಾಮದ ಅಭಿವೃದ್ಧಿಯನ್ನು ಮಾಡಬಹುದೆಂದು ಶಿಬಿರಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ವಿವರಿಸಿದರು. ಕಾರ್ಯಕ್ರಮದಲ್ಲಿ…
ತುಮಕೂರು ತಾವು ಮಾಡುವ ಸಾಮಾಜಿಕ ಕಾರ್ಯ ಇತರರಿಗೆ ಪ್ರೇರಣೆಯಾಗಬೇಕು ಹಾಗೂ ಮಾದರಿಯಾಗಬೇಕು ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ದೀರಾನಂದ ಜೀ ಮಹಾರಾಜ್ ಅಭಿಪ್ರಾಯಪಟ್ಟರು. ಶ್ರೀ ಸಿದ್ಧಾರ್ಥ ವ್ಯವಹಾರ ಅಧ್ಯಯನ ಕೇಂದ್ರದ ಸಾಮಾಜ ಕಾರ್ಯ ವಿಭಾಗದ ವತಿಯಿಂದ ಹೋಬಳಿಯ ಕಾಟೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾಜ ಕಾರ್ಯದ ನಡೆ ಮಾದರಿ ಗ್ರಾಮದ ಕಡೆ ಎಂಬ ೭ ದಿನಗಳ ಸಮಾಜ ಕಾರ್ಯ ಗ್ರಾಮೀಣ ಶಿಬಿರಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಈ ಶಿಬಿರದ ಉದ್ದೇಶದಂತೆ ಗ್ರಾಮವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ನಾಗರಿಕರಿಗೆ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು, ಗ್ರಾಮೀಣ ಭಾಗದಲ್ಲಿ ಕಂಡು ಬರುವ ಅನೈರ್ಮಲ್ಯ, ಅನಿಷ್ಟ ಪದ್ಧತಿ, ಮೌಢ್ಯ ತೊರೆಯುವಂತೆ ಅರಿವು ಮೂಡಿಸಬೇಕು ಎಂದರು. ಸ್ವಾಮಿ ವಿವೇಕಾನಂದರು ಹೇಳಿದಂತೆ ಯುವ ಸಮುದಾಯ ಜಾಗೃತವಾಗಬೇಕು, ಸಮಾಜದ ಅಂಕುಡೊAಕುಗಳನ್ನು ತಿದ್ದುವುದರ ಜೊತೆಗೆ ಕೇವಲ ಲಾಭ-ನಷ್ಟದ ಲೆಕ್ಕಾಚಾರ ಮಾಡದೇ ಎಲ್ಲರೂ ಸಾಮಾಜಿಕ ಬದ್ಧತೆಯೊಂದಿಗೆ ಸಾಮಾಜಿಕ ಜವಾಬ್ದಾರಿಯನ್ನು ಅರಿವು ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಸ್ಎಸ್ಐಬಿಎಂನ ಪ್ರಾಂಶುಪಾಲರಾದ ಡಾ.ಮಮತಾ…
ಪಾವಗಡ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅಭಿಮಾನಿಗಳ ಮಹಾವೇದಿಕೆ ಪಾವಗಡ ರವರ ನೇತೃತ್ವದಲ್ಲಿ ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾದ ನಿಕೇತ್ ರಾಜ್ ಮೌರ್ಯ ರವರು ಶ್ರೀ ಶಿವಕುಮಾರ ಸ್ವಾಮಿಗಳು ಮತ್ತು ಡಾ.ಅಬ್ದುಲ್ ಕಲಾಂ ಇಬ್ಬರೂ ವಿದ್ಯಾರ್ಥಿಗಳ ಬೆನ್ನು ತಟ್ಟಿದವರು, ಅವರ ಹೆಸರಿನಲ್ಲಿ ಪ್ರತೀ ವರ್ಷ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವ ಈ ಮಹಾ ವೇದಿಕೆಯ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿ, ಸಾಧನೆಯ ಹಾದಿ ಸುಗಮವಲ್ಲ. ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ. ಅದೇ ರೀತಿ ನಾವು ಅಪೇಕ್ಷೆ ಪಟ್ಟಂತ ಫಲಿತಾಂಶವನ್ನು ಪಡೆಯಲು ಅತೀ ವೇಗವಾಗಿ ಸಾಧನೆಯ ಹಾದಿಯಲ್ಲಿ ಸಾಗಬೇಕಾಗಿದೆ. ಪ್ರತಿಭೆ ಎಲ್ಲರಲ್ಲೂ ಇದೆ.ಆದರೆ ಆಗಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧೆ ಅನಿವಾರ್ಯ. ಇವೆರಡರ ನಡುವೆ ಸಾಮಾಜಿಕ ಜವಾಬ್ದಾರಿಯ…
ತುಮಕೂರು ಪ್ರಶಿಕ್ಷಣಾರ್ಥಿಗಳಿಗೆ ಗ್ರಾಮದ ಜನರೊಂದಿಗೆ ಹೇಗೆ ಸಹಭಾಗಿಯಾಗಿ ಕೆಲಸ ಮಾಡಬೇಕು ಹೇಗೆ ಕಾರ್ಯಕ್ರಮಗಳಲ್ಲಿ ಹಾಗೂ ಗ್ರಾಮದಲ್ಲಿ ಕೆಲಸ ಮಾಡುವಾಗ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಮಾದ್ರಿ ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ನಟರಾಜ್ ಃ.ಏ. ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಅವರೂ ಸಹ ಕಾರ್ಯಕ್ರಮದ ಕುರಿತು ತಿಳಿಸಿದರು. ಹೇಮಾದ್ರಿ ಎಜುಕೇಷನಲ್ ಅಂಡ್ ಡೆವಲಪ್ ಮೆಂಟಲ್ ಸೊಸೈಟಿ (ರಿ). ತುಮಕೂರು. ಹೇಮಾದ್ರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಇವರ ವತಿಯಿಂದ ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು, ಒ.ಊ. ಪಟ್ಟಣ ಗ್ರಾಮ ಪಂಚಾಯಿತಿಯ ಲಕ್ಕೇನಹಳ್ಳಿ ಗ್ರಾಮದಲ್ಲಿ ಸಮಾಜ ಕಾರ್ಯ ಶಿಬಿರವನ್ನು ಹಮ್ಮಿಕೊಂಡಿದ್ದು ಮೊದಲ ದಿನದ ಶಿಬಿರವನ್ನು ಹೇಮಾದ್ರಿ ಎಜುಕೇಷನಲ್ ಸೊಸೈಟಿಯ ಕಾರ್ಯದರ್ಶಿಗಳಾದ ತಿಪ್ಪೇಸ್ವಾಮಿ ಗಿ.ಖಿ. ಅವರು ಹಾಗೂ ವೇದಿಕೆಯ ಮೇಲೆ ಉಪಸ್ಥಿತರಿದ್ದ ಎಲ್ಲಾ ಗಣ್ಯರೂ ನಡೆಸಿಕೊಟ್ಟರು. ಕೃಷ್ಣಮೂರ್ತಿ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡಿ ಎಲ್ಲಾ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಶಿಬಿರಾಧಿಕಾರಿಗಳಾದ ಶೇಖರಯ್ಯ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಹೇಮಾದ್ರಿ ಎಜುಕೇಶನಲ್ ಟ್ರಸ್ಟ್ನ…











