ತುರುವೇಕೆರೆ: ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಒಕ್ಕೂಟದಿಂದ ಜಿಲ್ಲೆಯ ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ಹೇಳಿದರು. ಪಟ್ಟಣದ ಕೃಷಿ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ನಂದಿನಿ ಸಭಾ ಭವನದಲ್ಲಿ ನಡೆದ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೀಡಲಾದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ರಾಜ್ಯದಲ್ಲೇ ತುಮಕೂರು ಜಿಲ್ಲೆ ಹಾಲು ಉತ್ಪಾದಿಸುತ್ತಿರುವ ಎರಡನೇ ಜಿಲ್ಲೆಯಾಗಿದೆ. ಅಲ್ಲದೇ ಹೈನುಗಾರರ ಹಿತ ಕಾಪಾಡುತ್ತಿರುವ ಉತ್ತಮ ಸಂಸ್ಥೆಯಾಗಿ ಹೊರಹೊಮ್ಮಿದೆ. ಈಗ ಪ್ರತಿ ದಿನ ಸುಮಾರು ೧೦ ಲಕ್ಷ ಲೀಟರ್ ಹಾಲು ಶೇಖರಣೆ ಆಗುತ್ತಿದೆ. ಪ್ರತಿ ತಿಂಗಳು ರೈತಾಪಿಗಳ ಖಾತೆಗೆ ಸುಮಾರು ೯ ಕೋಟಿಯಷ್ಟು ಹಣ ಜಮಾ ಆಗುತ್ತಿದೆ. ಉತ್ತಮ ಗುಣಮಟ್ಟದ ಹಾಲು ನೀಡಿದಷ್ಟೂ ಹೆಚ್ಚು ಹಣ ರೈತರಿಗೆ ಲಭಿಸಲಿದೆ. ನಮ್ಮ ಸಹಕಾರ ಸಂಘಗಳಿಗೆ ಹಾಲು ಸರಬರಾಜು ಮಾಡುವ ರೈತಾಪಿಗಳಿಗೆ ಹತ್ತು ಹಲವಾರು ಸವಲತ್ತುಗಳು ದೊರೆಯುತ್ತಿದೆ.…
Author: News Desk Benkiyabale
ತುಮಕೂರು: ಸಾರ್ವಜನಿಕರು ಸರ್ಕಾರ ರೂಪಿಸುವ ವಿವಿಧ ಜನಪರ ಯೋಜನೆಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಶ್ರೀ ಡಿ.ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಬುಧವಾರ ಸರ್ಕಾರದ ೨ ವರ್ಷದ ಸಾಧನೆ ಹಾಗೂ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ಇಂದಿನಿAದ ಜೂನ್ ೧೦ರವರೆಗೆ ಆಯೋಜಿಸಲಾಗಿರುವ ಈ ವಸ್ತುಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದು ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಲ್ಲಿ ಗೃಹಲಕ್ಷಿö್ಮ ಯೋಜನೆಯಡಿ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು ೨,೦೦೦ ರೂ.ಗಳನ್ನು ಜಮೆ ಮಾಡಲಾಗುತ್ತಿದ್ದು, ಈವರೆಗೆ ಅರ್ಹ ಫಲಾನುಭವಿಗಳಿಗೆ ೨೩೦೦ ಕೋಟಿ ರೂ.ಗಳನ್ನು ತಲುಪಿಸಲಾಗಿದೆ. ಮಹಿಳಾ ಸಬಲೀಕರಣಕ್ಕಾಗಿ ಜಮೆಯಾಗುತ್ತಿರುವ ಈ ಹಣದಿಂದ ಮಹಿಳೆಯರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಕುಟುಂಬ…
ತುಮಕೂರು: ಇತ್ತೀಚಿನ ದಿನಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ಕೋರ್ಸ್ಗೆ ಸಾಕಷ್ಟು ಬೇಡಿಕೆ ಹೆಚ್ಚಾಗುತ್ತಿದ್ದು, ತುಮಕೂರಿನಲ್ಲಿ ಮೊದಲ ಬಾರಿಗೆ ಬಿ.ಸಿ.ಎ. ಪದವಿಗೆ ಎಐಡಿಎಸ್ ಕೋರ್ಸ್ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ನಂತಹ “ಉದಯೋನ್ಮುಖ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಉತ್ತಮ ಅವಕಾಶಗಳನ್ನು ಒದಗಿಸಲಿದೆ” ಈ ಕೋರ್ಸ್ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಬಗ್ಗೆ ಸಮಗ್ರವಾದ ತಿಳುವಳಿಕೆಯನ್ನು ನೀಡಲಾಗುತ್ತಿದೆ ಮತ್ತು ಉದ್ಯಮದ ಅಗತ್ಯತೆಗಳಿಗೆ ತಕ್ಕಂತೆ ಅವರನ್ನು ಸಿದ್ಧಗೊಳಿಸುತ್ತದೆ ಎಂದು ವರದರಾಜ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ.ಮುಬಾರಕ್ರವರು ತಿಳಿಸಿದರು. ನಗರದ ಶೆಟ್ಟಿಹಳ್ಳಿ ಹೊರವಲಯದ ಜಯನಗರ ದಕ್ಷಿಣದಲ್ಲಿರುವ ವರದರಾಜ ಚಾರಿಟಬಲ್ ಟ್ರಸ್ಟ್ನ ವತಿಯಿಂದ ವರದರಾಜ ಪದವಿ ಕಾಲೇಜಿನಲ್ಲಿ ಜೂನ್ ೪ ರಂದು ಬುಧವಾರ ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಆವರಣದಲ್ಲಿ ಬಿ.ಸಿ.ಎ.ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಡಾ.ಮುಬಾರಕ್ರವರು ಮಾತನಾಡುತ್ತಾ ವಿದ್ಯಾರ್ಥಿಗಳನ್ನು ಕ್ಯಾಂಪಸ್ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಮಾರುಕಟ್ಟೆಗೆ ಸಿದ್ಧಪಡಿಸುವ ನಿಟ್ಟಿನಲ್ಲಿ ಪ್ರಮುಖವಾಗಿ…
ಶಿರಾ: ರೈತರು ಹಾಗೂ ಕೃಷಿಕ ಮಹಿಳೆಯರು ವರ್ಷವಿಡಿ ಆದಾಯಗಳಿಸುವ ಏಕೈಕ ಮಾರ್ಗ ಹೈನುಗಾರಿಕೆಯಾಗಿದ್ದು, ಈ ನಿಟ್ಟಿನಲ್ಲಿ ಶಿರಾ ತಾಲೂಕಿನಲ್ಲಿ ಹೈನುಗಾರರು ಹೆಚ್ಚು ಹಾಲು ಉತ್ಪಾದನೆಯ ಮಾಡುವ ಮೂಲಕ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುವ ಸಂಕಲ್ಪವನ್ನು ಯಶಸ್ವಿಗೊಳಿಸಿ ಎಂದು ತುಮಕೂರು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಎಸ್ ಆರ್ ಗೌಡ ಹೇಳಿದರು. ಅವರು ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ತುಮಕೂರು ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ, ಬುಕ್ಕಾಪಟ್ಟಣ ಮತ್ತು ಶಿರಾ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಂಘಗಳು, ತುಮಕೂರು ಹಾಲು ಒಕ್ಕೂಟದ ಟ್ರಸ್ಟ್ ಮಲ್ಲಸಂದ್ರ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಮಿಶ್ರತಳಿ ಹೆಣ್ಣು ಕುರುಗಳ ಪ್ರದರ್ಶನ, ಒಂದು ಲಕ್ಷ ಲೀಟರ್ ಹಾಲು ಶೇಖರಣ ಸಂಕಲ್ಪ ದಿನ ಹಾಗೂ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರದ ಯಾವುದೇ ಯೋಜನೆಗಳು ನೀಡದಂತಹ ಆದಾಯ ಪಶುಸಂಗೋಪನೆಯಿAದ ರೈತರಿಗೆ ಸಿಗುತ್ತಿದೆ ರೈತರ ಆದಾಯ ದ್ವಿಗುಣಗೊಳಿಸುವ ರೈತರ ಜೀವನ ಗುಣಮಟ್ಟ…
ತುಮಕೂರು: ಸಿದ್ಧಗಂಗಾ ಚಾರಣ ತಂಡ ತನ್ನ ಐದನೇ ವಾರ್ಷಿಕೋತ್ಸವವನ್ನು ಹಾಗೂ ವಿಶ್ವ ಪರಿಸರ ದಿನವನ್ನು ತುಮಕೂರಿನ ಕನ್ನಡ ಭವನದಲ್ಲಿ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯದಲ್ಲಿ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ ವನ್ಯಜೀವಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸಿದ್ಧ ಸಂರಕ್ಷಣಾ ಜೀವಶಾಸ್ತ್ರಜ್ಞ ಡಾ. ಸಂಜಯ್ ಗುಬ್ಬಿ ರವರು ಹುಲಿ ಮತ್ತು ಚಿರತೆಗಳಂತಹ ಮಾಂಸಾಹಾರಿ ಪ್ರಾಣಿಗಳ ರಕ್ಷಣೆಯ ಮೇಲೆ ಕೇಂದ್ರೀಕರಿಸಿದ ವನ್ಯಜೀವಿ ಸಂರಕ್ಷಣೆಯ ಕುರಿತು ಉಪನ್ಯಾಸವನ್ನು ನೀಡಿದರು ಮತ್ತು ಹಿರಿಯ ಸಂಶೋಧನಾ ಸಹಾಯಕ ಅಭಿಷೇಕ್ ಭಾರದ್ವಾಜ್ ರವರು ಕಪ್ಪೆ ಮತ್ತು ಹಾವುಗಳ ರಕ್ಷಣೆ ಹಾಗೂ ವಿಶೇಷತೆಗಳ ಕುರಿತು ಉಪನ್ಯಾಸವನ್ನ ನೀಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದಂತಹ ಸಿದ್ಧಗಂಗಾ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಜಿಗಳು ಕಾರ್ಯಕ್ರಮವನ್ನುದ್ದೇಶಿಸಿ ಹಾಗೂ ಸದಸ್ಯರುಗಳ ಸಾಧನೆಯನ್ನು ಪ್ರಶಂಶಿಸಿ ಆಶೀರ್ವಚನ ನೀಡಿದರು. ಹಿಮಾಲಯದ ಚಾರಣವನ್ನ ಯಶಸ್ವಿಯಾಗಿ ಪೂರ್ಣಗೊಳಿಸಿದ ಸಿದ್ಧಗಂಗಾ ಚಾರಣ ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು. ಇದರೊಂದಿಗೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಆಯೋಜಿಸಲಾಗಿತ್ತು, ಈ ತಂಡವು ಪ್ರತಿವರ್ಷವೂ ವಿಶ್ವ…
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಹೆಲನ್ ಕೆಲರ್ ಶಾಲೆಯಲ್ಲಿರುವ ವಾಕ್ ಮತ್ತು ಶ್ರವಣದೋಷವುಳ್ಳ ಮಕ್ಕಳು ಹಾಗೂ ಅವರ ತಾಯಂದಿರೊAದಿಗೆ ಸಂವಾದ ನಡೆಸಿದರು. ನಗರದ ಜಯನಗರ ಪೂರ್ವ ಹೆಲನ್ ಕೆಲರ್ ಇಂಟಿಗ್ರೇಟೆಡ್ ಎಜುಕೇಷನ್ ಸೊಸೈಟಿ ಆಶ್ರಯದಲ್ಲಿ ನಡೆಯುತ್ತಿರುವ ವಾಕ್ ಮತ್ತು ಶ್ರವಣದೋಷವುಳ್ಳ ಮಕ್ಕಳು ಮತ್ತು ತಾಯಂದಿರ ತರಬೇತಿ ಕೇಂದ್ರಕ್ಕೆ ಅವರು ಬುಧವಾರ ಭೇಟಿ ನೀಡಿ ಕೇಂದ್ರದಲ್ಲಿ ವಾಕ್ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿರುವ ವಿಶೇಷ ತರಬೇತಿ ಕುರಿತು ಸಂವಾದ ನಡೆಸಿದರು. ನಂತರ ಮಾತನಾಡಿದ ಅವರು, ಕೇಂದ್ರದ ತರಬೇತಿಯನ್ನು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಶ್ರವಣ ಹಾಗೂ ವಾಕ್ ದೋಷವಿರುವ ಮಕ್ಕಳು ಹಾಗೂ ಅವರ ತಾಯಂದಿರು ಪಡೆದುಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ತರಬೇತಿ ಕೇಂದ್ರದ ಮುಖ್ಯಸ್ಥೆ ಗಾಯಿತ್ರಿ ರವೀಶ್ ಅವರಿಗೆ ಸಲಹೆ ನೀಡಿದರು. ಜಿಲ್ಲಾಡಳಿತದಿಂದ ವಿಶೇಷ ಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮಕ್ಕಳು ಹಾಗೂ ಅವರ ತಾಯಂದಿರಿಗಾಗಿ ಮುಂದಿನ ವಾರ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕೆಂದು ಸ್ಥಳದಲ್ಲಿದ್ದ ವಿಕಲಚೇತನ…
ಕೊರಟಗೆರೆ: ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅನುದಾನವನ್ನು ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದು, ನರೇಗಾ ಕಾಮಗಾರಿ ಅಭಿವೃದ್ಧಿಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಪಾತ್ರವಾಗಿದೆ ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು. ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಆಯೋಜಿಸಲಾದ ೨೪ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ ಹಾಗೂ ಕಾರ್ಯದರ್ಶಿಗಳ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಬಾಲ್ಯದಲ್ಲಿ ಶಿಕ್ಷಣ ಕಲಿಯಬೇಕಾದರೆ ಶಾಲೆಗಳಲ್ಲಿ ಕೊಠಡಿಗಳ ಮತ್ತು ಮೂಲಭೂತ ವ್ಯವಸ್ಥೆ ಕೊರತೆ ಹೆಚ್ಚಾಗಿತ್ತು. ಆದರೂ ಬಡತನ ಮಧ್ಯೆ ಶಿಕ್ಷಣ ಬಿಡದೇ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ವಿದ್ಯಾಭ್ಯಾಸದೊಂದಿಗೆ ವಿಶೇಷ ಸಾಧನೆ ಮಾಡಿದ್ದೇವೆ, ಈಗಿನ ಸರ್ಕಾರ ಸುಸಜ್ಜಿತ ಶಾಲಾ ಅಭಿವೃದ್ದಿ, ಡಿಜಿಟಲ್ ಶಿಕ್ಷಣ ವ್ಯವಸ್ಥೆ, ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸಿದರೂ ಸಹ ಪ್ರತಿವರ್ಷದÀ ಎಸ್ಎಸ್ಎಲ್ಸಿ ಫಲಿತಾಂಶ ಮಾತ್ರ ಕುಗ್ಗುತ್ತಲೆ ಇದೆ ಎಂದು ಬೇಸರ ವ್ಯಕ್ತಪಡಿಸಿದರು. ಎಸ್ಎಸ್ಎಲ್ಸಿ…
ತುರುವೇಕೆರೆ: ಲಿಂಕ್ ಕೆನಾಲ್ ವಿರೋದಿ ಹೋರಾಟಗಾರರು ಹಾಗೂ ಸ್ವಾಮೀಜಿಗಳು, ರೈತರ ಮೇಲೆ ಸರ್ಕಾರ ಕೇಸ್ ಹಾಕಿ ಬೆದರಿಸಿದರೆ ರೈತರ ಹಾಗೂ ನಮ್ಮ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ಸಾದ್ಯವಿಲ್ಲ ಶಾಸಕ ಎಂ ಟಿ ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ಲಿಂಕ್ ಕೆನಾಲ್ ವಿರೋದಿಸಿ ಹಲವು ಬಾರಿ ಹೋರಾಟ ಮಾಡಿ ನಿಲ್ಲಿಸಿದ್ದು ಸರ್ಕಾರ ಮತ್ತೆ ಪ್ರಾರಂಬಿಸಿದ್ದು ೩೧ ರಂದು ಸಾವಿರಾರು ರೊಚ್ಚಿಗೆದ್ದ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರು ಹಾಗೂ ರೈತರು ಸೇರಿ ಹೋರಾಟ ಮಾಡಲಾಗಿ ಸದ್ಯಕ್ಕೆ ಜಿಲ್ಲಾಡಳಿತ ಕಾಮಗಾರಿ ಸ್ಥಗಿತಗೊಳಿಸಿದೆ. ಮತ್ತೆ ಕಾಮಗಾರಿ ಪ್ರಾರಂಬಿಸಿದರೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು. ಹೋರಾಟದಲ್ಲಿ ಭಾಗಿಯಾಗಿದ್ದ ನಮ್ಮ ಮೇಲೆ ಹಾಗೂ ಮಠಾಧೀಶರು ರೈತರ ಮೇಲೆ ರಾಜ್ಯ ಸರ್ಕಾರ ಕೇಸು ದಾಖಲಿಸಿ ಹೆದರಿಸುವ ಕೆಲಸ ಮಾಡುತ್ತಿದೆ. ಇಂತಹ ನೂರು ಕೇಸ್ ದಾಖಲಾದರೂ ನಾವು ಹೆದರುವುದಿಲ್ಲ. ನಮ್ಮ ಜೀವದ ಜೊತೆ ಚೆಲ್ಲಾಟವಾಡುವ ಸರ್ಕಾರದ ವಿರುದ್ಧ ನಮ್ಮ ಹೋರಾಟ…
ತುಮಕೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಶಿಸ್ತು ಕಲಿಸುವಲ್ಲಿ ಎನ್ಎಸ್ಎಸ್ ಶಿಬಿರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ತಾಲ್ಲೂಕಿನ ನಾಗವಲ್ಲಿ ಸಮೀಪದ ಬಿದರಕಟ್ಟೆ ಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ನಲ್ಲಿ ಶ್ರೀ ಕೃಷ್ಣ ಶಿಕ್ಷಣ ಮಹಾವಿದ್ಯಾಲಯ ಹಾಗೂ ತುಮಕೂರು ವಿವಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟಿçÃಯ ಸೇವಾ ಯೋಜನೆ ಘಟಕದ-೨೦೨೪-೨೫ನೇ ಸಾಲಿನ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಾಧನೆಗೈಯಲು ರಾಷ್ಟಿçÃಯ ಸೇವಾ ಯೋಜನೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು. ಮುಂದಿನ ಒಂದು ವರ್ಷದ ಅವಧಿಯಲ್ಲಿ ಜ್ಞಾನಸಿರಿ ಕ್ಯಾಂಪಸ್ನ್ನು ಉದ್ಯಾನವನವಾಗಿ ಮಾಡಲು ದೃಢಸಂಕಲ್ಪ ಮಾಡಿರುವುದಾಗಿ ಅವರು ತಿಳಿಸಿದರು. ನಮ್ಮ ಜ್ಞಾನಸಿರಿ ಕ್ಯಾಂಪಸ್ನಲ್ಲಿ ನಡೆದ ಮೊದಲ ಎನ್ಎಸ್ಎಸ್ ಶಿಬಿರ ಇದಾಗಿದೆ. ಪರಿಸರದ ಸಂರಕ್ಷಣೆ ಕಾಳಜಿಯನ್ನು ಹೊಂದಿ ರುವ ಶ್ರೀ ಕೃಷ್ಣ ಮಹಾವಿದ್ಯಾಲಯದ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಶ್ರೀ ಕೃಷ್ಣ ಶಿಕ್ಷಣ ಸಂಸ್ಥೆಯ ಮರಿಚೆನ್ನಮ್ಮ ಮಾತನಾಡಿ, ಶ್ರೀ ಕೃಷ್ಣ ಶಿಕ್ಷಣ…
ತುಮಕೂರು: ಕನ್ನಡದ ಬಗ್ಗೆ ಅಸಡ್ಡೆಯಾಗಿ ಮಾತನಾಡಿರುವ ನಟ ಕಮಲಹಾಸನ್ ಅವರ ಥಗ್ ಲೈಫ್ ಸಿನಿಮಾವನ್ನು ಪ್ರದರ್ಶನ ಮಾಡಬಾರದು ಎಂದು ಒತ್ತಾಯಿಸಿ ಜಿಲ್ಲಾ ಕನ್ನಡ ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ನಗರದ ಎಸ್.ಮಾಲ್ನಲ್ಲಿರುವ ಐನಾಕ್ಸ್ ಎದುರು ಪ್ರತಿಭಟನೆ ನಡೆಸಿದರು. ಕಮಲಹಾಸನ್ ವಿರುದ್ಧ ಧಿಕ್ಕಾರ ಕೂಗಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಐನಾಕ್ಸ್ ವ್ಯವಸ್ಥಾಪಕರಿಗೆ ಮನವಿಪತ್ರ ನೀಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಕಮಲಹಾಸನ್ ಸಿನಿಮಾವನ್ನು ಪ್ರದರ್ಶನ ಮಾಡಕೂಡದು. ಅವರ ಸಿನಿಮಾವನ್ನು ರಾಜ್ಯದ ಯಾವ ಚಿತ್ರಮಂದಿರಗಳಲ್ಲೂ ಬಿಡುಗಡೆ ಮಾಡಬಾರದು ಎಂದು ಕರ್ನಾಟಕ ಚಲನಚಿತ್ರಮಂಡಳಿಯೂ ಹೇಳಿದೆ. ಇಷ್ಟಾಗಿಯೂ ಚಿತ್ರ ಬಿಡಗಡೆ ಮಾಡಿದರೆ ಮುಂದಾಗುವ ಅಚಾತುರ್ಯಗಳಿಗೆ ಚಿತ್ರಮಂದಿರದವರೇ ಹೊಣೆಯಾಗಬೇಕಾದೀತು ಎಂದು ಎಚ್ಚರಿಕೆ ನೀಡಿದರು. ಕನ್ನಡ ಭಾಷೆಯ ಇತಿಹಾಸ ತಿಳಿಯದ ನಟ ಕಮಲಹಾಸನ್ ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಅಸಡ್ಡೆಯ ಹೇಳಿಕೆ ನೀಡಿ ಕನ್ನಡ ಭಾಷೆ, ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಆಡಿದ ಮಾತಿಗೆ ಕ್ಷಮೆ ಕೇಳಬೇಕು ಎಂದು ಕನ್ನಡ ಸಾಹಿತಿಗಳು, ಸಂಘಟನೆಗಳು, ಕನ್ನಡಿಗರು ಒತ್ತಾಯ ಮಾಡಿದರೂ ಕ್ಷಮೆ…