ತುಮಕೂರು: ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವ ಬೆಳೆ ಎಂದರೆ ಸಿಲ್ಕು ಮತ್ತು ಮಿಲ್ಕು ಮಾತ್ರವೇ ಆಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಹಾಗೂ ರೇಷ್ಮೆ ಇಲಾಖೆ ಸಹಯೋಗದಲ್ಲಿ ನಗರದ ಗುಬ್ಬಿ ವೀರಣ್ಣ ರಂಗಮAದಿರದಲ್ಲಿ ಬುಧವಾರ ಆಯೋಜಿಸಿದ್ದ ರೇಷ್ಮೆ ಬೆಳೆಗಾರರ ಕಾರ್ಯಾಗಾರ ಹಾಗೂ ನನ್ನ ರೇಷ್ಮೆ-ನನ್ನ ಹೆಮ್ಮೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೇವಲ ಒಂದು ಎಕರೆ ಭೂಮಿ ಇದ್ದರೆ ಒಂದು ಕುಟುಂಬವನ್ನು ಸಾಕುವಷ್ಟು ಸಾಮರ್ಥ್ಯ ಇರುವುದು ರೇಷ್ಮೆ ಬೆಳೆಗೆ ಮಾತ್ರ ಎಂದು ಹೇಳಿದ ಅವರು, ವಿಶೇಷವಾಗಿ ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವುದು ರೇಷ್ಮೆ ಬೆಳೆ ಮತ್ತು ಹೈನುಗಾರಿಕೆ ಮಾತ್ರ ಎಂದು ಅಭಿಪ್ರಾಯಪಟ್ಟರು. ರೇಷ್ಮೆ ಉದ್ದಿಮೆ ಕೇವಲ ಬೆಳೆ ಅಲ್ಲ. ಇದೊಂದು ಕೈಗಾರಿಕೆ ಎಂದ ಅವರು ಆ ಕಾರಣದಿಂದಲೇ ಈ ಇಲಾಖೆಯನ್ನು ಕೈಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಇಡಲಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ರೈತರು ರೇಷ್ಮೆ ಬೆಳೆಯನ್ನು ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿರುವುದು ಅನಿವಾರ್ಯ…
Author: News Desk Benkiyabale
ತುಮಕೂರು: ಜಮೀನನ ಸರ್ವೆ ನೆಪದಲ್ಲಿ ಹಾಲಿ ಮಾಲೀಕರಿಗೆ ಯಾವುದೇ ನೋಟಿಷ್ ನೀಡದೆ ದಲಿತರ ಒಡೆತನದಲ್ಲಿರುವ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿ, ಭೂಮಿಯಲ್ಲಿ ಆಳವಡಿಸಿದ್ದ ಸಿಸಿ ಟಿವಿ ಕ್ಯಾಮಾರ ಬಿಚ್ಚಿರುವ ತಿಪಟೂರು ಉಪವಿಭಾಗಾಧಿಕಾರಿಗಳು ಮತ್ತು ತುರುವೇಕೆರೆ ತಹಸೀಲ್ದಾರ್ ಮತ್ತು ತುರುವೇಕೆರೆ ತಾಲೂಕಿನ ಭೂಮಾಪಕ ಸಹಾಯಕ ನಿರ್ದೇಶಕರು ಮತ್ತು ತುರುವೇಕೆರೆ ತಾಲ್ಲೂಕು, ಮಾಯಸಂದ್ರ ವೃತ್ತದ ವಿಎಓ ಸತೀಶ್ ಅವರ ವಿರುದ್ದ ತನಿಖೆ ನಡೆಸಿ,ಕ ಕಾನೂನು ಕ್ರಮ ಜರುಗಿಸಬೇಕೆಂದು ತುಮಕೂರು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಹೆಚ್.ಬಿ.ರಾಜೇಶ್ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಈ ಸಂಬ0ಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, ದಿನಾಂಕ :೦೩.೦೭.೨೦೨೬ ರಂದು ಬೆಳಗ್ಗೆ ೭.೦೦ ರಿಂದ ೮.೦೦ ಗಂಟೆ ಸಮಯದಲ್ಲಿ ತುರುವೇಕೆರೆ ತಾಲೂಕು, ಮಾಯಸಂದ್ರ ಹೋಬಳಿ, ಕಾಡಲ್ಗಿಡದಕಾವಲ್ ಗ್ರಾಮದ ಸ.ನಂ. ೭ ರಲ್ಲಿ ಮೇಲ್ಕಂಡ ಆಸ್ವಾಮಿಗಳು ಹಾಗೂ ಅಧಿಕಾರಿಗಳು ಜಮೀನಿನ ಮಾಲೀಕರಿಗೆ ನೋಟಿಷ್ ನೀಡದೆ,ಗಮನಕ್ಕೂ ತಾರದೆ,ಹೈಕೋರ್ಟಿಗೆ ವರದಿ ಸಲ್ಲಿಸಬೇಕು ಎಂಬ ನೆಪ ಮಾಡಿಕೊಂಡು,ಜಮೀನಿಗೆ ಸಂಬAಧಪಡದ ವ್ಯಕ್ತಿಯನ್ನು ನಿಲ್ಲಿಸಿ,ಫೋಟೋ ಮತ್ತು ವಿಡಿಯೋ ಮಾಡಿಕೊಂಡು ಹೋಗಿರುವುದಲ್ಲದೆ, ತಮ್ಮ…
ತುಮಕೂರು: ನಗರದ ನ್ಯಾಯಾಲಯದ ಆವರಣದಲ್ಲಿ ಹಿರಿಯ ವಕೀಲರಾದ ಎಂ.ಸಿ.ರವೀಶ್ ಅವರ ಮೇಲೆ ಬಿ.ಎ. ನಿರಂಜನ್ ಎಂಬುವವರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿ ನ್ಯಾಯಾಲಯ ಕಲಾಪಗಳಲ್ಲಿ ಭಾಗವಹಿಸದೆ ಕಲಾಪಗಳಿಂದ ದೂರ ಉಳಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಹೇಶ್, ಕರ್ತವ್ಯದ ಮೇಲಿದ್ದ ವಕೀಲರ ಮೇಲೆ ನ್ಯಾಯಾಲಯದ ಆವರಣದಲ್ಲಿ ಹಲ್ಲೆ ನಡೆಸಿರುವುದು ಖಂಡನೀಯ.ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ವಕೀಲರ ಮೇಲೆ ಹಲ್ಲೆ ನಡೆಸಿದ ನಿರಂಜನ್ ಪರವಾಗಿ ಯಾವ ವಕೀಲರೂ ವಕಾಲತ್ತು ವಹಿಸಬಾರದು ಎಂದು ಸಂಘದಲ್ಲಿ ನಿರ್ಣಯ ಮಾಡಲಾಗಿದೆ ಎಂದು ಹೇಳಿದ ಹಿರೇಹಳ್ಳಿ ಮಹೇಶ್, ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಿ ವಕೀಲರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದರು. ಇದೇ ೬ರಂದು ಸೋಮವಾರ ಮಧ್ಯಾಹ್ನ ೨-೦೨ರ ಸಮಯದಲ್ಲಿ ನಗರದ ೨ನೇ ಅಧಿಕಸಿವಿಲ್ ನ್ಯಾಯಾಲಯ ಹಿರಿಯ ಶ್ರೇಣಿ…
ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತವಾಗಿ ಬೀಜ, ರಸಗೊಬ್ಬರ ದಾಸ್ತಾನು, ಮಾರಾಟ ನಿಯಂತ್ರಿಸಲು ಕೃಷಿ ಇಲಾಖೆ ಆಯುಕ್ತ ಡಾ: ಬಿ.ಸಿ.ಸತೀಶ್ ಅವರ ಸೂಚನೆ ಮೇರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೃಷಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆ ಸಾಲಗಾಮೆ ಹೋಬಳಿ ಕೊಂಡಜ್ಜಿಕೊಪ್ಪಲಿನ ಕಾರ್ತಿಕ ಟ್ರೇಡರ್ಸ್ನಲ್ಲಿ ಬೀಜ ಕಾಯ್ದೆ ೧೯೬೬ನ್ನು ಉಲ್ಲಂಘಿಸಿ ಅನುಮತಿ ಇಲ್ಲದೇ ದಾಸ್ತಾನು ಮಾಡಲಾಗಿದ್ದ ಸುಮಾರು ೮೫ಸಾವಿರ ರೂ. ಮೌಲ್ಯದ ೧೮೦ ಕೆ.ಜಿ. ಹೈಬ್ರಿಡ್ ಮೆಕ್ಕೆಜೋಳ ಬೀಜ, ಅರಸೀಕೆರೆ ತಾಲ್ಲೂಕು ಜಾವಗಲ್ ಹೋಬಳಿ ಪುಷ್ಪಗಿರಿ ಅಗ್ರೋ ಕೇಂದ್ರದಲ್ಲಿ ಅನಧಿಕೃತವಾಗಿ ಸಂಗ್ರಹಿಸಿದ್ದ ಸುಮಾರು ೧೨ಸಾವಿರ ರೂ. ಮೌಲ್ಯದ ೩೦ ಕೆ.ಜಿ. ಹೈಬ್ರಿಡ್ ಮೆಕ್ಕೆಜೋಳ ಹಾಗೂ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಮದಿಹಳ್ಳಿಯ ಶ್ರೀ ವೆಂಕಟೇಶ್ವರ ಟ್ರೇಡರ್ಸ್ನಲ್ಲಿ…
ಹುಳಿಯಾರು: ಸರ್ಕಾರದ ಮಹತ್ವಾಕಾಂಕ್ಷೆಯ ‘ಇಂಧನ ಉಳಿತಾಯ’ದ ಘೋಷಣೆಗಳು ಒಂದು ಕಡೆಯಾದರೆ, ಹುಳಿಯಾರು ಪಟ್ಟಣದ ನಿವಾಸಿಗಳು ಇಂಧನ ಖರೀಧಿಗೆ ಇಂಧನ ಸುಡಬೇಕಾದ ಅನಿವಾರ್ಯ ಸ್ಥಿತಿ ಎದುರಿಸುತ್ತಿದ್ದಾರೆ. ಪಟ್ಟಣದ ಕನಕ ಸರ್ಕಲ್ ಪೆಟ್ರೋಲ್ ಬಂಕ್ ಕಳೆದ ಆರು-ಏಳು ತಿಂಗಳುಗಳಿAದ ಸಂಪೂರ್ಣವಾಗಿ ಸ್ಥಗಿತಗೊಂಡಿರುವುದು, ಎಪಿಎಂಸಿ ಬಂಕ್ನಲ್ಲಿ ಸದಾಕಾಲ ನೋ ಸ್ಟಾಕ್ ಬೋರ್ಡ್ ಹಾಕಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಪೆಟ್ರೋಲ್ ಖರೀಧಿಗೆ ಮರ್ನಲ್ಕು ಕಿ.ಮೀ ಹೋಗಬೇಕು: ಪಟ್ಟಣದಲ್ಲಿ ಪೆಟ್ರೋಲ್ ಇಲ್ಲದ ಕಾರಣ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಮತ್ತು ದಿನನಿತ್ಯದ ಉದ್ಯೋಗಿಗಳಿಗೆ ಇಂಧನ ತುಂಬಿಸಿಕೊಳ್ಳಲು ಕನಿಷ್ಠ ೩ ರಿಂದ ೪ ಕಿಲೋಮೀಟರ್ ದೂರದವರೆಗೆ ತೆರಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಅಷ್ಟೊಂದು ದೂರ ಪ್ರಯಾಣಿಸಿ ಹೋದರೂ, ಇಂಧನವಿಲ್ಲದಿದ್ದರೆ ಸವಾರರ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಟೌನ್ನಲ್ಲಿ ಓಡಾಡುವವರಿಗೆ ಆರ್ಥಿಕ ಹೊರೆ: ಹೊಸದುರ್ಗ, ತಿಪಟೂರು, ಚಿಕ್ಕನಾಯಕನಹಳ್ಳಿ, ಶಿರಾ, ಹಿರಿಯೂರು ಮಾರ್ಗದ ಕಡೆ ಓಡಾಡುವವರು ಆ ಭಾಗದಲ್ಲಿ ಸಿಗುವ ಬಂಕ್ಗಳಲ್ಲಿ ಇಂಧನ ಹಾಕಿಸಿಕೊಂಡು ಹೋಗಬಹುದು. ಆದರೆ ನಂದಿಹಳ್ಳಿ ಮಾರ್ಗವಾಗಿ ಅಣೆಕಟ್ಟೆ ಕಡೆ ಓಡಾಡುವವರು…
ತುಮಕೂರು: ನಗರದ ಎಸ್ಎಸ್ಐಟಿಯ ಎಂಬಿಎ ಆಡಿಟೋರಿಯಂನಲ್ಲಿ ಜು.೫ರಂದು ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ರೊ. ರಘು ಎಸ್. ರವರ ಮತ್ತು ಕಾರ್ಯದರ್ಶಿ ರೊ. ಶ್ರೀನಿವಾಸ ಮೂರ್ತಿ ಜಿ. ರವರ ಹೊಸ ತಂಡ ಪದವಿ ಸ್ವೀಕಾರ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರು, ಕಾರ್ಯದರ್ಶಿ ಹಾಗು ನೂತನ ಸದಸ್ಯರುಗಳಿಗೆ ಮಾಜಿ ಜಿಲ್ಲಾ ಪಾಲಕರಾದ ರೊ. ಕೆ.ಎಸ್. ನಾಗೇಂದ್ರ ರವರು ಎಲ್ಲರಿಗೂ ರೋಟರಿ ಪಿನ್ ಹಾಕಿ ರೋಟರಿಯ ಧ್ಯೇಯೋದ್ದೇಶಗಳ ಪ್ರತಿಜ್ಞಾ ವಿಧಿ ಭೋದಿಸಿದರು, ಇವರು ಮಾತನಾಡುತ್ತಾ ಸೇವೆಯನ್ನು ಮಾಡುವಾಗ ಎಷ್ಟು ಕೊಟ್ಟೆ ಎಂಬುದು ಮುಖ್ಯವಲ್ಲ ಯಾರಿಗೆ ಕೊಟ್ಟೆ, ಯಾವ ಸಂದರ್ಭದಲ್ಲಿ ನೀಡಿದೆ ಎಂಬುದು ಮುಖ್ಯ, ಸೇವೆಯ ಸಾರ್ಥಕತೆ ದೊರಕುವುದು ಆಗ ಮಾತ್ರ, ನಾನು ಜಿಲ್ಲಾ ಪಾಲಕನಾದ ಸಂಧರ್ಭದಲ್ಲಿ ಒಂದು ಡಯಾಲಿಸಿಸ್ ಸೆಂಟರ್ ಸ್ವಾಪನೆ ಮಾಡಿದ್ದು ಅದರ ಲಾಭವನ್ನು ಒಂದು ಲಕ್ಷ ಮುವತ್ತೂ ಸಾವಿರ ಜನ ಪಡೆದಿದ್ದರು ಅವರೆಲ್ಲರು ರೋಟರಿ ಸಂಸ್ಥೆಯನ್ನು ನೆನಪಿಸಿಕೊಳ್ಳುತ್ತಿದ್ದಾರೆ ಅದು ಸಂತೋಷ ತಂದಿತ್ತು ಎಂದರು. ರೋಟರಿ…
ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟçನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ೪೦ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರ ಸೇವೆಗಳನ್ನು ಸ್ಮರಿಸಲಾಯಿತು. ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ., ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಸಮಾಜದ ಮುಖಂಡರು, ಅಧಿಕಾರಿಗಳು ಪುಷ್ಪಾರ್ಚನೆಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಹಲವಾರು ಸಮಾಜದ ಮುಖಂಡರು ಮಾತನಾಡಿ, ಡಾ. ಬಾಬು ಜಗಜೀವನ ರಾಮ್ ಅವರು ದೇಶದ ಉಪ ಪ್ರಧಾನಿಯಾಗಿ ಮಹತ್ತರ ಕೊಡುಗೆ ನೀಡಿದ ಮಹಾನ್ ನಾಯಕರು. ಸಂವಿಧಾನದ ಹಕ್ಕುಗಳಿಗಾಗಿ ಹೋರಾಡಿದವರು. ಸಮಾಜದಲ್ಲಿ ಸಮಾನತೆ, ಶಾಂತಿ ಮತ್ತು ಸಹಿಷ್ಣುತೆ ಮೌಲ್ಯಗಳನ್ನು ಪ್ರತಿಪಾದಿಸಿದ ಅವರು, ಯುವಜನತೆಗೆ ಆದರ್ಶವಾಗಿದ್ದಾರೆ ಎಂದು ಬಾಬೂಜಿ ಅವರನ್ನು ಕೊಂಡಾಡಿದರಲ್ಲದೆ, ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವೂ ನಡೆಯಬೇಕು.…
ಕೊರಟಗೆರೆ: ತೀತಾ ಜಲಾಶಯದ ಬೊಟೀಂಗ್ ಟೆಂಡರ್ ಸ್ಥಳೀಯರಿಗೆ ನೀಡದೇ ಹೊರಜಿಲ್ಲೆಯ ಖಾಸಗಿ ವ್ಯಕ್ತಿಗೆ ನೀಡಿ ಕಾಮಗಾರಿಯನ್ನ ಏರಿಯ ಮೇಲೆ ಪ್ರಾರಭಿಸಿದ್ದಾರೆ ಎಂದು ಆರೋಪಿಸಿ ಗೊರವನಹಳ್ಳಿ, ತೀತಾ ಮತ್ತು ಕೆಂಗನಪಾಳ್ಯದ ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿ ಕಾಮಗಾರಿ ನಿಲ್ಲಿಸುವಂತೆ ಭಾನುವಾರ ಆಗ್ರಹಿಸಿದ್ದಾರೆ. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಗೊರವನಹಳ್ಳಿ ಸಮೀಪದ ತೀತಾ ಜಲಾಶಯದಲ್ಲಿ ಹೇಮಾವತಿ ನಾಲಾ ವಲಯ, ಪ್ರವಾಸೋಧ್ಯಮ ಮತ್ತು ಜಿಲ್ಲಾಧಿಕಾರಿ ಅನುಮತಿ ಪಡೆದು ಖಾಸಗಿ ಕಂಪನಿಯೊAದು ಆರಂಭ ಮಾಡಿರುವ ಬೋಟಿಂಗ್ ಕಾಮಗಾರಿಗೆ ಸ್ಥಳೀಯರು ಆಕ್ರೋಶ ವ್ಯಕ್ತವಾಗಿದೆ. ಸ್ಥಳೀಯ ರೈತರ ಮನವಿ: ತೀತಾ ಜಲಾಶಯ ನಿರ್ಮಾಣ ಆದಾಗ ಅಕ್ಕಪಕ್ಕದ ನೂರಾರು ರೈತರು ಜಮೀನು ಕಳೆದುಕೊಂಡಿದ್ದಾರೆ. ಬೋಟಿಂಗ್ ಟೆಂಡರ್ ಪ್ರಕ್ರಿಯೆ ಮಾಹಿತಿ ಸ್ಥಳೀಯರಿಗೆ ನೀಡುವಲ್ಲಿ ಪ್ರವಾಸೋಧ್ಯಮ ಇಲಾಖೆ ವಿಫಲವಾಗಿದೆ. ಸ್ಥಳೀಯ ನಿರುದ್ಯೋಗಿ ಯುವಕರಿಗೆ ಬೋಟಿಂಗ್ ಗುತ್ತಿಗೆ ನೀಡಿದರೇ ಉದ್ಯೋಗ ಸೃಷ್ಟಿ ಆಗಲಿದೆ. ಜಿಲ್ಲಾಧಿಕಾರಿ ನಮ್ಮ ಮನವಿ ಆಲಿಸಬೇಕಿದೆ ಎಂದು ಸ್ಥಳೀಯ ಮನವಿಯಾಗಿದೆ. ಬೋಟಿಂಗ್ ಗುತ್ತಿಗೆದಾರನ ಅಳಲು: ತೀತಾ ಜಲಾಶಯದಲ್ಲಿ ಜಲಕ್ರೀಡೆ ಮತ್ತು ಜಲಸಾಹಸ ಕ್ರೀಡೆ…
ತುಮಕೂರು: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆ ರುಚಿ ಮತ್ತು ಶುಚಿಯಾದ ಬಿಸಿ ಊಟ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ ಶಿಕ್ಷಕರಿಗೆ ಸೂಚನೆ ನೀಡಿದರು. ತುಮಕೂರು ತಾಲ್ಲೂಕು ಅರೆಗುಜ್ಜನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಕದರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಗೆ ಇಂದು ಭೇಟಿ ನೀಡಿ ಮಕ್ಕಳ ಜೊತೆ ಊಟ ಸವಿದು ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಎಷ್ಟು ಪ್ರಮುಖವೋ, ಶುಚಿ ಮತ್ತು ರುಚಿಯಾದ ಊಟ ಕೂಡ ಅಷ್ಟೇ ಪ್ರಮುಖವಾದದ್ದು. ಹೆಚ್ಚು ತರಕಾರಿ ಬಳಸಿ ಪೌಷ್ಠಿಕ ಆಹಾರ ನೀಡಬೇಕು. ಪ್ರತೀ ದಿನ ವೇಳಾ ಪಟ್ಟಿಯಲ್ಲಿರುವ ಆಹಾರವನ್ನೇ ನೀಡಬೇಕು. ತಪ್ಪದೇ ಮೊಟ್ಟೆ ಮತ್ತು ಬಾಳೆಹಣ್ಣನ್ನು ನೀಡಬೇಕು ಎಂದರು. ಮಕ್ಕಳಿಗೆ ಊಟ ನೀಡುವ ಮೊದಲು ಶಿಕ್ಷಕರು ಊಟ ಸವಿದ ನಂತರ ಮಕ್ಕಳಿಗೆ ಊಟ ನೀಡಬೇಕು ಎಂದರು. ಶಾಲಾ ಆವರಣದಲ್ಲಿ ಉತ್ತಮ ಪರಿಸರ ಕಾಪಾಡಿಕೊಳ್ಳಬೇಕು ಎಂದು ಶಿಕ್ಷಕರಿಗೆ ತಾಕೀತು ಮಾಡಿದರು. ಎಸ್ಐಆರ್ ನಮೂನೆಗಳ ವಿತರಣೆ: ಕದರನಹಳ್ಳಿ ಗ್ರಾಮದಲ್ಲಿ…
ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ತಿಪಟೂರು ತಾಲ್ಲೂಕು ಸ್ವೀಪ್ ಸಮಿತಿ, ತಿಪಟೂರು ತಾಲ್ಲೂಕು ಪಂಚಾಯಿತಿ ವತಿಯಿಂದ ವಿಶೇಷ ಚೇತನರು ಹಮ್ಮಿಕೊಂಡಿದ್ದ ಬೈಕ್ ಜಾಥಾಕ್ಕೆ ಚಾಲನೆ ನೀಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್ ಎಂ ಸುದರ್ಶನ್ ಅವರು ಮಾತನಾಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಯಾವೋಬ್ಬ ಅರ್ಹ ಮತದಾರರೂ ಹೊರಗುಳಿಯಬಾರು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಭದ್ರವಾಗಿಸುವ ನಿಟ್ಟಿನಲ್ಲಿ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಆ ನಿಟ್ಟಿನಲ್ಲಿ ಭಾರತದ ಕಟ್ಟಕಡೆಯ ಅರ್ಹ ಮತದಾರರೂ ಎಲ್ಲಾ ವರ್ಗದವರೂ ಭಾಗವಹಿಸುವಂತೆ ಇಂದು ವಿಶೇಷ ಚೇತನರು ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಎಸ್ ಐ ಆರ್ ಕುರಿತು ತಿಪಟೂರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ವೇಳೆ ತಾಲ್ಲೂಕು ಪಂಚಾಯಿತಿ ನೋಡಲ್ ಅಧಿಕಾರಿಗಳಾದ ಹುಲಿರಾಜು, ವಿಶೇಷ ಚೇತನ ಸಂಘದ ಮುಖಂಡ ಇನಾಯತ್,…

