ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹಿತ್ತಲಪುರ ಗ್ರಾಮದ ಸರ್ವೆ ನಂ ೫೨ ರಲ್ಲಿರುವ ಅಯ್ಯನಗುಡ್ಡೆಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅಧಿಕಾರಿಗಳು ರಾತ್ರಿ ಏಳುಗಂಟೆ ಸಮಯದಲ್ಲಿ ಬಂದು ಸ್ಥಳ ಪರಿಶೀಲನೆ ನಡೆಸಿ ಸ್ಥಳದಲ್ಲಿ ಗುರುತು ಮಾಡಿ ಹೊಗಿರುವುದು ಇದೀಗ ಗ್ರಾಮದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ, ಶನಿವಾರ ರಂದು ತುಮಕೂರು ಉಪ ವಿಭಾಗಧಿಕಾರಿ,ತಹಶೀಲ್ದಾರ್,ಅರಣ್ಯ ಇಲಾಖೆಯ ಅಧಿಕಾರಿಗಳು ಕಂದಾಯ ಇಲಾಖೆಯ ಹಾಗೂ ಗಣಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಹಿತ್ತಲಪುರ ಗ್ರಾಮದ ಅಯ್ಯನಗುಡ್ಡೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳದಲ್ಲಿ ಗುರುತು ಮಾಡಿರುವುದು ಇದೀಗ ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ ಬುಧವಾರ ಉಜ್ಜನಿ, ಹಿತ್ತಲಪುರ, ಹಾಗೂ ಬಿ.ಜಿ ಕೋಪ್ಪಲು ಗ್ರಾಮಸ್ಥರು ಅಯ್ಯನಗುಡ್ಡೆ ಯಲ್ಲಿರುವ ಸಾಧು ಸಂತರು ವಾಸಿಸುವ ಗುಹೆಗೆ ಬೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಕಲ್ಲು ಗಣಿಗಾರಿಕೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದರು, ಬಳಿಕ ಮಾಧ್ಯಮದವರೊಂದಿಗೆ ಗ್ರಾಮಸ್ಥರು ಮಾತನಾಡಿ ಶನಿವಾರ ರಾತ್ರಿ ಏಳು ಗಂಟೆಯ ಸಮಯದಲ್ಲಿ ಅಧಿಕಾರಿಗಳು ಬಂದು ಗಣಿಗಾರಿಕೆ ನಡೆಸಲು…
Author: News Desk Benkiyabale
ಸಿರಾ: ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ದಾಸರಾಗಿ ತಮ್ಮ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಹಾಗಾಗಿ ಪ್ರಬುದ್ಧ ದೇಶದ ಆಸ್ತಿಯಾಗಬಲ್ಲ ಯುವಕರು ಇಂತಹ ದುಶ್ಚಟಗಳ ದಾಸರಾಗದೆ ತಮ್ಮ ಅಕ್ಕ ಪಕ್ಕದಲ್ಲಿ ಒಡನಾಟದಲ್ಲಿ ಇರುವವರನ್ನು ಸಹ ನಶೆಯಿಂದ ಮುಕ್ತಗೊಳಿಸಲು ಸಹಕರಿಸಬೇಕಾಗಿ ಶಿರಾ ನಗರ ಪಿಎಸ್ಐ ರೇಣುಕಾ ಯಾದವ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬುಧವಾರ ಬುಕ್ಕಾಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಅಪರಾಧ ತಡೆ ಮಾಸಾಚರಣೆ ಹಾಗೂ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಆರೋಗ್ಯವಂತ ಯುವ ಸಮೂಹ ದೇಶದ ಆಸ್ತಿಯಾ ಗುತ್ತದೆ ಒಂದು ದೇಶ ಮುನ್ನಡೆಯಬೇಕಾದರೆ ದುಡಿಯುವ ಕೈಗಳ ಸಂಖ್ಯೆ ಹೆಚ್ಚಾಗಬೇಕು ಅವುಗಳು ಆರೋಗ್ಯವಂತವಾಗಿ ಶಕ್ತಿಯು ತವಾಗಬೇಕಾದರೆ ನಶೆ ಎಂಬ ಪಾಶದಿಂದ ಅವುಗಳನ್ನು ದೂರ ಮಾಡ ಬೇಕು ಹಾಗಾಗಿ ಯುವಕರು ಧೂಮಪಾನ, ಮಧ್ಯಪಾನ, ಇದ್ದಂತಹ ದುಶ್ಚಟಗಳಿಂದ ದೂರವಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ದೇಶದ ಪ್ರಗತಿಗೆ ನಿಮ್ಮಿಂದ ಆಗುವಂತಹ ಕಾಣಿಕೆಗಳನ್ನು ನೀಡುವಂತಹ ಪ್ರಯತ್ನ ಮಾಡಬೇಕು ಎಂದರು. ಅಪರಾಧ ನಡೆದ…
ಗುಬ್ಬಿ: ಮಾನವನ ಮೂಲಭೂತ ಹಕ್ಕುಗಳನ್ನು ಪ್ರತಿಯೊಬ್ಬರು ಪರಸ್ಪರ ಗೌರವಿಸಬೇಕು ಎಂದು ಪಿಎಸ್ಐ ಧರ್ಮಾಂಜಿ ತಿಳಿಸಿದರು. ತಾಲ್ಲೂಕಿನ ಕೆ ಜಿ ಟೆಂಪಲ್ ನ ಬೃಂದಾವನ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ನ್ಯಾಯಾಂಗ ಸುರಕ್ಷಾ ಪರಿಷದ್ ವತಿಯಿಂದ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಆರೋಗ್ಯ ಜಾಗೃತಿ ಮತ್ತು ರಕ್ತ ತಪಾಸಣೆ ಶಿಬಿರ ಉದ್ಘಾಟನೆ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು, ಮಾತನಾಡುವ ಹಕ್ಕು, ಸಂರಕ್ಷಣೆ ಹಕ್ಕು, ಭಾಗವಹಿಸುವಿಕೆ ಹಕ್ಕುಗಳಿಗೆವೆ. ಯಾರು ಯಾರಿಗೂ ನೋವುಂಟು ಮಾಡದೆ ಉತ್ತಮ ಮಾರ್ಗದಲ್ಲಿ ನಡೆಯಬೇಕು. ಇತ್ತೀಚಿಗೆ ಜನರು ಕುಟುಂಬದಲ್ಲಿ ಉತ್ತಮ ಸಂಸಾರಿಯೂಯಾಗದೆ ಹಾಗೂ ಸಂಸ್ಕಾರವನ್ನು ಬೆಳೆಸಿಕೊಳ್ಳದೆ ದಾರಿ ತಪ್ಪುತ್ತಿದ್ದಾರೆ. ಉತ್ತಮ ಸಂಸ್ಕಾರವನ್ನು ತಮ್ಮ ಜೀವನದಲ್ಲಿ ಬೆಳೆಸಿಕೊಳ್ಳುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಿದೆ. ಈ ನಿಟ್ಟಿನಲ್ಲಿ ಯಾರು ದುಶ್ಚಟಗಳಿಗೆ ಬಲಿಯಾಗದೆ ವ್ಯಸನ ಮುಕ್ತ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಇದರ ಜೊತೆಗೆ ಕಾನೂನು ಪರಿಪಾಲನೆ ಅತ್ಯಗತ್ಯ ಎಂದು ತಿಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ ಮಾತನಾಡಿ ಮಕ್ಕಳಿಗೆ…
ಪಾವಗಡ: ಪ್ರಧಾನ ಮಂತ್ರಿಗಳ ಆತ್ಮ ನಿರ್ಭರ ಯೋಜನೆಯನ್ನು ಪಿ.ಎಂ.ಸ್ವ ನಿಧಿ ಯೋಜನೆ ಅಡಿಯಲ್ಲಿ ಹಂತ ಹಂತವಾಗಿ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದು ತುಮಕೂರಿನ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ದೊಡ್ಡ ಆವಲಪ್ಪ ತಿಳಿಸಿದರು. ಬೀದಿಬದಿ ವ್ಯಾಪಾರಿಗಳ ಸಂಘದ ವತಿಯಿಂದ ಹೊಸ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ ಬೀದಿಬದಿ ವ್ಯಾಪಾರಿಗಳು ಸಹ ಕಾರ್ಮಿಕ ಇಲಾಖೆ ಯಲ್ಲಿ ನೊಂದಾಯಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಬದ್ರೆಗೌಡ ಮಾತನಾಡಿ ಬೀದಿ ಬದಿ ವ್ಯಾಪಾರಿಗಳಿಗೆ ಕಾರ್ಮಿಕ ಇಲಾಖೆಯಲ್ಲಿ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಲ್ಲಿ ನೋಂದಾಯಿಸಿ ಕೊಳ್ಳಲಾಗುತ್ತಿದ್ದು, ಮರಣ ಅಪಘಾತ ಅಂತ್ಯಸ0ಸ್ಕಾರ ಮತ್ತಿತರ ಯೋಜನೆಗಳಲ್ಲಿ ಫಲಾನುಭವಗಳಿಗೆ ಸರ್ಕಾರದಿಂದ ಹಣವನ್ನ ನೀಡಲಾಗುತ್ತದೆ ಎಂದು ತಿಳಿಸಿದರು. ಪಟ್ಟಣದ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಗೇಟ್ ಕುಮಾರ್ ಮಾತನಾಡಿ ಪಟ್ಟ ಣದಲ್ಲಿ ಸುಮಾರು ೫೦೦ ಬೀದಿ ಬದಿ ವ್ಯಾಪಾ ರಿಗಳು ಈಗಾಗಲೇ ನೋಂದಾಯಿಸಿ ಕೊಂಡಿದ್ದು…
ತುಮಕೂರು: ಜಿಲ್ಲೆಯಲ್ಲಿರುವ ಅನರ್ಹ ಬಿಪಿಎಲ್ (ಪಿಹೆಚ್ಹೆಚ್) ಪಡಿತರ ಚೀಟಿದಾರರು ತಾವಾಗಿಯೇ ಎಪಿಎಲ್ (ಎನ್ಪಿಹೆಚ್ಹೆಚ್) ಪಡಿತರ ಚೀಟಿಗಳನ್ನಾಗಿ ಬದಲಾಯಿ ಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸಲಹೆ ನೀಡಿದರು. ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವತಿಯಿಂದ ನಗರದ ದಿಬ್ಬೂರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆಹಾರ ಅದಾಲತ್ ಕಾರ್ಯ ಕ್ರಮ ವನ್ನುದ್ದೇಶಿಸಿ ಮಾತ ನಾಡಿದ ಅವರು, ಅನರ್ಹರು ಬಿಪಿಎಲ್ ಕಾರ್ಡು ಹೊಂದುವುದರಿ0ದ ಅರ್ಹರು ಪಡಿತರ ಧಾನ್ಯ ವಿತರಣೆ ಯಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಪಡಿತರ ಚೀಟಿ ಹೊಂದಿಲ್ಲದೇ ಇರುವ ಅರ್ಹ ಬಡವರಿಗೆ ಪಡಿತರ ಚೀಟಿ ಹೊಂದಲು ಸಹಾಯ ಮಾಡುವ ಮೂಲಕ ಅಸಮಾನತೆಯನ್ನು ಹೋಗಲಾಡಿಸಲು ಸಹಕರಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಜಿಲ್ಲೆಯ ಪ್ರತಿ ತಾಲ್ಲೂಕಿನ ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಹಮ್ಮಿಕೊಳ್ಳಲಾಗಿದೆ. ಪಡಿತರ ಚೀಟಿದಾರರು ಜಿಲ್ಲಾ ಕೇಂದ್ರಕ್ಕೆ ಬರುವು ದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಪಿಹೆಚ್ಹೆಚ್ ಪಡಿತರ ಚೀಟಿ…
ತುಮಕೂರು: ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆಯ ಪ್ರಸ್ತಾವಿತ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಮಂಡಿಸಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ನ ಗೋ ರಕ್ಷಾ ವಿಭಾಗದ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ನಡೆದ ಪ್ರತಿಭಟನೆಯನ್ನು ಬೆಂಬಲಿಸಿ ಬಿಜೆಪಿ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ನಂತರ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಗರದ ಜಿಜಿಎಸ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಬಿಜೆಪಿ ಕಾರ್ಯಕರ್ತರು ಗೋ ಹತ್ಯೆ ತಡೆಯಲು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ, ಗೋ ಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮುಂದಾಗಿರುವುದನ್ನು ವಿರೋಧಿಸಿ, ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ಘೋಷಣೆ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಕರೆತಂದಿದ್ದ ಗೋವುಗಳಿಗೆ ಕಾರ್ಯಕರ್ತರು ಪೂಜೆ ಸಲ್ಲಿಸಿ, ನಮಸ್ಕರಿಸಿದರು. ಈ ವೇಳೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಿ.ಜಿ. ಪ್ರದೀಪ್ಕುಮಾರ್, ಬಹುಸಂಖ್ಯಾತ ಹಿಂದೂಗಳು ಪೂಜಿಸುವ ಗೋ ಮಾತೆಯ ಹತ್ಯೆ ತಡೆಗೆ ಹಿಂದಿನ ಬಿಜೆಪಿ…
ತುಮಕೂರು: ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆಯ ಪ್ರಸ್ತಾವಿತ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಮಂಡಿಸಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ನ ಗೋ ರಕ್ಷಾ ವಿಭಾಗದ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ನಡೆದ ಪ್ರತಿಭಟನೆಯನ್ನು ಬೆಂಬಲಿಸಿ ಬಿಜೆಪಿ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ನಂತರ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಗರದ ಜಿಜಿಎಸ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಬಿಜೆಪಿ ಕಾರ್ಯಕರ್ತರು ಗೋ ಹತ್ಯೆ ತಡೆಯಲು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ, ಗೋ ಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮುಂದಾಗಿರುವುದನ್ನು ವಿರೋಧಿಸಿ, ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ಘೋಷಣೆ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಕರೆತಂದಿದ್ದ ಗೋವುಗಳಿಗೆ ಕಾರ್ಯಕರ್ತರು ಪೂಜೆ ಸಲ್ಲಿಸಿ, ನಮಸ್ಕರಿಸಿದರು. ಈ ವೇಳೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಿ.ಜಿ. ಪ್ರದೀಪ್ಕುಮಾರ್, ಬಹುಸಂಖ್ಯಾತ ಹಿಂದೂಗಳು ಪೂಜಿಸುವ ಗೋ ಮಾತೆಯ ಹತ್ಯೆ ತಡೆಗೆ ಹಿಂದಿನ ಬಿಜೆಪಿ…
ತುಮಕೂರು: ಜಿಲ್ಲೆ ಸೇರಿದಂತೆ ಏಳು ಜಿಲ್ಲೆಗಳ ಜನರ ಕುಡಿಯುವ ನೀರಿನ ಬವಣೆ ತೀರಿಸುವ ಎತ್ತಿನಹೊಳೆ ಯೋಜನೆಯ ಶೇ೯೦ರಷ್ಟುç ಕಾಮಗಾರಿಗಳು ಪೂರ್ಣಗೊಂಡ ನಂತರ ಯೋಜನೆಗೆ ಕೇಂದ್ರ ಸರಕಾರ ಅಡ್ಡಿ ಪಡಿಸುತ್ತಿದ್ದು,ಈ ಬಗ್ಗೆ ಕೇಂದ್ರದ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಲು ಡಿಸೆಂಬರ್ ೧೩-೧೪ ರಂದು ರಾಜ್ಯ ಸರಕಾರದ ದೆಹಲಿ ನಿಯೋಗ ಕಂಡೊಯ್ಯಲಿದೆ ಎಂದು ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,೨೦೧೨ರಲ್ಲಿ ಆರಂಭವಾದ ಎತ್ತಿನಹೊಳೆ ಯೋಜನೆಯ ಶೇ೯೦ರಷ್ಟು ಕಾಮಗಾರಿ ಗಳು ಪೂರ್ಣಗೊಂಡಿದೆ.ಈಗ ಕೇಂದ್ರ ಸರಕಾರ ಯೋಜನೆಗೆ ನಿಗಧಿಗಿಂತ ಹೆಚ್ಚು ಭೂಮಿ ಬಳಕೆ ಮಾಡಲಾಗಿದೆ. ಹಸಿರು ಪೀಠದ ಅನುಮತಿ ಪಡೆದಿಲ್ಲ,ಇನ್ನಿತರ ಅನಗತ್ಯ ತರಕಾರುಗಳನ್ನು ತೆಗೆದು,ಯೋಜನೆ ವಿಳಂಭವಾಗಲು ಕಾರಣವಾಗುತ್ತದೆ. ಎತ್ತಿನ ಹೊಳೆ ಯೋಜನೆ ರಾಜ್ಯ ಸರಕಾರದ ಮಹಾತ್ವಕಾಂಕ್ಷೆಯ ಯೋಜನೆಯಾಗಿದ್ದು,ಜನರ ಕುಡಿಯುವ ನೀರಿನ ಬವಣೆ ತೀರಿಸಲು ಇರುವ ಮಹತ್ವದ ಯೋಜನೆಯಾಗಿದೆ.ಇದಕ್ಕೆ ಸಹಕಾರ ನೀಡುವ ಬದಲು,ಕೇಂದ್ರ ಸರಕಾರ ಯೋಜನೆ ಯನ್ನು ತಡೆಯಲು ಯತ್ನಿಸುತ್ತಿರುವುದು ಸರಿಯಲ್ಲ.ಇದರ ವಿರುದ್ದ ರಾಜ್ಯದ ಎಲ್ಲಾ ಸಂಸದರು ದ್ವನಿ ಎತ್ತಬೇಕಾಗಿದೆ ಎಂದರು. ಕೇAದ್ರ…
ಕೊರಟಗೆರೆ: ತಂದೆ-ತಾಯಿಗಳ ಆಸ್ತಿಗೆ ಮಾತ್ರ ವಾರಸುದಾರರಾಗು ವುದು ಸಾಕಾಗುವುದಿಲ್ಲ, ಅವರು ಬದುಕಿನಲ್ಲಿ ಅನುಸರಿಸಿದ ಆ ದರ್ಶಗಳು, ಮೌಲ್ಯಗಳು ಹಾಗೂ ಸಮಾಜಮುಖಿ ಚಿಂತನೆಗಳನ್ನು ಮುಂದುವರೆಸಿಕೊ0ಡು ಹೋಗುವುದು ಮಕ್ಕಳ ಪ್ರಮುಖ ಕರ್ತವ್ಯ ಎಂದು ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾಮಠದ ಪೀಠಾ ಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಕಾಮಧೇನು ಕನ್ವೆನ್ಷನ್ ಹಾಲ್ ನಲ್ಲಿ ಜಗ್ಗೇಶ್ ಅಭಿಮಾ ನಿಗಳ ಬಳಗ ಮತ್ತು ಫ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ಸಾಧಕರಿಗೆ ಅಭಿನಂದನಾ ಸಮಾರಂಭ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಪೋಷಕರು ನಡೆಸಿದ ಆದರ್ಶ ಜೀವನವನ್ನು ಮಕ್ಕಳು ತಮ್ಮ ಜೀವನ ದಲ್ಲಿ ಅಳವಡಿಸಿಕೊಂಡು,ಸಮಾಜಮುಖಿ ಯಾಗಿ ಬದುಕು ನಡೆಸಿದಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ಸ್ವಾಮೀಜಿ ಹೇಳಿದರು. ಸಾಧನೆ ಎಂಬುದು ಒಬ್ಬ ವ್ಯಕ್ತಿಯ ಪ್ರಯತ್ನ ಮಾತ್ರವಲ್ಲ, ಅನೇಕ ಮಂದಿಯ ಸಹಕಾರದ ಫಲ,‘ನಾನೊಬ್ಬನೇ ಸಾಧಿಸಿದ್ದೇನೆ’ ಎನ್ನುವು ದಕ್ಕಿಂತ, ‘ಎಲ್ಲರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು ಎನ್ನುವ ಮನೋಭಾವವೇ ನಿಜವಾದ…
ತುಮಕೂರು: ಅಸಂಘಟಿತ ಕಾರ್ಮಿರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರವಹಿಸುವ ಶ್ರಮಜೀವಿಗಳಾದ ಎಪಿಎಂಸಿ, ಮಿಲ್-ಗೋಡೌನ್-ವೇರಹೌಸ್, ನಗರ ಗ್ರಾಮೀಣ ಬಜಾರ, ರೈಲ್ವೆ ಸ್ಟೇಷನ್, ಬಂದರುಗಳಲ್ಲಿ ಲೋಡಿಂಗ್ ಅನ್ಲೋಡಿಂಗ ಕೆಲಸ ನಿರ್ವಹಿಸುವ ಹಮಾಲಿ ಕಾರ್ಮಿಕರ ಬದುಕಿನ ಪ್ರಮುಖ ಪ್ರಶ್ನೆಗಳಿಗಾಗಿ, ಪ್ರಮುಖ ಬೇಡಿಕೆಗಳಿಗಾಗಿ ಒತ್ತಾಯಿಸಿ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದರು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್(ಸಿ.ಐ.ಟಿ.ಯು) ಪ್ರತಿಭಟನೆ ನಡೆಸಿ ಮನವಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ನಿಡಲಾಯಿತು. ಕರ್ನಾಟಕ ರಾಜ್ಯ ಸರಕಾರ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿ0ದ ಅಂಬೇಡ್ಕರ ಸಹಾಯ ಹಸ್ತ ಸ್ಮಾರ್ಟ ಪಡೆದ ಹಮಾಲಿ ಕಾರ್ಮಿಕರು ಸೇರಿದಂತೆ ೮೫ಕ್ಕೂ ಹೆಚ್ಚು ವಲಯದ ಅಸಂಘಟಿತ ಕಾರ್ಮಿಕರಿಗೆ ಕೇವಲ ಅಪಘಾತ ಸಂಬ0ಧಿಸಿದ ಕೆಲ ಪರಿಹಾರ ನೀಡುವ ಯೋಜನೆಗಳನ್ನು ಜಾರಿಮಾಡಲಾಗುತ್ತಿದೆ ಆ ದರೇ ಸರಕಾರ ನಿರ್ಧಿಷ್ಟವಾಗಿ ಯಾವುದೇ ಹಣಕಾಸಿನ ನೇರವು ನೀಡಿಲ್ಲ. ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬ0ಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕ್ಷೇಮಾಭಿವೃದ್ಧಿ…











