Author: News Desk Benkiyabale

ತುಮಕೂರು ರಾಜ್ಯದಲ್ಲಿ ಸಿದ್ದರಾಮಯ್ಯನವರು ೨ನೇ ಬಾರಿಗೆ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಗ್ರಾಮದ ಶ್ರೀ ಜಗದ್ಗುರು ರೇವಣ್ಣ ಸಿದ್ದೇಶ್ವರ ಸಿಂಹಾಸನ ಮಹಾಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ಶರಭಯ್ಯ ಸ್ವಾಮೀಜಿ ತಮ್ಮ ಸಂಕಲ್ಪ ಈಡೇರಿರುವ ಹಿನ್ನೆಲೆಯಲ್ಲಿ ಮನಗೂಳಿಯಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವAತೆ ಶ್ರೀ ರೇವಣಸಿದ್ದೇಶ್ವರರಲ್ಲಿ ಮಾಡಿದ್ದ ಸಂಕಲ್ಪ ಈಡೇರಿರುವುದರಿಂದ ಹರಕೆ ತೀರಿಸುವ ಸಲುವಾಗಿ ಶ್ರೀಗಳು ಕೈಗೊಂಡಿರುವ ಪಾದಯಾತ್ರೆ ತುಮಕೂರು ತಲುಪಿದ್ದು, ನೆಲಮಂಗಲದ ಮೂಲಕ ಬೆಂಗಳೂರಿನತ್ತ ಹೆಜ್ಜೆ ಹಾಕಿದ್ದಾರೆ. ನಗರದ ಸಿರಾ ಗೇಟ್‌ನಲ್ಲಿರುವ ಕಾಳಿದಾಸ ಪ್ರೌಢಶಾಲೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಶ್ರೀಗಳನ್ನು ಬಿಂದುಶೇಖರ ಸ್ವಾಮೀಜಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮನಗೂಳಿಯ ಶ್ರೀ ಶರಭಯ್ಯ ಸ್ವಾಮೀಜಿ ಅವರು, ಸಿದ್ದರಾಮಯ್ಯನವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದು ಜಗದ್ಗುರು ರೇವಣಸಿದ್ದೇಶ್ವರರಲ್ಲಿ ಸಂಕಲ್ಪ ಮಾಡಿದ್ದೆವು. ಅವರ ಕೃಪಾಶೀರ್ವಾದದಿಂದ ಸಿದ್ದರಾಮಯ್ಯನವರು ೨ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಹಾಗಾಗಿ ಹರಕೆಯ ನಿಮಿತ್ತವಾಗಿ ಮನಗೂಳಿ ಮಠದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುತ್ತಿರುವುದಾಗಿ ತಿಳಿಸಿದರು. ಮನಗೂಳಿಯಿಂದ…

Read More

ತುಮಕೂರು ವಿದ್ಯಾರ್ಥಿಗಳು ಪರಿಶ್ರಮದ ವ್ಯಾಸಂಗದೊAದಿಗೆ ತಮ್ಮ ಜೀವನವನ್ನು ಉತ್ತಮಪಡಿಸಿಕೊಂಡು ಒಳ್ಳೆಯ ಬದುಕು ರೂಪಿಸಿಕೊಳ್ಳಬೇಕು ಎಂದು ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ ಕರೆ ನೀಡಿದರು. ನಗರದ ಬಿ.ಹೆಚ್. ರಸ್ತೆ.ಯಲ್ಲಿರುವ ಸರ್ಕಾರಿ ಪ.ಪೂ. ಕಾಲೇಜಿಗೆ ಬೆಂಗಳೂರಿನ ಕೆ.ಪಿ.ಎಂ.ಜಿ. ಸಂಸ್ಥೆಯ ರೈಟ್ ಟು ಲೀವ್ ಸಂಸ್ಥೆಯ ಸಹಯೋಗದಲ್ಲಿ ಕೊಡುಗೆಯಾಗಿ ನೀಡಿದ ೩೦ ಲ್ಯಾಪ್‌ಟಾಪ್ ವಿತರಣೆ ಹಾಗೂ ಕಂಪ್ಯೂಟರ್ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಬಳಕೆ ಕುರಿತು ಹೆಚ್ಚಿನ ಜ್ಞಾನ ಸಂಪಾದನೆಯ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನ ಕೆ.ಪಿಎಂ.ಜಿ. ಸಂಸ್ಥೆಯ ರೈಟ್ ಟು ಲೀವ್ ಸಂಸ್ಥೆಯವರು ಉಚಿತವಾಗಿ ಲ್ಯಾಪ್‌ಟಾಪ್‌ಗಳನ್ನು ನೀಡುವ ಮೂಲಕ ಸಹಕಾರಿಯಾಗಿದ್ದಾರೆ. ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಉಚಿತವಾಗಿ ಲ್ಯಾಪ್‌ಟಾಪ್‌ಗಳನ್ನು ನೀಡಿದ ಬೆಂಗಳೂರಿನ ಕೆಪಿಎಂಜಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀಕಾಂತ್ ಎನ್.ಡಿ. ಅವರು ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆ, ಪರಿಶ್ರಮದಿಂದ ವ್ಯಾಸಂಗ ಮಾಡಿ ಬದುಕಿನಲ್ಲಿ ತಮ್ಮ ಗುರಿ ಮುಟ್ಟಬೇಕು ಎಂದು…

Read More

ತುಮಕೂರು ನಗರದ ವಿಭಾಗದಲ್ಲಿಯೂ ಕಾರ್ಮಿಕರ ಕೊರತೆ ಇದೆ. ತಾಂತ್ರಿಕ ಸಿಬ್ಬಂದಿಗಳ ಕೊರತೆ- ಉತ್ತಮ ಗುಣ ಮಟ್ಟದ ಬಿಡಿಬಾಗಗಳು ಸಮಯಕ್ಕೆ ಸರಿಯಾಗಿ ಸರಬರಾಜು ಅಗಲ್ಲ. ಹಳೇ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಾರಿಗೆ ಕಾರ್ಮಿಕರ ಹೆಚ್ಚಿರುವ ಕೆಲಸದ ಹೊರೆಯನ್ನು ಪರಿಗಣಿಸದೆ.ಸೇಡಿನ ಕ್ರಮವಾಗಿ ಶಿಕ್ಷಿಸಲು, ಇಂಕ್ರಿಮೆAಟ್ ಕಡಿತ ಮಾಡಿಸೋದು ಗ್ಲಾಸ್ ಏರ್ ಕ್ರಾಕ್ ಆದಲ್ಲಿ ಚಾಲಕರನ್ನು ಹೊಣೆಗಾರರನ್ನಾಗಿ ಮಾಡಿ ರೂ. ೪೫೦೦ ದಿಂದ ೬೦೦೦ ದವರೆಗೆ ದಂಡ ಹಾಕಿ ಸಂಬಳದಲ್ಲಿ ಕಡಿತ ಮಾಡುತ್ತಾರೆ , ಫಾರಂ ೪ ನ್ನು ಪದೇ- ಪದೇ ಬದಲಾಯಿಸೋದು. ಂ/ಃ ಮಾರ್ಗಗಳನ್ನು ಕಡಿಮೆ ಮಾಡಿ ಕಾರ್ಮಿಕರಿಗೆ ಕೆಲಸದ ಒತ್ತಡ ಹೆಚ್ಚಳ ಮಾಡೋದು. ವಿರೋಧಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ. ರಿ ಸಿಐಟಿಯು ತುಮಕೂರು ವಿಭಾಗಿಯ ಕಛೇರಿ ಎದುರು ದಿ; ೬-೦೭-೨೦೨೩ರಂದು ಬೆಳಿಗ್ಗೆ- ೧೧ ಗಂಟೆಗೆ ಪತ್ರಿಭಟನೆ ನಡೆಸಿದರು. ಪತ್ರಿಭಟನಾಕಾರರ ಮನವಿ ಸ್ವಿಕರಿದ ವಿಭಾಗಿಯ ನಿಯಂತ್ರಣಾಧಿಕಾರಿಗಳಾದ ಗಜೆಂದ್ರ ಕುಮಾರ್ ಅವರು ಸಮಸ್ಯೆಗಳ ಬಗೆಹರಿಸಲು ಜಂಟಿ ಸಭೆನಡೆಸುವುದಾಗಿ , ಅನ್ಯಾಯದ ಕ್ರಮಗಳು…

Read More

ತುಮಕೂರು ಸಿದ್ದರಬೆಟ್ಟದ ರೋಟರಿ ಕ್ಲಬ್ ವತಿಯಿಂದ ಆರ್.ಟಿ.ಎನ್. ೨೦೨೩-೨೪ ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿದ್ದೇಶ್.ಯು. ಪ್ರತಿಷ್ಠಾಪನಾ ಸಮಾರಂಭವನ್ನು ಖಣಟಿ. ರೋಟರಿ ಇಂಟರ್‌ನ್ಯಾಶನಲ್ ಡಿಸ್ಟ್ರಿಕ್ಟ್ ೩೧೯೨ ಗಾಗಿ ಡಿಸ್ಟ್ರಿಕ್ಟ್ ಗವರ್ನರ್ ನಾಮಿನಿ (ಆಉಓ) ಎಲಿಜೆಬೆತ್ ಚೆರಿಯನ್ ಪರಮೇಶ್, ಇವರು ಸ್ಥಾಪನಾ ಅಧಿಕಾರಿ ಮತ್ತು ಮುಖ್ಯ ಅತಿಥಿಯಾಗಿ ಸೇವೆ ಸಲ್ಲಿಸಿದರು. ಶ್ರೀ. ಕಾರ್ಯಕ್ರಮದಲ್ಲಿ ಸಿದ್ದರಬೆಟ್ಟದ ರಂಭಾಪುರಿ ಬಾಳೆಹೊನ್ನೂರು ಶಾಖಾ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಖಣಟಿ. ಎಲಿಜೆಬೆತ್ ರೋಟರಿ ಕ್ಲಬ್ ಆಫ್ ಸಿದ್ದರಬೆಟ್ಟ ಅವರ ಶ್ಲಾಘನೀಯ ಸೇವಾ ಯೋಜನೆಗಳಿಗಾಗಿ ಶ್ಲಾಘಿಸಿದರು ಮತ್ತು ಕ್ಲಬ್‌ನ ಭವಿಷ್ಯದ ಸಮುದಾಯ ಸೇವಾ ಉಪಕ್ರಮಗಳಿಗೆ ತಮ್ಮ ಹೋಮ್ ಕ್ಲಬ್ ಮತ್ತು ಡಿಸ್ಟ್ರಿಕ್ಟ್ ೩೧೯೨ ರ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಅವರು ಸಂಸ್ಥೆಯಲ್ಲಿ ಹೆಚ್ಚಿನ ಮಹಿಳಾ ರೋಟರಿಯನ್ನರನ್ನು ಹೊಂದುವುದರ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು, ಅವರ ಅನನ್ಯ ಸಾಮರ್ಥ್ಯವನ್ನು ಎತ್ತಿ ತೋರಿಸಿದರು. ಸಮಾಜದ ಅಗತ್ಯಗಳನ್ನು ಅರ್ಥಮಾಡಿಕೊಳ್ಳಿ, ಅವಶ್ಯಕತೆಗಳನ್ನು ನಿರ್ಣಯಿಸಿ ಮತ್ತು ಅವರ ಪೋಷಣೆ ಮತ್ತು ಸಹಾನುಭೂತಿಯ ವಿಧಾನದೊಂದಿಗೆ ಪೂರ್ಣ…

Read More

ತುಮಕೂರು ಆರ್ಥಿಕ ವ್ಯವಸ್ಥೆ ಸುಧಾರಣೆಯಾಗಬೇಕಾದರೆ ಮೊದಲು ಸಾಮಾಜಿಕ ವ್ಯವಸ್ಥೆ ಬದಲಾಗಬೇಕು ಎಂಬ ಬಲವಾದ ಸಿದ್ಧಾಂತವನ್ನು ನಂಬಿ, ಭಾರತದ ಏಳ್ಗೆಗಾಗಿ ದುಡಿದವರು ಬಾಬೂಜಿ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಚ್. ಲಕ್ಷಿö್ಮÃನಾರಾಯಣ ಸ್ವಾಮಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಾಬು ಜಗಜೀವನ ರಾಮ್ ಅಧ್ಯಯನ ಪೀಠವು ಗುರುವಾರ ಆಯೋಜಿಸಿದ್ದ ಡಾ. ಬಾಬು ಜಗಜೀವನ ರಾಮ್ ಅವರ ೩೭ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ‘ಸಮಗ್ರ ಭಾರತದ ಅಭಿವೃದ್ಧಿಗೆ ಡಾ. ಬಾಬು ಜಗಜೀವನ ರಾಮ್ ಅವರ ಕೊಡುಗೆಗಳು’ ಕುರಿತು ವಿಶೇಷ ಉಪನ್ಯಾಸ ನೀಡಿದರು. ದೀನದುರ್ಬಲರ ಸಾಮಾಜಿಕ ನ್ಯಾಯಕ್ಕಾಗಿ ಬಾಬೂಜಿ ಕೈಗೊಂಡ ಹಲವಾರು ನಿರ್ಧಾರಗಳು ಅವರ ತತ್ತ÷್ವ ಆದರ್ಶದ ಹಾದಿಯನ್ನು ನೆನಪಿಸುತ್ತದೆ. ಕಾಯಕ ಶ್ರಮಜೀವಿಗಳಿಗೆ ಪಿಂಚಣಿ ಹಾಗೂ ಬಡ್ತಿ ಸಮಸ್ಯೆಗಳನ್ನು ಬಗೆಹರಿಸಿದ ಪರಿ ಗಮನಾರ್ಹ. ಕಾರ್ಮಿಕ ಕಾಯ್ದೆಗಳ ಹರಿಕಾರನಾಗಿ ತೆಗೆದುಕೊಂಡ ನಿಲುವುಗಳು ಬಾಬೂಜಿಯವರ ನಿಷ್ಠಾವಂತ ಬದುಕನ್ನು ತೋರಿಸಿಕೊಡುತ್ತದೆ ಎಂದು ತಿಳಿಸಿದರು. ವೈಜ್ಞಾನಿಕ ಹಾಗೂ ಅಧ್ಯಾತ್ಮದ ಚಿಂತನೆಗಳನ್ನು ಬಾಬೂಜಿ ಮೈಗೂಡಿಸಿ ಕೊಂಡವರು. ಭಾರತ…

Read More

ಕೊರಟಗೆರೆ/ತೋವಿನಕೆರೆ ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ, ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೊಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ ನಾವು ಇಂದು ಏನಾದರೂ ಗಳಿಸಿದ್ದರೆ ಅದೆಲ್ಲವೂ ಈ ಸಮಾಜದಿಂದ ಗಳಿಸಿದ್ದೆ. ಹಾಗಾಗಿ ಈ ಸಮಾಜದಿಂದ ಪಡೆದ ಒಂದಷ್ಟನ್ನಾದರೂ ನಾವು ಮತ್ತೆ ಸಮಾಜಕ್ಕ ವಾಪಸ್ ಮಾಡಬೇಕಾಗುತ್ತದೆ. ಆ ಮೂಲಕ ಅಕ್ಷರ ಕಲಿಸಿದ ಗುರುಗಳು, ಜನ್ಮ ಕೊಟ್ಟ ಹೆತ್ತವರು, ಆಡಿ ಬೆಳೆದ ಭೂಮಿಯ ಋಣವನ್ನು ತೀರಿಸಲು ಸಾಧ್ಯವಾಗುತ್ತದೆ ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ೩೦ವರ್ಷಗಳ ನಂತರ ವ್ಯಾಸಂಗ ಮಾಡಿದ ಸಂದರ್ಭದಲ್ಲಿ ತಮಗೆ ಪಾಠ ಕಲಿಸಿಕೊಟ್ಟ ಜೀವನ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸಿದ ಹಳೆ…

Read More

ಗುಬ್ಬಿ ವನ ಮಹೋತ್ಸವ ಅಂಗವಾಗಿ ಗುಬ್ಬಿ ತಾಲ್ಲೂಕಿನಲ್ಲಿ ಕೋಟಿ ವೃಕ್ಷ ಆಂದೋಲನಕ್ಕೆ ಅರಣ್ಯ ಇಲಾಖೆ ನಮ್ಮ ಗಿಡ ನಮ್ಮ ಹೆಮ್ಮೆ, ನಮ್ಮ ಹಸಿರು ನಮ್ಮ ಗುಬ್ಬಿ ಘೋಷಣೆಯಡಿ ಪ್ರತಿಜ್ಞಾ ವಿಧಿ ಬೋಧಿಸಿ ಸಸಿ ನೆಡಲಾಯಿತು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕರ‍್ಯಾಲಯದ ಆವರಣದಲ್ಲಿ ಸಾಂಕೇತಿಕವಾಗಿ ಸಸಿ ನೆಟ್ಟು ಕರ‍್ಯಕ್ರಮಕ್ಕೆ ಚಾಲನೆ ನೀಡಿ ರ‍್ಕಾರಿ ಶಾಲೆಗಳ ಆವರಣ, ಉದ್ಯಾನವನ, ಖಾಲಿ ಇರುವ ರ‍್ಕಾರಿ ಜಾಗದಲ್ಲಿ ಸಸಿ ನೆಡುವ ಸಪ್ತಾಹ ಆಂದೋಲನ ನಡೆಸಿ ಈ ಜೊತೆಗೆ ಆಸಕ್ತ ಪರಿಸರ ಪ್ರೇಮಿಗಳಿಗೆ ಸಸಿ ವಿತರಿಸುವ ಕೆಲಸ ನಡೆಸಲಾಯಿತು. ಪಪಂ ಸದಸ್ಯ ಜಿ.ಆರ್.ಶಿವಕುಮಾರ್ ಮಾತನಾಡಿ ಉತ್ತಮ ಪರಿಸರ ನಾಗರಿಕರ ಆರೋಗ್ಯ ಕಾಪಾಡುತ್ತದೆ. ಸ್ಥಳೀಯ ಪಟ್ಟಣ ಪಂಚಾಯಿತಿ ಸಸಿ ನೆಡುವ ಜೊತೆಗೆ ನರ‍್ವಹಣೆ ಮಾಡುವ ಕೆಲಸ ಮಾಡಲಿದೆ. ಅರಣ್ಯ ಇಲಾಖೆ ಕರ‍್ಯಕ್ಕೆ ಲಯನ್ಸ್, ರೋಟರಿ ಹಾಗೂ ಸ್ಕೌಟ್ ಅಂಡ್ ಗೈಡ್ಸ್ ಇನ್ನೂ ಅನೇಕ ಸಂಘಗಳು ಕೈ ಜೋಡಿಸಲಿದೆ ಎಂದರು. ಪಪಂ ಸದಸ್ಯ ಹಾಗೂ ನಿಕಟ ಪರ‍್ವ ಅಧ್ಯಕ್ಷ ಜಿ.ಎನ್. ಅಣ್ಣಪ್ಪಸ್ವಾಮಿ…

Read More

ಗುಬ್ಬಿ : ತುಳಿತಕ್ಕೆ ಒಳಗಾದ ದಲಿತರಿಗೆ ಶಕ್ತಿ ನೀಡುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ದಲಿತರ ಮತಗಳ ಒಗ್ಗಟ್ಟು ಕಾರಣ. ಈ ಸರ್ಕಾರದ ಒಲವು ಜೊತೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ದೀನ ದಲಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು. ಪಟ್ಟಣದ ಎಸ್.ಎಂ.ಪ್ಯಾಲೇಸ್ ನಲ್ಲಿ ಗುಬ್ಬಿ ಮಾದಿಗ ಮಹಾಸಭಾ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಮುಂದುವರೆದ ಜನಾಂಗ ಮೊದಲಿಂದಲೂ ದಲಿತರನ್ನು ತುಳಿದು ಬದುಕುವ ಕೆಲಸ ಮಾಡಿದೆ. ಇದರಿಂದ ಮುಕ್ತಿ ಕಾಣಲು ದಲಿತರು ಶೈಕ್ಷಣಿಕ ಪ್ರಗತಿ ಹೊಂದಬೇಕು ಎಂದು ಕರೆ ನೀಡಿದರು. ದಲಿತರ ಏಳಿಗೆಗೆ ಸಿದ್ದರಾಮಯ್ಯ ಅವರ ಕಾಳಜಿ ಅಧಿಕಾರಕ್ಕೆ ಬಂದ ತಕ್ಷಣ ಕಂಡಿದೆ. ಯಾವುದೇ ಅನುದಾನದ ಗುತ್ತಿಗೆಯಲ್ಲಿ ಮೀಸಲಾತಿ ಇದ್ದ ೫೦ ಲಕ್ಷ ರೂಗಳನ್ನು ಒಂದು ಕೋಟಿಗೆ ಹೆಚ್ಚಿಸಿ ಗುತ್ತಿಗೆ ಮೂಲಕ ದಲಿತರಿಗೆ ಆರ್ಥಿಕ ಸದೃಢತೆ ನೀಡಿದ್ದಾರೆ. ಇಂತಹ ಅವಕಾಶ ಬಳಸಿ ನಿರುದ್ಯೋಗ ಯುವಕರು ಕೆಲಸ ಮಾಡಬೇಕು. ಅದನ್ನು ಬಿಟ್ಟು ಬೇರೆ ಜಂಜಾಟ…

Read More

ತುಮಕೂರು ರಾಮಕೃಷ್ಣ ನಗರದ ಶ್ರೀ ಶಿರಡಿಸಾಯಿನಾಥ ದೇಗುಲ ಸೇರಿದಂತೆ ನಗರದ ವಿವಿಧಡೆ ಇರುವ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ರಾಮಕೃಷ್ಣ ನಗರದ ಸಾಯಿನಾಥ ಮಂದಿರದಲ್ಲಿ ಬೆಳಿಗ್ಗೆ ೬ ಗಂಟೆಗೆ ಕಾಕಡ ಆರತಿ, ೭ ಗಂಟೆಗೆ ಅಭಿಷೇಕ ಮತ್ತು ಅಲಂಕಾರ, ೮ ಗಂಟೆಗೆ ರುದ್ರಾಭಿಷೇಕ, ೧೦ ಗಂಟೆಗೆ ೧೦೮ ಗುರುಗಳ ಅವಾಹನೆ ಪೂಜಾ, ಮಧ್ಯಾಹ್ನ ೧೨ಕ್ಕೆ ಮಹಾಮಂಗಳಾರತಿ ನೆರವೇರಿತು. ಮಧ್ಯಾಹ್ನ ಭಕ್ತಾದಿಗಳಿಗಾಗಿ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ರಾಮಕೃಷ್ಣನಗರದ ಸಾಯಿನಾಥ ಮಂದಿರದಲ್ಲಿ ೧೦೮ ಗುರುಗಳ ಅವಾಹನೆ ಪೂಜೆ ನೆರವೇರಿಸಿದ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ವೇದಗಳನ್ನು ವಿಭಜನೆ ಮಾಡಿ ೪ ವೇದ ಮತ್ತು ೧೮ ಪುರಾಣಗಳನ್ನು ಜನರಿಗೆ ಪರಿಚಯಿಸಿದ ಕೀರ್ತಿ ವೇದ ವ್ಯಾಸರಾಜರಿಗೆ ಸಲ್ಲುತ್ತದೆ. ಶಂಕರಾಚಾರ್ಯ, ಸ್ವಾಮಿ ವಿವೇಕಾನಂದರು, ಶಿರಡಿ ಬಾಬಾರವರು ಮಹಾನ್ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದವರು ಎಂದರು. ಗುರುತ್ವಾಕರ್ಷಣೆಯನ್ನು ಕಂಡು ಹಿಡಿದ ನ್ಯೂಟನ್‌ನಗೆ ಭೂಮಿ ತಾಯಿಯೇ ಗುರುವಾಗಿ ಪರಿಣಿಮಿಸಿದಳು. ಗುರುವಿನ ಕೃಪೆ ಭಕ್ತ ಮತ್ತು…

Read More

ತುಮಕೂರು ಸರಕಾರಿ ಕನ್ನಡ ಶಾಲೆಗಳು ಉಳಿಯಬೇಕಾದರೆ, ಶಿಕ್ಷಕರು, ಎಸ್.ಡಿ.ಎಂ.ಸಿ ಹಾಗೂ ಮಕ್ಕಳ ಪೋಷಕರು ಪರಸ್ವರ ಒಗ್ಗೂಡಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದಾಗ ಮಾತ್ರ ಸಾಧ್ಯ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಶಿರಾಗೇಟ್‌ನ ಉತ್ತರಬಡಾವಣೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕೆ.ಎನ್.ಆರ್. ಮತ್ತು ಆರ್.ಆರ್.ಅಭಿಮಾನಿ ಬಳಗ, ಹಳೆ ವಿದ್ಯಾರ್ಥಿಗಳ ಸಂಘ,ಎಸ್.ಡಿ.ಎA.ಸಿ ಆಡಳಿತ ಮಂಡಳಿ ಹಾಗೂ ಪೋಷಕರು ಆಯೋಜಿಸಿದ್ದ ಉಚಿತ ಲೇಖನ ಸಾಮಗ್ರಿ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ನಗರಪಾಲಿಕೆಯ ಎರಡನೇ ವಾರ್ಡಿನ ಸದಸ್ಯ ಎಸ್.ಮಂಜುನಾಥ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಗಳು ಇಂದು ಅದೋಗತಿಗೆ ತಲುಪಿವೆ.ಆದರೂ ನಮ್ಮ ಉತ್ತರ ಬಡಾವಣೆಯ ಶಾಲೆ ದಿನದಿಂದ ದಿನಕ್ಕೆ ಅಭಿವೃದ್ದಿ ಪಥದಲ್ಲಿ ಸಾಗಿದೆ. ಇದಕ್ಕೆ ಶಾಲೆಯ ಪದವಿಧರ ಮುಖ್ಯಶಿಕ್ಷಕರಾದ ಡಿ.ಎಸ್.ಶಿವಸ್ವಾಮಿ ಮತ್ತು ಎಸ್.ಡಿ.ಎಂ.ಸಿ ಮಂಡಳಿ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘ ಕಾರಣ.ಶಾಲೆಯ ಶಿಕ್ಷಕರ ಜೊತೆಯಲ್ಲಿ ಎಲ್ಲರೂ ಒಗ್ಗೂಡಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ…

Read More